Author: main-admin

ಮಂಗಳೂರು: ಮಂಗಳೂರು ನಗರ ಸೇರಿದಂತೆ ಇತರ ರಾಜ್ಯಗಳಿಗೆ ಎಂಡಿಎಂಎ ಮಾದಕದ್ರವ್ಯ ಪೂರೈಕೆ ಮಾಡುತ್ತಿದ್ದ ನೈಜಿರಿಯಾ ಪ್ರಜೆಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ 6 ಕೋಟಿ ಮೌಲ್ಯದ 6.300 ಕೆಜಿ ಎಂಡಿಎಂಎಯನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ. ಬೆಂಗಳೂರಿನ ದೊಮ್ಮಸಂದ್ರದ ವಿವೇಕಾನಂದ ನಗರದಲ್ಲಿ ವಾಸವಿರುವ ಪೀಟರ್ ಇಕೆಡಿ ಬೆಲೊನ್ವು(38) ಎಂಬ ನೈಜೀರಿಯಾ ಪ್ರಜೆ ಬಂಧಿತ ಆರೋಪಿ ಸೆಪ್ಟೆಂಬರ್ 29ರಂದು ನಗರದ ಪಂಪ್‌ವೆಲ್ ಬಳಿ ಎಂಡಿಎಂಎ ಮಾದಕದ್ರವ್ಯವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿ ತೊಕ್ಕೊಟ್ಟು, ಪರ್ಮನ್ಬೂರು ನಿವಾಸಿ ಹೈದರ್ ಅಲಿ(51) ಎಂಬಾತನನ್ನು ಬಂಧಿಸಿ 75,000ರೂ. ಮೌಲ್ಯದ 15ಗ್ರಾಂ ಎಂಡಿಎಂಎಯನ್ನು ವಶಪಡಿಸಿಕೊಂಡಿದ್ದರು. ಪ್ರಕರಣದ ತನಿಖೆಯನ್ನು ಮಂಗಳೂರು ಸಿಸಿಬಿ ಘಟಕಕ್ಕೆ ಹಸ್ತಾಂತರಿಸಲಾಗಿತ್ತು. ಸಿಸಿಬಿ ಪೊಲೀಸರು ಮಾದಕದ್ರವ್ಯ ಪೂರೈಕೆ ಮಾಡುವ ಡ್ರಗ್ಸ್ ಪೆಡ್ಲರ್‌ಗಳ ಹಿಂದೆ ಬಿದ್ದು ತನಿಖೆ ಕೈಗೊಂಡಿದ್ದರು. ಆಗ ಮಾದಕದ್ರವ್ಯ ಪೂರೈಕೆ ಮಾಡುವ ವ್ಯಕ್ತಿ ಬೆಂಗಳೂರಿನಲ್ಲಿ ವಾಸ್ತವ್ಯವಿರುವ ನೈಜೀರಿಯಾ ದೇಶದ ಪ್ರಜೆ ಎಂದು ತಿಳಿದುಬಂದಿದೆ. ಅದರಂತೆ ಸಿಸಿಬಿ ಪೊಲೀಸರು ಬೆಂಗಳೂರು ನಗರದ…

