Author: main-admin

ಉಪ್ಪಿನಂಗಡಿ: ಮಗನ ಹುಟ್ಟು ಹಬ್ಬಕ್ಕಾಗಿ ಕಡವೆಯನ್ನು ಗುಂಡಿಕ್ಕಿ ಕೊಂದ ಮಾಂಸವನ್ನು ಮನೆಯ ಫ್ರಿಡ್ಜ್ನಲ್ಲಿ ದಾಸ್ತಾನು ಇರಿಸಲಾದ ಪ್ರಕರಣವನ್ನು ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿಗಳ ತಂಡ ಪತ್ತೆ ಹಚ್ಚಿ ಹತ್ಯೆಗೆ ಬಳಸಲಾದ ಕೋವಿ ಮತ್ತು ಕಡವೆ ಮಾಂಸವನ್ನು ಸ್ವಾಧೀನಪಡಿಸಿಕೊಂಡ ಘಟನೆ ಸಂಭವಿಸಿದೆ. ಶಿರಾಡಿ ಗ್ರಾಮದ ಗುಂಡ್ಯ ನಿವಾಸಿ ಸುರೇಶ್‌ ಮತ್ತವರ ಸಹವರ್ತಿಗಳು ರಕ್ಷಿತಾರಣ್ಯದಲ್ಲಿದ್ದ ಕಡವೆಯೊಂದಕ್ಕೆ ಗುಂಡಿಕ್ಕಿ ಹತ್ಯೆಗೈದಿದ್ದರು. ಅದನ್ನು ಮಗನ ಹುಟ್ಟು ಹಬ್ಬದ ಔತಣ ಕೂಟಕ್ಕೆಂದು ಮಾಂಸ ಮಾಡಿ ಮನೆಯ ಪ್ರೀಝರ್‌ನಲ್ಲಿ ಇರಿಸಿದ್ದರು. ಈ ಬಗ್ಗೆ ಮಾಹಿತಿ ಪಡೆದ ಉಪ್ಪಿನಂಗಡಿ ವಲಯ ಅರಣ್ಯಾಧಿ ಕಾರಿಗಳ ನಿರ್ದೇಶನದ ಮೇರೆಗೆ ಉಪ ವಲಯ ಅರಣ್ಯಾಧಿಕಾರಿ ಯತೀಂದ್ರ ಇಲಾಖಾ ಸಿಬಂದಿ ಸುನಿಲ್‌, ಶಿವಾನಂದ ಅ‌ವರ ತಂಡ ಸುರೇಶ್‌ ಮನೆಗೆ ದಾಳಿ ನಡೆಸಿ ಸಂಗ್ರಹಿಸಿಟ್ಟ ಮಾಂಸ ಹಾಗೂ ಹತ್ಯೆಗೆ ಬಳಸಲಾದ ಕೋವಿಯನ್ನು ವಶಪಡಿಸಿಕೊಂಡು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಕಾರ್ಯಾಚರಣೆ ವೇಳೆ ಆರೋಪಿಗಳು ಗುಂಡ್ಯ ಹೊಳೆಯನ್ನು ಈಜಿ ದಾಟುವ ಮೂಲಕ ಪರಾರಿಯಾಗಿದ್ದಾರೆ. ವಲಯಾಧಿಕಾರಿಯಿಂದ ತನಿಖೆ ಉಪ್ಪಿನಂಗಡಿ ವಲಯ ಅರಣ್ಯಾಧಿ ಕಾರಿ ರಾಘವೇಂದ್ರ ಪ್ರಕರಣದ…

