ಬಂಟ್ವಾಳ: ಕಳೆದ ಎರಡು ದಿನಗಳಿಂದ ತಾಲೂಕಿನಲ್ಲಿ ದೇವಸ್ಥಾನಗಳ ಮೇಲೆ ಕಣ್ಣುಹಾಯಿಸಿರುವ ಕಳ್ಳರ ಗ್ಯಾಂಗ್ ಮಂಗಳವಾರ ತಡರಾತ್ರಿಗೆ (ನ.5 ರಂದು) ತುಂಬೆಯ ದೇವಸ್ಥಾನವೊಂದಕ್ಕೆ ನುಗ್ಗಿದ್ದು, ಲಕ್ಷಾಂತರ ರೂ ಮೌಲ್ಯದ ನಗ-ನಗದು ಕಳವು ಮಾಡಿದ ಘಟನೆ ನಡೆದಿದೆ. ಬಂಟ್ವಾಳ ತಾಲೂಕಿನ ಶ್ರೀಮಹಾಲಿಂಗೇಶ್ವರ ತುಂಬೆಯಲ್ಲಿರುವ ದೇವಸ್ಥಾನದ ಮುಂಬಾಗಿಲಿನ ಚಿಲಕ ಮುರಿದು ಒಳ ಪ್ರವೇಶ ಮಾಡಿದ ಕಳ್ಳರು ಸುಮಾರು 2 ಲಕ್ಷಕ್ಕೂ ಅಧಿಕ ಮೌಲ್ಯದ ಸೊತ್ತುಗಳನ್ನು ಕಳವು ಮಾಡಿದ್ದಾರೆ ಎಂದು ಹೇಳಲಾಗಿದೆ. ದೇವಸ್ಥಾನದ ಕಛೇರಿಯಲ್ಲಿರಿಸಿದ್ದ ಸುಮಾರು ಒಂದುವರೆ ಕೆ.ಜಿ ತೂಕದ ಮಹಾಲಿಂಗೇಶ್ವರ ದೇವರ ಬೆಳ್ಳಿಯ ಜಲದ್ರೋಣವನ್ನು ಕಳ್ಳತನ ಮಾಡಲಾಗಿದೆ. ಇದರ ಜೊತೆ ಗೊದ್ರೇಜ್, ಕ್ಯಾಶ್ ಡ್ರಾಯರ್ ಹಾಗೂ ಕಾಣಿಕೆ ಹುಂಡಿಯಲ್ಲಿದ್ದ ಸುಮಾರು 50 ಸಾವಿರದಷ್ಟು ಹಣವನ್ನು ಕೂಡ ಕಳವು ಮಾಡಲಾಗಿದೆ ಎಂದು ಹೇಳಲಾಗಿದೆ. ದೇವಸ್ಥಾನದ ಸುತ್ತ ಮುಂಜಾಗ್ರತಾ ಕ್ರಮವಾಗಿ ಸಿ.ಸಿ.ಕ್ಯಾಮರಾ ಅಳವಡಿಸಲಾಗಿದೆಯಾದರೂ ಕಳ್ಳರ ತಂಡ ಕ್ಯಾಮರಾ ಡಿ.ವಿಆರ್ ನ್ನು ಕೂಡ ಬಿಡದೆ ಎಗರಿಸಿದ್ದಾರೆ. ಸೋಮವಾರ ಮುಂಜಾನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆ ದೇವಸ್ಥಾನವೊಂದರ ಕಳವು…
Author: main-admin
ಹಾಸನ: ಹಸೆಮಣೆ ಏರಬೇಕಿದ್ದ KSISF ಪೊಲೀಸ್ ಕಾನ್ಸ್ಟೇಬಲ್ ನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಹಾಸನ ತಾಲೂಕಿನ ದುದ್ದ ಗ್ರಾಮದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ವಿ. ಹರೀಶ್(32) ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಹರೀಶ್ ಅವರನ್ನು ಬರ್ಬರವಾಗಿ ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾನೆ. ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆಯ ಕಾನ್ಸ್ಟೇಬಲ್ ಆಗಿ ಹರೀಶ್ ಕಾರ್ಯ ನಿರ್ವಹಿಸುತ್ತಿದ್ದರು. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ನ. 11 ರಂದು ಹರೀಶ್ ಮದುವೆ ನಿಗದಿಯಾಗಿತ್ತು. ಮದುವೆಯ ಆಮಂತ್ರಣ ಪತ್ರಗಳನ್ನು ಹಂಚಿ ಮನೆಗೆ ತೆರಳುವಾಗ ನಿನ್ನೆ ರಾತ್ರಿ ದುದ್ದ ಗ್ರಾಮದ ಹೊರವಲಯದಲ್ಲಿ ಹರೀಶ್ ನನ್ನು ಅಡ್ಡಗಟ್ಟಿ ಹತ್ಯೆ ಮಾಡಲಾಗಿದೆ. ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಹಾಸನ ಎಸ್ಪಿ ಮೊಹಮ್ಮದ್ ಸುಜಿತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಬೆಳ್ತಂಗಡಿ: ಫೇಸ್ಬುಕ್ ಫ್ರೆಂಡ್ಸ್ ಬಳಗದಲ್ಲಿದ್ದ ಮಹಿಳೆಯೋರ್ವಳು ಹದಿ ಹರೆಯದ ವಿದ್ಯಾರ್ಥಿಯೋರ್ವನನ್ನು ಹನಿಟ್ರ್ಯಾಪ್ ಮಾಡಿ ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡಲು ಯತ್ನಿಸಿದ ಪ್ರಕರಣ ವರದಿಯಾಗಿದ್ದು, ಕಂಗೆಟ್ಟ ವಿದ್ಯಾರ್ಥಿಯನ್ನು ಪೊಲೀಸ್ ಇಲಾಖೆ ಸಕಾಲಿಕ ಕ್ರಮದಿಂದ ರಕ್ಷಿಸಿದ ಘಟನೆ ವರದಿಯಾಗಿದೆ. ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ನಿವಾಸಿಯಾಗಿರುವ ಕಾಲೇಜು ವಿದ್ಯಾರ್ಥಿಯೋರ್ವನ ಫೇಸ್ಬುಕ್ ಸಂಪರ್ಕದಲ್ಲಿದ್ದ ಮಹಿಳೆಯೋರ್ವಳು ಆತ್ಮೀಯತೆಯನ್ನು ಮೂಡಿಸಿ ವಿದ್ಯಾರ್ಥಿಗೆ ವೀಡಿಯೊ ಕರೆ ಮಾಡಿದ್ದಳು. ಕರೆ ಸ್ವೀಕರಿಸಿದ ವಿದ್ಯಾರ್ಥಿಗೆ ತನ್ನ ನಗ್ನ ದೇಹವನ್ನು ಕಾಣಿಸಿ ಆತನ ಭಾವನೆಯನ್ನು ಕೆರಳಿಸಲು ಯತ್ನಿಸಿದ್ದಾಳೆ. ಬಳಿಕ ವೀಡಿಯೊ ಕರೆಯಲ್ಲಿ ಕಾಣಿಸಿಕೊಂಡ ವಿದ್ಯಾರ್ಥಿಯ ಮುಖವನ್ನು ಬಳಸಿ ಅಶ್ಲೀಲ ವೀಡಿಯೊಗೆ ಎಡಿಟ್ ಮಾಡಿ ವೀಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡುವುದಾಗಿ ಬೇರೊಬ್ಬ ವ್ಯಕ್ತಿ ಕರೆ ಮಾಡಿ ಹಣಕ್ಕಾಗಿ ಬೇಡಿಕೆಯನ್ನು ಈತನ ಮುಂದಿರಿಸಿದ್ದಾನೆ. ಈ ವಿದ್ಯಮಾನದಿಂದ ಆತಂಕಕ್ಕೊಳಗಾದ ವಿದ್ಯಾರ್ಥಿಯು ಈ ವಿಚಾರವನ್ನು ಮಾಧ್ಯಮ ಪ್ರತಿನಿಧಿಯೋರ್ವರ ಗಮನಕ್ಕೆ ತಂದಿದ್ದು, ಅವರು ಪ್ರಕರಣದ ಬಗ್ಗೆ ಪೊಲೀಸ್ ಇಲಾಖೆಯ ಹಾಗೂ ಸೈಬರ್ ಕ್ರೈಮ್ ವಿಭಾಗಕ್ಕೆ ಮಾಹಿತಿಯನ್ನು ತಕ್ಷಣವೇ ರವಾನಿಸಲು ಸಲಹೆ ನೀಡಿದರು. ಈ…