Read More

ಮಂಗಳೂರು: ಬಡಗ ಎಡಪದವು ಚಟ್ಟೆಪಾದೆಯ ದಡ್ಡಿ ರೋಡ್‌ನ ನಿವಾಸಿ ರಮೇಶ್ ಕುಲಾಲ್ ಗುರುಪುರ ಸೇತುವೆಯಿಂದ ಫಲ್ಗುಣಿ ನದಿಗೆ ಹಾರಿದ್ದು ಇಂದು ಮೃತದೇಹ ಪತ್ತೆಯಾಗಿದೆ. ಬಡಗ ಎಡಪದವು ಚಟ್ಟೆಪಾದೆಯ ದಡ್ಡಿ ರೋಡ್‌ನ ರಮೇಶ್ ಕುಲಾಲ್ (48) ಶನಿವಾರ ರಾತ್ರಿ 8ಕ್ಕೆ ಬಸ್ಸಿನಲ್ಲಿ ಗುರುಪುರ ಸೇತುವೆ ಬಳಿ ಆಗಮಿಸಿ ಸೇತುವೆ ಮೇಲೆ ಮೊಬೈಲ್ ಮತ್ತು ಚಪ್ಪಲಿಯನ್ನಿಟ್ಟು ನದಿಗೆ ಹಾರಿರುವ ಬಗ್ಗೆ ಶಂಕೆ ವ್ಯಕ್ತವಾಗಿತ್ತು. ಎಸ್‌ಡಿಆರ್‌ಎಫ್ ಮತ್ತು ಪೊಲೀಸರು ನಾಪತ್ತೆಯಾದ ವ್ಯಕ್ತಿಗಾಗಿ ಹುಡುಕಾಟ ನಡೆಸಿದರು. ರಮೇಶ್ ಶನಿವಾರ ರಾತ್ರಿಯಿಂದ ನಾಪತ್ತೆಯಾಗಿದ್ದಾರೆ ಎಂದು ಅವರ ಪತ್ನಿ ಬಜ್ಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ರಮೇಶ್ ಮಂಗಳೂರಿನ ಇನ್‌ಲ್ಯಾಂಡ್ ಕಂಪೆನಿಯಲ್ಲಿ ಜೆಸಿಬಿ ಚಾಲಕನಾಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ರಮೇಶ್‌ಗಾಗಿ ಫಲ್ಗುಣಿ ನದಿಯಲ್ಲಿ ಕಾರ್ಯಾಚರಣೆ ನಡೆಸಿ ಎರಡು ದಿನಗಳ ಬಳಿಕ ಇಂದು ಬೆಳಿಗ್ಗೆ ಸುಮಾರು 9 ಗಂಟೆಗೆ ಮೃತದೇಹವನ್ನು ಎಸ್‌ಡಿಆರ್‌ಎಫ್ ಮತ್ತು ಪೊಲೀಸರು ಪತ್ತೆಹಚ್ಚಿದರು.

Read More

ಮಂಗಳೂರು : ನಾಪತ್ತೆಯಾಗಿದ್ದ ಮಾಜಿ ಶಾಸಕ ಮೊಯಿದ್ದೀನ್ ಬಾವಾ ಸಹೋದರ ಮುಮ್ತಾಜ್ ಅಲಿ ಮೃತದೇಹ ಪತ್ತೆಯಾಗಿದೆ. ನಿನ್ನೆ ಮುಂಜಾನೆ 3 ಗಂಟೆ ಸುಮಾರಿಗೆ ಮನೆಯಿಂದ ಹೋಗಿರುವ ಮುಮ್ತಾಜ್ ಅವರ ಕಾರು ಕುಳೂರಿನ ಸೇತುವೆ ಮೇಲೆ ಪತ್ತೆಯಾಗಿತ್ತು. ಕಾರು ಡ್ಯಾಮೇಜ್ ಆದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಅಗರ್ವಾಲ್ ಭೇಟಿ ನೀಡಿದ್ದಾರೆ. ನದಿಯಲ್ಲಿ ಎನ್ ಡಿಆರ್ ಎಫ್, ಎಸ್ ಡಿಆರ್ ಎಫ್ ತಂಡಗಳಿಂದ ನಿನ್ನೆಯಿಂದ ತಪಾಸಣೆ ನಡೆಸಲಾಗಿತ್ತು. ಆದರೆ ಇಂದು ನದಿಯಲ್ಲಿ ಮುಮ್ತಾಜ್ ಅಲಿ ಶವ ಪತ್ತೆಯಾಗಿದೆ

