Author: main-admin

ಮಂಗಳೂರು ನಗರ ಹೊರ ವಲಯದ ಪಡೀಲ್‌ನಲ್ಲಿ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಗ್ಗೆ ನಡೆದಿದೆ. ಮೃತರನ್ನು ಪಡೀಲ್ ಕೊಡೆಕ್ಕಲ್ ನಿವಾಸಿ ಶ್ರವಣ್(26) ಎಂದು ಗುರುತಿಸಲಾಗಿದೆ. ಶ್ರವಣ್ ಅವರ ಮೃತದೇಹ ಪಡೀಲ್ ಕೊಡೆಕ್ಕಲ್ ಬಳಿ ಮರವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಕಂಕನಾಡಿ ಠಾಣಾ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿದ್ದಾರೆ.

Read More

ಮಂಗಳೂರಿನಲ್ಲಿ, ಡಿಸೆಂಬರ್ 10, 2025: ಭಾರತದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ಒಂದಾದ ಬ್ಯಾಂಕ್ ಆಫ್ ಬರೋಡಾ (ಬ್ಯಾಂಕ್) ಅನ್ನು ಫೈನಾನ್ಷಿಯಲ್ ಟೈಮ್ಸ್ ಪ್ರಕಟಿಸುವ ದಿ ಬ್ಯಾಂಕರ್ ಪತ್ರಿಕೆಯ ಬ್ಯಾಂಕ್ ಆಫ್ ದಿ ಇಯರ್ ಅವಾರ್ಡ್ಸ್ 2025 ನಲ್ಲಿ ‘ಭಾರತದ ಅತ್ಯುತ್ತಮ ಬ್ಯಾಂಕ್’ ಎಂದು ಘೋಷಿಸಲಾಗಿದೆ. ಈ ಪ್ರಶಸ್ತಿ ಬ್ಯಾಂಕ್ ಆಫ್ ಬರೋಡಾದ ಶ್ರೇಷ್ಠತೆ, ನವೀನತೆ ಮತ್ತು ಬ್ಯಾಂಕಿಂಗ್ ವಲಯಕ್ಕೆ ನೀಡಿದ ಅಸಾಧಾರಣ ಕೊಡುಗೆಯನ್ನು ಗೌರವಿಸುತ್ತದೆ. ಉನ್ನತ ಹಣಕಾಸು ಸಾಧನೆ, ಡಿಜಿಟಲ್ ಪರಿವರ್ತನೆ, ಗ್ರಾಹಕ ಅನುಭವ ವೃದ್ಧಿ ಮತ್ತು ಭಾರತೀಯ ಬ್ಯಾಂಕಿಂಗ್ ಕ್ಷೇತ್ರದಲ್ಲಿನ ತನ್ನ ನೇತೃತ್ವವನ್ನು ಮತ್ತಷ್ಟು ಬಲಪಡಿಸುವುದಕ್ಕೆ ಬ್ಯಾಂಕ್ ನೀಡಿರುವ ನಿರಂತರ ಗಮನವನ್ನು ಇದು ಒತ್ತಿ ಹೇಳುತ್ತದೆ. ಈ ಸಾಧನೆಯ ಬಗ್ಗೆ ಪ್ರತಿಕ್ರಿಯಿಸಿದ ಬ್ಯಾಂಕ್ ಆಫ್ ಬರೋಡಾದ ವ್ಯವಸ್ಥಾಪಕ ನಿರ್ದೇಶಕ ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ದೇಬದತ್ತ ಚಾಂದ್ ಹೇಳಿದರು:“ಭಾರತದ ಅತ್ಯುತ್ತಮ ಬ್ಯಾಂಕ್ ಎಂಬ ಮಾನ್ಯತೆ, ಬ್ಯಾಂಕ್ ಆಫ್ ಬರೋಡಾ ಅನುಸರಿಸಿದ ಸ್ಥಿರ ಮತ್ತು ನಿರಂತರ ಬೆಳವಣಿಗೆ ಹಾಗೂ…

