ಕಾಸರಗೋಡು: ಉಪ್ಪಳದ ಮನೆಯೊಂದಕ್ಕೆ ದಾಳಿ ನಡೆಸಿದ ಡಿವೈಎಸ್ಪಿ ಮನೋಜ್ ನೇತೃತ್ವದ ಪೊಲೀಸ್ ತಂಡ ಸುಮಾರು 3.5 ಕೋಟಿ ರೂ. ನ ಮಾದಕ ವಸ್ತುವನ್ನು ವಶಪಡಿಸಿಕೊಂಡ ಘಟನೆ ನಡೆದಿದೆ. ಉಪ್ಪಳ ಪತ್ವಾಡಿ ಸಮೀಪದ ಮನೆಯಿಂದ ಎಂಡಿಎಂಎ ಸೇರಿದಂತೆ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಸ್ಗರ್ ಅಲಿ ಎಂಬಾತನನ್ನು ಪೊಲೀಸರು ವಶಕ್ಕೆ ತೆಗೆದುಕೊಳ್ಳಲಾಗಿದೆ. ಆಗಸ್ಟ್ 30 ರಂದು ಮೇಲ್ಪರಂಬದಲ್ಲಿ 49.33 ಗ್ರಾಂ ಎಂಡಿಎಂಎ ಸಹಿತ ಅಬ್ದುಲ್ ರಹೀಂ ಎಂಬಾತನನ್ನು ಬಂಧಿಸಲಾಗಿತ್ತು. ಈತನಿಂದ ಲಭಿಸಿದ ಖಚಿತ ಮಾಹಿತಿ ಮೇರೆಗೆ ಉಪ್ಪಳದ ಮನೆಗೆ ದಾಳಿ ನಡೆಸಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಕಾರ್ಡ್ ಬೋರ್ಡ್ ಪೆಟ್ಟಿಗೆಯಲ್ಲಿರಿಸಲಾಗಿದ್ದ 3ಕಿಲೋ ಎಂಡಿಎಂಎ ಹಾಗೂ ಒಂದು ಕಿಲೋ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಇದಲ್ಲದೆ ಹಲವಾರು ಮಾದಕ ದ್ರವ್ಯ ಹಾಗೂ ಮಾತ್ರೆಯನ್ನು ವಶಪಸಿಕೊಳ್ಳಲಾಗಿದೆ. ಹಲವು ವರ್ಷಗಳ ಹಿಂದೆ ಈ ಮನೆಯನ್ನು ಖರೀದಿಸಿ ಮಾದಕ ವಸ್ತು ವಹಿವಾಟು ನಡೆಸಿದ್ದಾಗಿ ಪೊಲೀಸರಿಗೆ ಮಾಹಿತಿ ತಿಳಿದು ಬಂದಿದೆ.ಪೊಲೀಸರು ದಾಳಿ ನಡೆಸಿ, ವಿಚಾರಣೆ ನಡೆಸುತ್ತಿದ್ದಾರೆ.
Author: main-admin
ಬೆಂಗಳೂರು: ದಸರಾ ಹಬ್ಬ ಹಿನ್ನೆಲೆ ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ಶಾಲಾ ಮಕ್ಕಳಿಗೆ ಅಕ್ಟೋಬರ್ 3 ರಿಂದ 20 ತನಕ ದಸರಾ ರಜೆ ಘೋಷಿಸಿದೆ.ಅಕ್ಟೋಬರ್ 3 ರಿಂದ 20ರ ತನಕ ಅಂದರೆ 17 ದಿನಗಳ ಕಾಲ ದಸರಾ ರಜೆ ಸಿಗಲಿದೆ. ಅಕ್ಟೋಬರ್ 21 ರಿಂದ 2ನೇ ಅವಧಿಯು ಪ್ರಾರಂಭವಾಗಲಿದ್ದು, 2025ರ ಏಪ್ರಿಲ್ 10 ತನಕ ನಡೆಯಲಿದೆ. 2024-2025ರ ಶೈಕ್ಷಣಿಕ ವರ್ಷದ ಶಾಲಾ ಅವಧಿಯ ಮಾರ್ಗದರ್ಶಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ, ಶಾಲೆಗಳು ಆರಂಭಕ್ಕೂ ಮುನ್ನ ಪ್ರಕಟಣೆ ಹೊರಡಿಸಿತ್ತು. ಅದರ ನಿಯಮಾನುಸಾರದಂತೆ ರಜೆಗಳು ಘೋಷಣೆಯಾಗಿವೆ. ಈಗ ದಸರಾ ರಜೆ ಹಿನ್ನೆಲೆಯಲ್ಲಿ ಅಕ್ಟೋಬರ್ ತಿಂಗಳಲ್ಲಿ ಕೇವಲ 11 ದಿನಗಳು ತರಗತಿಗಳು ನಡೆಯಲಿವೆ. ಇಡೀ ಕರ್ನಾಟಕದ ಶಾಲೆಗಳಿಗೆ ಒಂದೇ ಮಾರ್ಗದರ್ಶಿ ರೂಪಿಸಿದೆ.
