ಪುತ್ತೂರು: ಸುಳ್ಯದಿಂದ ಮಂಗಳೂರಿಗೆ ಬರುತ್ತಿದ್ದ ಕ್ರೇಟಾ ಕಾರು ಸಂಟ್ಯಾರ್ ಶಾಲಾ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಸುಳ್ಯ ಅಜ್ಜಾವರ ಮೂಲದವರಾದ ಐವರು ಯುವಕರು ಅಪಾಯದಿಂದ ಪಾರಾಗಿದ್ದಾರೆ. ಕಾರು ಜಖಂಗೊಂಡಿದೆ.
Author: main-admin
ಮಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಹಲವಾರು ಅಧಿಕಾರಿಗಳು ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ, ಅವರಲ್ಲಿ ಮಂಗಳೂರು ಉಪವಿಭಾಗದ ಎಸಿಪಿ ಧನ್ಯಾ ನಾಯಕ್, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಶಿವಕುಮಾರ್ ಬಿ, ಉಳ್ಳಾಲ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಬಾಲಕೃಷ್ಣ ಮತ್ತು ಪಿಎಸ್ಐ ಸಂತೋಷ್ ಕುಮಾರ್ ಡಿ, ಸುರತ್ಕಲ್ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಮಹೇಶ್ ಪ್ರಸಾದ್ ಮತ್ತು ಪಿಎಸ್ಐಗಳಾದ ರಾಘವೇಂದ್ರ ಮಂಜುನಾಥ್ ನಾಯಕ್, ಅನಪ್ಪ ಮತ್ತು ಉಮೇಶ್ ಕುಮಾರ್, ಹಾಗೂ ಕಂಕನಾಡಿ ಪೊಲೀಸ್ ಠಾಣಾಧಿಕಾರಿ ರೇಜಿ ವಿ ಎಂ ಸೇರಿದ್ದಾರೆ. ಮಂಗಳೂರಿನ ಕೇಂದ್ರ ಅಪರಾಧ ಶಾಖೆಯ (ಸಿಸಿಬಿ) ಅಧಿಕಾರಿಗಳಾದ ಶೀನಪ್ಪ, ರಿತೇಶ್, ಸುಧೀರ್ ಕುಮಾರ್, ಸಂತೋಷ್ ಕುಮಾರ್, ದಾಮೋದರ್ ಕೆ, ವಿಜಯ ಶೆಟ್ಟಿ, ಶ್ರೀಧರ್ ವಿ, ಪ್ರಕಾಶ್ ಎಸ್, ಅಭಿಷೇಕ್ ಎಆರ್, ಅಂಜನಪ್ಪ ಎಚ್, ಭೀಮಪ್ಪ ಉಪ್ಪಾರ ಮತ್ತು ಪುರುಷೋತ್ತಮ್ ಅವರನ್ನು ಸನ್ಮಾನಿಸಲಾಗುವುದು.ಕಾನೂನು ಜಾರಿ, ಸಾರ್ವಜನಿಕ ಸುರಕ್ಷತೆ ಮತ್ತು ಪ್ರದೇಶದಲ್ಲಿ ಶಾಂತಿ ಕಾಪಾಡುವಲ್ಲಿ ಅತ್ಯುತ್ತಮ ಕೊಡುಗೆ ನೀಡಿದ ಅಧಿಕಾರಿಗಳಿಗೆ ಮುಖ್ಯಮಂತ್ರಿ ಪದಕವನ್ನು ನೀಡಲಾಗುತ್ತದೆ.
