ಮಂಗಳೂರು: ನಗರದ ನಿವಾಸಿಯೊಬ್ಬರು ಷೇರು ಖರೀದಿಸಿ ಲಾಭ ಗಳಿಸುವ ಯತ್ನದಲ್ಲಿ ಬರೋಬ್ಬರಿ 1.50 ಕೋಟಿ ರೂ. ಕಳೆದುಕೊಂಡ ಬಗ್ಗೆ ನಗರದ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಣಕಳೆದುಕೊಂಡ ವ್ಯಕ್ತಿ ಸಾಮಾಜಿಕ ಜಾಲತಾಣವಾದ ಫೇಸ್ಬುಕ್ ನೋಡುವಾಗ ‘Jefferies wealth multiplication Plan’ ಎಂಬ ಪೋಸ್ಟ್ ನೋಡಿ ಅದರಲ್ಲಿದ್ದ ಪ್ರಶ್ನೆಗಳಿಗೆ ಉತ್ತರಿಸಿದ್ದರು. ಷೇರ್ಗಳನ್ನು ಖರೀದಿಸಿ ಲಾಭಗಳಿಸುವ ಇರಾದೆಯಿಂದ ಅಪರಿಚಿತ ವ್ಯಕ್ತಿಯು ನೀಡಿದ ಮಾಹಿತಿಯಂತೆ ಮೇ 28ರಿಂದ 2024 ಜೂ.28ರ ತನಕ ಹಂತ ಹಂತವಾಗಿ ತನ್ನ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮಲ್ಲಿಕಟ್ಟೆ ಶಾಖೆಯಿಂದ 73,00,000 ರೂ. ಮತ್ತು ಗುರುಪುರ ವ್ಯವಸಾಯ ಸಹಕಾರಿ ಸಂಘ ನಿಯಮಿತ ವಾಮಂಜೂರು ಶಾಖೆ ಖಾತೆಯಿಂದ 77,00,000 ರೂ. ಒಟ್ಟು 1.50 ಕೋಟಿ ರೂ. ಗಳನ್ನು ಅಪರಿಚಿತ ವ್ಯಕ್ತಿಯ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿ ವಂಚನೆಗೊಳಗಾಗಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ. ಈ ಸಂಬಂಧ ಸೆನ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Author: main-admin
ಕಟಪಾಡಿ: ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಟಪಾಡಿ ಜಂಕ್ಷನ್ ಬಳಿ ಭೀಕರ ಅಪಘಾತ ನಡೆದ ಪರಿಣಾಮ ಹೈವೆ ಬಳಿ ಇದ್ದ ಪೊಲೀಸ್ ಹಾಗೂ ಕಾರಿನ ಪ್ರಯಾಣಿಕರು ಗಾಯಗೊಂಡ ಘಟನೆ ಜು.16 ರಂದು ನಡೆದಿದೆ.ಹರೀಶ್ ನಾರಾಯಣ ಪೂಜಾರಿ ಎಂಬವರು ತಮ್ಮ ಕಾರಿನಲ್ಲಿ ಉದ್ಯಾವರದಿಂದ ಪಡುಬಿದ್ರಿಗೆ ತೆರಳಿದ್ದರು. ಈ ವೇಳೆ ಹೈವೇ ಬಳಿ ಇದ್ದ ಪೊಲೀಸರು ತಪಾಸಣೆಗೆ ಕಾರು ನಿಲ್ಲಿಸುವಂತೆ ಸೂಚಿಸಿದರು. ಹರೀಶ್ ತಮ್ಮ ಕಾರನ್ನು ನಿಲ್ಲಿಸಿದ ವೇಳೆ, ಹಿಂದಿನಿಂದ ಬಂದ ಸ್ವಿಫ್ಟ್ ಕಾರಿನ ಚಾಲಕ ಸುಶಾಂತ್ ತಮ್ಮ ವಾಹನವನ್ನು ದುಡುಕುತನದಿಂದ ಹಾಗೂ ನಿರ್ಲಕ್ಷ್ಯದಿಂದ ಚಲಾಯಿಸಿ, ಹರೀಶ್ ನಾರಾಯಣ ಪೂಜಾರಿ ಅವರ ಕಾರಿನ ಹಿಂಬದಿಗೆ ಡಿಕ್ಕಿ ಹೊಡೆದಿದ್ದಾರೆ ಎನ್ನಲಾಗಿದೆ.