Author: main-admin

ಬೆಂಗಳೂರು: ನಗರದಲ್ಲಿ ಲಿವಿನ್ ರಿಲೇಷನ್​ಶಿಪ್​ನಲ್ಲಿದ್ದವರು ಸಾವಿಗೆ ಶರಣಾಗುವ ಪ್ರಕರಣಗಳು ಇತ್ತೀಚೆಗೆ ಹೆಚ್ಚಾದಂತಿದೆ. ಶ್ರೀಗಂಧನಗರದಲ್ಲಿಯೂ ಇಂತದ್ದೇ ಘಟನೆ ನಡೆದಿದ್ದು, ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಮೃತನನ್ನು ಚಿತ್ರದುರ್ಗ ಮೂಲದ ತಿಪ್ಪೇಸ್ವಾಮಿ (28) ಎಂದು ಗುರುತಿಸಲಾಗಿದೆ. ನಡೆದಿದ್ದೇನು? ತಿಪ್ಪೇಸ್ವಾಮಿ ಹಾಗೂ ದಾವಣಗೆರೆ ಮೂಲದ ಮಹಿಳೆಯೊಬ್ಬರಿಗೆ ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾಗಿತ್ತು. ಈಕೆ ರೀಲ್ಸ್ ಮಾಡುವುದರಲ್ಲಿ ಸಕ್ರಿಯಳಾಗಿದ್ದು, ಇಬ್ಬರೂ ಒಂದೇ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದರು. ಪತಿ ಮತ್ತು ಇಬ್ಬರು ಮಕ್ಕಳನ್ನು ಬಿಟ್ಟು ಬಂದಿದ್ದ ಈಕೆ, ಕಳೆದ ಎರಡು ತಿಂಗಳಿನಿಂದ ತಿಪ್ಪೇಸ್ವಾಮಿ ಜೊತೆ ಶ್ರೀಗಂಧನಗರದ ಬಾಡಿಗೆ ಮನೆಯಲ್ಲಿ ಲಿವಿನ್ ರಿಲೇಷನ್​ಶಿಪ್​ನಲ್ಲಿದ್ದಳು. ಮನೆ ಮಾಲೀಕರಿಗೆ ತಾವು ದಂಪತಿಗಳೆಂದು ಸುಳ್ಳು ಹೇಳಿ ವಾಸವಿದ್ದರು ಎನ್ನಲಾಗಿದೆ. ಕಿರುಕುಳದ ಆರೋಪ ನನ್ನನ್ನು ಮೇಂಟೇನ್ ಮಾಡಲು ನಿನ್ನಿಂದ ಸಾಧ್ಯವಿಲ್ಲ, ನನ್ನನ್ನು ಬಿಟ್ಟು ಹೋಗು ಎಂದು ಮಹಿಳೆ ತಿಪ್ಪೇಸ್ವಾಮಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಇದೇ ಕಾರಣಕ್ಕೆ ಮನನೊಂದ ತಿಪ್ಪೇಸ್ವಾಮಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತನ ಕುಟುಂಬಸ್ಥರು ಮಹಿಳೆಯ ಕಿರುಕುಳವೇ ಸಾವಿಗೆ…

