Author: main-admin

ಪುತ್ತೂರು: ಕಂಪನಿಯೊಂದಕ್ಕೆ ತಲಾ 60 ಕೆಜಿ ತೂಕದ ಕಾಫಿ ಬೀಜ ತುಂಬಿದ 320 ಗೋಣಿಚೀಲಗಳನ್ನು ಸಾಗಿಸುತ್ತಿದ್ದ ಲಾರಿಯೊಂದರಿಂದ ಸುಮಾರು 21,44,000 ರೂ. ಮೌಲ್ಯದ 80 ಗೋಣಿ ಚೀಲಗಳನ್ನು ಕಳವು ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಮಂದಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಕೃತ್ಯಕ್ಕೆ ಬಳಸಿದ ಎರಡು ಆಟೋ, ಒಂದು ಗೂಡ್ಸ್ ಟೆಂಪೋಗಳನ್ನು ಹಾಗೂ ಕಳುವಾದ 60 ಕೆಜಿ ತೂಕದ ಕಾಫಿ ತುಂಬಿದ 80 ಚೀಲಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಬಂಧಿತರನ್ನು ಆರೋಪಿ ಆಶ್ಲೇಷ ಭಟ್ ಹಾಗೂ ಆತನ ಸಹಚರರಾದ ನಾರಾಯಣ ಶೆಟ್ಟಿಗಾರ್, ಮಿಥುನ್ ಕುಮಾರ್, ವಿಜಯ ಶೆಟ್ಟಿ, ಮಹಮ್ಮದ್ ಅಶ್ರಫ್ ಎಂದು ಗುರುತಿಸಲಾಗಿದೆ. ದೂರುದಾರರು ಹಾಗೂ ಲಾರಿಯ ಮಾಲಕ ಮತ್ತು ಚಾಲಕ ಪುತ್ತೂರು ಕಬಕ ನಿವಾಸಿ ತೃತೇಶ್ (29) ಎಂಬವರ ದೂರಿನಂತೆ, ಡಿ.3ರಂದು ಪಿರಿಯಾ ಪಟ್ಟಣದ ಕಾಫಿ ಕ್ಯೂರಿಂಗ್ ಕಂಪೆನಿಯೊಂದರಿಂದ ತಲಾ 60 ಕೆಜಿ ತೂಕದ 320 ಗೋಣಿ ಚೀಲ ಬ್ಯಾಗ್‌ಗಳನ್ನು ಲೋಡ್ ಮಾಡಿಕೊಂಡು ಮಂಗಳೂರಿಗೆ ತೆರಳುತ್ತಿದ್ದರು. ಅದೇ ದಿನ ರಾತ್ರಿ ಪುತ್ತೂರಿಗೆ ತಲುಪಿ, ಕಬಕ…

Read More

ಮಂಗಳೂರು ನಗರಕ್ಕೆ ನಿಷೇಧಿತ ಮಾದಕದ್ರವ್ಯ ಎಂಡಿಎಂಎ ಪೂರೈಕೆ ಮಾಡುತ್ತಿದ್ದ ಐವರು ಆರೋಪಿಗಳಿಗೆ 12 ರಿಂದ 14 ವರ್ಷಗಳ ಕಠಿಣ ಸಜೆ ಮತ್ತು ದಂಡ ವಿಧಿಸಲು ದ.ಕ. ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದಲ್ಲಿ ಸಮರ್ಥವಾಗಿ ವಾದ ಮಂಡಿಸಿ, ಸಾಕ್ಷ್ಯಾಧಾರಗಳನ್ನು ನ್ಯಾಯಾಲಯದ ಮುಂದೆ ಸಾಬೀತುಪಡಿಸುವಲ್ಲಿ ಮಹತ್ತರ ಪಾತ್ರ ವಹಿಸಿದ ಸರಕಾರಿ ಅಭಿಯೋಜಕರಾದ ಜುಡಿತ್ ಓಲ್ಗಾ ಮಾರ್ಗರೇಟ್ ಕ್ರಾಸ್ತಾ ಅವರನ್ನು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸನ್ಮಾನಿಸಲಾಯಿತು. ಸರಕಾರಿ ಅಭಿಯೋಜಕಿ ಜುಡಿತ್ ಓಲ್ಗಾ ಮಾರ್ಗರೇಟ್ ಕ್ರಾಸ್ತಾ ಅವರನ್ನು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು ಸನ್ಮಾನಿಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಡಿಸಿಪಿ ಮಿಥುನ್ , ಸೆನ್ ಪೊಲೀಸ್ ಠಾಣೆ ಎಸಿಪಿ ರವೀಶ್ ನಾಯಕ್, ಉಪಸ್ಥಿತರಿದ್ದರು. 2022ರ ಜೂನ್ 14ರಂದು ಮಂಗಳೂರು ಸಿಸಿಬಿ ಘಟಕದ ಅಧಿಕಾರಿ, ಸಿಬ್ಬಂದಿ ಪತ್ತೆ ಮಾಡಿ ಮಾದಕವಸ್ತುಗಳನ್ನು ಸ್ವಾಧೀನಪಡಿಸಿಕೊಂಡು ಆರೋಪಿಗಳನ್ನು ದಸ್ತಗಿರಿ ಮಾಡಿದ್ದರು. ಈ ಬಗ್ಗೆ ಮಂಗಳೂರು ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು. ಮಂಗಳೂರಿನ ಪ್ರಧಾನ…

