Author: main-admin

ಮಂಗಳೂರು: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಗಲಭೆ ಪ್ರಕರಣ ಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಮಲ್ಲಿಕಟ್ಟೆ ಸರ್ಕಲ್ ಬಳಿ ವಿಶ್ವ ಹಿಂದೂ ಪರಿಷದ್ ಧರಣಿ ಕೈಗೊಂಡಿದೆ. ಈ ವೇಳೆ ವಿಶ್ವ ಹಿಂದೂ ಪರಿಷದ್ ಮುಖಂಡ ಶರಣ್ ಪಂಪ್ ವೆಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೋಮವಾರ ಈದ್ ಮಿಲಾದ್ ಮೆರವಣಿಗೆಗೆ ಅವಕಾಶ ಕೊಡಬಾರದು. ಅನುಮತಿ ಕೊಟ್ಟರೆ ಮತ್ತೆ ಇವರು ಗಲಭೆ ಮಾಡುತ್ತಾರೆ. ಇದಕ್ಕೆ ನೇರವಾಗಿ ರಾಜ್ಯ ಸರ್ಕಾರವೇ ಹೊಣೆ ಆಗುತ್ತದೆ ಎಂದು ಕಿಡಿಕಾರಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಂದಿನ ವಾರ ಈದ್ ಮೆರವಣಿಗೆ ಮೇಲೆ ಎಲ್ಲಾ ಹಿಂದುಗಳು ದಾಳಿ ಮಾಡಿದರೆ ಏನಾಗಬಹುದು ಅಂತಾ ಊಹೆ ಇದೆಯಾ. ಆದ್ದರಿಂದ ನಿನ್ನೆಯ ದಾಳಿಕೋರರಿಗೆ ಎಚ್ವರಿಕೆ ಸಂದೇಶ ಕೊಡುತ್ತಿದ್ದೇವೆ. ಸರ್ಕಾರ ಈದ್ ಕಾರ್ಯಕ್ರಮಕ್ಕೆ ಅನುಮತಿ ನೀಡಬಾರದು. ಈದ್ ನೆಪದಲ್ಲಿ ಕೂಡ ದಾಳಿ ಮಾಡುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ನಿನ್ನೆಯ ಮಂಡ್ಯ ಗಲಭೆ ಹಿಂದೆ ನಿಷೇಧಿತ ಪಿಎಫ್​ಐ ಕೈವಾಡ ಇದೆ‌. ನಮ್ಮ ಮೆರವಣಿಗೆಗೆ ರಾಜ್ಯ ಸರ್ಕಾರ…

Read More

ಮಂಗಳೂರು: ಒರಿಸ್ಸಾದಿಂದ ಮಂಗಳೂರಿಗೆ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿರುವ ಸಿಸಿಬಿ ಪೊಲೀಸರು 8.650 ಕೆಜಿ ಗಾಂಜಾ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಒರಿಸ್ಸಾ ರಾಜ್ಯದ ಗಜಪತಿ ಜಿಲ್ಲೆ, ಕಿರ್ಟಿಂಗ್ ನ್ಯೂ ಸ್ಟ್ರೀಟ್, ಪಿಂಡಿಕ್ಕಿ ಗ್ರಾಮದ ನಿವಾಸಿ ಬುಲುಬಿರೊ (24), ಪಶ್ಚಿಮ ಬಂಗಾಳದ ಮುರ್ಶಿದಾಬಾದ್ ನಿವಾಸಿ ದಿಲ್ ದಾರ್ ಆಲಿ(28) ಬಂಧಿತ ಆರೋಪಿಗಳು. ಆರೋಪಿಗಳು ಒರಿಸ್ಸದಲ್ಲಿ ಗಾಂಜಾ ಖರೀದಿಸಿ ಮಂಗಳೂರಿಗೆ ಸಾಗಿಸಿ, ಮಾರಾಟ ಮಾಡಲು ಯತ್ನಿಸುತ್ತಿದ್ದ ಬಗ್ಗೆ ಮಂಗಳೂರು ಸಿಸಿಬಿ ಪೊಲೀಸರು ಖಚಿತ ಮಾಹಿತಿ ಪಡೆದಿದ್ದಾರೆ. ಇವರು ತಲಪಾಡಿ ದೇವಿಪುರ ರಸ್ತೆಯ ತಚ್ಚಾಣಿ ಪರಿಸರದಲ್ಲಿ ಸಾರ್ವಜನಿಕರಿಗೆ ಗಾಂಜಾ ಮಾರುತ್ತಿದ್ದ ಸಂದರ್ಭ ಸಿಸಿಬಿ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರಿಂದ 2,60,000 ರೂ. ಮೌಲ್ಯದ 8.650 ಕೆಜಿ ಗಾಂಜಾ, 2 ಮೊಬೈಲ್ ಫೋನುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ 3 ಲಕ್ಷ ರೂ. ಆಗಬಹುದು ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Read More