Read More

ಯಾದಗಿರಿ: ಜಿಲ್ಲೆಯಲ್ಲಿ ಇನ್ಸ್‌ಪೆಕ್ಟರ್ ಒಬ್ಬರು​ ಬರೋಬ್ಬರಿ ಒಂದು ಲಕ್ಷ ರೂ. ಲಂಚ ಪಡೆಯುವಾಗ ರೆಡ್​ ಹ್ಯಾಂಡೆಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಗುರುಮಠಕಲ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ವೀರಣ್ಣ ದೊಡ್ಡಮನಿ ಕ್ರಿಮಿನಲ್ ಪ್ರಕರಣವೊಂದರ ಆರೋಪಿಗಳನ್ನು ಬಂಧಿಸದಿರಲು ಮತ್ತು ಪ್ರಕರಣದಿಂದ ಕೈಬಿಡಲು ಹಣಕ್ಕೆ ಬೇಡಿಕೆಯಿಟ್ಟಿದ್ದ ಸಂದರ್ಭದಲ್ಲಿ ಈ ದಾಳಿ ನಡೆದಿದೆ. ನಡೆದಿದ್ದೇನು? ಗುರುಮಠಕಲ್ ತಾಲೂಕಿನ ಗೋಪಾಳಪುರ ಗ್ರಾಮದ ಆನಂದ್ ಎಂಬುವವರ ವಿರುದ್ಧ ಜಾತಿ ನಿಂದನೆ ಪ್ರಕರಣವೊಂದು ದಾಖಲಾಗಿತ್ತು. ಈ ಕೇಸ್​ನಲ್ಲಿ ಅವರನ್ನು ಬಂಧಿಸದೆ ಇರಲು ಮತ್ತು ಇನ್ನೊಂದು ಕೇಸ್‌ನಲ್ಲಿ ಅವರ ಹೆಸರನ್ನು ಕೈಬಿಡಲು ಪಿಐ ವೀರಣ್ಣ ದೊಡ್ಡಮನಿ ಅವರು ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎಂದು ಆನಂದ್ ದೂರು ನೀಡಿದ್ದಾರೆ. ಈ ಎರಡು ಪ್ರಕರಣಗಳ ಇತ್ಯರ್ಥಕ್ಕಾಗಿ ಒಟ್ಟು ಒಂದು ಲಕ್ಷ ರೂಪಾಯಿ ಹಣವನ್ನು ಪಡೆಯುವ ಒಪ್ಪಂದವಾಗಿತ್ತು ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಅಧಿಕಾರಿ ಗುರುಮಠಕಲ್‌ನ ಪೊಲೀಸ್ ವಸತಿ ಗೃಹದಲ್ಲಿ ಆನಂದ್ ಅವರಿಂದ ಒಂದು ಲಕ್ಷ ರೂಪಾಯಿ ಲಂಚದ ಹಣವನ್ನು…