Read More

ಬೆಂಗಳೂರು : ಋತುಚಕ್ರ ರಜೆಗೆ ಸಂಬಂಧಿಸಿದ ರಾಜ್ಯ ಸರ್ಕಾರದ ಆದೇಶಕ್ಕೆ ಇದೀಗ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ಹೈಕೋರ್ಟ್ ಪೀಠದಿಂದ ತಡೆಯಾಜ್ಜೆ ನೀಡಲಾಗಿದೆ. ನವೆಂಬರ್ 20ರಂದು 1 ದಿನದ ಋತು ಚಕ್ರ ರಜೆ ಸಂಬಂಧ ಸರ್ಕಾರ ಆದೇಶ ಹೊರಡಿಸಿತ್ತು. ಸರ್ಕಾರದ ಆದೇಶ ಪ್ರಶ್ನಿಸಿ ಬೆಂಗಳೂರು ಹೋಟೆಲ್ ಮಾಲೀಕರ ಸಂಘ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ವಿಚಾರಣೆಯ ವೇಳೆ ಕಾಯ್ದೆಯಲ್ಲಿ ಇಲ್ಲದ ನಿಯಮವನ್ನು ಸರ್ಕಾರಿ ಆದೇಶದ ಮೂಲಕ ಜಾರಿಗೊಳಿಸಲಾಗಿದೆ. ಸರ್ಕಾರದ ಏಕಪಕ್ಷ ಆದೇಶದಿಂದ ಹೋಟೆಲ್ ಗಳಿಗೆ ಸಮಸ್ಯೆ ಆಗಿದೆ ಎಂದು ಅಸೋಸಿಯೇಷನ್ ಪರ ವಕೀಲರು ವಾದಿಸಿದರು. ಆದೇಶಕ್ಕೆ ಮುನ್ನ ಸಂಘಟನೆಗಳ ಅಭಿಪ್ರಾಯ ಪಡೆಯಲಾಗಿದೆಯ? ಎಂದು ಜಡ್ಜ್ ಪ್ರಶ್ನಿಸಿದರು. ಈ ವೇಳೆ ಅಸೋಸಿಯೇಷನ್ ಪರ ವಕೀಲರು ಇಲ್ಲ ಎಂದು ಉತ್ತರಿಸಿದರು. ಬಳಿಕ ಹೈಕೋರ್ಟ್ ಮುಂದಿನ ವಿಚಾರಣೆಯವರೆಗೆ ಸರ್ಕಾರದ ಆದೇಶಕ್ಕೆ ತಡೆ ನೀಡಿತು. ಮಧ್ಯಂತರ ತಡೆಯಾಜ್ಞೆ ತೆರವಿಗೆ ಅರ್ಜಿ ಸಲ್ಲಿಸಲು ಸರ್ಕಾರ ಸ್ವತಂತ್ರ ಎಂದು ಇದೆ ವೇಳೆ ಹೈಕೋರ್ಟ್ ಏಕ ಸದಸ್ಯ…