Read More

ನಾರಾವಿ: ವ್ಯಕ್ತಿಯೋರ್ವರ ಭಾವಚಿತ್ರ ಹಾಗೂ ಹೆಸರನ್ನು ಬಳಸಿ ನಕಲಿ ಇನ್ಸ್ಟಾಗ್ರಾಂ ನಕಲಿ ಖಾತೆ ತೆರೆದು ಬೇರೆ ಬೇರೆ ಮಂದಿಗೆ ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಆರೋಪಿ ವಿರುದ್ಧ ಡಿ. 11ರಂದು ವೇಣೂರು ಪೊಲೀಸರಿಗೆ ದೂರು ನೀಡಲಾಗಿದೆ. ನಾರಾವಿ ತುಂಬೆಗುಡ್ಡೆಯ ಸಂತೋಷ್ ಎಂಬವರು ಈ ಬಗ್ಗೆ ದೂರು ನೀಡಿದ್ದು, ತನ್ನ ಭಾವಚಿತ್ರ ಹಾಗೂ ಹೆಸರನ್ನು ಬಳಸಿ ನಕಲಿ ಇನ್ಸ್ಟಾಗ್ರಾಂ ಅಕೌಂಟ್ ತೆರೆದು ಬೇರೆ ಬೇರೆ ವ್ಯಕ್ತಿಗಳಿಗೆ ಹಣಕ್ಕಾಗಿ ಬೆದರಿಕೆ ಹಾಕಿ ಬೇಡಿಕೆ ಇಡುತ್ತಿರುವುದು ನನ್ನ ಪರಿಚಿತರ ಮೂಲಕ ಗಮನಕ್ಕೆ ಬಂದಿರುತ್ತದೆ. ಯಾರೋ ದುಷ್ಕರ್ಮಿಗಳು ನನ್ನ ಹೆಸರು ಮತ್ತು ಭಾವಚಿತ್ರವನ್ನು ಬಳಸಿ ಫೇಕ್ ಇನ್ಸ್ಟಾಗ್ರಾಂ ಅಕೌಂಟ್ ಕ್ರಿಯೆಟ್ ಮಾಡಿ ನನ್ನ ತೇಜೋವಧೆ ಮಾಡುತ್ತಿರುವ ಆರೋಪಿಯನ್ನು ಪತ್ತೆಹಚ್ಚಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

Read More

ಮೂಡುಬಿದಿರೆ: ನಸುಕಿನ ಜಾವ ಕಾರಿನಲ್ಲಿ ಬಂದ ಅಪರಿಚಿತರು ರಿಕ್ಷಾವನ್ನು ಅಡ್ಡಗಟ್ಟಿ ಹಣ್ಣಿನ ವ್ಯಾಪಾರಿ ಬಳಿಯಿದ್ದ.19 ಸಾವಿರ ರೂ.ವನ್ನು ದೋಚಿ ಪರಾರಿಯಾಗಿರುವ ಘಟನೆ ಮಾಂಟ್ರಾಡಿಯಲ್ಲಿ ಗುರುವಾರ ವರದಿಯಾಗಿದೆ. ಈದು ಗ್ರಾಮದ ಮುಹಮ್ಮದ್ ಹಣ ಕಳೆದುಕೊಂಡವರು ಎಂದು ತಿಳಿದು ಬಂದಿದೆ. ಮೂಡುಬಿದಿರೆ ಮಾರುಕಟ್ಟೆಯಲ್ಲಿ ಹಣ್ಣು ಹಂಪಲು ವ್ಯಾಪಾರಿಯಾಗಿರುವ ಮುಹಮ್ಮದ್ ಮಂಗಳೂರಿನಿಂದ ಹಣ್ಣು ಖರೀದಿಸಲು ಗುರುವಾರ ನಸುಕಿನ ಜಾವ ಈದುನಿಂದ ರಿಕ್ಷಾದಲ್ಲಿ ಹೊರಟಿದ್ದರು. ಮಾಂಟ್ರಾಡಿ ತಲುಪಿದಾಗ ಕಾರಿನಲ್ಲಿ ಬಂದ ಅಪರಿಚಿತರ ತಂಡ ಇವರ ರಿಕ್ಷಾವನ್ನು ಅಡ್ಡಗಟ್ಟಿ, ಬೆದರಿಸಿ 19 ಸಾವಿರ ರೂ. ನಗದು ಲೂಟಿ ಮಾಡಿ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Read More

