Author: main-admin

ಮಂಗಳೂರು : ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರಿಗೆ ‘ಯಾರೋ ಮಾಟ, ಮಂತ್ರ ಮಾಡಿಸಿದ್ದಾರೆ’ ಎಂದು ನಂಬಿಸಿ, ಚಿಕಿತ್ಸೆಯ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿ, ಒಂದು ಲಕ್ಷ ರೂ.ಗಳನ್ನು ಪಡೆದು ವಂಚಿಸಿದ ಆರೋಪಿಯನ್ನು ಮಂಗಳೂರು ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ. ಗುರುವಾಯನಕೆರೆಯ ನಿವಾಸಿ ಜಿ.ಅಬ್ದುಲ್ ಕರೀಮ್ ಅಲಿಯಾಸ್ ಕೂಳೂರು ಉಸ್ತಾದ್ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. 2022ರಲ್ಲಿ ಸಂತ್ರಸ್ತೆಗೆ ಖಿನ್ನತೆಯ ಸಮಸ್ಯೆ ಉಂಟಾಗಿದ್ದು, ಹೆಜಮಾಡಿಯಲ್ಲಿದ್ದ ಉಸ್ತಾದ್ ಅಬ್ದುಲ್ ಕರೀಮ್ ಮನೆಗೆ ಹೋಗಿದ್ದರು. ಆಗ ಆತ ‘ನಿಮಗೆ ಯಾರೋ ಮಾಠ ಮಾಡಿದ್ದಾರೆ. ಅದನ್ನು ಮೊದಲು ತೆಗಿಸಬೇಕು’ ಎಂದು ಹೇಳಿ ನಂಬಿಸಿದ್ದಾನೆ. ಮಾಟ ಮಂತ್ರ ನಿವಾರಿಸುವ ಚಿಕಿತ್ಸೆ ಕೊಡುತ್ತೇನೆ ಎಂದು ಹೇಳಿ ಮಹಿಳೆಯನ್ನು ಆಗಾಗ ಬರಲು ಹೇಳುತ್ತಿದ್ದ ಅಬ್ದುಲ್. ಸಂತ್ರಸ್ತೆ ಮಹಿಳೆ ತನ್ನ ಅಕ್ಕನ ಜೊತೆ ಈ ವ್ಯಕ್ತಿ ಬಳಿ ಹಲವು ಬಾರಿ ಹೋಗಿದ್ದಾರೆ. ಅಲ್ಲಿ ಈತ ಕೆಲವು ಬಾರಿ ಮಹಿಳೆಗೆ ಕುರಾನ್ ಓದಿಸಿರುವುದಾಗಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಆಕೆ ಹೇಳಿದ್ದಾರೆ. 2022, ಫೆ.10 ರಂದು ಸಂತ್ರಸ್ತೆಯ ಅಕ್ಕನಿಗೆ…

