ಮಂಗಳೂರು: ಸಂಚರಿಸುತ್ತಿದ್ದಾಗಲೇ ಸಿಟಿ ಬಸ್ ಚಾಲಕ ಶುಗರ್ ಲೋ ಆಗಿ ಕುಸಿದು ಬಿದ್ದ ಪರಿಣಾಮ ಬಸ್ ಮುಂಭಾಗದಲ್ಲಿ ಬರುತ್ತಿದ್ದ ಆಟೋ ಮತ್ತು ಕಾರಿಗೆ ಡಿಕ್ಕಿಯಾದರೂ ಸ್ವಲ್ಪದರಲ್ಲಿ ಭಾರೀ ಅನಾಹುತ ತಪ್ಪಿದ ಘಟನೆ ಹಂಪನಕಟ್ಟೆಯ ಮಿಲಾಗ್ರಿಸ್ ಬಳಿ ನಡೆದಿದೆ. ಮೋರ್ಗನ್ಸ್ ಗೇಟ್ – ಸ್ಟೇಟ್ಬ್ಯಾಂಕ್ ನಡುವೆ ಸಂಚರಿಸುವ ಪಿಟಿಸಿ ಎಂಬ ಖಾಸಗಿ ಬಸ್ ಗುರುವಾರ ಮಧ್ಯಾಹ್ನ ಕೊನೆಯ ಸ್ಟಾಪ್ ಸ್ಟೇಟ್ಬ್ಯಾಂಕ್ ಕಡೆಗೆ ಸಂಚರಿಸುತ್ತಿತ್ತು. ಬಸ್ ಮಿಲಾಗ್ರಿಸ್ ಸ್ಟಾಪ್ನಲ್ಲಿ ನಿಂತು ಹೊರಡಿತ್ತು. ಇನ್ನೇನು ಸಿಗ್ನಲ್ ತಲುಪುವ ಮೊದಲೇ ಬಸ್ ಚಾಲಕ ಪೌಲ್ ಕಿರಣ್ ಲೋಬೊ(46) ದೇಹದಲ್ಲಿ ಸಕ್ಕರೆ ಪ್ರಮಾಣ ಕಡಿಮೆಯಾದ ಹಿನ್ನಲೆಯಲ್ಲಿ ಕುಸಿದು ಬಿದ್ದಿದ್ದಾರೆ. ಬಸ್ ನಿಧಾನ ಗತಿಯಲ್ಲಿತ್ತು. ಅಲ್ಲಿಯೇ ಮುಂಭಾಗದಲ್ಲಿದ್ದ ಹಿಂದಕ್ಕೆ ತೆಗೆಯುತ್ತಿದ್ದ ಆಟೋ ಮತ್ತು ಕಾರಿಗೆ ಬಸ್ ಡಿಕ್ಕಿಯಾಗಿದೆ. ಕಾರು ಹಾಗೂ ಬಸ್ ಮಧ್ಯೆ ಸಿಲುಕಿದ ಆಟೋ ಅಪ್ಪಚ್ಚಿಯಾಗಿದೆ. ಆದರೆ ಅದೃಷ್ಟವಶಾತ್ ಆಟೊಚಾಲಕ ಉಸ್ಮಾನ್ ಮತ್ತು ಆತನ ಪತ್ನಿ, ಮಗು ಹೆಚ್ಚಿನ ಅಪಾಯಗಳಿಲ್ಲದೆ ಪಾರಾಗಿದ್ದಾರೆ. ಘಟನೆಯಲ್ಲಿ ಕಾರು ಮತ್ತು ದ್ವಿಚಕ್ರ ವಾಹನ…
Author: main-admin
ಉಡುಪಿ: ಕಾರ್ಕಳದಲ್ಲಿ ಯುವತಿ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಮತ್ತಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶದ ಗೋವಿಂದಪಲ್ಲಿ ನಿವಾಸಿ ಗಿರಿರಾಜು ಜಗಾಧಾಬಿ (31), ಉಡುಪಿ ಜಿಲ್ಲೆ ಕಾಪು ತಾಲ್ಲೂಕಿನ ಶಂಕರಪುರದ ಜಾನ್ ನೊರೋನ್ಹಾ (30) ಬಂಧಿತ ಆರೋಪಿಗಳು. ಇವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯವು ಪೊಲೀಸ್ ವಶಕ್ಕೆ ನೀಡಿದೆ.ಈ ಪ್ರಕರಣಕ್ಕೆ ಸಂಬಂಧಿಸಿ ಅಲ್ತಾಫ್, ಕ್ಸೇವಿಯರ್ ರಿಚರ್ಡ್ ಕ್ವಾಡ್ರಸ್ ಮತ್ತು ಅಭಯ್ ಎಂಬುವವರನ್ನು ಪೊಲೀಸರು ಈ ಹಿಂದೆ ಬಂಧಿಸಿದ್ದರು. ಒಟ್ಟು ಬಂಧಿತರ ಸಂಖ್ಯೆ ಐದಕ್ಕೆ ಏರಿದೆ.
