Author: main-admin

ಬಜಪೆ: ಗಾಂಜಾ ಸೇವನೆ ಮಾಡುತ್ತಿದ್ದ ಮೂವರನ್ನು ಬಜಪೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮಂಗಳೂರು ಬಲ್ಮಠದ ಆರ್ಯ ಸಮಾಜ ರಸ್ತೆ, ಸನ್ಯಾಸಿಗುಡ್ಡೆಯ ನಿವಾಸಿ ನೌಫಾಲ್ (38), ಕುಪ್ಪೆಪದವಿನ ಕಿಲೆಂಜಾರು ಗ್ರಾಮದ ನಿವಾಸಿ ಹಂಝು(59) ಹಾಗೂ ಚಿಕ್ಕಮಗಳೂರು ಜಿಲ್ಲೆಯ ಎನ್ .ಅರ್ ಪುರ ತಾಲೂಕಿನ ಬಂಡಿಹೊಳೆ ಗ್ರಾಮದ ನಿವಾಸಿ ಸುದಾರ್ಶನ್ (25) ಈ ಮೂವರನ್ನು ಬಜಪೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳು ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕಿನ್ನಿಪದವು, ತಾರಿಕಂಬ್ಳ ಮತ್ತು ಶಾಂತಿಗುಡ್ಡೆ ಕಡೆಗಳಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದರು ಎಂಬುದು ಪೊಲೀಸ್ ಮೂಲಗಳು ತಿಳಿಸಿದೆ. ಬಜಪೆ ಪೊಲೀಸ್ ನಿರೀಕ್ಷಕರಾದ ಸಂದೀಪ್ ಜಿ.ಎಸ್ ಅವರ ತಂಡ ಆರೋಪಿಗಳನ್ನು ಪತ್ತೆಹಚ್ಚಿದ್ದು, ಆರೋಪಿಗಳ ವಿರುದ್ದ ಕಾನೂನು ಕ್ರಮವನ್ನು ಕೈಗೊಂಡಿದ್ದಾರೆ.

Read More

ಮಂಗಳೂರು : ಮಹಾನಗರ ಪಾಲಿಕೆ ಆಯುಕ್ತರ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದು, ಬೆಳ್ಳಂಬೆಳಗ್ಗೆ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ನೀಡಿದೆ. ಪಾಲಿಕೆ ಆಯುಕ್ತ ಕೆಎ ಎಸ್ ಗ್ರೇಡ್ ಅಧಿಕಾರಿ ಆನಂದ್ ಎಂಬವರ ನಿವಾಸದ ಮೇಲೆ ದಾಳಿ ನಡೆಸಿದ್ದು, ಕಮಿಷನರ್ ಕಚೇರಿ ಹಾಗೂ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು, ಶಿವಮೊಗ್ಗ, ಯಾದಗಿರಿ, ತುಮಕೂರು, ಬೆಂಗಳೂರು ಗ್ರಾಮಾಂತರ ಸಹಿತ 52 ಕಡೆಗಳಲ್ಲಿ ಏಕಕಾಲಕ್ಕೆ ನೂರಕ್ಕೂ ಅಧಿಕ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿದೆ.

Read More

ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ನಾಳೆ ಅಂದರೆ ಜು.19ರಂದು ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕುಗಳ ಶಾಲಾ-ಕಾಲೇಜುಗಳಿಗೆ ಮಾತ್ರ ರಜೆ ಘೋಷಣೆ ಮಾಡಿಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಅವರು ಇದೀಗ ಆದೇಶ ಹೊರಡಿಸಿದ್ದಾರೆ. ಅದರಂತೆ ಈ ಐದು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ & ಪಿಯು ಕಾಲೇಜುಗಳಿಗೆ ಶುಕ್ರವಾರ ರಜೆಯನ್ನು ನೀಡಲಾಗಿದೆ. ಆದರೆ, ಮಂಗಳೂರು, ಉಳ್ಳಾಲ, ಮೂಡಬಿದಿರೆ, ಮೂಲ್ಕಿ ತಾಲೂಕಿನ ಶಾಲಾ-ಕಾಲೇಜುಗಳಿಗೆ ಶುಕ್ರವಾರ ರಜೆ ಇರುವುದಿಲ್ಲ.