Read More

ಪುತ್ತೂರು: ಕಾಲೇಜಿಗೆ ರಜೆ ಇದ್ದ ಸಂದರ್ಭಮನೆಯಲ್ಲಿದ್ದ ವೇಳೆ ಆಟೋ ಚಾಲಕನೊಬ್ಬ ಪಿಯುಸಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ವೆಸಗಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆಟೋ ಚಾಲಕ ಮಂಜುನಾಥ್ ಕಟ್ಟತ್ತಡ್ಕ ಅತ್ಯಾಚಾರ ಎಸಗಿದ ಆರೋಪಿಯಾಗಿದ್ದು ಕಳೆದ ಆಗಸ್ಟ್ ತಿಂಗಳಲ್ಲಿ ಯುವತಿ ಒಬ್ಬಳೇ ಇದ್ದ ಸಂದರ್ಭನೀರು ಕೇಳುವ ನೆಪದಲ್ಲಿ ಬಂದು ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಬಳಿಕ ಈ ವಿಚಾರ ಯಾರಿಗೂ ಹೇಳಬಾರದು ಎಂದು ಬೆದರಿಕೆ ಒಡ್ಡಿ ಬಳಿಕದ ದಿನಗಳಲ್ಲಿ ಇದೇ ರೀತಿ 7-8 ಬಾರಿ ದೈಹಿಕ ಸಂಪರ್ಕ ಮಾಡಿದ್ದಾನೆ ಎಂದು ಬಾಲಕಿ ನೀಡಿದ ದೂರಿನಲ್ಲಿ ಉಲ್ಲೇಕಿಸಲಾಗಿದೆ. ಆರೋಗ್ಯದಲ್ಲಿ ಏರುಪೇರಾದ ಹಿನ್ನಲೆ ಆಕೆಯನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಕರೆತಂದಾಗ ಆಕೆ ಗರ್ಭಿಣಿಯಾಗಿರುವುದು ತಿಳಿದು ಬಂದಿದೆ. ಸದ್ಯ ಆರೋಪಿಯ ವಿರುದ್ಧ ದ ಕ ಮಹಿಳಾ ಪೊಲೀಸ್ 0 64(2)(m), 352(3) BNS 2023 2 0 5(1) ಜೊತೆಗೆ 6 ಪೋಕ್ಸ್ ಆಕ್ಟ್ 2012 ರಂತೆ ಪ್ರಕರಣ ದಾಖಲಾಗಿದೆ.

Read More

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ರಸ್ತೆಬದಿಗಳಲ್ಲಿ ಮಾತ್ರವಲ್ಲದೆ ಫ್ಲೈಓವರ್‌ಗಳಲ್ಲಿಯೂ ಅನಧಿಕೃತ ಫ್ಲೆಕ್ಸ್ ಬೋರ್ಡ್‌ಗಳನ್ನು ಅಳವಡಿಸುವುದರ ವಿರುದ್ಧ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಕಠಿಣ ಎಚ್ಚರಿಕೆ ನೀಡಿದೆ. ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಧಿಕಾರ ತಿಳಿಸಿದೆ. ಮಾಧ್ಯಮಗಳೊಂದಿಗೆ ಮಾತನಾಡಿದ NHAI ಯ ಯೋಜನಾ ನಿರ್ದೇಶಕ ಅಬ್ದುಲ್ ಜಾವೇದ್ ಅಜ್ಮಿ, ಹೆದ್ದಾರಿಗಳು, ಫ್ಲೈಓವರ್‌ಗಳು ಮತ್ತು ಜಂಕ್ಷನ್‌ಗಳಲ್ಲಿ ಹಾಕಲಾದ ಫ್ಲೆಕ್ಸ್ ಬೋರ್ಡ್‌ಗಳ ಕುರಿತು ದೂರುಗಳು ದಾಖಲಾಗಿವೆ ಎಂದು ದೃಢಪಡಿಸಿದರು. ಹೆದ್ದಾರಿ ಸಂಬಂಧಿತ ಕೆಲಸಗಳು ನಡೆಯುತ್ತಿರುವಾಗಲೂ, ಅಧಿಕಾರಿಗಳು ಪರಿಸ್ಥಿತಿಯನ್ನು ಪರಿಶೀಲಿಸುತ್ತಿದ್ದಾರೆ ಮತ್ತು ಹೆದ್ದಾರಿಗಳ ಪಕ್ಕದಲ್ಲಿರುವ ಸಾರ್ವಜನಿಕ ಸ್ಥಳಗಳನ್ನು ಜಾಹೀರಾತುಗಳಿಗಾಗಿ ಬಳಸಲಾಗುವುದಿಲ್ಲ ಎಂದು ಅವರು ಹೇಳಿದರು.