ಬೆಂಗಳೂರಿನಿಂದ ಮಂಗಳೂರು ನಗರಕ್ಕೆ ಕಾರಿನಲ್ಲಿ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಸಾಗಾಟ/ಮಾರಾಟ ಮಾಡುತ್ತಿದ್ದವನನ್ನು ಪತ್ತೆ ಹಚ್ಚಿ 42 ಗ್ರಾಂ ಎಂಡಿಎಂಎ ನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ. ಮಂಗಳೂರು ನಗರಕ್ಕೆ ಬೆಂಗಳೂರಿನಿಂದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಖರೀದಿಸಿಕೊಂಡು ಹೊಸ ಮಾರುತಿ ಬಲೆನೋ ಕಾರಿನಲ್ಲಿ ಸಾಗಾಟ/ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ಮಂಗಳೂರು ನಗರದ ಸುರತ್ಕಲ್ ಎನ್ಐಟಿಕೆ ಮುಕ್ಕ ಪರಿಸರದಲ್ಲಿ ಅಕ್ರಮವಾಗಿ ಎಂಡಿಎಂಎ ಮಾದಕ ವಸ್ತುವನ್ನು ಹೊಂದಿಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಕಾರನ್ನು ಪತ್ತೆ ಹಚ್ಚಿ ಕಾರಿನಲ್ಲಿದ್ದ ಶಾಜಹಾನ್. ಪಿ.ಎಂ(32) ಕೀಯೂರ್ ಹೌಸ್, ಚಂದ್ರಗಿರಿ ಪೋಸ್ಟ್, ಕಳನಾಡು, ಕಾಸರಗೋಡು ಜಿಲ್ಲೆ, ಕೇರಳ ಮೊಹಮ್ಮದ್ ನಿಶಾದ್(27), ದೇವರಡ್ಕ ಹೌಸ್, ಅಡೂರು, ದೇಲಂಪಾಡಿ ಪೋಸ್ಟ್, ಕಾಸರಗೋಡು ಜಿಲ್ಲೆ, ಕೇರಳ ಪ್ರಸ್ತುತ ರೂಮ್ ನಂಬ್ರ 305, ಸಾರಾ ಟವರ್, ಈಜಿಪುರ, ಕೋರಮಂಗಲ, 5ನೇ ಬ್ಲಾಕ್, ಬೆಂಗಳೂರು, ಮನ್ಸೂರು ಎಂ.ಎಂ(27), ಮುತ್ತಪ್ಪ ದೇವಸ್ಥಾನದ ಹತ್ತಿರ, ಅಬ್ಬೆ ಪಾಲ್ಸ್…
ಮಂಗಳೂರು: ಶ್ರೀಮಡಪ್ಪುರಾಯಿಲ್ ಶರ್ಫುದ್ದೀನ್ ಟ್ರೇಡಿಂಗ್ ಕಂಪೆನಿಯ ಮಹಿಳಾ ಲೆಕ್ಕಪರಿಶೋಧಕಿ 48 ಲಕ್ಷ ರೂ ಹಣಕಾಸು ವಂಚನೆಗೈದಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಈ ಬಗ್ಗೆ ಕಾವೂರು ಠಾಣೆಯಲ್ಲಿ ದೂರು ದಾಖಲಾಗಿದೆ. ಶ್ರೀಮಡಪ್ಪುರಾಯಿಲ್ ಶರ್ಫುದ್ದೀನ್ ಟ್ರೇಡಿಂಗ್ ಕಂಪೆನಿಯ ಹಣಕಾಸು ವ್ಯವಹಾರಗಳನ್ನು ಲೆಕ್ಕಪರಿಶೋಧಕಿ ಪುಷ್ಪಲತಾ ನೋಡಿಕೊಳ್ಳುತ್ತಿದ್ದರು. ಮಾಲಕ ಮತ್ತು ಆಡಿಟರ್ ಕಂಪೆನಿಯ ಹಣಕಾಸು ವ್ಯವಹಾರಗಳ ಸಮಗ್ರ ಪರಿಶೀಲನೆ ನಡೆಸಿದಾಗ ಕಳೆದ ಮೂರು ವರ್ಷಗಳಿಂದ ದೊಡ್ಡ ಹಣಕಾಸು ಅವ್ಯವಹಾರ ನಡೆದಿರುವುದು ಪತ್ತೆಯಾಗಿದೆ. 