ಉಳ್ಳಾಲ : ಮರಳು ಧಂದೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆಂಬ ಆರೋಪಕ್ಕೆ ವ್ಯಕ್ತಿ ಮೇಲೆ ಹಲ್ಲೆ ನಡೆದ ಘಟನೆ ಮಂಗಳುರು ಹೊರವಲಯದ ಉಳ್ಳಾಲದಲ್ಲಿ ನಡೆದಿದೆ. ಸೋಮೇಶ್ವರ ಉಚ್ಚಿಲದ ಫಿಶರೀಸ್ ರೋಡ್ ನಿವಾಸಿ ಸೋಮೇಶ್ವರ ಸೋಮನಾಥ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಕಿಶೋರ್ ಎಂ. ಉಚ್ಚಿಲ(53) ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದಾರೆ. ಸುನೀಲ್ ಎಂಬಾತ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದ್ದು ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಿಶೋರ್ ಅವರು ಸೋಮವಾರ ಬೆಳಗ್ಗೆ ತನ್ನ ಮಿತ್ರ ಪುಷ್ಪರಾಜ್ ಎಂಬವರ ಜತೆಯಲ್ಲಿ ಸೋಮೇಶ್ವರದ ಹೊಟೇಲಲ್ಲಿ ಚಹಾ ಕುಡಿದು ಸ್ಕೂಟರಲ್ಲಿ ಸಹ ಸವಾರನಾಗಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಸೋಮೇಶ್ವರ ಪುರಸಭಾ ಕಚೇರಿ ಸಮೀಪದಲ್ಲಿ ಆರೋಪಿ ಸುನಿಲ್ ಅವರು ಮರಳುಗಾರಿಕೆಯ ಬಗ್ಗೆ ಭಾರೀ ಪೊಲೀಸರಿಗೆ ಮಾಹಿತಿ ನೀಡುತ್ತೀಯ, ಈ ಹಿಂದೆಯೇ ನಿನಗೆ ಗತಿ ಕಾಣಿಸಲು ಪ್ರಯತ್ನಿಸಿದ್ದೆ, ಇನ್ನು ಮೂರು ತಿಂಗಳೊಳಗೆ ನೀನೊಬ್ಬನೆ ಸಿಕ್ಕಿದರೆ ಕೊಂದು ಬಿಡುತ್ತೇನೆಂದು ಭುಜ ಮತ್ತು ಸೊಂಟಕ್ಕೆ ಹಲ್ಲೆ ನಡೆಸಿದ್ದು, ಬಳಿಕ ಸೊಂಟದಿಂದ ಚಾಕು ಹೊರ ತೆಗೆದು ಇರಿಯಲು…
ಉಡುಪಿ: ಪಾರ್ಟಿ ಮಾಡುತ್ತಿದ್ದ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಅಪಾರ ಪ್ರಮಾಣದ ಹಾನಿ ಉಂಟಾದ ಘಟನೆ ಉಡುಪಿ ಕಲ್ಸಂಕ ಸಮೀಪದ ಬಡಗುಪೇಟೆ ರಸ್ತೆಯ ಅಪಾರ್ಟ್ ಮೆಂಟ್ ವೊಂದರಲ್ಲಿ ಇಂದು ರಾತ್ರಿ ಸಂಭವಿಸಿದೆ. ಗ್ಯಾಸ್ ಸಿಲಿಂಡರ್ನಲ್ಲಿ ಸೋರಿಕೆ ಆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಮೂರು ಅಂತಸ್ತಿನ ಅಪಾರ್ಟ್ ಮೆಂಟ್ ನ 3ನೇ ಮಹಡಿಯಲ್ಲಿ ಬಂಗಾಳಿ ಮೂಲದ ಕಾರ್ಮಿಕರು ಪಾರ್ಟಿ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಗ್ಯಾಸ್ ಸಿಲಿಂಡರ್ ಲೀಕ್ ಆಗಿ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆಂದು ತಿಳಿದುಬಂದಿದೆ. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಕೊಠಡಿಯಲ್ಲಿ ಪಾರ್ಟಿ ಮಾಡುತ್ತಿದ್ದವರು ಹೊರಗೆ ಓಡಿ ಬಂದು ಪ್ರಾಣ ಉಳಿಸಿಕೊಂಡಿದ್ದಾರೆ. ಬಳಿಕ ಅಗ್ನಿ ಶಾಮಕ ಇಲಾಖೆಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ಬಂದ ಅಗ್ನಿಶಾಮಕ ಇಲಾಖೆಯ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಸಂಭವನೀಯ ಅನಾಹುತವೊಂದನ್ನು ತಪ್ಪಿಸಿದ್ದಾರೆ. ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಮನೆಯಲ್ಲಿದ್ದ ಸೊತ್ತುಗಳು ಸಂಪೂರ್ಣ ಸುಟ್ಟು ಕರಕಲಾಗಿದ್ದು, ಅಪಾರ ಪ್ರಮಾಣದ ಹಾನಿಯುಂಟಾಗಿದೆ ಎಂದು ತಿಳಿದುಬಂದಿದೆ.
ನವದೆಹಲಿ: ಹಲವಾರು ರಾಜಕೀಯ ಪಕ್ಷಗಳ ಮನವಿಯನ್ನು ಪರಿಗಣಿಸಿ ಭಾರತದ ಚುನಾವಣಾ ಆಯೋಗವು ಕೇರಳ, ಪಂಜಾಬ್ ಮತ್ತು ಉತ್ತರ ಪ್ರದೇಶದ 14 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತದಾನದ ದಿನಾಂಕವನ್ನು ಬದಲಾಯಿಸಿದೆ. ಈ ಹಿಂದೆ ನ.13 ರಂದು ಚುನಾವಣೆ ಘೋಷಿಸಲಾಗಿತ್ತು. ಈಗ ನ.20ಕ್ಕೆ ಚುನಾವಣೆ ಮುಂದೂಡಿಕೆಯಾಗಿದೆ. ನ.23 ರಂದು ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.ಕಲ್ಪಾಠಿ ರಥೋತ್ಸವ (ನ. 13-15), ಕಾರ್ತಿಕ ಪೂರ್ಣಿಮಾ (ನ.15) ಮತ್ತು ಶ್ರೀ ಗುರುನಾನಕ್ ದೇವ್ ಅವರ ಪ್ರಕಾಶ್ ಪರ್ವ (ನ.15) ಹಬ್ಬಗಳನ್ನು ಉಲ್ಲೇಖಿಸಿ ರಾಜಕೀಯ ಪಕ್ಷಗಳು ಮತದಾನದ ದಿನಾಂಕವನ್ನು ಬದಲಾಯಿಸಲು ಮನವಿ ಮಾಡಿದ್ದವು. ಅಲ್ಲದೇ ಈ ಹಬ್ಬಗಳು ಈ ರಾಜ್ಯಗಳಲ್ಲಿನ ಮತದಾರರ ಮತದಾನದ ಮೇಲೆ ಪರಿಣಾಮ ಬೀರಬಹುದು ಎಂದು ಪಕ್ಷಗಳು ಹೇಳಿದ್ದವು. ಇದರಿಂದಾಗಿ ದಿನಾಂಕ ಬದಲಾವಣೆ ಮಾಡಲಾಗಿದೆ ಎಂದು ಚುನಾವಣಾ ಸಮಿತಿಯ ಮೂಲಗಳು ತಿಳಿಸಿವೆ.ಈ ಉಪಚುನಾವಣೆಯಲ್ಲಿ ಉತ್ತರ ಪ್ರದೇಶದ 9, ಪಂಜಾಬ್ನಲ್ಲಿ 4 ಮತ್ತು ಕೇರಳದ 1 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ.