Read More

ಮಂಗಳೂರು : 2024ರ ಫೆಬ್ರವರಿ ತಿಂಗಳಲ್ಲಿ ಭಗವದ್ಗೀತೆ ಮತ್ತು ಮಹಿಳೆಯರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹರಿಯಬಿಟ್ಟು ಸಾಮರಸ್ಯ ಕೆಡಿಸುವ ಯತ್ನ ಮಾಡಿದ್ದು ಘಟನೆ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ವಿದೇಶದಲ್ಲಿ ಅಡಗಿದ್ದ ಆರೋಪಿಯನ್ನು ಇದೀಗ ಅಲ್ಲಿಂದ ಬರುವಾಗಲೇ ಮುಂಬೈ ಏರ್ಪೋರ್ಟ್ ನಲ್ಲಿ ಬಂಧಿಸಲಾಗಿದೆ. ಆರೋಪಿಯನ್ನು ಮುಂಬೈನ ಚಾರ್ಕೋಪ್ ಎಂಬಲ್ಲಿನ ನಿವಾಸಿ ಫೆಲಿಕ್ಸ್ ಎಡ್ವರ್ಡ್ ಮಥಾಯಿಸ್ (56) ಎಂದು ಗುರುತಿಸಲಾಗಿದೆ. ಅವಹೇಳನ ಪೋಸ್ಟ್ ವೈರಲ್ ಮಾಡಿದ ಬಗ್ಗೆ ಮಂಗಳೂರಿನ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಆರೋಪಿ ಫೆಲಿಕ್ಸ್ ಆ ಸಮಯದಲ್ಲಿ ಸೌದಿ ಅರೇಬಿಯಾದಲ್ಲಿದ್ದು, ಪೊಲೀಸರ ಕೈಗೆ ಸಿಕ್ಕಿರಲಿಲ್ಲ. ಬಳಿಕ ಫೆಲಿಕ್ಸ್ ಸೌದಿಯಲ್ಲಿ ಉದ್ಯೋಗದಲ್ಲಿರುವ ಬಗ್ಗೆ ಮಾಹಿತಿ ಸಂಗ್ರಹಿಸಿ, ಆರೋಪಿ ವಿರುದ್ದ ಲುಕ್ ಔಟ್ ಸರ್ಕುಲರ್ ಹೊರಡಿಸಲಾಗಿತ್ತು. ಆರೋಪಿ ಫೆಲಿಕ್ಸ್ ಮುಂಬೈನ ಸಹರಾ ವಿಮಾನ ನಿಲ್ದಾಣಕ್ಕೆ ವಿದೇಶದಿಂದ ಬಂದು ಇಳಿದ ಕೂಡಲೇ ಇಮಿಗ್ರೇಶನ್ ಅಧಿಕಾರಿಗಳು ತಡೆಹಿಡಿದಿದ್ದು, ಡಿ. 5ರಂದು ಮುಂಬೈಯ ಸಹರಾ ಏರ್ಪೋರ್ಟ್ ನಲ್ಲಿ ದಸ್ತಗಿರಿ ಮಾಡಿ ತನಿಖೆಗೆ…