2024ರ ಜ.11ರಿಂದ 2024ರ ಆ.20ರವರೆಗೆ, 48,83,405 ರೂ. ಹಣ ಕಂಪೆನಿಯ ಸೌತ್ ಇಂಡಿಯನ್ ಬ್ಯಾಂಕ್ ಖಾತೆಯಿಂದ ಅಕ್ಸಿಸ್ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗಿದೆ. ಪುಷ್ಪಲತಾ ಈ ಹಣವನ್ನು ತನ್ನ ಪರಿಚಿತ ರಿತೇಶ್ ಎಂಬಾತನ ಖಾತೆಗೆ ವರ್ಗಾಯಿಸಿದ್ದು, ಬಳಿಕ ತನ್ನ ಸೌತ್ ಇಂಡಿಯನ್ ಬ್ಯಾಂಕ್ ಖಾತೆಗೆ ವರ್ಗಾಯಿಸಿರುವುದು ಕಂಡುಬಂದಿದೆ. ಪುಷ್ಪಲತಾ ಕಂಪನಿಯ ಜಿಎಸ್ಟಿ ಪಾವತಿಗೆ ಮೀಸಲಾಗಿದ್ದ 48,83,405 ರೂ. ಹಣವನ್ನು ತನ್ನ ಮತ್ತು ರಿತೇಶ್ ಖಾತೆಗೆ ವರ್ಗಾಯಿಸಿ, ವಿಶ್ವಾಸಘಾತುಕ ಮತ್ತು ವಂಚನೆ ಮಾಡಿರುವುದಾಗಿ ದೂರಿನಲ್ಲಿ ಆರೋಪಿಸಲಾಗಿದೆ. ಈ…
ಉಡುಪಿ: ರೈಲಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಠಾಣೆಯ ಪೊಲೀಸರು ಆರೋಪಿ ಭಟ್ಕಳದ ನಿವಾಸಿ ಮೊಹಮ್ಮದ್ ಶುರೈಮ್(22)ನನ್ನು ಬಂಧಿಸಿದ್ದಾರೆ. ಉಡುಪಿಯ ಗುಡ್ಡೆಯಂಗಡಿಯ ನಿವಾಸಿ ಬೆಂಗಳೂರಿನಲ್ಲಿ ಐಟಿಯಲ್ಲಿ ಉದ್ಯೋಗ ಮಾಡಿಕೊಂಡಿರುವ ಯುವತಿ ರಾತ್ರಿ ವೇಳೆ ಬೆಂಗಳೂರಿನಿಂದ ಮುರುಡೇಶ್ವರಕ್ಕೆ ಹೋಗುವ ರೈಲು ಹತ್ತಿದ್ದರು.ಬೆಳಗ್ಗೆ 11ಕ್ಕೆ ರೈಲು ಮೂಲ್ಕಿ ದಾಟಿದ ಬಳಿಕ ಆಕೆಗೆ ಆರೋಪಿ ಪದೇಪದೆ ಲೈಂಗಿಕ ಕಿರುಕುಳ ನೀಡುತ್ತಿದ್ದ. ಬಳಿಕ ಗಲಾಟೆ ನಡೆದು ಕ್ಷಮೆ ಯಾಚಿಸಿದ್ದ. ಕೂಡಲೇ ಯುವತಿ ಆತನ ಚಿತ್ರ ತೆಗೆದು ರೈಲ್ವೇಗೆ ಆ್ಯಪ್ ಮೂಲಕ ದೂರು ನೀಡಿದ್ದರು. ಅನಂತರ ಉಡುಪಿ ರೈಲು ನಿಲ್ದಾಣಕ್ಕೆ ಬಂದ ಬಳಿಕ ರೈಲ್ವೇ ಪೊಲೀಸರಿಗೂ ದೂರು ನೀಡಿದ್ದರು. ರೈಲ್ವೇ ಪೊಲೀಸರು ಇದನ್ನು ಮಣಿಪಾಲ ಠಾಣೆಗೆ ಹಸ್ತಾಂತರಿಸಿದರು. ಈ ನಡುವೆ ರೈಲ್ವೇ ಆ್ಯಪ್ ಮೂಲಕ ದೂರು ದಾಖಲಾಗುತ್ತಿದ್ದಂತೆ ಮೇಲಾಧಿಕಾರಿಗಳು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಗಮನಕ್ಕೆ ತಂದರು. ಕೂಡಲೇ ಕಾರ್ಯಪ್ರವೃತ್ತರಾದ ಮಣಿಪಾಲ ಪೊಲೀಸರು ಕಾರ್ಯಾಚರಣೆಗೆ ಇಳಿದು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಉದ್ಯೋಗಾಕಾಂಕ್ಷಿಗಳಿಗೆ ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC GD) ಭರ್ಜರಿ ಸಿಹಿಸುದ್ದಿ ನೀಡಿದ್ದು, 50,000 ಕ್ಕೂ ಹೆಚ್ಚು SSC GD ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ವೆಬ್ಸೈಟ್ನಲ್ಲಿನ ಅಧಿಕೃತ ಅಧಿಸೂಚನೆಯು 2024-2025 ನೇ ಸಾಲಿನ ಪರೀಕ್ಷೆಗಳ ತಾತ್ಕಾಲಿಕ ಕ್ಯಾಲೆಂಡರ್ ಪ್ರಕಾರ, ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ (ಸಿಎಪಿಎಫ್) ಕಾನ್ಸ್ಟೆಬಲ್ (ಜಿಡಿ) ಮತ್ತು ಅಸ್ಸಾಂ ರೈಫಲ್ಸ್ನಲ್ಲಿ ಎಸ್ಎಸ್ಎಫ್, ರೈಫಲ್ಮ್ಯಾನ್ (ಜಿಡಿ), ಮತ್ತು ನಾರ್ಕೋಟಿಕ್ಸ್ 2025ರ ಕಾನ್ಸ್ಟೆಬಲ್ ಪರೀಕ್ಷೆಗೆ ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸುವ ಕಂಟ್ರೋಲ್ ಬ್ಯೂರೋ ಸೂಚನೆಯನ್ನು ಆಯೋಗದ ವೆಬ್ಸೈಟ್ನಲ್ಲಿ 27.08.2024 ರಂದು ಪ್ರಕಟಿಸಬೇಕಿತ್ತು. ಆದಾಗ್ಯೂ, ಆಡಳಿತಾತ್ಮಕ ಕಾರಣಗಳಿಂದಾಗಿ, ಈ ಪರೀಕ್ಷೆಯ ಸೂಚನೆಯನ್ನು ಈಗ 05.09.2024 ರಂದು ಬಿಡುಗಡೆ ಮಾಡಲಾಗುತ್ತದೆ. ಅಧಿಕೃತ ಅಧಿಸೂಚನೆಯ ದಿನಾಂಕ: ಸೆಪ್ಟೆಂಬರ್ 5, 2024 ರಂದು SSC GD ನೇಮಕಾತಿ 2025 ರ ಹುದ್ದೆಗಳಿಗೆ ಅಧಿಕೃತ ಅಧಿಸೂಚನೆಯನ್ನು ಪ್ರಕಟಿಸಲಾಗುವುದು. ವಯಸ್ಸಿನ ಮಿತಿ: ಅಭ್ಯರ್ಥಿಗಳ ವಯಸ್ಸಿನ ಮಿತಿಯು 1 ಜನವರಿ 2025 ರಂತೆ 18 ರಿಂದ 25 ವರ್ಷಗಳ ನಡುವೆ…
ಮಂಗಳೂರು: ನಿಷೇಧಿತ ಮಾದಕದ್ರವ್ಯ ಎಂಡಿಎಂಎಯನ್ನು ಸಾಗಾಟ ಮಾಡಿ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ, ಆರೋಪಿಗಳಿಂದ 15 ಗ್ರಾಂ ಎಂಡಿಎಂಎಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಕಾಸರಗೋಡು ಜಿಲ್ಲೆಯ ಅಬ್ದುಲ್ ಸಲಾಂ (30), ಸೂರಜ್ ರೈ(26) ಬಂಧಿತ ಆರೋಪಿಗಳು. ನಿಷೇಧಿತ ಮಾದಕದ್ರವ್ಯ ಎಂಡಿಎಂಎಯನ್ನು ದ್ವಿಚಕ್ರ ವಾಹನದಲ್ಲಿ ಮಂಗಳೂರಿಗೆ ಸಾಗಿಸುತ್ತಿದ್ದರು. ಇಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡಲು ಬರುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ತಲಪಾಡಿ ಕೆ.