ಕಾಸರಗೋಡು : ಕೆರೆಗೆ ಬಿದ್ದು ಮೂರು ವರ್ಷದ ಬಾಲಕ ಮೃತಪಟ್ಟ ಘಟನೆ ಬೆದ್ರಡ್ಕ ಕಂಬಾರ್ ನಲ್ಲಿ ಭಾನುವಾರ ಸಂಜೆ ನಡೆದಿದೆ. ಕಂಬಾರಿನ ನೌಶಾದ್ ರವರ ಪುತ್ರ ಮುಹಮ್ಮದ್ ಸೋಹಾನ್ ಹಬೀಬ್ ಮೃತಪಟ್ಟ ಬಾಲಕ.ಮನೆಯಂಗಳದಲ್ಲಿ ಆಟವಾಡುತ್ತಿದ್ದ ಮುಹಮ್ಮದ್ ಸೋಹಾನ್ ಹಬೀಬ್ ದಿಢೀರ್ ನಾಪತ್ತೆಯಾಗಿದ್ದಾನೆ. ಈ ವೇಳೆ ಸಂಬಂಧಿಕರು ಮನೆಯೊಳಗೆ ಹಾಗೂ ಪರಿಸರದ ಮನೆಗಳಲ್ಲಿ ಆತನಿಗಾಗಿ ಹುಡುಕಾಟ ನಡೆಸಿದ್ದಾರೆ. ಆದಾಗ್ಯು ಬಾಲಕ ಪತ್ತೆಯಾಗದ ಹಿನ್ನಲೆಯಲ್ಲಿ ಸಂಬಂಧಿಕರು, ಶೋಧ ನಡೆಸಿದಾಗ ಮನೆ ಸಮೀಪದ 200 ಮೀಟರ್ ದೂರದ ಕೆರೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.ಬಾಲಕ ಹಬೀಬ್ ಕೃಷಿಕರಾದ ನೌಶಾದ್ ರವರ ಏಕೈಕ ಪುತ್ರನಾಗಿದ್ದನು. ಕಾಸರಗೋಡು ನಗರ ಠಾಣಾ ಪೊಲೀಸರು ಮಹಜರು ನಡೆಸಿದರು.
Author: main-admin
ಮಂಗಳೂರು: ನಗರದ ಮರವೂರು ಫಲ್ಗುಣಿ ನದಿಯಲ್ಲಿ ಈಜಲು ತೆರಳಿದ ನಾಲ್ವರು ಯುವಕರ ಪೈಕಿ ಇಬ್ಬರು ಯುವಕರು ನೀರುಪಾಲಾದ ಘಟನೆ ರವಿವಾರ ಸಂಜೆ ಸಂಭವಿಸಿದೆ. ಮಂಗಳೂರು ಕೊಟ್ಟಾರಚೌಕಿ ನಿವಾಸಿ ಸುಮಿತ್ (20) ಹಾಗೂ ಉರ್ವಸ್ಟೋರ್ ನಿವಾಸಿ ಅನೀಶ್ (19) ನಾಪತ್ತೆಯಾದ ಯುವಕರು. ಮರವೂರು ವೆಂಟೆಡ್ ಡ್ಯಾಂನ ಪಕ್ಕದಲ್ಲಿರುವ ರೈಲ್ವೆ ಸೇತುವೆಯ ಬಳಿಯ ಫಲ್ಗುಣಿ ನದಿಯಲ್ಲಿ ಈಜಲು ನಾಲ್ವರು ಯುವಕರ ತಂಡ ರವಿವಾರ ಸಂಜೆ 4ಗಂಟೆಗೆ ಹೋಗಿದ್ದರು. ಈ ವೇಳೆ ಸುಮಿತ್ ಹಾಗೂ ಅನೀಶ್ ನೀರಿನ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದಾರೆ. ಜೊತೆಗಿದ್ದ ಕೋಡಿಕಲ್ ನಿವಾಸಿಗಳಾದ ಅರುಣ್(19) ಹಾಗೂ ದೀಕ್ಷಿತ್(18) ಪಾರಾಗಿದ್ದಾರೆ. ನಾಪತ್ತೆಯಾದವರ ಹುಡುಕಾಟಕ್ಕಾಗಿ ಅಗ್ನಿಶಾಮಕ ದಳ ಹಾಗೂ ಮುಳುಗು ತಜ್ಞರು ಆಗಮಿಸಿ, ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಬಜಪೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.
