ಉಡುಪಿ: ಮೂಡನಿಡಂಬೂರು ಗ್ರಾಮದ ಕರಾವಳಿ ಬೈಪಾಸ್ ಬಳಿ ಬೇಕರಿ ಮಾಲೀಕರೊಬ್ಬರ ಮೇಲೆ ಹಲ್ಲೆ ನಡೆದಿದ್ದು, ಈ ಸಂಬಂಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಿದಿಯೂರು ಗ್ರಾಮದ ಮುರಳಿಧರ್ (35) ಎಂಬುವರು ನೀಡಿದ ದೂರಿನ ಪ್ರಕಾರ, ಅವರು ಕಳೆದ 20 ವರ್ಷಗಳಿಂದ ಕರಾವಳಿ ಬೈಪಾಸ್ ಬಳಿಯ ಸಾಗರ್ ಗಂಗಾ ಕಟ್ಟಡದ ನೆಲಮಹಡಿಯಲ್ಲಿ ‘ಪೂಜಾ ಬೇಕರಿ’ ನಡೆಸುತ್ತಿದ್ದಾರೆ. ಇವರ ಅಂಗಡಿಯ ಪಕ್ಕದಲ್ಲೇ ಅಶೋಕ್ ಎಂಬಾತ ಕಳೆದ ಒಂದು ವರ್ಷದಿಂದ ‘ಕೃಷ್ಣ ಬೇಕರಿ’ ನಡೆಸುತ್ತಿದ್ದಾನೆ ಎಂದು ತಿಳಿದುಬಂದಿದೆ. ಘಟನೆಯ ವಿವರಮೇ 23ರಂದು ಮಧ್ಯಾಹ್ನ ಸುಮಾರು 12:30ರ ವೇಳೆಗೆ ಮುರಳಿಧರ್ ಅವರು ತಮ್ಮ ಬೇಕರಿಯಲ್ಲಿ ಗ್ರಾಹಕರಿಗೆ ವ್ಯಾಪಾರ ಮಾಡುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಆರೋಪಿ ಅಶೋಕ್ ಇದ್ದಕ್ಕಿದ್ದಂತೆ ಅಂಗಡಿಯ ಬಳಿ ಬಂದು ಅವಾಚ್ಯ ಶಬ್ದಗಳಿಂದ ನಿಂದಿಸಿ, ಅಕ್ರಮವಾಗಿ ಒಳಗೆ ನುಗ್ಗಿದ್ದಾನೆ ಎಂದು ಆರೋಪಿಸಲಾಗಿದೆ. ಬಳಿಕ ಮುರಳಿಧರ್ ಅವರ ಕಾಲರ್ ಪಟ್ಟಿ ಹಿಡಿದು, ಕೆನ್ನೆಗೆ ಹಾಗೂ ಕುತ್ತಿಗೆಗೆ ಹೊಡೆದು, ಕಾಲಿನಿಂದ ಒದ್ದು ನೆಲಕ್ಕೆ ತಳ್ಳಿದ್ದಾನೆ ಎಂದು…
Author: main-admin
ಹೆಬ್ರಿ: ಕರಾವಳಿ ಮತ್ತು ಮಲೆನಾಡು ಭಾಗವನ್ನು ಸಂಪರ್ಕಿಸುವ ಆಗುಂಬೆ ಘಾಟಿಯ ಉಡುಪಿ ಜಿಲ್ಲಾ ವ್ಯಾಪ್ತಿಯ ಎರಡನೇ ತಿರುವಿನ ಬಳಿ ಶನಿವಾರ ಸಂಜೆ ಬೃಹತ್ ಮರವೊಂದು ರಸ್ತೆಗೆ ಉರುಳಿ ಬಿದ್ದ ಪರಿಣಾಮ ಸುಮಾರು ಒಂದು ಗಂಟೆಗಳ ಕಾಲ ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿತ್ತು.