Author: main-admin

ಮಲ್ಪೆ: ಮಲ್ಪೆ ಬೀಚ್‌ಗೆ ಪ್ರವಾಸಕ್ಕೆಂದು ಬಂದಿದ್ದ ಮಂಡ್ಯ ಮೂಲದ ಯುವಕನೋರ್ವ ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ಸಂಭವಿಸಿದೆ. ಮೃತರನ್ನು ಮಂಡ್ಯ ಮೂಲದ ನಾಗೇಂದ್ರ ಪ್ರಸಾದ್‌ ಜಿ. ಆರ್‌. (21) ಎಂದು ಗುರುತಿಸಲಾಗಿದೆ. ಒಟ್ಟು ಐವರು ಸ್ನೇಹಿತರು ರವಿವಾರ ಮಲ್ಪೆ ಬೀಚ್‌ಗೆ ಬಂದಿದ್ದು, ಇವರು ನೀರಿನಲ್ಲಿ ಆಡುತ್ತಿದ್ದಾಗ ನಾಗೇಂದ್ರ ಅವರು ಅಲೆಗಳ ಅಬ್ಬರಕ್ಕೆ ಸಿಲುಕಿ ನೀರಿನಲ್ಲಿ ಕೊಚ್ಚಿಕೊಂಡು ಹೋದರು. ತತ್‌ಕ್ಷಣ ಧಾವಿಸಿ ಬಂದ ಮುಳುಗು ತಜ್ಞ ಈಶ್ವರ ಮಲ್ಪೆ ತಂಡ ಕಾರ್ಯಾಚರಣೆ ನಡೆಸಿ ನಾಗೇಂದ್ರನನ್ನು ಮೇಲಕ್ಕೆತ್ತಿ ಮಣಿಪಾಲ ಆಸ್ಪತ್ರೆಗೆ ಸಾಗಿಸಿದರು. ಆದರೆ ತೀವ್ರ ಅಸ್ವಸ್ಥಗೊಂಡಿದ್ದ ಅವರು ದಾರಿ ಮಧ್ಯೆಯೇ ಕೊನೆಯುಸಿರೆಳೆದರು. ಅವರು ಬೆಂಗಳೂರಿನ ವಿಧಾನಸೌಧದಲ್ಲಿ ಲಿಫ್ಟ್‌ ಅಪರೇಟರ್‌ ಅಗಿದ್ದರು ಎನ್ನಲಾಗಿದೆ. ಈ ಸಂಬಂಧ ಮಲ್ಪೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