Read More

ಕುಂದಾಪುರ : ಕೃಷಿ ಗದ್ದೆಯಲ್ಲಿ ಸುಡುಮಣ್ಣು ಹಾಕಿದ್ದ ಬೆಂಕಿ ನಂದಿಸಲು ಹೋದ ಕೃಷಿಕರೊಬ್ಬರು ಸಜೀವ ದಹನವಾದ ಘಟನೆ ಕಾಳಾವರದ ಬಡಾಗುಡ್ಡೆ ಸಾಂತಾವರ ಎಂಬಲ್ಲಿ ಶನಿವಾರ ಮಧ್ಯಾಹ್ನದ ಹೊತ್ತಿಗೆ ನಡೆದಿದೆ. ಮೃತರನ್ನು ಕಾಳಾವರ ನಿವಾಸಿ ಮಹಾಲಿಂಗ ದೇವಾಡಿಗ (83)ಎಂದು ಗುರುತಿಸಲಾಗಿದೆ. ಇವರು ಮಳೆಗಾಲದ ಕೃಷಿಗಾಗಿ ತಮ್ಮ ಗದ್ದೆಯಲ್ಲಿ ಮಗಳೊಂದಿಗೆ ಸುಡುಮಣ್ಣು ತಯಾರಿಗಾಗಿ ಬೆಂಕಿ ಹಾಕಿದ್ದರು. ಈ ವೇಳೆ ಬೆಂಕಿಯ ಕೆನ್ನಾಲಗೆ ಸುತ್ತಲೂ ಪಸರಿಸಿದ್ದು ಸಮೀಪದ ನಾಗಬನಕ್ಕೂ ಬೆಂಕಿ ಹಬ್ಬಿದೆ. ಎಲ್ಲಾ ಕಡೆಗೂ ಹೊಗೆಯಿಂದ ಆವರಿಸಿದೆ ಕೂಡಲೇ ಎಚ್ಚೆತ್ತ ಮಗಳು ಬೇಬಿ ಅಲ್ಲಿಗೆ ತೆರಳಿ ಬೆಂಕಿ ನಂದಿಸಲು ಪ್ರಯತ್ನಿಸುತ್ತಿರುವಾಗಲೇ ತಂದೆ ಮಹಾಲಿಂಗ ದೇವಾಡಿಗ ಬೆಂಕಿಯ ಮಧ್ಯೆ ಸಿಲುಕಿದ್ದರು. ಕೂಡಲೇ ಅಗ್ನಿಶಾಮಕದಳದವರಿಗೆ ಮಾಹಿತಿ ನೀಡಲಾಯಿತು. ಆದರೆ ಅಗ್ನಿಶಾಮಕದಳದ ವಾಹನ ಬರುವಷ್ಟರಲ್ಲಿ ರೈತ ಮಹಾಲಿಂಗ ಅವರು ಸಜೀವ ದಹನವಾಗಿದ್ದಾರೆ. ಸ್ಥಳಕ್ಕೆ ಕುಂದಾಪುರ ಗ್ರಾಮಾಂತರ ಠಾಣೆಯ ಠಾಣಾಧಿಕಾರಿ ಭೀಮಾಶಂಕರ್ ಹಾಗೂ ಸಿಬ್ಬಂದಿಗಳು, ಅಗ್ನಿಶಾಮಕದಳದವರು ತೆರಳಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಂಗಳೂರು: ಬಿಜೈನ ಕೆಎಸ್‌ಆರ್‌ಟಿಸಿ ಬಸ್ಸು ನಿಲ್ದಾಣದ ಪಾರ್ಕಿಂಗ್‌ ಸ್ಥಳದಲ್ಲಿ ಅನುಮಾನಾಸ್ಪದವಾಗಿ ನಿಂತಿದ್ದ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನು ಮೂಲತಃ ಕೋಲಾರ ಜಿಲ್ಲೆ ಕೆಜಿಎಫ್‌ ಬಂಗಾರ ಪೇಟೆ ಕೆಎಸ್‌ಆರ್‌ಟಿಸಿ ಡಿಪೋ ಹತ್ತಿರದ ನಿವಾಸಿ ಹರ್ಷಿತ್‌ (26) ಎಂದು ಗುರುತಿಸಲಾಗಿದೆ. ಬರ್ಕೆ ಠಾಣೆಯ ಪೊಲೀಸರು ಎ. 3ರಂದು ರೌಂಡ್ಸ್‌ನಲ್ಲಿದ್ದಾಗ ಬೆಳಗ್ಗೆ 4.30ರ ವೇಳೆಗೆ ಬಿಜೈನ ಕೆಎಸ್‌ಆರ್‌ಟಿಸಿ ಬಸ್ಸು ನಿಲ್ದಾಣದ ಪಾರ್ಕಿಂಗ್‌ ಸ್ಥಳದಲ್ಲಿ ಕತ್ತಲೆಯಲ್ಲಿ ನಿಂತಿದ್ದ ಯುವಕನೊಬ್ಬ ಓಡಿ ಹೋಗಲು ಯತ್ನಿಸಿದ್ದ. ಪೊಲೀಸ್‌ ವಾಹನದಲ್ಲಿದ್ದ ಸಿಬಂದಿ ಆತನನ್ನು ಹಿಡಿದು ವಿಚಾರಣೆಗೆ ಒಳಪಡಿಸಿದಾಗ ಉತ್ತರ ಹೇಳಲು ತಡವರಿಸಿದ್ದಾನೆ. ಹೆಚ್ಚಿನ ವಿಚಾರಣೆಗೆ ಒಳಪಡಿಸಿದಾಗ ಹೆಸರನ್ನಷ್ಟೇ ಹೇಳಿದ್ದಾನೆ. ಆತ ಯಾವುದೋ ಕುಕೃತ್ಯ ನಡೆಸುವ ಉದ್ದೇಶದಿಂದ ನಿಂತುಕೊಂಡಿದ್ದ ಎಂದು ಪೊಲೀಸರು ಅನುಮಾನಿಸಿದ್ದು, ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಂಗಳೂರು: ಮಂಗಳೂರಿನ ಜೈಲಿನಲ್ಲಿ ಮೊಬೈಲ್ ಜಾಮರ್ ಆಳವಡಿಸಿದ ಕಾರಣ ಸುತ್ತಮುತ್ತಲಿನ ಪರಿಸರದಲ್ಲಿ ಉಂಟಾಗಿರುವ ಸಮಸ್ಯೆ ವಿರೋಧಿಸಿ ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಜೈಲಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದು, ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಂಗಳೂರಿನ ಜೈಲಿನಲ್ಲಿ ಮೊಬೈಲ್ ಜಾಮರ್ ಹಾಕಿದ ಪರಿಣಾಮ ಪರಿಸರದಲ್ಲಿ ಮೊಬೈಲ್ ನೆಟ್ ವರ್ಕ್ ಸಮಸ್ಯೆ ಉಂಟಾಗಿದೆ. ಈ ಹಿನ್ನಲೆ ಬಿಜೆಪಿ ಇಂದು ಜೈಲಿನ ಎದುರು ಪ್ರತಭಟನೆ ನಡೆಸಿದರು. ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್, ಜೈಲಿನಲ್ಲಿ ಏಕಾಏಕಿ 5ಜಿ ಜಾಮರ್ ಅಳವಡಿಸಿದ್ದರಿಂದ ಸುತ್ತಮುತ್ತಲಿನ ಕಚೇರಿ, ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಜೈಲು ವಿಭಾಗದ ಡಿಜಿ, ಗೃಹ ಸಚಿವರು, ಪೊಲೀಸ್ ಕಮಿಷನರ್ ಗೆ ದೂರಿತ್ತರೂ ಕ್ರಮ ಕೈಗೊಂಡಿಲ್ಲ. ಸಾರ್ವಜನಿಕರು ತೊಂದರೆ ಎದುರಿಸಿದರೂ ಕಾಂಗ್ರೆಸ್ ಸರ್ಕಾರ ಮೌನ ವಹಿಸಿದೆ. ನಮ್ಮ ಸರ್ಕಾರ ಇರುತ್ತಿದ್ದರೆ ಜೈಲಿಗೆ ನುಗ್ಗಿ ಜಾಮರ್ ಕಿತ್ತು ಬಿಸಾಕುತ್ತಿದ್ದೆ ಎಂದು ಹೇಳಿದರು. ಈಗಲೂ ನಾವು ಜೈಲಿಗೆ ಹೋಗಲು ಸಿದ್ಧ, ಜೈಲಿನಲ್ಲಿ ಹೇಗೂ ಮೊಬೈಲ್ ಸಿಗುತ್ತದೆ,…

