Author: main-admin

ಮಂಗಳೂರು: ಸುರತ್ಕಲ್‌ ಸಮೀಪದ ಮುಕ್ಕದ ಖಾಸಗಿ ಕಾಲೇಜಿನ ಎಂಜಿನಿಯರಿಂಗ್‌ ವಿದ್ಯಾರ್ಥಿಯೋರ್ವ ಸಮುದ್ರ ಪಾಲಾದ ಘಟನೆ ರವಿವಾರ ಸಂಜೆ ಸಂಭವಿಸಿದೆ.ಸಮುದ್ರ ಪಾಲಾದ ವಿದ್ಯಾರ್ಥಿ ಶಿವಮೊಗ್ಗದ ತಿಲಕ್‌ (21) ಎಂದು ತಿಳಿಯಲಾಗಿದೆ. ಇಡ್ಯಾದಲ್ಲಿ ಬಾಡಿಗೆ ಮನೆಯಲ್ಲಿ ಇದ್ದ ಅವರು ಸಂಜೆ ವಿಹಾರಕ್ಕೆಂದು ತೆರಳಿದ್ದರು.ಇತರ ವಿದ್ಯಾರ್ಥಿಗಳ ಜತೆ ಸಮುದ್ರದಲ್ಲಿ ಈಜಾಟ ನಡೆಸುತ್ತಿದ್ದಾಗ ಅಲೆಗೆ ಸಿಲುಕಿ ಕೊಚ್ಚಿ ಹೋಗಿದ್ದು, ಸ್ಥಳೀಯರ ನೆರವಿನಿಂದ ಮೃತದೇಹವನ್ನು ನೀರಿನಿಂದ ಮೇಲಕ್ಕೆ ತರಲಾಯಿತು. ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ಆರೋಪಿಗಳು ತನಿಖಾ ಸಂಸ್ಥೆಗೆ ಮೊಬೈಲ್ ಫೋನ್ ಸಲ್ಲಿಸದೇ ಇರುವುದು ಅಸಹಕಾರ ಎಂದು ಕರೆಯಲಾಗದು ಎಂದು ಆಂಧ್ರ ಪ್ರದೇಶ ಹೈಕೋರ್ಟ್ ತೀರ್ಪು ನೀಡಿದೆ. ಮಾಜಿ ಸಂಸತ್ ಸದಸ್ಯ ಎನ್. ಸುರೇಶ್ ಬಾಬು ಮತ್ತು ಉದ್ಯಮಿ ಅವುತ್ತು ಶ್ರೀನಿವಾಸ ರೆಡ್ಡಿ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಆಂಧ್ರ ಪ್ರದೇಶ ಹೈಕೋರ್ಟ್‌ನ ನ್ಯಾ. ಡಾ. ವಿ.ಆರ್.ಕೆ. ಕೃಪಾಸಾಗರ ಅವರಿದ್ದ ಏಕಸದಸ್ಯ ನ್ಯಾಯಪೀಠ ಆದೇಶ ಹೊರಡಿಸಿದೆ. ಆರೋಪಿಗಳಿಗೆ ಸಂವಿಧಾನದ ವಿಧಿ 20(3) ಸ್ವಯಂ ದೋಷಾರೋಣೆ ವಿರುದ್ಧದ ಹಕ್ಕು ಅಡಿಯಲ್ಲಿ ರಕ್ಷಣೆ ಒದಗಿಸಲಾಗಿದೆ. ಈ ಕಾರಣದಿಂದ ಗ್ಯಾಜೆಟ್ ಆನ್‌ಲೈನ್ ಖಾತೆಗಳ ಪಾಸ್‌ವರ್ಡ್‌ ನೀಡುವಂತೆ ಪೊಲೀಸರು ಆರೋಪಿಗಳಿಗೆ ಒತ್ತಾಯಿಸುವಂತಿಲ್ಲ ಎಂದು ಹೈಕೋರ್ಟ್ ನ್ಯಾಯಪೀಠ ತನ್ನ ತೀರ್ಪಿನಲ್ಲಿ ಹೇಳಿದೆ. ಸದ್ರಿ ಪ್ರಕರಣದಲ್ಲಿ ಆರೋಪಿಗಳು ತಮ್ಮ ಮೊಬೈಲ್ ಫೋನ್‌ಗಳನ್ನು ತನಿಖೆ ಹಿನ್ನೆಲೆಯಲ್ಲಿ ಪೊಲೀಸರಿಗೆ ಒಪ್ಪಿಸಿರಲಿಲ್ಲ. ಹೀಗಾಗಿ ಅವರಿಗೆ ಜಾಮೀನು ಮಂಜೂರು ಮಾಡಬಾರದು ಎಂದು ಅಭಿಯೋಜನೆಯ ಪರ ವಕೀಲರು ವಾದಿಸಿದ್ದರು. ಮೊಬೈಲ್ ಫೋನ್ ನೀಡದೇ ಇದ್ದ ಕಾರಣ ಪ್ರಕರಣದಲ್ಲಿ ವಾಟ್ಸ್ಯಾಪ್ ಸಂದೇಶಗಳನ್ನು…

