ಬೆಂಗಳೂರಿನಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು, ಮನೆಯಲ್ಲಿದ್ದ ಗೀಸರ್ ನಿಂದ ವಿಷಾನಿಲ ಸೋರಿಕೆಯಾಗಿ ತಾಯಿ ಹಾಗೂ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಮಾಗಡಿಯಲ್ಲಿ ನಡೆದಿದೆ. ಹೌದು ಗೀಸರ್ ಯಿಂದ ವಿಷಾನಿಲ ಸೊರಿಕೆಯಾಗಿ ತಾಯಿ ಮಗ ಸಾವನ್ನಾಪ್ಪಿದ್ದರೆ. ಶೋಭಾ (40) ಪುತ್ರ ಗಿರೀಶ್ (16) ಮೃತಪಟ್ಟ ದುರ್ದೈವಿಗಳು ಎಂದು ತಿಳಿದುಬಂದಿದೆ.ಗೀಸರ್ ಆನ್ ಮಾಡಿ ಮನೆ ಸದಸ್ಯರು ಮರೆತು ಹೋಗಿದ್ದರು ಎಂದು ಹೇಳಲಾಗುತ್ತಿದೆ. ಈ ವೇಳೆ ಬಾಗಿಲು ಕಿಟಕಿ ಮುಚ್ಚಿದ್ದರಿಂದ ತಾಯಿ ಮಗ ಉಸಿರುಗಟ್ಟಿ ಸಾವನಪ್ಪಿದ್ದಾರೆ ಎಂದು ತಿಳಿದುಬಂದಿದೆ ಮಾಗಡಿ ತಾಲೂಕು ಆಸ್ಪತ್ರೆಗೆ ತಾಯಿ ಹಾಗೂ ಮಗನ ಮೃತದೇಹವನ್ನು ಮಾಡಲಾಗಿದೆ ಮಾಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ಸಂಭವಿಸಿದೆ.
Author: main-admin
ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ನಲ್ಲಿ ಮತ್ತೆ ಭೂಕುಸಿತ ಸಂಭವಿಸಿದೆ. ಮಣ್ಣು ಕುಸಿತದ ವೇಳೆ ಪೊಲೀಸ್ ವಾಹನ ಸಿಲುಕಿಕೊಂಡಿದೆ. ಸಕಲೇಶಪುರ ತಾಲೂಕಿನ, ದೊಡ್ಡತಪ್ಲೆ ಬಳಿ ಪೊಲೀಸರು ತಮ್ಮ ವಾಹನವನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದರು. ಈ ವೇಳೆ ಭೂ ಕುಸಿತ ಉಂಟಾಗಿದೆ. ಘಟನೆಯಲ್ಲಿ KA-13 G-1713 ನಂಬರ್ನ ಹೈವೇ ಪಾಟ್ರೋಲ್ ವಾಹನಕ್ಕೆ ಸಣ್ಣಪುಟ್ಟ ಹಾನಿಯಾಗಿದೆ. ಕೂಡಲೇ ಜೆಸಿಬಿ ಮೂಲಕ ಮಣ್ಣು ತೆರವು ಗೊಳಿಸಲಾಗಿದೆ.