ಡೆಹ್ರಾಡೂನ್: ಉತ್ತರಾಖಂಡದ ಅಲ್ಮೋರಾ ಜಿಲ್ಲೆಯ ಮಾರ್ಚುಲಾ ಸಾಲ್ಟ್ ಪ್ರದೇಶದಲ್ಲಿ ಬಸ್ವೊಂದು ಕಮರಿಗೆ ಬಿದ್ದು 36ಕ್ಕೆ ಹೆಚ್ಚು ಮಂದಿ ಸಾವನ್ನಪ್ಪಿದ್ದು, 19 ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ನಡೆದಿದೆ. ಎನ್ಡಿಆರ್ಎಫ್,ಎಸ್ಡಿಆರ್ಎಫ್ ತಂಡಗಳು, ಸ್ಥಳೀಯ ಪೊಲೀಸರು ಮಾರ್ಚುಲಾ ಸಾಲ್ಟ್ ಪ್ರದೇಶದಲ್ಲಿ ಅಪಘಾತ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. ಕೆಲ ಪ್ರಯಾಣಿಕರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ ಎಂದು ಅಲ್ಮೋರಾ ಪೊಲೀಸ್ ವರಿಷ್ಠಾಧಿಕಾರಿ ದೇವೇಂದ್ರ ಪಿಂಚಾ, ಉಪ್ಪಿನಂಗಡಿ ಉಪಜಿಲ್ಲಾ ಮ್ಯಾಜಿಸ್ಟ್ರೇಟ್ ಸಂಜಯ್ ಕುಮಾರ್ ಮಾಹಿತಿ ನೀಡಿದ್ದಾರೆ. ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಸಂತ್ರಸ್ತರಿಗೆ ಪರಿಹಾರ ಘೋಷಣೆ ಮಾಡಿದ್ದಾರೆ. ಮೃತರ ಕುಟುಂಬಗಳಿಗೆ ತಲಾ 4 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ ತಲಾ 1 ಲಕ್ಷ ರೂ. ಆರ್ಥಿಕ ನೆರವು ಘೋಷಿಸಿದ್ದಾರೆ. ಅಲ್ಲದೇ ಘಟನೆ ಕುರಿತು ಮ್ಯಾಜಿಸ್ಟ್ರೇಟ್ ತನಿಖೆ ನಡೆಸುವಂತೆ ಸೂಚಿಸಿದ್ದಾರೆ.
