ಬೆಂಗಳೂರು : ಪತಿಯಿಂದ ಬೆಸರಿಸಿಕೊಂಡು ತವರು ಮನೆ ಸೇರಿದ್ದ ಪತ್ನಿಯನ್ನು ಮತ್ತೆ ಕರೆತರಲು ಪತಿಯೊಬ್ಬ ಆತ್ಮಹತ್ಯೆ ನಾಟಕವಾಡಲು ಹೋಗಿ ನೀಜವಾಗಿಯೂ ಸಾವನಪ್ಪಿದ ಘಟನೆ ಬಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ನಡೆದಿದೆ. ಬಿಹಾರ ಮೂಲದ ಅಮಿತ್ ಕುಮಾರ್ (28) ಮೃತ ವ್ಯಕ್ತಿ. 10 ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದ ಅಮಿತ್ ಕುಮಾರ್, ಜಿಮ್ ಟ್ರೈನರ್ ಆಗಿ ಕೆಲಸ ಮಾಡಿಕೊಂಡಿದ್ದ. ಕಳೆದ ಒಂದು ವರ್ಷದ ಹಿಂದೆ ಯುವತಿಯೊಬ್ಬಳನ್ನು ಪ್ರೀತಿಸಿ, ಪೋಷಕರ ವಿರೋಧದ ನಡುವೆಯೂ ವಿವಾಹವಾಗಿದ್ದ. ಆದರೆ, ಇತ್ತೀಚೆಗೆ ಪತ್ನಿ ನರ್ಸಿಂಗ್ ಕೋರ್ಸ್ ಸೇರಿದ ಬಳಿಕ ತನಗೆ ಸಮಯ ನೀಡುತ್ತಿಲ್ಲ, ಸ್ನೇಹಿತರೊಂದಿಗೆ ಸದಾ ಫೋನ್ ಕರೆಯಲ್ಲಿರುತ್ತಾಳೆ ಎಂಬ ವಿಚಾರಕ್ಕೆ ಇಬ್ಬರ ನಡುವೆ ಆಗಾಗ ಜಗಳವಾಗುತ್ತಿತ್ತು. ಇದರಿಂದ ಬೇಸತ್ತ ಪತ್ನಿ, ಅಮಿತ್ ಕುಮಾರ್ನನ್ನು ತೊರೆದು ಬೇರೆಡೆ ವಾಸವಿದ್ದಳು ಎಂದು ತಿಳಿದುಬಂದಿದೆ. ಪತ್ನಿಗೆ ಕರೆ ಮಾಡುತ್ತಿದ್ದ ಅಮಿತ್ ಕುಮಾರ್ ಮನೆಗೆ ಬರುವಂತೆ ಪದೇ ಪದೇ ಮನವಿ ಮಾಡುತ್ತಿದ್ದ. ಬುಧವಾರವೂ ಕೂಡ ಪತ್ನಿಗೆ ವಿಡಿಯೋ ಕಾಲ್ ಮಾಡಿರುವ ಆತ,…
Author: main-admin
ಬೆಂಗಳೂರು : ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯೊಬ್ಬಳ ಮೃತದೇಹ ಪತ್ತೆಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತರನ್ನು 21 ವರ್ಷ ವಯಸ್ಸಿನ ಪ್ರಭುದ್ಧ ಎಂದು ಗುರುತಿಸಲಾಗಿದೆ. ಪ್ರಭುದ್ಧ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದಳು. ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಈಕೆಯ ಶವ ಪತ್ತೆಯಾಗಿದೆ. ನಿನ್ನೆ ಸಂಜೆ ನಡೆದಿರುವ ಘಟನೆ ಇದಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಘಟನೆ ನಡೆದ ವೇಳೆ ಮನೆಯಲ್ಲಿ ಯಾರು ಇರಲಿಲ್ಲ. ತಾಯಿ ಹೊರಗೆ ಕೆಲಸಕ್ಕೆ ಹೋಗಿದ್ರು. ಮೃತಳ ತಮ್ಮ ಮನೆಗೆ ಬಂದು ನೋಡಿದಾಗ ಸಹೋದರಿ ಪ್ರಭುದ್ಧ ಸಾವನ್ನಪ್ಪಿರೋದು ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಸುಬ್ರಹ್ಮಣ್ಯಪುರ ಪೊಲೀಸರಿಂದ ಅನುಮಾನಾಸ್ಪದ ಸಾವು ಕೇಸ್ ದಾಖಲಾಗಿದೆ. ಸದ್ಯ ಪೊಲೀಸರು ಮೃತ ಯುವತಿಯ ಮೊಬೈಲ್ ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿದ್ದಾರೆ. ವಿದ್ಯಾಭ್ಯಾಸದ ವಿಚಾರಕ್ಕೆ ಸಾವನ್ನಪ್ಪಿದ್ದಾಳಾ ಅಥವಾ ಬೇರೆ ಕಾರಣ ಇದೆಯಾ? ಅನ್ನೋ ಆಯಾಮದಲ್ಲಿ ತನಿಖೆ ನಡೆಯುತ್ತಿದೆ.