Read More

ಉಡುಪಿ : ಹೆಬ್ರಿಯಲ್ಲಿ ಭಾನುವಾರ ಮೇಘಸ್ಫೋಟ ಸಂಭವಿಸಿದ್ದು, ಧಾರಾಕಾರ ಮಳೆ ಸುರಿದು ಹಠಾತ್ ಜಲ ಪ್ರವಾಹ ಉಂಟಾಗಿದೆ. ಈ ಪ್ರವಾಹದಲ್ಲಿ ಹಲವು ವಾಹನಗಳು, ಜಾನುವಾರು ಮತ್ತು ವೃದ್ಧೆಯೊಬ್ಬರು ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಭಾನುವಾರ ಮಧ್ಯಾಹ್ನ ಒಂದೇ ಸಮನೆ ಸುರಿದ ಮಳೆಗೆ ಗುಮ್ಮ ಗುಂಡಿ ನದಿ ನೀರು ಉಕ್ಕಿ ಹರಿದಿದ್ದು, ಬಲ್ಲಾಡಿ, ಕಂತಾರ್‌ಬೈಲು ಗ್ರಾಮದ ಜನರು ತತ್ತರಿಸಿ ಹೋಗಿದ್ದಾಾರೆ. ಧಿಡೀರ್ ಸುರಿದ ಮಳೆಗೆ ಗ್ರಾಮದ ಕೆಲವು ಮನೆಗಳು ಜಲಾವೃತಗೊಂಡಿದ್ದು, ಒಂದು ಕಾರು, 15ಕ್ಕೂ ಹೆಚ್ಚು ದನಕರುಗಳು, ಅಡಿಕೆ ಮರಗಳು ಪ್ರವಾಹದ ನೀರಿನಲ್ಲಿ ಕೊಚ್ಚಿ ಹೋಗಿದ್ದು, ಅಪಾರ ನಷ್ಟ ಉಂಟಾಗಿದೆ. ಧಿಡೀರ್ ಸುರಿದ ಧಾರಾಕಾರ ಮಳೆಯಿಂದ ತತ್ತರಿಸಿ ಹೋದ ಗ್ರಾಮದಲ್ಲಿ ರಕ್ಷಣಾ ಕಾರ್ಯಾಚರಣೆ ಮಾಡಲಾಗಿದ್ದು, ಘಟನಾ ಸ್ಥಳಕ್ಕೆ ಸ್ಥಳೀಯರು, ಅಧಿಕಾರಿಗಳು ಆಗಮಿಸಿದ್ದರು. ಇನ್ನು ಈ ದಿಢೀರ್ ಮೇಘಸ್ಫೋಟದಿಂದ ಪ್ರವಾಹ ಉಂಟಾಗಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಯಾಗಿದೆ.

Read More

ಮೂಲ್ಕಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಮಾದಕ ವಸ್ತು ಎಲ್‌ಎಸ್‌ಡಿ ಮಾದಕ ವಸ್ತುಗಳ ಸಾಗಾಟ ಮತ್ತು ಮಾರಾಟ ಮಾಡುತ್ತಿದ್ದ ಕೇರಳ ಮೂಲದ ಇಬ್ಬರನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಬಂಧಿತರಿಂದ ಕಾರು ಹಾಗೂ ಮಾದಕ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಪ್ರಸ್ತುತ ಹಳೆಯಂಗಡಿ ಬಳಿಯ ಕೊಪ್ಪಳ ಸಮೀಪದಲ್ಲಿ ವಾಸ್ತವ್ಯವಿದ್ದ ಅದಿಲ್‌ ಮತ್ತು ಮಹಮ್ಮದ್‌ ನಿಹಾಲ್‌ ಬಂಧಿತರು. ಖಚಿತ ಮಾಹಿತಿ ಆಧಾರದಲ್ಲಿ ಮೂಲ್ಕಿ ಪಿಎಸ್‌ಐ ಅನಿತಾ ಎಚ್‌.ಬಿ. ನೇತೃತ್ವದ ತಂಡ ಆರೋಪಿಗಳನ್ನು ಬಂಧಿಸಿದೆ.ಪೊಲೀಸರು ಆರೋಪಿಗಳ ವಿಚಾರಣೆ ನಡೆಸಿದ್ದಾರೆ. ಆರೋಪಿಗಳು ಮಂಗಳೂರು ಹೊರವಲಯದ ಕಾಲೇಜೊಂದರ ವಿದ್ಯಾರ್ಥಿಗಳಾಗಿದ್ದು, ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ

Read More

ಮಂಗಳೂರು : ಖಾಸಗಿ ಕಾರ್ಯಕ್ರಮವೊಂದರಲ್ಲಿ ತಮ್ಮ ಅನಿಸಿಕೆ ಹೇಳಿದ್ದಕ್ಕೆ ಇದೀಗ ಉಪನ್ಯಾಸಕ ಅರುಣ್ ಉಳ್ಳಾಲ್ ಮೇಲೆ ಎಫ್ಐಆರ್ ದಾಖಲಾಗಿದೆ. ಧರ್ಮಗಳ ನಡುವೆ ದ್ವೇಷ ಹಬ್ಬಿಸುವ ಮಾತುಗಳನ್ನು ಆಡಿದ ಆರೋಪದ ಮೇಲೆ ತೊಕ್ಕೊಟ್ಟು ಭಟ್ನಗರದ ನಿವಾಸಿಯಾಗಿರುವ ಖಾಸಗಿ ಕಾಲೇಜಿನ ಉಪನ್ಯಾಸಕ ಅರುಣ್‌ ಉಳ್ಳಾಲ್‌ ಎಂಬುವರ ವಿರುದ್ಧ ಇಲ್ಲಿನ ಸೆನ್‌ ಅಪರಾಧ ಠಾಣೆಯ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಅರುಣ್ ಉಳ್ಳಾಲ್ ಅವರ ಮೇಲೆ ಎಫ್ಐಆರ್ ದಾಖಲಾಗಿರುವುದಕ್ಕೆ ವಿಶ್ವ ಹಿಂದೂ ಪರಿಷತ್ ಖಂಡನೆ ವ್ಯಕ್ತಪಡಿಸಿದ್ದು, ಅರುಣ್ ಉಳ್ಳಾಲ್ ಅವರ ಜೊತೆಗೆ ನಾವೀದ್ದೇವೆ ಎಂದಿದೆ. ಈ ಕುರಿತಂತೆ ಪೋಸ್ಟ್ ಮಾಡಿರುವ ವಿಎಚ್ ಪಿ ಮುಖಂಡ ಶರಣ್ ಪಂಪ್ ವೆಲ್ ಡಾ ಅರುಣ್ ಉಳ್ಳಾಲ ಅವರೇ ನಿಮ್ಮ ಜೊತೆ ನಾವು ಇದ್ದವೆ. ನೂರಾರು ಧರ್ಮ ಶಿಕ್ಷಣ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳಲ್ಲಿ ರಾಷ್ಟ್ರಭಕ್ತಿ ಜಾಗೃತಿಮೂಡಿಸಿ ಹಿಂದೂ ಸಮಾಜದ ಏಳಿಗೆಗೆ ಶ್ರಮಿಸುತ್ತಿರುವ ನಿಮ್ಮ ಕಾರ್ಯವನ್ನು ಮುಂದುವರಿಸಿ. ಹಿಂದುಗಳನ್ನು ಗುರಿಯಾಗಿಸಿಕೊಂಡು ನಿರಂತರ ಕೇಸು ದಾಖಲಿಸುತ್ತಿರುವ ಹಿಂದೂ ವಿರೋಧಿ ರಾಜ್ಯ ಸರ್ಕಾರಕ್ಕೆ ದಿಕ್ಕಾರ ಡಾ…