Read More

ಬೆಂಗಳೂರು: ರಾಜ್ಯದ ವಿವಿಧ ಭಾಗಗಳ 7 ಡಿವೈಎಸ್‌ಪಿ ಹಾಗೂ 55 ಪೊಲೀಸ್ ಇನ್‌ಸ್ಪೆಕ್ಟರ್‌ಗಳನ್ನು ವರ್ಗಾವಣೆಗೊಳಿಸಿ ಪೊಲೀಸ್ ಇಲಾಖೆ ಶುಕ್ರವಾರ ಆದೇಶ ಹೊರಡಿಸಿದೆ. ತಕ್ಷಣವೇ ವರ್ಗಾಯಣೆಯಾದ ಸ್ಥಳಕ್ಕೆ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳುವಂತೆ ಆದೇಶದಲ್ಲಿ ತಿಳಿಸಲಾಗಿದೆ. ಪೊಲೀಸ್ ಸಿಬ್ಬಂದಿ ಮಂಡಳಿಯ ಸಭೆಯ ನಿರ್ಣಯದಂತೆ ವರ್ಗಾವಣೆ ಮಾಡಲಾಗಿದೆ. ಡಿವೈಎಸ್‌ಪಿಗಳಾದ ಕೆ.ಎಂ.ಸತೀಶ್ ಅವರನ್ನು ಎಲೆಕ್ಟ್ರಾನಿಕ್‌ ಸಿಟಿ ಉಪ ವಿಭಾಗ ಹಾಗೂ ಗೋಪಾಲ್ ನಾಯಕ್ ಅವರನ್ನು ಬೆಂಗಳೂರಿನ ಬಿಎಂಟಿಎಫ್‌ಗೆ ವರ್ಗಾವಣೆ ಮಾಡಲಾಗಿದೆ. ಉಳಿದ ಡಿವೈಎಸ್‌ಪಿಗಳನ್ನು ಇತರೆ ಜಿಲ್ಲೆಗಳಿಗೆ ವರ್ಗಾವಣೆ ಮಾಡಲಾಗಿದೆ. ರಾಜ್ಯ ಗುಪ್ತವಾರ್ತೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಡಿವೈಎಸ್‌ಪಿ ರಘುಕುಮಾರ್ ವಿ ಅವರನ್ನು ವಲಯ ಕಚೇರಿ, ಬಳ್ಳಾರಿಗೆ ವರ್ಗಾವಣೆ ಮಾಡಲಾಗಿದೆ. ಕರ್ನಾಟಕ ಲೋಕಾಯುಕ್ತದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಚಲುವರಾಜು ಬಿ ಅವರನ್ನು ಮಂಡ್ಯ ಜಿಲ್ಲೆಯ ನಾಗಮಂಗಲ ಉಪ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ. ಕರ್ನಾಟಕ ಲೋಕಾಯುಕ್ತದಲ್ಲಿದ್ದ ನೀಲಪ್ಪ ಮಲ್ಲಪ್ಪ ಓಲೇಕಾರ ಅವರನ್ನು ಖಾನಾಪುರ ಪಿಟಿಎಸ್‌ಗೆ ವರ್ಗಾವಣೆ ಮಾಡಲಾಗಿದೆ. ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾವಣೆ ಆದೇಶದಲ್ಲಿದ್ದ ಗೋಪಾಲ್ ನಾಯಕ್‌ರನ್ನು ಬಿಎಂಟಿಎಫ್, ಬೆಂಗಳೂರು ಇಲ್ಲಿಗೆ ವರ್ಗಾವಣೆ ಮಾಡಲಾಗಿದೆ.…

