ಬೆಂಗಳೂರು : ಜಗದೀಶ್ ಕುಮಾರ್ ಅವರ 12ನೇ ತರಗತಿಯ ಮಾರ್ಕ್ಸ್ ಕಾರ್ಡ್ ನಕಲಿ ಅನ್ನೋದು ದೃಢಪಟ್ಟಿದೆ. ಈ ಕಾರಣದಿಂದ ಅವರ ಡಿಗ್ರೀ ಹಾಗೂ ಎಲ್ಎಲ್ಬಿ ಪ್ರಮಾಣಪತ್ರವನ್ನು ಅಮಾನ್ಯಗೊಳಿಸಲಾಗಿದೆ. ಹಿಮಾಂಶು ಭಾಟಿ ಎಂಬುವವರು ನೀಡಿದ ದೂರನ್ನು ಆಧರಿಸಿ ತನಿಖೆ ನಡೆಸಿದಾಗ ಅಸಲಿ ವಿಚಾರ ಹೊರ ಬಿದ್ದಿತ್ತು. ಕೆಎನ್ ಜಗದೀಶ್ ಕುಮಾರ್ ಅವರು ಬಿಗ್ ಬಾಸ್ ಮನೆಯಲ್ಲಿ ಇದ್ದಾರೆ. ತಾವು ಎಲ್ಲ ಕಡೆಗಳಲ್ಲಿ ವಕೀಲ ಎಂದು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಆದರೆ, ಅವರ ಪರವಾನಿಗೆಯನ್ನು ದೆಹಲಿ ಬಾರ್ ಕೌನ್ಸಿಲ್ ರದ್ದು ಮಾಡಿರೋ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ಹೌದು, ಮೇ 7ರಂದು ಜಗದೀಶ್ ಅವರ ಪರವಾನಿಗೆಯನ್ನು ದೆಹಲಿ ಬಾರ್ ಕೌನ್ಸಿಲ್ ರದ್ದು ಮಾಡಿದೆ. ಇದಕ್ಕೆ ಅವರು ಮಾಡಿದ ವಂಚನೆಯೇ ಕಾರಣ. ಜಗದೀಶ್ ಕುಮಾರ್ ಅವರ 12ನೇ ತರಗತಿಯ ಮಾರ್ಕ್ಸ್ ಕಾರ್ಡ್ ನಕಲಿ ಅನ್ನೋದು ದೃಢಪಟ್ಟಿದೆ. ಈ ಕಾರಣದಿಂದ ಅವರ ಡಿಗ್ರೀ ಹಾಗೂ ಎಲ್ಎಲ್ಬಿ ಪ್ರಮಾಣಪತ್ರವನ್ನು ಅಮಾನ್ಯಗೊಳಿಸಲಾಗಿದೆ. ಹಿಮಾಂಶು ಭಾಟಿ ಎಂಬುವವರು ಜಗದೀಶ್ ವಿರುದ್ಧ ದೂರು ನೀಡಿದ್ದರು. ಅವರ…
Author: main-admin
ಸುರತ್ಕಲ್: ಖಾಸಗಿ ಸೊಸೈಟಿಯೊಂದರ ಸುರತ್ಕಲ್ ಶಾಖೆಯಲ್ಲಿ ಅಲ್ಲಿನ ಅಧಿಕಾರಿಗಳು, ಸಿಬಂದಿ ಶಾಮೀಲಾಗಿ ನಕಲಿ ಲೆಕ್ಕ ತೋರಿಸಿ 2.10 ಕೋಟಿ ರೂ. ಚಿನ್ನಾಭರಣ ಸಾಲ ಹಾಗೂ ಠೇವಣಿ ಲೆಕ್ಕದಲ್ಲಿ ಗೋಲ್ಮಾಲ್ ನಡೆಸಿ ಅಂದಾಜು 3 ಕೋಟಿಯಷ್ಟು ಹಣ ದುರುಪಯೋಗ ಮಾಡಿಕೊಂಡಿರುವ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ. ಸೊಸೈಟಿಯ ಅಧ್ಯಕ್ಷರು ಹಾಗೂ ನಿರ್ದೇಶಕರಿಗೆ ನಕಲಿ ವ್ಯವಹಾರಗಳ ಕುರಿತು ಗಮನಕ್ಕೆ ಬಂದ ಮೇರೆಗೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಹಿತ ಸಿಬಂದಿಗಳನ್ನು ವಿಚಾರಣೆಗೆ ಗುರಿಪಡಿಸಲಾಗಿದ್ದು ಹಣವನ್ನು ಮರಳಿ ಸೊಸೈಟಿಗೆ ಹಸ್ತಾಂತರಿಸದ ಕಾರಣ ಇದೀಗ ಪೊಲೀಸ್ ದೂರು ನೀಡಲಾಗಿದೆ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜೇಶ್, ಗುಮಾಸ್ತೆ ದೀಕ್ಷಾ ಶೆಟ್ಟಿ, ಶಾಖಾ ವ್ಯವಸ್ಥಾಪಕ ರಕ್ಷಿತ್ ಎಂ. ಶೆಟ್ಟಿ ಹಾಗೂ ಕೊಡಿಯಾಲಬೈಲ್ ಶಾಖಾ ಗುಮಾಸ್ತೆ ಪ್ರಿಯಾ ವಿರುದ್ಧ ದೂರು ದಾಖಲಾಗಿದೆ. ದೀಕ್ಷಾ ಶೆಟ್ಟಿ ಚಿನ್ನಾಭರಣ ಮೇಲಿನ ಸಾಲ ನೀಡುವಿಕೆಯಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಸ್ವಂತಕ್ಕೆ ಬಳಸಿಕೊಂಡಿರುವುದು ಆಡಿಟ್ ವರದಿಯಲ್ಲಿ ಮೋಸವಾಗಿರುವುದರ ಬಗ್ಗೆ ಉಲ್ಲೇಖಿಸಲಾಗಿದೆ. 2019ರಿಂದ 2023ರ ಮದ್ಯೆ ಒಟ್ಟು 63 ಚಿನ್ನಾಭರಣಗಳ ಸಾಲವನ್ನು ತಾವೇ ಪಡೆದು…
ಮಡಿಕೇರಿ: ಕೊಡಗು ಜಿಲ್ಲೆಯ ಅಂತಾರಾಷ್ಟ್ರೀಯ ಮಾದಕ ವಸ್ತು ದಂಧೆ ಪ್ರಕರಣವನ್ನು ಕೊಡಗು ಪೊಲೀಸರು ಭೇದಿಸಿ ಏಳು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಕೊಡಗು ಜಿಲ್ಲೆಯ ಹೆಗ್ಗಳ ಗ್ರಾಮದ ನಾಸಿರುದ್ದೀನ್ ಎಂ.ಯು(26), ಎಡಪಾಲ ಗ್ರಾಮದ ಯಾಹ್ಯಾ ಸಿ.ಹೆಚ್(28), ಕುಂಜಿಲ ಗ್ರಾಮದ ಅಕನಾಸ್(26), ಬೇಟೋಳಿ ಗ್ರಾಮದ ವಾಜಿದ್(26), ಕೇರಳದ ಕಣ್ಣೂರು ಗ್ರಾಮದ ರಿಯಾಜ್(44), ಕಾಸರಗೋಡಿನ ಮೆಹರೂಫ್(37) ಹಾಗೂ ರವೂಫ್(28) ಎಂದು ತಿಳಿದು ಬಂದಿದೆ. ಬಂಧಿತ ಆರೋಪಿಗಳಿಂದ 3 ಕೋ.ರೂ.ಬೆಲೆ ಬಾಳುವ 3.31 ಕೆ.ಜಿ ಹೈಡ್ರೋ ಗಾಂಜಾ ಮತ್ತು ಕೃತ್ಯಕ್ಕೆ ಬಳಸಿದ ಕಾರನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ. ಹೈಡ್ರೋ ಗಾಂಜಾವನ್ನು ವಿಮಾನದ ಮೂಲಕ ಭಾರತ ಮತ್ತು ದುಬೈಗೆ ಸಾಗಾಟ ಮಾಡಲು ಪ್ರಯತ್ನಿಸುತ್ತಿದ್ದ ಅಂತಾರಾಷ್ಟ್ರೀಯ ವ್ಯವಸ್ಥಿತ ಜಾಲವೊಂದನ್ನು ಕೊಡಗು ಪೊಲೀಸ್ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ ಎಂದು ತಿಳಿದು ಬಂದಿದೆ. ಥೈಲ್ಯಾಂಡ್ ದೇಶದ ಬ್ಯಾಂಕಾಕ್ ನಗರದಲ್ಲಿ ಕೆಫೆ ಇಟ್ಟುಕೊಂಡಿರುವ ಕೇರಳ ಮೂಲದ ಮುಹಮ್ಮದ್ ಅನೂಫ್ ಎಂಬಾತ ಕೇರಳದ ಕಾಸರಗೋಡಿನ ಮೆಹರೂಫ್, ರವೂಫ್ ಹಾಗೂ ಕೊಡಗಿನ ಬಂಧಿತ…