Read More

ಸುಳ್ಯ: ಪ್ರಕರಣವೊಂದರ ವಾರಂಟ್ ಆರೋಪಿಯೋರ್ವ ವೈದ್ಯಕೀಯ ತಪಾಸಣೆ ಸಂದರ್ಭದಲ್ಲಿ ಆಸ್ಪತ್ರೆಯಿಂದಲೇ ಪರಾರಿಯಾಗಿರುವ ಘಟನೆ ಸುಳ್ಯದಲ್ಲಿ ನಡೆದಿದೆ. ಸುಳ್ಯದ ಕಲ್ಲುಗುಂಡಿ ಎಂಬಲ್ಲಿ ಕೆಲ ವರ್ಷಗಳ ಹಿಂದೆ ನಡೆದಿದ್ದ ಕಳ್ಳತನ ಪ್ರಕರಣದ ಆರೋಪಿಯಾದ ತಮಿಳುನಾಡು ಮೂಲದ ಕಾರ್ತಿಕ್ ಪರಾರಿಯಾಗಿರುವ ಆರೋಪಿ ಎಂದು ತಿಳಿದು ಬಂದಿದೆ. ಆರೋಪಿಯನ್ನು ಸುಳ್ಯದ ಇಬ್ಬರು ಪೊಲೀಸ್ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರುಪಡಿಸುವ ಮೊದಲು ಸುಳ್ಯದ ಸರಕಾರಿ ಆಸ್ಪತ್ರೆಗೆ ಆರೋಗ್ಯ ತಪಾಸಣೆಗೆ ಕರೆದೊಯ್ದಿದ್ದು, ಈ ವೇಳೆ ಒರ್ವ ಸಿಬ್ಬಂದಿ ಚೀಟಿ ಮಾಡಿಸಲು ತೆರಳಿದ್ದ ಸಂದರ್ಭದಲ್ಲಿ ಇನ್ನೋರ್ವ ಸಿಬ್ಬಂದಿಯೊಂದಿಗಿದ್ದ ಆರೋಪಿ ಸಮಯ ಸಾಧಿಸಿ ಅಲ್ಲಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಆಸ್ಪತ್ರೆಯಿಂದ ಹೊರಬಂದ ಆರೋಪಿ ಹತ್ತಿರದ ತೋಟಕ್ಕೆ ಜಿಗಿದು ತಪ್ಪಿಸಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ಕೂಡಲೇ ಪೊಲೀಸರು ಆರೋಪಿಗಾಗಿ ಹುಡುಕಾಟ ಆರಂಭಿಸಿದ್ದು, ತಡರಾತ್ರಿ ವರೆಗೂ ಹುಡುಕಾಟ ಮುಂದುವರಿಸಿದ್ದರು.

Read More

ಮಂಗಳೂರು: ಮಾಜಿ ಶಾಸಕ ಮೊಯಿದೀನ್ ಬಾವಾ ಅವರ ಸಹೋದರ ಮಮ್ತಾಜ್ ಅಲಿ ಅವರ ಕಾರು ಅಪಘಾತಗೊಂಡ ಸ್ಥಿತಿಯಲ್ಲಿ ಇಂದು ಕೂಳೂರು ಸೇತುವೆ ಮೇಲೆ ಪತ್ತೆಯಾಗಿದೆ.ಆದರೆ ಅವರು ನಾಪತ್ತೆಯಾಗಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ. ರವಿವಾರ ಮುಂಜಾನೆ ಈ ಘಟನೆ ನಡೆದಿದೆ ಎನ್ನಲಾಗಿದೆ ‌ ಅಗ್ನಿಶಾಮಕ ಹಾಗೂ ಈಜು ತಜ್ಞರು ನದಿಯಲ್ಲಿ ಹುಡುಕಾಟ ಆರಂಭಿಸಿದ್ದರೆ, ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿ ಚುರುಕಿನ ತನಿಖೆ ಕೈಗೊಂಡಿದ್ದಾರೆ. ಮಮ್ತಾಜ್ ಅಲಿ ಅವರು ತನ್ನ ಮಗಳಿಗೆ ವಾಟ್ಸಪ್ ಮೂಲಕ ಇನ್ನು ನಾನು ಹಿಂತಿರುಗಿ ಬರುವುದಿಲ್ಲ ಎಂಬ ಸಂದೇಶ ಕೂಡ ರವಾನಿಸಿದ್ದಾರೆ ಎಂದು ತಿಳಿಯಲಾಗಿದೆ. ಈ ವಿಷಯ ಆತಂಕಕ್ಕೆ ಕಾರಣವಾಗಿದೆ.ಇವರು ಮಿಸ್ಬಾ ಸಮೂಹ ಶಿಕ್ಷಣ ಸಂಸ್ಥೆಯ ಚೇರ್ಮನ್ ಆಗಿದ್ದು, ಸ್ಥಳೀಯ ಜಮಾತ್ ನ ಪ್ರಮುಖರಾಗಿದ್ದಾರೆ. ಮಾಜಿ ಶಾಸಕ ಮೊಯಿದೀನ್ ಬಾವಾ ಹಾಗೂ ಕುಟುಂಬಸ್ಥರು ಸ್ಥಳದಲ್ಲಿದ್ದಾರೆ. ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Read More

