Author: main-admin

ಮಂಗಳೂರು: ನಗರದ ಕೊಣಾಜೆಯ ಕೆಎಸ್ಆರ್‌ಪಿ 7ನೇ ಬೆಟಾಲಿಯನ್‌ ಇನ್‌ಸ್ಪೆಕ್ಟರ್ ಮಹಮ್ಮದ್ ಹ್ಯಾರೀಸ್ ಎಂಬಾತ 18ಸಾವಿರ ರೂ. ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಪೊಲೀಸ್ ಬಲೆಗೆ ಬಿದ್ದಿದ್ದಾನೆ. ಕೆಎಸ್ಆರ್‌ಪಿ 7ನೇ ಬೆಟಾಲಿಯನ್‌‌ನ ಪೊಲೀಸ್ ಅತಿಥಿಗೃಹದಲ್ಲಿ ನಿರ್ವಾಹಕರಾಗಿ ಕರ್ತವ್ಯ ನಿರ್ವಹಿಸಲು ಮೀಸಲು ಪೊಲೀಸ್ ಕಾನ್ಸ್‌ಸ್ಟೇಬಲ್‌ರಿಂದ ಮಹಮ್ಮದ್ ಹ್ಯಾರೀಸ್ 20,000 ಲಂಚಕ್ಕೆ ಬೇಡಿಕೆಯಿಟ್ಟಿದ್ದ. ಜೊತೆಗೆ ಪ್ರತೀ ತಿಂಗಳು 6,000 ರೂ.ನಂತೆ ಹಣ ನೀಡಬೇಕೆಂದು ಲಂಚ ಕೇಳಿದ್ದ. ಅದರಂತೆ ಮೊದಲಿಗೆ 20000 ಹಣನೀಡಿ, ಬಳಿಕ ಪ್ರತಿ ತಿಂಗಳು 6,000ದಂತೆ ಲಂಚ ನೀಡುತ್ತಾ ಬಂದಿದ್ದಾರೆ. ಈ ಮೂಲಕ ಈವರೆಗೆ ಒಟ್ಟು 50,000 ರೂ. ಲಂಚ ನೀಡಲಾಗಿತ್ತು. ಆದರೆ ಪೊಲೀಸ್ ಕಾನ್ಸ್‌ಸ್ಟೇಬಲ್‌ ತಂದೆಯ ಅನಾರೋಗ್ಯದ ಹಿನ್ನೆಲೆಯಲ್ಲಿ 3ತಿಂಗಳಿನಿಂದ ಲಂಚ ನೀಡಲು ಸಾಧ್ಯವಾಗಿರಲಿಲ್ಲ. ಆದ್ದರಿಂದ ಮಹಮ್ಮದ್ ಹ್ಯಾರೀಸ್ ಪ್ರತಿದಿನ ಕರೆಮಾಡಿ 18,000 ರೂ. ಹಣ ಲಂಚವಾಗಿ ನೀಡಬೇಕೆಂದು ಇಲ್ಲವಾದರೆ ಡ್ಯೂಟಿ ಬದಲಾಯಿಸುತ್ತೇನೆ ಎಂದು ಫಿರ್ಯಾದಿದಾರರಿಗೆ ಬೆದರಿಸುತ್ತಿದ್ದ. ಇದರಿಂದ ಬೇಸತ್ತ ಪೊಲೀಸ್ ಕಾನ್ಸ್‌ಸ್ಟೇಬಲ್‌ ಮಂಗಳೂರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಅದರಂತೆ 18,000 ಲಂಚ ಪಡೆಯುತ್ತಿದ್ದಾಗಲೇ…

