Author: main-admin

ಹೊಸದಿಲ್ಲಿ: ಮಕ್ಕಳ ಅಶ್ಲೀಲ ಚಿತ್ರಗಳನ್ನು ವೀಕ್ಷಿಸುವುದು, ಸಂಗ್ರಹಿಸಿಡುವುದು ಪೋಕ್ಸೊ ಕಾಯ್ದೆಯಡಿ ಅಪರಾಧ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ಯಾವುದೇ ಉದ್ದೇಶವಿಲ್ಲದೆ ಮಕ್ಕಳ ಅಶ್ಲೀಲ ಚಿತ್ರಗಳನ್ನು ವೀಕ್ಷಿಸುವುದು, ಸ್ಟೋರೇಜ್ ಮಾಡುವುದು ಪೋಕ್ಸೊ ಕಾಯ್ದೆ ಅಡಿಯಲ್ಲಿ ಅಪರಾಧವಲ್ಲ ಎಂಬ ಮದ್ರಾಸ್ ಹೈಕೋರ್ಟ್‌ನ ಈ ಹಿಂದಿನ ತೀರ್ಪನ್ನು ಬದಿಗೊತ್ತಿದ ಸುಪ್ರೀಂಕೋರ್ಟ್ ಈ ಮಹತ್ವದ ಆದೇಶವನ್ನು ನೀಡಿದೆ. ಸಿಜೆಐ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಅವರನ್ನೊಳಗೊಂಡ ಪೀಠವು ಈ ಮಹತ್ವದ ತೀರ್ಪನ್ನು ನೀಡಿದ್ದು, ಕ್ರಿಮಿನಲ್‌ ಮೊಕದ್ದಮೆಗಳನ್ನು ರದ್ದುಪಡಿಸುವಲ್ಲಿ ಮದ್ರಾಸ್ ಹೈಕೋರ್ಟ್ ದೋಷ ಎಸಗಿದೆ ಎಂದು ಹೇಳಿದೆ.

Read More

ಮಂಗಳೂರು : ಪಾರ್ಟ್ ಟೈಂ ಜಾಬ್ ಆಫರ್ ನೀಡಿ ವ್ಯಕ್ತಿಯೊಬ್ಬರಿಗೆ 28 ಲಕ್ಷ ರೂಪಾಯಿ ವಂಚಿಸಿರುವ ಬಗ್ಗೆ ಕೋಣಾಜೆ ಠಾಣೆಯಲ್ಲಿ ದೂರು ದಾಖಲಾಗಿದೆ. 2024 ಜುಲೈ 21ರಂದು ಸಂತ್ರಸ್ತ ವ್ಯಕ್ತಿಗೆ ಪಾರ್ಟ್ ಟೈಂ ಜಾಬ್ ಬಗ್ಗೆ ವಾಟ್ಸ್ಆ್ಯಪ್ ಮೆಸೇಜ್ ಬಂದಿತ್ತು. ಮೆಸೇಜ್‌ನಲ್ಲಿ ಟೆಲಿಗ್ರಾಂ ಆ್ಯಪ್ ತೆರೆದು ಲಿಂಕ್ ಕ್ಲಿಕ್ ಮಾಡಲು ತಿಳಿಸಿದ್ದರು. ಅದಕ್ಕೆ 123 ರೂ. ಪಾವತಿಸಿದ್ದು, ಆರೋಪಿಗಳು ತಿಳಿಸಿದಂತೆ ವಿಡಿಯೋದ ಸ್ಕ್ರೀನ್ ಶಾಟ್ ಕಳುಹಿಸಿದ್ದಕ್ಕೆ ಅವರಿಗೆ 130 ರೂ. ಹಾಕಿದ್ದರು. ಆ ಬಳಿಕ ಕಳುಹಿಸಿರುವ ವಿಡಿಯೋ ತಪ್ಪಾಗಿದೆಯೆಂದು ಮತ್ತೊಂದು ಲಿಂಕ್ ಕಳುಹಿಸಿದ್ದರು. ಅಲ್ಲದೆ ವ್ಯಕ್ತಿಗೆ ಹೆಚ್ಚಿನ‌ ಲಾಭದ ಆಮೀಷವೊಡ್ಡಿ 1 ಸಾವಿರ ಹಾಕಲು ಸೂಚಿಸಿದ್ದರು. ಅದರಲ್ಲಿ ಅವರಿಗೆ 1300 ರೂ. ಹಣ ಬಂದಿರುವುದು ತೋರಿಸಿತ್ತು. ಆ ಬಳಿಕ ವಂಚಕರ ಮಾತು ನಂಬಿ ಅವರು ನೀಡಿರುವ ಬೇರೆಬೇರೆ ಖಾತೆಗಳಿಗೆ ಒಟ್ಟು 28,18,065 ರೂ. ಹಣವನ್ನು ಪಾವತಿಸಿದ್ದಾರೆ. ಆದರೆ ಆ ಬಳಿಕ ಹಣ ಹಿಂದಿರುಗಿ ಪಾವತಿಯಾಗಲೇ ಇಲ್ಲ‌. ಇದರಿಂದ ಸಂತ್ರಸ್ತ ವ್ಯಕ್ತಿ ಮೋಸ…