Read More

ಮಂಗಳೂರು: ಹೆಬ್ಬಾವುವೊಂದರ ದೇಹದಲ್ಲಿ ಬರೋಬ್ಬರಿ 11 ಏರ್‌ ಬುಲ್ಲೆಟ್‌ ಪತ್ತೆಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಇತ್ತೀಚಿನ ದಿನಗಳಲ್ಲಿ ಅನೇಕ ಕಡೆಗಳಲ್ಲಿ ಹೆಬ್ಬಾವು ಸಂಚಾರವಿದ್ದು, ಮಂಗಳೂರಿನ ಆನೆಗುಂಡಿ ಬಳಿ ಹೆಬ್ಟಾವೊಂದು ಪರ್ಶಿಯನ್‌ ಬೆಕ್ಕನ್ನು ತಿಂದು ನುಂಗಲಾರದೆ ಸಂಕಷ್ಟಪಡುತ್ತಿರುವುದನ್ನು ಗಮನಿಸಿ ಸ್ಥಳೀಯರು ಉರಗತಜ್ಞರಿಗೆ ಕರೆ ಮಾಡಿದರು. ಆಗ ಹೆಬ್ಬಾವಿನ ದೇಹ ತಪಾಸಣೆಗೆ ಒಳಪಡಿಸಿದಾಗ ದೇಹದಲ್ಲಿ 11 ಬುಲ್ಲೆಟ್‌ ಪತ್ತೆಯಾಯಿತು. ಹೆಬ್ಬಾವು ಪರ್ಶಿಯನ್‌ ಕ್ಯಾಟ್‌ ತಿನ್ನುವಾಗ ಅದರ ಕತ್ತಿನ ಕೆಳ ಭಾಗದಲ್ಲಿ ಬಲೆ ಸಿಲುಕಿ ನುಂಗಲಾರದೆ ಕಷ್ಟಪಡುತ್ತಿತ್ತು. ಉರಗತಜ್ಞ ಭುವನ್‌ ದೇವಾಡಿಗ ಸ್ಥಳಕ್ಕೆ ಆಗಮಿಸಿ, ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿದರು. ಬಳಿಕ ಬಲೆ ತೆರವು ಮಾಡಿ ಹೆಬ್ಬಾವು ರಕ್ಷಿಸಲಾಯಿತು. ಪಶುವೈದ್ಯ ಡಾ| ಯಶಸ್ವಿ ಅವರಲ್ಲಿ ಹೆಬ್ಬಾವಿಗೆ ಚಿಕಿತ್ಸೆ ನೀಡಲಾಯಿತು. ಹೆಚ್ಚಿನ ಚಿಕಿತ್ಸೆಗೆಂದು ಎಕ್ಸ್‌ರೇ ಮಾಡಿಸಿದಾಗ ದೇಹದಲ್ಲಿ 11 ಏರ್‌ ಬುಲ್ಲೆಟ್‌ ಪತ್ತೆಯಾಯಿತು. ಸುಮಾರು ವರ್ಷಗಳ ಹಿಂದೆಯೇ ಈ ಹೆಬ್ಟಾವಿಗೆ ಏರ್‌ಗನ್‌ನಿಂದ ಶೂಟ್‌ ಮಾಡಿರಬಹುದು. ಇದೇ ಕಾರಣಕ್ಕೆ ಕೆಲವೊಂದು ಬುಲೆಟ್‌ಗಳ ಮೇಲೆ ಚರ್ಮ ಬೆಳೆದಿತ್ತು. ಎರಡು ಬುಲ್ಲೆಟ್‌ಗಳನ್ನು…

Read More

ಕಾರ್ಕಳ : ಮಿಯ್ಯಾರು ಕಂಬಳ ಕ್ರೀಡಾಂಗಣದಲ್ಲಿ ಕೇರಳ ಮೂಲದ ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ. ವಿಜೇಶ್ ಯಾನೆ ಮೋಹನ್ ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಏ. 19 ರಾತ್ರಿಯಿಂದ ಏ.20ರ ಬೆಳಗಿನ ಮಧ್ಯಾವಧಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗುತ್ತಿದೆ. ವಿಜೇಶ್ ಮಾಳದಲ್ಲಿ ವಾಸಿಸುತ್ತಿದ್ದು ಶೇಂದಿ ವ್ಯಾಪಾರ ಮಾಡುತ್ತಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕಾರ್ಕಳ ನಗರ ಪೊಲೀಸರು ಪರಿಶೀಲನೆ ನಡೆಸಿದ್ದಾರೆ

Read More

ಪುತ್ತೂರು  : ಮಾಜಿ ಐಪಿಎಸ್ ಅಧಿಕಾರಿ ತಮಿಳು ನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಎಪ್ರಿಲ್ 23 ರಂದು ಪುತ್ತೂರಿನಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಪರವಾಗಿ ರೋಡ್ ಶೋ ನಡೆಯಲಿದೆ ಎಪ್ರಿಲ್ 23 ರಂದು ಬೆಳಿಗ್ಗೆ 8.30ಕ್ಕೆ ಅಣ್ಣಾಮಲೈ ಅವರು ಸುಳ್ಯ ನಗರದಲ್ಲಿ ರೋಡ್ ಶೋ ನಡೆಸುವರು. 10.30ಕ್ಕೆ ಪುತ್ತೂರಿಗೆ ಬರಲಿದ್ದು, ದರ್ಬೆ ವೃತ್ತದಿಂದ ಬಸ್ ನಿಲ್ದಾಣದವರೆಗೆ ರೋಡ್ ಶೋ ನಡೆಸುವರು. ಬಳಿಕ ಬಂಟ್ವಾಳ ತಾಲ್ಲೂಕಿನ ಫರಂಗಿಪೇಟೆಯ ಕಾರ್ಯಕ್ರಮಕ್ಕೆ ತೆರಳುವರು. ಮಧ್ಯಾಹ್ನ 3 ಗಂಟೆಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಉಪ್ಪಿನಂಗಡಿಯಲ್ಲಿ ರೋಡ್‌ ಶೋ ನಡೆಯಲಿದೆ. ಸಂಜೆ 5.30ಕ್ಕೆ ವಿಟ್ಲದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ನೇತೃತ್ವದಲ್ಲಿ ರೋಡ್ ಶೋ ನಡೆಯಲಿದೆ ಎಂದು ಅವರು ತಿಳಿಸಿದರು.

