Author: main-admin

ಮಂಗಳೂರು: ನಗರದ ಬಿಕರ್ನಕಟ್ಟೆಯಲ್ಲಿ ಸೋಮವಾರ ಸಂಜೆ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಮೃತದೇಹವು ಕೊಳೆತು ಅಹಿತಕರ ವಾಸನೆ ಹೊರಸೂಸುತ್ತಿತ್ತು. ಮೃತದೇಹ ಪತ್ತೆಯಾದ ಸ್ಥಳ ರಮೇಶ್‌ ಎಂಬುವರಿಗೆ ಸೇರಿದ್ದು. ಅವರು ದೂರು ದಾಖಲಿಸಿದ್ದಾರೆ. ಇದರ ಆಧಾರದ ಮೇಲೆ ಪೂರ್ವ ಪೊಲೀಸ್‌ ಠಾಣೆಯಲ್ಲಿ ಯುಡಿಆರ್‌ ನಂ.6/25 ರಲ್ಲಿ ಯು.ಡಿ.ಆರ್‌ (ಅಸ್ವಾಭಾವಿಕ ಮರಣ ಪ್ರಕರಣ). ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ತಪಾಸಣೆ ವೇಳೆ ಮೃತದೇಹದ ಬಳಿಯಿದ್ದ ಬ್ಯಾಗನಲ್ಲಿ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ಒಪಿಡಿ ಚೀಟಿ ಪತ್ತೆಯಾಗಿದೆ. ಚೀಟಿಯಲ್ಲಿನ ಮಾಹಿತಿಯಂತೆ ಮೃತರನ್ನು ಫೆ.4ರಂದು. 108 ಆಂಬುಲೆನ್ಸ್‌ ಮೂಲಕ ವೆನ್ಸಾಕ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕುಡಿದ ಅಮಲಿನಲ್ಲಿ ಕೆಳಗೆ ಬಿದ್ದು ಗಾಯಗೊಂಡ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರಗೆ. ದಾಖಲಿಸಲಾಗಿದೆ ಎಂದು ಆಸ್ಪತ್ರೆ ದಾಖಲೆಗಳು ಸೂಚಿಸುತ್ತದೆ. ಮೃತರ ಗುರುತು ಪತ್ತೆಗೆ ಪೋಲಿಸರು ತನಿಖೆ ನಡೆಸುತ್ತಿದ್ದಾರೆ.

Read More

ಪುತ್ತೂರು: ಕಾರಿನಲ್ಲಿ ನಿಷೇಧಿತ ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಪುತ್ತೂರು ನಗರ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಗರ ಪೊಲೀಸ್ ಠಾಣೆ ನಿರೀಕ್ಷಕರು ಸೋಮವಾರ ಬೆಳಿಗ್ಗೆ ನರಿಮೊಗರು ಗ್ರಾಮದ ಮುಕ್ವೆ ಎಂಬಲ್ಲಿ ತಾತ್ಕಾಲಿಕ ಚೆಕ್‌ ಪಾಯಿಂಟ್‌ನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ಸಮಯ, ಸುಬ್ರಹಮಣ್ಯ ಕಡೆಯಿಂದ ಬಂದ ಮಾರುತಿ ಸುಝುಕಿ ಆಲ್ಟೋ 800 ಕಾರನ್ನು ಪರಿಶೀಲಿಸಿದಾಗ ಕಾರಿನ ಡ್ಯಾಶ್ ಬೋರ್ಡ್‌ಲ್ಲಿ ಮಾದಕ ವಸ್ತುಗಳನ್ನು ಸೇದುವ ಸಾಧನಗಳು, ತೂಕ ಮಾಪಕ ಕಂಡುಬಂದಿತ್ತು. ಕಾರಿನ ಚಾಲಕ ಹಾಗೂ ಮತ್ತೊಬ್ಬನಲ್ಲಿ ಈ ಬಗ್ಗೆ ವಿಚಾರಿಸಿದಾಗ ತಡವರಿಸಿಕೊಂಡು ಉತ್ತರಿಸಿದ್ದು ಪ್ರಶ್ನಿಸಿದಾಗ, ತಮ್ಮ ಬಳಿ ಎಂಡಿಎಂಎ ವಸ್ತು ಇರುವುದಾಗಿಯೂ, ಇದನ್ನು ಮಾರಾಟ ಮಾಡಲು ತೆರಳುತ್ತಿರುವುದಾಗಿ ಒಪ್ಪಿಕೊಂಡಿದ್ದರು ಆರೋಪಿಗಳಾದ ಇಸುಬು ಫೈಝಲ್ (30ವ.) ಮತ್ತು ತಸ್ಲಿಪ್ (26ವ) ನನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Read More