ಈ ಘಟನೆಯಿಂದಾಗಿ ಈಗಾಗಲೇ ಟ್ರಾಫಿಕ್ ಸಮಸ್ಯೆಯಿಂದ ತತ್ತರಿಸಿದ್ದ ಘಾಟಿ ರಸ್ತೆಯಲ್ಲಿ ವಾಹನ ದಟ್ಟಣೆ ಮತ್ತಷ್ಟು ತೀವ್ರಗೊಂಡಿತು. ಇತ್ತೀಚಿನ ದಿನಗಳಲ್ಲಿ ಈ ಭಾಗಕ್ಕೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದ್ದು, ವಾಹನಗಳ ದಟ್ಟಣೆಯಿಂದಾಗಿ ಪ್ರತಿದಿನ ಇಲ್ಲಿ ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ.ಇದರ ಬೆನ್ನಲ್ಲೇ, ಘಾಟಿಯ ವಿವಿಧ ತಿರುವುಗಳಲ್ಲಿ ಹಲವು ಅಪಾಯಕಾರಿ ಮರಗಳು ರಸ್ತೆಯ ಕಡೆಗೆ ವಾಲಿ ನಿಂತಿರುವುದು ವಾಹನ ಸವಾರರು ಮತ್ತು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಮುಂಬರುವ ದಿನಗಳಲ್ಲಿ ಭಾರಿ ಗಾಳಿ-ಮಳೆಗೆ ಈ ಮರಗಳು ರಸ್ತೆಗೆ ಉರುಳುವ ಸಾಧ್ಯತೆ ಹೆಚ್ಚಾಗಿದೆ. ಇದಲ್ಲದೆ, ಘಾಟಿ ರಸ್ತೆಯುದ್ದಕ್ಕೂ ಬಿದ್ದಿರುವ ತಡೆಗೋಡೆಗಳ ದುರಸ್ತಿ ಕಾರ್ಯವೂ ಇನ್ನೂ ನಡೆದಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಮುಂಗಾರು ಮಳೆ…
ಬೆಂಗಳೂರು: ತಂದೆ-ತಾಯಿಗೆ ಮರ್ಯಾದೆ ಕೊಡುವುದಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಪತಿಯೊಂದಿಗೆ ಉಂಟಾದ ಜಗಳದಿಂದ ಮನನೊಂದ ಪೊಲೀಸ್ ಕಾನ್ಸ್ಟೇಬಲ್ ಪತ್ನಿ (wife) ಪೊಲೀಸ್ ಕ್ವಾಟ್ರಸ್ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ (death) ಮಾಡಿಕೊಂಡಿರುವಂತಹ ಘಟನೆ ಕೆ.ಆರ್.ಪುರಂನಲ್ಲಿ ನಡೆದಿದೆ. ಹೆಚ್ಎಎಲ್ ಪೊಲೀಸ್ ಠಾಣೆ ಕಾನ್ಸ್ಟೇಬಲ್ ರಾಜೇಶ್ ಆರಾಧ್ಯ ಪತ್ನಿ ಲಕ್ಷ್ಮೀಪ್ರಿಯಾ (27) ಆತ್ಮಹತ್ಯೆಗೆ ಶರಣಾದ ದುರ್ದೈವಿ. ನಡೆದಿದ್ದೇನು?ಮೂಲತಃ ಮಂಡ್ಯ ಜಿಲ್ಲೆಯ ಮಳವಳ್ಳಿಯವರಾದ ರಾಜೇಶ್ ಆರಾಧ್ಯ ಮತ್ತು ಲಕ್ಷ್ಮೀಪ್ರಿಯಾ ಅವರಿಗೆ 2023ರಲ್ಲಿ ಮೈಸೂರಿನಲ್ಲಿ ವಿವಾಹವಾಗಿತ್ತು. ಈ ದಂಪತಿಗೆ ಸದ್ಯ 8 ತಿಂಗಳ ಹಸುಗೂಸಿದೆ. ಕೆ.