ಕಡಬ: ತಡರಾತ್ರಿ ಮನೆಗೆ ಅಕ್ರಮ ಪ್ರವೇಶಿಸಿ ಮನೆಯ ಸದಸ್ಯರಿಗೆ ಹಲ್ಲೆ ನಡೆಸಿದ ಆರೋಪದಲ್ಲಿ ಕಡಬ ಠಾಣೆಯ ಹೆಡ್ ಕಾನ್ಸ್ಟೇಬಲ್ ರಾಜು ನಾಯ್ಕ ಎಂಬಾತನನ್ನು ಬಂಧಿಸಲಾಗಿದ್ದು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಕಡಬ ತಾಲೂಕು ಕೊಯಿಲ ನಿವಾಸಿ ಬಾಬು ಗೌಡ ಎಂಬವರ ಮನೆಯ ಸಮೀಪವಿರುವ ಅವರ ಸಹೋದರ ಹರೀಶ ಎಂಬವರ ಮನೆಗೆ ಡಿ.3ರಂದು ತಡರಾತ್ರಿ ಅಪರಿಚಿತ ವ್ಯಕ್ತಿಯೊಬ್ಬ ಅಕ್ರಮ ಪ್ರವೇಶಿಸಿದ್ದು , ಮನೆಯ ಸದಸ್ಯರು ಆತನನ್ನು ಹಿಡಿದುಕೊಂಡಿದ್ದು, ಈ ವೇಳೆ ಆತ ತಪ್ಪಿಸಿಕೊಳ್ಳುವ ಉದ್ದೇಶದಿಂದ ಮನೆಯ ಸದಸ್ಯ ಚೇತನ್ ಎಂಬಾತನಿಗೆ ಕೈಯಿಂದ ಹಲ್ಲೆ ಮಾಡಿದ್ದಾನೆ. ಈ ವೇಳೆ ಆತನನ್ನು ಉಳಿದವರ ಸಹಾಯದಿಂದ ಹಿಡಿದು ವಿಚಾರಿಸಿದಾಗ ಅಪರಿಚಿತ ವ್ಯಕ್ತಿ ಕಡಬ ಪೊಲೀಸ್ ಠಾಣೆಯ ಹೆಚ್.ಸಿ.ರಾಜು ನಾಯ್ಕ್ ಎಂದು ತಿಳಿದುಬಂದಿದೆ. ಸದ್ರಿ ರಾಜು ನಾಯ್ಕ ತಡರಾತ್ರಿ ಮನೆಯೊಳಗೆ ಅಕ್ರಮ ಪ್ರವೇಶ ಮಾಡಿ, ಮನೆಯ ಸದಸ್ಯರಿಗೆ ಕೈಯಿಂದ ಹಲ್ಲೆ ನಡೆಸಿದ ಬಗ್ಗೆ ಬಾಬು ಗೌಡ ಅವರು ಕಡಬ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ದೂರಿನ ಹಿನ್ನೆಲೆಯಲ್ಲಿ…
Author: main-admin
ವರ್ಷಂಪ್ರತಿ ಆಯೋಜಿಸುವ ವಿಶೇಷ ಪರಿಕಲ್ಪನೆಯ ‘ಸಾಂತ್ವನದ ಸಂಚಾರ’ ಕಾರ್ಯಕ್ರಮವು ಡಿಸೆಂಬರ್ 7ರ ರವಿವಾರ ನಡೆಯಲಿದೆ ಎಂದು ಕೋಸ್ಟಲ್ ಫ್ರೆಂಡ್ಸ್ ಅಧ್ಯಕ್ಷ ಷರೀಫ್ ಅಬ್ಬಾಸ್ ವಳಾಲು ಹೇಳಿದ್ದಾರೆ. ಅವರು ಗುರುವಾರ ಮಧ್ಯಾಹ್ನ ಪಂಪ್ ವೆಲ್ ನಲ್ಲಿ ಖಾಸಗಿ ಹೊಟೇಲ್ ಹಾಲಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. 