ಮಂಗಳೂರು : ನಿವೃತ್ತ ಪೊಲೀಸ್ ಅದಿಕಾರಿ ಎಂ. ಎನ್ . ರಾವ್ ಅವರು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಇನ್ಸ್ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸಿ 6 ತಿಂಗಳ ಹಿಂದೆಯಷ್ಟೆ ಎಂ. ಎನ್ . ರಾನ್ ನಿವೃತ್ತಿ ಹೊಂದಿದ್ದರು. ಎಂ ಎನ್ ರಾವ್ ಅವರು ಮಂಗಳೂರು ನಗರ ಸೇರಿಂತೆ ಆನೇಕ ಕಡೆ ಕರ್ತವ್ಯವನ್ನು ಮಾಡಿದ್ದು, ಜನಪರ ಅಧಿಯಾಗಿ ಗುರ್ತಿಸಿಕೊಂಡಿದ್ದರು.
Author: main-admin
ಉಡುಪಿ: ನಗರದ ಬಾರ್ ಮಾಲೀಕರೊಬ್ಬರ ಮನೆಯಲ್ಲಿ ನಡೆದ ಬೆಂಕಿ ಅವಘಡದಲ್ಲಿ ಬಾರ್ ಮಾಲೀಕ ಸಾವನ್ನಪ್ಪಿದ್ದು, ಅವರ ಪತ್ನಿ ಗಂಭೀರ ಗಾಯಗೊಂಡ ಘಟನೆ ಇಂದು ಮುಂಜಾನೆ ಸಂಭವಿಸಿದೆ. ನಗರದ ಅಂಬಲಪಾಡಿಯ ಶೆಟ್ಟಿ ಬಾರ್ & ರೆಸ್ಟೋರೆಂಟ್ನ ಮಾಲೀಕರ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆಗೆ ಸಿಲುಕಿದ ಬಾರ್ ಮಾಲೀಕ ರಮಾನಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಅವರ ಪತ್ನಿ ಅಶ್ವಿನಿ ಅವರಿಗೂ ಗಂಭೀರ ಗಾಯವಾಗಿದ್ದು, ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಆಗಮಿಸಿದ್ದಾರೆ. ಮನೆಯೊಳಗೆ ಮತ್ತಿಬ್ಬರು ಸಿಲುಕಿಕೊಂಡಿದ್ದು ಅವರ ರಕ್ಷಣೆ ಮಾಡಲಾಗಿದೆ. ಈ ದುರ್ಘಟನೆಗೆ ಕಾರಣ ತಿಳಿದು ಬಂದಿಲ್ಲ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈ 15ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಆದ್ದರಿಂದ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ , ಪ್ರೌಢಶಾಲೆ, ಪಿಯು ಕಾಲೇಜಿಗಳಿಗೆ ಇಂದು ರಜೆ ಘೋಷಿಸಲಾಗಿದೆ. ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ, ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದೆ. ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಶಾಲಾ – ಕಾಲೇಜುಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಾಜರಾತಿಯನ್ನು ಕಡ್ಡಾಯ ಮಾಡುವಂತಿಲ್ಲ, ದುರ್ಬಲ / ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಶಾಲಾ ಕಾಲೇಜು ಮುಖ್ಯಸ್ಥರುಗಳು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸಬೇಕು ಎಂದು ಸೂಚನೆ ನೀಡಲಾಗಿದೆ.