Read More

ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿ ಏ.೬ರಂದು ಧರ್ಮಸ್ಥಳದಲ್ಲಿ ನಡೆಸಲು ನಿರ್ಧರಿಸಲಾಗಿದ್ದ ಬೃಹತ್ ಹಕ್ಕೊತ್ತಾಯ ಸಭೆ, ಪ್ರತಿಭಟನೆಗೆ ಕರ್ನಾಟಕ ಹೈಕೋರ್ಟ್ ಆರಂಭದಲ್ಲಿ ಅನುಮತಿ ನೀಡಿದ್ದರೂ, ಈ ಸಂಬಂಧ ವಾಟ್ಸಪ್ ಮೂಲಕ ರವಾನೆಯಾಗುತ್ತಿದ್ದ ಸಂದೇಶಗಳ ಗಂಭೀರತೆಯರಿತ ನ್ಯಾಯಪೀಠ ಪ್ರತಿಭಟನೆಗೆ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಉದ್ದೇಶಿತ ಪ್ರತಿಭಟನೆಗೆ ಅವಕಾಶ ನೀಡದಂತೆ ಸಲ್ಲಿಕೆಯಾಗಿದ್ದ ರಿಟ್ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಿದ್ದ ನ್ಯಾಯಪೀಠ ಆರಂಭದಲ್ಲಿ ಶಾಂತಿಯುತ ಪ್ರತಿಭಟನೆಗೆ ಅನುಮತಿ ನೀಡಿತ್ತು.ಆದರೆ ಉದ್ದೇಶಿತ ಪ್ರತಿಭಟನೆಗೆ ಸಂಬಂಧಿಸಿ ವಾಟ್ಸಾಪ್ ಮೂಲಕ ರವಾನೆಯಾಗುತ್ತಿದ್ದ ಕೆಲವು ಸಂದೇಶಗಳು, ಬಹುಸಂಖ್ಯೆಯಲ್ಲಿ ಜನರನ್ನು ಕರೆಸಿಕೊಂಡು ದೇವಸ್ಥಾನ ಪ್ರವೇಶಿಸುವ ಯತ್ನಗಳ ಬಗ್ಗೆ ಸೂಚನೆ ನೀಡಿರುವುದರಿಂದ,ಈ ಘಟನೆಗಳ ಮೂಲಕ ನ್ಯಾಯಾಲಯದ ಹಿಂದಿನ ಆದೇಶ ಉಲ್ಲಂಘನೆ ಆಗಬಹುದು ಮತ್ತು ಸಾರ್ವಜನಿಕ ಶಾಂತಿಗೆ ತೊಂದರೆ ಉಂಟುಮಾಡಬಹುದು ಎಂದು ಧರ್ಮಸ್ಥಳದ ಪರ ವಕೀಲರು ನ್ಯಾಯಪೀಠದ ಗಮನಕ್ಕೆ ತಂದರು.ಪರಿಸ್ಥಿತಿಯ ತೀವ್ರತೆಯನ್ನು ಗಮನದಲ್ಲಿಟ್ಟುಕೊಂಡು ನ್ಯಾಯಾಲಯ, ಏ.6ರ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ನಿಲ್ಲಿಸುವ ಆದೇಶ ನೀಡಿದೆ.