Read More

ಮಂಗಳೂರು: ವಸತಿ ಗೃಹದಲ್ಲಿ ನಿಲ್ಲಿಸಿದ್ದ ಪೆಟ್ರೋಲ್ ಚಾಲಿತ ಟಿವಿಎಸ್ ಎನ್‌ಟಾರ್ಕ್ ಸ್ಕೂಟರ್‌ಗೆ ಬೆಂಕಿ ಹೊತ್ತಿಕೊಂಡ ಘಟನೆ ಕುಂಪಲ ಸಮೀಪದ ವಿದ್ಯಾನಗರ ಎಂಬಲ್ಲಿ ನಡೆದಿದೆ. ಎರಡು ತಿಂಗಳ ಹಿಂದೆಯಷ್ಟೇ ಸ್ಕೂಟರ್ ಖರೀದಿಸಿದ್ದ ಐಟಿಐ ವಿದ್ಯಾರ್ಥಿ ರಾಕೇಶ್ ಮಾಲೀಕತ್ವದ ಸ್ಕೂಟರ್ 12:30 ರ ಸುಮಾರಿಗೆ ಹೊತ್ತಿ ಉರಿದಿದ್ದು, ಮನೆಯ ಕಿಟಕಿ ಮತ್ತು ವಿದ್ಯುತ್ ತಂತಿಗಳಿಗೆ ವೇಗವಾಗಿ ಬೆಂಕಿ ವ್ಯಾಪಿಸಿದೆ. ಅದೃಷ್ಟವಶಾತ್, ಕುಟುಂಬವು ಆ ಸಮಯಕ್ಕೆ ಎಚ್ಚರವಾಯಿತು ಮತ್ತು ದೊಡ್ಡ ಅನಾಹುತ ಸಂಭವಿಸುವ ಮೊದಲು ಅಗ್ನಿಯನ್ನು ನಂದಿಸಿದರು. ಅದರ ಹೊರತಾಗಿಯೂ, ಆಸ್ತಿಗೆ ಸ್ವಲ್ಪ ಹಾನಿಯಾಗಿದೆ.ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ತನಿಖಾಧಿಕಾರಿಗಳು ಶಂಕಿಸಿದ್ದಾರೆ.

Read More

ಮೂಲ್ಕಿ: ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿ ಸಮೀಪದ ಕಿನ್ನಿಗೋಳಿಯ ದಾಮಸ್‌ಕಟ್ಟೆ ಬಳಿ ಸಂಜೆ ಕಾಲೇಜು ಮುಗಿಸಿ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಯ ಮೈಮೇಲೆ ಕೈ ಹಾಕಿ ಕಿರುಕುಳ ನೀಡಲು ಯತ್ನಿಸಿದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ. ಪಟ್ಟೆ ಕ್ರಾಸ್‌ ಸಮೀಪದ ಉಳೆಪಾಡಿ ನಿವಾಸಿ ಬಾಬು ಮುಖಾರಿ ಆರೋಪಿ. ವಿದ್ಯಾರ್ಥಿನಿ ದಾಮಸ್‌ ಕಟ್ಟೆಯಲ್ಲಿ ಬಸ್ಸಿನಿಂದ ಇಳಿದು ಸುಂಕದಕಟ್ಟೆ (ಪಟ್ಟೆ) ರಸ್ತೆಯಲ್ಲಿ ಹೋಗುತ್ತಿರುವಾಗ ಆರೋಪಿ ಹಿಂಬಾಲಿಸಿಕೊಂಡು ಬಂದು ಕಿರುಕುಳ ನೀಡಲು ಯತ್ನಿಸಿದ್ದ ಎನ್ನಲಾಗಿದೆ. ಆರೋಪಿಯನ್ನು ತಳ್ಳಿ ಹಾಕಿ ವಿದ್ಯಾರ್ಥಿನಿ ಓಡಿ ಹೋಗಿದ್ದು, ಸ್ಥಳೀಯರಿಗೆ ಮಾಹಿತಿ ನೀಡಿದ್ದರು. ಸ್ಥಳೀಯರ ಸಹಕಾರದಿಂದ ಮೂಲ್ಕಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪೊಲೀಸರು ಆರೋಪಿಯನ್ನು ವಿಚಾರಣೆ ನಡೆಸಿದ್ದಾರೆ.