ಉಪ್ಪಿನಂಗಡಿ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಕಾಡಿಗೆ ಕರೆದೊಯ್ದು ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿ ವಿಟ್ಲ ನಿವಾಸಿ ಸತೀಶ್ (38) ಎಂಬಾತನ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ನೆಲ್ಯಾಡಿ ಕಾಲೇಜೊಂದರ ವಿದ್ಯಾರ್ಥಿನಿಯನ್ನು ಜೂ.14 ರಂದು ಪುತ್ತೂರಿನಲ್ಲಿ ಪರಿಚಯಿಸಿಕೊಂಡ ಆರೋಪಿಯು ಫೋನ್ ಮೂಲಕ ಸಂಪರ್ಕ ಸಾಧಿಸಿಕೊಂಡು ಆತ್ಮೀಯತೆ ಬೆಳೆಸಿದ್ದಲ್ಲದೆ, ಕಳೆದ ಜು. 21 ರಂದು ಆಕೆಯನ್ನು ನೆಲ್ಯಾಡಿಗೆ ಬರಲು ಹೇಳಿ, ನೆಲ್ಯಾಡಿಗೆ ಬಂದ ಆಕೆಯನ್ನು ಪಿಕಪ್ ವಾಹನದಲ್ಲಿ ಬಜತ್ತೂರು ಗ್ರಾಮದ ಕಾಂಚನ ಎಂಬಲ್ಲಿನ ಕಾಡಿಗೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ, ಹಾಗೂ ಈ ವಿಚಾರವನ್ನು ಯಾರಿಗೂ ಹೇಳದಂತೆ ಜೀವ ಬೆದರಿಕೆಯೊಡ್ಡಿದ್ದಾನೆ ಎಂದು ಸಂತ್ರಸ್ತ ವಿದ್ಯಾರ್ಥಿನಿಯು ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ. ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Read More

