ಬಾಲಕೃಷ್ಣ ಅವರು ಪುತ್ರಿ ಚೈತ್ರಾ ಕುಂದಾಪುರ ಅವರಿಂದ ಅನ್ಯಾಯ ಆಗುತ್ತಿದೆ. ನನ್ನ ಮನೆಯಲ್ಲಿ ವಾಸಿಸಲು ಅವಕಾಶ ನೀಡಬೇಕೆಂದು ಕೋರಿ ಹಿರಿಯ ನಾಗರಿಕರ ಪಾಲನೆ ಹಾಗೂ ಕಲ್ಯಾಣ ಕಾಯ್ದೆ ಅನ್ವಯ ಪರಿಹಾರ ಕೋರಿ ನ್ಯಾಯಮಂಡಳಿಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ಸಂಬಂಧದ ಕೋರ್ಟ್ ತೀರ್ಪು ನೀಡಿದೆ.ತಂದೆಗೆ ಮಗಳು ಯಾವುದೇ ರೀತಿ ದೈಹಿಕ, ಮಾನಸಿಕ ಹಿಂಸೆ ನೀಡುವಂತಿಲ್ಲ. ಅವರ ಮನೆಯಲ್ಲಿ ನಿರ್ಭೀತಿಯಿಂದ ಇರಲು ಅವಕಾಶ ಮಾಡಿಕೊಡಬೇಕು. ಅವರ ಸ್ವತ್ತಿನ ರಕ್ಷಣೆಗೆ ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಸೂಕ್ತ ಮುಚ್ಚಳಿಕೆ ನೀಡಬೇಕು ಎಂದು ಎಂದು ಇಲ್ಲಿನ ಉಪವಿಭಾಗಾಧಿಕಾರಿಗಳ ನ್ಯಾಯಾಲಯ ಆದೇಶ ಮಾಡಿದೆ. ಕೆಲ ಸಮಯ ಹಿಂದಷ್ಟೇ ಚೈತ್ರಾ ಕುಂದಾಪುರ ಅವರು ಮದುವೆಯಾದ ಬಳಿಕ ಅವರ ತಂದೆ ಬಾಲಕೃಷ್ಣ ನಾಯಕ್ ಮಗಳ ವಿರುದ್ಧವೇ ಸಾಲು ಸಾಲು ಆರೋಪಗಳನ್ನು ಮಾಡಿದ್ದರು. ಚೈತ್ರಾ ಅವರ ಅವ್ಯವಹಾರದಿಂದ ಬೇಸತ್ತು 71 ವರ್ಷದ ತಾನು ಮನೆ ಬಿಟ್ಟು ಮಂಗಳೂರಿನಲ್ಲಿ ಹೋಟೆಲ್ ಕೆಲಸಕ್ಕೆ ಸೇರಿದ್ದು ಇನ್ನೊಬ್ಬ ಮಗಳನ್ನು ಭೇಟಿ ಮಾಡಲು ಆಗಾಗ ಮನೆಗೆ ಬರುತ್ತಿದ್ದೆ. ಆಗ…
Author: main-admin
ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಸಮಾಜಘಾತುಕ ಚಟುವಟಿಕೆಗಳಲ್ಲಿ ಭಾಗಿಯಾದ ಆರೋಪದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಮತ್ತೆ ಗಡಿ ಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದಾರೆ. ರಾಯಚೂರು ಜಿಲ್ಲೆ ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರಾಗಿರುವ ಆದೇಶವನ್ನು ಬೆಳ್ತಂಗಡಿ ಪೊಲೀಸರು ಧ್ವನಿವರ್ಧಕದ ಮೂಲಕ ಸಾರ್ವಜನಿಕರಿಗೆ ತಿಳಿಸಿದ್ದಾರೆ. ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಗಡಿಪಾರು ಮಾಡಿರುವ ಬಗ್ಗೆ ಬೆಳ್ತಂಗಡಿ ಪೊಲೀಸರು ಗುರುವಾರ ನೋಟಿಸ್ ನೀಡಲು ಉಜಿರೆಯ ಅವರ ಮನೆಗೆ ತೆರಳಿದಾಗ ಮಹೇಶ್ ಶೆಟ್ಟಿ ಮನೆಯಲ್ಲಿ ಇರಲ್ಲಿಲ್ಲ. ಈ ನಡುವೆ, ಬೆಳ್ತಂಗಡಿ ಪೊಲೀಸರು ಮಹೇಶ ಶೆಟ್ಟಿ ಅವರ ಗಡೀಪಾರು ಆದೇಶವನ್ನು ಧ್ವನಿವರ್ಧಕದ ಮೂಲಕ ಉಜಿರೆ ಪೇಟೆಯಲ್ಲಿ ಗುರುವಾರ ಮುಸ್ಸಂಜೆ ಸಾರ್ವಜನಿಕರಿಗೆ ತಿಳಿಸುವ ಕಾರ್ಯ ಮಾಡಿದರು. ನ್ಯಾಯಾಲಯದ ಮತ್ತು ಪುತ್ತೂರು ಉಪ ವಿಭಾಗಾಧಿಕಾರಿ ಆದೇಶವನ್ನು ಮೈಕ್ ಮೂಲಕ ಪೊಲೀಸರು ಓದಿ ಸಾರ್ವಜನಿಕರಿಗೆ ತಿಳಿಸಿದರು.
ಮಂಗಳೂರು: ರೈತ ಕುಡ್ಲ ಪ್ರತಿಷ್ಟಾನದ ನೇತೃತ್ವದಲ್ಲಿ ಪಿಲಿಕುಳ ಅಭಿವೃದ್ದಿ ಪ್ರಾಧಿಕಾರ ಮಂಗಳೂರು ಹಾಗೂ ಶ್ರೀ ಮಹಾಮಾಯಿ ಸ್ಪೋರ್ಟ್ಸ್ ಕ್ಲಬ್ ಉಳಾಯಿಬೆಟ್ಟು ಸಹಯೋಗದೊಂದಿಗೆ ಪಿಲಿಕುಳದಲ್ಲಿ ಡಿ.20ರಿಂದ ಜ.4ರವರೆಗೆ ಪಿಲಿಕುಳ ಹಬ್ಬ ನಡೆಯಲಿದೆ ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ತಿಳಿಸಿದ್ದಾರೆ. ಕರಾವಳಿ ಉತ್ಸವ ಡಿಸೆಂಬರ್ 20 ರಿಂದ ಪ್ರಾರಂಭವಾಗಲಿದ್ದು, ಜನವರಿ 31 ವರೆಗೆ ಜಿಲ್ಲೆಯ ವಿವಿಧ ಕಡೆಗಳಲ್ಲಿ ಆಕರ್ಷಕ ಸಾಂಸ್ಕೃತಿಕ ಮತ್ತು ಸಾಹಸಮಯ ಕಾರ್ಯಕ್ರಮ ಗಳನ್ನುಆಯೋಜಿಸಲಾಗುತ್ತಿದೆ. ಪ್ರತೀ ವರ್ಷದಂತೆ ಈ ವರ್ಷವೂ ಕೂಡ ವೈವಿಧ್ಯಮಯವಾದ ವಸ್ತು ಪ್ರದರ್ಶನ, ಆಹಾರೋತ್ಸವ, ಕ್ರೀಡೆ ಹಾಗೂ ಸಾಂಸ್ಕೃತಿಕ, ಮನರಂಜನೆ ಯನ್ನು ಹಮ್ಮಿಕೊಳ್ಳಲಾಗಿದ್ದು, ಇದೇ ವೇಳೆ ಪಿಲಿಕುಳದಲ್ಲಿ ಡಿ.20ರಿಂದ ಜ.4ರವರೆಗೆ ಪಿಲಿಕುಳ ಹಬ್ಬ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ಧಾರೆ.
