ಮಂಗಳೂರು: ನಗರದ ಜೆಪ್ಪಿನಮೊಗರು ಎಂಬಲ್ಲಿ ರಸ್ತೆಯನ್ನು ಅಗೆದು ಹಾಕಿರುವ ವಿಚಾರದಲ್ಲಿ ಗಲಾಟೆ ನಡೆದು ವಕೀಲ ದಂಪತಿಗೆ ಹಲ್ಲೆ ನಡೆಸಿ, ಮಾನಭಂಗಕ್ಕೆ ಯತ್ನಿಸಿದ್ದಾರೆಂದು ಸ್ಥಳೀಯ ವ್ಯಕ್ತಿಯೊಬ್ಬರ ಮೇಲೆ ದೂರು ದಾಖಲಾಗಿದೆ. ವಕೀಲ ದಂಪತಿಯೂ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ವ್ಯಕ್ತಿ ಪ್ರತಿದೂರು ದಾಖಲಿಸಿದ್ದಾರೆ. ನ್ಯಾಯವಾದಿ ಜಯಪ್ರಕಾಶ್ ಅವರ ಮನೆಗೆ ಹೋಗುವ ದಾರಿಯ ವಿಚಾರದಲ್ಲಿ ಸ್ಥಳೀಯ ರಾಬರ್ಟ್ ವೆಲೆರಿಯನ್ ಮೆಂಡೋನ್ಸಾ ಅವರ ನಡುವೆ ತಕಾರಾರು ಎದ್ದಿತ್ತು. ಈ ಬಗ್ಗೆ ಎರಡೂ ಕಡೆಯವರ ನಡುವೆ ಈ ಹಿಂದೆಯೇ ಜಗಳ ನಡೆದಿತ್ತು. ಈ ನಡುವೆ ಜಾಗದ ಮಾಲಕ ರಾಬರ್ಟ್ ವೆಲೆರಿಯನ್ ಮೆಂಡೋನ್ಸಾ ಅವರು ಜಯಪ್ರಕಾಶ್ ಅವರ ಮನೆಗೆ ಹೋಗುವ ದಾರಿಯನ್ನು ಅಗೆದು ಹಾಕಿದ್ದರು. ಪರಿಣಾಮ ರಸ್ತೆ ತುಂಬಾ ನೀರು ನಿಂತು ಮೊಣಕಾಲು ಮುಳುಗುವಷ್ಟು ನೀರಿನಲ್ಲಿಯೇ ಜನ ಸಂಚಾರ ಮಾಡಬೇಕಿತ್ತು. ಈ ಬಗ್ಗೆ ವೀಡಿಯೋ ಮಾಡಿ ವಕೀಲ ಜಯಪ್ರಕಾಶ್ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು. ವೀಡಿಯೋದಲ್ಲಿ ಸ್ಥಳೀಯ ಕಾರ್ಪೊರೇಟರ್ ವೀಣಾ ಮಂಗಳ ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು. ಆದ್ದರಿಂದ…
Author: main-admin
ಬೆಂಗಳೂರು :ನಂದಿನಿ ಹಾಲಿನ ದರ ಹೆಚ್ಚಿಸಲಾಗಿದೆ ಎಂದು ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಭೀಮನಾಯ್ಕ್ ತಿಳಿಸಿದ್ದಾರೆ.ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರತಿ ಲೀಟರ್ ಹಾಲಿನ ದರವನ್ನ 2.10 ರೂ. ಹಾಗೂ ಅರ್ಧ ಲೀಟರ್ ಹಾಲಿನ ದರ 22 ರೂ. ನಿಂದ 24 ರೂ.ಗೆ ಹೆಚ್ಚಿಸಲಾಗಿದೆ. ಆದ್ರೆ ಗ್ರಾಹಕರಿಗೆ ಸಿಗುತ್ತಿದ್ದ 1,000 ಎಂಎಲ್ (1 ಲೀಟರ್) ಪ್ಯಾಕೆಟ್ ಹಾಲು ಇನ್ಮುಂದೆ 1,050 ಎಂಎಲ್ ಹಾಗೂ ಅರ್ಧ ಲೀಟರ್ ಪ್ಯಾಕೆಟ್ ಹಾಲು 550 ಎಂಎಲ್ ಹೆಚ್ಚುವರಿ ಸಿಗಲಿದೆ ಎಂದು ಅವರು ತಿಳಿಸಿದ್ದಾರೆ. ನಾಳೆಯಿಂದ ಈ ದರ ನಾಳೆಯಿಂದ ಅನ್ವಯವಾಗಲಿದೆ ಎಂದು ತಿಳಿಸಿದರು.ಮೊಸರು ಇನ್ನಿತರ ಯಾವುದೇ ಹಾಲಿನ ಉತ್ಪನ್ನದ ದರ ಏರಿಕೆ ಮಾಡಲ್ಲ. ಕೇರಳದಲ್ಲಿ ಒಂದು ಲೀಟರ್ ಹಾಲಿನ ಬೆಲೆ 52 ರುಪಾಯಿ ಇದೆ. ಗುಜರಾತ್ನಲ್ಲಿ ಅಮುಲ್ ಒಂದು ಲೀಟರ್ಗೆ 56 ರೂ. ಮಹಾರಾಷ್ಟ್ರದಲ್ಲಿ 56 ರೂ. ದೆಹಲಿ ಮದರ್ ಡೈರಿಯ ಹಾಲಿನ ಬೆಲೆ 54 ರೂ. ಇದೆ ಎಂದರು.