Read More

ಮಂಜೇಶ್ವರ: ನಕಲಿ ಔಷಧಿ ತಯಾರಿಸುವುದರೊಂದಿಗೆ ಚಿಕಿತ್ಸೆಯನ್ನೂ ನೀಡುತ್ತಿದ್ದ ಆರೋಪ ಮೇಲೆ ನಕಲಿ ವೈದ್ಯನನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ.‌ ಬಂಧಿತ ನಕಲಿ ವೈದ್ಯನನ್ನು ಪಾಲಕ್ಕಾಡ್ ಮರ್ಣ್ಣಾಕಾಡ್ ಕಳರಿಕ್ಕಲ್ ನಿವಾಸಿ ಸಿ.ಎಂ. ಜಮಾಲುದ್ದೀನ್ (56) ಎಂದು ಗುರುತಿಸಲಾಗಿದೆ. ಇತನನ್ನು ಮಂಜೇಶ್ವರ ಎಸ್‌ಐ ಕೆ.ವಿ. ಸುಮೇಶ್‌ರಾಜ್ ಉಪ್ಪಳ ಪಚ್ಚಂಪಾರೆಯಿಂದ ಬಂಧಿಸಲಾಗಿದೆ. ಪಚ್ಲಂಪಾರೆಯಲ್ಲಿ ಫ್ರೆಂಡ್ಸ್‌ ಕ್ಲಬ್‌ನಲ್ಲಿ ಜಮಾಲುದ್ದೀನ್‌ನ ನೇತೃತ್ವದಲ್ಲಿ ಶಿಬಿರ ನಡೆಸಲಾಗಿತ್ತು. ಯಾವುದೇ ಅರ್ಹತೆಯೋ, ದಾಖಲೆ ಪತ್ರಗಳೂ ಇಲ್ಲದೆ ರೋಗಿಗಳನ್ನು ತಪಾಸಣೆ ನಡೆಸಿ ಔಷಧಿ ನೀಡಿದನೆಂಬ ಆರೋಪದಂತೆ ಈತನನ್ನು ಬಂಧಿಸಲಾಗಿದೆ. ನಕಲಿ ವೈದ್ಯ ವೈದ್ಯಕೀಯ ಶಿಬಿರ ನಡೆಸುತ್ತಿರುವ ಬಗ್ಗೆ ಜಿಲ್ಲಾ ಮೆಡಿಕಲ್ ಆಫೀಸ‌ರ್ ಕೆ. ಸಂತೋಷ್‌ರಿಗೆ ಮಾಹಿತಿ ಲಭಿಸಿತ್ತು. ಈ ಕುರಿತು ತನಿಖೆ ನಡೆಸಲು ಡೆಪ್ಯುಟಿ ಜಿಲ್ಲಾ ಮೆಡಿಕಲ್ ಆಫೀಸರ್‌ರಿಗೆ ಹೊಣೆಗಾರಿಕೆ ನೀಡಲಾಗಿದೆ. ಜಿಲ್ಲಾ ಮೆಡಿಕಲ್ ಆಫೀಸರ್ ಸ್ಥಳಕ್ಕೆ ಧಾವಿಸಿ ನಡೆಸಿದ ಪರಿಶೀಲನೆಯಲ್ಲಿ ಜಮಾಲುದ್ದೀನ್‌ಗೆ ಯಾವುದೇ ವೈದ್ಯಕೀಯ ಅರ್ಹತೆ ಇಲ್ಲದಿರುವುದು ದೃಢವಾಗಿದೆ. ಅನಂತರ ಡಿಎಂಓ ಮಂಜೇಶ್ವರ ಪೊಲೀಸರಿಗೆ ದೂರು ನೀಡಿದ್ದಾರೆ. ಜಮಾಲುದ್ದೀನ್ ವಿರುದ್ಧ ಬೇರೆಲ್ಲಾದರೂ ಕೇಸುಗಳಿವೆಯೇ ಎಂದು…

Read More

ಉಡುಪಿ: ಮಲ್ಪೆಯಲ್ಲಿ 7 ಮಂದಿ ಬಾಂಗ್ಲಾ ಅಕ್ರಮ ವಲಸಿಗರನ್ನು ಪೊಲೀಸರು ಬಂಧಿಸಿದ ಬಳಿಕ ಜಿಲ್ಲಾ ಪೊಲೀಸ್‌ ಇಲಾಖೆ, ಕರಾವಳಿ ಕಾವಲು ಪಡೆ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದೆ. ಜಿಲ್ಲೆಯ ವಿವಿಧ ಬಂದರು, ಕಟ್ಟಡ ನಿರ್ಮಾಣ ವಲಯ, ಫಿಶ್‌ಮೀಲ್‌ ಸಹಿತ ಹೊರ ರಾಜ್ಯದ ಕಾರ್ಮಿಕರು ಹೆಚ್ಚೆಚ್ಚು ಕಾರ್ಯನಿರ್ವಹಿಸುವ ಕಡೆಗಳಲ್ಲಿ ತೀವ್ರ ವಿಚಾರಣೆ ಹಾಗೂ ಮಾಹಿತಿ ಸಂಗ್ರಹ ಆರಂಭಿಸಿದ್ದಾರೆ. ತಮ್ಮ ವ್ಯಾಪ್ತಿಯ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹೊರ ರಾಜ್ಯದ ಕಾರ್ಮಿಕರ ವಿವರಗಳನ್ನು ತತ್‌ಕ್ಷಣವೇ ಸಲ್ಲಿಸಬೇಕು. ಎಷ್ಟು ಸಮಯದಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಯಾವ ರಾಜ್ಯದಿಂದ ಬಂದಿದ್ದಾರೆ. ಕರೆದುಕೊಂಡು ಬಂದಿರುವ ಏಜೆನ್ಸಿ ಹೀಗೆ ಹಲವು ಮಾಹಿತಿ ಸೇರಿದ ಗೂಗಲ್‌ ಫಾರ್ಮೆಟ್‌ ಭರ್ತಿ ಮಾಡಿ ಕಳುಹಿಸುವಂತೆ ಎಲ್ಲ ಸಂಸ್ಥೆಗಳಿಗೆ ಕರಾವಳಿ ಕಾವಲು ಪಡೆಯಿಂದ ಸಂದೇಶ ರವಾನಿಸಾಗಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಹೊರ ರಾಜ್ಯದ ಕಾರ್ಮಿಕರು ಎಷ್ಟಿದ್ದಾರೆ ಎಂಬ ನಿಖರ ಮಾಹಿತಿ ಕಾರ್ಮಿಕ ಇಲಾಖೆಯಲ್ಲಿ ಇಲ್ಲ. ಕಾರ್ಮಿಕ ಇಲಾಖೆ ಕೂಡ ಈ ಬಗ್ಗೆ ಹೆಚ್ಚು ಗಂಭೀರವಾದಂತಿಲ್ಲ. ಕರ್ನಾಟಕ ಹಾಗೂ ಜಿಲ್ಲೆಯ…

Read More

ಬೆಂಗಳೂರು ನಗರದ ಕಾಮಾಕ್ಷಿಪಾಳ್ಯ ಠಾಣೆ ಕರ್ತವ್ಯ ನಿರತ ಪೊಲೀಸ್ ಅಧಿಕಾರಿಯೊಬ್ಬರು ಹೃದಯಾಘಾತದಿಂದ ಸಾವಿಗೀಡಾದ ಘಟನೆ ನಡೆದಿದೆ. ಮೃತಪಟ್ಟವರು ಕಾಮಾಕ್ಷಿಪಾಳ್ಯ ಠಾಣೆ ಎಎಸ್‌ಐ ಶಿವಶಂಕರ ಚಾರಿ (45) ಎಂದು ತಿಳಿದು ಬಂದಿದೆ. ಶಿವಶಂಕರ ಅವರು ಗುರುವಾರ ಬೆಳಿಗ್ಗೆ ಎಂದಿನಂತೆ ಕರ್ತವ್ಯಕ್ಕೆ ಹಾಜರಾಗಿದ್ದರು. ಆದರೆ ರೌಂಡ್ಸ್‌ಗೆ ಹೋದಾಗ ಉಸಿರಾಟ ತೊಂದರೆ ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಹೃದಯಾಘಾತದಿಂದ ಆಸ್ಪತ್ರೆಯಲ್ಲಿ ಪ್ರಾಣ ಬಿಟ್ಟಿದ್ದಾರೆ. ಶಿವಶಂಕರ ಚಾರಿ ಅವರು 1999ರಲ್ಲಿ ಪೊಲೀಸ್ ಇಲಾಖೆಗೆ ಸೇರಿದ್ದರು ಎಂದು ತಿಳಿದು ಬಂದಿದೆ. ಕಳೆದ ಒಂದೂವರೆ ವರ್ಷದಿಂದ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಎಎಸ್‌ಐ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.