ಈ ಅಪಘಾತದಲ್ಲಿ ಮತ್ತೊಂದು ಕಾರಿಗೂ ಹಾನಿಯಾಗಿದೆ. ಈ ಪರಿಣಾಮವಾಗಿ, ಹರೀಶ್ ನಾರಾಯಣ ಪೂಜಾರಿ ಅವರ ಕಾರು ಮುಂದೆ ನಿಂತಿದ್ದ ಪೊಲೀಸ್ ಅಧಿಕಾರಿ ರಾಮ ಅವರ ಮೇಲೆ ಹತ್ತಿದೆ. ರಾಮ ಅವರು ರಸ್ತೆಗೆ ಬಿದ್ದು ತಲೆಗೆ ತೀವ್ರ ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ಉಡುಪಿ ಆಸ್ಪತ್ರೆಗೆ ದಾಖಲಿಸಲಾಯಿತು.ಅಪಘಾತದಲ್ಲಿ ಸ್ವಿಪ್ಟ್…
ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಅಂಕೋಲಾ ತಾಲೂಕಿನ ಶಿರೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಪ್ರಕರಣದಲ್ಲಿ , ಇದುವರೆಗೂ 6 ಜನರ ಮೃತದೇಹ ಗಳು ಪತ್ತೆಯಾಗಿದ್ದು, ಉಳಿದವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಇನ್ನು ಈ ಘಟನೆಯಲ್ಲಿ ಹೆದ್ದಾರಿ ಪಕ್ಕದಲ್ಲಿ ಹೋಟೆಲ್ ಇಟ್ಟುಕೊಂಡಿದ್ದ ಒಂದೇ ಕುಟುಂಬದ ಲಕ್ಷ್ಮಣ್ ನಾಯ್ಕ್, ಪತ್ನಿ ಶಾಂತಿ, ಪುತ್ರಿ ಆವಾತಿಕಾ ಹಾಗೂ ಪುತ್ರ ರೋಷನ್(11) ಸೇರಿ ಟ್ರಕ್ ಚಾಲಕನ ಶವ ಪತ್ತೆಯಾಗಿದೆ. ಈ ನಾಲ್ವರ ಮೃತದೇಹಗಳು ಗೋಕರ್ಣ ಸಮೀಪ ಸಿಕ್ಕಿದೆ. ಇನ್ನು ಕುಮಟಾ ಸರ್ಕಾರಿ ಅಸ್ಪತ್ರೆಯ ಶವಾಗಾರದಲ್ಲಿ ಮೃತ ದೇಹ ಇಡಲಾಗಿದೆ. ಇನ್ನು ಈ ಗುಡ್ಡ ಕುಸಿತ ಸ್ಥಳದಲ್ಲಿ ಮೊದಲು ಓರ್ವ ಮಹಿಳೆ ಶವ ಪತ್ತೆಯಾಗಿತ್ತು. ಬಳಿಕ ಐದು ಜನರ ಮೃತದೇಹ ಸಿಕ್ಕಿತ್ತು. ಇದರಲ್ಲಿ ಒಂದೇ ಕುಟುಂಬದ ನಾಲ್ವರು ಮೃತರಾದರೆ, ಇನ್ನುಳಿದ ಇರ್ವರು ಯಾರು ಎಂಬುವುದು ಗುರುತು ಸಿಗುತ್ತಿಲ್ಲ. ಇದೀಗ ಕೊನೆಗೂ ದರ್ಘಟನಾ ಸ್ಥಳಕ್ಕೆ ಹಿಟಾಚಿ ಬಂದಿದ್ದು, ಮಣ್ಣು ತೆರವು ಕಾರ್ಯ ಮಾಡುತ್ತಿದೆ.
