Author: main-admin

ಮಂಗಳೂರು : ಬೇರೊಬ್ಬನನ್ನು ಮದುವೆಯಾಗಲು‌ ಸಿದ್ದಳಾಗಿದ್ದ ಪ್ರಿಯತಮೆಯನ್ನು ಹತ್ಯೆಗೈದಿರುವ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬೆನಕೊಟ್ಟಿ ತಾಂಡಾದ ಸಂದೀಪ್ ರಾಥೋಡ್ (23) ಎಂಬಾತನಿಗೆ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ 25 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದೆ. ಆರೋಪಿ ಸಂದೀಪ್ ರಾಥೋಡ್ ಮತ್ತು ಮೃತ ಅಂಜನಾ ವಸಿಷ್ಠಾ ಫೇಸ್‌ಬುಕ್‌ನಲ್ಲಿ ಪರಿಚಿತರಾಗಿ ಪ್ರೀತಿಯಲ್ಲಿದ್ದರು. ಇಬ್ಬರೂ ಪರಸ್ಪರ ಉದ್ಯೋಗ ಪಡೆದ ಬಳಿಕ ಮದುವೆಯಾಗಲು ನಿರ್ಧರಿಸಿದ್ದರು. ಸಂದೀಪ್ ರಾಥೋಡ್ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಹುದ್ದೆಗೆ ಲಿಖಿತ ಪರೀಕ್ಷೆ ತಯಾರಿಗೆ ಮಂಗಳೂರಿನ ಕೋಚಿಂಗ್ ಸೆಂಟರ್‌ಗೆ ಪ್ರವೇಶ ಪಡೆದಿದ್ದನು. ಈ ವೇಳೆ ಅಂಜನಾ ವಸಿಷ್ಠಾ ಕೂಡಾ ಮಂಗಳೂರಿಗೆ ಬಂದಿದ್ದು, ತಾವಿಬ್ಬರೂ ಪತಿ-ಪತ್ನಿಯೆಂದು ಬಾಡಿಗೆ ಕೊಠಡಿ ಪಡೆದಿದ್ದರು. ಬಳಿಕ ಅಂಜನಾ ವಸಿಷ್ಠಾ ಊರಿಗೆ ಹೋಗಿದ್ದ ಸಂದರ್ಭ ಮನೆಯವರು ಆಕೆಗೆ ಬೇರೊಬ್ಬ ಹುಡುಗನೊಂದಿಗೆ ಮದುವೆ ನಿರ್ಧರಿಸಿದ್ದರು. ಆಕೆಯೂ ಮದುವೆಗೆ ಒಪ್ಪಿಗೆ ಸೂಚಿಸಿದ್ದಳು. ಇದನ್ನು ಸಂದೀಪ್‌ಗೆ ತಿಳಿಸಿ ತನ್ನನ್ನು ಮರೆತುಬಿಡುವಂತೆ ತಿಳಿಸಿದ್ದಳು. ಇದರಿಂದ ಸಿಟ್ಟುಗೊಂಡ ಆತ…

Read More

ಮಂಗಳೂರು: ಕಾನೂನು ಸುವ್ಯವಸ್ಥೆ ಕಾಪಾಡಿ ನಾಗರಿಕರಿಗೆ ಸುರಕ್ಷತೆಯನ್ನು ಒದಗಿಸುವ ಉದ್ದೇಶದಿಂದ ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಿಂದ ಮಂಗಳೂರು ನಗರ ಪೊಲೀಸರಿಗೆ ಅತ್ಯಾಧುನಿಕವಾದ ‘ಐಡಿಯಾ ಫೋರ್ಜ್‌ಡ್ ಕ್ಯು 6’ ಡ್ರೋನ್ ನನ್ನು ಮಂಗಳವಾರದಂದು ನೀಡಲಾಯಿತು. ಈ ಡ್ರೋನ್ ಅನ್ನು ನಗರದಲ್ಲಿ ಕಾನೂನು ಸುವ್ಯವಸ್ಥೆ, ಸಂಚಾರ ವ್ಯವಸ್ಥೆಯ ಮೇಲೆ ನಿಗಾ ಇಡಲು, ಪ್ರತಿಭಟನೆ, ವಿವಿಧ ರೀತಿಯ ಆಚರಣೆಗಳ ಸಂದರ್ಭ ಬಳಸಲಾಗುವುದು. ಇದಕ್ಕೆ ಸಂಬಂಧಿಸಿದಂತೆ 7 ಮಂದಿ ಅಧಿಕಾರಿಗಳಿಗೆ ತರಬೇತಿ ನೀಡಲಾಗಿದೆ.