ಮಂಗಳೂರು : ದೇರಳಕಟ್ಟೆ ಜಂಕ್ಷನ್ ನಲ್ಲಿರುವ ಮುತ್ತೂಟ್ ಫೈನಾನ್ಸ್ ಕಚೇರಿ ದರೋಡೆಗೆ ಯತ್ನಿಸಿದ ಘಟನೆ ಶನಿವಾರ ತಡರಾತ್ರಿ ನಡೆದಿದೆ. ಅದೃಷ್ಟವಶಾತ್ ಖದೀಮರು ಬೀಗ ಒಡೆಯುತ್ತಿರುವಾಗಲೇ ಫೈನಾನ್ಸ್ ಮಳಿಗೆಯ ಸೈರನ್ ಮೊಳಗಿದೆ. ಘಟನಾ ಸ್ಥಳಕ್ಕೆ ಧಾವಿಸಿದ ಕೊಣಾಜೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಮತ್ತೋರ್ವ ಆರೋಪಿ ಪರಾರಿಯಾಗಿದ್ದಾನೆ. ಶನಿವಾರ ತಡರಾತ್ರಿ ಸುಮಾರು 1.30 ಗಂಟೆಗೆ ಘಟನೆ ನಡೆದಿದೆ. ದೇರಳಕಟ್ಟೆ ಜಂಕ್ಷನ್ ನಲ್ಲಿರುವ ಹೆಚ್.ಎಂ. ಟಿಂಬರ್ಸ್ ಸಂಸ್ಥೆಗೆ ಸೇರಿದ ವಾಣಿಜ್ಯ ಕಟ್ಟಡದ ಮೇಲಂತಸ್ತಿನಲ್ಲಿ ಕಾರ್ಯಾಚರಿಸುತ್ತಿರುವ ಮುತ್ತೂಟ್ ಫೈನಾನ್ಸ್ ಗೆ ಕೇರಳ ಮೂಲದ ಮೂವರು ಖದೀಮರು ಕನ್ನ ಹಾಕಿದ್ದಾರೆ. ಇನ್ನೇನು ಖದೀಮರು ಕಳ್ಳತನ ನಡೆಸಲು ಮಳಿಗೆಯ ಬೀಗ ಒಡೆಯುತ್ತಿರುವಾಗಲೇ ಸೈರನ್ ಮೊಳಗಿದ್ದು ಮುತ್ತೂಟ್ ಫೈನಾನ್ಸ್ ನ ಕಂಟ್ರೋಲ್ ರೂಂಗೆ ಮಾಹಿತಿ ರವಾನೆಯಾಗಿದೆ. ಫೈನಾನ್ಸ್ ಸಂಸ್ಥೆಯ ಮೇಲಾಧಿಕಾರಿಗಳು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸೈರನ್ ಮೊಳಗುತ್ತಿದ್ದಾಗಲೇ ಫೈನಾನ್ಸ್ ಸುತ್ತ ಮುತ್ತಲೂ ಸ್ಥಳೀಯರು ಜಮಾಯಿಸಿದ್ದು, ಇಬ್ಬರು ಆರೋಪಿಗಳಾದ ಕೇರಳದ ಕಾಂಞಂಗಾಡ್ ಮೂಲದ ಮುರಳಿ ಮತ್ತು ಕಾಸರಗೋಡು ನಿವಾಸಿ ಹರ್ಷದ್ ಎಂಬವರು ಕಟ್ಟಡದಲ್ಲಿ…
ಬೆಂಗಳೂರು : ಪ್ರಸ್ತುತ ಕರ್ನಾಟಕದಲ್ಲಿ ಪೊಲೀಸರು ಬ್ರಿಟಿಷರ ಕಾಲದ ಟೋಪಿಗಳನ್ನೇ ಬಳಸುತ್ತಿದ್ದಾರೆ. ಈ ಒಂದು ಟೋಪಿ ಬದಲಾವಣೆಗಾಗಿ ಮೊದಲಿನಿಂದಲೂ ಕೂಗು ಕೇಳಿ ಬಂದಿತ್ತು. ಆದರೆ ಇದೀಗ ದೊಡ್ಡ ಟೋಪಿ ಬದಲಾಗಿ ಸ್ಮಾರ್ಟ್ ಪೀಕ್ ಹ್ಯಾಟ್ ಹೆಡ್ ಕಾನ್ಸ್ಟೆಬಲ್ ಹಾಗೂ ಕಾನ್ ಸ್ಟೆಬಲ್ಗಳ ತಲೆಯನ್ನು ಅಲಂಕರಿಸಲಿದೆ. ಇಂತಹದೊಂದು ಸಾಹಸಕ್ಕೆ ಪೊಲೀಸ್ ಇಲಾಖೆ ದಿಟ್ಟ ಹೆಜ್ಜೆಯಿಟ್ಟಿದೆ. ಹೌದು ಕರ್ನಾಟಕ ಪೊಲೀಸ್ ಇಲಾಖೆಯ ಹೆಡ್ ಕಾನ್ಸ್ಟೆಬಲ್ ಮತ್ತು ಕಾನ್ಸ್ಟೆಬಲ್ಗಳು ಬಹಳ ವರ್ಷಗಳಿಂದ ಬ್ರಿಟಿಷ್ ಕಾಲದ ಟೋಪಿಗಳನ್ನು ಧರಿಸುತ್ತಿದ್ದಾರೆ. ಇದು ಆರೋಗ್ಯ ಮತ್ತು ಇತರೆ ಸಮಸ್ಯೆಗಳಿಗೆ ಕಾರಣವಾಗುತ್ತಿದೆ. ಹೀಗಾಗಿ ಹೊಸ ಪೀಕ್ ಕ್ಯಾಪ್ಗಳನ್ನು ನೀಡಲು ಪೊಲೀಸ್ ಇಲಾಖೆ ಮುಂದಾಗಿದೆ. ಈ ಬಗ್ಗೆ ಏಪ್ರಿಲ್ 4ರಂದು ಸಭೆ ನಡೆಯಲಿದೆ. ಪ್ರಸ್ತುತ ಪೊಲೀಸ್ ಕಾನ್ಸ್ಟೆಬಲ್ಗಳು ಧರಿಸುತ್ತಿರುವ ಗ್ಲೋಚ್ ಟೋಪಿಯಿಂದಾಗಿ ಅವರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುವ ಸಾಧ್ಯತೆಗಳ ಬಗ್ಗೆ ಇತ್ತೀಚೆಗೆ ಕೇಂದ್ರ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿತ್ತು. ಇನ್ನು ಕೇರಳ, ಆಂಧ್ರ ಪ್ರದೇಶ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಅಲ್ಲಿನ ಪೊಲೀಸ್…
ಮೂಡಬಿದ್ರೆ: ಅಕ್ರಮ ದನ ಸಾಗಾಟದ ಆರೋಪದಲ್ಲಿ ವ್ಯಕ್ತಿಗಳಿಬ್ಬರ ಮೇಲೆ ಗಂಭೀರ ಹಲ್ಲೆ ನಡೆಸಿ ವಾಹನವನ್ನು ಪುಡಿಗೈದ ಪ್ರಕರಣಕ್ಕೆ ಸಂಬಂಧಿಸಿ ಬಜರಂಗದಳದ ಕಾರ್ಯಕರ್ತರೆನ್ನಲಾದ ಇಬ್ಬರನ್ನು ಮೂಡುಬಿದ್ರೆ ಪೊಲೀಸ್ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ. ಅವರು ಬಂಧಿಸಿ ಕೊಲೆಯತ್ನ ಪ್ರಕರಣ ದಾಖಲಿಸಿದ್ದಾರೆ. ಕಡಂದಲೆಯ ಸುಧೀರ್ ಶೆಟ್ಟಿ ಹಾಗೂ ಸುರತ್ಕಲ್ನ ಧನರಾಜ್ ಬಂಧಿತ ಆರೋಪಿಗಳಾಗಿದ್ದು, ಇತರ ಐದು ಮಂದಿ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಮೂಡುಬಿದಿರೆ ಬಿರಾವಿನ ಕೂಸಪ್ಪ ಪೂಜಾರಿ ಅವರು ತನ್ನ ಪರಿಚಯದ ಕಾರ್ಕಳದ ಬಜಗೋಳಿಯ ಮನೆಯಿಂದ ಗೀರ್ ತಳಿಯ ಹೋರಿಯೊಂದನ್ನು ಸಂಗಬೆಟ್ಟುವಿನ ಅಬ್ದುಲ್ ರಹ್ಮಾನ್ ಅವರ ವಾಹನದಲ್ಲಿ ಶುಕ್ರವಾರ ಸಂಜೆ ಮೂಡುಬಿದಿರೆಯತ್ತ ತರುತ್ತಿದ್ದರು.ಗೀರ್ ತಳಿಯ ಹೋರಿಯನ್ನು ಗರ್ಭದಾರಣೆಯ ವಿಷಯದಲ್ಲಿ ತರುತ್ತಿದ್ದರೆನ್ನಲಾಗಿದೆ. ಈ ಸಂದರ್ಭದಲ್ಲಿ ಬೆಳುವಾಯಿ ಬಳಿ ವಾಹನವನ್ನು ತಡೆದು ನಿಲ್ಲಿಸಿದ ಬಜರಂಗದಳದ ಕಾರ್ಯಕರ್ತರೆನ್ನಲಾದ ಆರೋಪಿಗಳು ವಾಹನದಲ್ಲಿದ್ದ ಕೂಸಪ್ಪ ಪೂಜಾರಿ ಹಾಗೂ ಅಬ್ದುಲ್ ರಹ್ಮಾನ್ ಅವರಿಬ್ಬರ ಮೇಲೂ ಗಂಭೀರವಾಗಿ ಹಲ್ಲೆ ನಡೆಸಿದ್ದಾರೆ. ಸಾಗಾಟಕ್ಕೆ ಸಂಬಂಧಿಸಿ ದಾಖಲೆಪತ್ರಗಳನ್ನು ತೋರಿಸಿದರೂ ಹಲ್ಲೆ ನಡೆಸಿದ್ದಾರೆನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಮೂಡುಬಿದಿರೆ ಆಳ್ವಾಸ್ ಹಾಗೂ…
ಉಡುಪಿ ತಾಲೂಕಿನ ಶಿವಳ್ಳಿ ಗ್ರಾಮದ ಶಾರದ ನಗರದಲ್ಲಿರುವ ‘ಧರಿತ್ರಿ’ ಎಂಬ ಮನೆಯಲ್ಲಿ ಅಕ್ರಮ ವೇಶ್ಯಾವಾಟಿಕೆ ನಡೆಯುತ್ತಿದ್ದ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ಉಡುಪಿ ನಗರ ಠಾಣೆಯ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಓರ್ವ ಸಂತ್ರಸ್ತೆಯನ್ನು ರಕ್ಷಿಸಲಾಯಿತು. ಸತೀಶ್ ಎಂಬ ವ್ಯಕ್ತಿ ಸಂತ್ರಸ್ತೆಗೆ ಕೆಲಸ ಕೊಡಿಸುವ ನೆಪದಲ್ಲಿ ಮೂಡಬಿದ್ರೆಯಿಂದ ಉಡುಪಿಯ ಶಾರದ ನಗರದಲ್ಲಿರುವ ಶ್ರೀಲತಾ ಎಂಬಾಕೆಯ ಮನೆಗೆ ಕಳುಹಿಸಿದ್ದ. ಅಲ್ಲಿ ಶ್ರೀಲತಾ ಆಕೆಯನ್ನು ವೇಶ್ಯಾವಾಟಿಕೆಗೆ ಒತ್ತಾಯಿಸಿ, ಒಂದು ಕೋಣೆಯಲ್ಲಿ ಕೂಡಿ ಹಾಕಿದ್ದಳು ಎಂದು ತಿಳಿದುಬಂದಿದೆ. ಆರೋಪಿಗಳು ಅಕ್ರಮವಾಗಿ ವೇಶ್ಯಾವಾಟಿಕೆ ನಡೆಸಿ ಹಣ ಸಂಪಾದಿಸುವ ಉದ್ದೇಶದಿಂದ ಆಕೆಯನ್ನು ಒತ್ತಾಯ ಪೂರ್ವಕವಾಗಿ ಮನೆಯಲ್ಲಿ ಇರಿಸಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಕುಂದಾಪುರ ಹೊಸ ಬಸ್ ನಿಲ್ದಾಣದ ಬಳಿ ಸಾರ್ವಜನಿಕ ಅರ್ಜಿ ಕೇಂದ್ರದಲ್ಲಿ ನಕಲಿ ರಬ್ಬರ್ ಸ್ಟ್ಯಾಂಪ್ ಇಟ್ಟುಕೊಂಡು ಸರಕಾರಿ ನಾನಾ ಇಲಾಖೆಯ ನಕಲಿ ದಸ್ತಾವೇಜು ತಯಾರಿಸಿಕೊಡುತ್ತಿದ್ದ ಆರೋಪದಲ್ಲಿ ಬಂಧಿತರಾಗಿರುವ ಕೋಡಿ ನಾಗೇಶ್ ಕಾಮತ್ ಅವರ ಜಾಮೀನು ಅರ್ಜಿಯನ್ನು ಕುಂದಾಪುರ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಜಾಗೊಳಿಸಿದೆ. ಖಚಿತ ಮಾಹಿತಿಯ ಮೇರೆಗೆ ಪಿಎಸ್ಐಗಳಾದ ಪುಷ್ಪಾ, ನಂಜಾ ನಾಯ್ಕ ಮತ್ತು ತಂಡದವರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿ ನಾನಾ ಇಲಾಖೆಯ ನಕಲಿ 22 ಸೀಲುಗಳನ್ನು ವಶಪಡಿಸಿಕೊಂಡಿದ್ದರು. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಆರೋಪಿಯು ಜಾಮೀನು ಕೋರಿ ಕುಂದಾಪುರ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು ನ್ಯಾಯಾಧೀಶರಾದ ಅಬ್ದುಲ್ ರಹೀಂ ಹುಸೈನ್ ಶೇಖ್ ವಜಾಗೊಳಿಸಿದ್ದಾರೆ. ಅರ್ಜಿಯನ್ನು ಸರಕಾರದ ಪರವಾಗಿ ಸರಕಾರಿ ಅಭಿಯೋಜಕಿ ಇಂದಿರಾ ನಾಯ್ಕ ವಾದ ಮಂಡಿಸಿ ತನಿಖೆಯ ಹಿತದೃಷ್ಟಿಯಿಂದ ಆರೋಪಿಗೆ ಜಾಮೀನು ನೀಡಬಾರದು ಎಂದು ವಾದಿಸಿದ್ದರು.
ಮಂಗಳೂರು: ಮಂಗಳೂರು ವಿವಿಯಲ್ಲಿ ಶನಿವಾರ 43ನೇ ವಾರ್ಷಿಕ ಘಟಿಕೋತ್ಸವ ನಡೆಯಲಿದ್ದು, ಈ ಬಾರಿಯೂ ಉದ್ಯಮಿಗಳೇ ಗೌರವ ಡಾಕ್ಟರೇಟ್ಗೆ ಆಯ್ಕೆಯಾಗಿದ್ದಾರೆ. ರಿಯಲ್ ಎಸ್ಟೇಟ್ ಉದ್ಯಮಿ ರೋಹನ್ ಮೊಂತೇರೋ, ಮುಂಬೈ ಉದ್ಯಮಿ ಕನ್ಯಾಡಿ ಸದಾಶಿವ ಶೆಟ್ಟಿ ಮತ್ತು ಎಸ್ಸಿಡಿಸಿಸಿ ಬ್ಯಾಂಕ್ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್ ಅವರನ್ನು ಗೌರವ ಡಾಕ್ಟರೇಟ್ಗೆ ಆಯ್ಕೆ ಮಾಡಲಾಗಿದೆ.ಗೌರವ ಡಾಕ್ಟರೇಟ್ಗೆ 15ಮಂದಿ ಸಾಧಕರ ಹೆಸರನ್ನು ಆಯ್ಕೆ ಮಾಡಿ, ಕುಲಾಧಿಪತಿಗಳಾದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಶಿಫಾರಸ್ಸು. ಮಾಡಲಾಗಿತ್ತು. ಅದರಂತೆ ಸಾಮಾಜಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಮೂವರನ್ನು ಆಯ್ಕೆ ಮಾಡಿ ಈ ಮೂವರನ್ನು ಕುಲಾಧಿಪತಿಗಳು ಆಯ್ಕೆ ಮಾಡಿದ್ದಾರೆ. ಈ ಬಾರಿ 64ಡಾಕ್ಟರ್ ಆಫ್ ಫಿಲಾಸಫಿ (ಪಿಎಚ್ಡಿ) ಪದವಿಗಳು, 54 ಚಿನ್ನದ ಪದಕಗಳು ಮತ್ತು 56 ನಗದು ಬಹುಮಾನಗಳನ್ನು ನೀಡಲಿದೆ. 64ಪಿಎಚ್ಡಿಗಳಲ್ಲಿ 12 ಕಲೆ, 38 ವಿಜ್ಞಾನ, 11ವಾಣಿಜ್ಯ, ಮತ್ತು ಮೂವರು ಶಿಕ್ಷಣದಲ್ಲಿ ಪಿಎಚ್ಡಿ ಸ್ವೀಕರಿಸಲಿದ್ದಾರೆ. ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಮತ್ತು ಸಹ -…