Read More

ಮಾಣಿ: ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿದಿರುವುದರಿಂದ ಸಕಲೇಶಪುರ, ಹಾಸನ, ಬೆಂಗಳೂರು ತೆರಳುವ ವಾಹನಗಳು ಬದಲಿ ರಸ್ತೆಯಲ್ಲಿ ಸಂಚಾರ ನಡೆಸುವಂತೆ ಮಾಣಿಯಲ್ಲಿ ಬ್ಯಾರಿಕೇಡ್ ಅಳವಡಿಸಿರುವ ಪೊಲೀಸರು ಆ ದಾರಿಯಾಗಿ ಬರುವ ವಾಹನ ಸವಾರರಿಗೆ ಮಾಹಿತಿ ನೀಡಿ ಬದಲಿ ರಸ್ತೆಯನ್ನು ಬಳಸುವಂತೆ ತಿಳಿಸುತ್ತಿದ್ದಾರೆ. ಕಳೆದ ಕೆಲ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿದು ವಾಹನ ಸಂಚಾರಕ್ಕೆ ಸಮಸ್ಯೆಯಾಗಿದೆ. ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿದಿದ್ದು, ಈ ಹಿನ್ನಲೆ ಸಕಲೇಶಪುರ, ಹಾಸನ, ಬೆಂಗಳೂರು ತೆರಳುವ ವಾಹನಗಳು ಮಡಿಕೇರಿ, ಮೈಸೂರು ಮಾರ್ಗವಾಗಿ ತೆರಳುವಂತೆ ಅಧಿಕಾರಿಗಳು ತಿಳಿಸಿದ್ದಾರೆ. ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಮಾಣಿಯಲ್ಲಿ ಬ್ಯಾರಿಕೇಡ್ ಅಳವಡಿಸಿದ್ದು, ಸಕಲೇಶಪುರ, ಹಾಸನ, ಬೆಂಗಳೂರು ತೆರಳುವ ವಾಹನಗಳನ್ನು ಬದಲಿ ರಸ್ತೆ ಮೂಲಕ ಚಲಿಸುವಂತೆ ಸೂಚಿಸಲಾಗುತ್ತಿದೆ.

Read More

ಉಡುಪಿ: ನಗರದ ಸಗ್ರಿ ರೈಲು ಸೇತುವೆ ಸಮೀಪದ ರೈಲು ಹಳಿಯ ಬಳಿ ವ್ಯಕ್ತಿಯೊಬ್ಬರ ಮೃತದೇಹ ಬುಧವಾರ ತಡರಾತ್ರಿ ಪತ್ತೆಯಾಗಿದೆ. ಮೃತವ್ಯಕ್ತಿಯನ್ನು ಉಡುಪಿ ಮೂಡಬೆಟ್ಟು ನಿವಾಸಿ ಪ್ರಸಾದ್ ಆಚಾರ್ಯ ಎಂದು ಗುರುತಿಸಲಾಗಿದೆ. ವ್ಯಕ್ತಿಯ ತಲೆ ಭಾಗ ಛಿದ್ರಗೊಂಡಿದ್ದು, ರೈಲು ಬಡಿದು ಅಥವಾ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.  ಘಟನಾ ಸ್ಥಳಕ್ಕೆ ಭೇಟಿ ನೀಡಿದ ಮಣಿಪಾಲ ಠಾಣೆಯ ಎಸ್ ಐ ರಾಘವೇಂದ್ರ ಸಿ ಹಾಗೂ  ತಂಡ ಮಹಜರು ಪ್ರಕ್ರಿಯೆ ನಡೆಸಿದರು. ಬಳಿಕ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರ ಸಹಕಾರದಿಂದ ಮೃತದೇಹವನ್ನು ಮಣಿಪಾಲದ ಶವಗಾರಕ್ಕೆ ರವಾನಿಸಲಾಯಿತು. ಸ್ಥಳದಲ್ಲಿ ಆಧಾರ್ ಚೀಟಿ ಪತ್ತೆಯಾಗಿದೆ. ಮಣಿಪಾಲ ಪೋಲಿಸರು ಮತ್ತು ರೈಲ್ವೆ ಪೋಲಿಸರು ಕಾನೂನು ಪ್ರಕ್ರಿಯೆ ನಡೆಸಿದರು.

