ಮಂಗಳೂರು : ಎಲ್ಲಾ ರೀತಿಯ ಅಂಗಡಿ, ಕಂಪೆನಿ, ಕಚೇರಿಗಳು, ಹೋಟೇಲ್ ಸೇರಿದಂತೆ ವಾಣಿಜ್ಯ ಸಂಸ್ಥೆಗಳ ಹೆಸರನ್ನು ನಾಮಫಲಕಗಳಲ್ಲಿ ಕನ್ನಡದಲ್ಲಿ ಕಡ್ಡಾಯವಾಗಿ ನಮೂದಿಸಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್ ವಿ ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಫೆ 2 ರಂದು ನಡೆದ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್ ಗಳು ವಾಣಿಜ್ಯ ಸಂಸ್ಥೆಗಳಿಗೆ ಟ್ರೇಡ್ ಲೈಸೆನ್ಸ್ ಮಂಜೂರು ಮಾಡುವಾಗಲೇ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಎಂಬ ಶರತ್ತು ವಿಧಿಸಿ ಮಂಜೂರು ಮಾಡಬೇಕು. ಈ ಬಗ್ಗೆ ಆಗ್ಗಿಂದಾಗೆ ಪರಿಶೀಲನೆ ನಡೆಸಬೇಕು ಎಂದರು. ರಾಷ್ಟ್ರ್ರೀಯ ಹೆದ್ದಾರಿಗಳಲ್ಲಿ ವಿವಿಧ ಸೂಚನಾ ಫಲಕಗಳಲ್ಲಿ ಕನ್ನಡದಲ್ಲಿ ಮಾಹಿತಿ ನಮೂದಿಸಲು ರಾಷ್ಟ್ರ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸೂಚಿಸಲಾಗುವುದು. ಬ್ಯಾಂಕುಗಳಲ್ಲಿ ಅರ್ಜಿ ನಮೂನೆಗಳನ್ನು ಕನ್ನಡದಲ್ಲಿಯೂ ಒದಗಿಸಲು ಬ್ಯಾಂಕುಗಳ ಸಮಿತಿ ಸಭೆಯಲ್ಲಿ ನಿರ್ದೇಶಿಸಲಾಗುವುದು ಎಂದ ಅವರು, ಇಂಗ್ಲಿಷ್ ಮೀಡಿಯಂ ಶಾಲೆಗಳು ಮತ್ತು ಕಾಲೇಜುಗಳಲ್ಲಿ ಇಂಗ್ಲಿಷ್ ಮಾಧ್ಯಮದಲ್ಲಿ ಬೋಧಿಸುತ್ತಿದ್ದರೂ, ಶಾಲೆಯ ನಾಮಫಲಕಗಳಲ್ಲಿ ಕನ್ನಡದಲ್ಲಿಯೂ…
Author: main-admin
ಮಂಜೇಶ್ವರ: ತನ್ನ 18 ವರ್ಷದ ಮಗಳನ್ನು ತಂದೆಯೇ ಕಡಿದು ಕೊಲೆಗೈದ ದಾರುಣ ಘಟನೆ ಮಂಜೇಶ್ವರ ಸಮೀಪದ ಕುಂಜತ್ತೂರು ತೂಮಿನಾಡು ಎಂಬಲ್ಲಿ ನಡೆದಿದೆ. ಕೌಟುಂಬಿಕ ಕಲಹ ಕೃತ್ಯಕ್ಕೆ ಕಾರಣ ಎಂದು ತಿಳಿದುಬಂದಿದೆ. ತೂಮಿನಾಡಿನ ಜುಮೈಲಾ ಕೊಲೆಗೀಡಾದ ಯುವತಿ. ಕೃತ್ಯ ನಡೆಸಿದ ಆರೋಪದಲ್ಲಿ ತಂದೆ ಉಮ್ಮರ್ ಫಾರೂಕ್ ಎಂಬಾತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಉಮರ್ ತನ್ನ ಪತ್ನಿ ಮತ್ತು ಮಕ್ಕಳೊಂದಿಗೆ ಪತ್ನಿಯ ಸೋದರಿಯ ಮನೆಯಲ್ಲಿ ವಾಸವಿದ್ದ. ಸೋಮವಾರ ಸಂಜೆ 5:30ರ ಹೊತ್ತಿಗೆ, ಉಮರ್ ಮತ್ತು ಆತನ ಬಾವ (ಪತ್ನಿಯ ಸೋದರಿಯ ಪತಿ) ಶೇಕುಂಞ ಎಂಬವರ ನಡುವೆ ಆಸ್ತಿ ವಿಚಾರದಲ್ಲಿ ಮಾತಿನ ಚಕಮಕಿ ನಡೆದಿದೆ. ಜಗಳ ವಿಕೋಪಕ್ಕೆ ಹೋದಾಗ ಉಮರ್ ಹರಿತ ಆಯುಧದಿಂದ ಶೇಖುಞ್ಞ ಮೇಲೆ ದಾಳಿ ಮಾಡಲು ಯತ್ನಿಸಿದ್ದಾನೆ. ಕಿರುಚಾಟದ ಶಬ್ದ ಕೇಳಿ ಪರಿಸರ ವಾಸಿಗಳು ಸ್ಥಳಕ್ಕೆ ಬಂದಾಗ ಜುಮೈಲಾ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ. ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಜೀವ ಉಳಿಸಲಾಗಲಿಲ್ಲ, ಕೃತ್ಯ ನಡೆಯುವ ಸಮಯದಲ್ಲಿ ತಾಯಿ ಕೂಡಾ ಮನೆಯಲ್ಲಿದ್ದರು ಎಂದು…
ಮಂಗಳೂರು: “ಕರಿಕಾಡ ಸಿನಿಮಾವನ್ನು ಫೆ.6ರಂದು ಕರ್ನಾಟಕ ರಾಜ್ಯದಾದ್ಯಂತ ನೂರು ಥಿಯೇಟರ್ ಗಳಲ್ಲಿ ರಿಲೀಸ್ ಮಾಡ್ತಾ ಇದ್ದೇವೆ. ನಾಯಕನಟನಾಗಿ ನಾನೇ ಅಭಿನಯಿಸಿದ್ದು ನಾಯಕಿಯಾಗಿ ತುಳು ಸಿನಿಮಾಗಳಲ್ಲಿ ನಟಿಸಿರುವ ನಿರೀಕ್ಷಾ ಶೆಟ್ಟಿ ನಟಿಸಿದ್ದಾರೆ. ಯಶ್ ಶೆಟ್ಟಿ, ರಾಜು ಬೆಳವಾಡಿ, ದಿ.ರಾಕೇಶ್ ಪೂಜಾರಿ, ಚಂದ್ರಪ್ರಭಾ ಮತ್ತಿತರರು ನಟಿಸಿದ್ದಾರೆ“ ಎಂದು ಚಿತ್ರದ ನಟ ಕಾಡ ನಟರಾಜ್ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.”ಕಳಸ, ಕುದ್ರೆಮುಖ, ಚಿಕ್ಕಮಗಳೂರು, ಮಂಡ್ಯ, ಮೈಸೂರು, ಚನ್ನಪಟ್ಟಣದಲ್ಲಿ ಸಿನಿಮಾ ಚಿತ್ರೀಕರಣ ನಡೆಸಲಾಗಿದೆ. ಕರಿ ಅಂದ್ರೆ ಆನೆ, ಕಾಡ ಅಂದ್ರೆ ನಾಯಕನ ಹೆಸರು“ ಎಂದು ಮಾಹಿತಿ ನೀಡಿದರು.ಚಿತ್ರದ ನಿರ್ಮಾಪಕಿ ದೀಪ್ತಿ ದಾಮೋದರ್ ಮಾತಾಡಿ, “ಸಿನಿಮಾದಲ್ಲಿ ಎಲ್ಲರೂ ಕಷ್ಟಪಟ್ಟು ನಟಿಸಿದ್ದಾರೆ. ನಾವೆಲ್ಲರೂ ಸಿನಿಮಾ ನೋಡಲು ಉತ್ಸುಕರಾಗಿದ್ದೇವೆ. ಎಲ್ಲರೂ ಸಿನಿಮಾ ನೋಡಿ ಪ್ರೋತ್ಸಾಹಿಸಿ” ಎಂದರು.ಚಿತ್ರಕ್ಕೆ ಸಂಭಾಷಣೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಕೆ. ವೆಂಕಟೇಶ್ ಮಾತಾಡಿ, “ಸಿನಿಮಾದಲ್ಲಿ ಒಟ್ಟು 7 ಹಾಡುಗಳಿದ್ದು 6 ಹಾಡುಗಳನ್ನು ನಾನೇ ಬರೆದಿದ್ದೇನೆ. ಎಲ್ಲ ಹಾಡುಗಳು ಕೂಡ ಚೆನ್ನಾಗಿ ಮೂಡಿಬಂದಿದ್ದು 60 ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ.…