Read More

ಮಂಗಳೂರು ನಗರದ ನಂತೂರು ಜಂಕ್ಷನ್ ಬಳಿ ನಡೆದ ವಾಹನ ಅಪಘಾತದಲ್ಲಿ ಯುವತಿಯೊಬ್ಬಳು ದಾರುಣ ಅಂತ್ಯ ಕಂಡಿದ್ದಾಳೆ. ಮೃತ ಯುವತಿಯನ್ನು ನಗರದ ಕೋಡಿಕಲ್‌ನ 27 ವರ್ಷದ ಕ್ರಿಸ್ತಿ ಕ್ರಾಸ್ತಾ ಎಂದು ಗುರುತಿಸಲಾಗಿದೆ. ರವಿವಾರ ಅಪರಾಹ್ನ 3.30 ರ ಸುಮಾರಿಗೆ ಈ ಅವಘಡ ಸಂಭವಿಸಿದ್ದು ಕೋಡಿಕಲ್ ನಿವಾಸಿಯಾಗಿರುವ ಕುಮಾರಿ ಕ್ರಿಸ್ತಿ ಕ್ರಾಸ್ತಾ ರವರು ನಂತೂರು ಜಂಕ್ಷನ್ ನಿಂದ ಪಂಪ್ ವೆಲ್ ಕಡೆಗೆ ಹೋಗುತ್ತಿರುವ ವೇಳೆ ನಂತೂರು ಜಂಕ್ಷನ್ ಬಳಿ ಶಾಂತಿ ಕಿರಣ ಬಿಲ್ಡಿಂಗಿನ ಎದುರು ಕೆ ಎಲ್ 11 ಬಿವಿ 4718 ನಂಬರಿನ ಹಸಿ ಮೀನು ಸಾಗಿಸುವ ಕಂಟೇನರ್ ವಾಹನವನ್ನು ಕ್ರಿಸ್ತಿ ಚಲಾಯಿಸುತ್ತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದಿದ್ದು ಈ ಸಂದರ್ಭ ಯುವತಿ ಕಂಟೇನರ್ ವಾಹನದ ಹಿಂಬದಿ ಚಕ್ರಕ್ಕೆ ಸಿಲುಕಿಕೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾಳೆ.  ಕಂಟೇನರ್ ವಾಹನ ಚಾಲಕನ ಅಜಾಗೃತೆಯ ಚಾಲನೆಯೇ ಘಟನೆ ಕಾರಣವೆಂದು ಹೇಳಲಾಗಿದೆ. ಈ ಕುರಿತು ಸಂಚಾರ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬಂಟ್ವಾಳ:ಹಿರಿಯ ಯಕ್ಷಗಾನ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ ಎಂದು ತಿಳಿದು ಬಂದಿದೆ. ಇಂದಿನಿಂದ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಯಕ್ಷಗಾನ ಕಾರ್ಯಕ್ರಮದಲ್ಲಿ ಭಾಗವಹಿಸಲು ಆದಿತ್ಯವಾರ ಬೆಳಗ್ಗೆ ಇನ್ನಿತರ ಕಲಾವಿದರೊಂದಿಗೆ ಬೆಂಗಳೂರಿಗೆ ತೆರಳಿದ್ದ ಅವರಿಗೆ ಇಂದು ಮುಂಜಾನೆ ನಾಲ್ಕು ಗಂಟೆ ಸುಮಾರಿಗೆ ತೀವ್ರತರವಾದ ಹೃದಯಾಘಾತಕ್ಕೊಳಗಾದ ಅವರನ್ನು ಜೊತೆ ಕಲಾವಿದರು ತಕ್ಷಣ ಬೆಂಗಳೂರಿನ ಸ್ಥಳೀಯ ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆಗೆ ಸ್ಪಂಧಿಸದೇ ನಿಧನ ಹೊಂದಿದ್ದಾರೆ . ಬೆಂಗಳೂರಿನ ಆಸ್ಪತ್ರೆಯಲ್ಲಿರುವ ಮೃತ ದೇಹವನ್ನು ಆಂಬುಲೆನ್ಸ್ ಮೂಲಕ ಊರಿಗೆ ತರಲಾಗುವುದು ಎಂಬ ಮಾಹಿತಿ ಲಭ್ಯವಾಗಿದೆ.

