Author: main-admin

ಉಡುಪಿ: ಕೋಚಿಂಗ್ ಸೆಂಟರ್‌ಗೆ ತೆರಳಿದ್ದ ಬಾಲಕನೋರ್ವ ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ. ಪತ್ತೆಯಾದಲ್ಲಿ ಮಾಹಿತಿ ನೀಡುವಂತೆ ಪೋಷಕರು ಮನವಿ ಮಾಡಿದ್ದಾರೆ. ನಾಪತ್ತೆಯಾದ ಬಾಲಕ ಬ್ರಹ್ಮಾವರದ ಬಾರ್ಕೂರು ರೋಡ್ ಹಂದಾಡಿಯ ನಿವಾಸಿ ಪ್ರಕಾಶ್ ಎಂಬವರ ಪುತ್ರ ಆರ್ಯ (13) ಎಂದು ಗುರುತಿಸಲಾಗಿದೆ. ಭಾನುವಾರ ಬೆಳಗ್ಗೆ ಉಡುಪಿಯ ಕಡಿಯಾಳಿಯಲ್ಲಿರುವ ಆಕಾಶ್ ಇನ್‌‌ಸ್ಟಿಟ್ಯೂಟ್‌ಗೆ ತೆರಳಿದ್ದ ಆರ್ಯ ಮನೆಗೆ ವಾಪಸ್ ಬಂದಿಲ್ಲ ಎಂದು ಪೋಷಕರು ತಿಳಿಸಿದ್ದಾರೆ.ನಾಪತ್ತೆಯಾಗಿರುವ ಬಾಲಕ ಆರ್ಯ ಪತ್ತೆಯಾದಲ್ಲಿ ಉಡುಪಿ ನಗರ ಪೊಲೀಸ್ ಠಾಣೆಗೆ (0820-2520444) ಮಾಹಿತಿ ನೀಡುವಂತೆ ಅಥವಾ 94810249622 ದೂರವಾಣಿ ಸಂಖ್ಯೆಗೆ ಸಂಪರ್ಕಿಸುವಂತೆ ಪೋಷಕರು ಮನವಿ ಮಾಡಿದ್ದಾರೆ.

Read More

ಸೆಪ್ಟೆಂಬರ್‌ 15ರೊಳಗೆ ನಗರದ ಎಲ್ಲಾ ರಸ್ತೆಗಳು ಗುಂಡಿಗಳಿಂದ ಮುಕ್ತವಾಗಿರಬೇಕು. ಇಲ್ಲದಿದ್ದರೆ ಆ್ಯಕ್ಷನ್ ಗ್ಯಾರಂಟಿ ಎಂದು ಅಧಿಕಾರಿಗಳಿಗೆ ಉಪಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಎಚ್ಚರಿಕೆ ನೀಡಿದ್ದಾರೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ಹಿರಿಯ ಅಧಿಕಾರಿಗಳೊಂದಿಗೆ ಭಾನುವಾರ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆದ್ಯತೆ ಮೇರೆಗೆ ಎಲ್ಲ ವಾರ್ಡ್‌ಗಳಲ್ಲಿ ಗುಂಡಿಗಳನ್ನು ತುಂಬುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಉಳಿದ ಕಾಮಗಾರಿಗಳನ್ನು ಬದಿಗೊತ್ತಿ ನಗರದಲ್ಲಿ ಗುಂಡಿಗಳು ಬಾರದಂತೆ ಕಾಮಗಾರಿಗಳ ಕೈಗೊಳ್ಳುವಂತೆ ಸೂಚಿಸಲಾಗಿದೆ. ನಗರದ ರಸ್ತೆಗಳನ್ನು ಗುಂಡಿ ಮುಕ್ತ ಮಾಡಲು ವಾರ್ಡ್ ಮಟ್ಟದ ಎಲ್ಲಾ ಅಧಿಕಾರಿಗಳು, ಅವರ ಶ್ರೇಣಿಯನ್ನು ಲೆಕ್ಕಿಸದೆ, ಕೆಲಸಕ್ಕಿಳಿದು ಕಾಮಗಾರಿಗಳ ಮೇಲ್ವಿಚಾರಣೆ ಮಾಡಬೇಕು. ಸಾರ್ವಜನಿಕರಿಂದ ದೂರುಗಳು ಬಂದರೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು. ಇತ್ತೀಚೆಗಷ್ಟೇ ಮರ ಬಿದ್ದು ಇಬ್ಬರು ಆಟೋ ಚಾಲಕ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಹೀಗಾಗಿ ಇನ್ನು ಮುಂದೆ ಮರ ಬೀಳದಂತೆ ಕ್ರಮ ವಹಿಸುವಂತೆಯೂ ಸೂಚಿಸಲಾಗಿದೆ ಸೆಪ್ಟೆಂಬರ್‌ನಲ್ಲಿ ಹಠಾತ್ ಮಳೆಯಾಗುವ ನಿರೀಕ್ಷೆಯಿರುವುದರಿಂದ ತಗ್ಗು ಪ್ರದೇಶಗಳಲ್ಲಿನ ಮನೆಗಳಿಗೆ…