ಉಪ್ಪಿನಂಗಡಿಯ ಗಾಂಧಿಪಾರ್ಕ್ ಬಳಿ ಇರುವ ಅಡಿಕೆ ಹಾಗೂ ಕಾಡುತ್ಪತ್ತಿ ಖರೀದಿ ಅಂಗಡಿಯಿAದ ನಗದು ಕಳ್ಳತನ ಮಾಡಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.  ಮೂಡಿಗೆರೆ ನಿವಾಸಿ ಮುಹಮ್ಮದ್ ಶಹಬಾದ್(26) ಹಾಗೂ ಜಂಶೀದ್(25) ಬಂಧಿತ ಆರೋಪಿಗಳು. ಚಿಕ್ಕಮಗಳೂರಿನ ಎನ್.ಆರ್ ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಅಂಗಡಿಯೊOದರಿOದ ನಗದು ಕಳವುಗೈದ ಪ್ರಕರಣದಲ್ಲಿ ಈ ಇಬ್ಬರು ಆರೋಪಿಗಳನ್ನು ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್ ಪುರ ಠಾಣಾ ಪೊಲೀಸರು ಬಂಧಿಸಿದ್ದರು. ವಿಚಾರಣೆ ವೇಳೆ ಉಪ್ಪಿನಂಗಡಿಯಲ್ಲಿ ಕಳ್ಳತನ ಮಾಡಿರುವುದನ್ನು ಆರೋಪಿಗಳು ಬಾಯ್ಬಿಟ್ಟಿದ್ದಾರೆ. ಅ.27ರಂದು ಉಪ್ಪಿನಂಗಡಿ ಗಾಂಧಿಪಾರ್ಕ್ ಬಳಿಯ ಅಡಿಕೆ ಹಾಗೂ ಕಾಡುತ್ಪತ್ತಿ ಕೇಂದ್ರದಿOದ 5 ಲಕ್ಷ ರೂಪಾಯಿ ನಗದು ಕಳವಾಗಿತ್ತು. ಈ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಎನ್.ಆರ್ ಪುರ ಪೊಲೀಸರು ಆರೋಪಿಗಳನ್ನು ಉಪ್ಪಿನಂಗಡಿ ಠಾಣೆಗೆ ಕರೆತಂದಿದ್ದಾರೆ., ಉಪ್ಪಿನಂಗಡಿ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ಮಹಜರು ನಡೆಸಿದ್ದಾರೆ. 

Read More

ಬೆಳಗಾವಿ ಸುವರ್ಣಸೌಧ : ಡ್ರಗ್ಸ್ ತಡೆಗೆ ಮತ್ತು ಅಂತಹ ದಂಧೆಗಳಿಗೆ ಸಂಪೂರ್ಣವಾಗಿ ಕಡಿವಾಣ ಹಾಕಲು ರಾಜ್ಯ ಸರ್ಕಾರವು ಕಠಿಣ ನಿರ್ಧಾರ ತೆಗೆದುಕೊಂಡಿದೆ. ಡ್ರಗ್ಸ್ ಕಂಟ್ರೋಲ್ ಆಗುವವರೆಗೆ ದಂಧೆಕೋರರ ವಿರುದ್ಧ ಸಮರ ನಡೆಯಲಿದೆ ಎಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ಅವರು ಹೇಳಿದರು. ವಿಧಾನ ಪರಿಷತ್ತಿನಲ್ಲಿ ಡಿ.11ರಂದು ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯರಾದ ಕೆ ಅಬ್ದುಲ್ ಜಬ್ಬರ್ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಮಾದಕ ವಸ್ತುಗಳ ಉತ್ಪಾದನೆ, ಮಾರಾಟ ಮತ್ತು ಅವುಗಳ ಬಳಕೆ ಜಾಗತಿಕವಾಗಿ ದಿನೇ ದಿನೇ ಹೆಚ್ಚುತ್ತಿದೆ. ಮಾದಕ ವಸ್ತುಗಳ ಮಾರಾಟವು ಮಾರಾಟಗಾರರಿಗೆ ಅತೀ ಹೆಚ್ಚಿನ ಲಾಭಾಂಶ ತರುವ ಉದ್ಯಮವಾಗಿ ಪರಿವರ್ತನೆಯಾಗಿದೆ. ಅತೀ ಹೆಚ್ಚಿನ ಲಾಭಕ್ಕಾಗಿ ಅಂತರ್ ರಾಜ್ಯ/ ಅಂತರ್ ರಾಷ್ಟ್ರೀಯ ಜಾಲಗಳು ಕಾರ್ಯನಿರ್ವಹಿಸುತ್ತಿವೆ. ಈ ಜಾಲಗಳು ಜಗತ್ತಿನಾದ್ಯಾಂತ ಬಹುತೇಕ ಎಲ್ಲಾ ರಾಷ್ಟ್ರಗಳಲ್ಲಿ ಸಕ್ರೀಯವಾಗಿರುವುದರಿಂದ ಈ ಡಗ್ಸ್ ಸಮಸ್ಯೆಯು ಸಾರ್ವತ್ರಿಕವಾಗಿದೆ. ರಾಜ್ಯದಲ್ಲಿ ಮಾದಕ ವಸ್ತುಗಳ ಸೇವನೆ, ಮಾರಾಟ ತಡೆಗಟ್ಟಲು ರಾಜ್ಯ ಸರ್ಕಾರವು ನಾನಾ ಕ್ರಮ ತೆಗೆದುಕೊಂಡಿದೆ. ರಾಜ್ಯದಲ್ಲಿ ಮಾದಕ ದ್ರವ್ಯಗಳ ಹಾವಳಿಯನ್ನು ಎದುರಿಸಲು ಹಾಗೂ…