ಬೆಳ್ತಂಗಡಿ : ತಲೆ ಮೇಲೆ ದಾರಂದ ಬಿದ್ದು ಪುಟ್ಟ ಬಾಲಕಿ ಸಾವನ್ನಪ್ಪಿರುವ ದಾರುಣ ಘಟನೆ ಬೆಳ್ತಂಗಡಿಯ ಪುತ್ತಿಲ ಗ್ರಾಮದ ಕುಂಡಡ್ಕ ಸಮೀಪದ ಕೇರ್ಯಾದ ಕೊನಲೆ ಎಂಬಲ್ಲಿ ನಡೆದಿದೆ. ಹಾರೀಸ್ ಮುಸ್ಲಿಯಾರ್ ಮತ್ತು ಅಸ್ಮಾ ದಂಪತಿ ಪುತ್ರಿ, ಕೇರ್ಯಾ ಸರಕಾರಿ ಶಾಲೆಯ 1 ನೇ ತರಗತಿಯ ಅಲ್ಫಿಯಾ (6) ಮೃತ ಬಾಲಕಿಯಾಗಿದ್ದಾಳೆ. ಮಗುವಿನ ತಂದೆ ಕುಂಡಡ್ಕದಲ್ಲಿ ನೂತನ ಮನೆಯನ್ನು ನಿರ್ಮಾಣ ಮಾಡುತ್ತಿದ್ದಾರೆ. ನಾಳೆ ಮನೆಯ ಮುಖ್ಯ ದ್ವಾರಕ್ಕೆ ದಾರಂದ ಜೋಡಿಸಲು ಮನೆಯ ಪಕ್ಕದಲ್ಲಿ ದಾರಂದವನ್ನು ಜೋಡಿಸಿದ್ದರು. ಈ ಸಂದರ್ಭದಲ್ಲಿ ಮಗು ಅದರ ಪಕ್ಕದಲ್ಲಿ ಆಟವಾಡುತ್ತಿರುವಾಗ ದಾರಂದವು ಆಯಾ ತಪ್ಪಿ ಮಗುವಿನ ತಲೆಗೆ ಬಿದ್ದು ಗಂಭೀರ ಗಾಯಗೊಂಡಿತು. ಕೂಡಲೇ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಮಗು ಸಾವನ್ನಪ್ಪಿದೆ ಎನ್ನಲಾಗಿದೆ.
ಮಂಗಳೂರು: ಕೋಟ ಶ್ರೀನಿವಾಸ ಪೂಜಾರಿಯವರಿಂದ ತೆರವಾದ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಉಪಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಬೈಂದೂರಿನ ರಾಜು ಪೂಜಾರಿ, ಉಡುಪಿಯ ಉದಯ ಶೆಟ್ಟಿ ಮುಣಿಯಾಲು, ಕಾರ್ಕಳದ ಡಿ.ಆರ್.ರಾಜು, ಉಡುಪಿಯ ಹರಿಪ್ರಸಾದ್ ರೈ, ಬಿ.ಭುಜಂಗ ಶೆಟ್ಟಿ ಮತ್ತು ಬಂಟ್ವಾಳದ ಚಂದ್ರಪ್ರಕಾಶ ಶೆಟ್ಟಿ ತುಂಬೆ ಅವರು ಪಕ್ಷದ ಟಿಕೆಟ್ಗಾಗಿ ಅರ್ಜಿ ಸಲ್ಲಿಸಿದ್ದರು. ರಾಜು ಪೂಜಾರಿ ಅವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅನುಮೋದನೆ ನೀಡಿರುವುದಾಗಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಈಗಾಗಲೇ ಬಿಜೆಪಿ ಸಹ ತನ್ನ ಅಭ್ಯರ್ಥಿಯನ್ನು ಕಿಶೋರ್ ಕುಮಾರ್ ಪುತ್ತೂರ್ಗೆ ಟಿಕೆಟ್ ನೀಡಲಾಗಿದ್ದು, ಇದೇ ಅಕ್ಟೋಬರ್ 21ರಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳನ್ನು ಪ್ರತಿನಿಧಿಸುವ ವಿಧಾನ ಪರಿಷತ್ ಸ್ಥಾನದ ಮರು ಚುನಾವಣೆ ಅ.21 ರಂದು ಉಪಚುನಾವಣೆ ನಡೆಯಲಿದೆ.
ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಯಾಗಬೇಕೆಂಬ ಬಲಗೊಳ್ಳುತ್ತಿದ್ದು ಬೇಡಿಕೆ ಮತ್ತೊಂದು ಹೋರಾಟಕ್ಕೆ ವೇದಿಕೆ ಸಜ್ಜಾಗುತ್ತಿದೆ. ಹೈಕೋಟ್ ಪೀಠ ಮಂಗಳೂರಿನಲ್ಲಿ ಸ್ಥಾಪನೆಯಾದರೆ ದ.ಕ. ಜಿಲ್ಲೆ ಮಾತ್ರವಲ್ಲದೆ ಉಡುಪಿ, ಮಡಿಕೇರಿ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಉತ್ತರಕನ್ನಡ ದವರಿಗೂ ಅನುಕೂಲವಾಗಲಿದೆ. ಅಕ್ಕಪಕ್ಕದ ಜಿಲ್ಲೆಯವರು ಮಂಗಳೂರಿಗೆ ಬರುವುದಕ್ಕೆ ಪೂರಕವಾಗಿ ಎಲ್ಲ ಅಗತ್ಯ ಸೌಕರ್ಯಗಳು ಇಲ್ಲಿವೆ ಎನ್ನುತ್ತಾರೆ ಮಂಗಳೂರಿನ ನ್ಯಾಯವಾದಿಗಳು. ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಯಾಗಬೇಕೆಂಬ ಬೇಡಿಕೆ ಬಹುಕಾಲದ್ದು. 2008ರಲ್ಲಿಯೂ ಹೋರಾಟ ನಡೆದಿತ್ತು. ಅನಂತರವೂ ಹಲವಾರು ಬಾರಿ ಪ್ರಯತ್ನಗಳನ್ನು ನಡೆಸಲಾಗಿದೆ. ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳ ಒಟ್ಟು ಪ್ರಕರಣಗಳು ಹೈಕೋರ್ಟ್ನ ಒಟ್ಟು ಪ್ರಕರಣಗಳ ಶೇ. 30ರಷ್ಟಿವೆ. ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಸ್ಥಳಾವಕಾಶದ ಕೊರತೆಯೂ ಇಲ್ಲ. ಈಗ ಕೊಡಿಯಾಲಬೈಲ್ ನಲ್ಲಿರುವ ಜಿಲ್ಲಾ ಕಾರಾಗೃಹ ಮುಡಿಪುವಿಗೆ ಸ್ಥಳಾಂತರವಾಗಲಿದೆ. ಹಾಗಾಗಿ ಕೊಡಿಯಾಲಬೈಲಿನ 6 ಎಕರೆ ಸ್ಥಳದಲ್ಲಿ ಪೀಠ ಸ್ಥಾಪನೆ ಮಾಡಬಹುದು ಎನ್ನುತ್ತಾರೆ ಮಂಗಳೂರು ವಕೀಲರ ಸಂಘದ ಹಾಲಿ ಅಧ್ಯಕ್ಷ ಎಚ್.ವಿ. ರಾಘವೇಂದ್ರ ಮತ್ತು ಮಾಜಿ ಅಧ್ಯಕ್ಷ ಪೃಥ್ವಿರಾಜ್ ರೈ ರವರು.