Read More

ಮಂಗಳೂರು: ಪಶ್ಚಿಮ ವಲಯದ ಸಿವಿಲ್ ಪಿಎಸ್ ಐ ಗಳನ್ನು ವಿವಿಧ ಪೊಲೀಸ್ ಠಾಣೆಗಳಿಗೆ ವರ್ಗಾವಣೆಗೊಳಿಸಿ ಐಜಿಪಿ ಅಮಿತ್ ಸಿಂಗ್ ಆದೇಶ ಹೊರಡಿಸಿದ್ದಾರೆ, ವರ್ಗಾವಣೆಗೊಂಡವರ ವಿವರ ಲೋಹಿತ್ ಎಲ್ ಎಸ್ – ಮೆಸ್ಕಾಂ ಜಾಗೃತ ದಳ ಚಿಕ್ಕಮಗಳೂರುಪವನ್ ಕುಮಾರ್ ಸಿಸಿ – ಕಡೂರು ಠಾಣೆ (ಕಾನೂನು ಮತ್ತು ಸುವ್ಯವಸ್ಥೆ)ಧನಂಜಯ ಡಿ ಹೆಚ್ – ಕಡೂರು ಠಾಣೆ (ತನಿಖೆ -2)ಶೋಭಾ ಕೆ – ಕಡೂರು ಠಾಣೆ (ತನಿಖೆ -2)ಅಜರುದ್ದೀನ್ ಎಂ ಎಸ್ – ಕಡೂರು ಠಾಣೆ (ತನಿಖೆ – 1)ಆದರ್ಶ ಎಂ ಎಸ್ – ಪಿಟಿಎಸ್ ಕಡೂರುಪುರಷೋತ್ತಮ ಎ – ಡಿಸಿಆರ್ ಬಿ ಘಟಕ ದಕ್ಷಿಣ ಕನ್ನಡ ಜಿಲ್ಲೆಸುನೀಲ್ ಬಂಡೀವಡ್ಡರ್ – ಕದ್ರ ಠಾಣೆ (ಕಾನೂನು ಮತ್ತು ಸುವ್ಯವಸ್ಥತೆ & ಸಂಚಾರ)ಮಯೂರ ಪಟ್ಟಣ ಶೆಟ್ಟಿ – ಕುಮಟ ಠಾಣೆ (ತನಿಖೆ-2)ನಾಗೇಶ್ ಎ – ಚಿಕ್ಕಮಗಳೂರು ಸಂಚಾರ ಠಾಣೆ (ಪಿಎಸ್ ಐ – 2)ವಿನಯ್ ಕೊರ್ಲಹಳ್ಳಿ – ಕೊಲ್ಲೂರು ಠಾಣೆ (ಕಾನೂನು ಮತ್ತು ಸುವ್ಯವಸ್ಥೆ &…

Read More

ಮಂಗಳೂರು: ನಾಪತ್ತೆಯಾಗಿದ್ದ ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಹಿಂದೂ ಯುವತಿ ಮುಸ್ಲಿಂ ಯುವಕನ ಜತೆ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ನಗರದ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಹಿಂದೂ ಯುವತಿ ಕಾಣೆಯಾಗಿರುವ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ದೂರು ದಾಖಲಾಗಿತ್ತು. ನಾಪತ್ತೆಯಾಗಿದ್ದ ಯುವತಿನ್ನು ಪತ್ತೆ ಹಚ್ಚುವಲ್ಲಿ ಪಾಂಡೇಶ್ವರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಮಹಮ್ಮದ್ ಅಶ್ಪಕ್ ಎಂಬಾತನ ಜೊತೆ ಈ ಹಿಂದೂ ಯುವತಿ ಪತ್ತೆಯಾಗಿದ್ದು, ಮುಸ್ಲಿಂ ಯುವಕ ನನ್ನ ಮಗಳನ್ನು ಅಪಹರಣ ಮಾಡಿ ಇಸ್ಲಾಂಗೆ ಮತಾಂತರ ಮಾಡಿರುವ ಯುವತಿಯ ತಂದೆ ಮಂಗಳೂರು ಪೊಲೀಸ್ ಕಮೀಷನರ್ ರವರಿಗೆ ದೂರು ನೀಡಿದ್ದಾರೆ. ನಟೋರಿಯಸ್ ಹಿನ್ನಲೆಯುಳ್ಳ ಈ ಮಹಮ್ಮದ್ ಅಶ್ಪಕ್ ಈಗಾಗಲೇ ಒಂದು ಮದುವೆಯಾಗಿದ್ದು ಕಾಸರಗೋಡು ವಿದ್ಯಾನಗರ ಠಾಣೆಯಲ್ಲಿ ಈತನ ಮೇಲೆ 8 ಕ್ರಿಮಿನಲ್ ಪ್ರಕರಣ ದಾಖಲಾಗಿದೆ. ಸದ್ಯ ಯುವತಿಯನ್ನು ಪತ್ತೆಹಚ್ಚಿ ಕರೆತಂದಿದ್ದು, ಯುವತಿಯನ್ನ ಪ್ರಜ್ಞಾ ಸಲಹಾ ಕೇಂದ್ರ ಮುಡಿಪು ಇಲ್ಲಿ ಇರಿಸಲಾಗಿದೆ. ಇದು ಲವ್ ಜಿಹಾದ್ ಪ್ರಕರಣವಾಗಿದ್ದು, ಈ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಪ್ರಕರಣ…

