ಎಸ್.ಎಸ್.ವಿ.ಪಿ. ಎಂದು ಜನಪ್ರಿಯವಾಗಿರುವ ಅಂತರಾಷ್ಟ್ರೀಯ ಸೇವಾ ಸಂಸ್ಥೆ ಸೈಂಟ್ ವಿನ್ಸೆಂಟ್ ಡಿ ಪಾವ್ಲ್ ಸೊಸೈಟಿ, ಮಂಗಳೂರು ಕ್ಯಾಥೊಲಿಕ್ ಧರ್ಮಸಭೆಯಲ್ಲಿ ತನ್ನ ಅಸ್ತಿತ್ವದ ನೂರು ವರ್ಷಗಳ ಸಂಭ್ರಮವನ್ನು ಆಚರಿಸುತ್ತಿದೆ. ಇದೇ 2026ರ ಜನವರಿ 25ರ ಭಾನುವಾರದಂದು ಫಾದರ್ ಮುಲ್ಲರ್ ಕನ್ವೆಂಷನ್ ಸೆಂಟರ್ ಸಭಾಂಗಣದಲ್ಲಿ ಶತಮಾನೋತ್ಸವ ಸಮಾರೋಪ ಸಮಾರಂಭ ನೆರವೇರಲಿದೆ. ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಅತೀ ವಂದನೀಯ ಡಾ. ಪೀಟರ್ ಪೌಲ್ ಸಲ್ಡಾನ್ಹಾ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುತ್ತಿದ್ದು ಎಸ್.ಎಸ್.ವಿ.ಪಿ. ಅಂತರಾಷ್ಟ್ರೀಯ ಅಧ್ಯಕ್ಷ ರಾದ ಶ್ರೀ ಯುವಾನ್ ಮ್ಯಾನುಯೆಲ್ ಬ್ಯುರ್ಗೊ ಗೊಮೆಜ್ ಅವರು ಸ್ಪೇಯ್ನ್ ದೇಶದಿಂದ ಬಂದು ಮುಖ್ಯ ಅತಿಥಿಯಾಗಿ ಭಾಗವಹಿಸುತ್ತಿದ್ದಾರೆ. ಇವರೊಂದಿಗೆ ಗೌರವ ಅತಿಥಿಗಳಾಗಿ ಮಂಗಳೂರು ಧರ್ಮ ಪ್ರಾಂತ್ಯ ದ ನಿವೃತ್ತ ಬಿಷಪ್ ಅತೀ ವಂದನೀಯ ಡಾ. ಅಲೋಶಿಯಸ್ ಪೌಲ್ ಡಿಸೋಜ, ಎಸ್. ಎಸ್. ವಿ. ಪಿ. ರಾಷ್ಟ್ರೀಯ ಮಂಡಳಿಯ ಅಧ್ಯಕ್ಷ ಶ್ರೀ ಜೂಡ್ ಮಂಗಳರಾಜ್ ಹಾಗೂ ಅಂತಾರಾಷ್ಟ್ರೀಯ ಓಂಬುಡ್ಸ್ಮನ್ ಶ್ರೀ ಜೋಸೆಫ್ ಪಾಂಡಿಯನ್ ಅವರು ಉಪಸ್ಥಿತಲಿರುವರು. ಕರ್ನಾಟಕ ವಿಧಾನ ಪರಿಷತ್ ಸದಸ್ಯರಾದ…
Author: main-admin
ಕೋಝಿಕೋಡ್ : ಬಸ್ ಪ್ರಯಾಣ ಸಮಯದಲ್ಲಿ ಸಹ ಪ್ರಯಾಣಿಗ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ ಹಂಚಿಕೊಂಡ ನಂತರ ಸಹ ಪ್ರಯಾಣಿಗ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಶಿಮ್ಜಿತಾ ಮುಸ್ತಫಾ ಅವರನ್ನು ಬಂಧಿಸಲಾಗಿದೆ. ಬಸ್ಸಿನಲ್ಲಿ ಸಹ ಪ್ರಯಾಣಿಕ ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಅಪಾದಿಸಿ ಪ್ರಯಾಣಿಕ ದೀಪಕ್ ಅವರ ವಿಡಿಯೋ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದ್ದರು, ಇದರಿಂದ ಅವಮಾನವನ್ನು ಸಹಿಸಿಕೊಳ್ಳಲಾಗದೆ ದೀಪಕ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಪ್ರಕರಣ ಕೇರಳದಾದ್ಯಂತ ಭಾರೀ ಆಕ್ರೋಷಕ್ಕೆ ಕಾರಣವಾಗಿತ್ತು, ಪ್ರಕರಣದ ನಂತರ ಆರೋಪಿ ಶಿಮ್ಜಿತಾ ಮುಸ್ತಫಾ ತಲೆಮರೆಸಿಕೊಂಡಿದ್ದರು,ನಂತರ ಆಕೆಯನ್ನು ಕೋಝಿಕೋಡ್ ವೈದ್ಯಕೀಯ ಕಾಲೇಜು ಪೊಲೀಸರು ವಡಕಾರದಲ್ಲಿರುವ ಆಕೆಯ ಸಂಬಂಧಿಕರ ಮನೆಯಲ್ಲಿ ಪತ್ತೆ ಹಚ್ಚಿ ಆಕೆಯನ್ನು ಬಂಧಿಸಿದ್ದಾರೆ. ನಂತರ ಆಕೆಯನ್ನು ಕೊಯಿಲಾಂಡಿ ತಾಲ್ಲೂಕು ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ನಂತರ ಠಾಣೆಗೆ ಕರೆತರಲಾಯಿತು. ಆಕೆಯ ವಿರುದ್ಧ ಲುಕೌಟ್ ನೋಟಿಸ್ ಜಾರಿಯಾದ ನಂತರ ಆಕೆಯನ್ನು ಬಂಧಿಸಲಾಯಿತು. ಉಳ್ಳತ್ತೋಡಿಯ ಕೊಳಂಗರಕಂಡಿಯ ಗೋವಿಂದಪುರದ…
ಮದುವೆಯಾದ ಕೇವಲ 65 ದಿನಗಳ ನಂತರ, ದಂಪತಿಗಳು 13 ವರ್ಷಗಳ ಕಾಲ ನ್ಯಾಯಾಲಯಗಳ ಮೂಲಕ ಒಬ್ಬರನ್ನೊಬ್ಬರು ಜರಿದರು, ಅನೇಕ ನ್ಯಾಯಾಂಗ ವೇದಿಕೆಗಳಲ್ಲಿ 40 ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿದರು. ಕಾನೂನು ವ್ಯವಸ್ಥೆಯ “ಅಸಾಧಾರಣ ದುರುಪಯೋಗ” ಎಂದು ಬಣ್ಣಿಸಿದ್ದನ್ನು ಕೊನೆಗೊಳಿಸಿದ ಸುಪ್ರೀಂ ಕೋರ್ಟ್, ಅವರಿಗೆ ವಿಚ್ಛೇದನ ನೀಡಿತು, ತಲಾ 10,000 ರೂ.ಗಳ ದಂಡವನ್ನು ವಿಧಿಸಿತು ಮತ್ತು ಎರಡೂ ಪಕ್ಷಗಳು ಪರಸ್ಪರರ ವಿರುದ್ಧ ಹೆಚ್ಚಿನ ಮೊಕದ್ದಮೆಯನ್ನು ಪ್ರಾರಂಭಿಸುವುದನ್ನು ನಿಷೇಧಿಸಿತು. ನ್ಯಾಯಾಂಗವನ್ನು ವೈಯಕ್ತಿಕ ಅಂಕಗಳನ್ನು ಇತ್ಯರ್ಥಪಡಿಸುವ ಯುದ್ಧಭೂಮಿಯಾಗಿ ಪರಿವರ್ತಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟ ಸುಪ್ರೀಂ ಕೋರ್ಟ್, ಇಂತಹ ದೀರ್ಘಕಾಲದ ಮತ್ತು ಸೇಡಿನ ಮೊಕದ್ದಮೆಗಳು ಈಗಾಗಲೇ ಹೆಚ್ಚಿನ ಹೊರೆಯಾಗಿರುವ ನ್ಯಾಯ ವಿತರಣಾ ವ್ಯವಸ್ಥೆಯನ್ನು ಉಸಿರುಗಟ್ಟಿಸುತ್ತದೆ ಎಂದು ಎಚ್ಚರಿಸಿದೆ. ಈ ಪ್ರಕರಣವು ಜನವರಿ 2012 ರಲ್ಲಿ ಮದುವೆಯಾದ ದಂಪತಿಗಳಿಗೆ ಸಂಬಂಧಿಸಿದೆ. ಮದುವೆಯಾದ ಕೇವಲ 65 ದಿನಗಳಲ್ಲಿ ಪತಿ ಮತ್ತು ಆತನ ಕುಟುಂಬದವರು ಕ್ರೌರ್ಯಕ್ಕೆ ಒಳಗಾಗಿದ್ದಾರೆ ಎಂದು ಆರೋಪಿಸಿ ಪತ್ನಿ ತನ್ನ ತವರು ಮನೆಗೆ ಮರಳಿದ್ದಾರೆ. ನಂತರ ದಂಪತಿಗಳು ಪ್ರತ್ಯೇಕವಾಗಿ…