ಮಂಗಳೂರು: ರಾಜ್ಯದಲ್ಲಿ ವೇಗವಾಗಿ ಬೆಳೆಯುತ್ತಿರುವ ನಗರಗಳ ಪಟ್ಟಿಯಲ್ಲಿರುವ ಮಂಗಳೂರು ಇನ್ಮುಂದೆ ಅತ್ಯಾಧುನಿಕ ಕ್ಯಾಮರಾ ಹಾಗೂ ರೇಡಾರ್ ಕಣ್ಗಾವಲಿಗೆ ಒಳಪಡಲಿದೆ. ನಗರದ ಆಯಕಟ್ಟಿನ ಪ್ರದೇಶಗಳ ಮೇಲೆ ರೇಡಾರ್ ಹದ್ದಿನ ಕಣ್ಣಿಟ್ಟಿದ್ದು ಸಂಚಾರ ನಿಯಂತ್ರಣ ವ್ಯವಸ್ಥೆಯು ಫುಲ್ ಅಪ್ಟೇಡ್ ಆಗಿದೆ. ಮಂಗಳೂರು ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಅತ್ಯಾಧುನಿಕ ಟ್ರಾಫಿಕ್ ವ್ಯವಸ್ಥೆಯನ್ನು ಮಾಡಲಾಗುತ್ತಿದೆ. ಇದಕ್ಕಾಗಿ ಈಗಾಗಲೇ ನಗರದ ಪ್ರಮುಖ ಜಂಕ್ಷನ್ಗಳಲ್ಲಿ ಆರ್ಟಿಫೀಶಿಯಲ್ ಇಂಟಲಿಜೆನ್ಸ್ ಕ್ಯಾಮರಾ ಹಾಗೂ ರೇಡಾರ್ ವ್ಯವಸ್ಥೆ ಅಳವಡಿಸಲಾಗಿದೆ. ಟ್ರಾಫಿಕ್ ದಟ್ಟನೆ ಹೆಚ್ಚಾದಲ್ಲಿ ಸಿಗ್ನಲ್ನಲ್ಲಿ ಬದಲಾವಣೆ ಸೇರಿದಂತೆ ಮೊದಲಾದವನ್ನು ಇಂಟಲಿಜೆಂಟ್ ಟ್ರಾಫಿಕ್ ಮ್ಯಾನೇಜ್ಮೆಂಟ್ ಮಾಡಲಿದೆ. ಈಗಾಗಲೇ 75ಕ್ಕೂ ಹೆಚ್ಚು ಕ್ಯಾಮೆರಾ ಸ್ಮಾರ್ಟ್ ಸಿಟಿಯಿಂದ ಅಳವಡಿಸಲಾಗಿದ್ದು ಮುಂದೆ 250ಕ್ಕೂ ಹೆಚ್ಚು ಅತ್ಯಾಧುನಿಕ ಕ್ಯಾಮೆರಾ ಅಳವಡಿಸಬೇಕಾಗಿದೆ. ಒಟ್ಟಿನಲ್ಲಿ ಇನ್ಮುಂದೆ ಮಂಗಳೂರು ನಗರದಲ್ಲಿ ವಾಹನಸವಾರರು ಬೇಕಾಬಿಟ್ಟಿ ಸಂಚಾರ ಸುಲಭವಲ್ಲ ಎಂಬುದನ್ನು ಅರಿತು ತಮ್ಮ ಸುರಕ್ಷತೆಗೆ ಮಹತ್ವ ನೀಡಬೇಕಾದ ಅವಶ್ಯಕತೆ ಇದೆ ಎಂದು ತಿಳಿದವರು ಹೇಳುತ್ತಿದ್ದಾರೆ.