ಸುಳ್ಯ: ಗೂಡ್ಸ್ ಲಾರಿಯೊಂದು 33 ಕೆ.ವಿ. ಲೈನ್ ವಿದ್ಯುತ್ ಕಂಬಕ್ಕೆ ಢಿಕ್ಕಿಯಾದ ಘಟನೆ ಜಾಲ್ಸೂರ್ ಗ್ರಾಮದ ವಿನೋಬಾನಗರದಲ್ಲಿ ಇಂದು ಮುಂಜಾನೆ ಸಂಭವಿಸಿದೆ. ಸುಳ್ಯ ಕಡೆಯಿಂದ ಹೋಗುತ್ತಿದ್ದ ಗೂಡ್ಸ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಬಲಬದಿಗೆ ಬಂದು ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿದೆ. ಪರಿಣಾ ಕಂಬ ತುಂಡಾಗಿದೆ ಎನ್ನಲಾಗಿದೆ. ಅಪಘಾತದಿಂದ ಈ ಪರಿಸರದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ.
ಮಂಗಳೂರು : ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ ಹೈಡ್ರೋವೀಡ್ ಗಾಂಜಾ, ಚರಸ್ ಹಾಗೂ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಯುವಕರಿಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳನ್ನು ಪಾಂಡೇಶ್ವರ ಸುಭಾಷ್ ನಗರ ನಿವಾಸಿ ತೈಸಿರ್ ಇಸ್ಮಾಯಿಲ್ ಹುಸೈನ್(23), ಬೋಳಂಗಡಿ ಹೌಸ್ ಬಂಟ್ವಾಳ, ಪಾಣೆ ಮಂಗಳೂರು ನಿವಾಸಿ ರೋಯಸ್ಟನ್ ಕ್ಸವಿಯರ್ ಲೋಬೋ(22) ಎಂದು ಗುರುತಿಸಲಾಗಿದೆ. ಅರೋಪಿಗಳಿಂದ ಸುಮಾರು 9 ಲಕ್ಷ ಮೌಲ್ಯದ ಹೈಡ್ರೋವಿಡ್ ಗಾಂಜಾ, ಚರಸ್, ಗಾಂಜಾ ಹಾಗೂ 2 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಬೆಂಗಳೂರಿನಿಂದ ಮಾದಕ ವಸ್ತುವಾದ ಹೈಡ್ರೋವೀಡ್ ಗಾಂಜಾ, ಚರಸ್ ಹಾಗೂ ಗಾಂಜಾವನ್ನು ಖರೀದಿಸಿಕೊಂಡು ಮಂಗಳೂರು ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಶಿವಭಾಗ್ 5 ನೇ ಕ್ರಾಸ್ ರಸ್ತೆಯಲ್ಲಿ ಮಾದಕ ವಸ್ತುವನ್ನು ಹೊಂದಿಕೊಂಡು ಮಾರಾಟ ಮಾಡುತ್ತಿದ್ದ ಸಮಯದಲ್ಲಿ ವಶಕ್ಕೆ ಪಡೆದಿದ್ದಾರೆ. ಐಷಾರಾಮಿ ಜೀವನ ಸಾಗಿಸುವ ಉದ್ದೇಶದಿಂದ ಮಾದಕ ವಸ್ತು ಮಾರಾಟದ ದಂಧೆಯನ್ನು…