ಬೆಳ್ತಂಗಡಿ: ಅಕ್ರಮವಾಗಿ ಹಣವನ್ನು ಪಣವಾಗಿಟ್ಟುಕೊಂಡು ಇಸ್ಪೀಟು ಎಲೆಗಳಿಂದ ಅಂದರ್-ಬಹಾರ್ ಎಂಬ ಅದೃಷ್ಟದ ಆಟವನ್ನು ಆಡುತ್ತಿದ್ದ ಅಡ್ಡಕ್ಕೆ ಪೊಲೀಸರು ದಾಳಿ ನಡೆಸಿ 23 ಮಂದಿ ಆರೋಪಿಗಳನ್ನು ವಶಕ್ಕೆ ಪಡೆದ ಘಟನೆ ಬೆಳ್ತಂಗಡಿ ತಾಲೂಕು ಮಾಲಾಡಿ ಗ್ರಾಮದ, ಮಡಂತ್ಯಾರಿನಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕು ಮಾಲಾಡಿ ಗ್ರಾಮದ ಮಡಂತ್ಯಾರು ಪೇಟೆಯ ಬಳಿಯಿರುವ ಅಲ್ಬರ್ಟ್ ಡಿ ಸೋಜಾ ಎಂಬವರಿಗೆ ಸೇರಿದ ಕಟ್ಟಡದ ಹಿಂಭಾಗದಲ್ಲಿರುವ ಶೆಡ್ನೊಳಗೆ ಸುಮಾರು 15-20 ಜನರು ಅಕ್ರಮವಾಗಿ ಹಣವನ್ನು ಪಣವಾಗಿಟ್ಟುಕೊಂಡು ಇಸ್ಪೀಟು ಎಲೆಗಳಿಂದ ಉಲಾಯಿ –ಪಿದಾಯಿ (ಅಂದರ್-ಬಹಾರ್ ) ಎಂಬ ಅದೃಷ್ಟದ ಆಟವನ್ನು ಆಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ, ಪುಂಜಾಲಕಟ್ಟೆ ಪೊಲೀಸ್ ಠಾಣಾ ಪಿಎಸ್ಐ (ಕಾ&ಸು) ನಂದಕುಮಾರ್ ಎಂ.ಎಂ ರವರು ಸಿಬ್ಬಂದಿಗಳೊಂದಿಗೆ ಧಾಳಿ ನಡೆಸಿ ಕೃತ್ಯದಲ್ಲಿ ತೊಡಗಿದ್ದ 23 ಮಂದಿ ಆರೋಪಿಗಳನ್ನು ವಶಕ್ಕೆ ಪಡೆದು, ಜುಗಾರಿ ಆಟಕ್ಕೆ ಉಪಯೋಗಿಸಿದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ವಶಕ್ಕೆ ಪಡೆದ ನಗದು ಸೇರಿ ಎಲ್ಲಾ ಸೊತ್ತುಗಳ ಅಂದಾಜು ಮೌಲ್ಯ ರೂ 36729/- ಆಗಬಹುದು. ಈ ಬಗ್ಗೆ ಮಾನ್ಯ ನ್ಯಾಯಾಲಯದಿಂದ…
ಮಂಗಳೂರು: ಲಾರಿ ಬೈಕ್ಗೆ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡ ಬಿಬಿಎ ವಿದ್ಯಾರ್ಥಿಯೊಬ್ಬ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ಘಟನೆಯಲ್ಲಿ ಮತ್ತೋರ್ವ ಬೈಕ್ ಸವಾರ ಗಾಯಗೊಂಡಿದ್ದು, ಆತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಬಿ.ಸಿ.ರೋಡ್ ಮೆಲ್ಕಾರ್ ನಿವಾಸಿ, ಕೂಳೂರು ಯೆನೆಪೊಯ ಕಾಲೇಜಿನ ಬಿಬಿಎ ಎರಡನೇ ವರ್ಷದ ವಿದ್ಯಾರ್ಥಿ ಮೊಹಮ್ಮದ್ ಜಾಸಿಂ (18) ಮೃತಪಟ್ಟ ಯುವಕ. ಶಾಹಿದ್ ಸುಲೇಮಾನ್(20) ಎಂಬ ಗಾಯಾಳು ವಿದ್ಯಾರ್ಥಿ. ಶುಕ್ರವಾರ ಎಂದಿನಂತೆ ಕಾಲೇಜು ಮುಗಿಸಿಕೊಂಡು ಶಾಹಿದ್ ಸುಲೇಮಾನ್ ತಮ್ಮ ಸ್ನೇಹಿತ ಮೊಹಮ್ಮದ್ ಜಾಸಿಂನೊಂದಿಗೆ ಬೈಕ್ನಲ್ಲಿ ಕೂಳೂರಿನಿಂದ ಕೆಪಿಟಿ ಕಡೆಗೆ ಸಂಚರಿಸುತ್ತಿದ್ದರು. ಸಂಜೆ 4ಗಂಟೆ ಸುಮಾರಿಗೆ ಕುಂಟಿಕಾನ ಪ್ಲೈಓವರ್ ಬಳಿ ಬರುತ್ತಿದಂತೆ ಅದೇ ಬದಿಯಲ್ಲಿ ಬರುತ್ತಿದ್ದ ಲಾರಿ ನಿರ್ಲಕ್ಷತನ ಮತ್ತು ಅಜಾಗರೂಕತೆಯಿಂದ ಬಂದು ಡಿಕ್ಕಿಯಾಗಿದೆ. ಪರಿಣಾಮ ಬೈಕ್ ಸಹಿತ ರಸ್ತೆಗೆ ಬಿದ್ದ ಮೊಹಮ್ಮದ್ ಜಾಸಿಂರವರಿಗೆ ತಲೆಗೆ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಘಟನೆಯಲ್ಲಿ ಶಾಹಿದ್ ಸುಲೇಮಾನ್ರವರಿಗೆ ಬಲಗಾಲಿನ ಮೂಳೆ ಮುರಿತಗೊಂಡು ಗಾಯಗೊಂಡಿದ್ದಾನೆ. ಈ ಬಗ್ಗೆ ಸಂಚಾರ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
ಮಂಗಳೂರು: ಕೋಟ ಶ್ರೀನಿವಾಸ ಪೂಜಾರಿಯವರಿಂದ ತೆರವಾದ ವಿಧಾನ ಪರಿಷತ್ ಸ್ಥಾನಕ್ಕೆ ಅಕ್ಟೋಬರ್ 21ರಂದು ಉಪ ಚುನಾವಣೆ ನಡೆಯಲಿದೆ. ಈ ಬಗ್ಗೆ ಮಾತನಾಡಿ, ವಿಧಾನ ಪರಿಷತ್ ಸ್ಥಾನಕ್ಕೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ 392 ಸ್ಥಳೀಯಾಡಳಿತಗಳ 6,037 ಮಂದಿ ಮತ ಚಲಾಯಿಸಲಿದ್ದಾರೆ. ನಾಮಪತ್ರ ಸಲ್ಲಿಕೆಗೆ ಸೆಪ್ಟೆಂಬರ್ 26ರಿಂದ ಅಕ್ಟೋಬರ್ 3ರವರೆಗೆ ಅವಕಾಶವಿದೆ. ಅಕ್ಟೋಬರ್ 4ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಅಅಕ್ಟೋಬರ್ 7ರಂದು ನಾಮಪತ್ರ ವಾಪಸ್ಗೆ ಕೊನೆ ದಿನ. ಅಕ್ಟೋಬರ್ 21ರಂದು ಬೆಳಗ್ಗೆ 8ರಿಂದ ಸಂಜೆ 4 ಗಂಟೆವರೆಗೆ ಮತದಾನ ಹಾಗೂ ಅಕ್ಟೋಬರ್ 24ರಂದು ಮತ ಎಣಿಕೆ ನಡೆಯಲಿದೆ ಎಂದರು. ಆದ್ದರಿಂದ ಸೆಪ್ಟೆಂಬರ್ 19ರಿಂದಲೇ ಮಾದರಿ ನೀತಿಸಂಹಿತೆ ಜಾರಿಗೊಂಡಿದ್ದು, ಅಕ್ಟೋಬರ್ 28ರವರೆಗೆ ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯಲ್ಲಿ ಇರಲಿದೆ. ಈ ಅವಧಿಯಲ್ಲಿ ಸರಕಾರದ ಯಾವುದೇ ಅಭಿವೃದ್ಧಿಪರ ಕಾರ್ಯಗಳ ಘೋಷಣೆ ಮಾಡುವಂತಿಲ್ಲ. ಗುದ್ದಲಿ ಪೂಜೆ, ಶಿಲಾನ್ಯಾಸ ನಡೆಸುವಂತಿಲ್ಲ. ಶುಭಾಶಯ ಕೋರಿ ರಾಜಕೀಯ ನಾಯಕರ, ಅಭ್ಯರ್ಥಿಗಳ ಬ್ಯಾನರ್ ಅಳವಡಿಸುವಂತಿಲ್ಲ. ಅಧಿಕಾರಿಗಳು ಕಾರ್ಯಕ್ರಮ ಯಾವುದೇ ಸರ್ಕಾರಿ ಹಾಗೂ…