ಪುತ್ತೂರು : ಪುತ್ತೂರು ನಗರ ಠಾಣೆಯ ಎಎಸ್ ಐ ಸುಂದರ ಕಾನಾವು ಸೋಮವಾರ ಬೆಳಗ್ಗೆ ನಿಧನ ಹೊಂದಿದ್ದಾರೆ. ಪೆರುವಾಜೆ ಗ್ರಾಮದ ಕಾನಾವು ನಿವಾಸಿಯಾಗಿರುವ ಸುಂದರ ಕಾನಾವು ಮೃತರು ಪತ್ನಿ, ಪುತ್ರ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.ಮೂರು ದಿನಗಳ ಹಿಂದೆ ಮನೆಯಲ್ಲಿ ಬ್ರೈನ್ ಸ್ಟ್ರೋಕ್ ಗೆ ಒಳಗಾಗಿದ್ದ ಸುಂದರ ಕಾನಾವು ಅವರನ್ನು ಮಂಗಳೂರು ಪಡೀಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಂದ ಎ.ಜೆ. ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಇಂದು ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಸೇವೆಗೆ ಸೇರಿದ ಇವರು ಬಳಿಕ ಸುಬ್ರಹ್ಮಣ್ಯ ಠಾಣೆಯಲ್ಲಿ ಸೇವೆ ಸಲ್ಲಿಸಿ ಹೆಡ್ ಕಾನ್ಸ್ ಟೇಬಲ್ ಆಗಿ ಭಡ್ತಿಗೊಂಡು ಅಲ್ಲಿಂದ ಬಂಟ್ವಾಳ ಠಾಣೆಗೆ ವರ್ಗಾವಣೆಗೊಂಡರು. ಅಲ್ಲಿಂದ ಸಂಪ್ಯ ಠಾಣೆಗೆ ವರ್ಗಾವಣೆಗೊಂಡು ಅಲ್ಲಿ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಭಡ್ತಿಗೊಂಡು ಇತ್ತೀಚೆಗೆ ಪುತ್ತೂರು ನಗರ ಠಾಣೆಗೆ ವರ್ಗಾವಣೆಗೊಂಡಿದ್ದರು.
ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನ ಇಂದಿನಿಂದ ಆರಂಭವಾಗಲಿದ್ದು, ನಾಳೆ ಕೇಂದ್ರ ಬಜೆಟ್ ಮಂಡನೆ ಮಾಡಲಿದೆ. 19 ದಿನಗಳ ಕಾಲ ನಡೆಯುವ ಈ ಅಧಿವೇಶನವು ಇಂದಿನಿಂದ ಆಗಸ್ಟ್ 12ರ ವರೆಗೆ ನಡೆಯಲಿದೆ. ಮುಂಗಾರು ಅಧಿವೇಶನದ ಮೊದಲ ದಿನವಾದ ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸಮೀಕ್ಷಾ ವರದಿ ಮಂಡಿಸಲಿದ್ದು, ನಾಳೆ ಬಜೆಟ್ ಮಂಡನೆ ಮಾಡಲಿದ್ದಾರೆ. ಈ ಬಾರಿಯ ಅಧಿವೇಶನದಲ್ಲಿ ಆಡಳಿತ ಮತ್ತು ವಿಪಕ್ಷಗಳ ನಡುವೆ ಜಿದ್ದಾಜಿದ್ದಿಯಾಗುವ ಸಾಧ್ಯತೆ ಇದೆ. ನೀಟ್, ನೆಟ್ ಪರೀಕ್ಷಾ ಅಕ್ರಮ, ಐಎಎಸ್ ಅಧಿಕಾರಿಗಳ ನೇಮಕಾತಿ ವಿವಾದ, ಅಗ್ನಿವೀರ್ ಯೋಜನೆ, ಮಣಿಪುರ ಹಿಂಸಾಚಾರ, ಕಾಶ್ಮೀರದಲ್ಲಿ ಹೆಚ್ಚುತ್ತಿರುವ ಉಗ್ರರ ದಾಳಿ ಮೊದಲಾದ ಅಸ್ತ್ರಗಳನ್ನು ಹಿಡಿದು ವಿಪಕ್ಷಗಳು ಮೋದಿ ನೇತೃತ್ವದ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಇಂಡಿಯಾ ಒಕ್ಕೂಟ ಸಜ್ಜಾಗಿದೆ. ಈ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ೫ ಮಸೂದೆ ಮಂಡನೆ ಮಾಡಲಿದೆ. ಹಣಕಾಸು ಮಸೂದೆ, 2024, ವಿಪತ್ತು ನಿರ್ವಹಣೆ (ತಿದ್ದುಪಡಿ) ಮಸೂದೆ, 2024 ಪಿಆರ್ಎಸ್ ಶಾಸನದ ಪ್ರಕಾರ, ವಿಪತ್ತು ನಿರ್ವಹಣೆಯಲ್ಲಿ ಕೆಲಸ ಮಾಡುವ ವಿವಿಧ ಸಂಸ್ಥೆಗಳ ಪಾತ್ರಗಳಲ್ಲಿ…
ಉಪ್ಪಿನಂಗಡಿ : ಯುವತಿ ಬಚ್ಚಲು ಮನೆಯಲ್ಲಿ ಸ್ನಾನ ಮಾಡುತ್ತಿದ್ದಾಗ ಕಿಟಕಿಯಿಂದ ನೋಡಲೆತ್ನಿಸಿದ ವ್ಯಕ್ತಿಯನ್ನು ಸ್ಥಳೀಯರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಉಪ್ಪಿನಂಗಡಿ ಹೊರ ವಲಯದ ಪೆರಿಯಡ್ಕ ಎಂಬಲ್ಲಿ ಆದಿತ್ಯವಾರ ರಾತ್ರಿ ನಡೆದಿದೆ. ಅಬ್ದುಲ್ ರಹಿಮಾನ್ (41 ವ.) ಪೊಲೀಸ್ ವಶದಲ್ಲಿರುವ ಆರೋಪಿ. ಯುವತಿ ಸ್ನಾನ ಮಾಡುತ್ತಿದ್ದಾಗ ಕಿಟಕಿ ಬಳಿ ಶಬ್ಧ ಉಂಟಾಗಿದ್ದು, ತಕ್ಷಣ ಅತ್ತ ನೋಡಿದಾಗ ಕಿಟಕಿ ಬಾಗಿಲು ತೆರೆಯಲು ಯಾರೋ ಯತ್ನಿಸಿದ್ದು ಗೋಚರವಾಗಿದೆ. ತಕ್ಷಣ ಯುವತಿ ತನ್ನ ತಾಯಿ ಬಳಿ ಇದನ್ನು ಹೇಳಿಕೊಂಡಿದ್ದಾರೆ. ಆಗ ತಾಯಿ ಕಿಟಕಿ ಸುತ್ತಾಮುತ್ತ ಪರಿಶೀಲನೆ ನಡೆಸಿದ್ದು, ಅಬ್ದುಲ್ ರಹಿಮಾನ್ ಪರಾರಿಯಾಗುತ್ತಿರುವುದು ಅವರ ಗಮನಕ್ಕೆ ಬಂದಿದೆ ಎನ್ನಲಾಗಿದೆ. ತಕ್ಷಣ ಯುವತಿಯ ತಾಯಿ ಬೊಬ್ಬೆ ಹೊಡೆದಿದ್ದು, ಸ್ಥಳೀಯರು ಮಾಹಿತಿ ಪಡೆದುಕೊಂಡು ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಕೃತ್ಯ ಎಸಗಿದ ಆರೋಪಿ ಎರಡು ಮಕ್ಕಳ ತಂದೆಯಾಗಿದ್ದು ಆತನಿಗೆ 16 ಹಾಗೂ 9 ವರ್ಷದ ಮಕ್ಕಳಿದ್ದಾರೆ ಆರೋಪಿ ಕೃತ್ಯ ಎಸಗಿ ಬಚ್ಚಲು ಮನೆ ಬಳಿಯಿಂದ ಪರಾರಿ ಯಾಗುತ್ತಿರುವುದನ್ನು ಸಂತ್ರಸ್ತೆಯ ತಾಯಿ…