Read More

ಉಳ್ಳಾಲ : ಮಂಗಳೂರು ನಗರದ ಉಳ್ಳಾಲ ಪೊಲೀಸ್ ಇನ್ಸ್‌ಪೆಕ್ಟರ್ ಎಚ್‌ಎನ್ ಬಾಲಕೃಷ್ಣ ವಿರುದ್ಧದ ಭ್ರಷ್ಟಾಚಾರ ಆರೋಪದ ಬಗ್ಗೆ ತನಿಖೆ ನಡೆಸುವಂತೆ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್ ಅವರು ಸಹಾಯಕ ಪೊಲೀಸ್ ಆಯುಕ್ತ ಧನ್ಯಾ ನಾಯಕ್ ಅವರಿಗೆ ವಿಚಾರದ ಹೊಣೆ ವಹಿಸಲಾಗಿದೆ. ಜೂನ್ 2024 ರಲ್ಲಿ ಉಳ್ಳಾಲದಲ್ಲಿ ವೃದ್ಧ ಮಹಿಳೆಯೊಬ್ಬರ ಮನೆಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸರು ಬಂಧಿಸಿದ ಯುವಕನ ತಾಯಿ ಶ್ರೀ ಅಗರವಾಲ್ ಅವರಿಗೆ ಸಲ್ಲಿಸಿದ ಅರ್ಜಿಯಲ್ಲಿ, ಇನ್ಸ್‌ಪೆಕ್ಟರ್ ತಮ್ಮ ಮಗನಿಂದ 50 ಗ್ರಾಂ ಚಿನ್ನದ ಆಭರಣಗಳನ್ನು ಕಳ್ಳತನಕ್ಕೆ ಸಂಬಂಧಿಸಿದೆ ಎಂದು ಹೇಳುವ ಮೂಲಕ ತೆಗೆದುಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಆಭರಣಗಳನ್ನು ಆರೋಪಪಟ್ಟಿಯಲ್ಲಿ ಉಲ್ಲೇಖಿಸಲಾಗುವುದು ಮತ್ತು ಕುಟುಂಬ ಸದಸ್ಯರು ನ್ಯಾಯಾಲಯದಿಂದ ಬಿಡುಗಡೆ ಮಾಡಬಹುದು ಎಂದು ಅಧಿಕಾರಿ ಹೇಳಿದ್ದರು ಎಂದು ತಾಯಿ ಆರೋಪಿಸಿದ್ದಾರೆ.

Read More

ಕಾಸರಗೋಡು: ಬೈಕ್‌ಗೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ಕಾಸರಗೋಡಿನ ಚೆಮ್ನಾಡ್ ನಲ್ಲಿ ನಡೆದಿದೆ.ಮೇಲ್ಪರಂಬ ಒರವಂಗರದ ಮುಹಮ್ಮದ್ ಹನೀಫ್ (26) ಮೃತಪಟ್ಟವರು.ರಸ್ತೆಯ ಹೊಂಡಕ್ಕೆ ಬಿದ್ದ ಬೈಕ್ ಮೇಲೆ ಹಿಂದಿನಿಂದ ಬಂದ ಲಾರಿ ಹೋಗಿದ್ದು, ಗಂಭೀರ ಗಾಯಗೊಂಡ ಹನೀಫ್ ರನ್ನು ಆಸ್ಪತ್ರೆಗೆ ತಲುಪಿಸಿದರೂ ಅದಾಗಲೇ ಮೃತಪಟ್ಟಿದ್ದರು.ಗಲ್ಫ್ ಉದ್ಯೋಗಿಯಾಗಿದ್ದ ಹನೀಫ್ ರಂಝಾನ್ ಹಬ್ಬದ ಹಿನ್ನಲೆ ಊರಿಗೆ ಬಂದಿದ್ದರು. ಮುಂದಿನ ವಾರ ಅವರು ಮತ್ತೆ ಗಲ್ಫ್ ಗೆ ತೆರಳಬೇಕಿತ್ತು. ಈ ಬಗ್ಗೆ ಮೇಲ್ಪರಂಬ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

