Author: main-admin

ಮಂಗಳೂರು: ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 66ರ ಎಸ್ ಕೆ ಎಸ್ ಜಂಕ್ಷನ್ ಬಳಿ ಇಂದು ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ. ಮೃತರನ್ನು ಕೇರಳ ಮೂಲದ ಸಂಕೀರ್ತ್ (ಚಾಲಕ) ಹಾಗೂ ಧನುರ್ವೇದ್ ಎಂದು ಗುರುತಿಸಲಾಗಿದೆ. ಗಾಯಗೊಂಡಿರುವ ಸಿಬಿ ಸ್ಯಾಮ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೊಲೀಸರ ಪ್ರಕಾರ, ಇಂದು ಬೆಳಗಿನ ಜಾವ ಸಂಕೀರ್ತ್ ಅವರು ಮೋಟಾರ್ ಸೈಕಲ್‌ನಲ್ಲಿ ಧನುರ್ವೇದ್ ಮತ್ತು ಸಿಬಿ ಸ್ಯಾಮ್ ಅವರೊಂದಿಗೆ ಪಂಪ್ವೆಲ್ ಕಡೆಗೆ ತೆರಳುತ್ತಿದ್ದರು. ಈ ವೇಳೆ ಎಸ್ ಕೆ ಎಸ್ ಜಂಕ್ಷನ್‌ನ ತೆರೆದ ಡಿವೈಡರ್‌ಗೆ ಮೋಟಾರ್ ಸೈಕಲ್ ಡಿಕ್ಕಿ ಹೊಡೆದಿದೆ.ಅಪಘಾತದ ತೀವ್ರತೆಗೆ ಮೋಟಾರ್ ಸೈಕಲ್‌ನಿಂದ ಮೂವರು ರಸ್ತೆಗೆ ಬಿದ್ದಿದ್ದು, ಸಂಕೀರ್ತ್ ಮತ್ತು ಧನುರ್ವೇದ್ ಅವರ ತಲೆ ಹಾಗೂ ಮುಖಕ್ಕೆ ಗಂಭೀರ ಗಾಯಗಳಾಗಿವೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯದಲ್ಲಿ ಇಬ್ಬರೂ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಿಬಿ ಸ್ಯಾಮ್ ಅವರಿಗೆ ಸಣ್ಣ ಗಾಯಗಳಾಗಿವೆ.ಈ…

Read More

ಮೈಸೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ರಾಜ್ಯದ ನಾನಾ ಕಡೆಗಳಲ್ಲಿ ನಡೆದಿದೆ. ದಾವಣಗೆರೆ ಖಾಸಗಿ ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಓದುತ್ತಿದ್ದ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಕೃಪಾ(18), ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಚಿನ್ನಮುಳಗುಂದ ತಾಂಡಾದ ಕಾವ್ಯ ಬಸಪ್ಪ ಲಮಾಣಿ , ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನ ಅಗಸನೂರು ಗ್ರಾಮದ ಮಲ್ಲಯ್ಯ- ನಾಗರತ್ನ ದಂಪತಿಯ ಪುತ್ರಿ ವಿಜಯಲಕ್ಷ್ಮಿ ಮೈಸೂರಿನ ಒಂಟಿಕೊಪ್ಪಲಿನ ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಐಶ್ವರ್ಯಾ(17) ಕಲಾಮಂದಿರ ಅಪಾರ್ಟ್ಮೆಂಟ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಬಗ್ಗೆ ಮಾಹಿತಿ ಪಡೆದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