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ತಿದ್ದುಪಡಿ ಮಾಡಿ ಗಾಂಧೀಜಿ ಹೆಸರು ಅಳಿಸುತ್ತಿರುವುದು ಕೇಂದ್ರ ಸರ್ಕಾರದ ಘೋರ ಅಪರಾಧವನ್ನು ಖಂಡಿಸುವುದಾಗಿ ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ರಮಾನಾಥ ರೈ ಹೇಳಿದ್ದಾರೆ. ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಯುಪಿಎ ಆಡಳಿತಾವಧಿಯಲ್ಲಿ ನೀಡಲಾದ ಮಹತ್ತರ ಯೋಜನೆ ಇದಾಗಿದ್ದು, ಜಗತ್ತು ಈ ಕಾರ್ಯಕ್ರಮವನ್ನು ಮೆಚ್ಚಿದೆ. ಈ ಯೋಜನೆ ಮಂಡಿಸಲಾದ ಸಂದರ್ಭ ವಿರೋಧ ಪಕ್ಷಗಳು ಟೀಕೆ ಮಾಡಿದ್ದವು. ಭ್ರಷ್ಟಾಚಾರ ಕಾರ್ಯಕ್ರಮ ಎಂದು ಹೇಳಿದ್ದವು. ಮಹಾತ್ಮಗಾಂಧಿ ಹೆಸರಿನಲ್ಲಿ ಜಾರಿಗೆ ಬಂದಿದ್ದ ಈ ಯೋಜನೆ ಸಮಾಜದ ಬಡ, ರೈತ, ಕಾರ್ಮಿಕ ವರ್ಗಕ್ಕೆ ಅನುಕೂಲವಾಗಿದೆ. ಇದೀಗ ಮಹಾತ್ಮ ಗಾಂಧಿ ಹೆಸರನ್ನು ಕೈಬಿಡುವ ಮೂಲಕ ಅವಮಾನ ಮಾಡಲಾಗಿದೆ. ಈಗಾಗಲೇ ಮಹಾತ್ಮಗಾಂಧಿ ವಿರುದ್ಧ ಸಂಘ ಪರಿವಾರದ ಶಕ್ತಿಗಳಿಂದ ನಡೆಯುತ್ತಿರುವ ಮಹಾತ್ಮಗಾಂಧಿ ವಿರುದ್ಧದ ಅವಹೇಳನದ ಭಾಗ ಇದಾಗಿದೆ ಎಂದು ಅವರು ಆರೋಪಿಸಿದರು. ಹಿಂದೆ ಈ ಯೋಜನೆಯಡಿ ವೇತನವನ್ನು ಕೇಂದ್ರ ಸರಕಾರದಿಂದ ಪಾವತಿಸಲಾಗುತ್ತಿತ್ತು. ಈಗ ಕೇಂದ್ರ ಶೇ.60, ರಾಜ್ಯ ಶೇ.40…
ವಂಚನೆ ಪ್ರಕರಣವೊಂದರಲ್ಲಿ ಸುಮಾರು 4 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸುಳ್ಯ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕಡೂರು ಗ್ರಾಮದ ನಿವಾಸಿ ನಾಗೇಶ್ ಬಂಧಿತ ಆರೋಪಿ. ಸುಳ್ಯ ಪೊಲೀಸ್ ಠಾಣಾ ಅ.ಕ್ರ 47/2022, ಕಲಂ: 406, 420 ಐಪಿಡಿ ಅಡಿಯಲ್ಲಿ ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿತ್ತು. ಆರೋಪಿಯನ್ನು ಸುಳ್ಯ ಪೊಲೀಸ್ ಠಾಣಾ ಹೆಡ್ ಕಾನ್ಸ್ಟೇಬಲ್ ರಮೇಶ್ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಶ್ರೀಶೈಲ ಅವರು ಡಿ. 