ಸುರತ್ಕಲ್: ಇಲ್ಲಿನ ಕೈಗಾರಿಕಾ ವಲಯ(ಎಂಎಸ್ಇಝಡ್)ದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಅಥೆಂಟಿಕ್ ಓಷನ್ ಟ್ರಶರ್ನಲ್ಲಿ ರವಿವಾರ ಮಧ್ಯಾಹ್ನ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಕಂಪೆನಿಯಲ್ಲಿ ದುರಸ್ತಿ ಕಾರ್ಯ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ನೌಕರರು ಯಾರು ಇರಲಿಲ್ಲ. ಪರಿಣಾಮ ಯಾವುದೇ ಸಾವು-ನೋವು ಸಂಭವಿಸಿಲ್ಲ. ಅಥೆಂಟಿಕ್ ಓಷನ್ ಟ್ರೆಶರ್ ಕಂಪೆನಿ ಮೀನನ್ನು ಸ್ವಚ್ಚಗೊಳಿಸಿ ಮಾಂಸದ ರೂಪಕ್ಕೆ ಪರಿವರ್ತಿಸಿ 10 ಕೆ.ಜಿ. ಯ ಪ್ಯಾಕೆಟ್ಗಳನ್ನಾಗಿ ಮಾಡಿ ವಿದೇಶಗಳಿಗೆ ರಫ್ತು ಮಾಡುವ ಕಂಪೆನಿ. ಈ ಸಂಸ್ಥೆಯ ಕೋಲ್ಡ್ ಸ್ಟೋರ್ ಸೆಕ್ಷನ್ ಹಾಗೂ ಕಟ್ಟಿಂಗ್ ಸೆಕ್ಷನ್ಗಳಲ್ಲಿ ದುರಸ್ತಿ ಕಾರ್ಯನಡೆಯುತ್ತಿತ್ತು. ಈ ವೇಳೆ ಕೋಲ್ಡ್ ಸ್ಟೋರೆಜ್ ಸೆಕ್ಷನ್ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ. ಬೆಂಕಿಯ ಕೆನ್ನಾಲಿಗೆಗೆ ಆಕಾಶದೆತ್ತರಕ್ಕೆ ಹೊಗೆ ಉಗುಳುತ್ತಿರುವ ದೃಶ್ಯ ವೀಡಿಯೋದಲ್ಲಿ ಸೆರೆಯಾಗಿದೆ. ಆದರೆ ಅಗ್ನಿ ಅವಘಡದಿಂದ ಸುಮಾರು 10 ಕೋಟಿ ರೂ. ಮೌಲ್ಯದ ಮೀನಿನ ಉತ್ಪನ್ನಗಳು ಬೆಂಕಿಗಾಹುತಿಯಾಗಿವೆ ಎಂದು ತಿಳಿದು ಬಂದಿದೆ. ಸದ್ಯ ಕೈಗಾರಿಕಾವಲಯ ಎಂಆರ್ ಪಿಎಲ್, ಗೇಲ್ ಇಂಡಿಯಾ ಕಂಪೆನಿಗಳ ಅಗ್ನಿಶಾಮಕ…
ಬಂಟ್ವಾಳ: ತಾಲೂಕಿನ ಶಂಭೂರು ಗ್ರಾಮದ ನಿವಾಸಿಯಾಗಿದ್ದು, ಪ್ರಸ್ತುತ ಪುತ್ತೂರಿನಲ್ಲಿ ವಾಸವಾಗಿರುವ ವ್ಯಕ್ತಿಯೊಬ್ಬರು ಡೆಂಗ್ಯೂ ಜ್ವರಕ್ಕೆ ಬಲಿಯಾಗಿರುವ ಘಟನೆ ದ.ಕ.