Author: main-admin

ಮಂಗಳೂರು: ಜಿಲ್ಲಾಧಿಕಾರಿಯ ಬಳಿಯೇ ಭಿಕ್ಷುಕನೊಬ್ಬ ಭಿಕ್ಷೆ ಬೇಡಿದ ಪ್ರಸಂಗವೊಂದು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಕುಕ್ಕೆ ಸುಬ್ರಹ್ಮಣ್ಯ ದಲ್ಲಿ ಪ್ರಾಕೃತಿಕ ವಿಕೋಪ ಮುಂಜಾಗ್ರತಾ ಸಭೆಯ ಹಿನ್ನೆಲೆಯಲ್ಲಿ ಮೇ.16ರಂದು ದ.ಕ ಜಿಲ್ಲಾಧಿಕಾರಿ ಮುಗಿಲನ್ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ್ದರು. ಆದಿಶೇಷ ವಸತಿ ಗೃಹದ ಸಭಾಂಗಣದಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿ ಹೊರಬರುವ ವೇಳೆ ಆದಿ ಸುಬ್ರಹ್ಮಣ್ಯದ ಬಳಿ ಭಿಕ್ಷುಕ ಎದುರುಗೊಂಡಿದ್ದಾನೆ. ಜಿಲ್ಲಾಧಿಕಾರಿಯವರು ಕಾರಿನತ್ತ ಬರುತ್ತಿದ್ದಂತೆ ಭಿಕ್ಷುಕ ಕೈ ಚಾಚಿದರೂ ಗಮನಿಸಲಿರಲಿಲ್ಲ. ಹೀಗಾಗಿ, ಕಾರಲ್ಲಿ ಕುಳಿತ ಬಳಿಕವೂ ಮತ್ತೆ ಶಾಲು ಒಡ್ಡಿದ್ದಾನೆ. ಈ ವೇಳೆ ಡಿಸಿಯವರು ಕೈಸನ್ನೆಮೂಲಕವೇ ಇಲ್ಲವೆಂದು ಸೂಚಿಸಿದಾಗ ಮತ್ತೆ ಕೈಚಾಚಿದ್ದು ಈ ವೇಳೆ ಎರಡು ಕೈ ಜೋಡಿಸಿ ನಮಸ್ಕರಿಸಿದ್ದಾನೆ. ಈ ಕುರಿತ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

Read More

ಉಡುಪಿ: ಹೆಲ್ಮೆಟ್‌ ಧರಿಸದೆ ಬೈಕ್‌ ಸವಾರಿ ಮಾಡುತ್ತಿದ್ದವರನ್ನು ಪ್ರಶ್ನಿಸಿದ ಪೊಲೀಸರ ಮೇಲೆಯೇ ಎಗರಾಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ವಿದ್ಯಾರ್ಥಿಗಳಾದ ಶ್ರೀವತ್ಸ ಮತ್ತು ಗಣೇಶ್‌ ಪೂಜಾರಿ ವಿರುದ್ಧ ಪ್ರಕರಣ ದಾಖಲಾಗಿದೆ. ಉಡುಪಿ ಸಂಚಾರ ಪೊಲೀಸ್‌ ಠಾಣೆಯ ಉಪನಿರೀಕ್ಷಕ ಸುದರ್ಶನ್‌ ದೊಡ್ಡಮನಿ ಅವರು ಸಿಬಂದಿ ಸತೀಶ್‌ ಅವರೊಂದಿಗೆ ರೌಂಡ್ಸ್‌ ಕರ್ತವ್ಯದಲ್ಲಿದ್ದರು. ಈ ವೇಳೆ ಸಿಟಿ ಬಸ್‌ ನಿಲ್ದಾಣದ ಕಡೆಯಿಂದ ಕಲ್ಸಂಕ ಕಡೆ ಹೋಗುತ್ತಿರುವಾಗ ಓರ್ವ ವ್ಯಕ್ತಿ ತನ್ನ ಬೈಕ್‌ನಲ್ಲಿ ಕಲ್ಸಂಕ ಕಡೆಗೆ ಹೆಲ್ಮೆಟ್‌ ಧರಿಸದೇ ಮೊಬೈಲ್‌ನಲ್ಲಿ ಮಾತನಾಡುತ್ತಾ ಚಲಾಯಿಸುತ್ತಿದ್ದ. ನಿಲ್ಲಿಸುವಂತೆ ಸೂಚಿಸಿದಾಗ ಆತ ವೈನ್‌ಗೇಟ್‌ ಬಳಿ ಹೋಗಿ ನಿಲ್ಲಿಸಿದ್ದಾನೆ. ಬಳಿಕ ಆತನಿಗೆ ದಂಡ ಕಟ್ಟುವಂತೆ ಪೊಲೀಸರು ತಿಳಿಸಿದ್ದಾರೆ. ಈ ವೇಳೆ ಆತ “ನೀವು ನೋಟೀಸ್‌ ನೀಡಿ’ ಎಂದು ಹೇಳಿದ್ದಾನೆ. ಅದಕ್ಕೆ ಪೊಲೀಸರು ನಿಮ್ಮ ಮನೆಯ ವಿಳಾಸ ಹೊಂದಿರುವ ಯಾವುದಾದರೊಂದು ದಾಖಲೆ ತೋರಿಸಲು ಕೇಳಿಕೊಂಡಾಗ ವಾಹನ ಸವಾರ ನಿರಾಕರಿಸಿದ್ದಾನೆ. ಇದೇ ವೇಳೆ ಬುಲೆಟ್‌ನಲ್ಲಿ ಮತ್ತೊಬ್ಬ ಆರೋಪಿ ಬಂದು “ದಂಡ ಹಾಕುತ್ತೀಯಾ’ ಎಂದು ಏರು ಧ್ವನಿಯಲ್ಲಿ ಮಾತನಾಡಿ ಗದ್ದಲ…