18ರಂದು ಬೆಂಗಳೂರಿನ ಚಿಕ್ಕಬಿದರಿಕಲ್ಲು ಎಂಬಲ್ಲಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಮಂಗಳೂರು: ಇನ್ಸ್ಟಾಗ್ರಾಂ ಪುಟವೊಂದರಲ್ಲಿ ಪೊಲೀಸ್ ಇಲಾಖೆಯ ವಿರುದ್ಧ ಸುಳ್ಳು ಆರೋಪ ಹೊರಿಸಿ, ಪ್ರಚೋದನಕಾರಿ ಸಂದೇಶ ಹರಿಬಿಟ್ಟಿದ್ದ ಆರೋಪಿಯನ್ನು ಮಂಗಳೂರು ನಗರ ಸಿ.ಇ.ಎನ್ (CEN) ಪೊಲೀಸರು ಬಂಧಿಸಿದ್ದಾರೆ. ಕಾಟಿಪಳ್ಳ ನಿವಾಸಿ ಅಭಿಷೇಕ್ ಎಂ. (23) ಬಂಧಿತ ಆರೋಪಿ. ಈತ ಈ ಹಿಂದೆ ಕೊಲೆ, ಕೊಲೆಯತ್ನ ಸೇರಿದಂತೆ ಹಲವು ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಹಳೆ ಆರೋಪಿಯಾಗಿದ್ದಾನೆ. ಬಂಧಿತ ಆರೋಪಿ ಅಭಿಷೇಕ್ ‘mr_a_titude’ ಎಂಬ ಹೆಸರಿನ ಇನ್ಸ್ಟಾಗ್ರಾಂ ಪೇಜ್ನಲ್ಲಿ ಬಜ್ಪೆಯ ಹೋಟೆಲ್ ನಿಸರ್ಗದ ಫೋಟೋವನ್ನು ಹಂಚಿಕೊಂಡಿದ್ದ. ಅದರೊಂದಿಗೆ, “ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆ ಪ್ರಕರಣದ ಆರೋಪಿಗಳಿಗೆ ಪೊಲೀಸರು ರಾಜಾತಿಥ್ಯ ನೀಡುತ್ತಿದ್ದಾರೆ. ಪ್ರತಿದಿನ ನಿಸರ್ಗ ಹೋಟೆಲ್ನಿಂದ ಬೀಫ್ ಊಟ ತರಿಸಿ ಕೊಡುತ್ತಿದ್ದಾರೆ. ರಕ್ಷಣೆ ಮಾಡಬೇಕಾದ ಇಲಾಖೆಯೇ ಅಪರಾಧಿಗಳ ಜೊತೆ ಕೈಜೋಡಿಸಿದೆ” ಎಂಬ ಆಧಾರರಹಿತ ಮತ್ತು ಪ್ರಚೋದನಕಾರಿ ಬರಹವನ್ನು ಪೋಸ್ಟ್ ಮಾಡಿದ್ದ. ಪೊಲೀಸ್ ಇಲಾಖೆಯ ಘನತೆಗೆ ಕುಂದು ತರುವ ಮತ್ತು ಸಾರ್ವಜನಿಕರಲ್ಲಿ ತಪ್ಪು ಸಂದೇಶ ರವಾನಿಸುವ ಈ ಕೃತ್ಯದ ವಿರುದ್ಧ ಮೇ 8ರಂದು ಬಜ್ಪೆ ಪೊಲೀಸ್…
ಬೆಂಗಳೂರಲ್ಲಿ ಎಟಿಎಂಗೆ ಹಣ ಸಾಗಿಸುತ್ತಿದ್ದ ವಾಹನ ಅಡ್ಡಗಟ್ಟಿ ಹಾಡಹಗಲೇ ದರೋಡೆ ಸೇರಿ, ಕೋರಮಂಗಲದ ಕಾಲ್ಸೆಂಟರ್ನ ಉದ್ಯೋಗಿಗಳ ಕಿಡ್ನ್ಯಾಪ್ ಕೇಸ್ಗಳಲ್ಲಿಯೂ ಪೊಲೀಸ್ ಸಿಬ್ಬಂದಿಯೇ ಆರೋಪಿಗಳಾಗಿದ್ದರು. ಇದೀಗ ಕರ್ನಾಟಕದಲ್ಲಿ ಕಳೆದ 3 ವರ್ಷಗಳಲ್ಲಿ 88 ಪೊಲೀಸರು ದರೋಡೆ, ಅಪಹರಣ ಸೇರಿ ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿರುವುದು ಬಹಿರಂಗವಾಗಿದೆ. ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ನ ಜೆಡಿಎಸ್ ಸದಸ್ಯ ಶರವಣ ಅವರ ಪ್ರಶ್ನೆಗೆ ಉತ್ತರಿಸಿರುವ ಗೃಹ ಸಚಿವ ಡಾ. ಜಿ. ಪರಮೇಶ್ವರ್, ರಾಜ್ಯದಲ್ಲಿ ಕಳೆದ 3 ವರ್ಷಗಳ ಅವಧಿಯಲ್ಲಿ ಒಟ್ಟು 88 ಪೊಲೀಸರು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದಾರೆ ಎಂದು ಅಂಕಿ-ಅಂಶ ಸಮೇತ ಮಾಹಿತಿ ನೀಡಿದ್ದಾರೆ. ಗೃಹಸಚಿವರ ಉತ್ತರದ ಬೆನ್ನಲ್ಲೇ ಈ ಬಗ್ಗೆ ಶರವಣ ಅವರು ಈ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಪೊಲೀಸರೇ ದರೋಡೆ, ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗುತ್ತಿದ್ದಾರೆ. ರಕ್ಷಕರೇ ಭಕ್ಷಕರಾಗುತ್ತಿರುವ ಕಾರಣ ಪೊಲೀಸರ ಮೇಲೆ ಜನ ವಿಶ್ವಾಸವನ್ನೇ ಕಳೆದುಕೊಳ್ಳುತ್ತಿದ್ದಾರೆ ಎಂದಿದ್ದಾರೆ. ಜೊತೆಗೆ ಅಪರಾಧ ಪ್ರಕರಣದಲ್ಲಿ ಭಾಗಿಯಾದ ಪೊಲೀಸರನ್ನು ಅಮಾನತು ಮಾಡುವುದಲ್ಲ, ಕೆಲಸದಿಂದಲೇ ವಜಾಗೊಳಿಸಬೇಕು ಎಂದು…
ಪುತ್ತೂರು: ಸೌಜನ್ಯಾ ಪರ ಹೋರಾಟಗಾರ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಗಡಿಪಾರು ಮಾಡಿ ಎರಡನೇ ಬಾರಿ ಪುತ್ತೂರು ಸಹಾಯಕ್ತ ಆಯುಕ್ತೆ ಆದೇಶ ಹೊರಡಿಸಿದ್ದಾರೆ. ಪುತ್ತೂರು ಎ.ಸಿ. ಸ್ಟೆಲ್ಲಾ ವರ್ಗೀಸ್ ಡಿ.17 ರಂದು ಈ ಆದೇಶ ಹೊರಡಿಸಿದ್ದಾರೆ. ಮಹೇಶ್ ಶೆಟ್ಟಿಯನ್ನು ಈ ಹಿಂದೆ ಗಡಿಪಾರು ಮಾಡಿ ಪುತ್ತೂರು ಎ.ಸಿ. ಆದೇಶ ಹೊರಡಿಸಿದ್ದರು. ಇದನ್ನು ಮರು ಪರಿಶೀಲಿಸಲು ಹೈಕೋರ್ಟ್ ಸೂಚಿಸಿತ್ತು. ಹೈಕೋರ್ಟ್ ಆದೇಶದಂತೆ ಮರು ಪರಿಶೀಲನೆ ಮಾಡಿ ಒಂದು ವರ್ಷಗಳ ಕಾಲ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ. ಗಡಿಪಾರು ಆದೇಶದ ಪ್ರತಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಬಂದ ಹಿನೆಲೆಯಲ್ಲಿ ಡಿ.18ರಂದು ಉಜಿರೆಯಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿಯವರ ಮನೆಗೆ ಬೆಳ್ತಂಗಡಿ ಪೊಲೀಸರು ತೆರಳಿ ನೋಟಿಸ್ ಜಾರಿ ಮಾಡಲು ಮುಂದಾಗಿದ್ದಾರೆ. ಆದರೆ ತಿಮರೋಡಿ ಈ ಸಂದರ್ಭ ಮನೆಯಲ್ಲಿ ಇರಲಿಲ್ಲ ಎಂದು ತಿಳಿದು ಬಂದಿದೆ.