Read More

ಮಂಗಳೂರು : ಬೇರೊಬ್ಬರನ್ನು ಮದುವೆಯಾಗಲು ಮುಂದಾಗಿದ್ದ ಪ್ರೇಯಸಿಯ ಹತ್ಯೆ ಮಾಡಿದ್ದ ಪ್ರಕರಣದಲ್ಲಿ ಅಪರಾಧಿಗೆ ಜೀವಾವಧಿ ಶಿಕ್ಷೆ ನೀಡಿ ಮಂಗಳೂರು ನ್ಯಾಯಾಲಯ ತೀರ್ಪು ನೀಡಿದೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬೆನಕೊಟ್ಟಿ ತಾಂಡಾದ ಸಂದೀಪ್ ರಾಥೋಡ್ (23)  ಶಿಕ್ಷೆಗೊಳಗಾದ ಅಪರಾಧಿಯಾಗಿದ್ದು ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು  ಶಿಕ್ಷೆಯ ಜೊತೆ ಮತ್ತು 25 ಸಾವಿರ ರೂ ದಂಡ ವಿಧಿಸಿದೆ.ಪ್ರಕರಣದಲ್ಲಿ ಒಟ್ಟು 45 ಸಾಕ್ಷಿದಾರರನ್ನು ವಿಚಾರಿಸಲಾಗಿತ್ತು. ಒಟ್ಟು 100 ದಾಖಲೆಗಳನ್ನು ಗುರುತಿಸಲಾಗಿದೆ. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀ ರವೀಂದ್ರ ಎಮ್ ಜೋಶಿ ಯವರು ಆರೋಪಿಗೆ ಜೀವಾವಧಿ ಶಿಕ್ಷೆ ಮತ್ತು 25,000/- ರೂಪಾಯಿ ದಂಡ, ದಂಡ ಕಟ್ಟಲು ತಪ್ಪಿದ್ದಲ್ಲಿ 3 ತಿಂಗಳ ಸಾದಾ ಸಜೆ ಮತ್ತು ಭಾ.ದಂ.ಸಂ ಕಲಂ 380 ಅಪರಾದದಲ್ಲಿ 3 ತಿಂಗಳ ಸಜೆ ಮತ್ತು 1,000/- ರೂಪಾಯಿ ದಂಡ ದಂಡ ತೆರಲು ತಪ್ಪಿದ್ದಲ್ಲಿ 15 ದಿನಗಳ ಸಾದಾ ಸಜೆ, ಭಾ.ದಂ.ಸಂ ಕಲಂ 403 ಅಪರಾಧಕ್ಕೆ 3 ತಿಂಗಳ…