ಬೆಂಗಳೂರು: ಅಮಾನತುಗೊಂಡಿರುವ ಪೊಲೀಸ್ ಮಹಾನಿರ್ದೇಶಕ(ನಾಗರಿಕ ಹಕ್ಕುಗಳ ಜಾರಿರ್ದೇಶನಾಲಯ) ಕೆ. ರಾಮಚಂದ್ರ ರಾವ್ ಅವರ ಸ್ಥಾನಕ್ಕೆ ಐಪಿಎಸ್ ಅಧಿಕಾರಿ ಉಮೇಶ್ ಕುಮಾರ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ. ತಮ್ಮ ಕಚೇರಿಯೊಳಗೆ ಸಮವಸ್ತ್ರದಲ್ಲಿದ್ದಾಗ ಅಶ್ಲೀಲ ಕೃತ್ಯಗಳಲ್ಲಿ ತೊಡಗಿರುವ ಆಡಿಯೋ ಮತ್ತು ವಿಡಿಯೋ ತುಣುಕುಗಳು ವೈರಲ್ ಆದ ನಂತರ ಡಿಜಿಪಿ ಕೆ ರಾಮಚಂದ್ರ ರಾವ್ ಅವರನ್ನು ಅಮಾನತುಗೊಳಿಸಲಾಗಿತ್ತು. ಪೊಲೀಸ್ ಮಹಾನಿರ್ದೇಶಕ(ನೇಮಕಾತಿ) ಉಮೇಶ್ ಕುಮಾರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಪೊಲೀಸ್ ಮಹಾನಿರ್ದೇಶಕರ ಹುದ್ದೆಯ ಹೆಚ್ಚುವರಿ ಜವಾಬ್ದಾರಿ ವಹಿಸಲಾಗಿದೆ” ಎಂದು ಸರ್ಕಾರಿ ಆದೇಶದಲ್ಲಿ ತಿಳಿಸಲಾಗಿದೆ. ಸೋಮವಾರದ ಅಮಾನತು ಆದೇಶದಲ್ಲಿ, ರಾಜ್ಯ ಸರ್ಕಾರವು ರಾವ್ “ಅಶ್ಲೀಲ ರೀತಿಯಲ್ಲಿ ವರ್ತಿಸಿದ್ದಾರೆ, ಇದು ಸರ್ಕಾರಿ ಸೇವಕನಿಗೆ ಯೋಗ್ಯವಲ್ಲ ಮತ್ತು ಸರ್ಕಾರಕ್ಕೆ ಮುಜುಗರವನ್ನುಂಟುಮಾಡುತ್ತದೆ” ಎಂದು ಹೇಳಲಾಗಿದೆ
ಮಂಗಳೂರು: ನಕಲಿ ಸರ್ಕಾರಿ ದಾಖಲೆಗಳನ್ನು ಸೃಷ್ಟಿಸಿ, ಕೋಟಿ ಕೋಟಿ ರೂಪಾಯಿ ಮೌಲ್ಯದ ಸಾರ್ವಜನಿಕ ಟೆಂಡರ್ಗಳನ್ನು ವಂಚನೆಯ ಮೂಲಕ ಕೈವಶ ಮಾಡಿಕೊಂಡ ಆರೋಪದ ಹಿನ್ನೆಲೆಯಲ್ಲಿ, ಮೂಡಬಿದ್ರಿಯ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜೆಎಂಎಫ್ಸಿ ನ್ಯಾಯಾಲಯವು Canara Lighting Industries Pvt. Ltd. ಹಾಗೂ ಅದರ ನಿರ್ದೇಶಕರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಸಮ್ಮತಿ (ಕಾಗ್ನಿಜನ್ಸ್) ನೀಡಿದೆ. RTI Activists for Justice ಸಂಸ್ಥೆ ಸಲ್ಲಿಸಿದ ಖಾಸಗಿ ದೂರನ್ನು ಪರಿಶೀಲಿಸಿದ ನ್ಯಾಯಾಲಯ, ಸಾರ್ವಜನಿಕ ಟೆಂಡರ್ ಪ್ರಕ್ರಿಯೆಯಲ್ಲಿ ನಕಲಿ ದಾಖಲೆಗಳನ್ನು ಸಲ್ಲಿಸಿ ವಂಚನೆ ನಡೆಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ, ಪ್ರಾಥಮಿಕ ಹಂತದಲ್ಲೇ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲು ಸಾಕಷ್ಟು ದಾಖಲೆಗಳು ಇವೆ ಎಂದು ಅಭಿಪ್ರಾಯಪಟ್ಟಿದೆ. ಆದರೆ, ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರ ವಿರುದ್ಧ ಯಾವುದೇ ಪ್ರಾಥಮಿಕ ಸಾಕ್ಷ್ಯ ಲಭ್ಯವಿಲ್ಲ ಎಂಬ ಕಾರಣದಿಂದ, ಅವರ ವಿರುದ್ಧದ ದೂರನ್ನು ನ್ಯಾಯಾಲಯ ವಜಾಗೊಳಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿತರು ನ್ಯಾಯಾಲಯದ ಮುಂದೆ ಹಾಜರಾಗುವಂತೆ ಸಮ್ಮನ್ಸ್ ಜಾರಿ ಮಾಡಲು ನ್ಯಾಯಾಲಯ ಆದೇಶಿಸಿದ್ದು,…
ಸುರತ್ಕಲ್: ಎಂ.ಆರ್.ಪಿ.ಎಲ್.ನ ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ಮಂಗಳವಾರ ಬೆಳಗ್ಗೆ11 ಗಂಟೆಯ ಸುಮಾರಿಗೆ ನಡೆದಿರುವ ಬಗ್ಗೆ ವರದಿಯಾಗಿದೆ.ಜೋಕಟ್ಟೆ-ಬಜ್ಪೆ ನಡುವಿನ ಫೇಸ್-3 ಘಟಕದ ಪೆಟ್ರೋಲಿಯಂ ತ್ಯಾಜ್ಯ ಸಂಸ್ಕರಣಾ ಘಟಕದ ಬಳಿ ವೆಲ್ಡಿಂಗ್ ಕಾಮಗಾರಿ ನಡೆಯುತ್ತಿದ್ದ ವೇಳೆ ಬೆಂಕಿಯ ಕಿಡಿ ತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ಸೇರುವ ಕೊಳವೆಗೆ ತಗುಲಿದ ಕಿಡಿ ಸುಮಾರು 10 ಸಾವಿರ ಲೀಟರ್ ಸಾಮರ್ಥ್ಯದ ಸಂಸ್ಕರಣಾ ಟ್ಯಾಂಕ್ಗೆ ತಗುಲಿ ಅದು ಸ್ಫೋಟಗೊಂಡಿದೆ ಎಂದು ತಿಳಿದು ಬಂದಿದೆ. ಸ್ಫೋಟದ ವೇಳೆ ಕೆಲವೇ ಅಡಿಗಳ ದೂರದಲ್ಲಿ ಕೆಲಸ ನಿರ್ವಹಿಸುತ್ತಿದ್ದ ನೌಕರರು ಭಾರೀ ಸದ್ದು ಕೇಳಿದಾಕ್ಷಣ ಸ್ಥಳದಿಂದ ಓಡಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ನಡೆದ ತಕ್ಷಣ ಬಜ್ಪೆ, ಜೋಕಟ್ಟೆ ಹಾಗೂ ಸುರತ್ಕಲ್ ಭಾಗದ ಎಂ.ಆರ್.ಪಿ.ಎಲ್.ನ ಎಲ್ಲಾ ಗೇಟ್ಗಳನ್ನು ಬಂದ್ ಮಾಡಲಾಗಿದ್ದು, ವಾಹನ ಹಾಗೂ ಜನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಘಟನೆಯ ಮಾಹಿತಿ ತಿಳಿದು ಎಂ.ಆರ್.ಪಿ.ಎಲ್.ನ ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಭೇಟಿ ನೀಡಿ ಸುಮಾರು ಎರಡು ಗಂಟೆಗಳ ಸತತ ಕಾರ್ಯಾಚರಣೆ ನಡೆಸಿ…