ಧರ್ಮಸ್ಥಳ ಪ್ರಕರಣದ ಪ್ರಮುಖ ಆರೋಪಿ ಚಿನ್ನಯ್ಯ ಶಿವಮೊಗ್ಗದ ಸೋಗಾನೆ ಬಳಿ ಇರುವ ಕೇಂದ್ರ ಕಾರಾಗೃಹದಿಂದ ಬಿಡುಗಡೆಗೊಂಡಿದ್ದಾನೆ. ಜಾಮೀನು ಸಿಕ್ಕಿದ 24 ದಿನಗಳ ಬಳಿಕ ಚಿನ್ನಯ್ಯನಿಗೆ ಬಿಡುಗಡೆ ಭಾಗ್ಯ ಸಿಕ್ಕಿದೆ. ನವೆಂಬರ್ 24ರಂದು ಬೆಳ್ತಂಗಡಿ ನ್ಯಾಯಾಲಯ 12 ಷರತ್ತುಗಳನ್ನು ವಿಧಿಸಿ ಒಂದು ಲಕ್ಷ ಬಾಂಡ್ ಇಬ್ಬರು ಸ್ಥಳೀಯ ಶ್ಯೂರಿಟಿ ಪಡೆಯಬೇಕು ಎಂದು ಜಾಮೀನು ಮಂಜೂರು ಮಾಡಿತ್ತು. ಆದರೆ ಜಾಮೀನು ಮಂಜೂರಾಗಿ 24 ದಿನ ಕಳೆದರೂ ಜಾಮೀನು ನೀಡಲು ಯಾರೂ ಮುಂದೆ ಬಾರದ ಕಾರಣ ಬಿಡುಗಡೆ ಭಾಗ್ಯ ಸಿಕ್ಕಿರಲಿಲ್ಲ. ಇಂದು ಬೆಳಗ್ಗೆ ಶಿವಮೊಗ್ಗದ ಸೋಗಾನೆ ಬಳಿ ಇರುವ ಕೇಂದ್ರ ಕಾರಾಗೃಹಕ್ಕೆ ಇನ್ನೋವಾ ಕಾರಿನಲ್ಲಿ ಚಿನ್ನಯ್ಯನ ಪತ್ನಿ ಮಲ್ಲಿಕಾ ಸೇರಿದಂತೆ ಐದು ಜನರು ಆಗಮಿಸಿದ್ದರು. ಶಿವಮೊಗ್ಗ ಕಾರಾಗೃಹದಲ್ಲಿ ಒಂದು ಗಂಟೆಗೂ ಅಧಿಕ ಕಾಲ ಬಿಡುಗಡೆ ಪ್ರಕ್ರಿಯೆ ನಡೆಯಿತು. ಬೆಳಗ್ಗೆ 8.30ರ ವೇಳೆಗೆ ಚಿನ್ನಯ್ಯನನ್ನು ಶಿವಮೊಗ್ಗ ಕಾರಾಗೃಹದಿಂದ ಬಿಡುಗಡೆ ಮಾಡಲಾಗಿದೆ.