Read More

ಪುತ್ತೂರು: ಐರಾವತ್ ಬಸ್ ಗೆ ಬೆಂಕಿ ಹತ್ತಿಕೊಂಡ ಘಟನೆ ಉಪ್ಪಿನಂಗಡಿಯ ಹಳೆಗೇಟು ಬಳಿ ಇಂದು ನಡೆದಿದೆ. ಸ್ಥಳೀಯರ ನೆರವಿನಿಂದ ಬೆಂಕಿ ನಂದಿಸಲಾಗಿದ್ದು, ಈ ವೇಳೆ ರಸ್ತೆಯ ಗುಂಡಿಯಲ್ಲಿದ್ದ ನೀರು ನೆರವಿಗೆ ಬಂದಿದೆ. ಬೆಂಗಳೂರಿನಿಂದ – ಮಂಗಳೂರಿಗೆ ಆಗಮಿಸುತ್ತಿದ್ದ ಐರಾವತ ಬಸ್ಸಿನ ಹಿಂಬದಿ ಎಂಜಿನ್ ಬಳಿ ಬೆಂಕಿ ಹತ್ತಿಕೊಂಡಿದ್ದು, ಇದನ್ನು ಗಮನಿಸಿದ ಚಾಲಕ ಹಳೆಗೇಟು ಬಳಿ ಬಸ್ಸನ್ನು ನಿಲ್ಲಿಸಿದ್ದಾನೆ. ಆಗ ಪ್ರಯಾಣಿಕರೆಲ್ಲರೂ ಬಸ್ಸಿನಿಂದ ಇಳಿದಿದ್ದಾರೆ. ಕೂಡಲೇ ಸ್ಥಳದಲ್ಲಿದ್ದ ಜನರು ರಸ್ತೆಯಲ್ಲಿದ್ದ ಕೆಸರು, ಮಣ್ಣು, ನೀರನ್ನು ಬಸ್ಸಿಗೆ ಎರಚಿ ಬೆಂಕಿಯನ್ನು ಹತೋಟಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ.

Read More

ಮಂಗಳೂರು: ನಗರದ ಕಾವೂರು ಠಾಣಾ ವ್ಯಾಪ್ತಿಯ ‘ದಿಯಾ ಸಿಸ್ಟಮ್ಸ್’ ಸಾಫ್ಟ್ವೇರ್ ಕಂಪನಿಯ ಚಾಲಕರ ನಡುವೆ ಬುಧವಾರ ರಾತ್ರಿ ಜಗಳ ನಡೆದಿದ್ದು, ಒಬ್ಬ ಚಾಲಕನಿಗೆ ನಾಲ್ವರ ಗುಂಪು ಗಂಭೀರವಾಗಿ ಹಲ್ಲೆ ನಡೆಸಿದೆ. ಸಂದೀಪ್ ಹಲ್ಲೆಗೊಳಗಾದ ಚಾಲಕ. ಅದೇ ಕಂಪನಿಯ ಇನ್ನೊಬ್ಬ ಕಾರು ಚಾಲಕ ತೇಜಸ್ ಶೆಟ್ಟಿ, ಆತನ ಸೋದರ ಭವಿತ್ ಶೆಟ್ಟಿ, ಗೆಳೆಯರಾದ ಪ್ರೀತಮ್ ಹಾಗೂ ಪುನೀತ್ ದೇವಾಡಿಗ ಹಲ್ಲೆ ನಡೆಸಿದ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ತೇಜಸ್ ಶೆಟ್ಟಿ ಸಂದೀಪ್ ವಿರುದ್ಧ ಹಳೆ ವೈಷನ್ಯ ಹೊಂದಿದ್ದ. ಬುಧವಾರ ರಾತ್ರಿ ತನ್ನ ಪಾಳಿಯ ಕೆಲಸ ಮುಗಿದ ಬಳಿಕ ಆತ ಸೋದರ ಭವಿತ್ ಶೆಟ್ಟಿ, ಗೆಳೆಯರಾದ ಪ್ರೀತಮ್, ಪುನೀತ್ ದೇವಾಡಿಗ ಜೊತೆ ಸೇರಿ, ಕೆಲಸ ಮುಗಿಸಿ ತೆರಳುತ್ತಿದ್ದ ಸಂದೀಪ್ ಜೊತೆ ಜಗಳವಾಡಿದ್ದ. ನಾಲ್ವರು ಸೇರಿ ಮಾರಕ ಆಯುಧದಿಂದ ಸಂದೀಪ್ ಮೇಲೆ ಹಲ್ಲೆ ನಡೆಸಿದ್ದು. ತಲೆ ಮತ್ತಿತರ ಭಾಗಗಳಿಗೆ ಗಂಭೀರವಾದ ಗಾಯಗಳಾಗಿವೆ. ಗಾಯಾಳುವನ್ನು ಎ.ಜೆ. ಆಸ್ಪತ್ರೆಗೆ ದಾಖಲಿಸಲಾಗಿದೆ. ಜಗಳಕ್ಕೆ ಕಾರಣಗಳೇನು ಎಂಬುದು ಇನ್ನೂ ತಿಳಿದಿಲ್ಲ.…