ಸಿ.ರೋಡ್ ಬಳಿ ದ್ವಿಚಕ್ರ ವಾಹನವನ್ನು ಪತ್ತೆ ಹಚ್ಚಿ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ 75 ಸಾವಿರ ಮೌಲ್ಯದ 15 ಗ್ರಾಂ ಎಂಡಿಎಂಎ, 2 ಮೊಬೈಲ್ ಫೋನ್ಗಳು, ಡಿಜಿಟಲ್ ತೂಕಮಾಪಕ ಹಾಗೂ ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ 1,65,000 ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು: ಎಂಎಲ್ ಸಿ ಐವನ್ ಡಿಸೋಜಾ ಮನೆಗೆ ಕಲ್ಲು ಎಸೆದ ಪ್ರಕರಣದಲ್ಲಿ ಪೊಲೀಸರು ಇಬ್ಬರು ಸಂಘಪರಿವಾರದ ಕಾರ್ಯಕರ್ತ ಎನ್ನಲಾದವರನ್ನು ಬಂಧಿಸಿದ್ದಾರೆ.ಕಲ್ಲಡ್ಕದ ದಿನೇಶ್ (20) ಮತ್ತು ಭರತ್ (24) ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ.ಬಂಧಿತರಿಬ್ಬರೂ ವಿಎಚ್ ಪಿ ಹಾಗೂ ಬಜರಂಗದಳದ ಕಾರ್ಯಕರ್ತರು ಎಂದು ಹೇಳಲಾಗಿದೆ.ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾದ ದೃಶ್ಯವನ್ನು ಆಧರಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಎಲ್ಲಾ ಪಡಿತರ ಚೀಟಿದಾರರು ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ಮಾಡಿಸುವದು ಕಡ್ಡಾಯವಾಗಿದೆ. ಆ.31 ರೊಳಗಾಗಿ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಬೆ.7.00 ರಿಂದ ರಾ. 9.00 ರವರೆಗೆ ಉಚಿತವಾಗಿ ಮಾಡಿಸಿಕೊಳ್ಳುವುದು. ಇ-ಕೆವೈಸಿ ಮಾಡಿಸದಿರುವ ಪಡಿತರ ಚೀಟಿದಾರರಿಗೆ ಮುಂದಿನ ದಿನಗಳಲ್ಲಿ ಪಡಿತರ ಹಂಚಿಕೆಯನ್ನು ಸ್ಥಗಿತಗೊಳಿಸಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ತಿಳಿಸಿದೆ. ಪಡಿತರ ಚೀಟಿ ಇ-ಕೆವೈಸಿ ಮಾಡಿಸಲು ಈ ದಾಖಲೆಗಳು ಕಡ್ಡಾಯ ಪಡಿತರ ಚೀಟಿಯ ಒರಿಜಿನಲ್ ಪ್ರತಿ ಕುಟುಂಬದ ಸದಸ್ಯರ ಆಧಾರ್ ಕಾರ್ಡ್ ಫೋಟೋಕಾಪಿ ಕುಟುಂಬದ ಯಜಮಾನನ ಆಧಾರ್ ಕಾರ್ಡ್ ನಕಲು ಪ್ರತಿ ಬ್ಯಾಂಕ್ ಪಾಸ್ಬುಕ್ನ ಫೋಟೋಕಾಪಿ ಕುಟುಂಬದ ಯಜಮಾನನ ಎರಡು ಪಾಸ್ಪೋರ್ಟ್ ಅಳತೆಯ ಪೋಟೋ ಪಡಿತರ ಚೀಟಿ ಮತ್ತು ಆಧಾರ್ ಅನ್ನು ಆನ್ ಲೈನ್ ನಲ್ಲಿ ಈ ರೀತಿ ಲಿಂಕ್ ಮಾಡಿ ನಿಮ್ಮ ರಾಜ್ಯದ ಅಧಿಕೃತ ಸಾರ್ವಜನಿಕ ವಿತರಣಾ ವ್ಯವಸ್ಥೆ (ಪಿಡಿಎಸ್) ಪೋರ್ಟಲ್ಗೆ ಭೇಟಿ ನೀಡಿ. ಸಕ್ರಿಯ ಕಾರ್ಡ್ನೊಂದಿಗೆ ಆಧಾರ್ ಲಿಂಕ್ ಆಯ್ಕೆ ಮಾಡಿ. ನಿಮ್ಮ ಪಡಿತರ…
ಉಪ್ಪಿನಂಗಡಿ: ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿ ಗರುಡ ಗ್ಯಾಂಗ್ನ ಸದಸ್ಯ ಹಾಗೂ ಅಂತರ್ ಜಿಲ್ಲಾ ಕಳ್ಳತನ ಪ್ರಕರಣಗಳ ಆರೋಪಿಯೋರ್ವನನ್ನು ಉಪ್ಪಿನಂಗಡಿ ಪೊಲೀಸರು ಆ. 27ರಂದು ಬಂಧಿಸಿದ್ದಾರೆ. ಕಡಬ ತಾಲೂಕು ಐತ್ತೂರು ಗ್ರಾಮದ ಕಾಯರ್ತಡ್ಕ ನಿವಾಸಿ ಝಕಾರಿಯಾ ಎಂಬವರ ಪುತ್ರ ಅಬ್ದುಲ್ ಹಮೀದ್ (27) ಬಂಧಿತ ಆರೋಪಿ. 2023ರ ಅಕ್ಟೋಬರ್ 10ರಂದು ಬಜತ್ತೂರು ಗ್ರಾಮದ ನೀರಕಟ್ಟೆ ಎಂಬಲ್ಲಿ ಚತುಷ್ಪಥ ಹೆದ್ದಾರಿ ಕಾಮಗಾರಿಗೆ ಉಪಯೋಗಿಸುವ ಕೆ.ಎನ್.ಆರ್. ಸಂಸ್ಥೆಯ ಕಬ್ಬಿಣದ ಶೀಟ್ಗಳನ್ನು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಈತನನ್ನು ಬಂಧಿಸಲಾಗಿದ್ದು, ವಿಚಾರಣೆ ವೇಳೆ ಕೌಕ್ರಾಡಿ ಗ್ರಾಮದ ಪೆರಿಯಶಾಂತಿ ಎಂಬಲ್ಲಿ ನಡೆದ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿರುವುದಾಗಿ ಈತ ಒಪ್ಪಿಕೊಂಡಿದ್ದಾನೆ. ಅಲ್ಲದೇ ಈತನ ಮೇಲೆ ಮಂಗಳೂರು ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ.ಎಸ್. ಕಾಯ್ದೆ, ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣ, ಉಡುಪಿ ಜಿಲ್ಲೆಯ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಚೋದನೆ, ದಾವಣಗೆರೆ ಆರ್.ಎಂ.ಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಸುಲಿಗೆ ಪ್ರಕರಣ, ಸಕಲೇಶಪುರ ನಗರ ಪೊಲೀಸ್ ಠಾಣೆಯಲ್ಲಿ ಸಂಶಯಾಸ್ಪದವಾಗಿ ಸಿಲುಕಿದ ಪ್ರಕರಣ,…