ರಾಜ್ಯದಲ್ಲಿ ಮತ್ತೊಂದು ಹೃದಯ ವಿದ್ರಾವಕ ಘಟನೆ ನಡೆದಿದ್ದು, ಕೌಟುಂಬಿಕ ಕಲಹದಿಂದ ಬೇಸತ್ತು ಇಬ್ಬರು ಮಕ್ಕಳೊಂದಿಗೆ ತಾಯಿ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬೋಮ್ಮನಹಳ್ಳಿಯಲ್ಲಿ ಕೌಟುಂಬಿಕ ಕಲಹದಿಂದ ಬಾವಿಗೆ ಹಾರಿ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕೌಟುಂಬಿಕ ಕಲಹದಿಂದ ನೊಂದ ಮಹಿಳೆಯೊಬ್ಬರು ತಮ್ಮ ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಮಂಗಳೂರು: ಸೈಬರ್ ಕೈಂ ಬ್ರಾಂಚ್ ಅಧಿಕಾರಿ ಎಂಬುದಾಗಿ ಪರಿಚಯಿಸಿಕೊಂಡು ವ್ಯಕ್ತಿಯೋರ್ವರನ್ನು ಬೆದರಿಸಿ 35 ಲಕ್ಷ ರೂ ಗಳನ್ನು ವರ್ಗಾಯಿಸಿಕೊಂಡು ವಂಚಿಸಿರುವ ಬಗ್ಗೆ ಮಂಗಳೂರು ನಗರ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವ್ಯಕ್ತಿಯೋರ್ವರು ಸೆಪ್ಟೆಂಬರ್ 24ರಂದು ಮನೆಯಲ್ಲಿರುವಾಗ ಮಧ್ಯಾಹ್ನ ಅಪರಿಚಿತ ವ್ಯಕ್ತಿಯೋರ್ವ ಕರೆ ಮಾಡಿ ಆತನನ್ನು ಮುಂಬಯುಯ ಡಿಎಚ್ಎಲ್ ಕೊರಿಯರ್ ಸರ್ವಿಸ್ ಕಂಪೆನಿಯಕಾರ್ತಿಕ್ಶರ್ಮಾ ಎಂದು ಪರಿಚಯಿಸಿಕೊಂಡು ‘ಮುಂಬಯಿಯಿಂದ ತೈವಾನ್ಗೆ ಕಾನೂನುಬಾಹಿರವಾಗಿ ಮಾದಕ ವಸ್ತುಗಳಿರುವ ಕೊರಿಯರ್ ನಿಮ್ಮ ಹೆಸರಿನಲ್ಲಿ ಬಂದಿದೆ. ಅದನ್ನು ಮುಂಬಯಿ ಸೈಬರ್ ಕೈಂ ಬ್ರಾಂಚ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ನೀವು ಸೈಬರ್ ಕ್ರೈಂ ಅಧಿಕಾರಿಗಳೊಂದಿಗೆ ಮಾತನಾಡಬೇಕು’ ಎಂದು ಹೇಳಿ 9957376759 ನಂಬರ್ ಅನ್ನು ನೀಡಿದ್ದಾನೆ. ದೂರುದಾರರು ಆ ನಂಬರ್ಗೆ ಕರೆ ಮಾಡಿದಾಗ ಕರೆ ಸ್ವೀಕರಿಸಿದ ವ್ಯಕ್ತಿ ಆತನನ್ನು ಸೈಬರ್ ಕೈಂನ ಅಧಿಕಾರಿ ಪ್ರಾಣೇಶ್ ಗುಪ್ತಾ ಎಂದು ಪರಿಚಯಿಸಿಕೊಂಡು ವೀಡಿಯೋ ಕಾಲ್ ಮೂಲಕ ದೂರುದಾರರಲ್ಲಿ ಮಾತನಾಡಿ ‘ಅಂತಾರಾಷ್ಟ್ರೀಯ ಡ್ರಗ್ಸ್ ಪ್ರಕರಣದಲ್ಲಿ ನಿಮ್ಮ ಹೆಸರು ನಮೂದಿಸಿದ್ದು, ನಿಮ್ಮನ್ನು ಬಂಧಿಸುತ್ತೇವೆ. ಹಣ…