Read More

ಮಂಗಳೂರು: ವಾಟ್ಸ್‌ಆ್ಯಪ್ ಮೂಲಕ ಬಂದ ಸಂದೇಶ ನಂಬಿ ಹೋದ ವ್ಯಕ್ತಿಯೋರ್ವ ಬರೋಬ್ಬರಿ 1 ಕೋಟಿ ರೂ.ಗೂ ಅಧಿಕ ಹಣ ಕಳೆದುಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದ್ದು ಈ ಬಗ್ಗೆ ಮಂಗಳೂರು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆ.16ರಂದು ತನಗೆ ವಾಟ್ಸ್‌ಆ್ಯಪ್ ಮೂಲಕ ಬಂದ ಸಂದೇಶದಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ಬರುವುದಾಗಿ ತಿಳಿಸಲಾಗಿತ್ತು. ಅದನ್ನು ನಂಬಿದ ತಾನು ವಾಟ್ಸ್‌ಆ್ಯಪ್ ಗ್ರೂಪ್‌ಗೆ ಸೇರ್ಪಡೆಗೊಂಡೆ. ನಂತರ ಗ್ರೂಪ್ ಅಡ್ಮಿನ್ ಕಳುಹಿಸಿದ ಲಿಂಕ್ ಒತ್ತಿ ಅದಕ್ಕೂ ಜಾಯಿನ್ ಆದೆ. ಸೆಪ್ಟಂಬರ್ 1ರಿಂದ ಹಣ ಪಾವತಿಸುತ್ತಾ ಬಂದಿರುವೆ. ಬಳಿಕ ತಾನು ಹೂಡಿಕೆ ಮಾಡಿದ ಹಣವನ್ನು ಹಿಂಪಡೆಯಲು ಪ್ರಯತ್ನಿಸಿದಾಗ ಆಗಲಿಲ್ಲ. ಹಾಗೇ ತನ್ನ ಮನೆಯವರು ಮತ್ತು ಸ್ನೇಹಿತರಲ್ಲಿ ವಿಚಾರಿಸಿದಾಗ ತಾನು ಮೋಸ ಹೋಗಿರುವ ವಿಚಾರ ತಿಳಿಯಿತು. ಒಟ್ಟಿನಲ್ಲಿ ಸೆ.1ರಿಂದ ಅಕ್ಟೋಬರ್ 7ರವರೆಗೆ ಅಪರಿಚಿತರು ನಕಲಿ ಟ್ರೇಡಿಂಗ್ ಹೆಸರಿನಲ್ಲಿ ತನ್ನಿಂದ 1,25,67,726 ರೂ. ವನ್ನು ಆನ್‌ಲೈನ್ ಮೂಲಕ ಮೋಸ ಮಾಡಿರುವುದಾಗಿ ಹಣ ಕಳೆದುಕೊಂಡ ವ್ಯಕ್ತಿ ದೂರಿನಲ್ಲಿ ತಿಳಿಸಿದ್ದು ಈ ಬಗ್ಗೆ…