Read More

ಸುರತ್ಕಲ್: ಜೂಜಾಟ ಆಡುತ್ತಿದ್ದ ಆರೋಪದಲ್ಲಿ 9 ಮಂದಿಯನ್ನು ಸಿಸಿಬಿ ಮತ್ತು ಪಣಂಬೂರು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬೈಕಂಪಾಡಿ ರೈಲು ಮಾರ್ಗದ ಸಮೀಪದಿಂದ ಬಂಧಿಸಿದ್ದಾರೆ. ಆರೋಪಿಗಳನ್ನು ಮುಹಮ್ಮದ್ ಹನೀಫ್, ಝಾಕಿರ್ ಅಹ್ಮದ್, ವಿಲ್ಫ್ರೆಡ್ ಡಿಸೋಜ, ಅನಿಲ್ ಕುಮಾರ್, ಮುರ್ತೋಝ ಇಮಾಮ್ ಸಾಬ್, ಶಶಿ ದೇವಾಡಿಗ, ಮೈಲಾರಪ್ಪ, ರಾಯ್ ಡಯಾಸ್, ಜೋನ್ ರಾಬರ್ಟ್ ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಆಟಕ್ಕೆ ಬಳಸಿದ್ದ 11,265 ರೂ. ನಗದು ಹಾಗೂ ಇತರ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Read More

ಮಂಗಳೂರು: ನಗರದಲ್ಲಿ ಮಹಿಳೆಯೊಬ್ಬರು ಬೈಕಿನಿಂದ ರಸ್ತೆಗೆ ಬಿದ್ದು ತಲೆಗೆ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಸಂಭವಿಸಿದೆ. ಸಾವನ್ನಪ್ಪಿದವರು ಗೋರಿಗುಡ್ಡ ನಿವಾಸಿ ಕವಿತಾ (30) ಎಂದು ತಿಳಿಯಲಾಗಿದೆ. ರಾತ್ರಿ ಅಭಿಷೇಕ್‌ ಅವರು ಕವಿತಾ ಹಾಗೂ ನವ್ಯಾ (15) ಅವರನ್ನು ಪಲ್ಸರ್‌ ಬೈಕಿನಲ್ಲಿ ಕುಳ್ಳಿರಿಸಿಕೊಂಡು ಬಂದು ಗೋರಿಗುಡ್ಡ ವೆಲೆನ್ಸಿಯಾ ಚರ್ಚ್‌ ರಸ್ತೆಯಲ್ಲಿರುವ ತರಕಾರಿ ಅಂಗಡಿಯಿಂದ ಎಳನೀರು ಖರೀದಿಸಿದ್ದರು. ಬಳಿಕ ಅಲ್ಲಿಂದ ಮನೆಯ ಕಡೆಗೆ ಹೋಗುತ್ತಿದ್ದಾಗ ಕವಿತಾ ರಸ್ತೆಗೆ ಬಿದ್ದರು. ಅವರನ್ನು ಫಾದರ್‌ ಮುಲ್ಲರ್‌ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಕದ್ರಿ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Read More