Read More

ದಕ್ಷಿಣಕನ್ನಡ ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ಇಂದು ಸಂಜೆ ವೇಳೆ ಮಳೆ ಸುರಿದಿದೆ. ಗುಡುಗು ಸಿಡಿಲು ಸಹಿತ ಭಾರೀ ಗಾಳಿ ಮಳೆಯಾಗಿದೆ. ಗಾಳಿಗೆ ತೆಂಗಿನ ಮರವೊಂದು ರಸ್ತೆಗೆ ಬಿದ್ದು ಸ್ಕೂಟರ್ ಸವಾರ ಕೂದಲೆಳೆ ಅಂತರದಲ್ಲಿ ಬಚಾವ್ ಆಗಿದ್ದಾನೆ. ಮಾಣಿ- ಪುತ್ತೂರು ರಸ್ತೆಯ ನೇರಳಕಟ್ಟೆಯಲ್ಲಿ ತೆಂಗಿನಮರವೊಂದು ರಸ್ತೆಗೆ ಬಿದ್ದು ಸ್ಕೂಟರ್ ಸವಾರನೋರ್ವ ಕೂದಲೆಳೆಯ ಅಂತರದಲ್ಲಿ ಪಾರಾದ ಘಟನೆ ನಡೆದಿದೆ. ಘಟನೆಯಿಂದ ಹಲವು ವಿದ್ಯುತ್ ಕಂಬಗಳು ದರೆಗುರುಳಿವೆ.

Read More

ಕಟೀಲು: ತಂತ್ರಜ್ಞಾನ ಶೀಘ್ರಗತಿಯಲ್ಲಿ ಪ್ರಗತಿಯಾಗುತ್ತಿದೆ ಎನ್ನುವುದಕ್ಕೆ ಇದೇ ಸಾಕ್ಷಿ ನೋಡಿ. ಇನ್ಮುಂದೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ದೇವಿಯ ಪ್ರಸಾದವೂ ಕೂಡಾ ಆನ್ಲೈನ್ ಮೂಲಕ ಮನೆ ಬಾಗಿಲಿಗೇ ಬಂದು ತಲುಪಲಿದೆ. ಈಗಾಗಲೇ ರಾಜ್ಯದ ಅನೇಕ ಪ್ರಸಿದ್ಧ ದೇವಾಲಯಗಳಲ್ಲಿ ಈ ಆನ್ಲೈನ್ ಸೇವೆಗಳು ಆರಂಭವಾಗಿದೆ. ಮುಜರಾಯಿ ಇಲಾಖೆಯ ಇ- ಪ್ರಸಾದ ಯೋಜನೆಗೆ ಡಿಮ್ಯಾಂಡ್ ಕೂಡಾ ಹೆಚ್ಚಾಗಿದೆ. ಆದ್ದರಿಂದ ಇನ್ನಷ್ಟು ದೇವಾಲಯಗಳ ಪ್ರಸಾದವನ್ನು ಆನ್ಲೈನ್ ಮೂಲಕವೇ ಮನೆ ಮನೆಗೆ ತಲುಪಿಸಲು ಇಲಾಖೆ ಮುಂದಾಗಿದ್ದು ಬೇರೆ ಭಾಗದ ಜನರಿಗೂ ಈ ಸೇವೆಯಿಂದ ಇನ್ನಷ್ಟು ಅನುಕೂಲವಾಗಲಿದೆ.