ಪುತ್ತೂರು : ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯೊಬ್ಬರ ತಲೆ ಬುರುಡೆ ಹಾಗೂ ಎಲುಬುಗಳು ಒಳಮೊಗ್ರು ಗ್ರಾಮದ ಉರ್ವದಲ್ಲಿ ಪತ್ತೆಯಾಗಿದೆ. ಮೃತರನ್ನು ಉರ್ವ ನಿವಾಸಿ ಸಂಜೀವ ಎಂಬವರ ಪತ್ನಿ ನಳಿನಿ ಎಂದು ಗುರುತಿಸಲಾಗಿದೆ. ಇವರು ತಮ್ಮ ಮನೆಯ ಎದುರಿನ ಕಾಡೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಇದು ಮನೆಯವರಿಗೆ ಒಂದು ತಿಂಗಳ ಬಳಿಕ ಗೊತ್ತಾಗಿದೆ. ಉರ್ವ ನಿವಾಸಿ ಸಂಜೀವ ಎಂಬವರು ಕನ್ಯಾನದಿಂದ ನಳಿನಿ ಎಂಬವರನ್ನು ಒಂದೂವರೆ ವರ್ಷಗಳ ಹಿಂದೆ ಧರ್ಮಸ್ಥಳದಲ್ಲಿ ನಡೆದ ಸಾಮೂಹಿಕ ವಿವಾಹದಲ್ಲಿ ಮದುವೆ ಮಾಡಿಕೊಂಡಿದ್ದರು. ನಳಿನಿಯವರು ಆಗಾಗ ತನ್ನ ತಾಯಿ ಮನೆಗೆ ಹೋಗುತ್ತಿದ್ದರು ಎಂದು ಹೇಳಲಾಗಿದ್ದು, ಕಳೆದ ಒಂದು ತಿಂಗಳ ಹಿಂದೆ ನಾಪತ್ತೆಯಾಗಿದ್ದರು. ಈ ಬಗ್ಗೆ ಸಂಜೀವರವರು ಅಕ್ಟೋಬರ್ 8ರಂದು ಸಂಪ್ಯ ಪೊಲೀಸ್ ಠಾಣೆಗೆ ತೆರಳಿ ತನ್ನ ಪತ್ನಿ ನಾಪತ್ತೆಯಾಗಿದ್ದಾಳೆ ಎಂದು ತಿಳಿಸಿದ್ದರು. ಪತ್ನಿಯ ಫೋಟೋ ತರುವಂತೆ ಠಾಣೆಯಲ್ಲಿ ತಿಳಿಸಿದ್ದರು. ಆದರೆ ಆ ಬಳಿಕ ಸಂಜೀವರವರು ಠಾಣೆಗೆ ತೆರಳಿ ದೂರು ನೀಡಿರಲಿಲ್ಲ ಎಂದು ಹೇಳಲಾಗಿದೆ. ನಳಿನಿಯವರು ತನ್ನ ತವರು…
ಮಂಗಳೂರು: ನಗರದ ಹೊರವಲಯದ ಪೆರ್ಮುದೆ ಪಂಚಾಯತ್ ಕ್ರಾಸ್ ಬಳಿ ಎಂಡಿಎಂಎ ಮಾದಕದ್ರವ್ಯ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಜ್ಪೆ ಠಾಣಾ ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ 62ನೇ ತೋಕೂರು ಗ್ರಾಮದ ಜೋಕಟ್ಟೆಯ ನಿವಾಸಿ ಉಮ್ಮರ್ ಫಾರೂಕ್ ಮತ್ತು ಬಜ್ಪೆ ಜರಿನಗರದ ನಿವಾಸಿ ಮೊಹಮ್ಮದ್ ಅಬ್ದುಲ್ ಜುನೈದ್ ಬಂಧಿತ ಆರೋಪಿಗಳು. ಮಂಗಳೂರಿನ ತೆಂಕಎಕ್ಕಾರು ಗ್ರಾಮದ, ಬಜ್ಪೆಯಿಂದ ಕಟೀಲು ಕಡೆಗೆ ಹೋಗುವ ಪೆರ್ಮುದೆ ಪಂಚಾಯತ್ ಕ್ರಾಸ್ನಿಂದ ಅನತಿ ದೂರದಲ್ಲಿ ಆರೋಪಿಗಳು ಮಾದಕದ್ರವ್ಯ ಎಂಡಿಎಂಎ ಮಾರಾಟ ಮಾಡುತ್ತಿದ್ದರು. ಬಜ್ಪೆ ಠಾಣೆಯ ಪಿಎಸ್ಐ ರೇವಣಸಿದ್ದಪ್ಪರವರು ಸಿಬ್ಬಂದಿಯೊಂದಿಗೆ ದಾಳಿನಡೆಸಿ ಬಂಧಿಸಿದ್ದಾರೆ. ಬಂಧಿತರಿಂದ 50,000 ರೂ. ಮೌಲ್ಯದ 9.11 ಗ್ರಾಂ ತೂಕದ ಮಾದಕದ್ರವ್ಯ ಎಂಡಿಎಂಎ ಸೇರಿದಂತೆ 2 ಮೊಬೈಲ್ ಪೋನ್ಗಳು, ಒಂದು ಬೈಕ್ ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರ ವಿರುದ್ಧ ಮಾದಕವಸ್ತು ಕಾಯ್ದೆಯಂತೆ ಪ್ರಕರಣ ದಾಖಲಿಸಿಕೊಂಡಿರುತ್ತಾರೆ. ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿರುತ್ತಾರೆ.