Read More

ಮಂಗಳೂರು: ಕರಾವಳಿ ಅಭಿವೃದ್ಧಿ ಪ್ರಾಧಿಕಾರವು ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡದೇ ತಟಸ್ಥವಾಗಿರುವ ಕುರಿತು ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಅವರು ಶೂನ್ಯ ವೇಳೆಯಲ್ಲಿ ಸದನದ ಗಮನ ಸೆಳೆದರು. ಈ ವೇಳೆ ಉತ್ತರಿಸಿದ ಸಚಿವ ಡಿ.ಸುಧಾಕರ್ ಅವರು, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಹಾಲಿ ನಿರ್ವಹಿಸುತ್ತಿರುವ ಕಾರ್ಯಗಳ ಜೊತೆಗೆ ಅದರ ಕಾರ್ಯಚಟುವಟಿಕೆಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅನುವಾಗುವಂತೆ ಅದರ ಕಾರ್ಯಚಟುವಟಿಕೆಯನ್ನು ವಿಸ್ತರಿಸಿ ಕೆಳಕಂಡ ಪ್ರಕಾರ್ಯಗಳನ್ನು ನಿರ್ವಹಿಸಲು ತಕ್ಷಣದಿಂದ ಜಾರಿಗೆ ಬರುವಂತೆ ಮಂಜೂರಾತಿ ನೀಡಿ ಆದೇಶಿಸಿದ್ದಾಗಿ ತಿಳಿಸಿದ್ದಾರೆ. ಕರಾವಳಿ ಭಾಗದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ರಸ್ತೆ, ನೀರು ಒಳಚರಂಡಿ ಇತ್ಯಾದಿ ಮೂಲ ಸೌಲಭ್ಯಗಳನ್ನು ಒದಗಿಸಲು ಹಾಗೂ ಈ ಪ್ರದೇಶಗಳ ವ್ಯಾಪ್ತಿಯಲ್ಲಿ ಕೈಗಾರಿಕೆ, ಪ್ರವಾಸೋದ್ಯಮ ಬಂದರು ಇತ್ಯಾದಿ ಕ್ಷೇತ್ರಗಳ ಸರ್ವೋತ್ತಮ ಅಭಿವೃದ್ಧಿಗಾಗಿ ಹಾಗೂ ಸಮಗ್ರ ಅಭಿವೃದ್ಧಿ ಹಾಗೂ ಸಮನ್ವಯತೆಯನ್ನು ಸಾಧಿಸುವ ಉದ್ದೇಶದಿಂದ ಸರ್ಕಾರಕ್ಕೆ ಸೂಕ್ತ ಸಲಹೆ/ಅಭಿಪ್ರಾಯಗಳನ್ನು ನೀಡಲು ಕರಾವಳಿ ಅಭಿವೃದ್ಧಿ ಪ್ರಾಧಿಕಾರವನ್ನು ರಚಿಸಲಾಗಿತ್ತು. ಮೀನು ಮಾರುಕಟ್ಟೆ ನಿರ್ಮಾಣಕ್ಕೆ…

Read More

ನವದೆಹಲಿ : ಸ್ಟಾಫ್ ಸೆಲೆಕ್ಷನ್ ಕಮಿಷನ್ (ಎಸ್‌ಎಸ್‌ಸಿ) ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ (ಸಿಎಪಿಎಫ್‌ಗಳು) ಮತ್ತು ಸೆಕ್ರೆಟರಿಯೇಟ್ ಸೆಕ್ಯುರಿಟಿ ಫೋರ್ಸ್ (ಎಸ್‌ಎಸ್‌ಎಫ್) ಮತ್ತು ರೈಫಲ್‌ಮ್ಯಾನ್ (ಜನರಲ್ ಡ್ಯೂಟಿ) ಅಸ್ಸಾಂ ರೈಫಲ್ಸ್ ಪರೀಕ್ಷೆ, 2026 ರಲ್ಲಿ ಕಾನ್ಸ್‌ಟೇಬಲ್ (ಜನರಲ್ ಡ್ಯೂಟಿ) ಗಾಗಿ ಆನ್‌ಲೈನ್ ನೋಂದಣಿ ಪ್ರಕ್ರಿಯೆಯನ್ನು ತೆರೆದಿದೆ. ಕೈಗಾರಿಕಾ ಭದ್ರತಾ ಪಡೆ (CISF), ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF), ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ITBP), ಸಶಸ್ತ್ರ ಸೀಮಾ ಬಾಲ್ (SSB), ಅಸ್ಸಾಂ ರೈಫಲ್ಸ್ (AR) ಮತ್ತು ಸೆಕ್ರೆಟರಿಯೇಟ್ ಭದ್ರತಾ ಪಡೆ (SSF). ಆನ್‌ಲೈನ್ ಅರ್ಜಿ ನಮೂನೆಯು ಅಧಿಕೃತ ವೆಬ್‌ಸೈಟ್ ssc.gov.in ನಲ್ಲಿ ಲಭ್ಯವಿದೆ. 1 ಡಿಸೆಂಬರ್ 2025 ರ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು 1 ಡಿಸೆಂಬರ್ ಮತ್ತು 31 ಡಿಸೆಂಬರ್ 2025 (23:00 ಗಂಟೆಗಳು) ನಡುವೆ ಸಲ್ಲಿಸಬಹುದು. ಆನ್‌ಲೈನ್ ಶುಲ್ಕ ಪಾವತಿಯ ಅಂತಿಮ ದಿನಾಂಕ 1 ಜನವರಿ 2026 (23:00 ಗಂಟೆಗಳು). ಆಯೋಗವು 8 ಜನವರಿಯಿಂದ 10…