ಬಜ್ಪೆ: ಕುಪ್ಪೆಪದವು ಸಮೀಪದ ನೂದೊಟ್ಟು ಬಳಿ ಮಾರುತಿ ಸುಜುಕಿ ಸ್ವಿಪ್ಟ್ ಡಿಸೈರ್ ಕಾರ್ ಬೆಂಕಿಗಾಹುತಿಯಾದ ಘಟನೆ ನಿನ್ನೆ(ಜ.20) ತಡರಾತ್ರಿ ನಡೆದಿದೆ. ಎಡಪದವು ನಿವಾಸಿಗಳು ಕಾರಿನಲ್ಲಿ ಸಂಚರಿಸುತ್ತಿದ್ದರು ಎಂದು ಹೇಳಲಾಗಿದೆ. ಹೆಡ್ ಲೈಟ್ ನಲ್ಲಿ ತಾಂತ್ರಿಕ ದೋಷದಿಂದ ಕಾರ್ ಬೆಂಕಿಗೆ ಆಹುತಿಯಾಗಿದ್ದು ಅರ್ಧ ಭಾಗ ಸುಟ್ಟು ಕರಕಲಾಗಿದೆ. ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ.
ಪುತ್ತೂರು/ಬೆಳ್ಳಾರೆ: ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣದ ಆರೋಪಿಗೆ ಮಂಗಳೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಸಿಟ್ಟಿಂಗ್ ಪುತ್ತೂರು) ಶಿಕ್ಷೆ ವಿಧಿಸಿದೆ. ಬೆಳ್ಳಾರೆ ಪೊಲೀಸ್ ಠಾಣೆ ಅಪರಾಧ ಸಂಖ್ಯೆ 42/2020 (ಐಪಿಸಿ ಕಲಂ 354, 506 ಹಾಗೂ ಪೋಕ್ಸೋ ಕಾಯ್ದೆ 2012ರ ಕಲಂ 10) ಅಡಿ ದಾಖಲಾದ ಪ್ರಕರಣದಲ್ಲಿ ಆರೋಪಿ ಸೆಲ್ವಕುಮಾರ್ ವಿರುದ್ಧ ವಿಚಾರಣೆ ನಡೆಸಿದ ಮಾನ್ಯ ನ್ಯಾಯಾಧೀಶರಾದ ಸರಿತಾ ಡಿ. ಅವರು ಆರೋಪಿಗೆ 5 ವರ್ಷಗಳ ಸಾಧಾರಣ ಶಿಕ್ಷೆ ಹಾಗೂ ₹20,000 ದಂಡ ವಿಧಿಸಿ ಆದೇಶಿಸಿದ್ದಾರೆ. ದಂಡವನ್ನು ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ 6 ತಿಂಗಳ ಸಾಧಾರಣ ಶಿಕ್ಷೆ ಅನುಭವಿಸಬೇಕೆಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.ಈ ಪ್ರಕರಣದಲ್ಲಿ ಅಂದಿನ ತನಿಖಾಧಿಕಾರಿಯಾಗಿದ್ದ ಅಂಜನೇಯ ರೆಡ್ಡಿ ಅವರು ಅಂತಿಮ ವರದಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಪುಷ್ಪರಾಜ್ ಅವರು ಸಮರ್ಥವಾಗಿ ವಾದ ಮಂಡಿಸಿದ್ದರು.