ಉಡುಪಿ: ಸುಮಂತ್ ಎಂಬವರ ಜೊತೆ ಮಣಿಪಾಲ ಪೊಲೀಸ್ ಠಾಣೆಯ ಪೊಲೀಸ್ ಕಾನ್ಸ್ಟೇಬಲ್ ಶರಣ ಬಸವ ಎನ್ನುವವರು ಅಸಭ್ಯವಾಗಿ ವರ್ತಿಸಿದ್ದಾರೆ. ಈ ಘಟನೆ ಬಗ್ಗೆ ಉಡುಪಿ ಪೊಲೀಸ್ ಇಲಾಖೆ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಪೊಲೀಸ್ ಇಲಾಖೆ ಈ ಘಟನೆ ಬಗ್ಗೆ ವಿಚಾರಣೆ ನಡೆಸುತ್ತದೆ ಎಂದು ಮಾಹಿತಿ ತಿಳಿದು ಬಂದಿದೆ. ಘಟನೆ ವಿವರ: ದಿನಾಂಕ 27.03.2025ರಂದು ಮಣಿಪಾಲ ಪೊಲೀಸ್ ಠಾಣೆಯ ಪೊಲೀಸ್ ಕಾನ್ಸ್ಟೇಬಲ್ ಶರಣ ಬಸವ ಎನ್ನುವವರು ಸಾರ್ವಜನಿಕವಾಗಿ ಸುಮಂತ್ ಎಂಬವರೊಂದಿಗೆ ಅಸಭ್ಯವಾಗಿ ವರ್ತಿಸಿದ್ದು, ಈ ಬಗ್ಗೆ ಸುಮಂತ್ ರವರು ಪೊಲೀಸ್ ಇಲಾಖೆಯ ಗಮನಕ್ಕೆ ತಂದು ಯಾವುದೇ ದೂರು ಬೇಡ ಎಂದು ತಿಳಿಸಿದ್ದು, ಪೊಲೀಸ್ ಇಲಾಖೆಯು ಸ್ವಯಂ ಪ್ರೇರಿತವಾಗಿ ಪೊಲೀಸ್ ಕಾನ್ಸ್ಟೇಬಲ್ ಶರಣ ಬಸವ ವಿರುದ್ಧ ಕರ್ನಾಟಕ ಪೊಲೀಸ್ ಕಾಯ್ದೆ ಕಲಂ. 92(o)&(r) ರಂತೆ ಪ್ರಕರಣ ದಾಖಲಿಸಿಕೊಂಡಿರುತ್ತದೆ ಹಾಗೂ ಈ ಬಗ್ಗೆ ಸೂಕ್ತ ಇಲಾಖಾ ವಿಚಾರಣೆ ನಡೆಸಲಾಗುವುದು.