ಜಿಲ್ಲೆಯಲ್ಲಿ ನಡೆದಿದೆ. ಅತಿಯಾದ ಜ್ವರದಿಂದ ಬಳಲುತ್ತಿದ್ದ ಯತೀಶ್ ( 52) ಎಂಬಾತನನ್ನು ಡೆಂಗ್ಯೂ ಜ್ವರ ಬಲಿ ತೆಗೆದುಕೊಂಡಿದೆ. ಇವರು ಜುಲೈ 10 ರಂದು ಬುಧವಾರ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಅದಾಗಲೇ ತೀವ್ರ ಜ್ವರಕ್ಕೆ ಈಡಾಗಿರುವ ಈತನನ್ನು ಐಸಿಯು ನಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು ಎಂದು ಇಲ್ಲಿನ ವೈದ್ಯಾಧಿಕಾರಿಗಳು ತಿಳಿಸಿದ್ದಾರೆ. ಆದರೆ ಅದಾಗಲೇ ಪರಿಸ್ಥಿತಿ ಕೈ ಮೀರಿಹೋಗಿದ್ದು ಈತ ಚಿಕಿತ್ಸೆಗೆ ಸ್ಪಂದಿಸದ ಕಾರಣ ದೇರಳೆಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಸಲಾಗಿತ್ತು. ಆದರೆ ಅಲ್ಲಿಯೂ ಚಿಕಿತ್ಸೆಗೆ ಸ್ಪಂದಿಸದೆ ಯತೀಶ್ ಕೊನೆಯುಸಿರೆಳೆದಿದ್ದಾನೆ ಎಂದು ಮೂಲಗಳು ತಿಳಿಸಿವೆ. ಮೂಲತಃ ಶಂಭೂರು ಗರಡಿ ನಿವಾಸಿಯಾಗಿರುವ ಯತೀಶ್ ಅವರು ಇತ್ತೀಚಿಗೆ ಪತ್ನಿಯ ತವರೂರು ಪುತ್ತೂರಿನಲ್ಲಿ ಮನೆ ಮಾಡಿ ಅಲ್ಲಿ ವಾಸವಾಗಿದ್ದರು. ಭಾರತ್ ಬೀಡಿ ಕಂಪೆನಿಯ ಬಿಸಿರೋಡಿನ ಶಾಖೆಯಲ್ಲಿ ಸಿಬ್ಬಂದಿಯಾಗಿದ್ದ ಇವರು ಜ್ವರದ ಸಂಧರ್ಭದಲ್ಲಿ ಅಲ್ಲಿಯ ಜೊತೆಗಾರ ಸಿಬ್ಬಂದಿ ಜೊತೆ ಬಂಟ್ವಾಳ ಆಸ್ಪತ್ರೆಗೆ…
ಬಂಟ್ವಾಳ : ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರು ನುಗ್ಗಿ ಮನೆಯಲ್ಲಿದ್ದ ಸುಮಾರು 4.14 ಲಕ್ಷ ರೂ. ಮೌಲ್ಯದ 69 ಗ್ರಾಂ. ಚಿನ್ನಾಭರಣ ಕಳವುಗೈದ ಘಟನೆ ಬಂಟ್ವಾಳದ ಇರಾ ಗ್ರಾಮದ ಕಿನ್ನಿಮಜಲುವಿನಲ್ಲಿ ನಡೆದಿದೆ. ಕಿನ್ನಿಮಜಲು ನಿವಾಸಿ ವನಿತಾ ಅವರ ಮನೆಯಲ್ಲಿ ಈ ಕಳ್ಳತನ ಕೃತ್ಯ ನಡೆದಿದೆ. ಅವರ ಮನೆ ಮಂದಿ ಕೆಲಸಕ್ಕೆ ಹೋಗಿದ್ದರು ಈ ವೇಳೆ ಕಳ್ಳರು ಒಳ ನುಗ್ಗಿ ಚಿನ್ನಾಭರಣ ದೋಚಿದ್ದಾರೆ ಎಂದು ತಿಳಿದುಬಂದಿದೆ.