ಸೌರ ಚಂಡಮಾರುತದ ಬಗ್ಗೆ ವಿಜ್ಞಾನಿಗಳು ಇತ್ತೀಚೆಗೆ ಎಚ್ಚರಿಕೆ ನೀಡಿದ್ದಾರೆ. ದೊಡ್ಡ ಸೌರ ಚಂಡಮಾರುತವು ಭೂಮಿಗೆ ಅಪ್ಪಳಿಸಲಿದೆ ಎಂದು ವಿಜ್ಞಾನಿಗಳು ನಂಬಿದ್ದಾರೆ. ಈ ಕಾರಣದಿಂದಾಗಿ, ಭೂಮಿಯ ಮೇಲೆ ದೊಡ್ಡ ಪ್ರಭಾವವನ್ನು ಕಾಣಬಹುದು. ಮೊಬೈಲ್‌ಗಳು, ಕಂಪ್ಯೂಟರ್‌ಗಳು ಮತ್ತು ಸಂವಹನ ವ್ಯವಸ್ಥೆಗಳಂತಹ ಎಲೆಕ್ಟ್ರಾನಿಕ್ ಸಾಧನಗಳು ಚಂಡಮಾರುತದಿಂದ ಹೆಚ್ಚು ಪರಿಣಾಮ ಬೀರಬಹುದು. ಭಾರತವು ಸೂರ್ಯನನ್ನು ನಕ್ಷೆ ಮಾಡುತ್ತದೆ ಮತ್ತು ಲಡಾಖ್‌ನಿಂದ ಭಾರತದ ಮೇಲೆ ಸೌರ ಚಟುವಟಿಕೆಯನ್ನು ಮೇಲ್ವಿಚಾರಣೆ ಮಾಡುತ್ತದೆ. ಇದು ಭಾರತದ ಮೇಲೂ ಪರಿಣಾಮ ಬೀರಲಿದೆಯೇ? ತಿಳಿಯುವುದು ಮುಖ್ಯ. ಸೂರ್ಯನ ಮೇಲ್ಮೈಯಿಂದ ಎರಡು ದೊಡ್ಡ ಸೌರ ಜ್ವಾಲೆಗಳು ಹೊರಹೊಮ್ಮುತ್ತವೆ. ಇವುಗಳನ್ನು ಕರೋನಲ್ ಮಾಸ್ ಎಜೆಕ್ಷನ್‌ಗಳು (CME) ಎಂದು ಕರೆಯಲಾಗುತ್ತದೆ, ಇವುಗಳು ನೇರವಾಗಿ ಭೂಮಿಯ ಕಡೆಗೆ ಹೋಗುತ್ತವೆ. ವಿಜ್ಞಾನಿಗಳು ಅವುಗಳನ್ನು X7 ಮತ್ತು X9 ಎಂದು ಹೆಸರಿಸಿದ್ದಾರೆ. ಈ ಸೌರ ಜ್ವಾಲೆಗಳು ಬಹಳ ಮುಖ್ಯ. X9 ಜ್ವಾಲೆಯು ಕಳೆದ ಏಳು ವರ್ಷಗಳಲ್ಲಿ ಸೂರ್ಯನಿಂದ ಹೊರಹೊಮ್ಮುವ ಅತ್ಯಂತ ಶಕ್ತಿಶಾಲಿ ಜ್ವಾಲೆಯಾಗಿದೆ. ಇದು ದಕ್ಷಿಣ ಅಟ್ಲಾಂಟಿಕ್ ಮತ್ತು ಆಫ್ರಿಕಾದ ಕೆಲವು ಭಾಗಗಳಲ್ಲಿ…