Read More

ಉಡುಪಿ: ರೆನಾಲ್ಟ್ ಟ್ರೈಬರ್ ಕಾರೊಂದು ಆಗುಂಬೆ ಘಾಟ್ ನ ಏಳನೇ ತಿರುವಿನಲ್ಲಿ ಇದ್ದಕಿದ್ದಂತೆ ಪಲ್ಟಿಯಾಗಿದ್ದು ಅದರಲ್ಲಿದ್ದ ದಂಪತಿ ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸದೆ ಬಚಾವಾದ ಅಪರೂಪದ ಘಟನೆ ನಡೆದಿದೆ. ದಂಪತಿ ಉಡುಪಿಯಿಂದ ಶಿವಮೊಗ್ಗಕ್ಕೆ ಪ್ರಯಾಣ ಮಾಡುತ್ತಿದ್ದಾಗ ಎದುರುಗಡೆ ಟಿಪ್ಪರ್ ಬಂದಿತ್ತು. ಸಂಭವಿಸಬಹುದಾಗಿದ್ದ ದುರಂತ ತಪ್ಪಿಸುವ ಭರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಈ ಸಂದರ್ಭ ಕಾರಿನ ಮೇಲ್ಛಾವಣಿಗೆ ಹಾನಿ ನಡೆದರೂ ದಂಪತಿಗೆ ಮಾತ್ರ ಯಾವುದೇ ಗಾಯಗಳಾಗದೆ ಅಪಾಯದಿಂದ ಪಾರಾಗಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ಉಳ್ಳಾಲ: ಲಕೋಟೆಯೊಂದರಲ್ಲಿ ಸಂಸ್ಕರಿಸಿಟ್ಟ ಮಾನವ ಅಸ್ಥಿಗಳು ಉಳ್ಳಾಲ ಪರಿಸರದ ಕುಂಪಲ ಚಿತ್ರಾಂಜಲಿ ನಗರದಲ್ಲಿ ಶನಿವಾರ ರಾತ್ರಿ ಪತ್ತೆಯಾಗಿ ಜನತೆಯನ್ನು ಬೆಚ್ಚಿಬೀಳಿಸಿದ್ದು, ಇದರ ಹಿಂದಿನ ಅಸಲಿಯತ್ತು ಈಗ ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಶನಿವಾರ ನಡುರಾತ್ರಿ ಚಿತ್ರಾಂಜಲಿ ನಗರದ ಮನೆಯ ಆವರಣದ ಬಳಿ ಪ್ರಯೋಗಾಲಯದ ಮಾದರಿಯ ಅಸ್ಥಿಗಳು ಲಕೋಟೆಯಲ್ಲಿ ಸಂಸ್ಕರಿಸಿದ ರೀತಿಯಲ್ಲಿ ಪತ್ತೆಯಾಗಿತ್ತು. ಈ ಸುದ್ದಿ ಕಾಡಿಚ್ಚಿನಂತೆ ಹಬ್ಬಿ ಸ್ಥಳದಲ್ಲಿ ಸಾಕಷ್ಟು ಜನರು ಜಮಾಯಿಸಿದ್ದರು. ವಿಚಾರ ತಿಳಿದು ಸ್ಥಳಕ್ಕೆ ದೌಡಾಯಿಸಿದ ಉಳ್ಳಾಲ ಪೊಲೀಸರು ಅಸ್ಥಿಗಳು ತುಂಬಿದ್ದ ಲಕೋಟೆಯನ್ನ ವಶಕ್ಕೆ ಪಡೆದಿದ್ದರು. ಚಿತ್ರಾಂಜಲಿ ನಗರದಲ್ಲಿ ದೊರೆತ ಅಸ್ಥಿಗಳನ್ನ ಸ್ಥಳೀಯ ಮಹಿಳೆಯೇ ತನ್ನ ಮನೆಯ ಆವರಣದ ಬಳಿ ಎಸೆದಿರುವ ವಿಚಾರ ಪೊಲೀಸರ ವಿಚಾರಣೆಯಲ್ಲಿ ತಿಳಿದು ಬಂದಿದೆ. ಮಹಿಳೆಯು ಮಂಗಳೂರಿನ ವೈದ್ಯರೋರ್ವರ ಮನೆಯಲ್ಲಿ ಕೆಲಸಕ್ಕಿದ್ದು, ನಿವೃತ್ತಿ ಹೊಂದಿದ್ದ ವೈದ್ಯರು ಮನೆ ಬಿಟ್ಟು ಹೋದಾಗ ಮನೆಯಲ್ಲಿದ್ದ ಕೆಲ ಸಾಮಾಗ್ರಿಗಳನ್ನ ಮಹಿಳೆಯು ತಂದಿದ್ದರೆನ್ನಲಾಗಿದೆ. ವೈದ್ಯರ ಮನೆಯಿಂದ ತಂದಿದ್ದ ಸಂಸ್ಕರಿಸಿಡಲಾದ ಅಸ್ಥಿಗಳ ಲಕೋಟೆಯನ್ನ ಮಹಿಳೆಯು ತನ್ನ ಮನೆಯ ಕಂಪೌಡ್ ಬಳಿ ಎಸೆದಿದ್ದರೆನ್ನಲಾಗಿದೆ.…