Read More

ಬೆಳಗಾವಿ: ಡಾಪಟುಗಳಿಗೆ ಪ್ರೋತ್ಸಾಹ ನೀಡುವ ದಿಸೆಯಲ್ಲಿ ಅರಣ್ಯ ಇಲಾಖೆಯಲ್ಲಿ ಶೇ. 3 ಪೊಲೀಸ್ ಇಲಾಖೆಯಲ್ಲಿ ಶೇ.3 ಹಾಗೂ ವಿವಿಧ ಇಲಾಖೆಗಳಲ್ಲಿ ಶೇ. 2 ರಷ್ಟು ಮೀಸಲಾತಿಯನ್ನು ಅನುಷ್ಠಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾ ರವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ರಾಜ್ಯದಲ್ಲಿ ಕ್ರೀಡಾಪಟುಗಳಿಗೆ ಪ್ರೋತ್ಸಾಹ, ಕ್ರೀಡಾ ಸಾಧಕರಿಗೆ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ, ಕ್ರೀಡಾ ಮೂಲಸೌಕರ್ಯ ವೃದ್ಧಿ ಹಾಗೂ ಕಬ್ಬಡಿ ಕ್ರೀಡೆಗೆ ಪ್ರೋತ್ಸಾಹ ನೀಡುವ ಬಗ್ಗೆ ಮಾಹಿತಿ ಕೋರಿದ್ದರು. ರಾಜ್ಯ ಸರ್ಕಾರ ಒಲಂಪಿಕ್ಸ್, ಪಾರಾಒಲಂಪಿಕ್ಸ್, ಕಾಮನ್ವೆಲ್ತ್, ಏಷಿಯನ್ ಗೇಮ್ಸ್ ಕ್ರೀಡಾಕೂಟಗಳಲ್ಲಿ ಪದಕವಿಜೇತರಾದ 13 ಕ್ರೀಡಾಪಟುಗಳಿಗೆ ನೇಮಕಾತಿ ಮಾಡಿಕೊಳ್ಳಲಾಗಿದೆ. ಪೊಲೀಸ್ ಇಲಾಖೆಯಲ್ಲಿ 70 ಕಾನ್ಸ್ಟೇಬಲ್ ಗಳಿಗೆ ನೇರ ನೇಮಕಾತಿ ಹಾಗೂ 14 ಪಿಎಸ್ ಐ ಗಳನ್ನು ನೇಮಕಾತಿ ಮಾಡಿಕೊಳ್ಳಲಾಗಿದೆ. ಅಲ್ಲದೇ ಅರಣ್ಯ ಇಲಾಖೆಯಲ್ಲಿ ಶೇ. 3 ಪೊಲೀಸ್ ಇಲಾಖೆಯಲ್ಲಿ ಶೇ.3 ಹಾಗೂ ವಿವಿಧ ಇಲಾಖೆಗಳಲ್ಲಿ ಶೇ. 2 ರಷ್ಟು ಮೀಸಲಾತಿ ನೀಡಿ ಕ್ರೀಡಾಪಟುಗಳಿಗೆ ಪ್ರೋತ್ಸಾಹ…