Read More

ಉಡುಪಿ: ಬಿಜೆಪಿ ಪ್ರತಿಭಟನೆ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೆಪ್ಟೆಂಬರ್ 6ರಂದು ಬಿಜೆಪಿ ಕಾರ್ಯಕರ್ತರು ರಾಜ್ಯ ಸರಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಸಿಂಡಿಕೇಟ್‌ ಸರ್ಕಲ್‌ ಮಧ್ಯಭಾಗದಲ್ಲಿ ಮುಖ್ಯಮಂತ್ರಿಗಳ ಪ್ರತಿಕೃತಿಯನ್ನು ತಂದು ನಿಲ್ಲಿಸಿದ್ದು, ಆರೋಪಿಗಳಾದ ಗಿರೀಶ್‌ ಅಂಚನ್‌ ಹಾಗೂ ಪೃಥ್ವಿರಾಜ್‌ ಶೆಟ್ಟಿ ಬಿಲ್ಲಾಡಿ ಅವರು ಮುಖ್ಯಮಂತ್ರಿಯವರ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದಿದ್ದಾರೆ. ಅನಂತರ ಆರೋಪಿ ಅಭಿರಾಜ್‌ ಶೆಟ್ಟಿಯು ಕೈಯಲ್ಲಿ ಪೆಟ್ರೋಲ್‌ ಬಾಟಲಿ ಹಿಡಿದುಕೊಂಡು ಪ್ರತಿಕೃತಿಗೆ ಬೆಂಕಿ ಹಚ್ಚಿದ್ದರು ಎಂದು ಕಾಂಗ್ರೆಸ್‌ ಮುಖಂಡ ಸೌರಭ್‌ ಬಲ್ಲಾಳ್‌ ದೂರು ನೀಡಿದ್ದರು. ಅದರಂತೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Read More

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೊಲೆ ಆರೋಪಿ ನಟ ದರ್ಶನ್ ಗೆ ರಾಜಾತಿಥ್ಯ ನೀಡಿದ್ದು ಜೈಲು ಸಿಬ್ಬಂದಿಗಳೇ ಎಂಬುದಾಗಿ ಸ್ಪೋಟಕ ಮಾಹಿತಿ ತನಿಖೆಯಲ್ಲಿ ಸತ್ಯ ಬಯಲಾಗಿದೆ. ಈ ಕುರಿತಂತೆ ಪೊಲೀಸ್ ಇಲಾಖೆಯಿಂದ ತನಿಖೆಯನ್ನು ನಡೆಸಲಾಗಿತ್ತು. ತನಿಖಾ ಅಧಿಕಾರಿಗಳ ತಂಡ ಪರಪ್ಪನ ಅಗ್ರಹಾರದ 15 ರಿಂದ 20 ಮಂದಿಯ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದಂತ ನಟ ದರ್ಶನ್ ಗೆ ಜೈಲು ಸಿಬ್ಬಂದಿಳೇ ರಾಜಾತಿಥ್ಯ ನೀಡಿದ್ದಾರೆ ಎಂಬುದಾಗಿ ಹಲವು ಸಿಬ್ಬಂದಿಗಳು ಹೇಳಿಕೆ ನೀಡಿದ್ದಾರೆ. ನಟ ದರ್ಶನ್ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಟೇಬಲ್, ಚೇರ್, ಮಗ್ ನಲ್ಲಿ ಟೀ ಕೊಟ್ಟು ರಾಜಾತಿಥ್ಯ ನೀಡಿದ್ದು ಜೈಲು ಸಿಬ್ಬಂದಿಗಳೇ ಎನ್ನುವ ಮಾಹಿತಿಯನ್ನು ಕಲೆ ಹಾಕಿದ್ದಾರೆ. ಒಟ್ಟಾರೆಯಾಗಿ ನಟ ದರ್ಶನ್ ಗೆ ರಾಜಾತಿಥ್ಯ ನೀಡಿದ್ದು ಜೈಲು ಸಿಬ್ಬಂದಿಗಳೇ ಹೊರತು, ಬೇರೆಯಾರೂ ಅಲ್ಲ. ಇದರಲ್ಲಿ ಜೈಲು ಸಿಬ್ಬಂದಿಗಳ ಪಾತ್ರವೇ ಸಂಪೂರ್ಣವಾಗಿದೆ ಎಂಬುದಾಗಿ ತನಿಖೆಯಿಂದ ಸತ್ಯ ಬಹಿರಂಗವಾಗಿದೆ. ಈ ವರದಿಯನ್ನು ಆಧರಿಸಿ ರಾಜ್ಯ ಸರ್ಕಾರದ ತಪ್ಪೆಸಗಿದಂತ…