ಮಂಗಳೂರು: ಮೂಲತಃ ಮಂಗಳೂರು ನಿವಾಸಿ, ಮುಂಬೈಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (70) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ಮುಂಬೈಯಲ್ಲಿ ನಿಧನರಾದರು. ಅವರು ಪತ್ನಿ, ಇಬ್ಬರು ಪುತ್ರರು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ತನ್ನ 14ನೇ ವಯಸ್ಸಿನಲ್ಲೇ ಮುಂಬೈಗೆ ತೆರಳಿದ್ದ ರಘುನಂದನ್ ಕಾಮತ್ ತನ್ನ ಸಹೋದರನ ರೆಸ್ಟೋರೆಂಟ್ ನಲ್ಲಿ ಕೆಲಸಕ್ಕೆ ಸೇರಿದರು. 1984 ರಲ್ಲಿ ಕೇವಲ 4 ಮಂದಿ ಸಿಬ್ಬಂದಿ ಜತೆ ನ್ಯಾಚುರಲ್ ಐಸ್ ಕ್ರೀಂ ಸಂಸ್ಥೆಯನ್ನು ಆರಂಭಿಸಿದರು. ಪ್ರಸ್ತುತ ನ್ಯಾಚುರಲ್ ಸಂಸ್ಥೆ ದೇಶದಲ್ಲೇ ಪ್ರತಿಷ್ಠಿತ ಐಸ್ ಕ್ರೀಂ ಉದ್ಯಮವಾಗಿ ಸಾವಿರಾರು ಮಂದಿಗೆ ಉದ್ಯೋಗ ನೀಡುತ್ತಿದೆ. ದೇಶಾದ್ಯಂತ 156 ಔಟ್ ಲೆಟ್ ಹೊಂದಿದ್ದು, ವರ್ಷಕ್ಕೆ 400 ಕೋಟಿ ರೂ.ಗೂ ಅಧಿಕ ವ್ಯವಹಾರ ಮಾಡುತ್ತಿದೆ.

Read More

ಮಂಗಳೂರು : ಪೊಲೀಸ್ ವಾಹನವೊಂದರ ವಿಮೆ ಮುಕ್ತಾಯವಾಗಿದೆ ಎಂಬ ವಿಡಿಯೋ ಇಂದು ಬೆಳಗ್ಗಿನಿಂದ ಮಂಗಳೂರು ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗಿತ್ತು. ಇದೀಗ ಪೊಲೀಸ್ ಕಮಿಷನರ್ ವಿಡಿಯೋ ಮಾಡಿದವನಿಗೆ ದಂಡದ ಬಿಸಿ ಮುಟ್ಟಿಸಿ, ವಿಮೆ ಮುಕ್ತಾಯವಾಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಮೇ 16ರಂದು ಸಂಜೆ ನಗರದ ಕುಂಟಿಕಾನ ಬಳಿ ಕೆಎ-19-ಜಿ-1023 ನೋಂದಣಿಯ ಹೆದ್ದಾರಿ ಗಸ್ತು ವಾಹನ ಕರ್ತವ್ಯದಲ್ಲಿತ್ತು. ಈ ವೇಳೆ ವ್ಯಕ್ತಿಯೋರ್ವನಿಗೆ ಟ್ರಾಫಿಕ್ ಪೊಲೀಸ್ ವಾಯುಮಾಲಿನ್ಯ ತಪಾಸಣಾ ಪತ್ರ ತೋರಿಸಿಲ್ಲ ಎಂದು ದಂಡ ವಿಧಿಸಿದ್ದರು. ಇದರಿಂದ ಕುಪಿತನಾದ ಆತ ಹೆದ್ದಾರಿ ಗಸ್ತು ವಾಹನದ ವಿಡಿಯೋ ಚಿತ್ರೀಕರಣ ಮಾಡಿ ಅದರ ವಿಮಾ ಅವಧಿಯು ಮುಕ್ತಾಯವಾಗಿದೆ. ಪೊಲೀಸ್ ಇಲಾಖೆ ವಿಮಾ ಕಂತು ಪಾವತಿಸದ ವಾಹನಗಳನ್ನು ಬಳಸುತ್ತಿದೆ ಎಂದು‌ ಸೋಶಿಯಲ್ ಮೀಡಿಯಾಗಳಲ್ಲಿ ವಿಡಿಯೋ ವೈರಲ್ ಮಾಡಿದ್ದಾನೆ. ವಿಡಿಯೋ ವೈರಲ್ ಬೆನ್ನಲ್ಲೇ ಎಚ್ಚೆತ್ತ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್, ಇದು ತಪ್ಪು ಮಾಹಿತಿ, ಪೊಲೀಸ್ ಇಲಾಖೆಯ ಎಲ್ಲಾ ವಾಹನಗಳು ಕಡ್ಡಾಯವಾಗಿ ಕರ್ನಾಟಕ ಗವರ್ನಮೆಂಟ್ ಇನ್ಯುರೆನ್ಸ್…