2023ರಲ್ಲಿ ಮೊದಲ ವರ್ಷದ ಸಾಂತ್ವನದ ಸಂಚಾರ’ (A Day with Bedridden) ಮತ್ತು 2024ರಲ್ಲಿಸಾಂತ್ವನದ ಸಂಚಾರ’ (A day with orphans) ಯಶಸ್ವಿಯಾಗಿ ನಡೆದಿತ್ತು. ಎರಡು ವರ್ಷಗಳ ಹಿಂದೆ ಹಾಸಿಗೆ ಪೀಡಿತರ ಜೊತೆ ಆರಂಭವಾದ ನಮ್ಮ ಸಾಂತ್ವನದ ಸಂಚಾರವು ಕಳೆದ ಬಾರಿ ಅನಾಥ ಮಕ್ಕಳ ಜೊತೆ ಮುಂದುವರಿದು ಈ ಬಾರಿ ವಿಶೇಷ ಚೇತನ ಮಕ್ಕಳ ಜೊತೆ ಸಾಗಲಿದೆ ಅಂದರು.ಇನ್ನು ಸಾಂತ್ವನದ ಸಂಚಾರ 3.O ( A Day with Special Kids)’ ಹೆಸರಿನ ಕಾರ್ಯಕ್ರಮ ಡಿಸೆಂಬರ್ 7ರ ಭಾನುವಾರ ಮಂಗಳೂರಿನಲ್ಲಿ ನಡೆಯಲಿದೆ. ದಕ್ಷಿಣ ಕನ್ನಡ ಜಿಲ್ಲೆಯ 100 ವಿಶೇಷ ಚೇತನ ಮಕ್ಕಳನ್ನು ಸಾಂತ್ವನದ ಸಂಚಾರಕ್ಕೆ ಆಯ್ದುಕೊಂಡಿದ್ದೇವೆ. (ಎರಡು…
ಕಾರ್ಕಳ : ಮದ್ಯವೆಂದು ವಿಷ ಪದಾರ್ಥ ಸೇವಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವನಪ್ಪಿದ ಘಟನೆ ಮುದ್ರಾಡಿಯ ಬಲ್ಲಾಡಿಯಲ್ಲಿ ಡಿ. 2ರಂದು ಸಂಭವಿಸಿದೆ. ಮೃತ ದುರ್ದೈವಿಯನ್ನು ಹೆಬ್ರಿ ಗ್ರಾಮದ ತಮ್ಮು ಪೂಜಾರಿ (78) ಎಂದು ಗುರುತಿಸಲಾಗಿದೆ. ತಮ್ಮು ಪೂಜಾರಿ ಅವರಿಗೆ ಮದ್ಯಪಾನದ ಅಭ್ಯಾಸವಿದ್ದು, ನ.20ರಂದು ಮಧ್ಯಾಹ್ನ ಮನೆಯಲ್ಲಿದ್ದ ವಾಹನದ ಬ್ರೇಕ್ ಪ್ಯೂಡ್ ಆಯಿಲ್ (ವಿಷ ಪದಾರ್ಥ)ನ್ನು ಮದ್ಯಪಾನವೆಂದು ಬಾವಿಸಿ ಸೇವಿಸಿದ್ದರು. ಅಸ್ವಸ್ಥಗೊಂಡಿದ್ದ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಡಿ. 2ರಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ
ಬೆಂಗಳೂರು: ಪೊಲೀಸರೇ ಅಪರಾಧ ಕೃತ್ಯಗಳನ್ನು ಎಸಗಿ ಇಲಾಖೆಗೆ ಮಸಿ ಬಳಿಯುತ್ತಿರುವ ಕೃತ್ಯಗಳು ಹೆಚ್ಚುತ್ತಿವೆ. ಈಗ ಮತ್ತೊಬ್ಬ ಪೊಲೀಸ್ ಸಿಬ್ಬಂದಿಯ ಮೇಲೆ ಕಳ್ಳತನ ಆರೋಪ ಬಂದಿದೆ. ನಾಚೆಕೆಗೇಡಿನ ವಿಚಾರವೆಂದರೆ ಪೊಲೀಸ್ ಆಯುಕ್ತರ ಕಚೇರಿಯ ಆವರಣದಲ್ಲಿಯೇ ಈ ಕಳ್ಳತನ ನಡೆದಿದೆ. ಸೈಬರ್ ಪ್ರಕರಣದ ಆರೋಪಿಯನ್ನು ವಿಚಾರಣೆಗೆ ಕರೆತಂದಾಗ ಆತನ ಕಾರಿನಲ್ಲಿದ್ದ 11 ಲಕ್ಷ ರೂ.