ಮುಲ್ಕಿ: ಡೆತ್ ನೋಟ್ ಬರೆದಿಟ್ಟು ಬಾಲಕಿಯೊಬ್ಬಳು ಪ್ಯಾನ್ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಲ್ಕಿ ಸಮೀಪದ ಅತಿಕಾರಿಬೆಟ್ಟು ರೈಲ್ವೆ ಗೇಟ್ ಬಳಿಯ ಕ್ವಾಟರ್ಸ್ ನಲ್ಲಿ ಶನಿವಾರ ಸಂಜೆ ನಡೆದಿದೆ. ಕೊಂಕಣ ರೈಲ್ವೆ ಗೇಟ್ ಸಿಬ್ಬಂದಿ ಮಹೇಶ್ ನಾಯಕ್ ಎಂಬುವರ ಪುತ್ರಿ ಉಜ್ವಲ (17) ಮೃತ ಬಾಲಕಿ. ಬಾಲಕಿ ಉಜ್ವಲ ಮುಲ್ಕಿ ವಿಜಯ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯಾಗಿದ್ದು, ಕಾಲೇಜಿನಲ್ಲಿ ನಡೆದ ಮೀಟಿಂಗ್ ಮುಗಿಸಿಕೊಂಡು ಮನೆ ಕಡೆ ಬಂದಿದ್ದು ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಆತ್ಮಹತ್ಯೆಗೆ ಮಾಡಿಕೊಂಡಿದ್ದಾಳೆ. ಈಕೆ ಆತ್ಮಹತ್ಯೆ ಸಂದರ್ಭ ತಂದೆ ಮಹೇಶ್ ನಾಯಕ್ ಮೈಲೊಟ್ಟು ರೈಲ್ವೇ ಗೇಟ್ ಬಳಿ ಕರ್ತವ್ಯಕ್ಕೆ ಹಾಜರಾಗಿದ್ದು, ತಾಯಿ ಊರಾದ ಭಟ್ಕಳಕ್ಕೆ ತೆರಳಿದ್ದು ಮೃತಳ ಅಣ್ಣ ಮುಕ್ಕ ಕಾಲೇಜಿನಲ್ಲಿ ಕಲಿಯುತ್ತಿದ್ದು ಕಾಲೇಜು ಮುಗಿಸಿ ಸಂಜೆ 6:30 ಗಂಟೆ ಸುಮಾರಿಗೆ ಮನೆಗೆ ಬಂದು ನೋಡುವಾಗ ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಮೃತಳ ರೂಮ್ ನಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು ಅದರಲ್ಲಿ ಪರೀಕ್ಷೆಯಲ್ಲಿ ಅಂಕ ಕಡಿಮೆ ಬಗ್ಗೆ ಬರೆದಿದ್ದಾಳೆ.…
ಪುತ್ತೂರು:ಬಲ್ನಾಡು ಉಜಿರುಪಾದೆಯಲ್ಲಿ ಸಾಲ ಮರುಪಾವ ತಿಗೆ ಸಂಬಂಧಿಸಿ ಮನೆಗೆ ತೆರಳಿದ್ದ ಬ್ಯಾಂಕ್ ಸಿಬಂದಿಗಳಿಗೆ ಪಿಸ್ತೂಲ್ ತೋರಿಸಿಬೆದರಿಕೆ ಒಡ್ಡಿದ ಪ್ರಕರಣಕ್ಕೆ ಸಂಬಂಧಿಸಿ ಪ್ರತಿದೂರು ದಾಖಲಾಗಿದ್ದು, ಬ್ಯಾಂಕ್ ಸಿಬಂದಿ ವಿರುದ್ಧ ಮನೆಯಲ್ಲಿದ್ದ ಮಹಿಳೆ ಮಾನಭಂಗಕ್ಕೆ ಯತ್ನಿಸಿರುವ ದೂರು ನೀಡಿದ್ದಾರೆ. ಕಾರಿನಲ್ಲಿ ಬಂದ ಅಪರಿಚಿತರು ಮನೆಯೊಳಗೆ ಅಕ್ರಮವಾಗಿ ಪ್ರವೇಶಿಸಿ ಸಾಲ ತೀರಿಸಲು ಸಾಧ್ಯವಿಲ್ಲದಿದ್ದರೆ ನಮ್ಮೊಂದಿಗೆ ಬನ್ನಿ ಎಂದು ಮಾನಭಂಗಕ್ಕೆ ಯತ್ನಿಸಿದ್ದಲ್ಲದೆ, ಈ ಬಗ್ಗೆ ದೂರು ನೀಡಿದರೆ ನೀವು ಪಿಸ್ತೂಲ್ ತೋರಿಸಿ ಬೆದರಿಸಿದ್ದೀರೆಂದು ನಿಮ್ಮ ವಿರುದ್ಧವೇ ದೂರು ನೀಡಿ ನಿಮ್ಮನ್ನು ಜೈಲಿಗೆ ಹಾಕಿಸುತ್ತೇವೆ ಎಂದು ಬೆದರಿಸಿರುವುದಾಗಿ ಮನೆಯಲ್ಲಿದ್ದ ಸಂತ್ರಸ್ತ ಮಹಿಳೆ ಬಲ್ನಾಡು ಉಜಿರುಪಾದೆ ನಿವಾಸಿ ಕೀರ್ತಿ ಅಖಿಲೇಶ್ ಅವರು ಮೂವರ ವಿರುದ್ದ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸೆ. 25ರ ಅಪರಾಹ್ನ 3 ಗಂಟೆಗೆ ಮನೆಯಲ್ಲಿ ಮಹಿಳೆಯರು ಮಾತ್ರ ಇದ್ದ ಸಮಯದಲ್ಲಿ ಕಾರಿನಲ್ಲಿ ಬಂದ ಮೂವರು ಮನೆಯಂಗಳಕ್ಕೆ ಅಕ್ರಮವಾಗಿ ಪ್ರವೇಶಿಸಿದಲ್ಲದೆ ವಿಚಾರಿಸಿ ದಾಗ ತಮ್ಮ ಗುರುತು ಪರಿಚಯ ನೀಡದೆ ಅವ್ಯಾಚ್ಯ ಶಬ್ದಗಳಿಂದ ನಿಂದಿಸಿ ನಿಮ್ಮ ಮನೆಯನ್ನು…
ಪುತ್ತೂರು : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ಕೆಮ್ಮಾರ ಎಂಬಲ್ಲಿ ನಡೆದಿದೆ. ಅಪಘಾತದ ವಿಡಿಯೋ ಸಿಸಿಟಿವಿ ಸೆರೆಯಾಗಿದೆ. ಕಡಬ ಕಡೆಯಿಂದ ಕೆಮ್ಮಾರ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಅಡ್ಡಲಾಗಿ ಬಿದ್ದ ಕಾರನ್ನು ಕೂಡಲೇ ಸ್ಥಳೀಯರು ಕೂಡಿಕೊಂಡು ಮೇಲೆಕ್ಕೆತ್ತಿ ಸರಿ ಮಾಡಿ ನಿಲ್ಲಿಸಿದ್ದಾರೆ. ಬಸ್ ನಿಲ್ದಾಣದ ಬಳಿಯೇ ಈ ಘಟನೆ ನಡೆದಿದ್ದು, ಅಷ್ಟರಲ್ಲಾಗಲೇ ಬಸ್ ಬಂದು ಹೋಗಿದ್ದರಿಂದ ಅಲ್ಲಿ ಹೆಚ್ಚಿನ ಪ್ರಯಾಣಿಕರು ಇರಲಿಲ್ಲ.