Read More

ಮಂಗಳೂರು: ನಗರದಲ್ಲಿ ನೀಟ್ ಕೋಚಿಂಗ್ ಪಡೆಯುತ್ತಿದ್ದ ವಿದ್ಯಾರ್ಥಿಯೋರ್ವ ನಾಪತ್ತೆಯಾಗಿರುವ ಬಗ್ಗೆ ಕಾವೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ವಿದ್ಯಾರ್ಥಿಯನ್ನು ಸಂಜಯ್ ಬೇರಾ (21) ಎಂದು ಗುರುತಿಸಲಾಗಿದೆ. ಮಾರ್ಚ್ 21 ರಂದು ತಂದೆ ತಾಯಿಯಲ್ಲಿ ಓದಲು ಹೋಗುವುದಾಗಿ ಹೇಳಿ ಮನೆಯಿಂದ ಹೋದವರು ಕಾಣೆಯಾಗಿದ್ದಾರೆ. ಕಾಣೆಯಾದವರ ಚಹರೆ : ಎತ್ತರ 5.8 ಅಡಿ, ಎಣ್ಣೆ ಕಪ್ಪು ಮೈಬಣ್ಣ, ಸಾಧಾರಣ ಶರೀರ ಹೊಂದಿರುತ್ತಾರೆ. ಕಾಣೆಯಾದ ದಿನ ಕಪ್ಪು ಜೀನ್ಸ್ ಪ್ಯಾಂಟ್, ಟೀ ಶರ್ಟ್, ಕಪ್ಪು ಬಣ್ಣದ ಜೀನ್ಸ್ ಬ್ಯಾಗ್ ಧರಿಸಿದ್ದರು. ಹಿಂದಿ, ಬಂಗಾಳಿ, ಇಂಗ್ಲೀಷ್‌ ಭಾಷೆ ಮಾತನಾಡುತ್ತಾರೆ. ಕಾಣೆಯಾದವರ ಬಗ್ಗೆ ಮಾಹಿತಿ ಪತ್ತೆಯಾದಲ್ಲಿ ಕಾವೂರು ಪೊಲೀಸ್ ಠಾಣೆ ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕಡಬ: ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ ಮರದ ದಿಮ್ಮಿಗಳ ಸಹಿತ ಲಾರಿಯನ್ನು ಅರಣ್ಯ ಇಲಾಖಾಧಿಕಾರಿಗಳ ತಂಡ ಸೋಮವಾರ ಪತ್ತೆ ಹಚ್ಚಿ ವಶಪಡಿಸಿಕೊಂಡಿದ್ದಾರೆ ಖಚಿತ ವರ್ತಮಾನದ ಮೇರೆಗೆ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖಾಧಿಕಾರಿಗಳ ತಂಡ ಕಡಬ ತಾಲೂಕು   ಅಲಂಕಾರು ಪರಿಸರದ ಕಾಡಿನಿಂದ ಕಡಿದು ಬಿ.ಸಿ. ರೋಡ್‌ ಪರಿಸರದತ್ತ ಸಾಗಾಟ ಮಾಡಲಾಗುತ್ತಿದ್ದ ವಿವಿಧ ಜಾತಿಯ ಮರದ ದಿಮ್ಮಿಗಳನ್ನು ಹೊತ್ತು ಸಾಗಿಸುತ್ತಿದ್ದ ಲಾರಿಯನ್ನು ಸುಬ್ರಹ್ಮಣ್ಯ ಕ್ರಾಸ್‌ ಬಳಿ ವಶಕ್ಕೆ ಪಡೆದು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಪಾಣೆಮಂಗಳೂರು ನಿವಾಸಿ ಮಹಮ್ಮದ್‌ ಅಶ್ರಫ್ ಬಂಧಿತ. 1.09 ಲಕ್ಷ ರೂ. ಮೌಲ್ಯದ ಮರದ ದಿಮ್ಮಿಗಳನ್ನು ಹಾಗೂ 6 ಲಕ್ಷ ರೂ. ಮೌಲ್ಯದ ಲಾರಿಯನ್ನು ವಶಪಡಿಸಿಕೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ವಲಯ ಅರಣ್ಯಾಧಿಕಾರಿ ರಾಘವೇಂದ್ರ, ಉಪ ವಲಯ ಅರಣ್ಯಾಧಿಕಾರಿ ಜೆರಾಲ್ಡ್‌ ಡಿಸೋಜಾ, ಅರಣ್ಯ ಪಾಲಕರಾದ ಜಗದೀಶ್‌, ವಿನಯಚಂದ್ರ, ಅರಣ್ಯ ವೀಕ್ಷಕರಾದ ಕಿರಣ್‌, ರವಿ, ಕಿಶೋರ್‌ ಭಾಗವಹಿಸಿದ್ದರು. ಪ್ರಕರಣದ ಬಗ್ಗೆ ಪ್ರೊಬೆಷನರಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹರ್ಷಾ ಶೆಟ್ಟಿ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತದೆ.

Read More

ಬೆಳ್ತಂಗಡಿ : ಪೊಲೀಸ್ ಭದ್ರತೆ ನಡುವೆಯೇ ಯುವಕನೋರ್ವ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿಗೆ ಮುತ್ತಿಕ್ಕಿರುವ ಘಟನೆ ನಡೆದಿದೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮಾಸ್ಟರ್ ಮೈಂಡ್ ಶಾಫಿ ಬೆಳ್ಳಾರೆಯನ್ನು ಪೊಲೀಸರು ಬೆಳ್ತಂಗಡಿ ನ್ಯಾಯಾಲಯಕ್ಕೆ ಕರೆದುಕೊಂಡು ಬಂದಿದ್ದರು. ಆ ವೇಳೆ ಕೋರ್ಟ್ ಆವರಣದಲ್ಲಿ ಪೊಲೀಸರ ಭದ್ರತೆ ನಡುವೆ ಯುವಕನೋರ್ವ ಬಂದು ಆರೋಪಿ ಶಾಫಿ ಬೆಳ್ಳಾರೆ ಹಣೆಗೆ ಮುತ್ತು ಕೊಟ್ಟಿದ್ದಾನೆ. ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಆರೋಪಿ ಶಾಫಿ ಬೆಳ್ಳಾರೆ ಈಗಾಗಲೇ ಎನ್ ಐಎಯಿಂದ ಬಂಧನವಾಗಿ ನ್ಯಾಯಾಂಗ ಬಂಧನದಲ್ಲಿದ್ದಾನೆ. ಆದರೆ, 2017ರಲ್ಲಿ ಆರ್.ಎಸ್.ಎಸ್ ಹಾಗೂ ಕಲ್ಲಡ್ಕ ಭಟ್ ವಿರುದ್ಧ ಅವಹೇನಕಾರಿ ಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಟಿ ವಾರೆಂಟ್ ಮೇಲೆ ಪೊಲೀಸರು ಶಾಫಿ ಬೆಳ್ಳಾರೆಯನ್ನ ಕರೆದುಕೊಂಡು ಬಂದು ಬೆಳ್ತಂಗಡಿ ಕೋರ್ಟ್ಗೆ ಹಾಜರುಪಡಿಸಿದ್ದರು. ಈ ವೇಳೆ ಈ ಮುತ್ತು ಕೊಟ್ಟಿರುವ ಘಟನೆ ನಡೆದಿದೆ.

Read More

ಮಂಗಳೂರು: ಅಪ್ರಾಪ್ತೆಯ ಮೇಲೆ ನಿರಂತರ ಅತ್ಯಾಚಾರವೆಸಗಿ ಆಕೆ ಗರ್ಭಿಣಿಯಾಗಲು ಕಾರಣಕರ್ತನಾದ ಪಿಎಸ್ಐ ಓರ್ವರ ಮಗನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಕಾಮುಕ ದ.ಕ ಜಿಲ್ಲೆಯ ಪಿಎಸ್ಐ ಓರ್ವರ ಮಗನಾಗಿದ್ದು ಆತನಿಗೆ ಮದುವೆಯಾಗಿ ಮಕ್ಕಳಿದ್ದಾರೆ‌. ಸದ್ಯ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಹದಿನೇಳು ವರ್ಷದ ವಿದ್ಯಾರ್ಥಿನಿಯೋರ್ವಳು ಮನೆಯಲ್ಲಿ ಒಬ್ಬಳೇ ಇದ್ದಾಗ ನೀರು ಕೇಳುವ ನೆಪದಲ್ಲಿ ಹೋಗಿ ಅತ್ಯಾಚಾರ ಎಸಗಿದ್ದಾನೆ. ಬೆದರಿಕೆಯೊಡ್ಡಿ ಹಿಂಸಾತ್ಮಕವಾಗಿ ಏಳೆಂಟು ಬಾರಿ ಈತ ಆಕೆಯ ಮೇಲೆ ತನ್ನ ಕಾಮತೃಷೆ ತೀರಿಸಿದ್ದು ಆಕೆ ಗರ್ಭಿಣಿಯಾದ ಬಳಿಕ ಕಾಮುಕನ ಕೃತ್ಯ ಬಯಲಾಗಿದೆ.