Read More

ಕಲಬುರಗಿ: ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶಶಿಕಾಂತ್ ಅವರಿಗೆ ಅನಾಮಧೇಯ ವ್ಯಕ್ತಿಯೊಬ್ಬ ಆ್ಯಸಿಡ್ ದಾಳಿ ಮಾಡುವುದಾಗಿ ಬೆದರಿಕೆ ಪತ್ರ ಬರೆದಿದ್ದಾನೆ. 2024ರಲ್ಲಿ ನಡೆದ ಬಿಇಡಿ ಪರೀಕ್ಷೆಯ ಮೌಲ್ಯಮಾಪನದಲ್ಲಿ ನಡೆದಿದ್ದ ಭ್ರಷ್ಟಾಚಾರ ಮತ್ತು ಅಕ್ರಮಗಳನ್ನು ಕುಲಪತಿಗಳು ಪತ್ತೆಹಚ್ಚಿ ತನಿಖೆಗೆ ಆದೇಶಿಸಿದ ಹಿನ್ನೆಲೆಯಲ್ಲಿ ಈ ಬೆದರಿಕೆ ಹಾಕಲಾಗಿದೆ. ವಿಶ್ವವಿದ್ಯಾಲಯದ ಇತಿಹಾಸದಲ್ಲೇ ಕುಲಪತಿಗಳ ವಿರುದ್ಧ ಈ ಮಟ್ಟದ ಬೆದರಿಕೆ ಬಂದಿರುವುದು ಇದೇ ಮೊದಲಾಗಿದ್ದು, ಆತಂಕಕ್ಕೆ ಕಾರಣವಾಗಿದೆ. ಅಕ್ರಮಕ್ಕೆ ತಡೆಯೊಡ್ಡಿದ್ದೇ ಮುಳುವಾಯಿತೇ? ಕಳೆದ ಬಿಇಡಿ ಪರೀಕ್ಷೆಯ ಮೌಲ್ಯಮಾಪನದಲ್ಲಿ ದೊಡ್ಡ ಮಟ್ಟದ ಅಕ್ರಮ ನಡೆದಿರುವುದು ವಿವಿಯ ಆಂತರಿಕ ಸಮಿತಿಯ ವರದಿಯಿಂದ ದೃಢಪಟ್ಟಿತ್ತು. ಕುಲಪತಿಗಳು ಈ ವಿಷಯವನ್ನು ತಕ್ಷಣವೇ ಸರ್ಕಾರ ಮತ್ತು ರಾಜ್ಯಪಾಲರ ಗಮನಕ್ಕೆ ತಂದಿದ್ದರು. ರಾಜ್ಯಪಾಲರ ಆದೇಶದಂತೆ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖಾ ಸಮಿತಿ ರಚನೆಯಾಗಿದ್ದು, ಸಮಿತಿಯ ಸೂಚನೆಯ ಮೇರೆಗೆ ಸದ್ಯ ಮರುಮೌಲ್ಯಮಾಪನ ಪ್ರಕ್ರಿಯೆ ನಡೆಯುತ್ತಿದೆ. ಈ ಮರುಮೌಲ್ಯಮಾಪನದಿಂದಾಗಿ ಅಕ್ರಮವಾಗಿ ಅಂಕ ಪಡೆದವರಿಗೆ ಸಂಕಷ್ಟ ಎದುರಾಗಿದೆ. ಬೆದರಿಕೆ ಪತ್ರದಲ್ಲೇನಿತ್ತು? ‘2 ಲಕ್ಷ ರೂಪಾಯಿ ನೀಡಿ ಬಿಇಡಿ ಪ್ರವೇಶ ಪಡೆದು ಫಲಿತಾಂಶಕ್ಕಾಗಿ ಕಾಯುತ್ತಿದ್ದೇವೆ.…

Read More

ನವದೆಹಲಿ: ಭಾರತದ ರಕ್ಷಣಾ ಪಡೆಗಳ ನೂತನ ಮುಖ್ಯಸ್ಥರನ್ನಾಗಿ ಲೆಫ್ಟಿನೆಂಟ್ ಜನರಲ್ ಎನ್.ಎಸ್ ರಾಜಾ ಸುಬ್ರಮಣಿ (ನಿವೃತ್ತ) ಅವರನ್ನು, ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ವೈಸ್ ಅಡ್ಮಿರಲ್ ಕೃಷ್ಣ ಸ್ವಾಮಿನಾಥನ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಲೆಫ್ಟಿನೆಂಟ್ ಜನರಲ್ ಎನ್.ಎಸ್ ರಾಜಾ ಸುಬ್ರಮಣಿಪ್ರಸ್ತುತ ಸಿಡಿಎಸ್ ಜನರಲ್ ಅನಿಲ್ ಚೌಹಾಣ್ ಅವರ ಅವಧಿ ಮೇ 30 ಕ್ಕೆ ಮುಕ್ತಾಯಗೊಳ್ಳಲಿದೆ. ಹೀಗಾಗಿ ಜನರಲ್ ಅನಿಲ್ ಚೌಹಾಣ್ ಅವರ ಸ್ಥಾನವನ್ನು ರಾಜಾ ಸುಬ್ರಮಣಿ ವಹಿಸಿಕೊಳ್ಳಲಿದ್ದಾರೆ. ಲೆಫ್ಟಿನೆಂಟ್ ಜನರಲ್ ಸುಬ್ರಮಣಿ ಅವರು ಪ್ರಸ್ತುತ ರಾಷ್ಟ್ರೀಯ ಭದ್ರತಾ ಮಂಡಳಿಯಲ್ಲಿ ಮಿಲಿಟರಿ ಸಲಹೆಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಳೆದ ವರ್ಷ ಜುಲೈ 31 ರಂದು ಅವರು ಸೇನಾ ಸಿಬ್ಬಂದಿಯ ಉಪ ಮುಖ್ಯಸ್ಥರಾಗಿ ಸೇನೆಯಿಂದ ನಿವೃತ್ತರಾಗಿದ್ದರು.ಕಳೆದ ವರ್ಷ ಸೆಪ್ಟೆಂಬರ್ 1 ರಂದು ಸುಬ್ರಮಣಿ ಅವರು ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯದಲ್ಲಿ ಮಿಲಿಟರಿ ಸಲಹೆಗಾರರಾಗಿ ಜವಾಬ್ದಾರಿ ವಹಿಸಿಕೊಂಡಿದ್ದರು. ಅದಕ್ಕೂ ಮೊದಲು, ಜುಲೈ 2024 ರಿಂದ ಜುಲೈ 2025 ರವರೆಗೆ ಭೂಸೇನೆಯ ಉಪಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದ್ದರು. ಅಷ್ಟೇ ಅಲ್ಲದೆ, ಮಾರ್ಚ್…