Read More

ಬೆಂಗಳೂರು : ಬಡವ ಮತ್ತು ಬಡಗಿ ಎಂಬ ಕಾರಣ ಪರಿಗಣಿಸಿ ಗಂಧದ ಮರ ಕಡಿದು ಕಳವಿಗೆ ಯತ್ನಿಸಿದ ಪ್ರಕರಣದಲ್ಲಿ ಆರೋಪಿಗೆ 10 ಸಾವಿರ ರು. ದಂಡ ವಿಧಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶ ಒಪ್ಪದ ಹೈಕೋರ್ಟ್, ದಂಡದ ಮೊತ್ತವನ್ನು ಒಂದು ಲಕ್ಷಕ್ಕೆ ಹೆಚ್ಚಿಸಿರುವ ಜೊತೆಗೆ 5 ವರ್ಷ ಜೈಲು ಶಿಕ್ಷೆಯನ್ನು ಕಾಯಂಗೊಳಿಸಿದೆ. ಹೌದು ಪ್ರಕರಣದ ಆರೋಪಿ ಮಂಡ್ಯ ಜಿಲ್ಲೆಯ ಬಲ್ಲೇನಹಳ್ಳಿ ಗ್ರಾಮದ ನಿವಾಸಿ ದೇವರಾಜಾಚಾರಿ ಎಂಬುವರಿಗೆ ಐದು ವರ್ಷ ಜೈಲು ಶಿಕ್ಷೆ ವಿಧಿಸಿದ್ದ ವಿಚಾರಣಾ ನ್ಯಾಯಾಲಯ, 10 ಸಾವಿರ ರು. ದಂಡ ವಿಧಿಸಿರುವುದನ್ನು ಆಕ್ಷೇಪಿಸಿ ರಾಜ್ಯ ಸರ್ಕಾರ (ಅಶೋಕಪುರ ಠಾಣಾ ಪೊಲೀಸರು) ಹೈಕೋರ್ಟ್‌ಗೆ ಕ್ರಿಮಿನಲ್ ಮೇಲ್ಮನವಿ ಸಲ್ಲಿಸಿದ್ದರು. ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶಿವಶಂಕರ ಅಮರಣ್ಣನವ‌ರ್ ಅವರ ನ್ಯಾಯಪೀಠ, ಗಂಧದ ಮರ ಕಳವು ಆರೋಪ ಹಾಗೂ ಆಕ್ರಮವಾಗಿ ಸಂಗ್ರಹಿಸಿದ ಅಪರಾಧ ಮೊದಲ ಬಾರಿ ಸಾಬೀತಾದಲ್ಲಿ ಕೃತ್ಯ ಎಸಗಿದವರಿಗೆ 5 ವರ್ಷಕ್ಕಿಂತ ಕಡಿಮೆ ಶಿಕ್ಷೆ ಮತ್ತು 50 ಸಾವಿರಕ್ಕಿಂತಲೂ ಕಡಿಮೆ ದಂಡ ವಿಧಿಸುವಂತಿಲ್ಲ ಎಂದು…