ತುಂಬಿದ್ದ ಬ್ಯಾಗನ್ನು ಹೆಡ್ಕಾನ್ಸ್ಟೆಬಲ್ ಜಬೀವುಲ್ಲಾ ಕದ್ದಿರುವ ಆರೋಪ ಕೇಳಿಬಂದಿದೆ. ಹಣ ಕಳ್ಳತನ ಮಾಡಿ ಏನು ಗೊತ್ತೇ ಇಲ್ಲ ಎನ್ನುವಂತೆ ಜಬೀವುಲ್ಲಾ ಕೆಲಸ ಮಾಡುತ್ತಿದ್ದನಂತೆ. ಆರೋಪಿಯನ್ನು ಬಂಧಿಸಿದ್ದ ಇನ್ಸ್ಪೆಕ್ಟರ್ ಉಮೇಶ್ ಆತನನ್ನು ಜೈಲಿಗಟ್ಟಿತ್ತು. ಬಳಿಕ ಜಾಮೀನು ಪಡೆದು ಹೊರಬಂದ ಆರೋಪಿ ತನ್ನ ಕಾರಿನಲ್ಲಿ ಇದ್ದ ಹಣದ ಬ್ಯಾಗ್ ನಾಪತ್ತೆ ಆಗಿರುವುದನ್ನ ನೋಡಿ ಈ ಬಗ್ಗೆ ಸೈಬರ್ ಪೊಲೀಸರ ಬಳಿ ಪ್ರಶ್ನೆ ಮಾಡಿದ್ದಾನೆ. ಆರೋಪಿಯ ಪ್ರಶ್ನೆಗೆ ಗಾಬರಿಗೊಂಡು ಪರಿಶೀಲನೆ ಮಾಡಿದಾಗ ಕಾರಿನಲ್ಲಿದ್ದ ಹಣವನ್ನ ಜಬೀವುಲ್ಲಾ ತೆಗೆದುಕೊಂಡು ಹೋಗಿರುವುದು ಗೊತ್ತಾಗಿದೆ. ಸಿಸಿಟಿವಿ ಕ್ಯಾಮೆರಾದಲ್ಲಿ ಜಬೀವುಲ್ಲಾ ಹಣದ ಬ್ಯಾಗ್ ಕಳ್ಳತನ ಮಾಡಿರುವುದು ಪತ್ತೆಯಾಗಿದೆ. ಸುಮಾರು 11…
ಪುತ್ತೂರು: ಕಬಕ ಗ್ರಾಮದ ಮುರ ಪ್ರದೇಶದಲ್ಲಿರುವ ರೈಲ್ವೇ ಸೇತುವೆ ಬಳಿ ವ್ಯಕ್ತಿಯೋರ್ವ ಮಾದಕವಸ್ತು ಮಾರಾಟ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ಆತನಿಂದ 10 ಗ್ರಾಂ ಎಂಡಿಎಂಎ ನಿಷೇಧಿತ ಮಾದಕವಸ್ತು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನು ಪುತ್ತೂರು ಕಬಕ ನಿವಾಸಿ ಉಮ್ಮರ್ ಫಾರೂಕ್ (41) ಎಂದು ಗುರುತಿಸಲಾಗಿದ್ದು, ಆತನ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ NDPS ಕಾಯ್ದೆಯ ಕಲಂ 8(C), 22(b) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ರೈಲ್ವೇ ಸೇತುವೆ ಬಳಿ ವ್ಯಕ್ತಿಯೋರ್ವ ಮಾದಕವಸ್ತು ಮಾರಾಟ ಮಾಡುತ್ತಿದ್ದ ಬಗ್ಗೆ ಬಂದ ಮಾಹಿತಿಯ ಮೇರೆಗೆ, ಪುತ್ತೂರು