ಕಳ್ಳರು ಮುಂಬಾಗಿಲ ಬೀಗ ಮುರಿದಿರುವುದನ್ನು ಕಂಡ ವನಿತಾ ಅವರ ಅಕ್ಕ ಸುಜಾತ ಅವರು, ಕರೆ ಮಾಡಿ ಈ ಬಗ್ಗೆ ತಿಳಿಸಿದ್ದಾರೆ. ತಕ್ಷಣ ಮನೆಗೆ ಬಂದ ವನಿತಾ ಅವರು ಒಳಗೆ ಹೋಗಿ ನೋಡಿದಾಗ, ರೂಮಿನಲ್ಲಿದ್ದ ಕಪಾಟು ಖಾಲಿಯಾಗಿದ್ದು, ಅದರಲ್ಲಿದ್ದ ಬಟ್ಟೆಗಳ್ಳೆಲ್ಲಾ ನೆಲದ ಮೇಲೆ ಚೆಲ್ಲಾಪಿಲ್ಲಿಯಾಗಿ ಬಿದ್ದಿತ್ತು. ಜೊತೆಗೆ ಕಪಾಟಿನಲ್ಲಿದ್ದ ಚಿನ್ನಾಭರಣವನ್ನು ಕಳ್ಳರು ದೋಚಿರುವುದು ಬೆಳಕಿಗೆ ಬಂದಿದೆ.ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಇನ್ಸ್ಪೆಕ್ಟರ್ ಶಿವಕುಮಾರ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಸ್ಥಳ ಪರಿಶೀಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಉಡುಪಿ: ಉಡುಪಿಯ ಕಂಗಣಬೆಟ್ಟು ಅಣ್ಣಪ್ಪ ಪಂಜುರ್ಲಿ ಸನ್ನಿಧಾನಕ್ಕೆ ಪಾಕಿಸ್ತಾನ ಮೂಲದ ಕುಟುಂಬವೊಂದು ಇಂದು ಆಗಮಿಸಿ ಪೂಜೆ ಸಲ್ಲಿಸಿದೆ.ಪಾಕಿಸ್ತಾನದಲ್ಲಿ ಪೂರ್ವಿಕರನ್ನು ಹೊಂದಿ, ಉತ್ತರ ಭಾರತಕ್ಕೆ ವಲಸೆ ಬಂದಿದ್ದ ಕುಟುಂಬ ಇದಾಗಿದೆ.ಯೂಟ್ಯೂಬ್ ನಲ್ಲಿ ತುಳುನಾಡಿನ ದೈವಗಳ ಬಗ್ಗೆ ತಿಳಿದು ಈ ಕುಟುಂಬದ ಸದಸ್ಯರು ಇಲ್ಲಿಗೆ ಆಗಮಿಸಿದ್ದಾರೆ. ಸದ್ಯ ಮುಂಬೈನಲ್ಲಿ ನೆಲೆಸಿರುವ ಕುಟುಂಬವು ಕಂಗಣಬೆಟ್ಟು ಅಣ್ಣಪ್ಪ ಪಂಜುರ್ಲಿ ಸನ್ನಿಧಾನಕ್ಕೆ ಆಗಮಿಸಿ ದೈವಕ್ಕೆ ಸೇವೆ ಸಲ್ಲಿಸಿತು.ಈ ಕುಟುಂಬದ ಸದಸ್ಯನೊಬ್ಬ ದೈಹಿಕ, ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದಾನೆ. ಆದಿತ್ಯ ಸಿಂಘಾನಿಯಾ ಎಂಬ ಹೆಸರಿನ ಯುವಕ ಎಂಬಿಎ ಪದವೀಧರನಾಗಿದ್ದು ಕಾಯಿಲೆಯಿಂದಾಗಿ ಉದ್ಯೋಗ ಮಾಡುತ್ತಿಲ್ಲ.ಇದೇ ಕಾರಣಕ್ಕೆ ಯುವಕ ದೈವಕ್ಕೆ ಪೂಜೆ ಸಲ್ಲಿಸಿದ್ದಾನೆ.ಪೂಜೆಯ ಬಳಿಕ ದರ್ಶನ ಸೇವೆಯ ಮೂಲಕ ಸಂಕಷ್ಟಕ್ಕೆ ಪರಿಹಾರಕ್ಕಾಗಿ ದೈವಕ್ಕೆ ಮೊರೆ ಇಟ್ಟಿದ್ದಾನೆ. ದೈವವು ಈ ಯುವಕನ ಕಾಯಿಲೆ ನಿವಾರಣೆಗೆ ಪೂಜೆಯ ಜೊತೆಗೆ ಸೂಕ್ತ ಚಿಕಿತ್ಸೆ ಪಡೆಯುವಂತೆ ಸಲಹೆ ಹೇಳಿದೆ.