Read More

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚಿಕನ್ ಪಾಕ್ಸ್ ಪ್ರಕರಣಗಳು ದಾಖಲಾಗುತ್ತಿದ್ದು, ಸ್ಥಳೀಯವಾಗಿ ಹರಡದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಅಳವಡಿಸಲು ಆರೋಗ್ಯ ಇಲಾಖೆ ಸೂಚಿಸಿದೆ. ಶಾಲಾ ಮಕ್ಕಳಲ್ಲಿ ಅಥವಾ ಸಾರ್ವಜನಿಕರಲ್ಲಿ ಖಾಯಿಲೆಯ ಲಕ್ಷಣಗಳು ಕಂಡುಬ0ದಲ್ಲಿ ತಕ್ಷಣಕ್ಕೆ ಚಿಕಿತ್ಸೆಯನ್ನು ಪಡೆಯುವುದರೊಂದಿಗೆ ಸೋಂಕು ಹರಡದಂತೆ ಕ್ರಮವಹಿಸಬೇಕು ಎಂದು ಸೂಚನೆ ನೀಡಲಾಗಿದೆ. ಚಿಕನ್ ಪಾಕ್ಸ್ ಮಕ್ಕಳಲ್ಲಿ, ಯಾವುದೇ ತೊಂದರೆ ಇಲ್ಲದೆ ಸಂಪೂರ್ಣವಾಗಿ ಗುಣವಾಗುತ್ತದೆ. ಒಮ್ಮೆ ಚಿಕನ್ ಪಾಕ್ಸ್ನಿಂದ ಬಳಲಿದ ವ್ಯಕ್ತಿ ಜೀವಿತಾವಧಿಯವರೆಗೂ ಅದರ ವಿರುದ್ಧ ರೋಗ ನಿರೋಧಕ ಶಕ್ತಿಯನ್ನು ಹೊಂದುತ್ತಾನೆ. ಪೌಷ್ಠಿಕ ಆಹಾರ ಸೇವನೆಯಿಂದ ದೇಹದ ರೋಗ ನಿರೋಧಕ ವ್ಯವಸ್ಥೆಯನ್ನು ಸದೃಢಗೊಳಿಸಿಕೊಳ್ಳುವುದೂ ರೋಗ ನಿಯಂತ್ರಣದಲ್ಲಿ ಮುಖ್ಯ ಪಾತ್ರವನ್ನು ವಹಿಸುತ್ತದೆ. ಸೋಂಕಿತ ರೋಗಿಯ ಬೊಕ್ಕೆಗಳನ್ನು ಮುಟ್ಟಿದಾಗ ಕೈಗಳನ್ನು ಸೋಪು ಮತ್ತು ನೀರಿನಿಂದ ಸ್ವಚ್ಛ ಮಾಡಿಕೊಳ್ಳಬೇಕು. ಮನೆ,ಶಾಲೆ, ಕಿಂಡರ್ ಗಾರ್ಡನ್ ಮುಂತಾದ ಸ್ಥಳಗಳಲ್ಲಿ ಸ್ವಚ್ಛತೆಯನ್ನು ಕಾಪಾಡಬೇಕು. ಸೋಂಕಿತ ಮಕ್ಕಳ ಜೊತೆಗೆ ಹತ್ತಿರದ ಸಂಪರ್ಕವನ್ನು ಇಡಬಾರದು. ಸೋಂಕಿತ ಜಾಗವನ್ನು ಅಥವಾ ಮಕ್ಕಳ ಆಟಿಕೆಗಳನ್ನು ಸೋಪು ಮತ್ತು ನೀರಿನಿಂದ ಸ್ವಚ್ಛ ಮಾಡಿಕೊಳ್ಳಬೇಕು. ಅನಾರೋಗ್ಯವಿದ್ದರೆ ಹತ್ತಿರದ ಸರ್ಕಾರಿ…