ಮಂಗಳೂರು : ಹಳೆ ಮನೆ ಕೆಡವುತ್ತಿದ್ದಾಗ ಗೋಡೆ ಸಮೇತ ಲಿಂಟಲ್ ಬಿದ್ದು ಇಬ್ಬರು ಮೃತಪಟ್ಟ ದಾರುಣ ಘಟನೆ ಮಂಗಳೂರು ನಗರದ ಜೈಲ್ ರೋಡಿನಲ್ಲಿ ಗುರುವಾರ ಸಂಭವಿಸಿದೆ. ಜೇಮ್ಸ್ ಜತ್ತಣ್ಣ ಮತ್ತು ಎಡ್ವಿನ್ ಮಾಬೇನ್ ಮೃತ ದುರ್ದೈವಿಗಳಾಗಿದ್ದಾರೆ. ಜೇಮ್ಸ್‌ ಜತ್ತನ್ನ ಪೂರ್ವಜರ ಮನೆ ಇದಾಗಿದ್ದು, ಪಾಲಿನಲ್ಲಿ ಅವರಿಗೆ ಈ ಮನೆ ಸಿಕ್ಕಿತ್ತು. ಮನೆಗೆ ತಾಗಿಕೊಂಡಂತೆ ಅಡ್ವಿನ್‌ ಅವರ ಮನೆ ಇದೆ. ಜೇಮ್ಸ್‌ ಅವರು ತನ್ನ ಹಳೆ ಮನೆಯನ್ನು ಕೆಡವಿ ಅದೇ ಜಾಗದಲ್ಲಿ ಹೊಸ ಮನೆ ಕಟ್ಟಲು ಉದ್ದೇಶಿಸಿದ್ದು, ಅದರಂತೆ ಜೆಸಿಬಿ ಮೂಲಕ ಮನೆ ಕೆಡಹುವ ಕಾರ್ಯ ಬುಧವಾರ ಆರಂಭವಾಗಿತ್ತು.ಗುರುವಾರ ಬೆಳಗ್ಗೆ ಮತ್ತೆ ಕೆಲಸ ಆರಂಭವಾಗಿದ್ದು, ಈ ವೇಳೆ ಜೇಮ್ಸ್‌ ಸ್ಥಳದಲ್ಲೇ ಇದ್ದು ಉಸ್ತುವಾರಿ ನೋಡಿಕೊಂಡಿದ್ದರು. ಈ ಮನೆಗೆ ತಾಗಿಕೊಂಡೇ ಅಡ್ವಿನ್‌ ಮನೆ ಇರುವುದರಿಂದ ಕೆಡಹುವ ಸಮಯದಲ್ಲಿ ಅಡ್ವಿನ್‌, ತಮ್ಮ ಮನೆಗೆ ಹಾನಿಯಾಗಿದೆಯೇ ಎಂಬುದನ್ನು ನೋಡಲು ಜೇಮ್ಸ್‌ ಮನೆ ಕಂಪೌಂಡಿಗೆ ಬಂದಿದ್ದರು. ಈ ಸಂದರ್ಭ ಜೇಮ್ಸ್‌ ಅವರು ಪಕ್ಕದ ಇನ್ನೊಂದು ಮನೆಯ ಜಗುಲಿಯಲ್ಲಿದ್ದು, ಅಡ್ವಿನ್‌…

Read More

ಪುತ್ತೂರು: ಚಾಲಕ ತನ್ನ ಕಾರನ್ನು ರಿವರ್ಸ್ ತೆಗೆಯುವಾಗ ಸಂದರ್ಭ ನಿಯಂತ್ರಣ ತಪ್ಪಿ ಸ್ಟಾಲ್‍ ಒಂದಕ್ಕೆ ನುಗ್ಗಿದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ಕಿಲ್ಲೆ ಮೈದಾನದಲ್ಲಿ ನಡೆದಿದೆ. ಚುರುಮುರಿ ಅಂಗಡಿಯಲ್ಲಿದ್ದ ವ್ಯಕ್ತಿ ಹಾಗೂ ಇನ್ನೊಬ್ಬರು ಗಾಯಗೊಂಡವರು ಅವರಿಬ್ಬರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಗಣೇಶ ಉತ್ಸವದ ಪ್ರಯುಕ್ತ ತಾತ್ಕಲಿಕ ನೆಲೆಯಲ್ಲಿ ತೆರೆದಿದ್ದ ಅಂಗಡಿಗೆ ಕಾರು ಢಿಕ್ಕಿ ಹೊಡೆದಿದ್ದು, ಅಂಗಂಡಿ ಜಖಂ ಆಗಿದೆ. ಗಾಯಾಳುಗಳಿಬ್ಬರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಸರಗೋಡು ಮೂಲದ ವೆಂಕಟರಮಣ ಭಟ್ ಎಂಬವರಿಗೆ ಸೇರಿದ ಕೇರಳ ನೋಂದಣಿ ಹೊಂದಿದ್ದ ಕಾರು ಅಪಘಾತಕ್ಕಿಡಾದ ವಾಹನ. ಸಂಚಾರಿ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಕಾರನ್ನು ವಶಕ್ಕೆ ಪಡೆದಿದ್ದಾರೆ.