Read More

ಮಂಗಳೂರು: ಆನ್‌ಲೈನ್ ಟ್ರೇಡಿಂಗ್‌ನಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಬರುವುದಾಗಿ ವಾಟ್ಸಾಪ್‌ ಚಾಟಿಂಗ್‌ನಲ್ಲಿ ಅಪರಿಚಿತರು ಹೇಳಿರುವುದನ್ನು ನಂಬಿ 1,25,67, 726 ರೂ. ಕಳೆದುಕೊಂಡಿರುವ ಕುರಿತಂತೆ ಮಂಗಳೂರಿನ ಸೆನ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೂರುದಾರರ ವಾಟ್ಸಾಪ್‌ಗೆ ಆನ್‌ಲೈನ್ ಟ್ರೇಡಿಂಗ್ ಕುರಿತಂತೆ ಮೆಸೇಜ್ ಬಂದಿದ್ದು, ಮೆಸೇಜ್ ಮಾಡಿದ ವ್ಯಕ್ತಿ ಚಾಟಿಂಗ್‌ನಲ್ಲಿ ತಿಳಿಸಿದಂತೆ ಹೂಡಿಕೆ ಮಾಡಲು ಒಪ್ಪಿಕೊಂಡಿದ್ದಾರೆ. ಅನಂತರ ವಿಐಪಿ ಎಚ್2 ಶೇರ್‌ಖಾನ್ ಕ್ಯಾಪಿಟಲ್ ಎಂಬ ವಾಟ್ಸಾಪ್ ಗ್ರೂಪ್‌ ಗೆ ದೂರುದಾರರನ್ನು ಸೇರಿಸಲಾಗಿದೆ. ಬಳಿಕ ಲಿಂಕ್ ಒಂದನ್ನು ಕಳುಹಿಸಿದ್ದು, ಅದನ್ನು ಒತ್ತುವ ಮೂಲಕ ಶೇರ್‌ಖಾನ್ ಇಂಟರ್‌ನ್ಯಾಷನಲ್ ಸೆಕ್ಯೂರಿಟಿ ಫ್ಲಾಟ್‌ ಫಾರಂಗೆ ಸೇರಿಸಿದ್ದಾರೆ. ಮೊದಲಿಗೆ 2024ರ -ಸೆ.1ರಂದು 1 ಲಕ್ಷ ರೂ. ಅನ್ನು ಅವರು ತಿಳಿಸಿದಂತೆ ಅವರ ಖಾತೆಗೆ ಯುಪಿಐ ಮಾಡಿದ್ದಾರೆ. ಹೆಚ್ಚಿನ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ದೊರೆಯುತ್ತದೆ ಎಂದು ತಿಳಿಸಿದಂತೆ ಸೆ.1ರಿಂದ 15ರ ನಡುವೆ ಒಟ್ಟು 25 ಲಕ್ಷ ರೂ. ಹಣ ವರ್ಗಾವಣೆ ಮಾಡಿದ್ದಾರೆ. ಬಳಿಕ ಆ ಹಣವನ್ನು ವಿತ್ ಡ್ರಾ ಮಾಡಲು…

Read More

ಉಳ್ಳಾಲ ತೊಕ್ಕೊಟು ಸಮೀಪದ ರೈಲು ಹಳಿಯ ಮೇಲೆ ಕಿಡಿಗೇಡಿಗಳು ಜಲ್ಲಿ ಕಲ್ಲುಅನ್ನು ಇಟ್ಟಿರುವ ಘಟನೆಯೊಂದು ಶನಿವಾರ ರಾತ್ರಿ ನಡೆದಿದ್ದು, ರೈಲು ಸಂಚರಿಸುವಾಗ ಉಂಟಾದ ಶಬ್ದಕ್ಕೆ ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ. ಶನಿವಾರ ರಾತ್ರಿ ಕೇರಳದಿಂದ ಮಂಗಳೂರು ಕಡೆಗೆ ರೈಲು ಸಂಚರಿಸಿದ ವೇಳೆ ದೊಡ್ಡ ಪ್ರಮಾಣದ ಸದ್ದು ಕೇಳಿಸಿದೆ. ಇದರಿಂದ ಸ್ಥಳೀಯರ ಮನೆಗಳಲ್ಲಿ ಕಂಪನದ ಅನುಭವ ಉಂಟಾಗಿದ್ದು, ಜನರು ಭಯಕ್ಕೆ ಕಾರಣವಾಗಿದೆ. ಬಾರಿ ಸದ್ದು ಉಂಟಾಗಿದ್ದರಿಂದ ಸ್ಥಳೀಯರು ಟಾರ್ಚ್ ಹಿಡಿದು ಹಳಿ ಸಮೀಪ ಬಂದು ನೋಡಿದಾಗ ಕೃತ್ಯ ಬೆಳಕಿಗೆ ಬಂದಿದೆ. ದುಷ್ಕರ್ಮಿಗಳು ಹಳಿಗಳ ಮೇಲೆ ಜಲ್ಲಿಕಲ್ಲಿನ ರಾಶಿ ಜೋಡಿಸಿ ಇಟ್ಟಿರುವುದು ಬೆಳಕಿಗೆ ಬಂದಿದೆ. ರಾತ್ರಿ ವೇಳೆ ಇಬ್ಬರು ಹಳಿ ಮೇಳೆ ಸಂಚರಿಸುವುದು ಕಂಡಿದ್ದು, ಅವರೇ ಈ ಕೃತ್ಯ ಎಸಗಿರುವ ಶಂಕೆ ಇರುವುದಾಗಿ ರೈಲ್ವೆ ಪೊಲೀಸರು ತಿಳಿಸಿದ್ದಾರೆ ಆರೋಪಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ. ರಾತ್ರಿ ವೇಳೆ ಸಿಸಿಟಿವಿ ಪರಿಶೀಲನೆ ಮಾಡಲಿಲ್ಲ. ಇದೀಗ ಎಂಜಿನಿಯರ್, ಅಧಿಕಾರಿಗಳು ಎಲ್ಲರ ಜತೆಗೆ ಸೇರಿ ಪರಿಶೀಲನೆ ನಡೆಸಿ ಆರೋಪಿಗಳನ್ನು ಪತ್ತೆ ಹಚ್ಚುವ…