Read More

ಮಂಗಳೂರು : ನಗರದ ಮನೆಯೊಂದರಲ್ಲಿ ಚಡ್ಡಿ ಗ್ಯಾಂಗ್ ಕಳ್ಳತನ ನಡೆಸಿ ಪರಾರಿಯಾಗಿತ್ತು.ಪೊಲೀಸರು ಕೂಡಲೇ ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ಇಂದು ಬೆಳಗಿನ ಜಾವ ನಗರ ಪೊಲೀಸ್ ಕಮಿಷನರೇಟ್ ನ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಗ್ಗಿನ ಜಾವ ಸಮಯ ಸುಮಾರು 4-೦೦ ಗಂಟೆಗೆ ಬರ್ಮುಡಾ ಚಡ್ಡಿ ಮತ್ತು ಬನಿಯನ್ ಧರಿಸಿದ ಸುಮಾರು 30 ರಿಂದ 40 ವರ್ಷ ಪ್ರಾಯದ 4 ಜನ ಯುವಕರು (ಚೆಡ್ಡಿ ಗ್ಯಾಂಗ್) ದೇರೆಬೈಲು ಗ್ರಾಮದ ಕೋಟೆಕಣಿ ರಸ್ತೆಯ ಶ್ರೀ ವಿಕ್ಟರ್ ಮೆಂಡೋನ್ಸಾ ಎನ್ನುವವರ ಮನೆಯ ಕಿಟಕಿಯ ಗ್ರಿಲ್ ಅನ್ನು ತುಂಡರಿಸಿ ಒಳ ಪ್ರವೇಶಿಸಿ ವಿಕ್ಟರ್ ಮೆಂಡೋನ್ಸಾ ರವರಿಗೆ ಕಬ್ಬಿಣದ ರಾಡಿನಿಂದ ಹಲ್ಲೆ ಮಾಡಿ ತೀವ್ರ ಗಾಯವನ್ನುಂಟು ಮಾಡಿ ಅವರ ಪತ್ನಿ ಶ್ರೀಮತಿ ಪ್ಯಾಟ್ರಿಸಿಯಾ ಮೆಂಡೋನ್ಸ ರವರಿಗೆ ಕೂಡಾ ಸ್ಕ್ರೂ ಡ್ರೈವರ್ ನಿಂದ ಹೊಡೆದು ಬೊಬ್ಬೆ ಹಾಕದಂತೆ ಹಾಗೂ ಫೋನ್ ಮಾಡದಂತೆ ಬೆದರಿಸಿ ಮನೆಯಲ್ಲಿದ್ದ 3 ಮೊಬೈಲ್ ಫೋನ್ ಗಳನ್ನು ನೆಲಕ್ಕೆ ಬಡಿದು ಜಖಂಗೊಳಿಸಿ ಕಪಾಟಿನ…