Read More

ಸುಳ್ಯ:ಸಮೀಪ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕುಳಿತು ಯುವಕರ ತಂಡ ಹುಚ್ಚಾಟ ಮೆರೆಯುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ. ಈ ಘಟನೆ ಬಗ್ಗೆ ಇಲ್ಲಿನ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಈ ಘಟನೆ ಮಾಣಿ-ಮೈಸೂರು ಹೆದ್ದಾರಿಯ ಸುಳ್ಯ ತಾಲೂಕು ವ್ಯಾಪ್ತಿಯಲ್ಲಿ ಸಂಭವಿಸಿದೆ ಎಂದು ತಿಳಿಯಲಾಗಿದೆ. ಸಂಪಾಜೆ ಭಾಗದಿಂದ ಸುಳ್ಯದತ್ತ ವೇಗವಾಗಿ ಚಲಿಸುತ್ತಿರುವ ಕಾರಿನ ಮೇಲ್ಭಾಗ ತೆರೆದು ಆ ಭಾಗದಿಂದ ಇಬ್ಬರು ಯುವಕರು ಮೇಲೆ ಬಂದ್ದಿದ್ದು, ಇಬ್ಬರು ಹಿಂದಿ ಸೀಟಿನ ಎಡ ಹಾಗೂ ಬಲ ಬದಿಯ ಡೋರ್ ಭಾಗದಿಂದ ಮೇಲೆ ಬಂದಿದ್ದು, ಇಬ್ಬರು ಮುಂದಿನ ಎಡರೂ ಡೋರ್‌ನ ಡ್ರೈವರ್ ಸೈಡ್ ಭಾಗದಿಂದಲೂ ಮೇಲೆದ್ದು ನಿಂತು ಹುಚ್ಚಾಟ ಮೆರೆಯುತ್ತಿರುವುದು ವಿಡಿಯೋದಲ್ಲಿದೆ. ಯುವಕರ ಕೃತ್ಯವನ್ನು ಹಿಂದಿನಿಂದ ಕಾರಿನಲ್ಲಿ ಬರುತ್ತಿದ್ದವರು ಚಿತ್ರೀಕರಿಸಿಕೊಂಡಿದ್ದಾರೆ ಎನ್ನಲಾಗಿದೆ. ಈ ವಿಡಿಯೋ ಇದೀಗ ಎಲ್ಲಾ ಕಡೆ ವೈರಲ್ ಆಗಿದೆ. ಪೊಲೀಸರು ಈ ಪ್ರಕರಣವನ್ನು ವಿಚಾರಣೆ ನಡೆಸುತ್ತಿದ್ದಾರೆ.

Read More

ಮಂಗಳೂರಿನಿಂದ ಮೂಲ್ಕಿ ಕಾರ್ನಾಡು ಕಡೆಗೆ ಬರುತ್ತಿದ್ದ ರಿಕ್ಷಾ ಒಂದಕ್ಕೆ ಕಾರೊಂದು ಹಿಂಬದಿಯಿಂದ ಢಿಕ್ಕಿ ಹೊಡೆದು ರಿಕ್ಷಾದಲ್ಲಿದ್ದ ಮೂವರು ಪ್ರಯಾಣಿಕರು ಹಾಗೂ ಚಾಲಕ ಸೇರಿ ನಾಲ್ವರು ಗಾಯಗೊಂಡ ಘಟನೆ ಮೂಲ್ಕಿಯ ಕೊಲ್ಲಾಡು ಹೆದ್ದಾರಿಯಲ್ಲಿ ನಡೆದಿದೆ. ಗಾಯಗೊಂಡವರನ್ನು ರಿಕ್ಷಾ ಚಾಲಕ ಅಬ್ದುಲ್ ಬಶೀರ್ (35), ಪ್ರಯಾಣಿಕರಾದ ಮರಕಡದ ಶೋಭಾ (55), ಕುಂಜತ್ತಬೈಲ್‌ನ ಭವಾನಿ (65) ಮತ್ತು ಪಣಂಬೂರಿನ ವಸಂತಿ (72) ಎನ್ನಲಾಗಿದೆ. ಕಾರು ಹತೋಟಿ ಕಳೆದುಕೊಂಡು ನಿಧಾನವಾಗಿ ಮೂಲ್ಕಿಯತ್ತ ಹೋಗುತ್ತಿದ್ದ ರಿಕ್ಷಾಕ್ಕೆ ಢಿಕ್ಕಿ ಹೊಡೆದಿದೆ. ರಿಕ್ಷಾ ಚಾಲಕ ಒಂದಷ್ಟು ದೂರಕ್ಕೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದಾರೆ. ರಿಕ್ಷಾದಲ್ಲಿದ್ದ ಇತರ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಘಟನೆಯಲ್ಲಿ ಎರಡೂ ವಾಹನ ಜಖಂ ಆಗಿದ್ದು, ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಧಾವಿಸಿ ಕೇಸು ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Read More