ಸೌರ ಚಂಡಮಾರುತದ ಬಗ್ಗೆ ವಿಜ್ಞಾನಿಗಳು ಇತ್ತೀಚೆಗೆ ಎಚ್ಚರಿಕೆ ನೀಡಿದ್ದಾರೆ. ದೊಡ್ಡ ಸೌರ ಚಂಡಮಾರುತವು ಭೂಮಿಗೆ ಅಪ್ಪಳಿಸಲಿದೆ ಎಂದು ವಿಜ್ಞಾನಿಗಳು ನಂಬಿದ್ದಾರೆ. ಈ ಕಾರಣದಿಂದಾಗಿ, ಭೂಮಿಯ ಮೇಲೆ ದೊಡ್ಡ ಪ್ರಭಾವವನ್ನು ಕಾಣಬಹುದು. ಮೊಬೈಲ್ಗಳು, ಕಂಪ್ಯೂಟರ್ಗಳು ಮತ್ತು ಸಂವಹನ ವ್ಯವಸ್ಥೆಗಳಂತಹ ಎಲೆಕ್ಟ್ರಾನಿಕ್ ಸಾಧನಗಳು ಚಂಡಮಾರುತದಿಂದ ಹೆಚ್ಚು ಪರಿಣಾಮ ಬೀರಬಹುದು. ಭಾರತವು ಸೂರ್ಯನನ್ನು ನಕ್ಷೆ ಮಾಡುತ್ತದೆ ಮತ್ತು ಲಡಾಖ್ನಿಂದ ಭಾರತದ ಮೇಲೆ ಸೌರ ಚಟುವಟಿಕೆಯನ್ನು ಮೇಲ್ವಿಚಾರಣೆ ಮಾಡುತ್ತದೆ. ಇದು ಭಾರತದ ಮೇಲೂ ಪರಿಣಾಮ ಬೀರಲಿದೆಯೇ? ತಿಳಿಯುವುದು ಮುಖ್ಯ. ಸೂರ್ಯನ ಮೇಲ್ಮೈಯಿಂದ ಎರಡು ದೊಡ್ಡ ಸೌರ ಜ್ವಾಲೆಗಳು ಹೊರಹೊಮ್ಮುತ್ತವೆ. ಇವುಗಳನ್ನು ಕರೋನಲ್ ಮಾಸ್ ಎಜೆಕ್ಷನ್ಗಳು (CME) ಎಂದು ಕರೆಯಲಾಗುತ್ತದೆ, ಇವುಗಳು ನೇರವಾಗಿ ಭೂಮಿಯ ಕಡೆಗೆ ಹೋಗುತ್ತವೆ. ವಿಜ್ಞಾನಿಗಳು ಅವುಗಳನ್ನು X7 ಮತ್ತು X9 ಎಂದು ಹೆಸರಿಸಿದ್ದಾರೆ. ಈ ಸೌರ ಜ್ವಾಲೆಗಳು ಬಹಳ ಮುಖ್ಯ. X9 ಜ್ವಾಲೆಯು ಕಳೆದ ಏಳು ವರ್ಷಗಳಲ್ಲಿ ಸೂರ್ಯನಿಂದ ಹೊರಹೊಮ್ಮುವ ಅತ್ಯಂತ ಶಕ್ತಿಶಾಲಿ ಜ್ವಾಲೆಯಾಗಿದೆ. ಇದು ದಕ್ಷಿಣ ಅಟ್ಲಾಂಟಿಕ್ ಮತ್ತು ಆಫ್ರಿಕಾದ ಕೆಲವು ಭಾಗಗಳಲ್ಲಿ…
Author: main-admin
ಉಡುಪಿ: ಅಕ್ರಮ ಮರಳುಗಾರಿಕೆ- ಟಿಪ್ಪರ್ ಸಹಿತ ಇಬ್ಬರು ಆರೋಪಿಗಳು ವಶಕ್ಕೆ: ಪೆರ್ಡೂರು ಮಡಿಸಾಲ್ ಹೊಳೆಯಲ್ಲಿ ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಸ್ಥಳಕ್ಕೆ ಹಿರಿಯಡ್ಕ ಪೊಲೀಸರು ದಾಳಿ ನಡೆಸಿ ಮರಳು ಸಾಗಾಟಕ್ಕೆ ಬಳಸಿದ್ದ ಟಿಪ್ಪರ್ ಸಹಿತ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಹಿರಿಯಡ್ಕ ಠಾಣೆ ಪೊಲೀಸ್ ಉಪನಿರೀಕ್ಷಕ ಮಂಜುನಾಥ ಮರಬದ, ಉಡುಪಿ ತಾಲೂಕು ಪೆರ್ಡೂರು ಗ್ರಾಮದ ಕುತ್ತುರಬೈಲು ಮಠದಮಕ್ಕಿ ಎಂಬಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿರುವ ಬಗ್ಗೆ ಮಾಹಿತಿ ಮೇರೆಗೆ ಸ್ಥಳಕ್ಕೆ ಹೋದಾಗ ಇಬ್ಬರು ಹೊಳೆಯ ದಡದ ಬಳಿಯಲ್ಲಿದ್ದ ಮರಳನ್ನು