Read More

ಮಂಗಳೂರು: ತಾನು ಬೋಧಿಸುತ್ತಿದ್ದ ಶಾಲೆಯ ವಿದ್ಯಾರ್ಥಿನಿಯರಿಗೇ ಲೈಂಗಿಕ ಕಿರುಕುಳ ನೀಡಿರುವ ಆರೋಪ ಸಾಬೀತಾದ ಅಪರಾಧಿ ಶಿಕ್ಷಕನಿಗೆ 5 ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಪೊಕ್ಸೊ ವಿಶೇಷ ನ್ಯಾಯಾಲಯ) ತೀರ್ಪು ನೀಡಿದೆ. ಕಲ್ಲಮುಂಡ್ಕೂರು ನಿವಾಸಿ ಗುರುವ ಮೊಗೇರ (49) ಶಿಕ್ಷೆಗೊಳಗಾದ ಶಿಕ್ಷಕ. ಗುರುವ ಮೊಗೇರಾ ವಿದ್ಯಾರ್ಥಿನಿಯರನ್ನು ಶಾಲೆಯಲ್ಲಿರುವ ಪ್ರತ್ಯೇಕ ಕೊಠಡಿಗೆ ಕರೆಸಿಕೊಂಡು ಲೈಂಗಿಕ ಕಿರುಕುಳ ನೀಡುತ್ತಿದ್ದ. ಈ ಬಗ್ಗೆ ವಿದ್ಯಾರ್ಥಿನಿಯರು ಶಾಲೆಯ ಮುಖ್ಯ ಶಿಕ್ಷಕರಲ್ಲಿ ದೂರು ನೀಡಿದ್ದರು. ಆದ್ದರಿಂದ ಅವರು ಗುರುವ ಮೊಗೇರನ ವಿರುದ್ಧ ನಗರದ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದರು. ಪ್ರಕರಣಕ್ಕೆ ಸಂಬಂಧಿಸಿ ಮಹಿಳಾ ಠಾಣೆಯ ಉಪನಿರೀಕ್ಷಕಿ ಶಿವರುದ್ರಮ್ಮ ಎಸ್. ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಪ್ರಕರಣವನ್ನು ಕೈಗೆತ್ತಿಕೊಂಡ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಡಿ. ವಿನಯ್ ಸಮಗ್ರ ವಿಚಾರಣೆ ನಡೆಸಿ, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷಕನಿಗೆ 5 ವರ್ಷ ಜೈಲು ಶಿಕ್ಷೆ…