Read More

ಸಾರ್ವಜನಿಕ ಗಣೇಶೋತ್ಸವಕ್ಕೆ ತಾತ್ಕಾಲಿಕ ವಿದ್ಯುತ್‌ ಸಂಪರ್ಕ ಪಡೆಯಲು ಆಯಾ ಉಪವಿಭಾಗಾಧಿಕಾರಿಗಳನ್ನು ಸಂಪರ್ಕಿಸುವಂತೆ ಬೆಸ್ಕಾಂ ಕೋರಿದೆ. ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಬೆಸ್ಕಾಂ, ಸಂಬಂಧಪಟ್ಟ ಸ್ಥಳೀಯ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ವಿಳಂಬವಿಲ್ಲದೇ, ನಿಯಮಾವಳಿಗಳ ಅನ್ವಯ ತಾತ್ಕಾಲಿಕ ವಿದ್ಯುತ್ ಸಂಪರ್ಕವನ್ನು ಕಲ್ಪಿಸುವಂತೆ ಉಪವಿಭಾಗೀಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದೆ. ಸುರಕ್ಷತಾ ಕ್ರಮಗಳು * ಗಣೇಶ ಹಬ್ಬಕ್ಕೆ ತೋರಣ, ಪೆಂಡಾಲ್‌, ಸೀರಿಯಲ್ ಲೈಟ್‌ಗಳನ್ನು ಹಾಕುವ ಮುನ್ನ ವಿದ್ಯುತ್ ತಂತಿಗಳ ಬಗ್ಗೆ ಗಮನವಿರಲಿ. * ಸೀರಿಯಲ್ ಲೈಟ್ ತಂತಿಗಳು ಸಮರ್ಪಕವಾಗಿ ಇನ್ಸುಲೇಟ್ ಆಗಿವೆಯೇ ಎನ್ನುವುದನ್ನು ಪರೀಕ್ಷಿಸಿಕೊಳ್ಳಿ. * ಸೀರಿಯಲ್‌ ಲೈಟ್‌, ದೀಪಗಳನ್ನು ಹಾಕುವಾಗ ವಿದ್ಯುತ್‌ ಕಂಬದಿಂದ ಸಂಪರ್ಕ ಪಡೆಯದಿರಿ. * ವಿದ್ಯುತ್ ತಂತಿ, ವಿದ್ಯುತ್ ಕಂಬ ಅಥವಾ ಪರಿವರ್ತಕ ಕೇಂದ್ರಗಳಿಗೆ ಚಪ್ಪರ, ಶಾಮಿಯಾನಗಳನ್ನು ಕಟ್ಟದಿರಿ. * ಗಣೇಶ ಮೆರವಣಿಗೆ ವೇಳೆ ರಸ್ತೆ ಬದಿಯ ವಿದ್ಯುತ್ ಮಾರ್ಗಗಳ ಬಗ್ಗೆ ಎಚ್ಚರ, ವಿದ್ಯುತ್‌ ತಂತಿಗಳನ್ನು ಮೇಲಕ್ಕೆ ಎತ್ತುವ ಪ್ರಯತ್ನ ಮಾಡದಿರಿ. ಮೆರವಣಿಗೆ ಮಾರ್ಗವನ್ನು ಮುಂಚಿತವಾಗಿ ಉಪವಿಭಾಗಾಧಿಕಾರಿಗಳ ಗಮನಕ್ಕೆ…

Read More

ಕೋಟ: ಬೇಳೂರು ಗ್ರಾಮದ ಕಲ್ಮಂಡೆ ಎಂಬಲ್ಲಿ ಅಂದರ್ ಬಾಹರ್ ಇಸ್ಪೀಟ್ ಜುಗಾರಿ ಆಡುತ್ತಿದ್ದ 10 ಮಂದಿ ಆರೋಪಿಗಳನ್ನು ಕೋಟ ಪೊಲೀಸರು ಬಂಧಿಸಿದ್ದಾರೆ. ಹಂಸ ಬ್ಯಾರಿ, ಮಧುಕರ, ಚೇತನ್, ಜಯ ಪ್ರಕಾಶ್, ಶ್ರೀರಾಜ್‌, ಮಂಜುನಾಥ, ಸುಬ್ಬಣ್ಣ ಅಶೋಕ, ಬಿ.ನರಸಿಂಹ, ಸೂರ ಬಂಧಿತ ಆರೋಪಿಗಳು. ಇವರೆಲ್ಲ ಕಲ್ಮಂಡೆ ನಿವಾಸಿ ಪ್ರತಾಪ್ ಶೆಟ್ಟಿ ಎಂಬವರ ಮನೆಯ ಹಿಂಬದಿ ಶೆಡ್‌ನಲ್ಲಿ ಅಕ್ರಮವಾಗಿ ಇಸ್ಪೀಟ್ ಜುಗಾರಿ ಆಡುತ್ತಿದ್ದು ಖಚಿತ ಮಾಹಿತಿಯಂತೆ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ಹಾಗೂ 23,700 ರೂ., 10 ಮೊಬೈಲ್‌ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕೆಲವೇ ದಿನಗಳಲ್ಲಿ ಮದುವೆ ನಿಶ್ಚಿತಾರ್ಥವಾಗಬೇಕಿದ್ದ ಬೆಳ್ತಂಗಡಿಯ ಟೆಕ್ಕಿಯೊಬ್ಬ ಬೆಂಗಳೂರಿನಲ್ಲಿ ವೇಶ್ಯಾವಾಟಿಕೆ ದಂಧೆಯಲ್ಲಿ ಸಿಕ್ಕಿಬಿದ್ದಿದ್ದಾನೆ. ಎಲೆಕ್ಟ್ರಾನಿಕ್‌ ಸಿಟಿಯಲ್ಲಿ ವಾಸವಿದ್ದ ಟೆಕ್ಕಿ ಸುಬ್ರಮಣ್ಯ ಶಾಸ್ತ್ರಿ ಬಂಧಿತ ಆರೋಪಿ. ಈತ ಹೊಂಗಸಂದ್ರದ ಮನೆಯಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆಗೆ ಗ್ರಾಹಕನಾಗಿ ತೆರಳಿದ್ದಾಗ ಸಿಸಿಬಿ ಪೊಲೀಸರು ದಾಳಿ ಮಾಡಿದ್ದಾರೆ. ಶಾಸ್ತ್ರಿಯ ನಿಜಬಣ್ಣ ಬಯಲಾಗುತ್ತಿದ್ದಂತೆ ಶೀಘ್ರ ನಡೆಯಬೇಕಿದ್ದ ಈತನ ನಿಶ್ಚಿತಾರ್ಥ ರದ್ದುಗೊಂಡಿದೆ. ಪೊಲೀಸರು ಬಾಂಗ್ಲಾ ಮೂಲದ ಇಬ್ಬರು ಅಪ್ರಾಪ್ತ ಬಾಲಕಿಯರನ್ನು ರಕ್ಷಿಸಿದ್ದಾರೆ.