Read More

ಮಂಗಳೂರು : ಮಾದಕ ವಸ್ತು ಸೇವಿಸಿದ್ದ ಓರ್ವ ಯುವಕನನ್ನು ನಗರದ ಹೊರವಲಯದ ಪಣಂಬೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಕಸಬಾ ಬೆಂಗ್ರೆ ಬದ್ರಿಯಾ ಮಸೀದಿ ಬಳಿಯ ನಿವಾಸಿ ಮುಹಮ್ಮದ್ ಅಝರ್ (31) ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಪಣಂಬೂರು ಪೊಲೀಸ್ ಠಾಣೆಯ ಪಿಎಸೈ ಜ್ಞಾನಶೇಖರರು ಕರ್ತವ್ಯದಲ್ಲಿದ್ದವೇಳೆ ಸಂಜೆ ಕಸಬಾ ಬೆಂಗ್ರೆ ಗ್ರಾಮದ ಗ್ರಂಡ್ ಬಳಿ ಯುವಕನೋರ್ವ ನಶೆಯಲ್ಲಿ ಇದ್ದಂತೆ ಕಂಡುಬಂದಿದ್ದು ಕೂಡಲೇ ಆತನನ್ನು ವಶಕ್ಕೆ ಪಡೆದು ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಅಮಲು ಪದಾರ್ಥ ಸೇವಿಸಿರುವುದು ದೃಢ ಪಟ್ಟಿದೆ. ಬಳಿಕ ಆತನನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

Read More

ಮನೆಯಲ್ಲಿ ಗಣೇಶನ ಪೂಜೆ ಮಾಡುವ ವಿಚಾರಕ್ಕೆ ಸಹೋದರರ ನಡುವೆ ಗಲಾಟೆಯಾಗಿ ಕೊಲೆಯಲ್ಲಿ ಅಂತ್ಯವಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಸಾಯಿಕಟ್ಟಾ ಬಿಂದು ಮಾಧವ ದೇವಸ್ಥಾನದ ಬಳಿ ನಡೆದಿದೆ. ಸಂದೇಶ್ ಪ್ರಭಾಕರ್ ಬೋರ್ಕರ್, ಹತ್ಯೆಯಾದ ವ್ಯಕ್ತಿ. ಮನೀಶ್ ಕಿರಣ್ ಬೋರ್ಕರ್ ಹತ್ಯೆ ಮಾಡಿದ ಆರೋಪಿ. ಘಟನೆಯಲ್ಲಿ ಶರತ್ ಎಂಬಾತ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪ್ರತೀ ವರ್ಷ ಗಣಪತಿ ಹಬ್ಬದಂದು ಶಿರಸಿಯಿಂದ ಬರುವ ಕುಟುಂಬಸ್ಥರು ಕಾರವಾರದಲ್ಲಿ ಎಲ್ಲರೂ ಸೇರಿ ಗಣೇಶನ ಹಬ್ಬ ಮಾಡ್ತಿದ್ರು. ಪ್ರಭಾಕರ್ ಎಂಬವರು ಕಳೆದ ವರ್ಷದ ಹಣದ ಲೆಕ್ಕ ನೀಡಿಲ್ಲ ಎಂದು ಕುಟುಂಬಸ್ಥರು ಗಲಾಟೆ ಎಬ್ಬಿಸಿದರು. ಈ ವೇಳೆ ಪ್ರಭಾಕರ್ ಮಕ್ಕಳಾದ ಸಂದೇಶ ಹಾಗೂ ಶರತ್ ಸಹಾಯಕ್ಕೆ ಬಂದಿದ್ರು. ಇದನ್ನು ನೋಡಿ ಪ್ರಭಾಕರ್ ತಂಗಿ ಮಕ್ಕಳಾದ ಕಿರಣ್, ಪ್ರಶಾಂತ್, ರತನ್, ಮನೀಶ್ ಗಲಾಟೆ ಮಾಡಿದ್ದಾರೆ. ಗಲಾಟೆ ವೇಳೆ ಕೈಕೈ ಮಿಲಾಯಿಸಿದ್ದಾರೆ. ಈ ವೇಳೆ ಉಳಿದವರು ಸಂದೇಶನನ್ನು ಕೆಳಗೆ ಬೀಳಿಸಿದ್ರೆ, ಮನೀಶ್ ಚಾಕು ಹಿಡಿದು ಹೊಟ್ಟೆಗೆ ಇರಿದಿದ್ದಾನೆ. ತೀವ್ರ ರಕ್ತಸ್ರಾವದಿಂದ…