ಬಂಟ್ವಾಳ: ಖಾಸಗಿ ಬಸ್ ಬೈಕ್ಗೆ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲಿಯೇ ಓರ್ವ ಸಾವನ್ನಪ್ಪಿದ್ದು ಇನ್ನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಬಂಟ್ವಾಳದ ಕಡೆಗೋಳಿ ಎಂಬಲ್ಲಿ ಭಾನುವಾರ ಸಂಭವಿಸಿದೆ. ಕಡೆಗೋಳಿ ನಿವಾಸಿ ಪ್ರವೀಣ (30) ಮೃತ ದುರ್ದೈವಿ. ಸಂದೀಪ ಗಂಭೀರವಾಗಿ ಗಾಯಗೊಂಡ ವ್ಯಕ್ತಿ.ಇಬ್ಬರು ಸೇಲ್ಸ್ ಮ್ಯಾನ್ ಕೆಲಸಗಾರರಾಗಿದ್ದು, ತನ್ನ ಖಾಸಗಿ ಕೆಲಸವನ್ನು ಮುಗಿಸಿ ಮನೆಗೆ ಜೊತೆಯಾಗಿ ಪ್ರಯಾಣಿಸುತ್ತಿದ್ದ ವೇಳೆ ಬಸ್ ಡಿಕ್ಕಿಯಾಗಿದೆ. ರಾಷ್ಟ್ರೀಯ ಹೆದ್ದಾರಿ ಮಂಗಳೂರು ಬೆಂಗಳೂರು ರಸ್ತೆಯ ತುಂಬೆ ಸಮೀಪದ ಕಡೆಗೋಳಿ ಎಂಬಲ್ಲಿ ಮಂಗಳೂರಿನಿಂದ ಬಿಸಿರೋಡಿನ ಕಡೆಗೆ ಬರುತ್ತಿದ್ದ ಖಾಸಗಿ ಬಸ್ ಬೈಕ್ ಸವಾರರಿಬ್ಬರಿಗೆ ಡಿಕ್ಕಿಯಾಗಿದೆ. ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿ, ಗಂಭೀರವಾಗಿ ಗಾಯಗೊಂಡ ಇನ್ನೋರ್ವನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಖಾಸಗಿ ಬಸ್ ಚಾಲಕನ ಅತಿವೇಗದ ಮತ್ತು ಅಜಾಗರೂಕತೆಯ ಚಾಲನೆಯ ಪರಿಣಾಮ ಯುವಕ ಬಲಿಯಾಗಿದ್ದಾನೆ ಎಂದು ಹೇಳಲಾಗಿದ್ದು, ಬಸ್ ಚಾಲಕನ ಮೇಲೆ ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಟ್ರಾಫಿಕ್ ಎಸ್.ಐ.ಸುತೇಶ್ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.