ಬೆಂಗಳೂರು : ರಾಜ್ಯ ಸರ್ಕಾರ ಹಲವು ಕೆಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಮಂಗಳವಾರ ಆದೇಶಿಸಿದ್ದು ಈ ಮೂಲಕ ಆಡಳಿತ ಯಂತ್ರಕ್ಕೆ ರಾಜ್ಯ ಸರ್ಕಾರ ಮೇಜರ್ ಸರ್ಜರಿ ಮಾಡಿದೆ. ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿಯಾಗಿದ್ದಂತ ಮಂಜುನಾಥಸ್ವಾಮಿ ಜಿಎನ್ ಅವರನ್ನು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಉಪ ಕಾರ್ಯದರ್ಶಿಯನ್ನಾಗಿ ನೇಮಿಸಿದೆ. ಉತ್ತರ ಕನ್ನಡ ಜಿಲ್ಲೆಯ ಅಪರ ಜಿಲ್ಲಾ ದಂಡಾಧಿಕಾರಿಯಾಗಿದ್ದಂತ ಪ್ರಕಾಶ್ ಗೋಪು ರಜಪೂತ್ ಅವರನ್ನು ಬಾಗಲಕೋಟೆ ಜಿಲ್ಲೆಯ ಜಮಖಂಡಿಯ ಕೃಷ್ಣಾ ಮೇಲ್ದಂಡೆ ಯೋಜನೆಯ ವಿಶೇಷ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ. ಹಾವೇರಿ ಜಿಲ್ಲೆಯ ಅಪರ ಜಿಲ್ಲಾ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಪೂಜಾರ ವೀರಮಲ್ಲಪ್ಪ ಅವರನ್ನು ಹಾವೇರಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ. ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿದ್ದಂತ ಡಾ.ಬಸಂತಿ ಬಿಎಸ್ ಅವರನ್ನು ಬೆಂಗಳೂರಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಮುಖ್ಯ ಆಡಳಿತಾಧಿಕಾರಿಯನ್ನಾಗಿ ವರ್ಗಾವಣೆ ಮಾಡಲಾಗಿದೆ. ಶ್ರೀನಿವಾಸ್ ಕೆ ಆರ್ ಅವರನ್ನು ಮಂಡ್ಯ ಜಿಲ್ಲೆಯ ಪಾಂಡವಪುರ ಉಪ ವಿಭಾಗದ ಉಪ…
ಉಪ್ಪಿನಂಗಡಿ: ಕೆಎಸ್ಆರ್ಟಿಸಿ ಬಸ್ಸೊಂದು ಓವರ್ ಟೇಕ್ ಮಾಡುವ ಭರದಲ್ಲಿ ಬೈಕೊಂದಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸ್ಕಿಡ್ ಆಗಿ ಬಿದ್ದಿದ್ದು, ಸವಾರನ ಮೇಲೆ ಬಸ್ಸಿನ ಚಕ್ರ ಹರಿದು ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ನೆಕ್ಕಿಲಾಡಿಯ ಅಂಬೆಲದ ಬಳಿ ಇಂದು ನಡೆದಿದೆ. ಗಾಯಗೊಂಡ ಬೈಕ್ ಸವಾರನನ್ನು ವಿನೋದರ (57) ಎಂದು ಗುರುತಿಸಲಾಗಿದೆ. ಉಪ್ಪಿನಂಗಡಿಯಿಂದ ಪುತ್ತೂರಿಗೆ ಹೋಗುತ್ತಿದ್ದ ಕೆಎಸ್ಆರ್ಟಿಸಿ ಬಸ್ ಓವರ್ ಟೇಕ್ ಮಾಡುವ ಭರದಲ್ಲಿ ಬೈಕ್ಗೆ ತಾಗಿದ್ದು, ಬೈಕ್ ಸ್ಕಿಡ್ ಆಗಿ ರಸ್ತೆಗೆ ಬಿದ್ದಿದೆ. ಬೈಕಿನೊಂದಿಗೆ ರಸ್ತೆಗೆ ಬಿದ್ದ ಬೈಕ್ ಸವಾರನ ಕೈಯ ಮೇಲೆ ಬಸ್ನ ಹಿಂಬದಿ ಚಕ್ರ ಹರಿದಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ. ಗಾಯಾಳನ್ನು ಪುತ್ತೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಗಳೂರು: ವಾಹನಗಳಿಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಯನ್ನು ಕಡ್ಡಾಯಗೊಳಿಸಲಾಗಿತ್ತು. ಅಳವಡಿಸದೇ ಇದ್ದರೇ ದಂಡ ಕಟ್ಟೋದಕ್ಕೆ ರೆಡಿಯಾಗಿ ಎನ್ನಲಾಗಿತ್ತು. ಆದರೇ ಈಗ ವಾಹನ ಸವಾರರಿಗೆ ಬಿಗ್ ರಿಲೀಫ್ ಎನ್ನುವಂತೆ ನವೆಂಬರ್.20ರವರೆಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಹೈಕೋರ್ಟ್ ಗಡುವು ವಿಸ್ತರಿಸಿದೆ. ಅತಿ ಸುರಕ್ಷಿತ ನೋಂದಣಿ ಫಲಕ (High Security Registration Plates- HSRP) ಅಳವಡಿಕೆಗೆ ಕಾಲಾವಕಾಶ ನೀಡುವಂತೆ ಹೈಕೋರ್ಟ್ ನಲ್ಲಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆ ನಡೆಸಲಾಯಿತು. ಹಿರಿಯ ವಕೀಲ ದೇವದತ್ ಕಾಮತ್ ಅವರು ಹೈಕೋರ್ಟ್ ನ್ಯಾಯಪೀಠವನ್ನು ಮತ್ತಷ್ಟು ಕಾಲಾವಕಾಶ ನೀಡುವಂತೆ ಕೋರಿದ್ದರು. ಮನವಿ ಪರಿಗಣಿಸಿದಂತ ನ್ಯಾಯಾಲಯವು ವಿಚಾರಣೆ ಮುಂದೂಡಿಕೆ ಮಾಡಿದೆ. ಈ ಹಿನ್ನಲೆಯಲ್ಲಿ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ನವೆಂಬರ್.20, 2024ರವರೆಗೆ ಅವಧಿ ವಿಸ್ತರಿಸಿದೆ. ಈ ಮೂಲಕ ವಾಹನ ಸವಾರರಿಗೆ ಸದ್ಯಕ್ಕೆ ದಂಡದ ಟೆನ್ಷನ್ ನಿಂದ ಮುಕ್ತಿ ಸಿಕ್ಕಂತೆ ಆಗಿದೆ. ಆನ್ಲೈನ್ ಮೂಲಕ ಅಳವಡಿಕೆ ಹೇಗೆ? . ಎಚ್ಎಸ್ಆರ್ಪಿ ಮೇಲೆ…
ಬೆಳ್ತಂಗಡಿ : ಮನೆ ಅಂಗಳದಿಂದ ಕಾರನ್ನು ರಿವರ್ಸ್ ತೆಗೆಯುವ ವೇಳೆ ಬಾಲಕನೊಬ್ಬ ಆಕಸ್ಮಿಕವಾಗಿ ಕಾರಿನಡಿಗೆ ಬಿದ್ದು ಸಾವನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಮಲ್ಲಿಗೆಮಜಲು ಎಂಬಲ್ಲಿ ನಡೆದಿದೆ. ಮೃತ ಬಾಲಕನನ್ನು ಮಲ್ಲಿಗೆಮಜಲು ನಿವಾಸಿ ಅಬ್ದುಲ್ ಹಮೀದ್ ಎಂಬವರ ಮಗ ನವಾಫ್ ಇಸ್ಮಾಯಿಲ್ ಎಂದು ಗುರುತಿಸಲಾಗಿದೆ. ನವಾಫ್ ಇಸ್ಮಾಯಿಲ್ ಆತೂರಿನ ಆಯಿಷಾ ಸ್ಕೂಲ್ ನ 4ನೇ ತರಗತಿಯ ವಿದ್ಯಾರ್ಥಿಯಾಗಿದ್ದಾನೆ. ಮನೆಯಂಗಳದಲ್ಲಿದ್ದ ಕಾರನ್ನು ರಿವರ್ಸ್ ತೆಗೆಯುವ ವೇಳೆ ಕಾರಿನ ಹಿಂಬದಿ ನಿಂತಿದ್ದ ನವಾಫ್ ಮೇಲೆ ಕಾರು ಹರಿದಿದೆ. ಈ ವೇಳೆ ತಲೆ ಮತ್ತು ಕಾಲಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ಕರೆದೊಯ್ದರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ ಬಾಲಕ ಕಾರಿನ ಹಿಂಬದಿ ನಿಂತ ಕಾರಣ ಅರಿವಿಗೆ ಬಾರದೆ ಈ ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಧರ್ಮಸ್ಥಳ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.