Read More

ಅಂಕೋಲಾ: ಶಿರೂರು ಗುಡ್ಡ ಕುಸಿತದ ಮೂರನೇ ಹಂತದ ಮೂರನೇ ದಿನದ ಶೋಧ ಕಾರ್ಯಾಚರಣೆ ವೇಳೆ ಮೂಳೆಯೊಂದು ಸಿಕ್ಕಿದೆ. ಗಂಗಾವಳಿ ನದಿಯ ಆಳದಿಂದ ಮೇಲೆತ್ತಲಾದ ಮಣ್ಣು ರಾಶಿಯಲ್ಲಿ ಮೂಳೆಯ ತುಂಡೊಂದು ಪತ್ತೆಯಾಗಿದ್ದು, ಇದು ಜುಲೈ 16 ರಂದು ನಡೆದ ದುರ್ಘಟನೆಯಲ್ಲಿ ಕಣ್ಮರೆಯಾಗಿ ಇದುವರೆಗೂ ಪತ್ತೆಯಾಗದ ಮೂವರಲ್ಲಿ ಯಾರದಾದರೂ ಆಗಿರಬಹುದೇ ಎಂಬ ಜಿಜ್ಞಾಸೆ ಆರಂಭವಾಗಿದೆ. ಇದು ಮನುಷ್ಯರ ಮೂಳೆಯೇ ಅಥವಾ ಯಾವುದೋ ಪ್ರಾಣಿಯ ಮೂಳೆಯೇ ಎನ್ನುವ ಪ್ರಶ್ನೆಯೂ ಕಾಡಲಾರಂಭಿಸಿದ. ಶಿರೂರು ದುರಂತದಲ್ಲಿ ಕಣ್ಮರೆಯಾಗಿರುವ ಶಿರೂರಿನ ಜಗನ್ನಾಥ ನಾಯ್ಕ, ಲೋಕೇಶ ನಾಯ್ಕ, ಮತ್ತು ಕೇರಳದ ಲಾರಿ ಚಾಲಕ ಅರ್ಜುನ್ ಅವರ ಮೃತದೇಹಗಳು ಘಟನೆ ಸಂಭವಿಸಿ ಎರಡು ತಿಂಗಳು ಕಳೆದರೂ ಪತ್ತೆಯಾಗಿಲ್ಲ. ಕಣ್ಮರೆಯಾದವರ ಎಲುಬಿನ ತುಂಡಾದರೂ ಸಿಕ್ಕರೆ ಸಂಸ್ಕಾರ ಕಾರ್ಯ ನಡೆಸುವ ನಿರೀಕ್ಷೆಯಲ್ಲಿ ಅವರ ಕುಟುಂಬದವರಿದ್ದಾರೆ. ಹೀಗಾಗಿ ಪ್ರತಿದಿನ ಶೋಧ ಕಾರ್ಯಾಚರಣೆ ಸ್ಥಳದಲ್ಲಿ ಕುಟುಂಬದವರು ಹಾಜರಿರುವುದು ಕಂಡುಬರುತ್ತಿದೆ. ವೈಜ್ಞಾನಿಕ ಪರೀಕ್ಷೆ ಬಳಿಕವೇ ಈ ಮೂಳೆಯ ಕುರಿತು ನಿಖರವಾದ ಮಾಹಿತಿ ಸಿಗಲಿದೆ.