ಮಂಗಳೂರು: ಲಂಚ ಸ್ವೀಕರಿಸುತ್ತಿದ್ದ ವೇಳೆ ಕಿನ್ನಿಗೋಳಿ ಪಟ್ಟಣ ಪಂಚಾಯತ್ನ ಜೂನಿಯರ್ ಇಂಜಿನಿಯರ್ ಮತ್ತು ಮುಖ್ಯಾಧಿಕಾರಿ ಲೋಕಾಯುಕ್ತ ಪೊಲೀಸ್ ಬಲೆಗೆ ಬಿದ್ದ ಘಟನೆ ನಡೆದಿದೆ. ಪಿಡಬ್ಲ್ಯೂಡಿ ಕ್ಲಾಸ್-1 ಗುತ್ತಿಗೆದಾರರೊಬ್ಬರಿಂದ ಬಿಲ್ ಪಾಸ್ ಮಾಡುವ ಸಲುವಾಗಿ ಹಣದ ಬೇಡಿಕೆ ಇಟ್ಟು ಲಂಚ ಸ್ವೀಕರಿಸುತ್ತಿದ್ದಾಗ ಇಬ್ಬರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ದೂರು ನೀಡಿದ ಗುತ್ತಿಗೆದಾರ 2022-23ನೇ ಸಾಲಿನ 5ನೇ ಹಣಕಾಸು ಯೋಜನೆಯಲ್ಲಿ ಕಿನ್ನಿಗೋಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಎಸ್ ಕೋಡಿ ಸರಕಾರಿ ಕೆರೆ ಅಭಿವೃದ್ಧಿಪಡಿಸುವ ಕಾಮಗಾರಿ ಕಾಂಟ್ರಕ್ಟ್ ಕೆಲಸವನ್ನು ನಿರ್ವಹಿಸಿದ್ದರು. ಈ ಕಾಮಗಾರಿಯ ರೂ 9,77,154 ಮೊತ್ತದ ಬಿಲ್ಲು ಮಂಜೂರಾತಿಯ ಬಗ್ಗೆ ಕಿನ್ನಿಗೊಳಿ ಪಟ್ಟಣ ಪಂಚಾಯತ್ನ ಜೂನಿಯರ್ ಇಂಜಿನಿಯರ್ ನಾಗರಾಜು ರವರಲ್ಲಿ ವಿಚಾರಿಸಿದಾಗ ಬಿಲ್ಲು ಪಾಸ್ ಮಾಡಲು ತನಗೆ ರೂ 37,000 ಲಂಚವನ್ನು ನೀಡುವಂತೆ ಮತ್ತು ಕಿನ್ನಿಗೊಳಿ ಪಟ್ಟಣ ಪಂಚಾಯತ್ನ ಮುಖ್ಯಾಧಿಕಾರಿಯವರಿಗೆ ರೂ 15,000 ಲಂಚವನ್ನು ನೀಡಬೇಕೆಂದು ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಅಲ್ಲದೆ ಜೂನಿಯರ್ ಇಂಜಿನಿಯರ್ ನಾಗರಾಜು…
ಸುಳ್ಯ: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಪೋಕ್ಸೊ ಪ್ರಕರಣದಲ್ಲಿ ಕಾಣಿಯೂರು ಸಮೀಪದ ಜ್ಯೋತಿಷಿ ಪ್ರಸಾದ್ ಪಾಂಗಣ್ಣಾಯ ಎಂಬಾತನನ್ನು ಬೆಳ್ಳಾರೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನಲ್ಲಿ ಕೌನ್ಸಿಲಿಂಗ್ ಸಂದರ್ಭ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ಪ್ರಕರಣ ದಾಖಲಾಗಿದ್ದು, ಬೆಳ್ಳಾರೆ ಪೊಲೀಸರು ಸೆ.19ರ ಮುಂಜಾನೆ ಜಾವ ಪ್ರಸಾದ್ ಪಂಗಣ್ಣಾಯನನ್ನು ಅವರ ಮನೆಯಲ್ಲಿ ಬಂಧಿಸಿದ್ದಾರೆ ಎಂಬ ಮಾಹಿತಿ ಲಭಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಿಕೊಡುವ ಪ್ರಸಾದ್ ಪಾಂಗಣ್ಣಾಯ ಕಾಣಿಯೂರು ಸಮೀಪದ ಬೆಳಂದೂರು ನಿವಾಸಿ ಎಂದು ಪೊಲೀಸರು ತಿಳಿಸಿದ್ದಾರೆ.