ಕಳ್ಳತನ ಮಾಡುವ ಉದ್ದೇಶದಿಂದ ಟಿಪ್ಪರ್ಗೆ ಲೋಡ್ ಮಾಡುತ್ತಿರುವುದು ಕಂಡು ಬಂದಿತ್ತು. ಆರೋಪಿಗಳಾದ ದಿಲೀಪ್ ಹಾಗೂ ಸಚಿನ್ನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಯಾವುದೇ ಪರವಾನಿಗೆ ಇಲ್ಲದೆ ಸರಕಾರಿ ಜಾಗದಿಂದ ಲಾಭ ಗಳಿಸುವ ಉದ್ದೇಶಗೋಸ್ಕರ ಅಕ್ರಮವಾಗಿ ಮರಳನ್ನು ಕಳವು ಮಾಡಿ ಸ್ವಂತ ಲಾಭಕ್ಕಾಗಿ ಬೇರೆಯವರಿಗೆ ಮಾರಾಟ ಮಾಡುತ್ತಿರುವುದಾಗಿ ತಿಳಿಸಿದ್ದಾರೆ. ಆರೋಪಿತರು ಕೃತ್ಯಕ್ಕೆ ಬಳಸಿದ್ದ ಟೆಂಪೋ, 1.5 ಯುನಿಟ್ನಷ್ಟು ಮರಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ…
ಉಳ್ಳಾಲ: ನಾಪತ್ತೆಯಾಗಿದ್ದ ಅವಿವಾಹಿತ ವ್ಯಕ್ತಿಯ ಮೃತದೇಹ ಪಕ್ಕದ ಪಾಳು ಬಿದ್ದ ಬಾವಿಯಲ್ಲಿ ಇಂದು ಪತ್ತೆಯಾದ ಘಟನೆ ಕೊಲ್ಯ ,ಕುಜುಮಗದ್ದೆಯಲ್ಲಿ ನಡೆದಿದೆ. ಸೋಮೇಶ್ವರ ಪುರಸಭಾ ವ್ಯಾಪ್ತಿಯ ಕೊಲ್ಯ,ಕುಜುಮಗದ್ದೆ ನಿವಾಸಿ ಪ್ರಸಾದ್ (44) ಮೃತ ದುರ್ದೈವಿ. ಮೂಲತ: ಜಪ್ಪು,ಗೋರ್ದಂಡು ನಿವಾಸಿಯಾದ ಪ್ರಸಾದ್ ಕಳೆದ ಕೆಲ ವರುಷಗಳಿಂದ ಕುಟುಂಬ ಸಮೇತ ಕುಜುಮಗದ್ದೆಯಲ್ಲಿ ನೆಲೆಸಿದ್ದರು.ಪೈಂಟರ್ ವೃತ್ತಿ ನಡೆಸುತ್ತಿದ್ದ ಪ್ರಸಾದ್ ಅವರು ಅವಿವಾಹಿತರಾಗಿದ್ದು ಕೆಲ ದಿನಗಳಿಂದ ಖಿನ್ನತೆಗೊಳಗಾಗಿದ್ದರೆಂದು ಹೇಳಲಾಗಿದೆ ಮನೆಯಲ್ಲಿ ಮೊಬೈಲ್ ಫೋನ್ ಬಿಟ್ಟು ಹೋದ ಪ್ರಸಾದ್ ಅವರು ಮತ್ತೆ ಸಂಪರ್ಕಕ್ಕೆ ಸಿಗದೆ ನಿನ್ನೆ ಮಧ್ಯಾಹ್ನ ನಾಪತ್ತೆಯಾಗಿದ್ದರು ಎಂದು ತಿಳಿದು ಬಂದಿದೆ. ಈ ವೇಳೆ ಮನೆ ಮಂದಿ ನೆರೆಹೊರೆಯವರು ಹುಡುಕಾಡಿದಾಗ ಇಂದು ಬೆಳಿಗ್ಗೆ ಮನೆ ಹತ್ತಿರದ ಪಾಳು ಬಿದ್ದ ಬಾವಿಯ ಬಳಿ ಪ್ರಸಾದ್ ಅವರ ಪಾದರಕ್ಷೆ ದೊರೆತಿದ್ದು ಈ ಹಿನ್ನೆಲೆಯಲ್ಲಿ ಪಾಳು ಬಾವಿಯನ್ನು ಇಣುಕಿ ನೋಡಿ ದಾಗ ಪ್ರಸಾದ್ ಬಾವಿಯೊಳಗೆ ಶವವಾಗಿ ಪತ್ತೆಯಾಗಿದ್ದಾರೆ. ಘಟನಾ ಸ್ಥಳಕ್ಕೆ ಬಂದ ಅಗ್ನಿ ಶಾಮಕ ದಳದ ಸಿಬ್ಬಂದಿ ಮೃತ ದೇಹವನ್ನು ಮೇಲಕ್ಕೆತ್ತಿದ್ದಾರೆ.ಪ್ರಸಾದ್ ಆತ್ಮಹತ್ಯೆ…