Read More

ಉಡುಪಿ: ಅಕ್ರಮ ಮರಳುಗಾರಿಕೆ- ಟಿಪ್ಪರ್ ಸಹಿತ ಇಬ್ಬರು ಆರೋಪಿಗಳು ವಶಕ್ಕೆ: ಪೆರ್ಡೂರು ಮಡಿಸಾಲ್ ಹೊಳೆಯಲ್ಲಿ ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಸ್ಥಳಕ್ಕೆ ಹಿರಿಯಡ್ಕ ಪೊಲೀಸರು ದಾಳಿ ನಡೆಸಿ ಮರಳು ಸಾಗಾಟಕ್ಕೆ ಬಳಸಿದ್ದ ಟಿಪ್ಪ‌ರ್ ಸಹಿತ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಹಿರಿಯಡ್ಕ ಠಾಣೆ ಪೊಲೀಸ್ ಉಪನಿರೀಕ್ಷಕ ಮಂಜುನಾಥ ಮರಬದ, ಉಡುಪಿ ತಾಲೂಕು ಪೆರ್ಡೂರು ಗ್ರಾಮದ ಕುತ್ತುರಬೈಲು ಮಠದಮಕ್ಕಿ ಎಂಬಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿರುವ ಬಗ್ಗೆ ಮಾಹಿತಿ ಮೇರೆಗೆ ಸ್ಥಳಕ್ಕೆ ಹೋದಾಗ ಇಬ್ಬರು ಹೊಳೆಯ ದಡದ ಬಳಿಯಲ್ಲಿದ್ದ ಮರಳನ್ನು ಕಳ್ಳತನ ಮಾಡುವ ಉದ್ದೇಶದಿಂದ ಟಿಪ್ಪರ್‌ಗೆ ಲೋಡ್ ಮಾಡುತ್ತಿರುವುದು ಕಂಡು ಬಂದಿತ್ತು. ಆರೋಪಿಗಳಾದ ದಿಲೀಪ್ ಹಾಗೂ ಸಚಿನ್‌ನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಯಾವುದೇ ಪರವಾನಿಗೆ ಇಲ್ಲದೆ ಸರಕಾರಿ ಜಾಗದಿಂದ ಲಾಭ ಗಳಿಸುವ ಉದ್ದೇಶಗೋಸ್ಕರ ಅಕ್ರಮವಾಗಿ ಮರಳನ್ನು ಕಳವು ಮಾಡಿ ಸ್ವಂತ ಲಾಭಕ್ಕಾಗಿ ಬೇರೆಯವರಿಗೆ ಮಾರಾಟ ಮಾಡುತ್ತಿರುವುದಾಗಿ ತಿಳಿಸಿದ್ದಾರೆ. ಆರೋಪಿತರು ಕೃತ್ಯಕ್ಕೆ ಬಳಸಿದ್ದ ಟೆಂಪೋ, 1.5 ಯುನಿಟ್‌ನಷ್ಟು ಮರಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ…

Read More