Read More

ನವದೆಹಲಿ : ಪಡಿತರ ಚೀಟಿ ಪಡೆಯಲು ಪಡಿತರ ಚೀಟಿ ಅತ್ಯಗತ್ಯ. ಮುಂಬರುವ ಹಬ್ಬಗಳಿಗೆ ಮುನ್ನ ಕೇಂದ್ರ ಸರ್ಕಾರ ಈ ವಿಚಾರದಲ್ಲಿ ಮಹತ್ವದ ನಿರ್ಧಾರ ಕೈಗೊಂಡಿದ್ದು, ಅಸಂಖ್ಯಾತ ಫಲಾನುಭವಿಗಳಿಗೆ ನೆಮ್ಮದಿ ತಂದಿದೆ. ಬಹಳ ಹಿಂದೆಯೇ ಕೇಂದ್ರ ಸರ್ಕಾರವು ಪಡಿತರ ಚೀಟಿಗೆ ಇ-ಕೆವೈಸಿ (ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್) ಅನ್ನು ಕಡ್ಡಾಯಗೊಳಿಸಿತ್ತು. ಆಹಾರ ಸಾಮಗ್ರಿಗಳ ನಿರಂತರ ವಿತರಣೆಯನ್ನು ಖಚಿತಪಡಿಸಿಕೊಳ್ಳಲು ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಎಲ್ಲಾ ಫಲಾನುಭವಿಗಳಿಗೆ ಸೂಚಿಸಲಾಯಿತು. ಆದಾಗ್ಯೂ, ಅನೇಕರು ತಮ್ಮ ಇ-ಕೆವೈಸಿಯನ್ನು ಇನ್ನೂ ಪೂರ್ಣಗೊಳಿಸಿಲ್ಲ. ಇದನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಪಡಿತರ ವಸ್ತುಗಳ ಉಚಿತ ವಿತರಣೆಯನ್ನು ನಿರ್ವಹಿಸಲು ಮತ್ತು ಪೂರೈಕೆಯಲ್ಲಿ ಯಾವುದೇ ಅಡಚಣೆಯನ್ನು ತಡೆಗಟ್ಟಲು, ಫಲಾನುಭವಿಗಳು ತಮ್ಮ ಇ-ಕೆವೈಸಿ ಪ್ರಕ್ರಿಯೆಯನ್ನು ಶೀಘ್ರವಾಗಿ ಪೂರ್ಣಗೊಳಿಸಲು ಒತ್ತಾಯಿಸಲಾಗಿದೆ. ಈ ವಿಧಾನವನ್ನು ಇನ್ನೂ ಪೂರ್ಣಗೊಳಿಸದವರಿಗೆ ಹೆಚ್ಚುವರಿ ಸಮಯವನ್ನು ನೀಡಲಾಗಿದೆ. ಮೋದಿ ಸರ್ಕಾರವು ರೇಷನ್ ಕಾರ್ಡ್ ಇ-ಕೆವೈಸಿ ಗಡುವನ್ನು ಸೆಪ್ಟೆಂಬರ್ 30 ರವರೆಗೆ ವಿಸ್ತರಿಸಿದೆ. ಪಡಿತರ ಚೀಟಿ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಹೆಚ್ಚಿನ ತೊಂದರೆ…

Read More

ಆಂಧ್ರಪ್ರದೇಶ: ತಿರುಪತಿ ತಿರುಮಲದಲ್ಲಿ ಲಡ್ಡು ವಿವಾದ ಉಂಟಾದ ಬಳಿಕ ಸರಕಾರ ನಂದಿನಿ ತುಪ್ಪಕ್ಕೆ ಬೇಡಿಕೆ ಇಟ್ಟಿದೆ.  ಒಂದು ತಿಂಗಳ ಹಿಂದೆ ಟಿಟಿಡಿ ಕೆಎಂಎಫ್‌ಗೆ ಟೆಂಡರ್ ನೀಡಿದ ನಂತರ ನಂದಿನಿ ತುಪ್ಪ ಪೂರೈಕೆಯನ್ನು ಪುನಃ ಆರಂಭಿಸಲಾಗಿದೆ ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಎಂ ಕೆ ಜಗದೀಶ್ ಹೇಳಿದ್ದಾರೆ. ತಿರುಪತಿ ಲಡ್ಡು ವಿವಾದದ ಬಳಿಕ ಕೆಎಮ್‌ಎಫ್‌ ಹೈ ಅಲರ್ಟ್‌: “ನಾವು ಒಂದು ತಿಂಗಳ ಹಿಂದೆ ತುಪ್ಪವನ್ನು(ಟಿಟಿಡಿಗೆ) ಸರಬರಾಜು ಮಾಡುತ್ತಿದ್ದೇವೆ. ನಾವು ವಾಹನಗಳಿಗೆ ಜಿಪಿಎಸ್ ಸಿಸ್ಟಮ್ ಮತ್ತು ಜಿಯೋ ಲೊಕೇಶನ್ ಸಾಧನಗಳನ್ನು ಅಳವಡಿಸಿದ್ದೇವೆ. ಇದರಿಂದ ವಾಹನ ಎಲ್ಲಿ ನಿಲ್ಲುತ್ತವೆ ಎಂಬುದನ್ನು ನಾವು ಕಂಡುಹಿಡಿಯಬಹುದು. ಇದು ಎಲ್ಲಿಯೂ ಕಲಬೆರಕೆ ಮಾಡದಂತೆ ನೋಡಿಕೊಳ್ಳಲು ಸಹಾಯಕವಾಗುತ್ತದೆ” ಎಂದು ಜಗದೀಶ್ ತಿಳಿಸಿದ್ದಾರೆ. ಕೆಎಂಎಫ್, ಟಿಟಿಡಿಗೆ 350 ಟನ್ ತುಪ್ಪ ಪೂರೈಸುವ ಗುತ್ತಿಗೆ ಪಡೆದುಕೊಂಡಿದೆ. ಅಗತ್ಯ ಬಿದ್ದಾಗ ತುಪ್ಪ ಪೂರೈಕೆ ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ. ವಿಶ್ವವಿಖ್ಯಾತ ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿದೆ ಎಂದು ಸ್ವತಃ ಆಂಧ್ರ…