Read More

ಉಡುಪಿ: ಚಿನ್ನಾಭರಣ ಮಳಿಗೆಯಲ್ಲಿ ಚಿನ್ನ ಕದ್ದು ಪರಾರಿಯಾಗಲು ಯತ್ನಿಸಿದ ವ್ಯಕ್ತಿಯೊಬ್ಬನನ್ನು ಸಾರ್ವಜನಿಕರು ಹಿಡಿದು ಥಳಿಸಿದ ಘಟನೆ ಕಾರ್ಕಳದಲ್ಲಿ ನಡೆದಿದೆ. ಕಳವುಗೈದ ವ್ಯಕ್ತಿಯನ್ನು ಕಾರ್ಕಳ ತಾಲೂಕಿನ ಹೆರ್ಮುಂಡೆ ಗ್ರಾಮದ ನಿವಾಸಿ ಜಯರಾಮ ಎಂದು ಗುರುತಿಸಲಾಗಿದೆ. ಚಿನ್ನಾಭರಣ ಮಳಿಗೆಯೊಂದರಲ್ಲಿ ಸುಮಾರು ಹದಿನೆಂಟು ಗ್ರಾಂ ಕರಿಮಣಿ ಸರವನ್ನು ಎಗರಿಸಿದ್ದ ವ್ಯಕ್ತಿ ಪರಾರಿಯಾಗಲು ಪ್ರಯತ್ನಿಸಿದ್ದಾನೆ. ಪರಾರಿಯಾಗುತ್ತಿದ್ದ ವೇಳೆ ಕಳ್ಳ ಸಾರ್ವಜನಿಕರ ಕೈಗೆ ಸಿಕ್ಕಿ ಹಾಕಿಕೊಂಡಿದ್ದಾನೆ. ಬಳಿಕ ಸಾರ್ವಜನಿಕರು ಕಳ್ಳನನ್ನು ಕಾರ್ಕಳ ನಗರ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ.

Read More

ಮಂಡ್ಯ : ಗಣೇಶ ವಿಸರ್ಜನೆ ವೇಳೆ ಕೋಮುಗಲಭೆ ಸಂಭವಿಸಿದ ಹಿನ್ನೆಲೆಯಲ್ಲಿ ಶನಿವಾರದವರೆಗೆ ನಾಗಮಂಗಲ ಪಟ್ಟಣದಲ್ಲಿ 144 ಸೆಕ್ಷನ್‌ ಜಾರಿ ಮಾಡಲಾಗಿದೆ. ಬುಧವಾರ ರಾತ್ರಿಯಿಂದಲೇ 144 ಸೆಕ್ಷನ್‌ ಜಾರಿ ಮಾಡಲಾಗಿದ್ದು ಇಂದು ಪಟ್ಟಣ ವ್ಯಾಪ್ತಿಯ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಪ್ರಕರಣ ಸಂಬಂಧ ಇಲ್ಲಿಯವರೆಗೆ 46 ಮಂದಿಯನ್ನು ಬಂಧಿಸಲಾಗಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ನಾಗಮಂಗಲ ಪಟ್ಟಣದ್ಯಾಂತ ಪೊಲೀಸರ ಸರ್ಪಗಾವಲು ಹಾಕಿದ್ದಾರೆ. ಅನ್ಯಕೋಮಿನ ಯುವಕರ ಕೃತ್ಯ ಖಂಡಿಸಿ ಇಂದು ನಾಗಮಂಗಲ ಬಂದ್‌ಗೆ ವಿಶ್ವಹಿಂದೂ ಪರಿಷತ್, ಭಜರಂಗ ದಳ ಹಾಗೂ ಇತರೇ ಹಿಂದೂಪರ ಸಂಘಟನೆಗಳು ಕರೆ ನೀಡಿವೆ.