Read More

ಛತ್ತರ್ಪುರ್ (ಮಧ್ಯಪ್ರದೇಶ) : ಇದು ಸಿನೆಮಾ ಕಥೆಯಲ್ಲ, ಅಪ್ಪಟ ಸತ್ಯ ಘಟನೆ. ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸಿ ಬಿಡುಗಡೆಯಾದ ವ್ಯಕ್ತಿ ಮತ್ತು ಅದೇ ಜೈಲಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಅಧಿಕಾರಿಯೊಬ್ಬರು ಈಗ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಸತ್ನಾ ಜೈಲಿನ ಉಪ ಜೈಲರ್ ಫಿರೋಜಾ ಖಾಟೂನ್ ಮತ್ತು ಮಾಜಿ ಕೈದಿ ಧರ್ಮೇಂದ್ರ ಸಿಂಗ್ ಅವರ ಈ ವಿವಾಹವು ಸಾಮಾಜಿಕ ಸಾಮರಸ್ಯದ ಹೊಸ ಚರ್ಚೆಗೆ ನಾಂದಿ ಹಾಡಿದೆ. ಸತ್ನಾ ಸೆಂಟ್ರಲ್ ಜೈಲಿನಲ್ಲಿ ಫಿರೋಜಾ ಖಾಟೂನ್ ಅವರು ವಾರಂಟ್ ಶಾಖೆಯ ಉಸ್ತುವಾರಿಯಾಗಿದ್ದರು. ಇದೇ ವೇಳೆ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಧರ್ಮೇಂದ್ರ ಸಿಂಗ್, ಜೈಲಿನ ವಾರಂಟ್ ವಿಭಾಗದ ಕೆಲಸಗಳಲ್ಲಿ ಸಹಾಯ ಮಾಡುತ್ತಿದ್ದರು. ಕೆಲಸದ ನಡುವೆ ಬೆಳೆದ ಇವರ ಸ್ನೇಹ ಕಾಲಕ್ರಮೇಣ ಪ್ರೀತಿಯಾಗಿ ಅರಳಿತು. ಧರ್ಮೇಂದ್ರ ಅವರ ಉತ್ತಮ ನಡವಳಿಕೆಯನ್ನು ಪರಿಗಣಿಸಿ 2022 ರಲ್ಲಿ ಅವರನ್ನು ಅವಧಿಗೂ ಮುನ್ನವೇ ಜೈಲಿನಿಂದ ಬಿಡುಗಡೆ ಮಾಡಲಾಗಿತ್ತು. ಜೈಲಿನಿಂದ ಹೊರಬಂದ ನಂತರವೂ ಇಬ್ಬರ ನಡುವಿನ ಸಂಬಂಧ ಗಟ್ಟಿಯಾಗಿಯೇ ಇತ್ತು.…