Read More

ರಾಜ್ಯದಲ್ಲಿ ಎಚ್​ಎಸ್​ಆರ್​ಪಿ ಅಳವಡಿಸಲು ಸೆಪ್ಟೆಂಬರ್ 15ರವರೆಗೆ ಅವಕಾಶ ನೀಡಲಾಗಿದೆ. HSRP ಗಳನ್ನು ಪಡೆಯದ ವಾಹನ ಮಾಲೀಕರು ಸೆ.16 ರಿಂದ ದಂಡವನ್ನು ಪಾವತಿಸಬೇಕಾಗಬಹುದು ಅಥವಾ ಇತರ ದಂಡದ ಕ್ರಮವನ್ನು ಎದುರಿಸಬೇಕಾಗುತ್ತದೆ.ಪೊಲೀಸ್ ಇಲಾಖೆ ಜೊತೆಗೂಡಿ ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಇಲ್ಲದ ವಾಹನಗಳಿಗೆ ದಂಡ ವಿಧಿಸಲು ನಿರ್ಧರಿಸಲಾಗಿದೆ. ಅವಧಿಯೊಳಗೆ ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸದಿದ್ದರೆ 500 ರೂ.ನಿಂದ 1,000 ರೂ.ವರೆಗೆ ದಂಡ ವಿಧಿಸಲಿದೆ ಎಂದು ಹೇಳಲಾಗಿದೆ.