Read More

ಮಂಗಳೂರು: ನಗರದ ಉರ್ವ ಠಾಣಾ ವ್ಯಾಪ್ತಿಯ ಕೋಟೆಕಣಿಯಲ್ಲಿನ ಮನೆಯೊಂದಕ್ಕೆ ಸೋಮವಾರ ರಾತ್ರಿ ನುಗ್ಗಿದ ಕಳ್ಳರು ವಾಹನ, ಚಿನ್ನಾಭರಣವನ್ನು ಕದ್ದೊಯ್ದ ಘಟನೆ ನಡೆದಿದೆ. ಇದು ನಗರದಲ್ಲಿ ನಡೆದ ಚಡ್ಡಿ‌ಗ್ಯಾಂಗ್‌ನ ಮತ್ತೊಂದು ಕೃತ್ಯವೆಂಬ ಶಂಕೆ ವ್ಯಕ್ತವಾಗಿದೆ. ಮನೆಮಂದಿ ಮನೆಯೊಳಗಡೆ ಮಲಗಿದ್ದಾಗಲೇ ಕಿಟಕಿ ಮುರಿದು ಚಿನ್ನಾಭರಣ ಕಳವು ಮಾಡಲಾಗಿದೆ. ಅಲ್ಲದೆ ಕಳ್ಳರು ಕಾರನ್ನು ಕೂಡ ಕಳವು ಮಾಡಿದ್ದಾರೆಂದು ತಿಳಿದುಬಂದಿದೆ. ಕಳೆದ ಶನಿವಾರ ನಗರದ ಕೋಡಿಕಲ್ ಬಳಿ ಮನೆಯೊಂದರ ಕಿಟಕಿ ಮುರಿದು ಕಳವು ಕೃತ್ಯ ನಡೆದಿತ್ತು. ಚಡ್ಡಿಗ್ಯಾಂಗ್ ಆ ಕೃತ್ಯ ನಡೆಸಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದರು.‌ ಅದೇ ತಂಡ ಕೋಟೆಕಣಿಯಲ್ಲಿಯೂ ಕೃತ್ಯ ಎಸಗಿದೆ ಎಂದು ಅಂದಾಜಿಸಲಾಗಿದೆ

Read More

ವೇಣೂರು: ವ್ಯಕ್ತಿಯೋರ್ವರು ವೈನ್ ಶಾಪ್ ಬಳಿ ಮದ್ಯಪಾನ ಮಾಡಲು ಬಂದಿದ್ದಾಗ, ಅಕ್ರಮವಾಗಿ ತಡೆದು ನಿಲ್ಲಿಸಿ, ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿ, ಜೀವ ಬೆದರಿಕೆ ಒಡ್ಡಿದ ಘಟನೆ ಬೆಳ್ತಂಗಡಿ ತಾಲೂಕು ಮೂಡುಕೋಡಿ ಗ್ರಾಮದಲ್ಲಿ ನಡೆದಿದೆ. ಬೆಳ್ತಂಗಡಿ,ನಿಟ್ಟಡೆ ಗ್ರಾಮ ನಿವಾಸಿ ಪ್ರಸಾದ್‌ @ ಬಾಡು ಪ್ರಸಾದ್ ರವರು, ದಿನಾಂಕ 07.07.2024 ರಂದು ರಾತ್ರಿ , ತನ್ನ ಸ್ನೇಹಿತ ಮೋಹನ್ ನೊಂದಿಗೆ, ಬೆಳ್ತಂಗಡಿ ತಾಲೂಕು ಮೂಡುಕೋಡಿ ಗ್ರಾಮದ ವೈನ್ ಶಾಪ್ ಬಳಿ ಮದ್ಯಪಾನ ಮಾಡಲು ಬಂದಿದ್ದಾಗ, ಆರೋಪಿಗಳಾದ 1)ವಸಂತ್ ಕೋಟ್ಯಾನ್, 2) ಸಂತೋಷ್ ನಾರ್ಲ ಎಂಬವರುಗಳು, ಪ್ರಸಾದ್‌ ರನ್ನು ಅಕ್ರಮವಾಗಿ ತಡೆದು ನಿಲ್ಲಿಸಿ, ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿದ್ದಾರೆ‌. ಪಿರ್ಯಾದಿಯ ಸ್ನೇಹಿತರಾದ ಮೋಹನ್ ಮತ್ತು ಕಟ್ಟೆ ಸಂತೋಷ್ ಎಂಬವರು ಗಲಾಟೆ ಬಿಡಿಸಿದಾಗ, ಆರೋಪಿಗಳು ಪ್ರಸಾದ್‌ರಿಗೆ ಜೀವ ಬೆದರಿಕೆ ಒಡ್ಡಿ ತೆರಳಿರುತ್ತಾರೆ. ಪ್ರಸಾದ್‌ರವರು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬುದಾಗಿ ನೀಡಿದ ದೂರಿನ…

Read More

ದ‌.ಕ ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರಿದಿದ್ದು, ಭಾರತೀಯ ಹವಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ 09/07/2೦24 ರಂದು ಮುನ್ನೆಚ್ಚರಿಕೆ ಕ್ರಮವಾಗಿ ದ.ಕ ಜಿಲ್ಲೆಯ ಎಲ್ಲಾ ಅಂಗನವಾಡಿ ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ. ಪದವಿ ಪೂರ್ವ ಕಾಲೇಜು, (12 ನೇ ತರಗತಿವರೆಗೆ) ಜುಲೈ 9ರಂದು ಜಿಲ್ಲಾಡಳಿತ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದೆ.