ಬಜಪೆ: ಬಜಪೆ ಮಾರುಕಟ್ಟೆ ಸಮೀಪದ ಫೈನಾನ್ಸ್ಗೆ ನುಗ್ಗಿ ಅಲ್ಲಿದ್ದ ಮಹಿಳೆಯರ ಮೇಲೆ ಆಸಿಡ್ ಹಾಕಿ ಚಿನ್ನಾಭರಣಗಳನ್ನು ಸುಲಿಗೆ ಮಾಡಲು ಯತ್ನಿಸಿದ ಮೂವರು ಆರೋಪಿಗಳನ್ನು ಬಜಪೆ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 15 ಲಕ್ಷ ರೂಪಾಯಿ ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂಧಿತರನ್ನು ಬಜಪೆ ಶಾಂತಿಗುಡ್ಡೆ ನಿವಾಸಿ ಪ್ರಿತೇಶ್ (31), ಸುರತ್ಕಲ್ ಕೋಡಿಕೆರೆ ನಿವಾಸಿ ಧನರಾಜ್ (30) ಹಾಗೂ ಬಾಳ ಗ್ರಾಮದ ಕುಂಬಳಕೆರೆ ನಿವಾಸಿ ಕುಸುಮಾಕರ (37) ಎಂದು ಗುರುತಿಸಲಾಗಿದೆ. ಬಜಪೆ ಗ್ರಾಮದ ನಿವಾಸಿ ಲೆಸ್ಲಿ ಡಿ ಕುನ್ನ ಎಂಬವರ ಬಜಪೆ ಪೇಟೆಯಲ್ಲಿರುವ ಬಜಪೆ ಫೈನಾನ್ಸ್ ಕೊರ್ಪೊರೇಷನ್(ರಿ) ಸೊಸೈಟಿಗೆ ಜುಲೈ 4 ರಂದು ಸಂಜೆ ಸುಮಾರು 4 ಗಂಟೆಗೆ ಸ್ಕೂಟರ್ನಲ್ಲಿ ಬುರ್ಖಾ ಧರಿಸಿದ ಮಹಿಳೆ ಮತ್ತು ಇಬ್ಬರು ಗಂಡಸರು ಬಂದಿದ್ದಾರೆ. ಬುರ್ಖಾ ಹಾಕಿಕೊಂಡಿದ್ದ ಮಹಿಳೆ ಸೊಸೈಟಿಯಲ್ಲಿ ಕೆಲಸ ಮಾಡಿಕೊಂಡಿದ್ದ ಮಹಿಳೆಯರ ಮೇಲೆ ಅಸಿಡ್ ಹಾಕಿ ಕಚೇರಿಯಲ್ಲಿದ್ದ ಚಿನ್ನಾಭರಣಗಳನ್ನು ಸುಲಿಗೆ ಮಾಡಲು ಪ್ರಯತ್ನಿಸಿದ್ದರು. ಈ ಬಗ್ಗೆ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.…
ತನ್ನ ಸ್ವಂತ ಮಗಳ ಖಾಸಗಿ ವಿಡಿಯೋಗಳನ್ನು ತಂದೆಯೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ ಘಟನೆ ಉಡುಪಿಯಲ್ಲಿ ನಡೆದಿದ್ದು, ಇದರಿಂದ ಮನನೊಂದ ಪುತ್ರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದ್ದು, ತಂದೆ ಆಸೀಫ್ ಯಾನೆ ಆಸೀಫ್ ಆಪದ್ಭಾಂದವನ ವಿರುದ್ಧ ಆತನ ಪತ್ನಿ ಪೊಲೀಸರಿಗೆ ದೂರು ನೀಡಿದ್ದಾರೆ. ಆಪದ್ಬಾಂಧವ ಆಸಿಫ್ ಎಂದೇ ಗುರುತಿಸಿಕೊಂಡಿರುವ ಪಡುಬಿದ್ರಿ ಸಮೀಪದ ಕಂಚಿನಟ್ಕ ನಿವಾಸಿ ಆಸಿಫ್ ಆರೋಪಿ. ಮಗಳ ವೀಡಿಯೊಗಳನ್ನು ವಾಟ್ಸಪ್ ಗ್ರೋಪ್ಗಳಲ್ಲಿ ಹಂಚಿಕೊಂಡಿರುವುದಕ್ಕೆ ತಾಯಿ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಬಳಿಕ ಪೊಲೀಸರಿಗೆ ದೂರು ನೀಡಿದ್ದಾರೆ. ಆಸಿಫ್ ಪುತ್ರಿ ತೀರ್ಥಹಳ್ಳಿಯ ಸಂಬಂಧಿಕನೊಬ್ಬ ಯುವಕನನ್ನು ಪ್ರೀತಿಸುತ್ತಿದ್ದು, ಇದು ಆಸಿಫ್ಗೆ ಇಷ್ಟವಿರಲಿಲ್ಲ.ಈ ಹಿನ್ನಲೆ ಯುವಕನನ್ನು ಮನೆಗೆ ಕರೆಸಿ ಹಲ್ಲೆ ಮಾಡಿದ್ದಲ್ಲದೆ ಇಬ್ಬರ ಮೊಬೈಲ್ ಕಸಿದುಕೊಂಡು ಅದರಲ್ಲಿದ್ದ ವೀಡಿಯೊ ಮತ್ತು ಫೋಟೊಗಳನ್ನು ತನ್ನ ಮೊಬೈಲ್ಗೆ ವರ್ಗಾಯಿಸಿಕೊಂಡಿದ್ದಾನೆ. ಬಳಿಕ ಅವುಗಳನ್ನು ವಾಟ್ಸಪ್ ಗ್ರೂಪ್ಗಳು ಸೇರಿ ವಿವಿಧ ಸೋಷಿಯಲ್ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.ಇದಕ್ಕೆ ಪತ್ನಿ ಆಕ್ಷೇಪಿಸಿದ್ದು, ಆಕೆಗೆ ಮತ್ತು ಪುತ್ರಿಗೆ ಹಲ್ಲೆಯನ್ನೂ ಮಾಡಿದ್ದಾನೆ. ಈ ಕುರಿತಾಗಿ ಪತ್ನಿಯು…
ಬಂಟ್ವಾಳ: ಬಂಟ್ವಾಳದ ನೇತ್ರಾವತಿ ನದಿಯಲ್ಲಿ ನೀರಿನ ಪ್ರಮಾಣ ಕೊಂಚ ಹೆಚ್ಚಳವಾಗಿದ್ದು, ಸದ್ಯಕ್ಕೆ ನೀರಿನ ಮಟ್ಟ 6.1ಮೀ.ನಷ್ಟಿದೆ. ನೇತ್ರಾವತಿ ನದಿಯಲ್ಲಿ 8 ಮೀ. ಅಪಾಯಕಾರಿ ಮಟ್ಟವಾಗಿದ್ದು, 8.5ಮೀ. ತಲುಪಿದರೆ ಪಾಣೆಮಂಗಳೂರಿನ ಆಲಡ್ಕ ಭಾಗದಲ್ಲಿ ಪ್ರವಾಹದ ನೀರು ಮನೆಯೊಳಗೆ ನುಗ್ಗುತ್ತದೆ. ಮಲೆನಾಡು ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗಿರುವ ಪರಿಣಾಮ ನೀರಿನ ಮಟ್ಟ ಹೆಚ್ಚಳಗೊಂಡಿದೆ. ತುಂಬೆ ಡ್ಯಾಮ್ನ ಎಲ್ಲಾ ಗೇಟ್ಗಳನ್ನು ತೆರವು ಮಾಡಿದರೆ ನೀರು ತೀರಾ ಇಳಿಕೆಯಾಗುವ ಸಾಧ್ಯತೆಯೂ ಇದೆ. ಉಪ್ಪಿನಂಗಡಿಯ ನದಿ ನೀರಿನ ಮಟ್ಟದಲ್ಲೂ ಹೆಚ್ಚಳಗೊಂಡಿರುವ ಕಾರಣ ನದಿ ತೀರದ ನಿವಾಸಿಗಳು ಬಹಳ ಎಚ್ಚರಿಕೆಯಿಂದ ಇರಬೇಕಾಗಿದೆ. ಅನಾವಶ್ಯಕವಾಗಿ ನದಿ ತೀರಕ್ಕೆ ತೆರಳುವುದು ಅಥವಾ ನೀರಿಗೆ ಇಳಿಯುವುದು ಸರಿಯಲ್ಲ ಎಂದು ಇಲಾಖೆ ಸೂಚಿಸಿದೆ. ಅಧಿಕಾರಿಗಳು ನದಿ ತೀರಕ್ಕೆ ತೆರಳಿ ಪರಿಸ್ಥಿತಿಯನ್ನು ಅವಲೋಕನ ಮಾಡಿದ್ದಾರೆ.