ಮಂಗಳೂರು: ಪಾದಚಾರಿಗಳಿಗೆ ಕಾರು ಡಿಕ್ಕಿ ಹೊಡೆದ ಕಾರ್ನ ಚಾಲಕನಿಗೆ ನ್ಯಾಯಾಲಯ ದಂಡ ವಿಧಿಸಿದೆ. ಆರೋಪಿ ಚಾಲಕ ಎಂ.ಶ್ರೀಕಷ್ಣ 2023ರ ಡಿ.24ರಂದು ಪಡೀಲ್ ಕಡೆಯಿಂದ ಬಿಕರ್ಣಕಟ್ಟೆ ಕಡೆಗೆ ಹಾದು ಹೋಗಿರುವ ರಸ್ತೆಯಲ್ಲಿ ಕಾರನ್ನು ಚಲಾಯಿಸಿಕೊಂಡು ಹೋಗಿ ಇಬ್ಬರು ಪಾದಚಾರಿಗಳಿಗೆ ಢಿಕ್ಕಿ ಹೊಡೆಯಲು ಕಾರಣರಾಗಿರುವುದಾಗಿ ಆರೋಪಿಸಲಾಗಿತ್ತು. ಆರೋಪಿ ಚಾಲಕ ಎಂ.ಶ್ರೀಕಷ್ಣ ಸ್ಕೂಟರೊಂದನ್ನು ಎಡಬದಿಯಿಂದ ಓವರ್ ಟೇಕ್ ಮಾಡಿ ರಸ್ತೆಯ ಎಡಬದಿಗೆ ಹೋಗುವ ಭರದಲ್ಲಿ ನಿರ್ಲಕ್ಷ್ಯತನದಿಂದ ರಸ್ತೆಯ ತೀರಾ ಎಡಬದಿಗೆ ಚಲಾಯಿಸಿಕೊಂಡು ಹೋದ ಪರಿಣಾಮ ಇಬ್ಬರು ಪಾದಚಾರಿಗಳಿಗೆ ಢಿಕ್ಕಿಯಾಗಿ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಅಪಘಾತ ಸಂದರ್ಭದಲ್ಲಿ ಕಾರು ಚಾಲಕನ ಚಾಲನಾ ಅನುಜ್ಞಾಪತ್ರದ ಅವಧಿ ಮುಕ್ತಾಯಗೊಂಡಿತ್ತು. ಅಪಘಾತ ಪಡಿಸಿದ ಕಾರಿನ ವಾಯುಮಾಲಿನ್ಯ ಪ್ರಮಾಣ ಪತ್ರದ ಅವಯು ಊರ್ಜಿತದಲ್ಲಿ ಇರಲಿಲ್ಲ. ವಿಚಾರಣೆ ನಡೆಸಿದ ಮಂಗಳೂರು ಜೆಎಂಎಫ್ ಸಿ 8ನೇ ನ್ಯಾಯಾಲಯದ ನ್ಯಾಯಾಧೀಶ ಫವಾಜ್ ಪಿ.ಎ ಅವರು ಡಿ.15ರಂದು ಆರೋಪಿಗೆ 8,500 ರೂ. ದಂಡ ವಿಧಿಸಿ ಆದೇಶ ನೀಡಿದ್ದಾರೆ.ಈ ಘಟನೆಗೆ ಸಂಬಂಧಿಸಿ ಸಂಚಾರ ಪೂರ್ವ ಪೊಲೀಸ್ ಠಾಣೆಯ ಅಂದಿನ ಪೊಲೀಸ್ ಉಪನಿರೀಕ್ಷಕ…