Read More

ವಾಹನ ತಪಾಸಣಾ/ಪರೀಶೀಲನೆ ಸಮಯದಲ್ಲಿ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳು ವಾಹನ ಚಾಲಕರಿಗೆ ಕಿರುಕುಳ ಹಲ್ಲೆ. ಅವಾಚ್ಯ ಶಬ್ದಗಳ ಬಳಕೆ ಮಾಡಿ ದುರ್ನಡತೆ ತೋರುವುದನ್ನು ಕಡಿವಾಣ ಹಾಕಲು ಸೂಕ್ತ ಸುತ್ತೋಲೆ ಹೊರಡಿಸಲಾಗಿದೆ. ಈ ಮೇಲ್ಕಂಡ ವಿಷಯಕ್ಕೆ ಸಂಬಂದಿಸಿದಂತೆ ರಾಜ್ಯ ಪೊಲೀಸ್ ಇಲಾಖೆಯು ಶಿಸ್ತಿನ ಇಲಾಖೆಯಾಗಿದ್ದು ಕೆಲವು ಅಧಿಕಾರಿ ಸಿಬ್ಬಂದಿಗಳು ತೋರುತ್ತಿರುವ ದುರ್ನಡತೆ, ಅಧಿಕಾರ ದುರ್ಬಳಕೆಯಿಂದ ಸಂಪೂರ್ಣ ಪೊಲೀಸ್ ಇಲಾಖೆಯ ಗೌರವಕ್ಕೆ ಧಕ್ಕೆ ಉಂಟಾಗುತ್ತಿದ್ದು ಕಾಲಕಾಲಕ್ಕೆ ಇಲಾಖೆಯಿಂದ ಹಲವಾರು ಸುತ್ತೋಲೆ ಜ್ಞಾಪನಗಳನ್ನು ಹೊರಡಿಸಿದ್ದರು ಕೆಲವು ಪೊಲೀಸ್ ಸಿಬ್ಬಂದಿಗಳು ವಾಹನ ತಪಾಸಣಾ ಸಂದರ್ಭದಲ್ಲಿ ವಾಹನ ಚಾಲಕರ ಮೇಲೆ ದೌರ್ಜನ್ಯ, ಹಲ್ಲೆ, ಕಿರುಕುಳ, ಅವಹೇಳನಕಾರಿ ಅವಾಚ್ಯ ಶಬ್ದಗಳ ಬಳಕೆ ಮಾಡಿ ಸಾರ್ವಜನಿಕ ಸ್ಥಳಗಳಲ್ಲಿ ವಾಗ್ವಾದಕ್ಕಿಳಿದು ಅವಮಾನ ಮಾಡುವಂತಹ ಘಟನೆಗಳು ನಿರಂತರವಾಗಿ ನಡೆಯುತ್ತಿರುವುದು ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಮಾಧ್ಯಮಗಳಲ್ಲಿ ವರದಿಯಾಗುತ್ತಿರುತ್ತವೆ. ಕೆಲವು ದಿನಗಳ ಹಿಂದೆ ಮಂಡ್ಯ ಜಿಲ್ಲೆಯಲ್ಲಿ ಸಂಚಾರಿ ಪೊಲೀಸರು ವಾಹನ ತಪಾಸಣಾ ಸಂದರ್ಭದಲ್ಲಿ ಮಗು ಮೃತಪಟ್ಟ ಪ್ರಕರಣ ಹಾಗೂ ವಿಜಯನಗರ ಜಿಲ್ಲೆ ಕೂಡ್ಲಿಗಿಯಲ್ಲಿ ಸಾರಿಗೆ ಬಸ್ ಚಾಲಕನ ಮೇಲೆ…