ರಾಜ್ಯಾದ್ಯಂತ ಪರೀಕ್ಷಿಸಿದ 235 ಮಾದರಿಗಳ ಪೈಕಿ 12ರಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಎಚ್ಚರಿಕೆ ನೀಡಿದೆ. ಪರೀಕ್ಷಿಸಿದ ಕೆಲವು ಕೇಕ್ ಮಾದರಿಗಳಲ್ಲಿ ಹಾನಿಕಾರಕ, ಕ್ಯಾನ್ಸರ್ ಉಂಟುಮಾಡುವ ವಸ್ತುಗಳನ್ನು ನಾವು ಪತ್ತೆ ಹಚ್ಚಿದ್ದೇವೆ ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ಖಾಸಗಿ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ. ಈ ಸೇರ್ಪಡೆಗಳನ್ನು 2006 ರ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಮತ್ತು 2011 ರಿಂದ ಸಂಬಂಧಿತ ಆಹಾರ ಸುರಕ್ಷತಾ ನಿಯಮಗಳ ಅಡಿಯಲ್ಲಿ ಕಟ್ಟುನಿಟ್ಟಾಗಿ ನಿಯಂತ್ರಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ. ಬೇಕರಿಗಳು ತಕ್ಷಣ ಸುರಕ್ಷತಾ ಮಾನದಂಡಗಳನ್ನು ಅನುಸರಿಸಬೇಕು ಅಥವಾ ಕಠಿಣ ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ಅಧಿಕಾರಿ ಎಚ್ಚರಿಸಿದ್ದಾರೆ.ವರದಿಗಳ ಪ್ರಕಾರ, ಬೆಂಗಳೂರು ಬೇಕರಿಗಳಿಂದ ಸಂಗ್ರಹಿಸಿದ ಕೇಕ್ಗಳನ್ನು ಪರೀಕ್ಷಿಸಲಾಯಿತು. ಈ ಪರೀಕ್ಷೆಗಳು ಸಂಭಾವ್ಯ ಅಪಾಯಕಾರಿ ವಸ್ತುಗಳ ಉಪಸ್ಥಿತಿಯನ್ನು ದೃಢಪಡಿಸಿದವು. ಈ ಹಿನ್ನೆಲೆಯಲ್ಲಿ ಆಹಾರ ಸುರಕ್ಷತಾ ಆಯುಕ್ತ ಶ್ರೀನಿವಾಸ್ ಕೆ ಅವರು ರಾಜ್ಯದಾದ್ಯಂತ ಬೇಕರಿಗಳಿಗೆ ತಮ್ಮ ಉತ್ಪನ್ನಗಳಲ್ಲಿ ಅಸುರಕ್ಷಿತ ರಾಸಾಯನಿಕಗಳು ಮತ್ತು ಸೇರ್ಪಡೆಗಳನ್ನು ಬಳಸದಂತೆ ಎಚ್ಚರಿಕೆ ನೀಡಿದ್ದಾರೆ. ಕೇಕ್…
ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ನಲ್ಲಿ ಹಲವು ಕಾನ್ಸ್ಟೇಬಲ್ ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಇಂಡೋ ಟಿಬೇಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ಅಧಿಸೂಚನೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳು ಗ್ರೂಪ್ ಸಿ ನಾನ್ ಗೆಜೆಟೆಡ್ ಹುದ್ದೆಗಳಾಗಿವೆ. ಸದ್ಯಕ್ಕೆ ತಾತ್ಕಾಲಿಕ ಅವಧಿಗಾಗಿ ಈ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ನೇಮಕಾತಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವಂತಹ ಸಂಪೂರ್ಣ ಅಧಿಕೃತ ಮಾಹಿತಿಯನ್ನು