ಮಂಗಳೂರು: ಹಿರಿಯ ರಂಗನಿರ್ದೇಶಕ ಹಾಗೂ ರಾಷ್ಟ್ರಪ್ರಶಸ್ತಿ ಸಿನಿಮಾ ನಿರ್ಮಾಪಕ, ನಿರ್ದೇಶಕ ಸದಾನಂದ ಸುವರ್ಣ (93) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ನಿಧನರಾಗಿದ್ದಾರೆ. ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ನಾಳೆ ಮಧ್ಯಾಹ್ನ 1ರಿಂದ 3ರವರೆಗೆ ಪುರಭವನದಲ್ಲಿ ವ್ಯವಸ್ಥೆ ಮಾಡಲಾಗುವುದು. ಬಳಿಕ ಅವರ ಬಯಕೆಯಂತೆ ದೇಹದಾನವನ್ನು ಮಾಡಲಾಗುವುದು ಎಂದು ಮೂಲಗಳಿಂದ ತಿಳಿದು ಬಂದಿದೆ. ಕನ್ನಡದಲ್ಲಿ ಅತ್ಯಂತ ಯಶಸ್ವಿ ರಂಗಭೂಮಿ ನಿರ್ದೇಶಕರಾಗಿ ನೂರಾರು ನಾಟಕಗಳನ್ನು ನಿರ್ದೇಶಿಸಿದ ಇವರು ಕೋರ್ಟ್ಮಾರ್ಷಲ್, ಉರುಳು, ಮಳೆನಿಲ್ಲುವವರೆಗೆ, ಗುಡ್ಡದ ಭೂತ, ಸುಳಿ ಮುಂತಾದವು ಪ್ರಯೋಗಾತ್ಮಕ, ಸದಭಿರುಚಿಯ ನಾಟಕಗಳು. ಸದಾನಂದ ಸುವರ್ಣ ಅವರು ಗಿರೀಶ್ ಕಾಸರವಳ್ಳಿಯವರ ಘಟಶ್ರಾದ್ಧ ಸಿನಿಮಾಕ್ಕೆ ನಿರ್ಮಾಪಕರಾಗುವ ಮೂಲಕ ಸಿನಿಮಾ ರಂಗಕ್ಕೆ ಪ್ರವೇಶ ಮಾಡಿದವರು. ಈ ಸಿನಿಮಾಕ್ಕೆ ಅತ್ಯುತ್ತಮ ಸಿನಿಮಾವೆಂದು ಸ್ವರ್ಣಕಮಲ ಪ್ರಶಸ್ತಿ ಲಭಿಸಿತ್ತು. ಬಳಿಕ ಕಾಸರವಳ್ಳಿಯವರ ತಬರನ ಕತೆ, ಮನೆ, ಕ್ರೌರ್ಯ ಮುಂತಾದ ಸಿನಿಮಾಗಳಿಗೆ ಕಾರ್ಯನಿರ್ವಾಹಕ ನಿರ್ಮಾಪಕರಾಗಿ ಅನುವಭವ ಪಡೆದವರು. ಬಳಿಕ ಕುಬಿ ಮತ್ತು ಇಯಾಲ ಎಂಬ ಸದಭಿರುಚಿಯ ಚಿತ್ರ ನಿರ್ದೇಶಿಸಿ ಉತ್ತಮ ನಿರ್ದೇಶಕ ಪ್ರಶಸ್ತಿ ಪಡೆದರು.…
ಉಡುಪಿ: ಉಡುಪಿ ನಗರದ ಮನೆಯೊಂದರಲ್ಲಿ ನಡೆದಿದ್ದ ಭಾರೀ ಬೆಂಕಿ ಅವಘಡದಲ್ಲಿ ಗಂಭೀರ ಗಾಯಗೊಂಡಿದ್ದ ಬಾರ್ ಮಾಲೀಕ ರಮಾನಂದ್ ಶೆಟ್ಟಿ ಅವರ ಪತ್ನಿ ಅಶ್ವಿನಿ (45) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ನಿನ್ನೆ ಮುಂಜಾನೆ ನಡೆದಿದ್ದ ಅಗ್ನಿ ಅವಘಡದಲ್ಲಿ ಅಶ್ವಿನಿ ಅವರ ಪತಿ ರಮಾನಂದ್ ಶೆಟ್ಟಿ ಮೃತಪಟ್ಟಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಪತ್ನಿ ಕೂಡ ಮೃತಪಟ್ಟಿದ್ದು ಕುಟುಂಬದಲ್ಲಿ ಶೋಕ ಮುಗಿಲು ಮುಟ್ಟಿದೆ. ಉಡುಪಿ ನಗರದಲ್ಲಿ ವಾಸ ಮಾಡುತ್ತಿದ್ದ ಶೆಟ್ಟಿ ಬಾರ್ ಅಂಡ್ ರೆಸ್ಟೋರೆಂಟ್ ಮಾಲೀಕ ರಮಾನಂದ್ ಶೆಟ್ಟಿ ಮನೆಯಲ್ಲಿ ನಿನ್ನೆ ಮುಂಜಾನೆ ಶಾರ್ಟ್ ಸರ್ಕ್ಯುಟ್ ನಿಂದ ಅಗ್ನಿ ಅವಘಡ ಸಂಭವಿಸಿತ್ತು. ಈ ಅವಘಡದಲ್ಲಿ ಮನೆಯ ಒಳಭಾಗ ಸಂಪೂರ್ಣ ಸುಟ್ಟು ಕರಕಲಾಗಿತ್ತು. ಮನೆಯಲ್ಲಿದ್ದ ರಮಾನಂದ್ ಶೆಟ್ಟಿ – ಅಶ್ವಿನಿ ದಂಪತಿಯ ಮಕ್ಕಳಿಬ್ಬರನ್ನು ರಕ್ಷಣೆ ಮಾಡಲಾಗಿತ್ತು. ಅಗ್ನಿ ಅವಘಡದಿಂದ ಮನೆಯೊಳಗೆ ದಟ್ಟ ಹೊಗೆ ಆವರಿಸಿ ದಂಪತಿ ಅಸ್ವಸ್ಥಗೊಂಡಿದ್ದರು.