Read More

ಉಡುಪಿ: ಧಾರ್ಮಿಕ ಶ್ರದ್ಧಾ ಕೇಂದ್ರಗಳು ಸರ್ಕಾರದ ಕೈಯಲ್ಲಿ ಇರಬಾರದು. ಅದು ಹಿಂದೂ ಸಂಸ್ಥೆಗಳ ಕೈಯಲ್ಲಿರಬೇಕು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿರುವುದು ತಿರುಪತಿ ಲಡ್ಡು ಪ್ರಸಾದ ಘಟನೆಯಿಂದ ಸತ್ಯವಾಗಿ ನಮಗೆ ಕಾಣುತ್ತದೆ. ಹೀಗಾಗಿ ದೇವಸ್ಥಾನವನ್ನು ಶೀಘ್ರವಾಗಿ ಸರ್ಕಾರದ ಸ್ವಾಧೀನದಿಂದ ಮುಕ್ತಗೊಳಿಸಬೇಕು ಎಂದು ಪೇಜಾವರ ವಿಶ್ವಪ್ರಸನ್ನ ಶ್ರೀಗಳು ಹೇಳಿದರು. ತಿರುಪತಿ ಘಟನೆಯ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಅವರು, ಲಡ್ಡು ಪ್ರಸಾದಕ್ಕೆ ದನದ ತುಪ್ಪದ ಬದಲು ಪ್ರಾಣಿ ಜನ್ಯ ಕೊಬ್ಬಿನ ಮಿಶ್ರಣ ಬಳಕೆ ಮಾಡಿರುವ ವಿಚಾರ ಕೇಳಿ ಖೇದವಾಗಿದೆ. ಮೀನಿನ ಎಣ್ಣೆ, ಹಂದಿ ಹಸುವಿನ ಕೊಬ್ಬ ಬಳಸಿ ಪ್ರಸಾದ ತಯಾರಿಸಿರುವುದು ಸಮಾಜಕ್ಕೆ ಭಗವಂತನಿಗೆ ಬಗೆದಿರುವ ಅಪಚಾರ. ಇಂತಹ ಕೆಲಸಕ್ಕೆ ಸರ್ಕಾರ ಮುಂದಾಗಿದ್ದು ಖಂಡನೀಯ ಎಂದರು. ತಿರುಪತಿ ಶ್ರೀನಿವಾಸನನ್ನು ಗೋರಕ್ಷಕ ಎಂದು ಕಾಣುತ್ತೇವೆ. ಅಂತಹ ಶ್ರೀನಿವಾಸ ದೇವರಿಗೆ ಹಸು ಕೊಬ್ಬು ಬಳಸಿದ ಪ್ರಸಾದ ನೀಡಿರುವುದು ಅಪರಾಧ. ಹಿಂದೂಗಳ ಧಾರ್ಮಿಕ ಶ್ರದ್ಧೆಗೆ ಮಾಡಿರುವ ಹಲ್ಲೆ ಇದು. ಹಿಂದೂಗಳು ಉಪಯೋಗ ಅನರ್ಹವಾಗಿರುವ ವಸ್ತುಗಳನ್ನು ತಯಾರಿಸುವ ಅಡ್ಡೆಗಳನ್ನು ಕಂಡುಹಿಡಿದು ಶಿಕ್ಷಿಸಿ…