ಮೂಲ್ಕಿ: ಇಲ್ಲಿ ಹಸುವೊಂದು ಎರಡು ತಲೆಯ ಕರುವಿಗೆ ಜನ್ಮ ನೀಡಿದೆ. ಈ ವಿಶಿಷ್ಟ ನೋಟವು ಇಡೀ ಹಳ್ಳಿಯನ್ನು ಬೆಚ್ಚಿಬೀಳಿಸಿದೆ. ಗ್ರಾಮಸ್ಥರು ಇದನ್ನು ದೇವರ ಪವಾಡವೆಂದು ಪರಿಗಣಿಸುತ್ತಿದ್ದಾರೆ. ಎರಡು ತಲೆಯ ಕರುಗಳ ಆಘಾತಕಾರಿ ಘಟನೆಯೊಂದು ಮೂಲ್ಕಿ ತಾಲೂಕಿನ ಕಿನ್ನಿಗೋಳಿ ಗ್ರಾಮದ ಗ್ರಾಮವೊಂದರಲ್ಲಿ ನಡೆದಿದೆ. ಈ ಕರುವಿಗೆ ಎರಡು ತಲೆಗಳು, ಒಂದು ದೇಹ, ಒಟ್ಟು ನಾಲ್ಕು ಕಣ್ಣುಗಳಿವೆ, ಅವುಗಳಲ್ಲಿ ಮಧ್ಯದ ಎರಡು ಕಣ್ಣುಗಳು ಕೆಲಸ ಮಾಡುತ್ತಿಲ್ಲ. ಉಳಿದ ಎರಡು ಕಣ್ಣುಗಳು ಸಾಮಾನ್ಯವಾಗಿ ಕಾರ್ಯನಿರ್ವಹಿಸುತ್ತಿವೆ. ಕರುವಿಗೆ ಈಗ ನಿಲ್ಲಲು ಸಾಧ್ಯವಾಗುತ್ತಿಲ್ಲ ಎನ್ನಲಾಗಿದೆ. ಪಶುವೈದ್ಯರು ಏನು ಹೇಳುತ್ತಾರೆ: ಈ ಸಂದರ್ಭದಲ್ಲಿ, ಇದು ಅಪರೂಪದ ಘಟನೆ ಎಂದು ಪಶುವೈದ್ಯರು ಹೇಳುತ್ತಾರೆ. ಇದು ಸಾಮಾನ್ಯವಾಗಿ ಜನ್ಮಜಾತ ಅಸ್ವಸ್ಥತೆಯಿಂದ ಉಂಟಾಗುತ್ತದೆ. ಆದಾಗ್ಯೂ, ಈ ಕರು ಬದುಕುಳಿಯುವ ಸಾಧ್ಯತೆಗಳು ತುಂಬಾ ಕಡಿಮೆ. ಗ್ರಾಮಸ್ಥರು ಈ ಘಟನೆಯನ್ನು ದೇವರ ಪವಾಡವೆಂದು ಪರಿಗಣಿಸುತ್ತಿದ್ದಾರೆ. ಅವರು ಈ ಕರುವನ್ನು ಪೂಜಿಸುತ್ತಿದ್ದಾರೆ ಮತ್ತು ಅದಕ್ಕೆ ದೀರ್ಘಾಯುಷ್ಯವನ್ನು ಹಾರೈಸುತ್ತಿದ್ದಾರೆ. ಇದು ಮಾತ್ರವಲ್ಲ, ಹತ್ತಿರದ ಹಳ್ಳಿಗಳ ಜನರು ಸಹ ಈ ಕರುವನ್ನು ನೋಡಲು…
ಬೆಳ್ತಂಗಡಿ: ದಂಪತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಶಿಪಟ್ನ ಗ್ರಾಮದ ಉರ್ದುಗುಡ್ಡೆ ಎಂಬಲ್ಲಿ ಸಂಭವಿಸಿದೆ. ಸ್ಥಳೀಯ ನಿವಾಸಿಗಳಾದ ನೊಣಯ್ಯ ಪೂಜಾರಿ (63) ಹಾಗೂ ಅವರ ಪತ್ನಿ ಬೇಬಿ (46) ಆತ್ಮಹತ್ಯೆ ಮಾಡಿಕೊಂಡವರು. ತಮ್ಮ ಮನೆಯ ಸಮೀಪದ ಕಾಡಿನಲ್ಲಿ ಇವರಿಬ್ಬರೂ ಅತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ನೊಣಯ್ಯ ಪೂಜಾರಿ ಕಳೆದ ಐದು