Read More

ಮಂಗಳೂರು: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಸರಕಾರ ಸಮವಸ್ತ್ರವಾಗಿ ನೀಡಿದ ಸೀರೆ ಹದಿನೈದು ದಿನಗಳಲ್ಲೇ ನೂಲು ಬಿಟ್ಟಿದ್ದು, ಇದು ತೀರಾ ಕಳಪೆಯಾಗಿದೆ ಎಂಬ ದೂರು ಕೇಳಿ ಬರುತ್ತಿದೆ. ರಾಜ್ಯದ ಎಲ್ಲ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ “ಸಮಗ್ರ ಶಿಶು ಅಭಿವೃದ್ಧಿ ಯೋಜನೆ’ಯಡಿ (ಐಸಿಡಿಎಸ್‌) 2024-25ನೇ ಸಾಲಿನಲ್ಲಿ ಸಮವಸ್ತ್ರವಾಗಿ ಸೀರೆ ವಿತರಿಸಿತ್ತು. ಹದಿನೈದು ದಿನವಾದದಷ್ಟೇ ಒಂದು ಅಂಗನವಾಡಿಯ ಕಾರ್ಯಕರ್ತೆ ಹಾಗೂ ಸಹಾಯಕಿಯರಿಗೆ ತಲಾ ಎರಡರಂತೆ ಒಟ್ಟು ನಾಲ್ಕು ಸೀರೆಗಳನ್ನು ವಿತರಿಸಲಾಗಿದೆ. ಮುಂದಿನ ಒಂದು ವರ್ಷದ ತನಕ ದಿನಂಪ್ರತಿ ಈ ಸೀರೆಯನ್ನು ಸಮವಸ್ತ್ರವನ್ನಾಗಿ ಬಳಸಲು ಸೂಚಿಸಲಾಗಿತ್ತು. ಸೆ.15ರಂದು ಸೀರೆ ಬಂದಿದ್ದು, ಅ.2ರಿಂದ ಉಡುವಂತೆ ಸೂಚಿಸಲಾಗಿತ್ತು. ಸೀರೆ ಉಡಲು ಆರಂಭಿಸಿದ ಹದಿನೈದು ದಿನದಲ್ಲೇ ಸೀರೆಯ ಒಂದು ಭಾಗದಲ್ಲಿ ನೂಲು ಬಿಡಲು ಆರಂಭಿಸಿದೆ. ಕೆಲವು ಸೀರೆಗಳಲ್ಲಿ ಕಪ್ಪು ಕಲೆಗಳೂ ಕಂಡು ಬಂದಿವೆ ಎಂದು ದೂರಲಾಗಿದೆ. ಸೀರೆಯ ಬೆಲೆ 400 ರೂಪಾಯಿರಾಜ್ಯದ 69,919 ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 1,37,509 ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿರಿಗೆ ಸರಕಾರವೇ ನೇರವಾಗಿ ಸೀರೆ…