Read More

ಲಖನೌ : ದೇಶದಲ್ಲಿ ಶಾಂತಿ ಕಾಪಾಡಿಕೊಳ್ಳಲು ಸೇನಾಪಡೆಗಳು ಯುದ್ಧಕ್ಕೂ ಸಿದ್ಧವಿರಬೇಕು ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಗುರುವಾರ ಕರೆ ನೀಡಿದ್ದಾರೆ. ಸೇನೆಯ ಮೂರು ಪಡೆಗಳ ಕಮಾಂಡರ್‌ಗಳು ಇದೇ ಮೊದಲ ಬಾರಿಗೆ ಆಯೋಜಿಸಿರುವ ಜಂಟಿ ಸಮ್ಮೇಳನದಲ್ಲಿ ಅವರು ಮಾತನಾಡಿದರು. ಭಾರತ ಶಾಂತಿ ಪ್ರಿಯ ರಾಷ್ಟ್ರ. ಹಾಗಾಗಿ, ಶಾಂತಿ ಕಾಪಾಡಿಕೊಳ್ಳಲು ಸೇನೆಯು ಯುದ್ಧಕ್ಕೂ ಸಿದ್ಧವಿರಬೇಕು. ಭವಿಷ್ಯದಲ್ಲಿ ಎದುರಾಗಬಹುದಾದ ಭದ್ರತಾ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ಮೂರು ಸೇನಾಪಡೆಗಳು ಜಂಟಿಯಾಗಿ ಕಾರ್ಯನಿರ್ವಹಿಸಬೇಕಿದೆ ಎಂದು ಒತ್ತಿ ಹೇಳಿದರು. ರಷ್ಯಾ–ಉಕ್ರೇನ್‌ ಯುದ್ಧ, ಹಮಾಸ್‌ ಹಾಗೂ ಇಸ್ರೇಲ್‌ ನಡುವಿನ ಸಮರ ಹಾಗೂ ಬಾಂಗ್ಲಾದೇಶದಲ್ಲಿನ ಬೆಳವಣಿಗೆಗಳನ್ನು ಉಲ್ಲೇಖಿಸಿದ ಸಚಿವರು, ಅವುಗಳ ವಿವಿಧ ಆಯಾಮಗಳನ್ನು ಅಧ್ಯಯನ ಮಾಡಿ ಭವಿಷ್ಯದಲ್ಲಿ ಬಂದೊದಗಬಹುದಾದ ಅನಿರೀಕ್ಷಿತ ಸವಾಲುಗಳನ್ನು ಎದುರಿಸಲು ಸಿದ್ಧವಿರಬೇಕು ಎಂದರು. ಜಾಗತಿಕ ಚಂಚಲತೆಯ ಹೊರತಾಗಿಯೂ ಭಾರತವು ಶಾಂತಿಯುತವಾಗಿ ಅಭಿವೃದ್ಧಿ ಸಾಧಿಸುತ್ತಿದೆ. ಹಾಗಿದ್ದರೂ, ಸವಾಲುಗಳು ಹೆಚ್ಚಾಗುತ್ತಲೇ ಇದ್ದು, ನಾವು ಎಚ್ಚರವಾಗಿರಬೇಕಾದ್ದು ಅವಶ್ಯ ಎಂದು ಹೇಳಿದರು. ಸೇನಾಪಡೆಗಳಲ್ಲಿ ಸಾಂಪ್ರದಾಯಿಕ ಹಾಗೂ ಆಧುನಿಕ ಶಸ್ತ್ರಾಸ್ತ್ರಗಳನ್ನು ಸಮತೋಲಿತವಾಗಿ ಸಂಗ್ರಹಿಸಿಟ್ಟುಕೊಳ್ಳಬೇಕು. ದತ್ತಾಂಶ ನಿರ್ವಹಣೆ…