ತುಮಕೂರು: ಭ್ರಷ್ಟಾಚಾರ ವಿರುದ್ಧ ಲೋಕಾಯುಕ್ತ ಅಧಿಕಾರಿಗಳ ಚುರುಕಿನ ಕಾರ್ಯಾಚರಣೆ ಮುಂದುವರಿದಿದ್ದು, ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ಚೇತನ ಕುಮಾರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಒಂದು ಪ್ರಕರಣದಲ್ಲಿ ವಶಪಡಿಸಿಕೊಂಡಿದ್ದ ಕಾರನ್ನು ವಾಪಸ್ ನೀಡುವ ನೆಪದಲ್ಲಿ ಪಿಎಸ್ಐ ಚೇತನ ಕುಮಾರ್ 1 ಲಕ್ಷ ರೂ. ಲಂಚದ ಬೇಡಿಕೆ ಇಟ್ಟಿದ್ದರು ಎಂಬ ಆರೋಪ ಕೇಳಿಬಂದಿದೆ. ಮೊದಲ ಹಂತವಾಗಿ 40 ಸಾವಿರ ರೂ. ಲಂಚ ಸ್ವೀಕರಿಸುವ ವೇಳೆ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲೇ ಲೋಕಾಯುಕ್ತ ಅಧಿಕಾರಿಗಳು ರೆಡ್ಹ್ಯಾಂಡ್ ಆಗಿ ಅವರನ್ನು ಬಂಧಿಸಿದ್ದಾರೆ. ಲಂಚ ಸ್ವೀಕರಿಸುತ್ತಿದ್ದ ಕ್ಷಣದಲ್ಲೇ ದಾಳಿ ನಡೆಸಿದ ಲೋಕಾಯುಕ್ತ ತಂಡ, ಪಿಎಸ್ಐ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆಯನ್ನು ಮುಂದುವರಿಸಿದೆ. ಸರ್ಕಾರಿ ಕಚೇರಿಯಲ್ಲೇ ಲಂಚ ಸ್ವೀಕಾರ ನಡೆದಿರುವುದು ಸಾರ್ವಜನಿಕರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಬೆಂಗಳೂರಿನ ಕೆಪಿ ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಗೋವಿಂದರಾಜು ಕೂಡ ಶುಕ್ರವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದರು. ಚೀಟಿ ವ್ಯವಹಾರ ಸಂಬಂಧಿತ ಪ್ರಕರಣದಲ್ಲಿ ವ್ಯಕ್ತಿಯನ್ನು ಕೇಸ್ನಲ್ಲಿ ಸಿಲುಕಿಸುವುದಾಗಿ ಬೆದರಿಸಿ ಒಟ್ಟು 5 ಲಕ್ಷ…
ಮಂಗಳೂರು: ಮೊಬೈಲ್ ಆನ್ಲೈನ್ ಗೇಮ್ ಫ್ರೀ ಫೈರ್ನಲ್ಲಿ ಸೋತ ದ್ವೇಷದಿಂದ ಯುವಕನನ್ನು ಚೂರಿಯಿಂದ ಇರಿದು ಕೊಲ್ಲಲು ಯತ್ನಿಸಿದ ಪ್ರಕರಣದ ಅಪರಾಧಿಗೆ ನ್ಯಾಯಾಲಯ ನಾಲ್ಕು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಮಂಗಳೂರು ನಗರದ ಜಪ್ಪು ಬಪ್ಪಾಲ್ ನಿವಾಸಿ ಪ್ರತ್ಯುಶ್ ಸಾಲಿಯಾನ್ ಫ್ರೀ ಫೈರ್ ಮೊಬೈಲ್ ಗೇಮ್ನಲ್ಲಿ ಸಂಜಯ್ ಪೂಜಾರಿ ಎಂಬವನನ್ನು ಸೋಲಿಸಿದ್ದರು. ಈ ಕಾರಣದಿಂದಾಗಿ ಸಂಜಯ್ ಪೂಜಾರಿಗೆ ಪ್ರತ್ಯುಶ್ ಮೇಲೇ ದ್ವೇಷ ಇತ್ತು. 17-05-2023 ರಂದು ಮಧ್ಯಾಹ್ನ 3.40ರ ಸುಮಾರಿಗೆ, ಪ್ರತ್ಯುಶ್ ಸಾಲಿಯಾನ್ ಮನೆಯಿಂದ ನಡೆದುಕೊಂಡು ನಂದಿಗುಡ್ಡೆ ಕಡೆಗೆ ತೆರಳುತ್ತಿದ್ದ ವೇಳೆ ಸಂಜಯ್ ಪೂಜಾರಿ ಅವರನ್ನು ತಡೆದು ನಿಲ್ಲಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಚೂರಿಯಿಂದ ಇರಿದು ಕೊಲೆಯತ್ನ ನಡೆಸಿ ಜೀವ ಬೆದರಿಕೆ ಹಾಕಿದ್ದ ಕುರಿತು ಕೇಸ್ ದಾಖಲಾಗಿತ್ತು.