ರಮಾನಂದ್ ಶೆಟ್ಟಿ ಆಸ್ಪತ್ರೆಯಲ್ಲಿ ನಿನ್ನೆಯೇ ಮೃತಪಟ್ಟಿದ್ದರೆ, ಪತ್ನಿ ಅಶ್ವಿನಿ ಕೆಎಂಸಿ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದರು. ಬೆಂಕಿಯ ಕೆನ್ನಾಲೆಗೆಗೆ ಅವರಿಗೆ…
ಉಪ್ಪಿನಂಗಡಿ: ಉಪ್ಪಿನಂಗಡಿ ಹತ್ತಿರ ವೃದ್ಧೆಯೋರ್ವರ ಚಿನ್ನದ ಸರ ಕಸಿಯಲು ಯತ್ನಿಸಿದ ಘಟನೆ ಶಿರಾಡಿ ಗ್ರಾಮದ ಅಡ್ಡಹೊಳೆ ಎಂಬಲ್ಲಿ ನಡೆದಿದೆ. ಮಂಗಳೂರು ಕಡೆಯಿಂದ ಬೆಂಗಳೂರು ಕಡೆ ಬೈಕ್ನಲ್ಲಿ ಸಾಗುತ್ತಿದ್ದ ಇಬ್ಬರು ಅಡ್ಡಹೊಳೆ ಸಮೀಪದ ಮಿನಿ ಕ್ಯಾಂಟಿನ್ಗೆ ತೆರಳಿ ಚಹಾ ಕೇಳುವ ನೆಪದಲ್ಲಿ ತ್ರೇಸಿಯಮ್ಮ (65) ಅವರ ಕತ್ತಿನಲ್ಲಿದ್ದ ಸರ ಎಳೆದಾಗ ಬೊಬ್ಬೆ ಹಾಕಿದರು ಎನ್ನಲಾಗಿದೆ. ಕಳ್ಳರು ಓಡುವ ವೇಳೆ ಸರ ಬಿದ್ದಿದ್ದು, ಬಳಿಕ ಗುಂಡ್ಯ ಚೆಕ್ ಪೋಸ್ಟ್ಗೆ ಮಾಹಿತಿ ನೀಡಲಾಗಿದ್ದು, ಅಲ್ಲಿ ಪೊಲೀಸರು ಮತ್ತು ಸಾರ್ವ ಜನಿಕರು ಯುವಕರನ್ನು ಹಿಡಿದು ನೆಲ್ಯಾಡಿ ಠಾಣೆಗೆ ಹಸ್ತಾಂತರಿಸಿದರು. ಬಂಧಿತರು ಯಶವಂತಪುರದ ರೋಹಿತ್ ಮತ್ತು ಅಶೋಕ್ ಎಂದು ತಿಳಿದು ಬಂದಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಉಡುಪಿ: ನಿಂತಿದ್ದ ಬಸ್ಸಿನ ಹಿಂಬದಿಗೆ ಸ್ಕೂರ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಗುಂಡಿಬ್ಯೆಲು ನಿವಾಸಿ ಲಕ್ಷ್ಮಣ (60)ಗಂಭೀರ ಗಾಯಗೊಂಡಿದ್ದು ಅವರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಲ್ಪೆ ಸಿಟಿಜನ್ ಸರ್ಕಲ್ ಸಮೀಪದ ನೆರ್ಗಿ ಎಂಬಲ್ಲಿ ಈ ಘಟನೆ ನಡೆದಿದೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲು ಸಮಾಜಸೇವಕ ಈಶ್ವರ ಮಲ್ಪೆ ಮತ್ತು ತಂಡದವರು ಸಹಕರಿಸಿದರು. ಇವರಿಗೆ ಗುಂಡಿಬ್ಯೆಲಿನಲ್ಲಿ ವರ್ಕ್ ಶಾಪ್ ಇದೆ ಎನ್ನಲಾಗುತ್ತಿದೆ. ಮಲ್ಪೆ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಢಿಕ್ಕಿಯ ರಭಸಕ್ಕೆ ಬಸ್ ನ ಹಿಂಭಾಗ ಜಖಂಗೊಂಡಿದೆ.
ಸುಳ್ಯ: ಸರಕಾರಿ ಶಾಲೆಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವತಿಯಿಂದ ಗುರುಪೂಜೆ ನಡೆಸಿದ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಇಲಾಖೆಗೆ ದೂರು ನೀಡಿರುವ ಘಟನೆ ನಡೆದಿದ್ದು, ಕಾರ್ಯಕ್ರಮದ ಫೋಟೋ ವೈರಲ್ ಆಗಿದೆ. ಕಡಬ ತಾಲೂಕಿನ ಎಡಮಂಗಲ ಗ್ರಾಮದ ಕರಿಂಬಿಲ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುಪೂಜೆ ನಡೆಸಲಾಗಿರುವ ಆರೋಪ ಕೇಳಿಬಂದಿದೆ. ಶಾಲಾ ಕೊಠಡಿಯೊಳಗೆ ಕಾರ್ಯಕ್ರಮ ನಡೆಸಿದ್ದು, ಎದುರಿನ ಕಪ್ಪು ಹಲಗೆ(ಬ್ಲಾಕ್ ಬೋರ್ಡ್)ಯಲ್ಲಿ ಶಾಲೆಯ ಹೆಸರು ಕಂಡುಬಂದಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಿದ ಕೆಲವರು ಕಾರ್ಯಕ್ರಮ ಫೋಟೋವನ್ನು ವಾಟ್ಸಾಪ್ ಸ್ಟೇಟಸ್ ಹಾಕಿದ್ದರಿಂದ ಬಹಿರಂಗವಾಗಿದೆ. ಸರಕಾರಿ ಶಾಲೆಯ ಆವರಣದೊಳಗೆ ಅಥವಾ ಮೈದಾನದಲ್ಲಿ ಸಾರ್ವಜನಿಕ ಕಾರ್ಯಕ್ರಮಗಳಿಗೆ ಅವಕಾಶ ನೀಡಬಾರದೆಂಬ ಸರಕಾರದ ಸುತ್ತೋಲೆ ಇದ್ದರೂ ಶಾಲೆಯ ಒಳಗೆ ಆರೆಸ್ಸೆಸ್ ಕಾರ್ಯಕ್ರಮ ನಡೆದಿರುವ ಬಗ್ಗೆ ಶಿಕ್ಷಣ ಇಲಾಖೆ, ಹಾಗೂ ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಲಾಗಿದೆ ಎಂದು ತಿಳಿದುಬಂದಿದ್ದು, ಮುಖ್ಯ ಶಿಕ್ಷಕರಿಂದ ವಿವರಣೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.
ಉಪ್ಪಿನಂಗಡಿ: ಮನೆಯಲ್ಲಿ ವಿದ್ಯುತ್ ಇಲ್ಲವೆಂದು ವಿದ್ಯುತ್ ಪರಿವರ್ತಕದ ಬಳಿ ಫ್ಯೂಸ್ ಹಾಕಲು ತೆರಳಿದ ಯುವಕನೋರ್ವ ವಿದ್ಯುತ್ ಆಘಾತಕ್ಕೆ ಬಲಿಯಾದ ಘಟನೆ ಜು.15ರಂದು ಇಳಂತಿಲ ಗ್ರಾಮದ ಗೋಳಿತ್ತಡಿ ಎಂಬಲ್ಲಿ ನಡೆದಿದೆ. ತಿಮ್ಮಪ್ಪ ಗೌಡ ಎಂಬವರ ಪುತ್ರ ಹರೀಶ (32) ಮೃತ ಯುವಕ. ಅಡಿಕೆ ಸುಲಿಯುವ ಕೆಲಸ ಮಾಡುತ್ತಿದ್ದ ಈತ ಉತ್ತಮ ಕಬಡ್ಡಿ ಆಟಗಾರನೂ ಆಗಿದ್ದು, ತನ್ನ ಮನೆಗೆ ವಿದ್ಯುತ್ ಬರುತ್ತಿಲ್ಲವೆಂದು ವಿದ್ಯುತ್ ಪರಿವರ್ತಕದ ಬಳಿ ತೆರಳಿ ಫ್ಯೂಸ್ ಹಾಕಲು ನೋಡಿದ್ದು, ಈ ಸಂದರ್ಭ ವಿದ್ಯುತ್ ಪ್ರವಹಿಸಿ ಈತ ಮೃತಪಟ್ಟಿದ್ದಾರೆ.