Read More

ಬೆಳ್ತಂಗಡಿ: ಬೈಕ್‌ಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಅಂಡಿಂಜೆಯ ಕಿಲಾರ ಮಾರಿಕಾಂಭ ದೇವಸ್ನಾನದ ತಿರುವು ರಸ್ತೆಯಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಅಂಡಿಂಜೆ ಗ್ರಾಮದ ಪಿಯೂಲಿರು ನಿವಾಸಿ ಯಕ್ಷಗಾನ ಭಾಗವತ ಸತೀಶ್ ಆಚಾರ್ಯ ಅಂಡಿಂಜೆ (40) ಎಂದು ಗುರುತಿಸಲಾಗಿದೆ. ಮಂಗಳಾದೇವಿ ಯಕ್ಷಗಾನ ಮೇಳದ ಯಕ್ಷಗಾನ ಭಾಗವತರಾದ ಸತೀಶ್ ಆಚಾರ್ಯ ರವರು ಮಾ. 31ರಂದು ಸುಳ್ಯದಲ್ಲಿ ನಡೆದ ಯಕ್ಷಗಾನ ಕಾರ್ಯಕ್ರಮವನ್ನು ಮುಗಿಸಿ ಮುಂಜಾನೆ 4 ಗಂಟೆಗೆ ಅವರು ತಮ್ಮ ಬೈಕ್‌ನಲ್ಲಿ ನಾರಾವಿಯಿಂದ ಅಂಡಿಂಜೆಗೆ ಬರುತ್ತಿರುವ ಸಂದರ್ಭದಲ್ಲಿ ಅಂಡಿಂಜೆ ಕಿಲಾರ ಮಾರಿಗುಡಿ ದೇವಸ್ಥಾನದ ಸಮೀಪದ ತಿರುವು ರಸ್ತೆಯಲ್ಲಿ ಎದುರಿನಿಂದ ಬರುತ್ತಿದ್ದ ಬೈಕ್ ಹಾಗೂ ಇವರು ಹೋಗುತ್ತಿದ್ದ ಬೈಕ್ ಪರಸ್ಪರ ಡಿಕ್ಕಿ ಹೊಡೆದುಕೊಂಡು ಈ ದುರ್ಘಟನೆ ನಡೆದಿದೆ. ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟರು. ಎದುರಿನಿಂದ ಬರುತ್ತಿದ್ದ ಬೈಕ್‌ನಲ್ಲಿದ್ದವರಿಗೂ ಗಾಯವಾಗಿದೆ ಎಂದು ತಿಳಿದು ಬಂದಿದೆ. ಮೃತರು ತಾಯಿ, ಸಹೋದರಿ ಸಹೋದರ ಹಾಗೂ ಬಂಧು ವರ್ಗದವರನ್ನು ಅಗಲಿದ್ದಾರೆ. ಈ ಬಗ್ಗೆ…

Read More

ಬೆಂಗಳೂರು : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, 13 ಮಂದಿ ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ / ಸ್ಥಳನಿಯುಕ್ತಿಗೊಳಿಸಿ ಆದೇಶಿಸಿದೆ. ವರ್ಗಾವಣೆಗೊಂಡ `KAS’ ಅಧಿಕಾರಿಗಳ ಪಟ್ಟಿ

Read More

ಕುಂದಾಪುರದ ಉಪವಿಭಾಗಾಧಿಕಾರಿ ಕೆ ಎ ಎಸ್ ಶ್ರೇಣಿಯ ಮಹೇಶ್ ಚಂದ್ರ ಅವರನ್ನು ಇಲಾಖಾ ವಿಚಾರಣೆಯನ್ನು ಬಾಕಿ ಇರಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಉಪವಿಭಾಗಾಧಿಕಾರಿಯವರ ಕರ್ತವ್ಯ ಲೋಪದ ಬಗ್ಗೆ ಮಾನ್ಯ ಜಿಲ್ಲಾಧಿಕಾರಿಗಳು ಉಡುಪಿ ಜಿಲ್ಲೆ ಇವರು ಸರ್ಕಾರಕ್ಕೆ ವಿಸ್ತೃತ ವರದಿ ಸಲ್ಲಿಸಿದ್ದು , ಡಿಸಿಯವರ ವರದಿ ಆಧಾರದ ಮೇಲೆ ಸರ್ಕಾರದ ಅಧೀನ ಕಾರ್ಯದರ್ಶಿ ಈ ಆದೇಶ ಹೊರಡಿಸಿದ್ದಾರೆ. ಅಲ್ಲದೆ ಮುಂದಿನ ಆದೇಶದವರೆಗೆ ಕುಂದಾಪುರ ಉಪವಿಭಾಗ ಹುದ್ದೆಯ ಪ್ರಭಾರವನ್ನು ಬ್ರಹ್ಮಾವರ ತಹಶೀಲ್ದಾರ್ ಶ್ರೀ ಶ್ರೀಕಾಂತ್ ಹೆಗ್ಡೆ ಅವರಿಗೆ ನಿರ್ವಹಿಸುವಂತೆ ಆದೇಶಿಸಲಾಗಿದೆ. ಮಾಜಿ ಶಾಸಕರೋರ್ವರ ಸಂಪೂರ್ಣ ಕ್ರಪೆಯಿಂದ ಸಾಕಷ್ಟು ಕಪ್ಪವನ್ನು ಸಲ್ಲಿಸಿಯೇ ಕುಂದಾಪುರ ಏ ಸಿ ಹುದ್ದೆಯನ್ನು ಏರಿದ ಇವರ ಬಗ್ಗೆ ಸಾರ್ವಜನಿಕ ವಲಯದಲ್ಲಿ ಅಸಮಾಧಾನವು ಹೊಗೆಯಾಡಿತ್ತು. ಆದಾಗ ಕುಂದಾಪುರ ಉಪವಿಭಾಗಾಧಿಕಾರಿಯಾಗಿ ಸಾರ್ವಜನಿಕರ ಮೆಚ್ಚುಗೆ ಗಳಿಸಿದ ರಶ್ಮಿ ಅವರ ದಿಡೀರ್ ವರ್ಗಾವಣೆಯು ಕೂಡಾ ಕಾರಣವಾಗಿತ್ತು. ಇಲ್ಲಿ ಉಪವಿಭಾಗಾಧಿಕಾರಿ ಅಧಿಕಾರ ವಹಿಸಿಕೊಂಡ ಕೂಡಲೇ ಪಟ್ಟಾಗಿ ಭೋಜನಕ್ಕೆ ಕುಂತ ಏ ಸಿ ಮಹೇಶ್…