ಆರ್.ಪುರಂನಲ್ಲಿರುವ ಪೊಲೀಸ್ ಕ್ವಾಟ್ರಸ್ನಲ್ಲಿ ಈ ಕುಟುಂಬ ವಾಸವಾಗಿತ್ತು. ನಿನ್ನೆ (ಮೇ 22) ಬೆಳಿಗ್ಗೆ ದಂಪತಿ ನಡುವೆ ಕೌಟುಂಬಿಕ ವಿಷಯಕ್ಕೆ ದೊಡ್ಡ ಜಗಳ ಉಂಟಾಗಿದೆ. “ನನ್ನ ತಂದೆ-ತಾಯಿಗೆ ನೀನು ಸರಿಯಾಗಿ ಮರ್ಯಾದೆ ಕೊಡುವುದಿಲ್ಲ” ಎಂದು ಪತಿ ರಾಜೇಶ್ ಪತ್ನಿಗೆ ಬೈದಿದ್ದರು. ಇದೇ ಕಾರಣಕ್ಕೆ ತೀವ್ರ ಬೇಸರಗೊಂಡಿದ್ದ ಲಕ್ಷ್ಮೀಪ್ರಿಯಾ, ನಿನ್ನೆ ರಾತ್ರಿ ರಾಜೇಶ್ ನೈಟ್ ಡ್ಯೂಟಿಗೆ ತೆರಳಿದ್ದಾಗ ಇತ್ತ ಕ್ವಾಟ್ರಸ್ನಲ್ಲಿ ನೇಣು ಬಿಗಿದುಕೊಂಡು ಪ್ರಾಣ ಬಿಟ್ಟಿದ್ದಾರೆ.…
ಉಪ್ಪಿನಂಗಡಿ: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ಸುಮಾರು ೭ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಉಪ್ಪಿನಂಗಡಿ ಠಾಣಾ ಪೊಲೀಸರು ಬಂಧಿಸಿದ್ದಾರೆ.ಉಪ್ಪಿನಂಗಡಿ ಠಾಣಾ ಅಕ್ರ:158/2015 ಕಲಂ: 457, 380 ಐಪಿಸಿ ಪ್ರಕರಣದ ಆರೋಪಿಯಾಗಿರುವ ಮಂಗಳೂರು ಕಸಬಾ ಬೇಂಗ್ರೆ ನಿವಾಸಿ ಅಕ್ರಂ ಯಾನೆ ಬೋಜ ಅಕ್ರ ಬಂಧಿತ ಆರೋಪಿ.ಪೊಲೀಸರು ಆರೋಪಿಯನ್ನು ಮಂಗಳೂರಿನ ಪಣಂಬೂರಿನಲ್ಲಿ ದಸ್ತಗಿರಿ ಮಾಡಲಾಗಿದ್ದು, ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.ಉಪ್ಪಿನಂಗಡಿ ಪೊಲೀಸ್ ಠಾಣಾ ಪಿಎಸೈ ರವರಾದ ಕೌಶೀಕ್ ಬಿಸಿ, ಸಿಬ್ಬಂದಿಯವರಾದ ಹೆಡ್ ಕಾನ್ಸ್ಟೇಬಲ್ ಶಿವರಾಮ್ ರೈ, ಪೊಲೀಸ್ ಕಾನ್ಸ್ಟೇಬಲ್ ಮಹದೇವರವರು ಆರೋಪಿಯನ್ನು ದಸ್ತಗಿರಿ ಮಾಡಿದ್ದಾರೆ.ಆರೊಪಿಯ ವಿರುದ್ಧ ಪಣಂಬೂರು ಪೊಲೀಸ್ ಠಾಣೆಯಲ್ಲಿ ಮೂರು ಪ್ರಕರಣಗಳು ಮತ್ತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿರುತ್ತದೆ.