ಮಂಗಳೂರು : ಭಾನುವಾರ ಸಂಜೆ ಮಹಾರಾಷ್ಟ್ರದ ರಾಯಗಢ ಮತ್ತು ರತ್ನಗಿರಿ ಜಿಲ್ಲೆಗಳಲ್ಲಿ ಭಾರೀ ಮಳೆಯ ನಡುವೆ ಭೂಕುಸಿತದಿಂದಾಗಿ ಕೊಂಕಣ ರೈಲ್ವೆ ಮಾರ್ಗದಲ್ಲಿ ರೈಲು ಸೇವೆಗಳು ಸ್ಥಗಿತಗೊಂಡಿವೆ. ಸಂಜೆ 5 ಗಂಟೆ ಸುಮಾರಿಗೆ ವಿನ್ಹೆರೆ (ರಾಯಗಡ) ಮತ್ತು ದಿವಾನ್ ಖವಾಟಿ (ರತ್ನಗಿರಿ) ನಿಲ್ದಾಣಗಳ ನಡುವಿನ ಸುರಂಗದ ಹೊರಗೆ ಭೂಕುಸಿತ ಸಂಭವಿಸಿದೆ ಎಂದು ವಕ್ತಾರರು ಕೊಂಕಣ ರೈಲ್ವೇ ಎಕ್ಸ್ನಲ್ಲಿ ಪೋಸ್ಟ್ ಮಾಡಿ ತಿಳಿಸಿದ್ದಾರೆ. ಮಂಗಳೂರು ಎಕ್ಸ್ಪ್ರೆಸ್, ಕೊಂಕಣ ಕನ್ಯಾ ಎಕ್ಸ್ಪ್ರೆಸ್, ತುಟಾರಿ ಎಕ್ಸ್ಪ್ರೆಸ್, ಜನಶತಾಬ್ದಿ ಎಕ್ಸ್ಪ್ರೆಸ್, ದಿವಾ ಸಾವಂತವಾಡಿ ಎಕ್ಸ್ಪ್ರೆಸ್, ಸಾವಂತವಾಡಿ ಮಡಗಾಂವ್ ಪ್ಯಾಸೆಂಜರ್ ರೈಲು ಸೇವೆ ನಿಂತಿದೆ. ಇನ್ನು ಕರಾವಳಿ ಭಾಗದ 12134 ಸೂಪರ್ ಎಕ್ಸ್ಪ್ರೆಸ್ ಛತ್ರಪತಿ ಶಿವಾಜಿ ಮುಂಬೈ ಟರ್ಮಿನಲ್ ರೈಲು ಕ್ಯಾನ್ಸಲ್ ಆಗಿದೆ. 12620 ಮತ್ಸ್ಯ ಗಂಧ ಮಂಗಳೂರು ಟು ಮುಂಬೈ ರೈಲು ಕ್ಯಾನ್ಸಲ್ ಆಗಿದೆ. ಬೋಗ್ದ್ಯಾದಲ್ಲಿ ಹಳಿಗಳ ಮೇಲೆ ಗುಡ್ಡ ಕುಸಿದ ಪರಿಣಾಮ ರೈಲು ಸಂಚಾರ ಸ್ಥಗಿತಗೊಂಡಿದೆ. ಇದರಿಂದ ಪ್ರಯಾಣಿಕರು ರೈಲ್ವೆ ಪ್ಲಾಟ್ಫಾರ್ಮ್ನಲ್ಲೇ ರಾತ್ರಿ ಕಳೆಯುವಂತಾಗಿತ್ತು. ನೂರಾರು ಪ್ರಯಾಣಿಕರು ಕೊಂಕಣ…