ಉಡುಪಿ ಜಿಲ್ಲೆಯಲ್ಲಿ ಅತಂಕ ಸೃಷ್ಟಿಸಿದ್ದ ಗ್ಯಾಂಗ್ ವಾರ್ ಅರೋಪಿಗಳು ಹಿರಿಯಡ್ಕ ಜಿಲ್ಲಾ ಕಾರಾಗೃಹದಲ್ಲಿ ದಾಂಧಲೆ ನಡೆಸಿ, ಜಿಲ್ಲಾ ಅಧೀಕ್ಷಕರು, ಸಿಬ್ಬಂದಿಯ ಮೇಲೆ ಹಲ್ಲೆಗೆ ಯತ್ನಿಸಿರುವ ಘಟನೆ ಸಂಭವಿಸಿದೆ. ಕಾರಾಗೃಹದಲ್ಲಿರುವ ಈ ಖತರ್ ನಾಕ್ ಗ್ಯಾಂಗ್ ಕುರ್ಚಿ ಅಡುಗೆ ಮನೆಯಲ್ಲಿದ್ದ ಚಾಹಾ ಸೌಟು ಪಾತ್ರೆಗಳಿಂದ ಜಿಲ್ಲಾ ಅಧೀಕ್ಷಕರು, ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದೆ ಎಂದು ಮಾಹಿತಿ ತಿಳಿದು ಬಂದಿದೆ. ವಿಚಾರಣಾ ಕೈದಿಗಳಾದ ಮುಹಮ್ಮದ್ ಆಶಿಕ್ ಮತ್ತು ಮಹಮ್ಮದ್ ಸಕ್ಲೇನ್ ಪಿಜನ್ ಕಾಲ್ ಸಿಸ್ಟಮ್ ಕರೆ ಮಾಡಲು ತಡವಾಯಿತೆಂದು ಹೇಳಿ ಕರ್ತವ್ಯದಲ್ಲಿದ್ದ ಜೈಲರ್ ಎಸ್.ಎ.ಶಿರೋಳ ಅವರಿಗೆ ಅವಾಚ್ಯ ಶಬ್ದಗಳಿಂದ ಬೈದು ಬೆದರಿಕೆ ಹಾಕಿ ಜೋರಾಗಿ ಕೂಗಾಡಿದ್ದಾರೆ. ಮಾತ್ರವಲ್ಲದೇ ಅಧೀಕ್ಷಕರ ಕಚೇರಿಯಿಂದ ಕರೆದುಕೊಂಡು ಹೋಗುವಾಗ ಸಿಬ್ಬಂದಿಯೊಂದಿಗೆ ಮತ್ತೆ ಗಲಾಟೆ ಆರಂಭಿಸಿ ಸಿಬ್ಬಂದಿಯನ್ನು ದೂಡಿ ಕೊಠಡಿಯಲ್ಲಿದ್ದ ಬೆಂಕಿ ನಂದಿಸುವ ಯಂತ್ರವನ್ನು ತೆಗೆಯಲು ಪ್ರಯತ್ನಿಸಿದರೆನ್ನಲಾಗಿದೆ. ಬಳಿಕ ಅಡುಗೆ ಕೋಣೆಯಲ್ಲಿರುವ ದೊಡ್ಡ ಸೌಟನ್ನು ಮತ್ತು ಚಹಾ ಮಾಡುವ ಸೌಟನ್ನು ತಂದು, ಮುಹಮ್ಮದ್ ಸಕ್ಲೇನ್ ತನ್ನ ಕೊಠಡಿಯ ಮರದ ಕುರ್ಚಿಯನ್ನು ತೆಗೆದುಕೊಂಡು…
ರಾಜ್ಯಾದ್ಯಂತ ಕಬಾಬ್, ಫಿಶ್, ಚಿಕನ್ಗೆ ಕೃತಕ ಬಣ್ಣ ಬಳಕೆಗೆ ನಿರ್ಬಂಧಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಕೃತಕ ಬಣ್ಣದ ಬೆರೆಸುವಿಕೆಯಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಕಬಾಬ್, ಫಿಶ್, ಚಿಕನ್ ತಯಾರಿಕೆಯಲ್ಲಿ ಕೃತಕ ಬಣ್ಣಗಳನ್ನು ಬೆರೆಸುವುದನ್ನು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ನಿರ್ಬಂಧಿಸಿದೆ. ಬಾಯಿ ಚಪ್ಪರಿಸಿಕೊಂಡು ತಿನ್ನುವ ಗೋಬಿ ಮಂಚೂರಿ, ಬಾಂಬೆ ಮಿಠಾಯಿಗೆ ಕಲರ್ ಹಾಕುವುದನ್ನು ಬ್ಯಾನ್ ಮಾಡಿದ ಬೆನ್ನಲ್ಲೇ ಇದೀಗ ಕಬಾಬ್ ಸರದಿಯಾಗಿದೆ. ಕೃತಕ ಬಣ್ಣದಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ. ಹೀಗಾಗಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ ಕಬಾಬ್ಗಳ ಮಾದರಿಗಳನ್ನು ಸಂಗ್ರಹಿಸಿ ಲ್ಯಾಬ್ಗೆ ಕಳುಹಿಸಿತ್ತು. ರಾಜ್ಯಾದ್ಯಂತ 39 ಕಬಾಬ್ಗಳ ಮಾದರಿಗಳನ್ನು ಸಂಗ್ರಹಿಸಿ ಲ್ಯಾಬ್ಗೆ ಕಳಿಸಿದಾಗ, ಅದರಲ್ಲಿ 8 ಕಬಾಬ್ನ ಮಾದರಿಗಳು ಕೃತಕ ಬಣ್ಣದಿಂದ (ಸನ್ಸೆಟ್ ಯೆಲ್ಲೋ – 7 ಮಾದರಿಗಳು ಹಾಗೂ ಸನ್ಸೆಟ್ ಯೆಲ್ಲೋ ಮತ್ತು ಕಾರ್ಮೋಸಿನ್ ಹೊಂದಿರುವ ಮಾದರಿಗಳು 1) ಕೂಡಿರುವುದರಿಂದ ಅಸುರಕ್ಷಿತ ಎಂದು…
ಉಳ್ಳಾಲ: ಬೈಕ್ ಕಳವು ನಡೆಸಿದ ಆರೋಪಿಗಳಿಬ್ಬರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದು, ಬಂಧಿತರಿಂದ ತೊಕ್ಕೊಟ್ಟುವಿನಿಂದ ಕಳವು ನಡೆಸಿದ ಆಕ್ಟಿವಾ ಸ್ಕೂಟರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.ಮುಕ್ಕಚ್ಚೇರಿ ಕಡಪ್ಪುರ ನಿವಾಸಿ ಅಬ್ದುಲ್ ಸವಾದ್ (26) ಮತ್ತು ಧರ್ಮನಗರ ನಿವಾಸಿ ಯಶ್ಬಿತ್ (22) ಬಂಧಿತರು.ಬಂಧಿತರಿಬ್ಬರು ಕೆಲ ದಿನಗಳ ಹಿಂದೆ ತೊಕ್ಕೊಟ್ಟು ಕೀರ್ತಿ ಹೊಟೇಲ್ ಎದುರುಗಡೆ ನಿಲ್ಲಿಸಿದ್ದ ಆಕ್ಟಿವಾ ಸ್ಕೂಟರನ್ನು ಕಳವು ನಡೆಸಿದ್ದರು. ಖಚಿತ ಮಾಹಿತಿ ಪಡೆದ ಉಳ್ಳಾಲ ಪೊಲೀಸರು ಆರೋಪಿಗಳಿಬ್ಬರನ್ನು ಉಳ್ಳಾಲದಿಂದ ಬಂಧಿಸಿದ್ದಾರೆ.ಆರೋಪಿಗಳಲ್ಲಿ ಅಬ್ದುಲ್ ಸವಾದ್ ವಿರುದ್ಧ ಗಾಂಜಾ ಹಾಗೂ ಕಳವು ಪ್ರಕರಣಗಳು ಮಂಗಳೂರಿನ ವಿವಿಧ ಠಾಣೆಗಳಲ್ಲಿದೆ. ಯಶ್ಬಿತ್ ಉಳ್ಳಾಲ – ಸ್ಟೇಟ್ ಬ್ಯಾಂಕ್ ಬಸ್ಸಿನಲ್ಲಿ ನಿರ್ವಾಹಕನಾಗಿದ್ದಾನೆ.ಠಾಣಾಧಿಕಾರಿ ಬಾಲಕೃಷ್ಣ ಹೆಚ್.ಎನ್ ನೇತೃತ್ವದಲ್ಲಿ ಆರೋಪಿಗಳನ್ನು ಬಂಧಿಸಲಾಗಿದ್ದು, ರೂ. 80,000 ಬೆಲೆ ಬಾಳುವ ಆಕ್ಟಿವಾ ಸ್ಕೂಟರನ್ನು ವಶಕ್ಕೆ ಪಡೆಯಲಾಗಿದೆ.