Read More

ಬೆಂಗಳೂರು : ಭಾರಿ ಮಳೆಯ ಕಾರಣ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಅತಿ ಭಾರೀ ಮಳೆಯ ಅಲರ್ಟ್ ನೀಡಲಾಗಿದ್ದು ರೆಡ್ ಅಲರ್ಟ್‌ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ಘೋಷಿಸಿದೆ ಬದಲಾದ ಹವಾಮಾನ ವೈಪರಿತ್ಯದಿಂದ ರಾಜ್ಯ ಕರಾವಳಿಯಲ್ಲಿ ಎಡಬಿಡದೆ ನಿರಂತರ ಮಳೆ ಸುರಿಯುತ್ತಿ್ದ್ದು ಜನ ಜೀವನ ಅಸ್ತವ್ಯಸ್ತಗೊಂಡಿದೆ. ಭಾರಿ ಮಳೆಯ ಕಾರಣ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಅತಿ ಭಾರೀ ಮಳೆಯ ಅಲರ್ಟ್ ನೀಡಲಾಗಿದ್ದು ರೆಡ್ ಅಲರ್ಟ್‌ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ಘೋಷಿಸಿದೆ. ಎಲ್ಲಡೆ ಮಳೆ ಅಬ್ಬರ ಜೋರಾಗಿದೆ. ಕೆಲವಡೆ ನಿರಂತರ ಭಾರಿ ಮಳೆ‌ಯಾಗುತ್ತಿದ್ದು, ಅದರಲ್ಲೂ ಕರಾವಳಿ, ಮಲೆನಾಡು ಅಕ್ಷರಶಃ ತತ್ತರಿಸಿ ಹೋಗಿದೆ. ಮಂಗಳೂರು ನಗರದಲ್ಲಿ ಸೋಮವಾರ ಮಧ್ಯಾಹ್ನ ಎಡಬಿಡದೆ ಸುರಿದ ಮಳೆಯಿಂದ ಜನ ತತ್ತರಿಸಿ ಹೋಗಿದ್ದಾರೆ. ಮಂಗಳೂರು ನಗರದ ಅನೇಕ ಕಡೆ ನೀರು ಹರಿದು ಹೋಗಲು ಸಮರ್ಪಕ ವ್ಯವಸ್ಥೆ ಇಲ್ಲದೆ ಕೃತಕ ನೆರೆ ಭಾದಿಸಿದೆ. ಮಂಗಳೂರು ಮತ್ತು ಉಳ್ಳಾಲದಲ್ಲಿ ಎರಡು ಮನೆಗಳಿಗೆ ಭಾಗಶಃ ಹಾನಿಯಾಗಿದೆ.…