ಸುಳ್ಯ: ಮೈಮೇಲೆ ಮರಬಿದ್ದು ವೃದ್ಧೆಯೋರ್ವರು ದಾರುಣವಾಗಿ ಮೃತಪಟ್ಟ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಬಳಿಯಲ್ಲಿ ನಡೆದಿದೆ. ಬಸವನಮೂಲೆ ನಿವಾಸಿ ಶೇಷಪ್ಪ ಎಂಬವರ ಪತ್ನಿ ಮೀನಾಕ್ಷಿ ಬಸವನಮೂಲೆ (65) ಮೃತ ದುರ್ದೈವಿ. ಮೀನಾಕ್ಷಿಯವರು ತಮ್ಮ ತೋಟದಲ್ಲಿ ಕಟ್ಟಿದ್ದ ಜಾನುವಾರು ಬಿಡಿಸಿ ತರಲು ಸಂಜೆ ತೆರಳಿದ್ದರು. ಈ ವೇಳೆ ಜೋರಾಗಿ ಗಾಳಿ – ಮಳೆ ಬಂದಿದೆ. ಆಗ ಬೃಹತ್ ಗಾತ್ರದ ಮರವೊಂದು ಮೀನಾಕ್ಷಿಯವರ ಮೇಲೆಯೇ ಬಿದ್ದಿದೆ. ಪರಿಣಾಮ ಅವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಮಂಗಳೂರು : ಕಾರಿನಲ್ಲಿ ಬೆಂಗಳೂರಿನಿಂದ ಮಂಗಳೂರಿಗೆ ನಿಷೇಧಿತ ಮಾದಕದ್ರವ್ಯ ಎಂಡಿಎಂಎಯನ್ನು ಸಾಗಾಟ ಮಾಡುತ್ತಿದ್ದವನನ್ನು ಪತ್ತೆ ಹಚ್ಚಿರುವ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಿಜೈ ಚರ್ಚ್ ಬಳಿಯ ಬಿಜೈ ನ್ಯೂರೋಡ್ ನಿವಾಸಿ ಮೊಹಮ್ಮದ್ ಅಮೀನ್ ರಾಫಿ(23), ಅಡ್ಡೂರು, ಬಂಡ್ಸಾಲೆ ಹೌಸ್ ನಿವಾಸಿ ಮೊಹಮ್ಮದ್ ಸಿನಾನ್ ಅಬ್ದುಲ್ಲಾ(23), ಬಂದರು, ಜೆ.ಎಂ.ಕ್ರಾಸ್ ರಸ್ತೆಯ ನಿವಾಸಿಮೊಹಮ್ಮದ್ ನೌಮಾನ್(22), ಉಳ್ಳಾಲದ ಬೋಳಿಯಾರ್ ನಿವಾಸಿ ಮೊಹಮ್ಮದ್ ಸಫೀಲ್(23) ಬಂಧಿತ ಆರೋಪಿಗಳು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ನಗರದ ಹೊರವಲಯದ ದೇರಳಕಟ್ಟೆಯಲ್ಲಿ ಎಂಡಿಎಂಎ ಮಾದಕದ್ರವ್ಯವನ್ನು ಸಾಗಾಟ ಮಾಡುತ್ತಿದ್ದ ಕಾರನ್ನು ಪತ್ತೆ ಹಚ್ಚಿದ್ದಾರೆ. ಈ ವೇಳೆ ಕಾರಿನಲ್ಲಿದ್ದ ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತರಿಂದ 270 ಗ್ರಾಂ ತೂಕದ 6,50,000 ರೂ ಮೌಲ್ಯದ ಎಂಡಿಎಂಎ, 4 ಮೊಬೈಲ್ ಫೋನ್ ಗಳು, ಟೊಯೊಟಾ ಕೊರೊಲ್ಲಾ ಕಾರು, ಡಿಜಿಟಲ್ ತೂಕ ಮಾಪಕವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 14,85,500/- ಆಗಬಹುದು. ಈ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ…