Read More

ಮಂಗಳೂರು: ನಗರದ ಹೊಸಬೆಟ್ಟು ಬೀಚ್ ರಸ್ತೆಯಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಬಿಹಾರ ಮೂಲದ ಅಸಾಮಿಯನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಬಿಹಾರ್ ರಾಜ್ಯದ ನಿವಾಸಿ ಸೋನಿ ಕುಮಾರ್(27) ಬಂಧಿತ ಆರೋಪಿ. ಸುರತ್ಕಲ್ ಠಾಣಾ ಪೊಲೀಸರು ಹೊಸಬೆಟ್ಟು ಬಳಿ ಬೀಚ್ ರಸ್ತೆಯಲ್ಲಿ ಗಸ್ತು ತಿರುಗಾಡುತ್ತಿದ್ದರು‌. ಈ ವೇಳೆ ಹೆಗಲಿನಲ್ಲಿ ಬ್ಯಾಗ್ ಹಾಕಿಕೊಂಡು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವಕನೋರ್ವನು ಪೊಲಿಸ್ ಜೀಪ್ ಅನ್ನು ಕಂಡ ತಕ್ಷಣ ಓಡಲು ಯತ್ನಿಸಿದ್ದಾನೆ‌‌. ಆತನನ್ನು ಪೊಲೀಸರು ಹಿಡಿದು ವಿಚಾರಿಸಿದರೆ, ಆತನು ಹಿಂದಿ ಭಾಷೆಯಲ್ಲಿ ಮಾತನಾಡಿದ್ದಾನೆ. ಓಡಿ ಹೋಗಲು ಕಾರಣವೇನು ಕೇಳಿದಾಗ ಮಾಹಿತಿ ನೀಡಲು ತಡವರಿಸಿದ್ದಾನೆ. ತಕ್ಷಣ ಕೂಲಂಕುಶವಾಗಿ ವಿಚಾರಿಸಿದಾಗ ತನ್ನ ಬ್ಯಾಗ್‌ನಲ್ಲಿ ಗಾಂಜಾ ಇರುವುದಾಗಿ ತಿಳಿಸಿದ್ದಾನೆ. ತಾನು ಬಿಹಾರ ರಾಜ್ಯದಿಂದ ಗಾಂಜಾವನ್ನು ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮಾರಾಟ ಮಾಡಲು ತಂದಿರುವುದಾಗಿ ತಿಳಿಸಿದ್ದಾನೆ. ತಕ್ಷಣ ಆತನನ್ನು ವಶಕ್ಕೆ ತೆಗೆದುಕೊಂಡ ಸುರತ್ಕಲ್ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆರೋಪಿಯಿಂದ ಕೃತ್ಯಕ್ಕೆ ಉಪಯೋಗಿಸಿದ 30,000 ರೂ. ಮೌಲ್ಯದ ಸುಮಾರು 1.5 ಕೆಜಿ ಗಾಂಜಾ, 15,000…

Read More

ಉಡುಪಿ: ಕೆಮ್ಮಣ್ಣು ಪಡುತೋನ್ಸೆಯ ಕುದುರು ನೆಕ್ಸ್ಟ್ ಹೊಳೆಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಆತ್ರಾಡಿ ನಿವಾಸಿ ಬಾಲು ನಾಯ್ಕ್ ಎಂದು ಗುರುತಿಸಲಾಗಿದೆ‌. ಹೊಳೆಯಿಂದ ಶವವನ್ನು ಮೇಲೆತ್ತಲು ಅಲ್ವಿನ್, ಹರಿದಾಸ್, ನಿಖಿಲ್ ಹಾಗೂ ಸತ್ಯ ಅವರು ಸಹಕರಿಸಿದರು. ಮಲ್ಪೆ ಪೊಲೀಸ್ ಠಾಣೆಯ ಎ ಎಸ್ ಐ ವಿಶ್ವನಾಥ್, ನಾಗರಾಜ್ ಸ್ಥಳಕ್ಕೆ ಬಂದು ಮಹಜರು ಪ್ರಕ್ರಿಯೆ ನಡೆಸಿದರು. ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ಶವವನ್ನು ಜಿಲ್ಲಾಸ್ಪತ್ರೆಗೆ ಸಾಗಿಸುವಲ್ಲಿ ಇಲಾಖೆಗೆ ನೆರವಾದರು.

Read More