Read More

ಮೂಡುಬಿದಿರೆ: ದ್ವಿಚಕ್ರದಲ್ಲಿ ವಾಹನದಲ್ಲಿ ಆಗಮಿಸಿದ ಇಬ್ಬರು ದುಷ್ಕರ್ಮಿಗಳು ಮಹಿಳೆಯೋರ್ವರ ಕತ್ತಿನಲ್ಲಿದ್ದ ಚಿನ್ನದ ಸರ ಎಗರಿಸಿ ಪರಾರಿಯಾಗಿರುವ ಘಟನೆ ಮಾರ್ನಾಡುವಿನಲ್ಲಿ ನಡೆದಿದೆ. ಮೂರು ಮಾರ್ನಾಡು ನಿವಾಸಿ ಪ್ರೇಮಾ (82) ಎಂಬವರು ಪೇಟೆಗೆ ಹೋಗುತ್ತಿದ್ದ ವೇಳೆ ದ್ವಿಚಕ್ರ ವಾಹನದಲ್ಲಿ ಆಗಮಿಸಿದ ದುಷ್ಕರ್ಮಿಗಳು ಮಹಿಳೆಯ ಕತ್ತಿನಲ್ಲಿದ್ದ 24 ಗ್ರಾಂ ತೂಕದ ಸುಮಾರು 1.5 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಸರವನ್ನು ಎಗರಿಸಿ ಪರಾರಿಯಾಗಿದ್ದಾರೆ. ಘಟನೆಯಿಂದ ಪ್ರೇಮಾರ ಕತ್ತಿನಲ್ಲಿ ಸಣ್ಣ ಗಾಯವಾಗಿದ್ದು, ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಸಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಮಂಗಳೂರು : ಕ್ರಿಕೆಟ್ ಆಡುತ್ತಿರುವ ವೇಳೆ ಹೃದಯಾಘಾತದಿಂದ ಯುವಕನೊಬ್ಬ ಸಾವನಪ್ಪಿದ ಘಟನೆ ಬಜ್ಪೆಯ ಮೂಡುಪೆರಾರ ಕಾಯರಾಣೆಯಲ್ಲಿ ನಡೆದಿದೆ.ಮೃತ ಯುವಕನನ್ನು ಪ್ರದೀಪ್‌ ಪೂಜಾರಿ (31) ಎಂದು ಗುರುತಿಸಲಾಗಿದೆ.ಭಾನುವಾರ ಸಂಜೆ ಪ್ರದೀಪ್ ಕ್ರಿಕೆಟ್‌ ಆಡುವಾಗ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಕೈಕಂಬ ಖಾಸಗಿ ಆಸ್ಪತ್ರೆ ಕರೆದೊಯ್ಯಲಾಗಿತ್ತು. ಅಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಆಯಂಬ್ಯುಲೆನ್ಸ್‌ ನಲ್ಲಿ ಮಂಗಳೂರು ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವಾಗ ದಾರಿ ಮಧ್ಯದಲ್ಲಿ ಮೃತಪಟ್ಟಿದ್ದಾರೆ.

Read More

ಮಂಗಳೂರು:ಚಪ್ಪಲಿ ಹೊಲಿಯುವ ಅಂಗಡಿಗೂ ಕಳ್ಳನೊಬ್ಬ ನುಗ್ಗಿ ಕಳ್ಳತನ ಮಾಡಿದ ಘಟನೆ ನಗರದ ಬಂಟ್ಸ್ ಹಾಸ್ಟೆಲ್ ಬಳಿ ರಾಮಕೃಷ್ಣ ಕಾಲೇಜಿನ ಪಕ್ಕದಲ್ಲಿ ನಡೆದಿದೆ. ಚರ್ಮ ಕುಟೀರದ ಪೆಟ್ಟಿಗೆ ಅಂಗಡಿಯಿಂದ ಛತ್ರಿ, ಚಪ್ಪಲಿ ಹಾಗೂ ₹ 40 ಸಾವಿರ ನಗದು ಸೇರಿ ₹ 1.35 ಲಕ್ಷ ಮೌಲ್ಯದ ಸ್ವತ್ತು ಕಳವಾದ ಬಗ್ಗೆ ನಗರ ಪೂರ್ವ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.ಅಗಸ್ಟ್ 30 ಸಂಜೆ 7.30 ಗಂಟೆಗೆ ಅಂಗಡಿ ಮುಚ್ಚಿದ್ದೆ. ಮರುದಿನ ಬೆಳಿಗ್ಗೆ 9ಕ್ಕೆ ಬಂದು ನೋಡಿದಾಗ ಅಂಗಡಿಯ ಬಾಗಿಲು ತೆರೆದಿತ್ತು. ಅಂಗಡಿಯಲ್ಲಿಟ್ಟಿದ್ದ, ರಾಮಕೃಷ್ಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಿಂದ ನಗದೀಕರಿಸಿದ್ದ ₹40 ಸಾವಿರ ನಗದು, 30 ಛತ್ರಿಗಳು ಹಾಗೂ 50 ಜೊತೆ ಚಪ್ಪಲಿಗಳು ಕಳುವಾಗಿದ್ದವು. ಕಳುವಾದ ಛತ್ರಿ ಮತ್ತು ಚಪ್ಪಲಿಗಳ ಅಂದಾಜು ಮೌಲ್ಯ ₹ 95ಸಾವಿರ’ ಎಂದು ಅಂಗಡಿ ಮಾಲೀಕ ರಾಮ ಎಸ್.ಅವರು ದೂರಿನಲ್ಲಿ ತಿಳಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Read More