ಬೆಂಗಳೂರು: ಕಾರು ಚಾಲನಾ ತರಬೇತಿ ವೇಳೆ ಯುವತಿಗೆ ಮರ್ಮಾಂಗ ತೋರಿಸಿ ಅಸಭ್ಯವಾಗಿ ವರ್ತಿಸಿದ ಆರೋಪದಡಿ ಚಾಲನಾ ತರಬೇತಿ ಶಾಲೆಯ ತರಬೇತುದಾರನ ವಿರುದ್ಧ ಬಸವೇಶ್ವರನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಾಲಕ್ಷ್ಮೀ ಪುರ ನಿವಾಸಿ 18 ವರ್ಷ ಯುವತಿ ನೀಡಿದ ದೂರಿನ ಮೇರೆಗೆ ಬಸವೇಶ್ವರನಗರದ ಮಾರುತಿ ಡ್ರೈವಿಂಗ್ ಶಾಲೆಯ ತರಬೇತುದಾರ ಅಣ್ಣಪ್ಪ ಎಂಬಾತನ ವಿರುದ್ಧ ಬಸವೇಶ್ವರನಗರ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಏನಿದು ಪ್ರಕರಣ?: ಪರೀಕ್ಷೆ ಮುಗಿಸಿ ಮನೆಯಲ್ಲಿದ್ದ ಯುವತಿ ಕಾರು ಚಾಲನೆ ಕಲಿಯಲು ಬಸವೇಶ್ವರನಗರದ ಮಾರುತಿ ಡ್ರೈವಿಂಗ್ ಶಾಲೆಯಲ್ಲಿ ನೋಂದಣಿ ಮಾಡಿ ಕೊಂಡು ಕಾರು ಚಾಲನಾ ತರಬೇತಿ ಪಡೆಯು ತ್ತಿದ್ದರು. ಈ ವೇಳೆ ಡ್ರೈವಿಂಗ್ ಶಾಲೆಯ ತರಬೇತುದಾರ ಅಣ್ಣಪ್ಪನೇ ಕಾರು ಚಾಲನಾ ತರಬೇತಿ ನೀಡಿದ್ದ. ಕೋರ್ಸ್ ಮುಗಿದ ಬಳಿಕ ಅಣ್ಣಪ್ಪ, ನಿಮ್ಮ ಮನೆಯ ಕಾರಿನಲ್ಲೇ ಪರಿಪೂರ್ಣವಾಗಿ ಚಾಲನೆ ಬಗ್ಗೆ ಹೇಳಿಕೊಡುತ್ತೇನೆ. ಒಂದು ಗಂಟೆಯ ವಿಶೇಷ ಕ್ಲಾಸ್ಗೆ 750 ರೂ. ಕೊಡಬೇಕು ಎಂದು ಯುವತಿಗೆ ಕೇಳಿದ್ದಾನೆ. ಉತ್ತಮವಾಗಿ ಕಾರು ಚಾಲನೆಯ ಕಲಿಯುವ ಆಸಕ್ತಿಯಿಂದ ಯುವತಿ 15 ದಿನಗಳ…
ಪುತ್ತೂರು : ಸರ್ವೆ ಗೌರಿ ಹೊಳೆಯ ಸೇತುವೆ ಸಮೀಪ ದ್ವಿಚಕ್ರ ವಾಹನ ನಿಲ್ಲಿಸಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಗೌರಿ ಹೊಳೆಯಲ್ಲಿ ಪತ್ತೆಯಾಗಿದೆ. ಕುದ್ಮಾರು ಗ್ರಾಮದ ತೆಕ್ಕಿತ್ತಡಿ ನಿವಾಸಿ, ಸನ್ಮತ್ (21) ಮೃತ ಯುವಕ. ಸನ್ಮತ್ ಶುಕ್ರವಾರ ರಾತ್ರಿ ಕೆಲಸ ಮುಗಿಸಿ ಬರುವಾಗ ಸರ್ವೆ ಗೌರಿ ಹೊಳೆಯ ಪಕ್ಕ ವಾಹನ ನಿಲ್ಲಿಸಿ, ಮೊಬೈಲ್, ಪರ್ಸ್ ಗಳನ್ನು ಅಲ್ಲಿಯೇ ಬಿಟ್ಟು ನಾಪತ್ತೆಯಾಗಿದ್ದು, ಗೌರಿ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿತ್ತು.ನಿನ್ನೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಅಗ್ನಿಶಾಮಕದಳದ ಸಿಬ್ಬಂದಿ ಹಾಗೂ ಸ್ಥಳೀಯರು ಕಾರ್ಯಚರಣೆ ನಡೆಸಿದ ವೇಳೆ ಇಂದು ಯುವಕನ ಮೃತದೇಹ ಪತ್ತೆಯಾಗಿದೆ.
ತಿರುವನಂತಪುರಂ: ಕೇರಳದಲ್ಲಿ ಡೆಂಗ್ಯೂ ಆತಂಕದ ಜೊತೆಗೆ 14 ವರ್ಷದ ಬಾಲಕನಲ್ಲಿ ನಿಫಾ ವೈರಸ್ ಪತ್ತೆಯಾಗಿದೆ. ಇದರ ಪರಿಣಾಮ ಇದೀಗ ಹೈ ಅಲರ್ಟ್ ಘೋಷಿಸಲಾಗಿದೆ. ಮಲಪ್ಪುರಂ ಜಿಲ್ಲೆಯಲ್ಲಿ ನಿಫಾ ವೈರಸ್ ಪತ್ತೆಯಾಗಿದೆಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಸ್ಪಷ್ಟಪಡಿಸಿದ್ದಾರೆ. ಬಾಲಕನ ಮೊದಲ ಸಂಪರ್ಕಿತರನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲು ಸೂಚಿಸಲಾಗಿದೆ ಎಂದಿದ್ದಾರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 14 ವರ್ಷದ ಬಾಲಕನ ಮಾದರಿಗಳನ್ನು ಪುಣೆ ಎನ್ಐವಿ ಕೇಂದ್ರಕ್ಕೆ ಕಳುಹಿಸಿಕೊಡಲಾಗಿದೆ. ಇದೀಗ ವರದಿ ಬಂದಿದ್ದು, ನಿಫಾ ವೈರಸ್ ದೃಢಪಟ್ಟಿದೆ. ನಿಫಾ ವೈರಸ್ ಖಚಿತವಾಗುತ್ತಿದ್ದಂತ ಆರೋಗ್ಯ ಇಲಾಖೆ ಅಲರ್ಟ್ ಆಗಿದೆ. ಬಾಲಕನನ್ನು ಇದೀಗ ಕೋಝಿಕೋಡ್ ಸರ್ಕಾರಿ ಮೆಡಿಕಲ್ ಕಾಲೇಜಿಗೆ ಸ್ಥಳಾಂತರಿಸಲು ಸೂಚಿಸಲಾಗಿದೆ. ಇದೀಗ ಬಾಲಕನ ಸಂಪರ್ಕಿತರನ್ನು ಪತ್ತೆ ಹಚ್ಚಲಾಗುತ್ತಿದೆ. ಪೋಷಕರು ಸೇರಿದಂತೆ ಮೊದಲ ಸಂಪರ್ಕಿತರನ್ನು ಈಗಾಗಲೇ ಐಸೋಲೇಶನ್ ಮಾಡಲಾಗಿದೆ. ಇವರ ಮಾದರಿಗಳನ್ನು ಸಂಗ್ರಹಿಸಿ ಪುಣೆಗೆ ಕಳುಹಿಸಲಾಗಿದೆ ಎಂದು ಸಚಿವೆ ತಿಳಿಸಿದ್ದಾರೆ. 14 ವರ್ಷದ ಬಾಲಕನಲ್ಲಿ ನಿಫಾ ವೈರಸ್ ಪತ್ತೆಯಾಗಿದೆ. ಸದ್ಯ ಬಾಲಕನಿಗೆ ವೆಂಟಿಲೇಟರ್ ಬೆಂಬಲದೊಂದಿಗೆ…
ಕುವೈತ್ ನಲ್ಲಿ ಮತ್ತೊಂದು ಅಗ್ನಿ ದುರಂತ ಸಂಭವಿಸಿದ್ದು, ಅಪಾರ್ಟ್ ಮೆಂಟ್ ನಲ್ಲಿ ಸಂಭವಿಸಿದ ಬೆಂಕಿ ಅವಘಡಲ್ಲಿ ಒಂದೇ ಕುಟುಂಬದ ನಾಲ್ವರು ಸಜೀವದಹನಗೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಕುವೈತ್ ನ ಅಬ್ಬಾಸಿಯಾದ ಅಪಾರ್ಟ್ ಮೆಂಟ್ ನಿವಾಸದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಕೇರಳ ಮೂಲದ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ. ಮ್ಯಾಥ್ಯೂಸ್ ವರ್ಗೀಸ್ ಮುಳಕಲ್ (40), ಪತ್ನಿ ಲಿನಿ ಅಬ್ರಹಾಂ (35), ಮಕ್ಕಳಾದ ಐರಿನ್ (14) ಹಾಗೂ ಇಸಾಕ್ (9) ಮೃತ ದುರ್ದೈವಿಗಳು. ಕೇರಳದ ಕೊಚ್ಚಿಯಲ್ಲಿನ ನೆಡುಂಬಸ್ಸರಿ ಮೂಲದ ಮ್ಯಾಥ್ಯೂಸ್ ಹಾಗೂ ಕುಟುಂಬ ಕಳೆದ 15 ವರ್ಷಗಳಿಂದ ಕುವೈತ್ ನ ಅಬ್ಬಾಸಿಯಾದಲ್ಲಿ ನೆಲೆಸಿದ್ದರು. ಲಿನಿ ಆರೋಗ್ಯ ಸಚಿವಾಲಯದ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಮಕ್ಕಳಾದ ಐರಿನ್ ಹಾಗೂ ಇಸಾಕ್ 9 ಹಾಗೂ 4ನೇ ತರಗತಿಯಲ್ಲಿ ಓದುತ್ತಿದ್ದರು. ತಡರಾತ್ರಿ ಮನೆಯ ರೂಮಿನ ಎಸಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿದ್ದು, ಇಡೀ ಮನೆಗೆ ವ್ಯಾಪಿಸಿದೆ. ನಾಲ್ವರು ಸಜೀವದಹನವಾಗಿದ್ದಾರೆ.