ನಗರ ಪೊಲೀಸ್ ಠಾಣೆಯ ಉಪನಿರೀಕ್ಷಕ ಆಂಜನೇಯ ರೆಡ್ಡಿ ಮತ್ತು ಸಿಬ್ಬಂದಿಗಳು ದಾಳಿ ನಡೆಸಿದ್ದಾರೆ. ಘಟನಾ ಸ್ಥಳದಲ್ಲಿ ಶಂಕಿತನನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಹಾಗೂ ಆತನ ದ್ವಿಚಕ್ರ ವಾಹನವನ್ನು ಪರಿಶೀಲಿಸಿದಾಗ, ಮಾರಾಟ ಉದ್ದೇಶಕ್ಕಾಗಿ ಅಕ್ರಮವಾಗಿ ಇಟ್ಟುಕೊಂಡಿದ್ದ 10 ಗ್ರಾಂ ಎಂಡಿಎಂಎ ನಿಷೇಧಿತ ಮಾದಕವಸ್ತು ಪತ್ತೆಯಾಗಿದೆ. ಪ್ರಾಥಮಿಕ ವಿಚಾರಣೆ ವೇಳೆ ಆರೋಪಿಯ ವಿರುದ್ಧ ಜಿಲ್ಲೆಯಲ್ಲಿ ವಿವಿಧ ಪೊಲೀಸ್ ಠಾಣೆಗಳಲ್ಲಿ ಈಗಾಗಲೇ…
ಮಂಗಳೂರು: ದ.ಕ.ಜಿಲ್ಲಾ ಕಾರಾಗೃಹದಲ್ಲಿರುವ ವಿಚಾರಣಾಧೀನ ಕೈದಿಯೊಬ್ಬನಿಗೆ ನೀಡಲು ತಂದಿದ್ದ ಎಂಡಿಎಂಎ ಮಾದರಿ ಪುಡಿ ಸಹಿತ ಒಬ್ಬನನ್ನು ಪೊಲೀಸರು ವಶಕ್ಕೆ ಪಡೆದು ಬರ್ಕೆ ಠಾಣೆಯ ಪೊಲೀಸರಿಗೊಪ್ಪಿಸಿದ್ದಾರೆ. ಕಾರಾಗೃಹದ ಅಧೀಕ್ಷಕ ಶರಣಬಸಪ್ಪ ನೀಡಿದ ದೂರಿನಂತೆ ಆರೋಪಿ ಉರ್ವಸ್ಟೋರ್ ನಿವಾಸಿ ಆಶಿಕ್ ಎಂಬಾತನನ್ನು ಬರ್ಕೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ವಿಚಾರಣಾಧೀನ ಕೈದಿ ಅನ್ವಿತ್ ಎಂಬಾತನನ್ನು ಭೇಟಿ ಮಾಡಲು ಸೋಮವಾರ ಮಧ್ಯಾಹ್ನ ಕಾರಾಗೃಹಕ್ಕೆ ಆಶಿಕ್ ಬಂದಿದ್ದ. ಕೈದಿಗೆ ನೀಡಲು ತಂದಿದ್ದ ಸಾಮಗ್ರಿಗಳನ್ನು ಪರಿಶೀಲನೆ ನಡೆಸಿದಾಗ ಟೂತ್ಪೇಸ್ಟ್ ಒಳಭಾಗದಲ್ಲಿ ಅನುಮಾನಾಸ್ಪದ ವಸ್ತುಗಳು ಇರುವುದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಹಾಯಕ ಕಮಾಂಡೆಂಟ್ ಅದನ್ನು ಪರಿಶೀಲಿಸಿದಾಗ ಎಂಡಿಎಂಎನಂತೆ ಕಾಣುವ ಬಿಳಿ ಬಣ್ಣದ ಹರಳಿನಂತಿರುವ ಅನುಮಾನಾಸ್ಪದ ಪುಡಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಆಶಿಕ್ ಬಳಿ ವಿಚಾರಿಸಿದಾಗ ಕಾರಾಗೃಹದ ಮುಂಭಾಗದ ಜೆರಾಕ್ಸ್ ಅಂಗಡಿ ಬಳಿ ವ್ಯಕ್ತಿಯೊಬ್ಬ ಕೆಲವು ಬೇಕರಿ ತಿಂಡಿಗಳನ್ನು ನೀಡಲಿದ್ದು, ಅದನ್ನು ಅನ್ವಿತ್ಗೆ ನೀಡುವಂತೆ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿರುವ ಸಚಿನ್…