Read More

ಬೆಂಗಳೂರು: ಡಿಜಿ ಆ್ಯಂಡ್​​ ಐಜಿಪಿ (DG and IGP) ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮತ್ತು ಗೃಹಮಂತ್ರಿ ಡಾ. ಜಿ. ಪರಮೇಶ್ವರ್ (G Parmeshwara) ಅವರ ಜೊತೆ ಸಭೆ ನಡೆಸಿದ ಬಳಿಕ ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಡಿಜಿ ಆ್ಯಂಡ್ ಐಜಿಪಿ ಆಲೋಕ್ ಮೋಹನ್ (Alok Mohan) 20 ಅಂಶಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಿದ್ದಾರೆ. ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ಬೆಂಗಳೂರು ನಗರ ಸೇರಿದಂತೆ ಇತರೆ ನಗರಗಳ ಪೊಲೀಸ್ ಕಮಿಷನರೇಟ್​ಗಳ ವ್ಯಾಪ್ತಿಗೆ ಬರುವ ಡೆಪ್ಯುಟಿ ಪೊಲೀಸ್ ಕಮೀಷನರ್‌ಗಳು ಪ್ರತಿದಿನ ಕನಿಷ್ಠ ಒಂದು ಪೊಲೀಸ್ ಠಾಣೆಗೆ ಭೇಟಿ ನೀಡಬೇಕು. ಭೇಟಿಯ ಸಮಯದಲ್ಲಿ, ಅವರು ಪೊಲೀಸ್ ಠಾಣೆಗಳಲ್ಲಿರುವ ಸಾರ್ವಜನಿಕರು ಮತ್ತು ಪೊಲೀಸ್ ಸಿಬ್ಬಂದಿಯೊಂದಿಗೆ ನಿರಂತರವಾಗಿ ಸಂವಹನ ನಡೆಸಬೇಕು ಮತ್ತು ಅವರ ಕುಂದುಕೊರತೆಗಳನ್ನು ಸಹ ಪರಿಶೀಲಿಸಬೇಕು. ಎಲ್ಲ ವಲಯ ಐ.ಜಿ.ಪಿ.ಗಳು/ಡಿ.ಐ.ಜಿ.ಪಿ.ಗಳು ಮತ್ತು ಹೆಚ್ಚುವರಿ ಪೊಲೀಸ್ ಆಯುಕ್ತರು, ಬೆಂಗಳೂರು ನಗರದವರು ಪ್ರತಿನಿತ್ಯ ಪೊಲೀಸ್ ಠಾಣೆಗಳಿಗೆ ಭೇಟಿ ನೀಡಬೇಕು. ಅವರು ಪೊಲೀಸ್ ಠಾಣೆಗಳಿಗೆ ಭೇಟಿ ನೀಡಿದ ಸಮಯದಲ್ಲಿ ಠಾಣೆಯ…

Read More

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಕೋಟ್ಯಾಂತರ ರೂಪಾಯಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಬಿ ನಾಗೇಂದ್ರ ಪತ್ನಿ ಮಂಜುಳಾರನ್ನು ಇಡಿ ಅಧಿಕಾರಿಗಳು ಇದು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಮಂಜುಳಾರನ್ನು ಅಧಿಕಾರಿಗಳು ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮಂಜುಳಾರನ್ನು ವಶಕ್ಕೆ ಪಡೆದ ಬಳಿಕ ಅವರನ್ನು ಅಧಿಕಾರಿಗಳು ಶಾಂತಿನಗರದಲ್ಲಿರುವ ಇಡಿ ಕಚೇರಿಗೆ ಕರೆದೊಯ್ದಿದ್ದಾರೆ. ಇನ್ನು ಮಂಜುಳಾ ಅವರಿಗೆ ಬಂಧನ ಭೀತಿ ಎದುರಾಗಿದೆ.ವಾಲ್ಮೀಕಿ ನಿಗಮದ 187 ಕೋಟಿ ಅಕ್ರಮ ವ್ಯವಹಾರಲ್ಲಿ ಹಲವಾರು ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆಯಾಗಿದೆ. ಬಂಧನಕ್ಕೆ ಒಳಗಾದ ನಾಗೇಂದ್ರ ಅವರ ಬ್ಯಾಂಕ್ ಖಾತೆ ಜೊತೆ ಕುಟುಂಬಸ್ಥರ ಬ್ಯಾಂಕ್ ಖಾತೆಯನ್ನು ಪರಿಶೀಲಿಸಿದಾಗ ಪತ್ನಿಯ ಖಾತೆಯಿಂದ ಹೆಚ್ಚು ಹಣ ವರ್ಗಾವಣೆಯಾಗಿರುವ ವಿಚಾರ ಬೆಳಕಿಗೆ ಬಂದಿದೆ. ಹೀಗಾಗಿ ಇಡಿ ಅಧಿಕಾರಿಗಳು ಮಂಜುಳಾ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

Read More