Read More

ಕಾಸರಗೋಡು: ಮಂಗಲ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಯಾಬಜಾರ್‌ ಬಳಿಯ ಚೆರುಗೋಳಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ 19 ವರ್ಷದ ಐಟಿಐ ವಿದ್ಯಾರ್ಥಿ ಅಬ್ದುಲ್ ಶಿಹಾಬ್ ಬುಧವಾರ ಶವವಾಗಿ ಪತ್ತೆಯಾಗಿದ್ದಾರೆ. ಮೂಲತಃ ಕರ್ನಾಟಕದವರಾದ ಶಿಹಾಬ್ ಕಳೆದ ನಾಲ್ಕು ತಿಂಗಳಿನಿಂದ ಇಲ್ಲಿ ವಾಸಿಸುತ್ತಿದ್ದರು. ಅವರ ತಂದೆ ಬಶೀರ್ ದುಬೈನಲ್ಲಿ ಉದ್ಯೋಗದಲ್ಲಿದ್ದಾರೆ. ಬೆಳಿಗ್ಗೆ ಕುಟುಂಬ ಸದಸ್ಯರು ಕೋಣೆಗೆ ತೆರಳಿದಾಗ ಆತ ಭಾವನಾತ್ಮಕ ತೊಂದರೆ ಅನುಭವಿಸಿರುವ ಸುಳಿವುಗಳು ಗೋಚರಿಸಿದವು ಎಂದು ತಿಳಿಸಲಾಗಿದೆ. ವೈಯಕ್ತಿಕ ಸಂಬಂಧಕ್ಕೆ ಸಂಬಂಧಿಸಿದ ಮಾನಸಿಕ ಒತ್ತಡದಿಂದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ. ಘಟನೆಯ ಕುರಿತು ಮಾಜಿ ಪಂಚಾಯತ್ ಸದಸ್ಯ ರಫೀಕ್ ಅಹಮದ್ ಹೇಳಿಕೆ ನೀಡಿ, “ಶೀಹಾಬ್‌ ಫೋನ್‌ಗೆ ಒಂದೇ ಹುಡುಗಿಯಿಂದ ಪದೇ ಪದೇ ಹಲವು ಸಂದೇಶಗಳು ಬಂದಿವೆ. ಮರಣದ ನಂತರವೂ ಆಕೆಯಿಂದ ಕರೆ ಮಾಡುವಂತೆ, ಮೆಸೇಜ್‌ಗೆ ಉತ್ತರಿಸುವಂತೆ ಕೇಳುವ ಸಂದೇಶಗಳು ಬರುತ್ತಿವೆ. ಆ ಹುಡುಗಿ ಎರ್ನಾಕುಲಂ ಜಿಲ್ಲೆಯವರು ಎಂಬ ಮಾಹಿತಿ ಇದೆ” ಎಂದು ಅವರು ಹೇಳಿದರು. ಶಿಹಾಬ್‌ ಮೊಬೈಲ್‌ ಫೋನ್ ಅನ್ನು ವಿಧಿವಿಜ್ಞಾನ ಪರೀಕ್ಷೆಗೆ…

Read More

ಬೆಂಗಳೂರು : ರಾಜ್ಯದ ಜೈಲುಗಳಲ್ಲಿನ ಅಕ್ರಮಗಳಿಗೆ ಬ್ರೇಕ್ ಹಾಕಲು ರಾಜ್ಯ ಸರ್ಕಾರ ದಿಟ್ಟ ಕ್ರಮ ಕೈಗೊಂಡಿದೆ. ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅವರಿಗೆ ಮುಂಬಡ್ತಿ ನೀಡಲಾಗಿದ್ದು, ತಕ್ಷಣವೇ ಕಾರಾಗೃಹ ಮತ್ತು ಸುಧಾರಣಾ ಇಲಾಖೆಯ ಡಿಜಿಪಿಯಾಗಿ‌ ನೇಮಕಗೊಳಿಸಲಾಗಿದೆ.​ ಈ ಹಿಂದೆ ಕಾರಾಗೃಹ ಇಲಾಖೆಯ ಎಡಿಜಿಪಿಯಾಗಿದ್ದ ಬಿ.ದಯಾನಂದ್ ಅವರನ್ನು ತರಬೇತಿ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಇತ್ತೀಚೆಗೆ, ಪರಪ್ಪನ ಅಗ್ರಹಾರ ಕಾರಾಗೃಹದೊಳಗೆ ಮಾದಕ ವಸ್ತು ಹಾಗೂ ಸಿಗರೇಟ್‌ ಪ್ಯಾಕ್‌ಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಜೈಲಿನ ವಾರ್ಡನ್‌ನನ್ನು ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆ (KSESF) ಅಧಿಕಾರಿಗಳು ವಶಕ್ಕೆ ಪಡೆದು ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಗೆ ಒಪ್ಪಿಸಿದ್ದರು.

Read More