ಕೇಂದ್ರ ಸರ್ಕಾರ ರವಿವಾರ ಮಂಡಿಸಿದ ಬಜೆಟ್ ನಲ್ಲಿ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ನಿರ್ಣಾಯಕ ಔಷಧಿಗಳ ಮೇಲಿನ ಸುಂಕ ಕಡಿತವನ್ನು ಘೋಷಿಸಿದ್ದಾರೆ ಮತ್ತು ಹಿಂದಿನ ವರ್ಷಗಳಂತೆ, ʼಸಿನ್ ಗೂಡ್ಸ್ʼ (ಪಾಪದ ಸರಕು) ಮೇಲಿನ ತೆರಿಗೆಯನ್ನು ಹೆಚ್ಚಿಸಿದ್ದಾರೆ. ಏನು ಅಗ್ಗವಾಗಿದೆ? ► 17 ಕ್ಯಾನ್ಸರ್ ಔಷಧಗಳು ► ಸಮುದ್ರ ಆಹಾರ ► ಚರ್ಮದ ಉತ್ಪನ್ನಗಳು ► ಸ್ಮಾರ್ಟ್ ಫೋನ್ಗಳು ► EV ಬ್ಯಾಟರಿಗಳು ► ಸೋಲಾರ್ ಪ್ಯಾನೆಲ್ಗಳು ► ಮೈಕ್ರೋವೇವ್ ಓವನ್ಗಳು ► ಕ್ರೀಡಾ ಸಾಮಗ್ರಿಗಳು ► 7 ಜೀವ ಉಳಿಸುವ ಔಷಧಗಳು ► ಲೀಥಿಯಂ ಬ್ಯಾಟರಿ ಘಟಕಗಳು ► ಮಧುಮೇಹ ಸಂಬಂಧಿತ ಔಷಧಿಗಳು ► ವಿದೇಶಿ ಪ್ರಯಾಣ ► ನಾಗರಿಕ ತರಬೇತಿಯ ವಿಮಾನಯಾನ ಭಾಗಗಳು ► ವೈಯಕ್ತಿಕ ಬಳಕೆಯ ಎಲೆಕ್ಟ್ರಾನಿಕ್ ಉತ್ಪನ್ನಗಳ ತೆರಿಗೆ ಶೇ 20ರಿಂದ 10ಕ್ಕೆ ಇಳಿಕೆ ತುಟ್ಟಿ ಯಾವುವು? ► ಆಲ್ಕೋಹಾಲ್ ಇನ್ನಷ್ಟು ತುಟ್ಟಿಯಾಗಿದೆ. ► ತಂಬಾಕು ಉತ್ಪನ್ನಗಳಾದ ಸಿಗರೇಟು, ಬೀಡಿ, ಗುಟ್ಕಾ ಮತ್ತು ಪಾನ್ ಮಸಾಲ ►…
ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಕಮಿಷನರ್ ಅವರು ನೀಡಿದ್ದ ಆದೇಶಕ್ಕೆ ರಾಜ್ಯ ಹೈಕೋರ್ಟ್ ತಡೆ ನೀಡಿದೆ. ಪುತ್ತೂರು ಸಹಾಯಕ ಕಮಿಷನರ್ ಅವರ ಆದೇಶವನ್ನು ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು ಆದೇಶಕ್ಕೆ ತಾತ್ಕಾಲಿಕ ತಡೆಯಾಜ್ಞೆ ನೀಡಿದ್ದು, ಸಹಾಯಕ ಕಮಿಷನರ್ ನೀಡಿರುವ ಆದೇಶ ಸಮರ್ಪಕವಾಗಿಲ್ಲ ಎಂದು ಹೇಳಿದೆ. ಅಲ್ಲದೇ 21 ದಿನದೊಳಗೆ ಪ್ರಕರಣದ ಮರು ವಿಚಾರಣೆ ನಡೆಸಿ ಆದೇಶ ನೀಡುವಂತೆ ನ್ಯಾಯಾಲಯವು ಪುತ್ತೂರು ಸಹಾಯಕ ಕಮಿಷನರ್ ಅವರಿಗೆ ಸೂಚಿಸಿದೆ.
ಉಡುಪಿ: ಕೋಡಿಬೆಂಗ್ರೆ ಅಳಿವೆಬಾಗಿಲಿನಲ್ಲಿ ಆರು ದಿನಗಳ ಹಿಂದೆ ಸಂಭವಿಸಿದ ಪ್ರವಾಸಿ ದೋಣಿ ದುರಂತಕ್ಕೆ ಸಂಬಂಧಿಸಿ ದೋಣಿ ಮಾಲಕ ಸಹಿತ ಮೂವರು ಆರೋಪಿಗಳನ್ನು ಕೋಟ ಪೊಲೀಸರು ಬಂಧಿಸಿದ್ದಾರೆ. ಕೋಡಿಬೇಂಗ್ರೆಯ ನಿವಾಸಿಗಳಾದ ಸುಹಾಸ್ ಶ್ರೀಯಾನ್ (23), ಸುಫಿಯಾನ್ (20), ವಾಸು ಮೆಂಡನ್(52) ಬಂಧಿತ ಆರೋಪಿಗಳು. ಇವರನ್ನು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಎಲ್ಲ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಜ.26ರಂದು ಆರೋಪಿ ಸುಹಾಸ್ ಮೈಸೂರಿನಿಂದ ಬಂದ 29 ಮಂದಿ ಪ್ರವಾಸಿಗರನ್ನು ಎರಡು ದೋಣಿಗಳಲ್ಲಿ ಸಮುದ್ರ ವಿಹಾರಕ್ಕೆ ಕಳುಹಿಸಿದ್ದನು. ಇದರಲ್ಲಿ ಒಂದು ದೋಣಿಯು ಅದರ ಚಾಲಕರಾದ ಸೂಫಿಯಾನ ಮತ್ತು ವಾಸು ಎಂಬವರ ಅಜಾಗರೂಕತೆ ಮತ್ತು ನಿರ್ಲಕ್ಷ್ಯತನದಿಂದ ಕೋಡಿಬೇಂಗ್ರೆ ಅಳಿವೆಬಾಗಿಲಿನ ಸ್ವರ್ಣ ನದಿಯಲ್ಲಿ ಮಗುಚಿ ಬಿತ್ತೆನ್ನಲಾಗಿದೆ. ಇದರಿಂದ ದೋಣಿಯಲ್ಲಿದ್ದ ಇಬ್ಬರು ಯುವತಿಯರು ಸಹಿತ ಮೂವರು ಮೃತಪಟ್ಟು, ಉಳಿದ 11 ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದರು. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬೋಟಿಗೆ ಅನುಮತಿ ಇಲ್ಲ: ಈ ಬಗ್ಗೆ ತನಿಖೆ ನಡೆಸಿದಾಗ ಬೋಟ್ ವಿಹಾರಕ್ಕೆ ಆರೋಪಿಗಳು ಪ್ರವಾಸೋದ್ಯಮ…
ಬೆಂಗಳೂರು: ಆಸ್ಟ್ರೇಲಿಯಾ ಮತ್ತು ಗೋವಾ ಮಾದರಿಯಲ್ಲಿ ಕರ್ನಾಟಕದಲ್ಲೂ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಬಗ್ಗೆ ಸರ್ಕಾರ ಗಂಭೀರ ಚಿಂತನೆ ನಡೆಸುತ್ತಿದೆ. ಈ ಬಗ್ಗೆ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಶುಕ್ರವಾರ ವಿಧಾನಸಭೆ ವಿಶೇಷ ಅಧಿವೇಶನದಲ್ಲಿ ಮಾಹಿತಿ ನೀಡಿದ್ದಾರೆ. ಸಾಮಾಜಿಕ ಮಾಧ್ಯಮಗಳ ದುರುಪಯೋಗದ ಕುರಿತು ಬಿಜೆಪಿ ಹಿರಿಯ ನಾಯಕ ಮತ್ತು ಶಾಸಕ ಎಸ್ ಸುರೇಶ್ ಕುಮಾರ್ ಕಳವಳ ವ್ಯಕ್ತಪಡಿಸಿದಾಗ ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ, ಇದು ಗಂಭೀರ ವಿಷಯವಾಗಿದೆ ಎಂದು ಸಹಮತ ವ್ಯಕ್ತಪಡಿಸಿದರು. ಅಲ್ಲದೆ, ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧಿಸುವ ಬಗ್ಗೆ ಯೋಚಿಸಲಾಗುವುದು ಎಂದರು. ಈ ನಿಟ್ಟಿನಲ್ಲಿ ಫಿನ್ಲ್ಯಾಂಡ್ ಈಗಾಗಲೇ ಕ್ರಮ ಕೈಗೊಂಡಿದೆ, ಬ್ರಿಟನ್ ಚಿಂತನೆ ನಡೆಸುತ್ತಿದೆ. ಆಸ್ಟ್ರೇಲಿಯಾ ಎರಡು ತಿಂಗಳ ಹಿಂದೆ ಸಾಮಾಜಿಕ ಮಾಧ್ಯಮವನ್ನು ನಿಷೇಧಿಸಿತು. ಕೃತಕ ಬುದ್ಧಿಮತ್ತೆ ಮತ್ತು ಸಾಮಾಜಿಕ ಮಾಧ್ಯಮದ ಜವಾಬ್ದಾರಿಯುತ ಬಳಕೆಗಾಗಿ ‘ಡಿಜಿಟಲ್ ಡಿಟಾಕ್ಸಿಫಿಕೇಷನ್’ ಕಾರ್ಯಕ್ರಮವನ್ನು ಪ್ರಾರಂಭಿಸಿದ್ದೇವೆ. ಐಟಿ-ಬಿಟಿ ಇಲಾಖೆ ಮೆಟಾ ಸಹಯೋಗದೊಂದಿಗೆ ಮೂರು ಲಕ್ಷಕ್ಕೂ ಹೆಚ್ಚು ಮಕ್ಕಳು ಮತ್ತು ಒಂದು ಲಕ್ಷ ಶಿಕ್ಷಕರನ್ನು…
ಮಂಗಳೂರಿನ ಪುರಭವನದ ಸಮೀಪವಿರುವ ಪೋಲಿಸ್ ವಸತಿ ಗೃಹಕ್ಕೆ ನುಗ್ಗಿದ ಕಳ್ಳರು ಬೆಲೆಬಾಳುವ ವಸ್ತುಗಳನ್ನು ಕಳವುಗೈದಿದ್ದಾರೆ. ಪೊಲೀಸ್ ಲೇನಿನ ಎ1 ಬ್ಲಾಕ್ನಲ್ಲಿರುವ ಮನೆಯಲ್ಲಿ ಕಳ್ಳತನ ನಡೆದಿದೆ. ದ.ಕ ಜಿಲ್ಲೆಯ ಕಂಟ್ರೋಲ್ ರೂಮಲ್ಲಿ ಕೆಲಸ ಮಾಡುತ್ತಿರುವ ಸಮರ್ಥ್ ಎಂಬವರು ರಜೆ ಮೇಲೆ ಊರಿಗೆ ತೆರಳಿದ್ದ ವೇಳೆ ಅವರ ಮನೆಯ ಬಾಗಿಲು ಮುರಿದು ಕಳ್ಳರು ಒಳನುಗ್ಗಿದ್ದಾರೆ. ಮನೆಯ ಗೋಡ್ರೇಜ್ ಚೆಲ್ಲಾಪಿಲ್ಲಿ ಮಾಡಿ ಹೋಗಿದ್ದು ಹಲವು ಬೆಲೆಬಾಳುವ ವಸ್ತುಗಳನ್ನು ಕಳವು ಮಾಡಿದ್ದಾರೆ. ಸ್ಥಳಕ್ಕೆ ದಕ್ಷಿಣ ಪೊಲೀಸ್ ಠಾಣೆಯ ಪಿಎಸ್ಐ ಹಾಗೂ ಕ್ರೈಂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಪೋಲಿಸ್ ಲೈನ್ ನ ಮೂರು ಗೇಟ್ ಗಳು ತೆರೆದಿದ್ದು ಯಾವುದೇ ಭದ್ರತೆ ಇಲ್ಲದ ಕಾರಣ ಕೇರಳ ರಾಜ್ಯದ ವ್ಯಕ್ತಿಗಳು ನಿರಂತರ ಬಂದು ಹೋಗುತ್ತಿರುವುದು ಕಂಡುಬOದಿದೆ. ಭದ್ರತಾ ಕೊರತೆಯಿಂದಲೇ ಕಳ್ಳತನವಾಗಿದೆ ಎಂದು ಹೇಳಲಾಗುತ್ತಿದೆ.