Read More

ಕೋಲ್ಕತ್ತಾ : ಪಶ್ಚಿಮ ಬಂಗಾಳದ ಬಿಜೆಪಿ ನಾಯಕ, ಸಿಎಂ ರೇಸ್​​​ನಲ್ಲಿ ಮುಂಚೂಣಿಯಲ್ಲಿರುವ ಸುವೇಂದು ಅಧಿಕಾರಿ ಆಪ್ತ ಕಾರ್ಯದರ್ಶಿ ಚಂದ್ರನಾಥ್ ರಥ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಿಗಿಲು ಹುಟ್ಟಿಸುವ ಮಾಹಿತಿ ಬಯಲಾಗಿದೆ. ಈ ಹತ್ಯೆಯನ್ನು ಯೋಜಿತವಾಗಿ ನಡೆಸಲು ಬಿಹಾರದಿಂದ ಶಾರ್ಪ್ ಶೂಟರ್‌ಗಳನ್ನು ಕರೆಸಲಾಗಿತ್ತು ಹಾಗೂ ಬರೋಬ್ಬರಿ 40 ಲಕ್ಷ ರೂ.ಗಳ ಸುಪಾರಿ ನೀಡಲಾಗಿತ್ತು ಎಂಬ ವಿಷಯ ಪ್ರಾಥಮಿಕ ತನಿಖೆ ವೇಳೆ ಗೊತ್ತಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಯೋಜಿತ ಸಂಚು ಮತ್ತು ಹತ್ಯೆ ಪೊಲೀಸ್ ಮೂಲಗಳ ಪ್ರಕಾರ, ಚಂದ್ರನಾಥ್ ರಥ್ ಅವರ ಚಲನವಲನದ ಮೇಲೆ ಹಂತಕರು ಕಳೆದ ಐದು ದಿನಗಳಿಂದ ಹದ್ದಿನ ಕಣ್ಣಿಟ್ಟಿದ್ದರು. ಜೂನ್ 5ರ ಬುಧವಾರ ರಾತ್ರಿ ಸುಮಾರು 10 ಗಂಟೆಗೆ ಚಂದ್ರನಾಥ್ ಅವರು ಜೆಸೋರ್ ರಸ್ತೆಯ ಮೂಲಕ ಹಿಂತಿರುಗುತ್ತಿದ್ದಾಗ, ಮಳೆಯಿಂದಾಗಿ ರಸ್ತೆಯಲ್ಲಿ ನೀರು ನಿಂತಿದ್ದ ಕಾರಣ ಅವರ ಕಾರಿನ ವೇಗ ಕಡಿಮೆಯಾಗಿತ್ತು. ಇದನ್ನೇ ಕಾಯುತ್ತಿದ್ದ ಇಬ್ಬರು ಬೈಕ್ ಸವಾರರು, ಕಾರಿನ ಕಿಟಕಿಯ ಬಳಿ ಬಂದು ಅತಿ ಸಮೀಪದಿಂದ ಹಲವು ಸುತ್ತು ಗುಂಡಿನ ದಾಳಿ ನಡೆಸಿ…