Read More

ಪುತ್ತೂರು: ಸುಳ್ಯದಿಂದ ಮಂಗಳೂರಿಗೆ ಬರುತ್ತಿದ್ದ ಕ್ರೇಟಾ ಕಾರು ಸಂಟ್ಯಾರ್ ಶಾಲಾ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಸುಳ್ಯ ಅಜ್ಜಾವರ ಮೂಲದವರಾದ ಐವರು ಯುವಕರು ಅಪಾಯದಿಂದ ಪಾರಾಗಿದ್ದಾರೆ. ಕಾರು ಜಖಂಗೊಂಡಿದೆ.

Read More

ಮಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಹಲವಾರು ಅಧಿಕಾರಿಗಳು ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ, ಅವರಲ್ಲಿ ಮಂಗಳೂರು ಉಪವಿಭಾಗದ ಎಸಿಪಿ ಧನ್ಯಾ ನಾಯಕ್, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಶಿವಕುಮಾರ್ ಬಿ, ಉಳ್ಳಾಲ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಬಾಲಕೃಷ್ಣ ಮತ್ತು ಪಿಎಸ್‌ಐ ಸಂತೋಷ್ ಕುಮಾರ್ ಡಿ, ಸುರತ್ಕಲ್ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಮಹೇಶ್ ಪ್ರಸಾದ್ ಮತ್ತು ಪಿಎಸ್‌ಐಗಳಾದ ರಾಘವೇಂದ್ರ ಮಂಜುನಾಥ್ ನಾಯಕ್, ಅನಪ್ಪ ಮತ್ತು ಉಮೇಶ್ ಕುಮಾರ್, ಹಾಗೂ ಕಂಕನಾಡಿ ಪೊಲೀಸ್ ಠಾಣಾಧಿಕಾರಿ ರೇಜಿ ವಿ ಎಂ ಸೇರಿದ್ದಾರೆ. ಮಂಗಳೂರಿನ ಕೇಂದ್ರ ಅಪರಾಧ ಶಾಖೆಯ (ಸಿಸಿಬಿ) ಅಧಿಕಾರಿಗಳಾದ ಶೀನಪ್ಪ, ರಿತೇಶ್, ಸುಧೀರ್ ಕುಮಾರ್, ಸಂತೋಷ್ ಕುಮಾರ್, ದಾಮೋದರ್ ಕೆ, ವಿಜಯ ಶೆಟ್ಟಿ, ಶ್ರೀಧರ್ ವಿ, ಪ್ರಕಾಶ್ ಎಸ್, ಅಭಿಷೇಕ್ ಎಆರ್, ಅಂಜನಪ್ಪ ಎಚ್, ಭೀಮಪ್ಪ ಉಪ್ಪಾರ ಮತ್ತು ಪುರುಷೋತ್ತಮ್ ಅವರನ್ನು ಸನ್ಮಾನಿಸಲಾಗುವುದು.ಕಾನೂನು ಜಾರಿ, ಸಾರ್ವಜನಿಕ ಸುರಕ್ಷತೆ ಮತ್ತು ಪ್ರದೇಶದಲ್ಲಿ ಶಾಂತಿ ಕಾಪಾಡುವಲ್ಲಿ ಅತ್ಯುತ್ತಮ ಕೊಡುಗೆ ನೀಡಿದ ಅಧಿಕಾರಿಗಳಿಗೆ ಮುಖ್ಯಮಂತ್ರಿ ಪದಕವನ್ನು ನೀಡಲಾಗುತ್ತದೆ.

Read More