ಉಡುಪಿ: ಹುಚ್ಚು ನಾಯಿಯೊಂದು ಎಂಟು ಮಂದಿಗೆ ಕಚ್ಚಿ ಗಾಯಗೊಳಿಸಿರುವ ಘಟನೆ ಉಡುಪಿ ನಗರದಲ್ಲಿ ಇಂದು ಮಧ್ಯಾಹ್ನ ವೇಳೆ ಸಂಭವಿಸಿದೆ. ತೀರಾ ಬಸವಳಿದ ಸ್ಥಿತಿಯಲ್ಲಿದ್ದ ಈ ನಾಯಿಯು ರಸ್ತೆಯಲ್ಲಿ ಹೋಗುವಾಗ ಎದುರಿಗೆ ಸಿಕ್ಕಿದವರೆಲ್ಲರಿಗೂ ಕಚ್ಚಿಕೊಂಡು ಹೋಗಿದೆ. ಕೆಲವರ ಕಾಲಿನ ಮಾಂಸ ಕೂಡ ಕಚ್ಚಿ ತಿಂದಿದೆ. ಗಾಯಗೊಂಡ ಎಲ್ಲರು ಉಡುಪಿ ಜಿಲ್ಲಾಸ್ಪತ್ರೆಗೆ ತೆರಳಿ ಹೊರರೋಗಿಗಳಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಸ್ಥಳೀಯವಲ್ಲದ ಎಲ್ಲಿಂದಲೋ ಬಂದ ಈ ನಾಯಿಗೆ ಹುಚ್ಚು ಹಿಡಿದಿರುವುದನ್ನು ಸ್ಥಳೀಯರು ಗಮನಿಸಿದರು. ಬಳಿಕ ನಾಯಿಯು ತೀರಾ ಸುಸ್ತಾಗಿ ಉಡುಪಿಯ ನಾರ್ತ್ ಶಾಲೆಯ ಆವರಣದಲ್ಲಿ ಬಂದು ಬಿದ್ದಿರುವುದನ್ನು ಸಾರ್ವಜನಿಕರು ಗುರುತಿಸಿ, ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಅವರಿಗೆ ತಿಳಿಸಿದರು. ನಿತ್ಯಾನಂದ ಒಳಕಾಡು ತಕ್ಷಣ ನಗರಸಭೆ ಪೌರಾಯುಕ್ತ ರಾಯಪ್ಪ ಹಾಗೂ ಪ್ರಾಣಿದಯಾ ಸಂಘದವರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಆಗಮಿಸಿದ ಪೌರಾಯುಕ್ತರು ಹಾಗೂ ಪ್ರಾಣಿದಯಾ ಸಂಘದ ಮಂಜುಳಾ ಹಾಗೂ ಪೃಥ್ವಿ ಪರಿಶೀಲನೆ ನಡೆಸಿದರು. ನಂತರ ಪಶು ವೈದ್ಯರನ್ನು ಕರೆಸಿ ನಾಯಿಗೆ ಚಚ್ಚುಮದ್ದು ನೀಡಲಾಯಿತು ಎಂದು ತಿಳಿದುಬಂದಿದೆ.