ವಿಟ್ಲ: ಉಡುಪಿ-ಕಾಸರಗೊಡು ವಿದ್ಯುತ್ ಮಾರ್ಗ ಜಿಲ್ಲೆಯ ರೈತರ ಅಳಿವು ಉಳಿವಿನ ಪ್ರಶ್ನೆಯಾಗಿದ್ದು, ಕೃಷಿ ಜಮೀನುಗಳನ್ನು ಉಳಿಸುವ ನಿಟ್ಟಿನಲ್ಲಿ ಜಿಲ್ಲೆಯ ಶಾಸಕರಿಗೆ, ಸಂಸದರಿಗೆ ಹಲವು ಬಾರಿ ಮನವಿಗಳನ್ನು ಸಲ್ಲಿಸಲಾಗಿದೆ. ಆದರೆ ಅವರು ಅದನ್ನು ಕಸದ ಬುಟ್ಟಿಗೆ ಎಸೆದು ಕಂಪನಿಯ ಏಜೆಂಟರಂತೆ ವರ್ತಿಸುತ್ತಿರುವುದು ಖಂಡನಾರ್ಹ. ಕೃಷಿ ಜಮೀನುಗಳನ್ನು ಹಾಳು ಮಾಡುವ ಈ ಯೋಜನೆಯನ್ನು ತಕ್ಷಣ ಸ್ಥಗಿತಗೊಳಿಸಬೇಕು. ಇದರ ವಿರುದ್ಧ ಹೋರಾಟಕ್ಕಿಳಿದಿರುವ ರೈತರ ಮೇಲೆ ಸುಳ್ಳು ಪ್ರಕರಣ ದಾಖಲಿಸುವ ಹುನ್ನಾರ ನಡೆಯುತ್ತಿದೆ. ಇದು ಮುಂದುವರಿದರೆ ಮುಂದಿನ ದಿನ ಇದರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಕಾರ್ಯದರ್ಶಿ ಮನೋಹರ ಶೆಟ್ಟಿ ನಡಿಕಂಬಳಗುತ್ತು ಎಚ್ಚರಿಸಿದ್ದಾರೆ. ವಿಟ್ಲದಲ್ಲಿ ಕರೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು. ಯೋಜನೆಗಾಗಿ ಪಡುಬಿದ್ರೆಯ ಇನ್ನಾದಲ್ಲಿ ಭತ್ತದ ಗದ್ದೆಯನ್ನು ಹಾಳುಗೆಡುವುದನ್ನು ವಿರೋಧಿಸಿ ತೀವ್ರ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಮಧ್ಯ ಪ್ರವೇಶಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳರ್ ಯೋಜನೆಯ ಕಾಮಗಾರಿ ತಕ್ಷಣ ನಿಲ್ಲಿಸುವಂತೆ ಆದೇಶ ಹೊರಡಿಸಿದ್ದು, ಇದು ಉಭಯ ಜಿಲ್ಲೆಗಳಿಗೆ ಅನ್ವಯವಾಗಿದೆ. ಆದರೆ…
ಬೆಂಗಳೂರು: ಶೀಘ್ರದಲ್ಲಿ ಹೊಸದಾಗಿ ಒಂದು ಸಾವಿರ ಗ್ರಾಮ ಲೆಕ್ಕಾಧಿಕಾರಿಗಳ ನೇಮಕಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಅವರು ಕಲಬುರಗಿ ನಗರದಲ್ಲಿವಿಭಾಗ ಮಟ್ಟದ ಕಂದಾಯ ಇಲಾಖೆ ಅಧಿಕಾರಿಗಳ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡುತ್ತ ಈ ಬಗ್ಗೆ ಮಾಹಿತಿ ನೀಡಿದರು. ಇದೇ ವೇಳೆ ಅವರು ಮಾತನಾಡುತ್ತ, ಸರ್ವೆ ಕೆಲಸಗಳು ವಿಳಂಬವಾಗುವುದನ್ನು ತಪ್ಪಿಸಲು ಸರ್ವೆಯರ್ಗಳ ಹುದ್ದೆಗಳನ್ನೂ ಕೂಡ ಭರ್ತಿ ಮಾಡಲಾಗುವುದು ಅಂತ ತಿಳಿಸಿದರು. ಇನ್ನೂ ‘ಈ ಬಾರಿ ವಾಡಿಕೆಗಿಂತ ಹೆಚ್ಚಿನ ಮಳೆ ಆಗುವ ಹಿನ್ನಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ಅಧಿಕಾರಿಗಳಿಗೆ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ ಅಂತ ತಿಳಿಸಿದರು.
ಕುಂದಾಪುರ:ಕುಂದಾಪುರ-ಬೈಂದೂರು ರಾಷ್ಟ್ರೀಯ ಹೆದ್ದಾರಿ 66ರ ಸಂಗಮ ಜಂಕ್ಷನ್ ಬಳಿ ಭಾನುವಾರ ಬೆಳಗ್ಗೆ ಟ್ರಕ್ನ ಕೆಳಗೆ ಸ್ಕೂಟರ್ ಉರುಳಿ ಬಿದ್ದಿದೆ. ಅದೃಷ್ಟವಶಾತ್ ಸ್ಕೂಟರ್ನಲ್ಲಿ ಪ್ರಯಾಣಿಸುತ್ತಿದ್ದ ತಾಯಿ ಮತ್ತು ಮಗಳಿಗೆ ಬಿದ್ದು ಸಣ್ಣಪುಟ್ಟ ಗಾಯಗಳಾಗಿವೆ. ಗಾಯಗೊಂಡವರನ್ನು ರೋಸಿ ಮತ್ತು ಆಕೆಯ ಮಗಳು ರೆನಿಸ್ ಎಂದು ಗುರುತಿಸಲಾಗಿದೆ. ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಟ್ರಕ್ ಹರಿಯಾಣದಿಂದ ಕೊಝಿಕೋಗೆ ತೆರಳುತ್ತಿತ್ತು. ಡಿಕ್ಕಿಯ ರಭಸಕ್ಕೆ ಸ್ಕೂಟರ್ ನಜ್ಜುಗುಜ್ಜಾಗಿದೆ. ಈ ಸಂಬಂಧ ಕುಂದಾಪುರ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ
ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾತ್ಯತೀತ ಜನತಾದಳ (ಜೆಡಿಎಸ್) ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರನ್ನು ಭಾನುವಾರದಂದು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಸೂರಜ್ ರೇವಣ್ಣ ಪರ ಸೋಮವಾರ (ಜೂನ್. 24) ಜಾಮೀನು ಅರ್ಜಿ ಸಲ್ಲಿಸಲಾಗುತ್ತದೆ. ಮುಂದಿನ ವಿಚಾರಣೆ ಜುಲೈ 6 ರಂದು ನಡೆಯಲಿದೆ. ಈ ಬಗ್ಗೆ ಸೂರಜ್ ರೇವಣ್ಣ ಪರ ವಕೀಲ ನಿಖಿಲ್ ಕಾಮತ್ ಮಾಹಿತಿ ನೀಡಿದ್ದಾರೆ. ಅಪರಾಧ ತನಿಖಾ ಇಲಾಖೆ (ಸಿಐಡಿ) ಕಸ್ಟಡಿಗಾಗಿ ನ್ಯಾಯಾಲಯವನ್ನು ಸಂಪರ್ಕಿಸುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಸೋಮವಾರ ಸಿಐಡಿ ಮುಂದಿನ ನಡೆ ನೋಡಿಕೊಂಡು ಜಾಮೀನು ಅರ್ಜಿ ಸಲ್ಲಿಸುವುದಾಗಿ ನಿಖಿಲ್ ಕಾಮತ್ ಮಾಹಿತಿ ನೀಡಿದ್ದಾರೆ. ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರನ್ನು ಸೆನ್ ಪೊಲೀಸ್ ಠಾಣೆಯಲ್ಲಿ ಬಂಧಿಸಲಾಗಿತ್ತು. ಸೂರಜ್ ರೇವಣ್ಣ ಅವರನ್ನು 42ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶ ಶಿವಕುಮಾರ್ ಅವರ ಮುಂದೆ ಹಾಜರುಪಡಿಸಿದ್ದರು. ವಾದ ಆಲಿಸಿದ ನ್ಯಾಯಾಧೀಶರು 14 ದಿನಗಳ…
ಜಗತ್ತಿನ ಬಹುತೇಕ ಜನರ ದಿನ ಆರಂಭವಾಗುವುದೇ ಟೀ ಅಥವಾ ಕಾಫಿಯಿಂದ. ದಿನಕ್ಕೆ ಒಂದು ಕಪ್ ಕಾಫಿ-ಟೀ ಕುಡಿಯಲಿಲ್ಲ ಅಂದ್ರೆ ಆ ದಿನ ಏನೋ ಮಿಸ್ ಮಾಡಿಕೊಂಡಂತೆ ಜನರು ಚಡಪಡಿಸುತ್ತಾರೆ. ಒಂದು ಹೊತ್ತು ಊಟ ಬೇಕಾದರೂ ಬಿಡುತ್ತೇನೆ ಆದರೆ, ಟೀ-ಕಾಫಿ ಬಿಡುವುದಿಲ್ಲ ಎಂದು ಹೇಳುವ ಜನರು ಕೂಡ ನಮ್ಮ ನಡುವೆ ಇದ್ದಾರೆ. ದಿನಕ್ಕೊಂದು ಟೀ ಕುಡಿಯದಿದ್ದರೂ ಸುಸ್ತು, ಚಡಪಡಿಕೆ ಹಾಗೂ ತಲೆ ನೋವು ಅನುಭವಿಸುವವರೂ ಇದ್ದಾರೆ. ಅಷ್ಟೊಂದು ಜನಪ್ರಿಯವಾಗಿದೆ ಈ ಪಾನೀಯ. ಅವರವರ ರುಚಿ ಮತ್ತು ಆರೋಗ್ಯಕ್ಕೆ ತಕ್ಕಂತೆ ಗ್ರೀನ್ ಟೀ, ಬ್ಲಾಕ್ ಟೀ, ಲೆಮನ್ ಟೀ, ಹಾಲಿನ ಟೀ ಕುಡಿಯುತ್ತಾರೆ. ಹೆಚ್ಚಿನವರು ಹಾಲಿನ ಚಹಾವನ್ನು ಇಷ್ಟಪಡುತ್ತಾರೆ. ಹಾಲಿಗೆ ಹೆಚ್ಚು ಚಹಾ ಎಲೆಗಳನ್ನು ಸೇರಿಸಿ ಮತ್ತು ದೀರ್ಘಕಾಲದವರೆಗೆ ಕುದಿಸಿ ತಯಾರಿಸಿದ ಚಹಾವನ್ನು ಇಷ್ಟಪಡುವ ಇದ್ದಾರೆ. ಆದಾಗ್ಯೂ, ದೀರ್ಘಕಾಲದವರೆಗೆ ಚಹಾವನ್ನು ಕುದಿಸುವುದು ಅನೇಕ ಹಾನಿಕಾರಕ ಸಂಯುಕ್ತಗಳನ್ನು ಉಂಟುಮಾಡುತ್ತದೆ. ಅತಿಯಾಗಿ ಕುದಿಸಿದ ಚಹಾವು ಸ್ಲೋ ಪಾಯಿಸನ್ ಆಗಿ ಪರಿವರ್ತನೆಯಾಗಬಹುದು ಎಂದು ಪೌಷ್ಟಿಕತಜ್ಞರು ಎಚ್ಚರಿಸಿದ್ದಾರೆ. ಚಹಾವನ್ನು ಎಷ್ಟು ಹೊತ್ತು…