Read More

ಕೇರಳ: ಓಣಂ ಹಬ್ಬದ ಹಿನ್ನೆಲೆಯಲ್ಲಿ ಶಬರಿಮಲೆಯ ಅಯ್ಯಪ್ಪಸ್ವಾಮಿ ದೇವಾಲಯವು ಸೆಪ್ಟೆಂಬರ್ 13ರಂದು ತೆರೆಯಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಸಂಜೆ 5 ಗಂಟೆಗೆ ದೇವಸ್ಥಾನದ ಬಾಗಿಲನ್ನು ತೆರೆಯಲಾಗುತ್ತದೆ, ಸೆಪ್ಟೆಂಬರ್ 17 ರಿಂದ ಐದು ದಿನಗಳ ಮಾಸಿಕ ಪೂಜೆ ನಡೆಯಲಿದೆ. ಸೆಪ್ಟೆಂಬರ್ 21 ರಂದು ರಾತ್ರಿ 10 ಗಂಟೆಗೆ ಅಥಾಜ ಪೂಜೆ ಮತ್ತು ಹರಿವರಾಸನದ ನಂತರ ದೇವಾಲಯವನ್ನು ಮುಚ್ಚಲಾಗುತ್ತದೆ. ಉದಯಾಸ್ತಮಾನ ಪೂಜೆ ಮತ್ತು ಅಷ್ಟಾಭಿಷೇಕಗಳು ದೇವಾಲಯದಲ್ಲಿ ನಡೆಯಲಿರುವ ಇತರ ಧಾರ್ಮಿಕ ವಿಧಿಗಳಾಗಿವೆ. ಸಮಾರಂಭದ ನಂತರ ಅನ್ನದಾನ ಸಭಾಂಗಣದಲ್ಲಿ ಭಕ್ತರಿಗೆ ಅನ್ನಸಂತರ್ಪಣೆ ನಡೆಯಲಿದೆ. ಹಬ್ಬದ ದಿನಗಳಲ್ಲಿ ಕಲಭಾಭಿಷೇಕ, ಪಡಿಪೂಜೆ, ಪುಷ್ಪಾಭಿಷೇಕ ಸೇರಿದಂತೆ ವಿಶೇಷ ಆಚರಣೆಗಳು ನಡೆಯಲಿವೆ. ದೇವರ ಹೆಸರಿನಲ್ಲಿ ದೀಪದ ಮುಂದೆ ಇಟ್ಟಿರುವ ಬಾಳೆ ಎಲೆಯ ಮೇಲೆ ಸಿಹಿತಿಂಡಿಗಳು ಸೇರಿದಂತೆ ಹಬ್ಬದ ಭಕ್ಷ್ಯಗಳನ್ನು ಇಡುತ್ತಾರೆ.