Read More

ಮಂಗಳೂರು: ಮನೆಯೊಂದರ ಬಾಗಿಲು ಮುರಿದು ಒಳ ನುಗ್ಗಿದ ಕಳ್ಳರು ಚಿನ್ನಾಭರಣ, ನಗದು ಕಳವು ಮಾಡಿರುವ ಘಟನೆ ನಗರದ ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ನಾಗುರಿ ಗುಡ್ಡೆತೋಟದಲ್ಲಿ ನಡೆದಿದೆ. ಮೇ 10ರಂದು ಸಂಜೆ ಮನೆಯವರು ಮುಲ್ಕಿಗೆ ಯಕ್ಷಗಾನ ನೋಡಲೆಂದು ಹೋಗಿ ಮರುದಿನ ಸಂಜೆ ಮನೆಗೆ ವಾಪಸಾಗಿದ್ದರು. ಆವಾಗ ಮನೆಯಲ್ಲಿದ್ದ 16 ಗ್ರಾಂ ತೂಕದ ಅಂದಾಜು 95,000 ರೂ. ಮೌಲ್ಯದ ಚಿನ್ನದ ಬಳೆ, ಎಚ್‌ಪಿ ಕಂಪೆನಿಯ ಲ್ಯಾಪ್ಟಾಪ್, 10,000 ರೂ. ನಗದು, ಬೆಳ್ಳಿಯ ತಟ್ಟೆ, ಬ್ರೇಸ್ ಲೆಟ್ ಮೊದಲಾದವುಗಳನ್ನು ಕಳವು ಮಾಡಿರುವುದು ಗಮನಕ್ಕೆ ಬಂದಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

Read More

ಉಳ್ಳಾಲ : ಎರಡು ಸ್ಕೂಟರ್‌ಗಳ ಮಧ್ಯೆ ನಡೆದ ಅಪಘಾತದಲ್ಲಿ ಸಹ ಸವಾರನೊಬ್ಬ ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ ನಗರದ ಹೊರವಲಯದ ಕಲ್ಲಾಪು ಜಂಕ್ಷನ್ ನಲ್ಲಿ ನಡೆದಿದೆ. ಉಳ್ಳಾಲ ಕೋಟೆಪುರ, ಕೋಡಿ ನಿವಾಸಿ ಅಹಮ್ಮದ್ ನಿಷಾದ್ (22) ಮೃತಪಟ್ಟ ಯುವಕ. ನಿಷಾದ್ ಮುಂಜಾನೆ 4ಗಂಟೆಯ ವೇಳೆಗೆ ಸಯ್ಯದ್ ಹಫೀಜ್ ಎಬುವರೊಂದಿಗೆ ಸ್ಕೂಟರ್ ನಲ್ಲಿ ಸಹ ಸವಾರನಾಗಿ ಮಂಗಳೂರಿನಿಂದ ತೊಕ್ಕೊಟ್ಟಿಗೆ ಬರುತ್ತಿದ್ದರು. ಈ ವೇಳೆ ಕಲ್ಲಾಪು ಜಂಕ್ಷನ್ ನಲ್ಲಿ ತೊಕ್ಕೊಟ್ಟಿನಿಂದ ಬಂದು ಗ್ಲೋಬಲ್ ಮಾರ್ಕೆಟ್ ಗೆ ಕ್ರಾಸ್ ಆಗುತ್ತಿದ್ದ ಸ್ಕೂಟ‌ರ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಎರಡೂ ಸ್ಕೂಟರ್ ಸವಾರರು ರಸ್ತೆಗೆಸೆಯಲ್ಪಟ್ಟಿದ್ದಾರೆ. ಗಂಭೀರ ಗಾಯಗೊಂಡ ನಿಷಾದ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಸ್ಕೂಟರ್ ಸವಾರ ಹಫೀಜ್ ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಮತ್ತೋರ್ವ ಸ್ಕೂಟರ್ ಸವಾರ ಕುತ್ತಾರು ಪದವು ನಿವಾಸಿ ಅಬೂಬಕ್ಕರ್ ಸಿದ್ದೀಕ್ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ. ಈ ಬಗ್ಗೆ ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Read More