ಶಿವಗಿರಿ ಮಠ ವರ್ಕಲಾ, ಮಂಗಳೂರು ವಿಶ್ವವಿದ್ಯಾನಿಲಯದ ಶ್ರೀ ನಾರಾಯಣ ಗುರು ಅಧ್ಯಯನ ಪೀಠ ಇದರ ಆಶ್ರಯದಲ್ಲಿ ಶತಮಾನದ ಪ್ರಸ್ತಾನ ಶ್ರೀ ನಾರಾಯಣ ಗುರು-ಮಹಾತ್ಮ ಗಾಂಧಿ ಐತಿಹಾಸಿಕ ಸಂವಾದ ಶತಮಾನೋತ್ಸವ, ಶ್ರೀ ಗುರುವಿನ ಮಹಾಸಮಾಧಿ ಶತಾಬ್ದಿ ಸರ್ವಮತ ಸಮ್ಮೇಳನ, ಯತಿಪೂಜೆ ಕಾರ್ಯಕ್ರಮವು ಕೊಣಾಜೆಯ ಮಂಗಳಗಂಗೋತ್ರಿಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಮುಖ್ಯ ಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ವಿಧಾನ ಸಭೆಯ ಸ್ಪೀಕರ್ ಯು.ಟಿ.ಖಾದರ್, ಗೃಹ ಸಚಿವ ಡಾ.ಜಿ.ಪರಮೇಶ್ವರ, ಸಚಿವರಾದ ದಿನೇಶ್ ಗುಂಡೂ ರಾವ್, ಸಚಿರಾದ ಝಮೀರ್ ಅಹ್ಮದ್, ಸತೀಶ್ ಜಾರಕಿಹೊಳಿ , ಮಾಜಿ ಕೇಂದ್ರ ಸಚಿವ ಬಿ.ಜನಾರ್ದನ ಪೂಜಾರಿ, ಕೇಂದ್ರ ಸಂಘಟನಾ ಸಮಿತಿಯ ರಕ್ಷಣಾಧಿಕಾರಿ ಶ್ರೀ ಶಿವಗಿರಿ ಮಠದ ಶ್ರೀ ಜ್ಞಾನತೀರ್ಥ ಸ್ವಾಮೀಜಿ, ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಮತ್ತಿತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಮಂಗಳೂರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮುಖಂಡರು ಸ್ವಾಗತಿಸಿದರು. ಈ ವೇಳೆ ಮುಖ್ಯಮಂತ್ರಿ ಪೊಲೀಸರಿಂದ ಗೌರವ ರಕ್ಷೆ ಸ್ವೀಕರಿಸಿದರು. ಗೃಹ ಸಚಿವ ಡಾ.ಜಿ.ಪರಮೇಶ್ವರ್, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮಾಜಿ ಸಚಿವ ಬಿ.