Read More

ನವದೆಹಲಿ: ಭಾರತದಲ್ಲಿ ಬಂಗಾರವನ್ನು ಎಂದೆಂದಿಗೂ ಸುರಕ್ಷಿತ ಹೂಡಿಕೆಯ ಪ್ರತೀಕವಾಗಿ ನೋಡಲಾಗುತ್ತದೆ. ಜಾಗತಿಕ ಆರ್ಥಿಕ ಅನಿಶ್ಚಿತತೆ, ಯುದ್ಧ ಭೀತಿ ಮತ್ತು ಕರೆನ್ಸಿ ಮೌಲ್ಯದ ಏರಿಳಿತಗಳ ನಡುವೆ ಚಿನ್ನದ ಮೇಲಿನ ವಿಶ್ವಾಸ ಮತ್ತಷ್ಟು ಗಟ್ಟಿಯಾಗುತ್ತಿರುವ ಸಂದರ್ಭದಲ್ಲಿ, ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಕೂಡ ಮಹತ್ವದ ಹೆಜ್ಜೆ ಇಟ್ಟಿದೆ. ವಿದೇಶಗಳಲ್ಲಿ ಸಂಗ್ರಹಿಸಲಾಗಿದ್ದ ಚಿನ್ನವನ್ನು ಭಾರತಕ್ಕೆ ಮರಳಿ ತರಿಸುವ ಪ್ರಕ್ರಿಯೆಯನ್ನು ಆರ್‌ಬಿಐ ವೇಗಗೊಳಿಸಿದ್ದು, ದೇಶದ ಒಟ್ಟು ಚಿನ್ನದ ನಿಕ್ಷೇಪ ಇದೀಗ 880 ಮೆಟ್ರಿಕ್ ಟನ್‌ಗೂ ಅಧಿಕ ಮಟ್ಟ ತಲುಪಿದೆ. ಇದು ಬಂಗಾರ ಪ್ರಿಯರಿಗೆ ಮಾತ್ರವಲ್ಲ, ದೇಶದ ಆರ್ಥಿಕ ಭದ್ರತೆಗೆ ಸಹ ದೊಡ್ಡ ಸಂದೇಶವಾಗಿ ಪರಿಣಮಿಸಿದೆ. ಆರ್‌ಬಿಐ ಬಿಡುಗಡೆ ಮಾಡಿದ ಅರ್ಧವಾರ್ಷಿಕ ವರದಿ ಪ್ರಕಾರ, ಮಾರ್ಚ್ 2026ರ ವೇಳೆಗೆ ಭಾರತದ ಒಟ್ಟು ಚಿನ್ನದ ಸಂಗ್ರಹ 880.52 ಮೆಟ್ರಿಕ್ ಟನ್‌ಗೆ ಏರಿಕೆಯಾಗಿದೆ. ಇದರಲ್ಲಿ 680.05 ಮೆಟ್ರಿಕ್ ಟನ್ ಚಿನ್ನವನ್ನು ಭಾರತದಲ್ಲೇ ಸಂಗ್ರಹಿಸಲಾಗಿದೆ. ಕಳೆದ ಕೆಲವು ವರ್ಷಗಳ ಅಂಕಿ-ಅಂಶಗಳನ್ನು ಗಮನಿಸಿದರೆ, ಆರ್‌ಬಿಐ ತನ್ನ ಚಿನ್ನವನ್ನು ದೇಶೀಯವಾಗಿ ಸಂಗ್ರಹಿಸುವತ್ತ ನಿರಂತರವಾಗಿ ಹೆಜ್ಜೆ ಹಾಕುತ್ತಿರುವುದು…