Read More

ಬಂಟ್ವಾಳ: ನವ ದಂಪತಿಗಳಿಬ್ಬರು ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ ಸಂಭವಿಸಿ ನವವಿವಾಹಿತೆ ಸಾವನ್ನಪ್ಪಿದ್ದು, ಪತಿ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಮಂಗಳೂರು-ಬೆಂಗಳೂರು ರಸ್ತೆಯ ಬಂಟ್ವಾಳದ ತಲಪಾಡಿ ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ನವವಿವಾಹಿತೆ ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನಿಶ್ ಕೃಷ್ಣ ಎಂಬವರ ಪತ್ನಿ ಮಾನಸಗಂಭೀರ ಗಾಯಗೊಂಡ ಪತಿ ಅನಿಶ್ ಕೃಷ್ಣ ಎಂದು ಗುರುತಿಸಲಾಗಿದೆ. ಘಟನೆಯಿಂದ ಗಂಭೀರವಾಗಿ ಗಾಯಗೊಂಡ ಅನಿಶ್ ಕೃಷ್ಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಬಿಸಿರೋಡ್‌‌ ಕಡೆಯಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ದಂಪತಿಗಳ ಆಲ್ಟೋ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆಯಿಂದ ಡಿವೈಡರ್ ಮೇಲಿನಿಂದ ಇನ್ನೊಂದು ಬದಿಗೆ ಹಾರಿ ಮಂಗಳೂರು ಕಡೆಯಿಂದ ಬಿಸಿರೋಡಿನ ಕಡೆಗೆ ಬರುತ್ತಿದ್ದ ಕೆ.ಎಸ್.ಆರ್‌ಟಿ.ಸಿ ಬಸ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಮಹಿಳೆ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಘಟನೆಯಿಂದ ಹೆದ್ದಾರಿಯಲ್ಲಿ ಕೆಲಹೊತ್ತು ಸಂಚಾರಕ್ಕೆ ಅಡಚಣೆ ಉಂಟಾಯಿತು. ಸೆ.5 ರಂದು ದೇಂತಡ್ಕ ದೇವಸ್ಥಾನದಲ್ಲಿ ಮದುವೆ ನಡೆದಿತ್ತು. ಮದುವೆ ಕಾರ್ಯಕ್ರಮದ ವಿಚಾರವಾಗಿ ಇಂದು…