Read More

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಬಳಸಿ ಹಿಂದೂ ದೇವತೆಗಳ ಅವಹೇಳನಕಾರಿ, ಅಶ್ಲೀಲ ಫೋಟೋ ಪೋಸ್ಟ್ ಮಾಡಿದ್ದು, ಈ ಬಗ್ಗೆ ಮಂಗಳೂರಿನ ಉರ್ವ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ ಎಂದು ಬರೆದ ಫ್ಯಾಕ್ಟ್ ವಿಡ್ ಫೇಸ್ ಬುಕ್ ಪೇಜ್ ನಲ್ಲಿ ಪ್ರತಿದಿನ ತಂತ್ರಜ್ಞಾನ ಬಳಸಿ ಹಿಂದೂ ದೇವತೆಗಳ ಅವಹೇಳನಕಾರಿ, ಅಶ್ಲೀಲ ಫೋಟೋ ಪೋಸ್ಟ್ ಮಾಡಲಾಗುತ್ತಿದೆ. ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಫೋಟೋಗಳನ್ನು ಪ್ರತಿದಿನ ಈ ಪೇಜ್ ನಲ್ಲಿ ಪೋಸ್ಟ್ ಮಾಡುತ್ತಿದ್ದು, ಇದು ಹಿಂದೂಗಳನ್ನು ಕೆರಳಿಸುವ ಷಡ್ಯಂತ್ರವಾಗಿದೆ ಎಂದು ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಇಂತ ಪೋಟೋ ಪೋಸ್ಟ್ ಮಾಡುವ ಫ್ಯಾಕ್ಟ್ ವಿಡ್ ಫೇಸ್ ಬುಕ್ ಪೇಜ್ ಅಡ್ಮಿನ್, ಕಾಮೆಂಟ್ ಹಾಕುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ವಕೀಲರ ಒಕ್ಕೂಟ, ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಮಂಗಳೂರಿನ ಸೈಬರ್ ಕ್ರೈಂ ವಿಭಾಗಕ್ಕೆ ದೂರು ನೀಡಲಾಗಿದೆ.

Read More

ಮಂಗಳೂರು : ‘Fact Vid’ ಹೆಸರಿನ ಫೇಸ್ಬುಕ್ ಪೇಜ್ ಒಂದರಲ್ಲಿ ಅನೇಕ ದಿನಗಳಿಂದ AI (Artificial Intelligence) ತಾಂತ್ರಿಕ ಸಹಾಯದಿಂದ ಹಿಂದೂ ದೇವತೆಗಳ ಅಪಮಾನಾತ್ಮಕ ಮತ್ತು ಅಶ್ಲೀಲ ಫೋಟೋಗಳನ್ನು ನಿರಂತರವಾಗಿ ಫೇಸ್ಬುಕ್ ಜಾಲತಾಣದ ಮುಖಾಂತರ ಪ್ರಸಾರ ಮಾಡಲಾಗುತ್ತಿದೆ. ಈ Al ಆಧಾರಿತ ಚಿತ್ರಗಳಿಂದ ಕೋಟ್ಯಂತರ ಹಿಂದೂ ಬಾಂಧವರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ. ಸಂಬಂಧಿತ ಸೈಬರ್ ಕ್ರೈಮ್ ವಿಭಾಗವು ಇದರ ಬಗ್ಗೆ ಕೂಡಲೇ ಎಚ್ಚೆತ್ತುಕೊಂಡು ಪೇಜ್ ನ ಅಡ್ಮಿನ್ ಗಳನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕೆಂದು ಹಿಂದೂ ಜನಜಾಗೃತಿ ಸಮಿತಿಯ ದಕ್ಷಿಣ ಕನ್ನಡ ಜಿಲ್ಲಾ ಸಮನ್ವಯಕರಾದ ಶ್ರೀ. ವಿಜಯ ಕುಮಾರ ಇವರು ಆಗ್ರಹಿಸಿದ್ದಾರೆ. ಈ ಕುರಿತು 10 ಸೆಪ್ಟೆಂಬರ್ 2024 ಮಂಗಳವಾರದಂದು ಮಂಗಳೂರಿನ ಸೈಬರ್ ಕ್ರೈಮ್ ವಿಭಾಗಕ್ಕೆ ಸಮಿತಿಯ ಸಮನ್ವಯಕರು ಮತ್ತು ಧರ್ಮಪ್ರೇಮಿ ನ್ಯಾಯವಾದಿಗಳ ಒಕ್ಕೂಟವು ಸೇರಿ ದೂರು ದಾಖಲಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಉರ್ವ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಅಭಿವ್ಯಕ್ತಿ ಸ್ವಾತಂತ್ರ‍್ಯ ಎಂದು ತಮ್ಮ ಬಗ್ಗೆ ಬರೆದುಕೊಂಡ ‘Fact Vid’ ಫೇಸ್ಬುಕ್…

Read More