Read More

ಬೆಂಗಳೂರು: ಬೆಂಗಳೂರಿನಲ್ಲಿ ಹಣದ ಆಸೆಗಾಗಿ ಒಂಟಿ ಮಹಿಳೆಯೊಬ್ಬರನ್ನು ಉದ್ದೇಶಪೂರ್ವಕವಾಗಿ ಅಪಘಾತಕ್ಕೀಡು ಮಾಡಿ ಕೊಲೆ ಮಾಡಿರುವ ಸಿನಿಮೀಯ ಘಟನೆ ಬೆಳಕಿಗೆ ಬಂದಿದೆ. ಏಪ್ರಿಲ್ 21ರಂದು ಕುರುಬರಹಳ್ಳಿಯ ಪೈಪ್ ಲೇನ್ ರಸ್ತೆಯಲ್ಲಿ ನಡೆದ ಈ ಘಟನೆಯನ್ನು ಆರಂಭದಲ್ಲಿ ಕೇವಲ ‘ಅಪಘಾತ’ ಎಂದು ಬಿಂಬಿಸಲಾಗಿತ್ತು. ಆದರೆ ಮಹಾಲಕ್ಷ್ಮಿ ಲೇಔಟ್ ಪೊಲೀಸರ ಚುರುಕಿನ ತನಿಖೆಯಿಂದಾಗಿ ಇದು ಸುಲಿಗೆಗಾಗಿ ನಡೆದ ವ್ಯವಸ್ಥಿತ ಕೊಲೆ ಎಂಬುದು ಸಾಬೀತಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ರಾಕೇಶ್, ಮಂಜುನಾಥ್, ಚೇತನ್, ಪ್ರದೀಪ್ ಮತ್ತು ಯೋಹಾನ್ ಎಂಬ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಸಿನಿಮೀಯ ರೀತಿಯ ಸ್ಕೆಚ್ ಆರೋಪಿ ಚೇತನ್ ಎಂಬಾತ ವಿಜಯಲಕ್ಷ್ಮಿ ಎಂಬುವರ ಪರಿಚಯ ಹೊಂದಿದ್ದ ಹಾಗೂ ಅವರ ಬಳಿ ಸಾಲ ಪಡೆದಿದ್ದ. ಆಕೆಯ ಬಳಿ ಹೆಚ್ಚಿನ ಹಣ ಮತ್ತು ಚಿನ್ನಾಭರಣ ಇದೆ ಎಂದು ತಿಳಿದಿದ್ದ ಚೇತನ್, ಸ್ನೇಹಿತರೊಂದಿಗೆ ಸೇರಿ ಕಳ್ಳತನಕ್ಕೆ ಸಂಚು ರೂಪಿಸಿದ್ದ. ಪ್ಲಾನ್‌ನಂತೆ ಏಪ್ರಿಲ್ 21ರಂದು ವಿಜಯಲಕ್ಷ್ಮಿ ಅವರು ರಸ್ತೆಯಲ್ಲಿ ನಡೆದು ಹೋಗುತ್ತಿದ್ದಾಗ ರಾಕೇಶ್ ಎಂಬಾತ ಬೈಕ್‌ನಿಂದ ಜೋರಾಗಿ ಡಿಕ್ಕಿ ಹೊಡೆದಿದ್ದಾನೆ. ಕೂಡಲೇ ಅಲ್ಲಿಗೆ ಆಟೋದಲ್ಲಿ…