Read More

ಬೆಳ್ತಂಗಡಿ: ನಾರಾವಿ ಗ್ರಾಮದ ನೂಜೋಡಿಯಲ್ಲಿ ವ್ಯಕ್ತಿಯೋರ್ವರು ವಿದ್ಯುತ್‌ ಸ್ಪರ್ಶಿಸಿ ಸಾವಿಗೀಡಾದ ಘಟನೆ ನಡೆದಿದೆ. ನೂಜೋಡಿ ಮೊಂಟ ಮಲೆಕುಡಿಯ ಅವರು ತನ್ನ ಜಮೀನಿನ ಬಳಿ ಹಾದು ಹೋಗುವ ಸಿಂಗಲ್‌ ಪೇಸ್‌ ಇರುವ 3 ವಿದ್ಯುತ್‌ ವಯರ್‌ ಹಾದುಹೋಗುವ ವಿದ್ಯುತ್‌ ಲೈನ್‌ ಮೇಲೆ ತೆಂಗಿನ ಮರದ ಗರಿ (ಮಡಲು) ಬಿದ್ದಿರುವುದನ್ನು ಕಂಡರು.ಅದನ್ನು ಕೋಲಿನಿಂದ ಎಳೆದಾಗ ತಂತಿ ತುಂಡಾಗಿ ಕೆಳಗೆ ಬಿದ್ದು ಇವರು ಆಘಾತಕ್ಕೊಳಗಾಗಿ ಸ್ಥಳದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.  ಈ ಕುರಿತು ಪುತ್ರ ನೀಡಿದ ದೂರಿನಮೇರೆಗೆ ವೇಣೂರು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ

Read More

ಮಂಗಳೂರು : ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಪ್ರಾಧಿಕಾರದ ಕ್ಷೇತ್ರದ ಉಪಚುನಾವಣೆಯಲ್ಲಿ 53 ಸೂಕ್ಷ್ಮ ಮತಗಟ್ಟೆಗಳಿವೆ. ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ತಿಳಿಸಿದ್ದಾರೆ.ಸೂಕ್ಷ್ಮ ಮತಗಟ್ಟೆಗಳಲ್ಲಿ ಸಂಪೂರ್ಣ ವಿಡಿಯೋ ಚಿತ್ರೀಕರಣ ವ್ಯವಸ್ಥೆ ಮಾಡಲಾಗಿದೆ ಹಾಗೂ ಹೆಚ್ಚುವರಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. 20ಕ್ಕಿಂತ ಹೆಚ್ಚು ಮತದಾರರು ಇರುವ ಮತಗಟ್ಟೆಗಳಲ್ಲಿ ಮೈಕ್ರೋ ವೀಕ್ಷಕರುಗಳನ್ನು ನೇಮಕ ಮಾಡಲಾಗಿದೆ.ಈಗಾಗಲೇ ಆಯಾ ಗ್ರಾಮ ಪಂಚಾಯತ್‍ಗಳಲ್ಲಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿರುವ ಸಿಸಿಟಿವಿಗಳನ್ನು ಚುನಾವಣಾ ಪ್ರಕ್ರಿಯೆಗೆ ಬಳಸಲಾಗುತ್ತಿದೆ ಎಂದು ಅವರು ತಿಳಿಸಿದರು. ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಲ್ಲಿ ಒಟ್ಟು 392 ಮತಗಟ್ಟೆಗಳಿದ್ದು 6,032 ಮತದಾರರಿದ್ದಾರೆ. ಈ ಪೈಕಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 3,552 ಹಾಗೂ ಉಡುಪಿ ಜಿಲ್ಲೆಯಲ್ಲಿ 2,480 ಮತದಾರರಿದ್ದಾರೆ ಎಂದು ಅವರು ತಿಳಿಸಿದರು.ಮತದಾರರು ಮತಗಟ್ಟೆಯಲ್ಲಿ ನೀಡುವ ನೇರಳೆ ಪೆನ್ನಿನಿಂದ ಮತಪತ್ರದಲ್ಲಿ ಪ್ರಾಶಸ್ತ್ಯ ಅನುಸಾರ ಮತ ಚಲಾಯಿಸಬೇಕು ಮೊದಲನೇ ಪ್ರಾಶಸ್ತ್ಯದ ಮತವನ್ನು ಯಾವ ಅಭ್ಯರ್ಥಿಗೆ ಚಲಾಯಿಸುತ್ತಿದ್ದಾರೆ ಎಂಬುದನ್ನು ಕ್ರಮ ಸಂಖ್ಯೆ “1” ಎಂದು…

Read More