ಏನಿದು ಡ್ರೀಮ್ ಡೀಲ್ ಉಳಿತಾಯ ಯೋಜನೆ . !? ಇದರ ಪೂರ್ಣ ಮಾಹಿತಿ ಏನು!? ತಿಂಗಳಿಗೆ ಎಷ್ಟು ಹಣ ಕಟ್ಟಬೇಕು ಮತ್ತು ಎಷ್ಟು ತಿಂಗಳು ಕಟ್ಟಬೇಕು? ಕೊನೆಯವರೆಗೆ ಗೆಲ್ಲದವರಿಗೆ ಏನು ಬಹುಮಾನವಿದೆ!? ಇದರ ಸದಸ್ಯರಾಗುವುದು ಹೇಗೆ ಮತ್ತು ಯಾರಿಗೆಲ್ಲ ಸೇರಬಹುದು!? ಸರ್ಫ್ರೈಸ್ ಗಿಫ್ಟ್ ಏನಿದು!? ಈ ರೀತಿಯ ನಿಮ್ಮೆಲ್ಲ ಪ್ರಶ್ನೆಗಳಿಗೆ ಇಲ್ಲಿದೆ ಸಂಕ್ಷಿಪ್ತ ಉತ್ತರ👇🏻 ಏನಿದು ಡ್ರೀಮ್ ಡೀಲ್ !? ಡ್ರೀಮ್ ಡೀಲ್ ಅನ್ನುವುದು, ಬಡವರ ಕನಸಿಗೆ ಬೆಳಕಾಗುವ ಒಂದು ವಿಭಿನ್ನ ಯೋಜನೆ. ಮಂಗಳೂರು ಬೆಳ್ತಂಗಡಿ ಮಡಿಕೇರಿ ಮೈಸೂರ್ ಉತ್ತರಕನ್ನಡ ಚಿಕ್ಕಮಂಗಳೂರು ಉಡುಪಿ ಬೆಂಗಳೂರು ಭಾಗದಲ್ಲಿ ಪ್ರಪ್ರಥಮವಾಗಿ ಆರಂಭವಾಗಿರುವ, ಆರು ಮನೆಗಳು ಹಾಗು ಕಾರು, ಬೈಕು, ಆಕ್ಟಿವಾ, ಚಿನ್ನ, ಡೈಮಂಡ್, ನಗದು, ಟೂರ್ ಪ್ಯಾಕೇಜ್ ಹೀಗೆ ಲಕ್ಷಾಂತರ ಬಹುಮಾನಗಳ ಸುರಿಮಳೆಯೇ ಇರುವ ಒಂದು ವಿಭಿನ್ನ ಸ್ಕೀಮ್ ಯೋಜನೆಯ ಹೆಸರೇ ಡ್ರೀಮ್ ಡೀಲ್. ಈ ಯೋಜನೆಯ ಪೂರ್ಣ ಮಾಹಿತಿ.. ಇದೊಂದು ಸೇವಿಂಗ್ ಪ್ಲಾನ್. ಅಂದರೆ, ನಿಮ್ಮ ತಿಂಗಳ ಉಳಿತಾಯದ ಕೇವಲ ಒಂದು ಸಾವಿರ…
ಪಡುಬಿದ್ರಿ: ಕಳೆದ ಮೂರು ದಿನಗಳ ಹಿಂದೆ ಸಸಿಹಿತ್ಲು ಮುಂಡಾ ಬೀಚ್ ಬಳಿಯ ಅಳಿವೆ ಬಾಗಿಲಲ್ಲಿ ಮರುವಾಯಿ ಚಿಪ್ಪು ಹೆಕ್ಕಲು ಹೋಗಿ ಸಮುದ್ರ ಪಾಲಾದ ಯುವಕನ ಶವ ಹೆಜಮಾಡಿ ಕೋಡಿ ಸಮುದ್ರದಲ್ಲಿ ಮಂಗಳವಾರ ಸಂಜೆ ಪತ್ತೆಯಾಗಿದೆ. ಶವವಾಗಿ ಪತ್ತೆಯಾದ ಯುವಕ ಬಜಪೆ ಅದ್ಯಪಾಡಿ ಹಳೆ ವಿಮಾನ ನಿಲ್ದಾಣ ಬಳಿ ನಿವಾಸಿ ಅಭಿಲಾಶ್ (24). ಈತ ಮಂಗಳೂರು ರೈಲ್ವೆಯಲ್ಲಿ ಗುತ್ತಿಗೆದಾರನಾಗಿ ಕಾರ್ಯ ನಿರ್ವಾಹಿಸುತ್ತಿದ್ದು, ತನ್ನ ಸುಮಾರು ಹತ್ತು ಮಂದಿ ಗೆಳೆಯರೊಂದಿಗೆ ಮುಲ್ಕಿಯ ಕೊಳಚಿ ಕಂಬಳ ಶಾಂಭವಿ ಹೊಳೆಗೆ ಮರುವಾಯಿ ಚಿಪ್ಪು ಹಾಗೂ ಏಡಿ ಹಿಡಿಯಲು ಬಂದಿದ್ದು, ಅಲ್ಲಿ ಹೊಳೆಯಲ್ಲಿ ನೀರಿನ ಇಳಿತ ಇದ್ದ ಕಾರಣ ಮುಂದೆ ಸುಮಾರು ಎರಡು ಕೀ.