ಬಂಟ್ವಾಳ: ಬಾವಿಗೆ ಬಿದ್ದ ಮಗುವೊಂದನ್ನು ತನ್ನ ಪ್ರಾಣದ ಹಂಗನ್ನು ತೊರೆದು ತುಂಡಾಗುವ ಸ್ಥಿತಿಯಲ್ಲಿದ್ದ ಹಳೆಯ ಹಗ್ಗವನ್ನು ಬಳಸಿ ಮೇಲಕ್ಕೆತ್ತಿದ ಘಟನೆ ಸರಪಾಡಿಯ ಹಂಚಿಕಟ್ಟೆಯಲ್ಲಿ ನಡೆದಿದೆ. ಇದೀಗ ಈ ಯುವಕನ ಕುರಿತು ಸಾಕಷ್ಟು ಪ್ರಶಂಸೆ ವ್ಯಕ್ತವಾಗಿದೆ.ಹಂಚಿಕಟ್ಟೆಯ ನೋಣಯ್ಯ ನಾಯ್ಕ ಅವರ ಮನೆಯ ಅಂಗಳದಲ್ಲಿ ಬಾವಿಯೊಂದಿದ್ದು, ಅದಕ್ಕೆ ಕಸ ಬೀಳದಂತೆ ಹಸಿರು ಬಣ್ಣದ ನರ್ಸರಿ ಕಟ್ಟಿದ್ದರು. ಮೇ 14ರಂದು ಸಂಜೆ 6ರ ಸುಮಾರಿಗೆ ಅವರ ಪುತ್ರ ಅಭಿಷೇಕ್ (3) ಮನೆಯ ಅಂಗಳದಲ್ಲಿ ಆಟ ಆಡುತ್ತಿದ್ದನು. ತಾಯಿ ಮನೆಯೊಳಗೆ ಇದ್ದು, ತಂದೆ ನೋಣಯ್ಯ ಅವರು ಕೆಲಸ ಮುಗಿಸಿ ಬಂದು ಹೊರಗೆ ಹೋಗಿದ್ದರು. ಆಡುತ್ತಿದ್ದ ಅಭಿಷೇಕ್ ಬಾವಿಯ ಕಟ್ಟೆಯನ್ನು ಹತ್ತಿ ಹಸಿರು ಬಣ್ಣದ ನರ್ಸರಿ ಹೋಗಿದ್ದು, ಮಧ್ಯಕ್ಕೆ ತಲುಪುವ ವೇಳೆ ಅದು ಭಾರದಿಂದ ಹರಿದಿದೆ. ಈ ವೇಳೆ ಮಗು ಏಕಾಏಕಿ ಬಾವಿಗೆ ಬಿದ್ದಿದೆ.ನೀರಿಗೆ ಏನೋ ಬಿದ್ದ ಶಬ್ದ ಕೇಳಿ ಓಡಿ ಬಂದು ನೋಡಿದಾಗ ಮಗು ನೀರಿಗೆ ಬಿದ್ದಿದೆ. ಬಳಿಕ ಬೊಬ್ಬೆ ಹಾಕಿದಾಗ ಮನೆಗೆ ಹೋಗುತ್ತಿದ್ದ ಉಮೇಶ್ ಮಠದಬೆಟ್ಟು ಎಂಬ…

Read More

ಉಡುಪಿ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ 6 ಜನರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಉಡುಪಿಯ ಮಣಿಪಾಲದಲ್ಲಿ ನಡೆದಿದೆ. ಪ್ರಜ್ವಲ್‌ (21), ಆರ್ಯನ್‌ (20), ಪ್ರಧುಮಾನ್‌ (21), ಹೆಮಾನ್ಯ (20), ಸುಭಾಸ್‌ (23), ನಿಶಾಂತ್‌ (22), ಅಮಿತ್‌ (20)ನನ್ನು ವಶಕ್ಕೆ ಪಡೆಯಲಾಗಿದೆ. ಫಾರೆನ್ಸಿಕ್‌ ವರದಿಯ ಪ್ರಕಾರ 6 ಮಂದಿ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಇನ್ನು ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Read More