Read More

ಮುಂಬೈ ನಲ್ಲಿ ಸೋಮವಾರ ಭಾರಿ ಮಳೆಯಾದ ಹಿನ್ನೆಲೆ ಮುಂಬೈ ವಿಮಾನ ನಿಲ್ದಾಣದಲ್ಲಿ ವಿಮಾನ ಕಾರ್ಯಾಚರಣೆಯ ಮೇಲೆ ತೀವ್ರ ಪರಿಣಾಮ ಬೀರಿತು. ಇತ್ತೀಚಿನ ಮಾಹಿತಿಯ ಪ್ರಕಾರ, ಮುಂಬೈ ನಿಂದ ಹಾರಾಟ ನಡೆಸಬೇಕಾಗಿದ್ದ ಕನಿಷ್ಠ 50 ವಿಮಾನಗಳನ್ನು ರದ್ದುಪಡಿಸಲಾಗಿದೆ ಹಾಗೂ ಅಹಮದಾಬಾದ್, ಹೈದರಾಬಾದ್ ಮತ್ತು ಇಂದೋರ್ ಸೇರಿದಂತೆ ಹಲವಾರು ಸ್ಥಳಗಳಿಗೆ ತಿರುಗಿಸಲಾಗಿದೆ. ಬೇರೆಡೆಗೆ ತಿರುಗಿಸಿದ ವಿಮಾನಗಳಿಗೆ ಸ್ಥಳಾವಕಾಶ ಕಲ್ಪಿಸಲು ತತ್ಪರಿಣಾಮದ ಬದಲಾವಣೆಗಳನ್ನು ಮಾಡಲಾಗಿದೆ, ಇದು ನಿರ್ಗಮನ ವಿಳಂಬಕ್ಕೆ ಕಾರಣವಾಗುತ್ತದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಛತ್ರಪತಿ ಶಿವಾಜಿ ಮಹಾರಾಜ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ (ಸಿಎಸ್‌ಎಂಐಎ) ಪ್ರಯಾಣಿಕರಿಗೆ ಸಲಹೆ ನೀಡಿದ್ದು, ಆಯಾ ವಿಮಾನಯಾನ ಸಂಸ್ಥೆಗಳೊಂದಿಗೆ ತಮ್ಮ ವಿಮಾನದ ಸ್ಥಿತಿಯನ್ನು ಪರಿಶೀಲಿಸಲು ಮತ್ತು ಸ್ವಲ್ಪ ಮುಂಚಿತವಾಗಿ ವಿಮಾನ ನಿಲ್ದಾಣಕ್ಕೆ ಹೊರಡಲು ಸಲಹೆ ನೀಡಿದೆ.

Read More

ಮಂಗಳೂರು: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಮೊಬೈಲ್ ಟವರ್‌ಗಳ ಬ್ಯಾಟರಿ ಮತ್ತು ಕಾಂಪೌಂಡ್ ಗೇಟ್‌ಗಳನ್ನು ಕದ್ದ ಆರೋಪಿಗಳನ್ನು ಮೂಲ್ಕಿ ಪೊಲೀಸರು ಬಂಧಿಸಿದ್ದಾರೆ. ಕೇರಳದ ಕೊಲ್ಲಂ ಜಿಲ್ಲೆಯ ಇಟ್ಟಿ ಪಣಿಕ್ಕರ್ (58) ಈಗ ಪೊಲೀಸ್ ವಶದಲ್ಲಿರುವ ಆರೋಪಿ. 2.56 ಲಕ್ಷ ಮೌಲ್ಯದ 39 ಬ್ಯಾಟರಿಗಳು, 52000 ರೂಪಾಯಿ ಮೌಲ್ಯದ ಮೂರು ಕಬ್ಬಿಣದ ಗೇಟ್‌ಗಳು ಮತ್ತು ಐದು ಲಕ್ಷ ರೂಪಾಯಿ ಮೌಲ್ಯದ ಪಿಕ್ ಅಪ್ ಗೂಡ್ಸ್ ಟೆಂಪೋ ಸೇರಿದಂತೆ 8.08 ಲಕ್ಷ ಮೌಲ್ಯದ ಸರಕುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.ಕಾರ್ಯಾಚರಣೆಯಲ್ಲಿ ಎಸಿಪಿ ಮನೋಜ್ ಕುಮಾರ್, ಮೂಲ್ಕಿ ಠಾಣೆ ಇನ್ಸ್‌ಪೆಕ್ಟರ್ ವಿದ್ಯಾಧರ್ ಡಿ.ಬೈಕೇರಿಕರ್, ಪಿಎಸ್‌ಐ ವಿನಾಯಕ ಬಾವಿಕಟ್ಟಿ, ಎಎಸ್‌ಐ ಸಂಜೀವ ಎ.ಪಿ, ಎಚ್.ಸಿ.ಕಿಶೋರ್ ಕೋಟ್ಯಾನ್, ಮಹೇಶ್, ಶಶಿಧರ, ಚಂದ್ರಶೇಖರ್, ವಿಶ್ವನಾಥ, ವೀರೇಶ, ಕಾನ್‌ಸ್ಟೆಬಲ್‌ಗಳಾದ ಅರುಣ್ ಕುಮಾರ್, ಸುನೀಲ್, ಚಿತ್ರಾ ಪಾಲ್ಗೊಂಡಿದ್ದರು.

Read More