ಮಣಿಪಾಲ: ಅನುಮಾನಾಸ್ಪದವಾಗಿ ನಿಂತಿದ್ದ ದಂಪತಿಯನ್ನು ಇಂದ್ರಾಳಿ ರೈಲ್ವೆ ಸ್ಟೇಷನ್ ಬಳಿ ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ರಮೇಶ ಬಂಡಿ ವಡ್ಡರ(45) ಹಾಗೂ ಆತನ ಪತ್ನಿ ಸುಧಾ(30) ಬಂಧಿತ ಆರೋಪಿಗಳು.ರಮೇಶ್ ಕೈಯಲ್ಲಿ ಎರಡು ಮೊಬೈಲ್ ಇದ್ದು ಅದರಲ್ಲಿ ಒಂದು ಸಿಮ್ ಹಾಗೂ ಸುಧಾ ಕೈಯಲ್ಲಿ ಒಂದು ಮೊಬೈಲ್ ಇತ್ತು. ಈ ಬಗ್ಗೆ ಸಮರ್ಪಕ ಉತ್ತರ ನೀಡದೆ ಇರುವುದರಿಂದ ಪೊಲೀಸರು ಅನುಮಾನ ಗೊಂಡು ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು: ಮುಂಗಾರು ಮಳೆಯ ಸಂದರ್ಭ ಗುಡ್ಡಕುಸಿತ ಸೇರಿದಂತೆ ಸಾರ್ವಜನಿಕ ಆಸ್ತಿಪಾಸ್ತಿ ಹಾಗೂ ಪ್ರಾಣ ಹಾನಿ ತಪ್ಪಿಸಲು ಜೂ. 1ರಿಂದ ಸೆಪ್ಟಂಬರ್ 30ರವರೆಗೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆ, ಗುಡ್ಡ ಹಾಗೂ ಮಣ್ಣು ಅಗೆಯುವುದನ್ನು ನಿಷೇಧಿಸಲಾಗಿದೆ. ಪಾಲಿಕೆ ಆಯುಕ್ತ ರವಿಚಂದ್ರ ನಾಯ್ಕ್ ಅವರು ಈ ಬಗ್ಗೆ ಪ್ರಕಟನೆಯಲ್ಲಿ ಸೂಚನೆ ನೀಡಿದ್ದು, ಇಂತಹ ಯಾವುದೇ ರೀತಿಯ ಅಗೆತದ ಕಾಮಗಾರಿ ನಡೆಸದಂತೆ ಹಾಗೂ ಈ ಅವಧಿಯಲ್ಲಿ ಮಣ್ಣು ಸಾಗಾಟ ಮಾಡುವುದನ್ನು ಸಂಪೂರ್ಣ ವಾಗಿ ನಿಷೇಧಿಸಿರುವುದಾಗಿ ತಿಳಿಸಿದ್ದಾರೆ.ಅಧಿಕೃತ ಅನುಮತಿ ಪಡೆದ ನಂತರ ಈಗಾಗಲೇ ಪ್ರಾರಂಭವಾಗಿರುವ ನಿರ್ಮಾಣ ಯೋಜನೆಗಳು ಸಾಕಷ್ಟು ಸುರಕ್ಷತಾ ಕ್ರಮಗಳನ್ನು ತೆಗೆದುಕೊಂಡರೆ ಮುಂದುವರಿಯಬಹುದು ಎಂದು ನಿಗಮ ಸ್ಪಷ್ಟಪಡಿಸಿದೆ. ಪಕ್ಕದ ಆಸ್ತಿಗಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ಮತ್ತು ನಿರ್ಮಾಣ ಸ್ಥಳಗಳಲ್ಲಿ ಸರಿಯಾದ ಬ್ಯಾಕ್ಫಿಲ್ಲಿಂಗ್ ಕೆಲಸವನ್ನು ಕೈಗೊಳ್ಳಲು ಬಿಲ್ಡರ್ಗಳು ಮತ್ತು ಆಸ್ತಿ ಮಾಲೀಕರಿಗೆ ಸೂಚನೆ ನೀಡಲಾಗಿದೆ.ಯಾವುದೇ ಅಪಘಾತ ಅಥವಾ ವಿಪತ್ತು ಸಂಭವಿಸಿದಲ್ಲಿ, ಆಸ್ತಿ ಮಾಲೀಕರು ಮತ್ತು ಸಂಬಂಧಪಟ್ಟ ಎಂಜಿನಿಯರ್ ನೇರ ಹೊಣೆಗಾರರಾಗಿರುತ್ತಾರೆ ಎಂದು ಎಂಸಿಸಿ ಮತ್ತಷ್ಟು ಎಚ್ಚರಿಸಿದೆ.…
ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಶನಿವಾರದಂದು ಮತ್ತೊಮ್ಮೆ ಹೆಚ್ಚಿಸಲಾಗಿದ್ದು, ಕಳೆದ 10 ದಿನಗಳಿಗಿಂತಲೂ ಕಡಿಮೆ ಅವಧಿಯಲ್ಲಿ ಇದು ಮೂರನೇ ದರ ಏರಿಕೆಯಾಗಿದೆ. ಪಶ್ಚಿಮ ಏಷ್ಯಾ (ಮಧ್ಯಪ್ರಾಚ್ಯ) ಸಂಘರ್ಷಕ್ಕೆ ಸಂಬಂಧಿಸಿದಂತೆ ಹೆಚ್ಚುತ್ತಿರುವ ಇಂಧನ ವೆಚ್ಚದ ಹೊರೆಯನ್ನು ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಗ್ರಾಹಕರ ಮೇಲೆ ವರ್ಗಾಯಿಸುವುದನ್ನು ಮುಂದುವರಿಸಿರುವುದು ಇದಕ್ಕೆ ಕಾರಣವಾಗಿದೆ. ಪಿಟಿಐ (PTI) ವರದಿಯ ಪ್ರಕಾರ, ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ಗೆ 87 ಪೈಸೆ ಏರಿಕೆಯಾಗಿದ್ದು, 98.64 ರೂಪಾಯಿಯಿಂದ 99.51 ರೂಪಾಯಿಗೆ ತಲುಪಿದೆ. ಇತ್ತ ಡೀಸೆಲ್ ದರವು ಲೀಟರ್ಗೆ 91 ಪೈಸೆ ಹೆಚ್ಚಳವಾಗಿದ್ದು, 91.58 ರೂಪಾಯಿಯಿಂದ 92.49 ರೂಪಾಯಿಗೆ ಏರಿಕೆಯಾಗಿದೆ. ದೆಹಲಿಯ ಇಂಧನ ವಿತರಕರನ್ನು ಉಲ್ಲೇಖಿಸಿ ರಾಯಿಟರ್ಸ್ (Reuters) ವರದಿಯು ಸಹ ಈ ಬೆಳವಣಿಗೆಯನ್ನು ಖಚಿತಪಡಿಸಿದೆ.ಈ ಇತ್ತೀಚಿನ ದರ ಪರಿಷ್ಕರಣೆಯು ಮೇ 15 ರಂದು ನಡೆದ ಪ್ರತಿ ಲೀಟರ್ಗೆ 3 ರೂಪಾಯಿ ಹೆಚ್ಚಳ ಮತ್ತು ಮೇ 19 ರಂದು ನಡೆದ ಮತ್ತೊಂದು 90 ಪೈಸೆ ಏರಿಕೆಯ ಬೆನ್ನಲ್ಲೇ ಬಂದಿದೆ.…
ಉಡುಪಿ : ಮಲ್ಪೆ ಸಮೀಪ ಕೊಡವೂರಿನ ಗರಡಿಮಜಲು ಎಂಬಲ್ಲಿ ಬಾವಿ ತೋಡುವ ಕೆಲಸದ ವೇಳೆ ಒಂದು ಭಾಗ ಕುಸಿದು ಕೊಪ್ಪಳದ 25 ವರ್ಷದ ಕಾರ್ಮಿಕನೊಬ್ಬ ಸಾವನ್ನಪ್ಪಿದ ಘಟನೆ ಶುಕ್ರವಾರ ಸಂಜೆ ಸಂಭವಿಸಿದೆ. ಮೃತರನ್ನು ರಮೇಶ್ (25) ಎಂದು ಗುರುತಿಸಲಾಗಿದ್ದು, ಇವರು ಕಾರ್ಕಳದ ಪ್ರಭಾತ್ ಶೆಟ್ಟಿ ಎಂಬವರ ಗುತ್ತಿಗೆಯಡಿ ಬಾವಿ ತೋಡುವ ಕೆಲಸಲ್ಲೆ ಇತರ ಐದು ಮಂದಿಯೊಂದಿಗೆ ಕಾರ್ಕಳದಿಂದ ಬಂದಿದ್ದರು. ಬಾವಿ ತೋಡಿ ಕಾರ್ಮಿಕರು ಮೇಲೆ ಬರುವಾಗ ಕುಸಿತ ಸಂಭವಿಸಿದೆ. ಉಳಿದವರು ಅದಾಗಲೇ ಮೇಲೆ ಬಂದಾಗಿತ್ತು. ಹೀಗಾಗಿ ಅವರ ಪ್ರಾಣ ಉಳಿದಿದೆ. ರಮೇಶ್ ಮೇಲೆ ಬರುವಷ್ಟರಲ್ಲಿ ಕುಸಿತ ಉಂಟಾಗಿ ಅವರು ಭಾರಿ ಮಣ್ಣಿನ ರಾಶಿಯಡಿ ಸಿಲುಕಿ ಮೃತಪಟ್ಟಿದ್ದಾರೆ. ಅವಘಡದ ಬಗ್ಗೆ ಮಾಹಿತಿ ಬಂದ ಕೂಡಲೇ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ, ಪೊಲೀಸರೊಂದಿಗೆ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು. ಕುಸಿದ ಮಣ್ಣಿನ ಅಡಿಯಿಂದ ರಕ್ಷಣಾ ತಂಡಗಳು ಕಾರ್ಮಿಕನ ಮೃತದೇಹವನ್ನು ಹೊರತೆಗೆದಿವೆ. ಉಡುಪಿ ಶಾಸಕ ಯಶಪಾಲ್ ಸುವರ್ಣ ಕೂಡ ಸ್ಥಳಕ್ಕೆ ಭೇಟಿ ನೀಡಿದ್ದಾರೆ.…
ಹಲವು ದಿನಗಳಿಂದ ನಾಪತ್ತೆಯಾಗಿದ್ದ ಕಾರ್ಕಳದ ವ್ಯಕ್ತಿಯೊಬ್ಬರು ಉಡುಪಿಯ ವಿದ್ಯೋದಯ ಶಾಲೆಯ ಬಳಿ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ಅಸ್ವಸ್ಥನಾಗಿ ಅಸಹಾಯಕ ಸ್ಥಿತಿಯನ್ನು ಎದುರಿಸುತ್ತಿದ್ದ ಅಪರಿಚಿತನನ್ನು ಗಮನಿಸಿದ 112 ತುರ್ತು ಸಹಾಯವಾಣಿ ಪೊಲೀಸರು, ಸಮಾಜಸೇವಕ ನಿತ್ಯಾನಂದ ಒಳಕಾಡು ಅವರಿಗೆ ಮಾಹಿತಿ ನೀಡಿದ್ದರು. ತಕ್ಷಣ ನೆರವಿಗೆ ಬಂದ ಒಳಕಾಡು ಅವರು ವ್ಯಕ್ತಿಯನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲುಪಡಿಸಿದ್ದಾರೆ.ವಿಚಾರಣೆಯಲ್ಲಿ ರಕ್ಷಿಸಲ್ಪಟ್ಟ ವ್ಯಕ್ತಿ ಕಾರ್ಕಳದ ನಿವಾಸಿ ದಯಾನಂದ್ ನಾಯಕ್ ಎಂದು ತಿಳಿದು ಬಂದಿದೆ. ದಯಾನಂದ್ ನಾಯಕ್ ಅವರು ದೊಡ್ಡಣಗುಡ್ಡೆಯಿಂದ ಕಾಣೆಯಾಗಿರುವ ಬಗ್ಗೆ ಮಣಿಪಾಲ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿ ಎಂದು ತಿಳಿದುಬಂದಿತು.ತುರ್ತು ಸಹಾಯವಾಣಿಯ ಹೆಡ್ ಕಾನ್ಸ್ಟೇಬಲ್ ಗಣೇಶ್ ಡಿ, ಅವಿನಾಶ್ ಸಹಕರಿಸಿದರು.