ಮಿ. ನಡೆದುಕೊಂಡು ಹೋಗಿ ಸಸಿಹಿತ್ಲು ಅಳಿವೆ ಬಳಿ ಸಮುದ್ರಕ್ಕಿಳಿದು ತೆರೆಯ ಅಬ್ಬರಕ್ಕೆ ಈತ ನೀರು ಪಾಲಾಗಿದ್ದ. ಬಹಳಷ್ಟು ಮುಳುಗು ತಜ್ಞರು ಹುಡುಕಾಟ ನಡೆಸಿದರೂ ಯಾವುದೇ ಪ್ರಯೋಜನವಾಗಿಲ್ಲ ಇದೀಗ ಹೆಜಮಾಡಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಸ್ಥಳೀಯ ಯುವಕರು ಶವವನ್ನು ದಡ ಸೇರಿಸಿದ್ದು, ಪಡುಬಿದ್ರಿ ಪೊಲೀಸರು…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ಬೆಳಗ್ಗೆ ಪುತ್ತೂರಿನ ನರಿಮೊಗರು ಗ್ರಾಮದ ಪುರುಷರಕಟ್ಟೆ ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಕುಂಡಡ್ಕ ನಿವಾಸಿ ಮೋಕ್ಷಿತ್ ಗೌಡ (23) ಮೃತಪಟ್ಟ ಯುವಕ. ಮೋಕ್ಷಿತ್ ಗೌಡ ಪುರುಷರಕಟ್ಟೆಯಲ್ಲಿರುವ ಬಿಂದು ಫ್ಯಾಕ್ಟರಿಯಲ್ಲಿ ಸಿಫಾನ್ ಮೆಷಿನ್ ಆಪರೇಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಪುರುಷರಕಟ್ಟೆಯಲ್ಲಿ ಬಾಡಿಗೆ ಕೊಠಡಿಯಲ್ಲಿ ವಾಸ್ತವ್ಯವಿದ್ದರು. ಮೋಕ್ಷಿತ್ ಸರ್ವಿಸ್ ಗೆ ಇಟ್ಟಿದ್ದ ತನ್ನ ಬೈಕನ್ನು ವಾಪಾಸು ತರುತ್ತಿದ್ದ ವೇಳೆ ಕಾಣಿಯೂರು ಸುಬ್ರಹ್ಮಣ್ಯ ರಸ್ತೆಯಲ್ಲಿ ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣೆಯ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.
ನವದೆಹಲಿ: ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆಯೇ ಮೊಬೈಲ್ ಬಳಕೆದಾರರಿಗೆ ಬಿಗ್ ಶಾಕ್ ಎದುರಾಗುವ ಸಾಧ್ಯತೆ ಇದೆ. ಸದ್ಯದಲ್ಲೇ ಮೊಬೈಲ್ ಟೆಲಿಕಾಂ ಕಂಪನಿಗಳು ಶುಲ್ಕವನ್ನು ಶೇ.25ರಷ್ಟು ಹೆಚ್ಚಿಸಲು ಯೋಜಿಸುತ್ತಿವೆ ಎಂದು ವರದಿಯಾಗಿದೆ. ದೂರಸಂಪರ್ಕ ಕಂಪನಿಗಳು ಗ್ರಾಹಕರಿಗೆ 5ಜಿ ಸೇವೆಯನ್ನು ಒದಗಿಸಲು ಅಪಾರ ಹಣ ವಿನಿಯೋಗ ಮಾಡಿದೆ. ಹೀಗಾಗಿ ಇದರ ಲಾಭವನ್ನು ಪಡೆಯುವ ಸಲುವಾಗಿ ಮೊಬೈಲ್ ಸೇವೆಯ ಶುಲ್ಕವನ್ನು ಹೆಚ್ಚಿಸಲಾಗುತ್ತಿದೆ. ಇನ್ನು ಇದರೊಂದಿಗೆ ಹಂತ ಹಂತವಾಗಿ ಕಡಿಮೆ ಮೌಲ್ಯದ ಪ್ಯಾಕ್ ಗಳನ್ನು ರದ್ದು ಮಾಡಲಾಗುತ್ತದೆ ಎನ್ನಲಾಗಿದೆ. ನಗರ ಪ್ರದೇಶಗಳಲ್ಲಿ ವಾಸಿಸುವ ಗ್ರಾಹಕರ ವೆಚ್ಚವು 3.2 ಪ್ರತಿಶತದಿಂದ 3.5 ಪ್ರತಿಶತಕ್ಕೆ ಹೆಚ್ಚಾಗುತ್ತದೆ. ಇದೇ ವೇಳೆಯಲ್ಲಿ, ಹಳ್ಳಿಗಳಲ್ಲಿ ವಾಸಿಸುವ ಗ್ರಾಹಕರ ಟೆಲಿಕಾಂ ಮೇಲಿನ ವೆಚ್ಚವು 5.2 ಪ್ರತಿಶತದಿಂದ 5.9 ಪ್ರತಿಶತಕ್ಕೆ ಹೆಚ್ಚಾಗುವ ಸಾಧ್ಯತೆ ಇದೆ.