ಮಂಗಳೂರು: ದೆಹಲಿ ನೋಂದಣಿಯ ಹಳೆಯ ಬಿಎಂಡಬ್ಲ್ಯು ಕಾರನ್ನು ಸರ್ವಿಸಿಗೆ ಒಯ್ಯುತ್ತಿದ್ದಾಗಲೇ ಹೆದ್ದಾರಿ ಮಧ್ಯದಲ್ಲಿ ಬೆಂಕಿ ಹೊತ್ತಿಕೊಂಡು ಸುಟ್ಟು ಬೂದಿಯಾದ ಘಟನೆ ಮಂಗಳೂರು ನಗರದ ಅಡ್ಯಾರ್ ನಲ್ಲಿ ನಡೆದಿದೆ. ಅಡ್ಯಾರಿನ ಸಹ್ಯಾದ್ರಿ ಕಾಲೇಜಿನ ಮುಂಭಾಗದಲ್ಲಿ ಮಧ್ಯಾಹ್ನ 1.30ರ ಸುಮಾರಿಗೆ ಘಟನೆ ನಡೆದಿದೆ. ಬಿಸಿ ರೋಡ್ ಕಡೆಯಿಂದ ಚಾಲಕ ಗುರುದೀಪ್ ಎಂಬವರು ಕಾರನ್ನು ಚಲಾಯಿಸಿಕೊಂಡು ಬಂದಿದ್ದು ಸಹ್ಯಾದ್ರಿ ಕಾಲೇಜು ಮುಂಭಾಗಕ್ಕೆ ತಲುಪುತ್ತಿದ್ದಂತೆ ಮುಂಭಾಗದಲ್ಲಿ ಹೊಗೆ ಕಾಣಿಸಿಕೊಂಡಿದೆ. ಕಾರಿನಲ್ಲಿ ಚಾಲಕ ಒಬ್ಬನೇ ಇದ್ದು ಕೂಡಲೇ ಕಾರಿನಿಂದ ಹೊರಕ್ಕೆ ಇಳಿದಿದ್ದಾನೆ. ಅನಂತರ, ಎಲ್ಲರೂ ನೋಡುತ್ತಿರುವಾಗಲೇ ನಡುರಸ್ತೆಯಲ್ಲೇ ಧಗ ಧಗನೆ ಕಾರು ಹೊತ್ತಿ ಉರಿದಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಕಾರಿಗೆ ಬೆಂಕಿ ತಗುಲಿರುವ ಶಂಕೆ ವ್ಯಕ್ತವಾಗಿದೆ. ಕಾರಿನಲ್ಲಿ ಏನೋ ಸಮಸ್ಯೆ ಇದೆಯೆಂದು ಅಡ್ಯಾರಿನ ಬಿಎಂಡಬ್ಲ್ಯು ಗ್ಯಾರೇಜ್ ಗೆ ತರುತ್ತಿದ್ದರು. ಅಷ್ಟರಲ್ಲೇ ಬೆಂಕಿ ಹತ್ತಿಕೊಂಡಿದ್ದು ಸುಟ್ಟು ಭಸ್ಮವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆದ್ದಾರಿಯಲ್ಲಿ ಕೆಲಹೊತ್ತು ವಾಹನಗಳ ಸಂಚಾರವನ್ನು ತಡೆಹಿಡಿಯಲಾಗಿತ್ತು. ದೆಹಲಿ ನೋಂದಣಿಯ ಬಿಎಂಡಬ್ಲ್ಯು ಕಾರು ಇದಾಗಿದ್ದು 2011ರ ಮಾಡೆಲ್ ಹೊಂದಿದೆ…
ಶಿರೂರಿನಲ್ಲಿ ಭೂಕುಸಿತಕ್ಕೆ ಸಿಲುಕಿ ನದಿಪಾಲಾಗಿ ೭೨ ದಿನಗಳ ಬಳಿಕ ಪತ್ತೆಯಾದ ಲಾರಿ ಚಾಲಕ ಅರ್ಜುನ್ ಕೋಝಿಕ್ಕೋಡ್ ಕನ್ನಾಡಿಕ್ಕಾಲ್ ನ ಪಾರ್ಥಿವ ಶರೀರ ಅಂಬ್ಯುಲೆನ್ಸ್ ಮೂಲಕ ಕಾಸರಗೋಡಿಗೆ ತಲಪಿದಾಗ ಅಂತಿಮ ನಮನ ಸಲ್ಲಿಸಲಾಯಿತು. ಜಿಲ್ಲಾಧಿಕಾರಿ ಕೆ . ಇಂಪಾಶೇಖರ್ , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ . ಶಿಲ್ಪಾ ಮೊದಲಾದವರು ಪುಷ್ಪ ಚಕ್ರ ಅರ್ಪಿಸಿದರು. ಹೊಸ ಬಸ್ಸು ನಿಲ್ದಾಣ ಪರಿಸರದಲ್ಲಿ ತಡರಾತ್ರಿ ಯಾದಾರೂ ನೂರಾರು ಮಂದಿ ಅಂತಿಮ ನಮನ ಸಲ್ಲಿಸಿದರು.