ಮಂಗಳೂರು: ಪ್ರಜ್ವಲ್ ಫಿಲಂಸ್ ಲಾಂಛನದಲ್ಲಿ ತಯಾರಾದ ಪ್ರಜ್ವಲ್ ಶೆಟ್ಟಿ ನಿರ್ಮಾಣ ಹಾಗೂ ಕೀರ್ತನ್ ಭಂಡಾರಿ ನಿರ್ದೇಶನದ `ಗಜಾನನ ಕ್ರಿಕೆಟರ್ಸ್ (ಜಂತೊಟ್ಟು ಸಿನ್ಸ್ 1983)’ ತುಳು ಚಲನಚಿತ್ರವು ಕರಾವಳಿ ಜಿಲ್ಲೆಯಾದ್ಯಂತ ತೆರೆಕಂಡಿದೆ. ಭಾರತ್ ಸಿನಿಮಾಸ್ ನಲ್ಲಿ ಸಿನಿಮಾದ ಬಿಡುಗಡೆ ಸಮಾರಂಭ ಜರಗಿತು. ಅತಿಥಿಗಳು ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.ವಿಧಾನಸಭಾ ಅಧ್ಯಕ್ಷ ಯು.ಟಿ ಖಾದರ್ ಸಮಾರಂಭಕ್ಕೆ ಆಗಮಿಸಿ ಶುಭ ಹಾರೈಸಿದರು. ಹಿರಿಯ ನಿರ್ದೇಶಕ ವಿಜಯಕುಮಾರ್ ಕೊಡಿಯಲ್ ಬೈಲ್ ಮಾತನಾಡಿ ತುಳು ಸಿನಿಮಾ ರಂಗದಲ್ಲಿ ಹಿರಿಯರು ಹಾಕಿಕೊಟ್ಟ ದಾರಿಯಲ್ಲಿ ಕಿರಿಯರು, ಹೊಸಬರು ಸಿನಿಮಾರಂಗದಲ್ಲಿ ಮಿಂಚುತ್ತಿದ್ದಾರೆ. ಯುವ ಪ್ರತಿಭಾವಂತರು ಸಿನಿಮಾರಂಗದಲ್ಲಿ ಬೌಂಡರಿ, ಸಿಕ್ಸರ್ ಬಾರಿಸುವ ಮೂಲಕ ಚೆನ್ನಾಗಿ ಆಡಲಿ ಎಂದರು. ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ್ ಮಾತನಾಡಿ ಗಜಾನನ ಕ್ರಿಕೆಟರ್ಸ್ ಸಿನಿಮಾದ ಪ್ರೀಮಿಯರ್ ಶೋಗಳನ್ನು ಪ್ರೇಕ್ಷಕರು ನೋಡಿ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ. ನಿರ್ಮಾಪಕ ಪ್ರಜ್ವಲ್ ಶೆಟ್ಟಿ, ರೋಹನ್ ಪಿರೇರ, ಸಂತೋಷ್ ಲಾಡ್ ಕಷ್ಟಪಟ್ಟು ಸಿನಿಮಾ ಮಾಡಿದ್ದಾರೆ. ಸಿನಿಮಾವನ್ನು ಎಲ್ಲರೂ ನೋಡಿ ಪ್ರೋತ್ಸಾಹಿಸಿ ಎಂದರು.ಉದ್ಯಮಿ ಮೈಕಲ್ ಡಿ ಸೋಜ ಶುಭ…