ಬಂಟ್ವಾಳ: ಲಾರಿಯಡಿಗೆ ಬಿದ್ದು ಬೈಕ್ ಸವಾರನೋರ್ವ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬಂಟ್ವಾಳ ರಾಷ್ಟ್ರೀಯ ಹೆದ್ದಾರಿಯ ಮಾರಿಪಳ್ಳದಲ್ಲಿ ಮಂಗಳವಾರ ಸಂಜೆ ನಡೆದಿದೆ. ಉತ್ತರ ಪ್ರದೇಶ ಮೂಲದ ಪ್ರಸ್ತುತ ಪ್ರಸ್ತುತ ಉಡುಪಿ ನಿವಾಸಿ ಸೋನು (19) ಮೃತ ಯುವಕ.ಘಟನೆಯಲ್ಲಿ ಸಹಸವಾರ ಪ್ರಸಾದ್ ಪೂಜಾರಿ ಕಾರ್ಕಳ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿಸಲಾಗಿದ್ದು, ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋನು ಹಾಗೂ ಪ್ರಸಾದ್ ಅವರು ನೆಲ್ಯಾಡಿಯಲ್ಲಿರುವ ಹೋಟೆಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದು, ಇಬ್ಬರು ಮಂಗಳೂರಿಗೆ ತೆರಳುತ್ತಿದ್ದರು. ರಾಷ್ಟ್ರೀಯ ಹೆದ್ದಾರಿ ಮಂಗಳೂರು ಬೆಂಗಳೂರು ಮಧ್ಯೆ ಫರಂಗಿಪೇಟೆ ಸಮೀಪದ ಮಾರಿಪಳ್ಳ ಎಂಬಲ್ಲಿ ಜಂಕ್ಷನ್ ನಲ್ಲಿ ಹೆದ್ದಾರಿಯಲ್ಲಿ ಅಡ್ಡಲಾಗಿ ಇರಿಸಲಾದ ಬ್ಯಾರಿಕೇಡ್ ನ್ನು ಗಮನಿಸದ ಬೈಕ್ ಸವಾರ ಕಂಟೇನರ್ ಲಾರಿಯೊಂದನ್ನು ಓವರ್ ಟೇಕ್ ಮಾಡುವ ರಭಸಕ್ಕೆ ಬ್ಯಾರಿಕೇಡ್ ಗೆ ಡಿಕ್ಕಿಹೊಡೆದಿದ್ದಾನೆ. ಡಿಕ್ಕಿ ಹೊಡೆದ ರಭಸಕ್ಕೆ ಸವಾರ ಹಾಗೂ ಸಹಸವಾರ ಇಬ್ಬರು ರಸ್ತೆಗೆ ಎಸೆಯಲ್ಪಟ್ಟಿದ್ದು, ಹಿಂಬದಿಯಲ್ಲಿ ಬರುತ್ತಿದ್ದ ಅದೇ ಕಂಟೇನರ್ ಲಾರಿಯ ಚಕ್ರದಡಿಗೆ ಸಿಲುಕಿಕೊಂಡಿದ್ದಾರೆ.ಇದರಲ್ಲಿ ಸೋನು ಸ್ಥಳದಲ್ಲಿಯೇ ಮೃತಪಟ್ಟರೆ,…