ರಮಾನಾಥ ರೈ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ, ಐವನ್ ಡಿಸೋಜ ಮತ್ತಿತರರು ಉಪಸ್ಥಿತರಿದ್ದರು. ಶಿವಗಿರಿ ಮಠ, ವರ್ಕಲ ಮತ್ತು ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠ, ಮಂಗಳೂರು ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ಕೊಣಾಜೆಯ ಮಂಗಳೂರು ವಿಶ್ವವಿದ್ಯಾನಿಲಯ ಕ್ಯಾಂಪಸ್ ನಲ್ಲಿ ನಡೆಯಲಿರುವ ಶ್ರೀ ನಾರಾಯಣ ಗುರು-ಗಾಂಧೀಜಿ ಸಂವಾದ ಶತಮಾನೋತ್ಸವದ ಪ್ರಯುಕ್ತ ಆಯೋಜಿಸಿರುವ ಶ್ರೀ ಮಹಾಗುರುವಿನ ಮಹಾ ಸಮಾಧಿ ಶತಾಬ್ದಿ ಸರ್ವಮತ ಸಮ್ಮೇಳನ ಶತಮಾನೋತ್ಸವ ಕಾರ್ಯಕ್ರಮ ಸಹಿತ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಲುವಾಗಿ ಮುಖ್ಯಮಂತ್ರಿ ಮಂಗಳೂರಿಗೆ ಆಗಮಿಸಿದ್ದಾರೆ.
ಮಂಗಳೂರು: ದ.ಕ. ಜಿಲ್ಲಾಡಳಿತವು, ಸ್ಥಳೀಯ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ, ಸಾಂಸ್ಕೃತಿಕ, ಕ್ರೀಡಾ ಮತ್ತು ಮನರಂಜನಾ ಚಟುವಟಿಕೆಗಳ ಸಮಾಗಮವಾದ ‘ಕರಾವಳಿ ಉತ್ಸವ 2025-26’ ಅನ್ನು ಡಿ.20ರಿಂದ ಜ.4ರವರೆಗೆ ಆಯೋಜಿಸಲು ಸಜ್ಜಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರಾವಳಿ ಉತ್ಸವ ಮೈದಾನ, ಕದ್ರಿ ಪಾರ್ಕ್ ಮತ್ತು ನಗರದ ಕಡಲತೀರಗಳಲ್ಲಿ ವಿಜೃಂಭಣೆಯಿಂದ ಜರುಗಲಿದೆ ಎಂದು ಅವರು ಹೇಳಿದರು. ಡಿ.20ರಂದು ಸಭಾಧ್ಯಕ್ಷರು, ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಜಿಲ್ಲೆಯ ಶಾಸಕರು, ವಿಧಾನ ಪರಿಷತ್ನ ಶಾಸಕರು, ವಿವಿಧ ಅಕಾಡಮಿ, ನಿಗಮ ಮತ್ತು ಮಂಡಳಿಗಳ ಅಧ್ಯಕ್ಷರ ಉಪಸ್ಥಿತಿಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಕರಾವಳಿ ಉತ್ಸವ ಮೈದಾನದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತದೆ ಎಂದು