Read More

ಹಣಕ್ಕಾಗಿ ರಿಯಲ್ ಎಸ್ಟೇಟ್ ಉದ್ಯಮಿ ಕಿಡ್ನ್ಯಾಪ್ ಮಾಡಿದ್ದ ಪ್ರಕರಣವನ್ನು ಪೊಲೀಸರು ಸಿನಿಮಿಯಾ ಶೈಲಿಯಲ್ಲಿ ಭೇದಿಸಿ ಕಿಡ್ನ್ಯಾಪ್ ಆದ ಕೆಲವೇ ಗಂಟೆಗಳಲ್ಲಿ ಅರೋಪಿಗಳ ಎಡೆಮುರಿಕಟ್ಟಿದ್ದಾರೆ. ಮೈಸೂರು ವಿಜಯನಗರದ ಹೆರಿಟೇಜ್ ಕ್ಲಬ್ ಬಳಿ ವಿಜಯನಗರ ಮೂರನೇ ಹಂತದ ನಿವಾಸಿ ಲೋಕೇಶ್ ಎಂಬವರನ್ನು, ಟಾಟಾ ಸುಮೋದಲ್ಲಿ ಬಂದ ಐದು ಮಂದಿ ಅಪಹರಣ ಮಾಡಿದ್ದರು. ಬಳಿಕ ಲೋಕೇಶ್ ಮೊಬೈಲ್‌ನಿಂದ ಅವರ ಪತ್ನಿಗೆ ಕರೆ ಮಾಡಿ ಆರೋಪಿಗಳು 30 ಲಕ್ಷ ಹಣಕ್ಕೆ ಡಿಮ್ಯಾಂಡ್ ಇಟ್ಟಿದ್ದರು. ಗಾಬರಿಗೊಂಡ ಲೋಕೇಶ್ ಪತ್ನಿ ವಿಜಯನಗರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಅಲರ್ಟ್ ಆದ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಕಾರ್ಯಾಚರಣೆ ನಡೆಸಿ ಮೈಸೂರಿನಿಂದ 50 ಕಿ.ಮೀ. ದೂರದಲ್ಲಿ ಆರೋಪಗಳನ್ನು ಬಂಧಿಸಿ, ಅಪಹರಣವಾದ ಲೋಕೇಶ್ ಅವರನ್ನು ವಶಕ್ಕೆ ಪಡೆದಿದ್ದಾರೆ. ಕಳೆದ ಹದಿನೈದು ದಿನಗಳಿಂದ ನವೀನ್ ಚಲನವಲನ ಫಾಲೋ ಮಾಡುತ್ತಿದ್ದ ಆರೋಪಿಗಳು ಹೆರಿಟೇಜ್ ಕ್ಲಬ್‌ಗೆ ಹೋಗಿ ವಾಪಸ್ ಬರುವ ವೇಳೆ ಕಿಡ್ನ್ಯಾಪ್ ಮಾಡಿದ್ದರು.