Read More

ಬೆಳ್ತಂಗಡಿ; 2022ರ ಅ.9ರಂದು ಬೆಳ್ತಂಗಡಿಯಲ್ಲಿ ನಡೆದ ಅಪ್ರಾಪ್ತೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್‌ಟಿಎಸ್‌ಸಿ-2 ಫೋಕ್ಸೋ ನ್ಯಾಯಾಲಯವು ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಆರೋಪಿ ಸದಾಶಿವ ಎಂಬಾತ 2022ರ ಅ.9ರಂದು ಬೆಳಗ್ಗೆ 10ಕ್ಕೆ ಬೆಳ್ತಂಗಡಿ ಸಮೀಪದಲ್ಲಿರುವ ಬಾಲಕಿಯ ಮನೆಯಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿ, ಮನೆಗೆ ತೆರಳಿ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿದ್ದ ಎಂದು ಆರೋಪಿಸಲಾಗಿತ್ತು. 2022 ಅ.10ರಂದು ಮತ್ತೆ ಫೇಸ್‌ಬುಕ್ ಸಂದೇಶ ಹಾಕಿದ್ದ ಆರೋಪಿ ಬಾಲಕಿ ಬಳಿ ‘ನನ್ನನ್ನು ಕ್ಷಮಿಸು, ಇನ್ನು ನಿನಗೆ ತೊಂದರೆ ಕೊಡಲ್ಲ, ನನ್ನಷ್ಟಕ್ಕೆ ನಾನಿರುವೆ’ ಎಂದು ಹೇಳಿದ್ದ. ಇದರಿಂದ ನೊಂದ ಬಾಲಕಿ ಡೀಸೆಲ್ ಸೇವನೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಈ ಪ್ರಕರಣದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ 14 ಸಾಕ್ಷಿದಾರರನ್ನು ವಿಚಾರಣೆ ನಡೆಸಲಾಗಿತ್ತು. 33 ದಾಖಲೆಗಳನ್ನು ಗುರುತಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ,…

Read More

ಉಪ್ಪಿನಂಗಡಿ: ಅಡಿಕೆ ತೋಟದಲ್ಲಿ ಅಕ್ರಮವಾಗಿ ಗೋ ವಧೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಉಪ್ಪಿನಂಗಡಿ ಪೋಲಿಸರು ದಾಳಿ ನಡೆಸಿದ ಘಟನೆ ಪುತ್ತೂರು ತಾಲೂಕು 34 ನೇ ನೆಕ್ಕಿಲಾಡಿ ಗ್ರಾಮದ ಆದರ್ಶ ನಗರದ ಕಜೆ ಎಂಬಲ್ಲಿ ನಡೆದಿದೆ. ಆರೋಪಿಗಳನ್ನು ರಫಿಕ್, ನಝೀರ್, ಉಬೈದ್, ಅಶ್ರಫ್, ನಿಜಾಮುದ್ದೀನ್ ಎಂದು ಗುರುತಿಸಲಾಗಿದೆ. ಖತೀಜಮ್ಮ ಎಂಬವರ ಅಡಿಕೆ ತೋಟದಲ್ಲಿ ಅಕ್ರಮವಾಗಿ ಗೋ ವಧೆ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಉಪ್ಪಿನಂಗಡಿ ಪೊಲೀಸ್‌ ಠಾಣಾ ಪೊಲೀಸ್‌ ಉಪ ನಿರೀಕ್ಷಕರಾದ ಅವಿನಾಶ್‌ ಹೆಚ್‌ ರವರು ಠಾಣಾ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿರುತ್ತಾರೆ. ದಾಳಿ ವೇಳೆ ಆರೋಪಿಗಳು ಪರಾರಿಯಾಗಿದ್ದು, ಸ್ಥಳದಲ್ಲಿ ಅಂದಾಜು ರೂ 24,000/-ಮೌಲ್ಯದ 96 ಕೆ.ಜಿ ದನದ ಮಾಂಸ, ದೇಹದ ಅಂಗಾಂಗಗಳು, ಮಾಂಸ ಮಾಡಲು ಬಳಸಿದ ಚೂರಿಗಳು, ಕಬ್ಬಿಣದ ಎಲೆಕ್ಟ್ರೋನಿಕ್ ತೂಕ ಮಾಪನ ಹಾಗು ಇತರ ಸೊತ್ತುಗಳು, 2 ಅಟೋರಿಕ್ಷಾಗಳು, 1 ಮೊಟಾರ್ ಸೈಕಲ್ ಪತ್ತೆಯಾಗಿರುತ್ತದೆ. ಸೊತ್ತುಗಳನ್ನು ವಶಕ್ಕೆ ಪಡೆದು, ಆರೋಪಿಗಳ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ…