ಕೆಳಗೆ ನೀಡಲಾಗಿದ್ದು, ಅರ್ಜಿ ಸಲ್ಲಿಸುವವರು ಸಂಪೂರ್ಣ ಮಾಹಿತಿ ತಿಳಿದು ನಂತರ ಅರ್ಜಿ ಸಲ್ಲಿಸಿರಿ. ಅರ್ಹತೆಗಳು : ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ಹೊರಡಿಸಿರುವ ಅಧಿಕೃತ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವರು ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿಂದ 10ನೇ ತರಗತಿ ಪಾಸ್ ಆಗಿರಬೇಕು ಹಾಗೂ ಕನಿಷ್ಠ ವಯೋಮಿತಿಯು 21 ವರ್ಷ ಪೂರೈಸಿರಬೇಕು. ಗರಿಷ್ಠ ವಯೋಮಿತಿ ನೋಡುವುದಾದರೆ ಅಭ್ಯರ್ಥಿಗಳು 27 ವರ್ಷದ ಒಳಗಿರಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಸಿಗುವ ವೇತನ ಶ್ರೇಣಿ : ಕೇಂದ್ರ ಸರ್ಕಾರಿ ವೇತನ…
ಮಂಗಳೂರು: ನಗರದ ಹೊರವಲಯದ ನೇತ್ರಾವತಿ ನದಿ ತೀರದಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ಅಡ್ಡೆಗೆ ಬಂಟ್ವಾಳ ಕಂದಾಯ ಇಲಾಖೆ ಹಾಗೂ ಗಣಿ ಇಲಾಖೆಯ ಅಧಿಕಾರಿಗಳು ಜಂಟಿಯಾಗಿ ಶುಕ್ರವಾರ ದಾಳಿ ನಡೆಸಿ 3 ಬೋಟುಗಳನ್ನು ವಶಪಡಿಸಿಕೊಂಡಿದ್ದಾರೆ. ಕಂದಾಯ, ಗಣಿ ಇಲಾಖೆ ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ನೇತ್ರಾವತಿ ನದಿ ತೀರದ ವಳಚ್ಚಿಲ್, ಮಾರಿಪಳ್ಳ, ಪುದು ಮತ್ತಿತರ ಕಡೆ ಬೃಹತ್ ಕಾರ್ಯಾಚರಣೆ ನಡೆಸಿ, ಅಕ್ರಮ ಮರಳುಗಾರಿಕೆಗೆ ಬಳಸುತ್ತಿದ್ದ 23 ಬೋಟುಗಳನ್ನು ವಶಪಡಿಸಿದೆ. ಬೋಟುಗಳ ಒಟ್ಟು ಅಂದಾಜು ಮೌಲ್ಯ 46 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಈ ಬೋಟುಗಳನ್ನು ಸದ್ಯ ಅಡ್ಯಾರ್ ಕಟ್ಟೆ ಸಮೀಪ ತಂದಿಡಲಾಗಿದೆ. ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನರ ಮಾರ್ಗದರ್ಶನದಲ್ಲಿ ನಡೆದ ಈ ದಾಳಿ ಕಾರ್ಯಾಚರಣೆಯಲ್ಲಿ ಮಂಗಳೂರು ತಹಶೀಲ್ದಾರ್ ಪ್ರಶಾಂತ್ ಪಾಟೀಲ್, ಬಂಟ್ವಾಳ ತಹಶೀಲ್ದಾರ್ ಅರ್ಚನಾ ಭಟ್, ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳಾದ ಗಿರೀಶ್ ಮೋಹನ್, ಕೃಷ್ಣವೇಣಿ, ಮಹದೇಶ್ವರ್, ಪೊಲೀಸ್ ಅಧಿಕಾರಿಗಳು ಭಾಗವಹಿಸಿದ್ದರು.