Read More

ಉಡುಪಿ:  ಬೀಗ ಹಾಕಿದ ಮನೆಗಳ ಸುರಕ್ಷತೆ ಮತ್ತು ಭದ್ರತೆಯನ್ನು ಹೆಚ್ಚಿಸುವ ಪ್ರಯತ್ನದಲ್ಲಿ, ಉಡುಪಿ ಜಿಲ್ಲಾ ಪೊಲೀಸರು “ಲಾಕ್ಡ್ ಹೌಸ್ ಬೀಟ್ ಸಿಸ್ಟಮ್” (LHBS) ಎಂಬ ವಿನೂತನ ಕಾರ್ಯಕ್ರಮವನ್ನು ಪರಿಚಯಿಸಿದೆ. ಈ ಯೋಜನೆ ನಿವಾಸಿಗಳು ಕೆಲಸ, ಪ್ರವಾಸ ಅಥವಾ ಇತರ ವೈಯಕ್ತಿಕ ಕಾರಣಗಳಿಗಾಗಿ ಪ್ರಯಾಣಿಸುವಾಗ ಬೀಗ ಹಾಕಿಕೊಂಡಿರುವ ಮನೆಗಳ ಮೇಲೆ ಪೊಲೀಸ್ ಸಿಬ್ಬಂದಿ ವಿಶೇಷ ನಿಗಾ ಇಡುತ್ತಾರೆ. ಸೂಕ್ತ ಭದ್ರತೆ ಮತ್ತು ರಕ್ಷಣೆಯನ್ನು ಖಚಿತಪಡಿಸಿಕೊಳ್ಳಲು ಆಯಾ ಪೊಲೀಸ್ ಠಾಣೆ ವ್ಯಾಪ್ತಿಯಿಂದ ಬೀಟ್ ಸಿಬ್ಬಂದಿ ಹಗಲು ಮತ್ತು ರಾತ್ರಿ ಎರಡೂ ಸಮಯದಲ್ಲಿ ಅಂತಹ ಮನೆಗಳಿಗೆ ಭೇಟಿ ನೀಡುತ್ತಾರೆ.ಉಡುಪಿ ಜಿಲ್ಲೆಯ ನಿವಾಸಿಗಳು ಪ್ರಯಾಣ ಮಾಡುವಾಗ ಮನೆಗಳಿಗೆ ಬೀಗ ಹಾಕಿಕೊಂಡು ಹೋಗಲು ಯೋಜಿಸುತ್ತಿದ್ದರೆ, ಉಡುಪಿ ಜಿಲ್ಲಾ ನಿಯಂತ್ರಣ ಕೊಠಡಿಗೆ ಮೀಸಲಾದ ಸಹಾಯವಾಣಿ ಸಂಖ್ಯೆ 0820-2526709 ಗೆ ಕರೆ ಮಾಡುವ ಮೂಲಕ ತಿಳಿಸಲು ಕೋರಲಾಗಿದೆ.ನಿವಾಸಿಗಳು ನಿಯಂತ್ರಣ ಕೊಠಡಿಯಿಂದ ಒದಗಿಸಲಾದ ವಾಟ್ಸಾಪ್ ಸಂಖ್ಯೆಗೆ ನಿರ್ಗಮನ ಮತ್ತು ವಾಪಸಾತಿ ದಿನಾಂಕ ಮತ್ತು ಸಮಯ, ನಿಖರವಾದ ವಸತಿ ವಿಳಾಸ ಮತ್ತು ಮನೆಯ ಮುಂದೆ…

Read More

ಕೋಲ್ಕತ್ತಾ: ಚುನಾವಣಾ ಫಲಿತಾಂಶದ ಬೆನ್ನಲ್ಲೇ ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ತೀವ್ರಗೊಂಡಿದ್ದು, ಪಾನಿಹಾಟಿ ಕ್ಷೇತ್ರದ ಬಿಜೆಪಿ ಶಾಸಕಿ ರತ್ನ ದೇವನಾಥ್ ನಿವಾಸದ ಬಳಿ ಬಾಂಬ್ ಸ್ಫೋಟಗೊಂಡಿದೆ. ಆರ್​.ಜಿ ಕರ್ ಆಸ್ಪತ್ರೆಯಲ್ಲಿನ ಅತ್ಯಾಚಾರ ಸಂತ್ರಸ್ತೆ ತಾಯಿ ರತ್ನ ದೇವನಾಥ್​ ಮನೆ ಸಮೀಪ ನಡೆದ ಈ ಘಟನೆಯಲ್ಲಿ ಬಿಜೆಪಿಯ ಐವರು ಕಾರ್ಯಕರ್ತರಿಗೆ ಗಾಯಗಳಾಗಿವೆ. ಬಿಜೆಪಿ ನಾಯಕ ಹಾಗೂ ಸಿಎಂ ರೇಸ್​ನಲ್ಲಿರುವ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ ಅವರನ್ನು ಗುಂಡಿಕ್ಕಿ ಕೊಲೆ ಮಾಡಲಾಗಿರುವ ವಿಚಾರ ದೇಶಾದ್ಯಂತ ಸುದ್ದಿಯಾಗಿರುವ ನಡುವೆ, ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ.

Read More