Read More

ಪುತ್ತೂರು,: ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲರಿಂದ ಲೈಂಗಿಕ ದೌರ್ಜನ್ಯಕ್ಕೊಳಗಾಗಿರುವುದಾಗಿ ಪೊಲೀಸರಿಗೆ ದೂರು ನೀಡಿದ್ದ ಮಹಿಳೆ ಇದೀಗ ಪುತ್ತಿಲ ವಿರುದ್ದ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೂ ದೂರು ನೀಡಿದ್ದಾರೆ. ತಾನು ನೀಡಿರುವ ದೂರಿನಲ್ಲಿ ಉಲ್ಲೇಖಿಸಿರುವಂತೆ ಪ್ರಕರಣ ದಾಖಲಿಸಿಕೊಳ್ಳಲಿಲ್ಲ ಎಂದು ಪೊಲೀಸರ ವಿರುದ್ದವೂ ಸಂತ್ರಸ್ತೆ ಆಯೋಗಕ್ಕೆ ನೀಡಿರುವ ದೂರಿನಲ್ಲಿ ಆರೋಪಿಸಿದ್ದಾರೆ. ಮಹಿಳೆಯ ದೂರಿನಂತೆ ಲೈಂಗಿಕ ದೌರ್ಜನ್ಯ, ನಂಬಿಕೆ ದ್ರೋಹ, ಕೊಲೆ ಬೆದರಿಕೆ ಒಡ್ಡಿರುವ ಕುರಿತು ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಅರುಣ್ ಕುಮಾರ್ ಪುತ್ತಿಲ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಆದರೆ ಮಹಿಳೆ ನೀಡಿರುವ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿಲ್ಲ ಎಂಬ ಆರೋಪ ವ್ಯಕ್ತವಾಗಿತ್ತು. ಆ ಬಳಿಕ ಆರೋಪಿಯ ವಿರುದ್ಧ ಅತ್ಯಾಚಾರ ಪ್ರಕರಣ (ಐಪಿಸಿ 376) ಸೇರ್ಪಡೆಗೊಳಿಸಿ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಲಾಗಿತ್ತು. ಮಹಿಳೆಯ ದೂರಿನಂತೆ ತನಿಖೆ ಮುಂದುವರಿಸಿದ್ದ ಪುತ್ತೂರುನಗರ ಪೊಲೀಸರು ಠಾಣೆ ಇನ್‌ಸ್ಪೆಕ್ಟರ್ ಸತೀಶ್ ಜಿ.ಜೆ. ಅವರ ನೇತೃತ್ವದಲ್ಲಿ ಸಂತ್ರಸ್ತ ಮಹಿಳೆಯನ್ನು ಸೆ.2ರಂದು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೊಳಪಡಿಸಿ,…

Read More

ಕಾಸರಗೋಡು: ಮನೆಗೆ ಕೆಲಸಕ್ಕೆ ಬಂದ ಸಂದರ್ಭದಲ್ಲಿ ಚಿನ್ನಾಭರಣ , ಐ ಫೋನ್ ಹಾಗೂ ಸ್ಮಾರ್ಟ್ ವಾಚ್ ಗಳನ್ನು ಕಳವು ಗೈದ ಇಬ್ಬರು ಯುವತಿಯರನ್ನು ಮನೆಯವರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಕುಂಬಳೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು ಕಯ್ಯಾರಿನಲ್ಲಿ ವಾಸವಾ ಗಿರುವ ಪತ್ತನಂತ್ತಿಟ್ಟ ಮೂಲದ ಬ್ಲೆಸಿ (23) ಮತ್ತು ಜಿನ್ಸಿ (22) ಎಂದು ಗುರುತಿಸಲಾಗದೆ. ಬಿ .ಸಿ ರೋಡ್ ನ ಮನೆಯಿಂದ ಐ ಫೋನ್, ಮೂರು ಮುಕ್ಕಾಲು ಪವನ್ ಚಿನ್ನಾಭರಣ,ಸ್ಮಾರ್ಟ್ ವಾಚ್ ನ್ನು ಇವರು ಕಳವು ಮಾಡಿದ್ದರು. ಕಯ್ಯಾರಿನಲ್ಲಿ ವಾಸ್ತವ್ಯ ಹೂಡಿ ಮನೆ ಕೆಲಸಕ್ಕೆ ತೆರಳುತ್ತಿದ್ದರು. ಒಂದು ತಿಂಗಳ ಹಿಂದೆ ಕುಬಣೂರಿನ ಸೈನುದ್ದೀನ್ ರವರ ಮನೆಗೆ ಕೆಲಸಕ್ಕೆ ತೆರಳಿದ್ದ ಸಂದರ್ಭದಲ್ಲಿ ಐ ಫೋನ್ ಕಳವು ಗೀಡಾಗಿತ್ತು. ಆದರೆ ಮನೆಯವರು ಫೋನ್ ಎಲ್ಲಿಯಾದರೂ ಬಿದ್ದು ಹೋಗಿರಬಹುದು ಎಂದು ಸಂಶಯಿಸಿದ್ದರು. ಆಗಸ್ಟ್ 24 ಮತ್ತು 25 ರಂದು ಮತ್ತೆ ಈ ಯುವತಿಯರು ಮನೆ ಕೆಲಸಕ್ಕೆ ಬಂದಿದ್ದರು. ಅಂದು ಕೋಣೆಯಲ್ಲಿದ್ದ ಬ್ಯಾಗ್ ನಿಂದ ಚಿನ್ನಾಭರಣ…

Read More