ಸುರತ್ಕಲ್: ಸುರತ್ಕಲ್ ಸಮೀಪದ ಎನ್.ಐ.ಟಿ.ಕೆ ಕಾಲೇಜು ಬಳಿ ಮಾದಕ ವಸ್ತು ಸೇದುತ್ತಿದ್ದ ಆರೋಪದಲ್ಲಿ ಮೂವರನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಬಿಹಾರ ಮೂಲದ ಪುರುಷೋತ್ತಮ್ ಕುಮಾರ್ (21), ಆದಿತ್ಯ ರಾಜ್ ಕಶ್ಯಫ್ (22), ಸೌರವ್ ಕುಮಾರ್ (24) ಎಂದು ತಿಳಿದು ಬಂದಿದೆ. ಬಂಧಿತರು ಅ.1ರಂದು ರಾತ್ರಿ ಎನ್.ಐ.ಟಿ.ಕೆ ಕಾಲೇಜು ಬಳಿ ಇರುವ ರಾಷ್ಟ್ರೀಯ ಹೆದ್ದಾರಿ 66ರ ಅಂಡರ್ ಪಾಸ್ ನಲ್ಲಿ ದೂಮಪಾನ ಮಾಡುತ್ತಿದ್ದರು. ಅನುಮಾನಗೊಂಡ ಬೀಟ್ ಪೊಲೀಸರು ಅವರನ್ನು ವಶಕ್ಕೆ ಪಡೆದುಕೊಂಡಿದ್ದರು. ಬಳಿಕ ಅವರನ್ನು ಎಜೆ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಅವರು ಅಮಲು ಪದಾರ್ಥ ಸೇವಿಸಿರುವುದು ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಈ ಕುರಿತು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೂವರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ ಎನ್ನಲಾಗಿದೆ.
ಮಂಗಳೂರು:ವಾಹನ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ 1.35 ಕೋಟಿ ರೂ. ಪರಿಹಾರ ನೀಡಲು ಮಂಗಳೂರಿನ ಒಂದನೇ ಹೆಚ್ಚುವರಿ ಸೀನಿಯರ್ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶೆ ಲಕ್ಷ್ಮೀ ಜಿ.ಎಂ. ವಿಮಾ ಕಂಪೆನಿಗೆ ಆದೇಶಿಸಿದ್ದಾರೆ. ಪಣಂಬೂರಿನ ಎಂಸಿಎಫ್ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಮಹೇಶ್ ಭಟ್ 2018ರ ಮೇ 18ರಂದು ತನ್ನ ಬೈಕ್ನಲ್ಲಿ ಕರ್ತವ್ಯಕ್ಕೆ ತೆರಳುತ್ತಿದ್ದಾಗ ನಗರದ ಕೊಟ್ಟಾರ ಚೌಕಿ ಬಳಿ ರಾಜಸ್ಥಾನ ನೋಂದಣಿಯ ಲಾರಿಯೊಂದು ಡಿಕ್ಕಿ ಹೊಡೆದಿತ್ತು. ಘಟನೆಯಲ್ಲಿ ಮಹೇಶ್ ಭಟ್ ಮೃತಪಟ್ಟಿದ್ದರು. ಅದರಂತೆ ಮಂಗಳೂರಿನ ಒಂದನೇ ಹೆಚ್ಚುವರಿ ಸೀನಿಯರ್ ಸಿವಿಲ್ ಜಡ್ಜ್ ನ್ಯಾಯಾಲಯದಲ್ಲಿ ಮೋಟಾರು ವಾಹನ ಅಪಘಾತ ಪರಿಹಾರ ಕಾಯ್ದೆಯಡಿ ಪರಿಹಾರಕ್ಕಾಗಿ ಅರ್ಜಿ ಸಲ್ಲಿಸಲಾಗಿತ್ತು. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು ವಿಮಾ ಸಂಸ್ಥೆಯಾದ ಯುನಿವರ್ಸಲ್ ಸೊಂಪೋ ಜನರಲ್ ಇನ್ಸೂರೆನ್ಸ್ ಕಂಪೆನಿಯು 1.6 ಕೋಟಿ ರೂ. ಪರಿಹಾರವನ್ನು ಶೇ.6ರಷ್ಟು ಬಡ್ಡಿ ಸಹಿತ 1.35 ಕೋ.ರೂ.ಗಳ ಪರಿಹಾರವನ್ನು ಅರ್ಜಿದಾರರಿಗೆ ನೀಡಲು ಆದೇಶ ನೀಡಿದೆ. ಪರಿಹಾರ ಧನ ಪಡೆಯಲು ಮೃತರ ಪತ್ನಿ, ಅವರ ಪುತ್ರ ಹಾಗೂ ಮೃತರ ಹೆತ್ತವರು ಅರ್ಹರಾಗಿ ದ್ದಾರೆಂದು…
ಬೆಳ್ತಂಗಡಿ ತಾಲೂಕಿನ ಮಲವಂತಿಗೆಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಗೋ ಸಾಗಾಟವನ್ನು ಬೆಳ್ತಂಗಡಿ ಪೊಲೀಸರು ಪತ್ತೆ ಹಚ್ಚಿ ನಾಲ್ವರನ್ನು ಬಂಧಿಸಿದ್ದಾರೆ. ಪೆರಿಯಡ್ಕ ನಿವಾಸಿ ಯತೀಂದ್ರ(24), ತೋಟತ್ತಾಡಿ ಗ್ರಾಮದ ಬೆಂದ್ರಾಳ ನಿವಾಸಿ ಅರವಿಂದ(30), ಚಾರ್ಮಾಡಿ ಗ್ರಾಮದ ನಿವಾಸಿ ಉಸ್ಮಾನ್ ( 36) ಹಾಗೂ ಚಿಬಿದ್ರೆ ಗ್ರಾಮದ ನಿವಾಸಿ ಆರಿಫ್ (27) ಬಂಧಿತ ಆರೋಪಿಗಳಾಗಿದ್ದು ಈ ಘಟನೆಗೆ ಸಂಬಂಧಿಸಿ ಎರಡು ಪಿಕಪ್ ವಾಹನಗಳು ಹಾಗೂ ಐದು ದನಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಲವಂತಿಗೆ ಗ್ರಾಮದ ಎಳನೀರು ದಿಡುಪೆ ರಸ್ತೆಯಲ್ಲಿ ಪಿಕಪ್ ವಾಹನದಲ್ಲಿ ಅಕ್ರಮವಾಗಿ ದನಗಳನ್ನು ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಆಧಾರದಲ್ಲಿ ಬೆಳ್ತಂಗಡಿ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. ಮಲವಂತಿಗೆ ಗ್ರಾಮದ ಕಜಕೆ ಎಂಬಲ್ಲಿ ಎಳನೀರು ಕಡೆಯಿಂದ ಬರುತ್ತಿದ್ದ ಎರಡು ಪಿಕಪ್ ವಾಹನಗಳನ್ನು ತಡೆದು ಪರಿಶೀಲಿಸಿದಾಗ ಐದು ದನಗಳನ್ನು ಸಾಗಾಟ ಮಾಡುತ್ತಿರುವುದು ಕಂಡು ಬಂದಿದೆ. ವಾಹನದಲ್ಲಿ ಇದ್ದವರ ಬಳಿ ದನಗಳ ಸಾಗಾಟಕ್ಕೆ ಯಾವುದೇ ಪರವಾನಿಗೆಗಳು ಇಲ್ಲದಿರುವುದು ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಆರೋಪಿಗಳನ್ನು ಬಂಧಿಸಿರುವ…
ಮಂಗಳೂರು:ದೀಪಾವಳಿ ಮತ್ತು ತುಳಸಿ ಪೂಜೆ ಹಬ್ಬಗಳ ಸಂದರ್ಭದಲ್ಲಿ ಅಕ್ಟೋಬರ್ 30ರಿಂದ ನವೆಂಬರ್ 2ರವರೆಗೆ ಹಾಗೂ ನವೆಂಬರ್ 12 ಮತ್ತು 13 ರವರೆಗೆ ಮಂಗಳೂರು ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಪಟಾಕಿ ಸುಡುಮದ್ದು ಮಾರಾಟ ಮಾಡಲು ತಾತ್ಕಾಲಿಕ ಸುಡುಮದ್ದು ಪರವಾನಿಗೆಯನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಅಕ್ಟೋಬರ್ 4ರಿಂದ 16ರವರೆಗೆ ರೂ. 200/- ಬ್ಯಾಂಕ್ ಚಲನ್ ಮೂಲಕ ಸರಕಾರಕ್ಕೆ ಪಾವತಿಸಿ ಪಡೆದುಕೊಳ್ಳಬೇಕು. ನಿಗದಿತ ದಿನಾಂಕದ ನಂತರ ಯಾವುದೇ ಕಾರಣಕ್ಕೂ ಅರ್ಜಿಯನ್ನು ನೀಡಲಾಗುವುದಿಲ್ಲ.ಅರ್ಜಿ ಸ್ವೀಕರಿಸಿದ ನಂತರ ಅರ್ಜಿದಾರರು ಅಗ್ನಿಶಾಮಕ ಇಲಾಖೆ, ಸ್ಥಳೀಯ ಸಂಸ್ಥೆ ಹಾಗೂ ವ್ಯಾಪ್ತಿಯ ಪೊಲೀಸ್ ಠಾಣೆಯಿಂದ ನೇರವಾಗಿ ನಿರಾಕ್ಷೇಪಣಾ ಪತ್ರ ಪಡೆಯಬೇಕು. ಅರ್ಜಿ ಮತ್ತು ದಾಖಲೆಗಳನ್ನು ಅಕ್ಟೋಬರ್ 25ರೊಳಗೆ ಸಲ್ಲಿಸಬೇಕು.ಸಲ್ಲಿಸಿದ ಅರ್ಜಿಯನ್ನು ನಿಯಮಾನುಸಾರವಾಗಿ ಪರಿಶೀಲಿಸಿ ತಾತ್ಕಾಲಿಕ ಸುಡುಮದ್ದು ಪರವಾನಿಗೆಯನ್ನು ನಿಗದಿತ ಶುಲ್ಕ (ರೂ.500/-) ಬ್ಯಾಂಕ್ ಗೆ ಪಾವತಿಸಿ ಪರವಾನಿಗೆಯನ್ನು ಪಡೆಯಬೇಕು. ತಾತ್ಕಾಲಿಕ ಮಳಿಗೆಗಳನ್ನು ತೆರೆಯುವ ಸಂದರ್ಭದಲ್ಲಿ ಮೂಲ ಪರವಾನಿಗೆಯನ್ನು ಕಡ್ಡಾಯವಾಗಿ ಮಳಿಗೆಯ ಮುಂಭಾಗದಲ್ಲಿ ಸಾರ್ವಜನಿಕರಿಗೆ ಕಾಣುವಂತೆ ಪ್ರದರ್ಶಿಸಬೇಕು. ಪರವಾನಿಗೆದಾರರು ಕಡ್ಡಾಯವಾಗಿ ಮಳಿಗೆಗಳಲ್ಲಿ ಹಾಜರಿರಬೇಕು.ದೀಪಾವಳಿಯ…