ಬೆಳಗಾವಿ: ಈ ಹಿಂದೆಯೂ ಹಲವಾರು ಬಾರಿ ಕೈದಿಗಳ ನಡುವೆ ಮಾರಾಮಾರಿಯೇ ಹಿಂಡಲಗಾ ಜೈಲಿನಲ್ಲಿ ನಡೆದಿತ್ತು. ಇದು ಮತ್ತೆ ಮರುಕಳಿಸಿದೆ. ಇಂದು ಹಿಂಡಲಗಾ ಜೈಲಿನಲ್ಲಿ ಕೈದಿಗಳು ಹೊಡೆದಾಡಿಕೊಂಡಿರುವಂತ ಘಟನೆ ನಡೆದಿದೆ. ಬೆಳಗಾವಿ ತಾಲ್ಲೂಕಿನ ಹಿಂಡಲಗಾ ಗ್ರಾಮದಲ್ಲಿರುವಂತ ಸೆಂಟ್ರಲ್ ಜೈಲಿನಲ್ಲಿ ಕೈದಿಗಳು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಎಸ್ ಟಿ ಡಿ ಪೋನ್ ಕಾಲ್ ವಿಚಾರಕ್ಕೆ ಆರಂಭಗೊಂಡ ಜಗಳ ಪರಸ್ಪರ ಕೈಕೈ ಮಿಲಾಯಿಸುವಂತ ಹಂತಕ್ಕೂ ತಲುಪಿದೆ. ಕಲ್ಲಿನಿಂದ ಜಜ್ಜಿ ಕೈದಿ ಸುರೇಶ್ ಬೆಳಗಾವಿ ಎಂಬುವರಿಗೆ ಹಲ್ಲೆ ಮಾಡಲಾಗಿದೆ. ಮಂಗಳೂರು ಮೂಲದ ಕೈದಿ ಫಯಾಸ್ ಎಂಬಾತನಿಂದ ಈ ಕೃತ್ಯ ಎಸಗಲಾಗಿದೆ.
ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಭರ್ಜರಿ ಕಾರ್ಯಾಚರಣೆಯಲ್ಲಿ ಪೊಲೀಸರು 106 ಕಿಲೋಗ್ರಾಂ ಗಾಂಜಾವನ್ನು ವಶಪಡಿಸಿಕೊಂಡು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ದಿನಾಂಕ 19-01-2026ರಂದು ಸಂಜೆ, ಕಾರು ಹಾಗೂ ಅಶೋಕ್ ಲೈಲ್ಯಾಂಡ್ ಗೂಡ್ಸ್ ವಾಹನದಲ್ಲಿ ಗಾಂಜಾ ಸಾಗಾಟ ನಡೆಯುತ್ತಿರುವ ಕುರಿತು ಖಚಿತ ಮಾಹಿತಿ ಲಭಿಸಿದ ಹಿನ್ನೆಲೆ, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಗುಣಪಾಲ ಜೆ ಅವರ ನೇತೃತ್ವದಲ್ಲಿ ಸಿಬ್ಬಂದಿಗಳು ಪುತ್ತೂರು ತಾಲೂಕು ಪಡುವನ್ನೂರು ಗ್ರಾಮದ ಸಜಂಕಾಡಿ ಪ್ರದೇಶದಲ್ಲಿ ವಾಹನ ತಪಾಸಣೆ ನಡೆಸಿದರು. ತಪಾಸಣೆ ವೇಳೆ ಕಾರಿನ ಚಾಲಕ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ನಿವಾಸಿ ರಫೀಕ್ ಪಿ (37) ಎಂಬಾತನಾಗಿದ್ದು, ಆತನ ವರ್ತನೆ ಅನುಮಾನಾಸ್ಪದವಾಗಿದ್ದರಿಂದ ಕಾರನ್ನು ಪರಿಶೀಲಿಸಿದಾಗ, ಪ್ಲಾಸ್ಟಿಕ್ ಕವರ್ಗಳಲ್ಲಿ ಸುಮಾರು 100 ಗ್ರಾಂ ತೂಕದ ಗಾಂಜಾ ಗಿಡದ ಎಲೆ, ಹೂ ಹಾಗೂ ಕಾಯಿ ತುಂಬಿದ ಕಟ್ಟು ಪತ್ತೆಯಾಯಿತು. ಅದೇ ವೇಳೆ ಗೂಡ್ಸ್ ವಾಹನದ ಚಾಲಕನನ್ನು ವಿಚಾರಿಸಿದಾಗ ಆತ ಬೆಳ್ತಂಗಡಿ ಚಾರ್ಮಾಡಿ ಗ್ರಾಮದ ನಿವಾಸಿ ಅಬ್ದುಲ್ ಸಾದಿಕ್…