Read More

ಸುರತ್ಕಲ್: ಚಾಕಲೇಟ್ ಖರೀದಿ ಮಾಡಲು ಅಂಗಡಿಗೆ ಹೋಗಿದ್ದ ಅಪ್ರಾಪ್ತ ಬಾಲಕನ ಕೈಕಾಲು ಕಟ್ಟಿ ಲೈಂಗಿಕ ದೌರ್ಜನ್ಯ ಎಸಗಿದ ಅಂಗಡಿ ಮಾಲಕನ ವಿರುದ್ಧ ಸುರತ್ಕಲ್ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಯನ್ನು ಮೊಹಮ್ಮದ್ ಇಸ್ಮಾಯಿಲ್ ಎಂದು ಗುರುತಿಸಲಾಗಿದೆ. ಆರೋಪಿ ರಾಜಕೀಯ ಪಕ್ಷವೊಂದರ ಸ್ಥಳೀಯ ಮುಖಂಡನಾಗಿದ್ದಾನೆ ಎನ್ನಲಾಗಿದೆ. ಘಟನೆಯ ವಿವರ: ಚೊಕ್ಕಬೆಟ್ಟು ನಿವಾಸಿ 6ನೇ ತರಗತಿಯಲ್ಲಿ ಕಲಿಯುತ್ತಿರುವ 11ನೇ ವರ್ಷದ ಬಾಲಕ ಆರೋಪಿ ಇಸ್ಮಾಯಿಲ್ ಗೆ ಸೇರಿದ ಚೊಕ್ಕಬೆಟ್ಟು ಜುಮ್ಮಾ ಮಸೀದಿ ಬಳಿ ಇರುವ ಹನಿ ಫ್ಯಾಷನ್ ಶಾಪ್ ಗೆ ಚಾಕೊಲೇಟ್ ಖರೀದಿಸಲು ಹೋದಾಗ ಆರೋಪಿಯು ಬಾಲಕನನ್ನು ಅಂಗಡಿಯಲ್ಲಿರುವ ರೂಂ ಒಂದರಲ್ಲಿ ಕೂಡಿ ಹಾಕಿ ಬಾಲಕನ ಕೈ-ಕಾಲನ್ನು ಹಗ್ಗದಿಂದ ಕಟ್ಟಿ ಬಾಯಿಯಲ್ಲಿ ಬಟ್ಟೆಯನ್ನು ತುರುಕಿ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ್ದು ಈ ಬಗ್ಗೆ ನೊಂದ ಬಾಲಕನ ತಾಯಿ ನೀಡಿದ ದೂರಿನಂತೆ ಠಾಣಾ ಅಕ್ರ 160/2025 ಕಲಂ 4, 6 ಪೋಕ್ಸೋ ಕಾಯ್ದೆ & ಕಲಂ 351(2), 127(2) ಬಿ.ಎನ್.ಎಸ್ ರಂತೆ…

Read More

ಇನ್ಸ್ಟಾಗ್ರಾಮ್ ಖಾತೆಯಲ್ಲಿ 26 ಮಕ್ಕಳ ಅಶ್ಲೀಲ ವೀಡಿಯೊಗಳು ಅಪ್ಲೋಡ್ ಆಗಿರುವುದು ಕಂಡುಬಂದ ನಂತರ ಪೊಲೀಸರು ವ್ಯಕ್ತಿಯೊಬ್ಬರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೇಂದ್ರ ಗೃಹ ಸಚಿವಾಲಯದ ಸೈಬರ್ ಪೋರ್ಟಲ್ ಮೂಲಕ ಪಡೆದ ಸೈಬರ್ ಟಿಪ್ಲೈನ್ ವರದಿಯ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ.ಇನ್ಸ್ಟಾಗ್ರಾಮ್ ಖಾತೆಗೆ ಲಿಂಕ್ ಮಾಡಲಾದ ಮೊಬೈಲ್ ಸಂಖ್ಯೆಯನ್ನು ಸೆಹ್ರಾಮೌ ಉತ್ತರ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರ ನಿವಾಸಿಗೆ ಪತ್ತೆಹಚ್ಚಲಾಗಿದೆ. ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಆತನ ವಿರುದ್ಧ ಶುಕ್ರವಾರ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ವಿವರವಾದ ತನಿಖೆ ನಡೆಯುತ್ತಿದೆ ಮತ್ತು ಪೋರ್ಟಲ್ ಮೂಲಕ ಹೆಚ್ಚುವರಿ ಮಾಹಿತಿಯನ್ನು ಸಂಗ್ರಹಿಸಲು ಸೂಚನೆಗಳನ್ನು ನೀಡಲಾಗಿದೆ ಎಂದು ಪಿಲಿಭಿತ್ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಅಭಿಷೇಕ್ ಯಾದವ್ ಶನಿವಾರ ತಿಳಿಸಿದ್ದಾರೆ.ಎಫ್ಐಆರ್ ಪ್ರಕಾರ, ಲಕ್ನೋದ ಸೈಬರ್ ಅಪರಾಧ ಪ್ರಧಾನ ಕಚೇರಿಯು ಟಿಪ್ಲೈನ್ ವರದಿಯನ್ನು ರವಾನಿಸಿದೆ, ಅದರ ನಂತರ ರಿತಿಕ್ ಶುಕ್ಲಾ ಆಗಸ್ಟ್ 28…

Read More