ಅಂಬ್ಯುಲೆನ್ಸ್ ನಲ್ಲಿದ್ದ ಅರ್ಜುನ್ ರ ಸಹೋದರಿ ಪತಿ ಜಿತಿನ್, ಸಹೋದರ ಅಭಿಜಿತ್ ರವರನ್ನು ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಸಾಂತ್ವನ ಪಡಿಸಿದರು. ಮಂಜೇಶ್ವರ ಶಾಸಕ ಎ . ಕೆ . ಎಂ ಅಶ್ರಫ್ , ಕಾರವಾರ ಶಾಸಕ ಸತೀಶ್ ಸೈಲ್ ರವರು ಜೊತೆಗಿದ್ದರು.ಅರ್ಜುನ್ ಪ್ರತಿಬಾರಿ ಲಾರಿಕೊಂಡೊಯ್ಯುವ ದಾರಿಯಾಗಿಯೇ ಅಂಬ್ಯುಲೆನ್ಸ್ ತೆರಳುತ್ತಿದೆ. ಬಳಿಕ ಅಂಬ್ಯುಲೆನ್ಸ್ ಕೋಝಿಕ್ಕೋಡ್ ಗೆ ಪ್ರಯಾಣ ಬೆಳೆಸಿತು. ಇಂದು ಬೆಳಿಗ್ಗೆ ೮. ೩೦ ರ ಸುಮಾರಿಗೆ ಅರ್ಜುನ್ ರ ಮೃತದೇಹ ಮನೆಗೆ…
ಕಾಸರಗೋಡು :ಎಂಡಿಎಂಎ ಮಾದಕ ವಸ್ತು ಸಹಿತ ನಾಲ್ವರನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಇವರ ಬಳಿಯಿಂದ 29.4 ಗ್ರಾಂ ಎಂ.ಡಿ.ಎಂ.ಎ ಮಾದಕ ವಸ್ತು ವನ್ನು ವಶಪಡಿಸಿ ಕೊಳ್ಳಲಾಗಿದೆ. ಪೈವಳಿಕೆ ಬಾಯಿ ಕಟ್ಟೆ ಯಿಂದ ನಾಲ್ವರನ್ನು ಬಂಧಿಸಿದ್ದು, ಕಾರನ್ನು ವಶಪಡಿಸಿ ಕೊಳ್ಳಲಾಗಿದೆ. ಬಂಧಿತರನ್ನು ಬಳ್ಳೂರಿನ ಮುಹಮ್ಮದ್ ಅಶ್ರಫ್ (21), ಕೊಡಿಬೈಲ್ನ ಸಯ್ಯದ್ ನವಾಝ್ ( 30), ಬೆಳ್ಳೂರಿನ ಅಹಮ್ಮದ್ ಶಮ್ಮಾಸ್ (20) ಮತ್ತು ಬಂಟ್ವಾಳದ ಮುಹಮ್ಮದ್ ಇಸಾಕ್ (20) ಎಂದು ಗುರುತಿಸಲಾಗಿದೆ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಶಿಲ್ಪಾ ಮೇಲ್ನೋಟದಲ್ಲಿ ಡಿವೈಎಸ್ಪಿಪಿ. ಸುನಿಲ್ ಕುಮಾರ್ ಹಾಗೂ ಮಂಜೇಶ್ವರ ಠಾಣಾ ಸಬ್ ಇನ್ಸ್ ಪೆಕ್ಟರ್ ನೇತೃತ್ವದ ಪೊಲೀಸ್ ತಂಡ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಕೆಲ ದಿನಗಳ ಹಿಂದೆ ಉಪ್ಪಳದಲ್ಲಿ ಮನೆಯೊಂದು ಕೇಂದ್ರೀಕರಿಸಿ ನಡೆಯುತ್ತಿದ್ದ ಬ್ರಹತ್ ಡ್ರಗ್ಸ್ ಜಾಲವನ್ನು ಪೊಲೀಸರು ಭೇಧಿಸಿದ್ದರು