ವರ್ಷಗಳಿಂದ ತಲೆನೋವಿನಿಂದ ಬಳಲುತ್ತಿದ್ದರು ಎನ್ನಲಾಗಿದೆ. ಪತ್ನಿ ಬೇಬಿ ಮಕ್ಕಳಿಲ್ಲದ ಕೊರಗಲ್ಲಿದ್ದರು. ಇದುವೇ ಆತ್ಮಹತ್ಯೆಗೆ ಕಾರಣವಾಗಿರಬಹುದು ಎಂದು ಅನುಮಾನಿಸಲಾಗಿದೆ. ನೋಣಯ್ಯ ಪೂಜಾರಿಗೆ ಇದು ಎರಡನೇ ಮದುವೆಯಾಗಿದ್ದು, ಅವರ ಮೊದಲ ಪತ್ನಿ ಹತ್ತು ವರ್ಷದ ಹಿಂದೆ ಮೃತಪಟ್ಟಿದ್ದರು. ಕೆಲವು ವರ್ಷಗಳ ಹಿಂದೆ ಅವರು ಬೇಬಿಯನ್ನು ವಿವಾಹವಾಗಿದ್ದರು. ಮೊದಲನೆ ಪತ್ನಿಗೆ ಐವರು ಪುತ್ರರು, ಓರ್ವ ಪುತ್ರಿ ಇದ್ದಾರೆ ಎಂದು ತಿಳಿದು ಬಂದಿದೆ.ವೇಣೂರು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಉಡುಪಿ : ವಿದ್ಯುತ್ ಕಂಬಕ್ಕೆ ಶಾಲಾ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ವಾಹನದ ಮುಂಭಾಗ ಸಂಪೂರ್ಣ ಜಖಂ ಆಗಿದ್ದು, ಚಾಲಕನ ತಲೆಗೆ ಗಂಭೀರ ಗಾಯವಾದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತೆಕ್ಕಟ್ಟೆ ಬಸ್ ನಿಲ್ದಾಣದಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.ಹೆಮ್ಮಾಡಿಯ ಜನತಾ ಪಿಯು ಕಾಲೇಜಿನ ಶಾಲಾ ವಾಹನ ಇದಾಗಿದ್ದು, ಚಾಲಕನ ಅತೀ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಹೆದ್ದಾರಿಯಲ್ಲಿ ಬೈಕೊಂದಕ್ಕೆ ಢಿಕ್ಕಿ ತಪ್ಪಿಸುವ ಭರದಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡ ವಾಹನ ಹೆದ್ದಾರಿ ಪಕ್ಕದ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಹೈಮಾಸ್ಟ್ ವಿದ್ಯುತ್ ಕಂಬ ಮುರಿದುಬಿದ್ದಿದೆ. ಶಾಲಾ ವಾಹನದಲ್ಲಿ ವಿದ್ಯಾರ್ಥಿಗಳು ಇಲ್ಲದೇ ಇದ್ದುದರಿಂದ ಸಂಭವಿಸಬಹುದಾಗಿದ್ದ ಅನಾಹುತ ತಪ್ಪಿದೆ. ಕೋಟ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲು ಮಾಡಿದ್ದಾರೆ.