Read More

ಬೆಂಗಳೂರು : ರಾಜ್ಯದ ಗ್ರಾಮೀಣ ಜನತೆಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಜನನ, ಮರಣದ ನೋಂದಣಿಯನ್ನು ಇನ್ನು ಮುಂದೆ ಗ್ರಾಮ ಪಂಚಾಯಿತಿಯಲ್ಲೇ ಆರಂಭಿಸಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಜನನ, ಮರಣ ನೋಂದಣಿ ವ್ಯವಸ್ಥೆಗೆ ಬಲ ತುಂಬುವ ಜೊತೆಗೆ 30 ದಿನದೊಳಗೆ ನೋಂದಾಯಿಸಲು ಅನುಕೂಲವಾಗುವಂತೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳನ್ನು ಜನನ, ಮರಣ ಉಪನೋಂದಣಾಧಿಕಾರಿಗಳನ್ನಾಗಿ ಸರ್ಕಾರ ನೇಮಿಸಿದೆ. ನೋಂದಣಿ ಹೇಗೆ? * 21 ದಿನದೊಳಗೆ ನೋಂದಾಯಿಸಿದರೆ ಪ್ರಮಾಣ ಪತ್ರ ಉಚಿತ ವಿತರಣೆ * 21 ದಿನಗಳ ಬಳಿಕ 30 ದಿನದೊಳಗೆ ನೋಂದಾಯಿಸಿದರೆ ₹2 ಶುಲ್ಕ * 30 ದಿನಗಳ ಬಳಿಕ ಒಂದು ವರ್ಷದೊಳಗಾದರೆ ತಹಶೀಲ್ದಾರರ ಪತ್ರ ಲಗತ್ತಿನ ಜೊತೆ ₹5 ಶುಲ್ಕ * 1 ವರ್ಷ ನಂತರವಾದರೆ ಮೊದಲನೇ ವರ್ಗದ ದಂಡಾಧಿಕಾರಿ ಅಥವಾ ಮಹಾಪ್ರಾಂತ ದಂಡಾಧಿಕಾರಿ ಆದೇಶ ಪತ್ರ ಲಗತ್ತು 10 ಶುಲ್ಕ

Read More

ಬಜಪೆ:ಗಾಂಜಾ ಸೇವನೆ ಮಾಡುತ್ತಿದ್ದ ಮೂವರನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ.ಬಂಧಿತರನ್ನು ಕುಪ್ಪೆಪದವಿನ ನಿವಾಸಿಗಳಾದ ಮಹ್ರೂಪ್ (22),ಮಹಮ್ಮದ್ ಪೈಝನ್(22) ಹಾಗೂ ಎಡಪದವಿನ ಜೀವನ್(24) ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳು ಸಾರ್ವಜನಿಕ ಸ್ಥಳಗಳಲ್ಲಿ ಗಾಂಜಾ ಸೇವನೆ ಮಾಡುತ್ತಿರುವ ಖಚಿತ ಮಾಹಿತಿಯ ಮೇರೆಗೆ ಎಡಪದವು,ಸೂರಲ್ಪಾಡಿ ಮತ್ತು ಪೆರ್ಮುದೆ ಮುಂತಾದ ಕಡೆಗಳಿಂದ ಮೂವರು ಯುವಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ಬಜಪೆ ಠಾಣಾ ಪೊಲೀಸ್ ನಿರೀಕ್ಷಕ ಸಂದೀಪ್ ಜಿ.ಎಸ್,ಪಿ ಎಸ್.ಐ ರೇವಣ್ಣ ಸಿದ್ದಪ್ಪ,ಪಿ.ಎಸ್.ಐ ಶ್ರೀಮತಿ ಲತಾ,ಸಿಬ್ಬಂದಿಗಳಾದ ಸುಜನ್,ಮಂಜುನಾಥ್,ಬಸವರಾಜ್ ಪಾಟೀಲ್ ,ಚಿದಾನಂದ,ಚಂದ್ರಕಾಂತ ಹಾಗೂ ಕೆಂಚನಗೌಡ ಪಾಲ್ಗೊಂಡಿದ್ದರು.

Read More