ವಿವರಿಸಿದರು. ಕರಾವಳಿ ಉತ್ಸವ ಮೈದಾನದಲ್ಲಿ ವಿವಿಧ ಮಳಿಗೆಗಳು, ಪ್ರದರ್ಶನಗಳು ಮತ್ತು ಅಮ್ಯೂಸ್ಮೆಂಟ್ ಪಾರ್ಕ್ ಸಾರ್ವಜನಿಕರಿಗಾಗಿ ಲಭ್ಯವಿರಲಿದೆ. ಡಿ.20ರಿಂದ ಜ.4ರವರೆಗೆ ಪ್ರತೀ ಶನಿವಾರ ಮತ್ತು ರವಿವಾರ ಕರಾವಳಿ ಉತ್ಸವ ಮೈದಾನದ ವೇದಿಕೆಯಲ್ಲಿ ಕರಾವಳಿಯ ಕಲೆ ಮತ್ತು ಸಾಂಸ್ಕೃತಿಕ ಪ್ರದರ್ಶನಗಳನ್ನು ಆಯೋಜಿಸಲಾಗಿದೆ. ಜ.3 ಮತ್ತು 4ರಂದು…
ಉಡುಪಿಯ ಒಳಕಾಡು ಮನೆಯೊಂದರಿಂದ ಚಿನ್ನಾಭರಣ ಕಳವುಗೈದ ಆರೋಪಿಯನ್ನು ಉಡುಪಿ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕುಕ್ಕಿಕಟ್ಟೆ ನಿವಾಸಿ ಸುಕೇಶ್ ನಾಯ್ಕ್ (37) ಬಂಧಿತ ಆರೋಪಿ. ಡಿ.30ರಂದು ಶೈಲಾ ವಿಲ್ಹೆಲ್ ಮೀನಾ ಎಂಬವರ ಮನೆಯಲ್ಲಿ ಸುಮಾರು 548.31 ಗ್ರಾಂ ಚಿನ್ನಾಭರಣ ಹಾಗೂ ಮೊಬೈಲ್ ಫೋನ್ ನ್ನು ಕಳವು ಮಾಡಲಾಗಿತ್ತು. ಈ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆರೋಪಿಯನ್ನು ಉಡುಪಿ ನಗರದ ಕಿನಿಮೂಲ್ಕಿ ಹಿರೇನ್ ಬಾರ್ ಬಳಿ ಬಂಧಿಸಲಾಗಿದೆ. ಬಂಧಿತನಿಂದ 65,79,720 ರೂ ಮೌಲ್ಯದ ಸೊತ್ತುಗಳನ್ನು ಸ್ವಾಧಿನಪಡಿಸಿಕೊಳ್ಳಲಾಗಿದೆ. ಆರೋಪಿಯ ವಿರುದ್ದ ಈಗಾಗಲೇ ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 11 ಮನೆಕಳ್ಳತನ ಪ್ರಕರಣಗಳು ದಾಖಲಾಗಿವೆ. ಅದರಲ್ಲಿ ಉಡುಪಿ ನಗರ ಠಾಣೆಯಲ್ಲಿ 5 ಪ್ರಕರಣಗಳು ದಾಖಲಾಗಿದ್ದು 4 ಪ್ರಕರಣಗಳಲ್ಲಿ ಶಿಕ್ಷೆಯಾಗಿರುತ್ತದೆ. ಹಿರಿಯಡ್ಕ ಠಾಣೆಯಲ್ಲಿ 3 ಪ್ರಕರಣಗಳು ದಾಖಲಾಗಿದ್ದು ಅದರಲ್ಲಿ 1 ಪ್ರಕರಣದಲ್ಲಿ ಶಿಕ್ಷೆಯಾಗಿರುತ್ತದೆ, ಬ್ರಹ್ಮಾವರ ಠಾಣೆಯಲ್ಲಿ 2 ಪ್ರಕರಣ ದಾಖಲಾಗಿರುತ್ತದೆ ಹಾಗೂ ಮಣಿಪಾಲ ಠಾಣೆಯಲ್ಲಿ 1 ಪ್ರಕರಣವು ನ್ಯಾಯಲಯದ ವಿಚಾರಣೆಯಲ್ಲಿರುತ್ತದೆ.