Read More

ಚಂಡೀಗಢ : 2 ಕೋಟಿ ಮೌಲ್ಯದ ಹೆರಾಯಿನ್‌ ಜೊತೆ ಪಂಜಾಬ್‌ನ ಮಹಿಳಾ ಕಾನ್‌ಸ್ಟೇಬಲ್‌ ನ್ನು ಬಂಧಿಸಲಾಗಿದೆ. ಆಕೆಯನ್ನು ಜಿಲ್ಲಾ ನ್ಯಾಯಾಲಯವು ಒಂದು ದಿನ ಪೊಲೀಸ್‌ ಕಸ್ಟಡಿಗೆ ನೀಡಿದೆ. 17.71 ಮಿ.ಗ್ರಾಂ ಹೆರಾಯಿನ್ ಜೊತೆ ಮಹಿಳಾ ಕಾನ್‌ಸ್ಟೇಬಲ್ ಅಮನ್‌ದೀಪ್ ಕೌರ್ ಎಂಬಾಕೆಯನ್ನು ಪೊಲೀಸರು ಬಂಧಿಸಿದ್ದರು. ಪ್ರಕರಣ ಬೆನ್ನಲ್ಲೇ ಆಕೆಯನ್ನು ಸೇವೆಯಿಂದ ವಜಾಗೊಳಿಸಲಾಗಿದ್ದು, ಆಕೆಯ ಚರ ಮತ್ತು ಸ್ಥಿರ ಆಸ್ತಿಗಳ ತನಿಖೆ ನಡೆಯುತ್ತಿದೆ. ಆರೋಪಿಯು ಆದಾಯದ ಮೂಲಕ್ಕಿಂತ ಹೆಚ್ಚಿನ ಆಸ್ತಿಯನ್ನು ಸಂಗ್ರಹಿಸಿದ್ದಾರೆ ಎಂಬುದು ಬೆಳಕಿಗೆ ಬಂದಿದೆ. ಆಕೆ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಐಜಿ ಪ್ರಧಾನ ಕಚೇರಿಯ ಸುಖ್‌ಚೈನ್ ಸಿಂಗ್ ಗಿಲ್ ತಿಳಿಸಿದ್ದಾರೆ ಈ ಹಿಂದೆ ಪೊಲೀಸರು ಕಾನ್‌ಸ್ಟೇಬಲ್ ಮೇಲೆ ಡೋಪ್ ಪರೀಕ್ಷೆ ನಡೆಸಿದ್ದರು. ಆದರೆ ಅದು ನೆಗೆಟಿವ್ ಬಂದಿತ್ತು. ನಗರ ಡಿಎಸ್‌ಪಿ ಹರ್ಬನ್ಸ್ ಸಿಂಗ್ ಧಲಿವಾಲ್, ಗೌಪ್ಯ ಮಾಹಿತಿಯ ಆಧಾರದ ಮೇಲೆ, ಪೊಲೀಸ್ ತಂಡವು ಲಾಡ್ಲಿ ಧಿ ಚೌಕ್ ಬಳಿಯ ಮೇಲ್ಸೇತುವೆಯ ಕೆಳಗೆ ಚೆಕ್‌ಪಾಯಿಂಟ್ ಅನ್ನು ಸ್ಥಾಪಿಸಿತು. ಈ ವೇಳೆ, ಅಮನ್‌ದೀಪ್ ಕಾರನ್ನು…

Read More