Read More

ಕಾರ್ಕಳ : ರಾತ್ರಿ ವೇಳೆ ಕಾರ್ಕಳ ತಾಲೂಕಿನ ಕೆದಿಂಜೆಯಲ್ಲಿ ವಿದ್ಯುತ್‌ ಶಾಕ್‌ನಿಂದ ಸೆಂಟ್ರಿಂಗ್‌ ಕೆಲಸ ಮಾಡುತ್ತಿದ್ದ ಹಾವೇರಿ ಮೂಲದ ಅನಂತೇಶ್ವರ (29) ಎಂಬವರು ಮೃತಪಟ್ಟ ಘಟನೆ ಸಂಭವಿಸಿದೆ. ರಾತ್ರಿ 9 ಗಂಟೆ ವೇಳೆಗೆ ರಾಡ್‌ ಕಟ್ಟಿಂಗ್‌ ಕೆಲಸ ಮಾಡುತ್ತಿರುವ ವೇಳೆ ವಿದ್ಯುತ್‌ ಶಾಕ್‌ ಹೊಡೆದಿದೆ. ಸ್ಥಳೀಯರು ಅವರನ್ನು ತತ್‌ಕ್ಷಣವೇ ನಗರದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದರೂ ಫ‌ಲಕಾರಿಯಾಗದೆ ಮೃತಪಟ್ಟಿದ್ದಾರೆ. ಶಾಕ್‌ಗೆ ಕಾರಣ ತಿಳಿದು ಬಂದಿಲ್ಲ. ಆದರೆ ಈ ವೇಳೆ ಪರಿಸರದಲ್ಲಿ ಮಳೆಯ ಜತೆ ಗುಡುಗು-ಮಿಂಚು ಕೂಡ ಬರುತ್ತಿತ್ತು ಎನ್ನಲಾಗಿದೆ.

Read More

ಉಡುಪಿ : ಕೆಲಸಕ್ಕೆ ಸೇರಲು ಬಂದ ಯುವತಿಯೊಬ್ಬಳು ನಾಪತ್ತೆಯಾದ ಘಟನೆ ಉಡುಪಿ ಜಿಲ್ಲೆಯ ಉದ್ಯಾವರ ಗ್ರಾಮದಲ್ಲಿ ನಡೆದಿದೆ. ಉದ್ಯಾವರ ಗ್ರಾಮದ ಪಿತ್ರೋಡಿಯ ಫ್ಯಾಕ್ಟರಿ ಒಂದರ ಕೆಲಸಕ್ಕೆ ಸೇರಲು ಬಂದು ಉದ್ಯಾವರದ ರೂಮಿನಲ್ಲಿ ಉಳಿದುಕೊಂಡಿದ್ದ ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ತಾಲೂಕು ಕಾಸರಕೋಡ ಮಲಬಾರ ಕೇರಿ ನಿವಾಸಿ ಪ್ರೇಮಾ (25) ಎಂಬ ಯುವತಿಯು ಏಪ್ರಿಲ್ 15 ರಂದು ರೂಮಿನಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ ಎತ್ತರ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ, ಕೊಂಕಣಿ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾಪು ಪೊಲೀಸ್ ಠಾಣೆ ದೂ.ಸಂಖ್ಯೆ: 0820-2551033, ಕಾಪು ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 0820-2572333, ಪೊಲೀಸ್ ಉಪಾಧೀಕ್ಷಕರ ಕಚೇರಿ ದೂ.ಸಂಖ್ಯೆ: 08258-231333, ಪೊಲೀಸ್ ಅಧೀಕ್ಷಕರ ಕಚೇರಿ ದೂ.ಸಂಖ್ಯೆ: 0820-2534777 ಹಾಗೂ ಜಿಲ್ಲಾ ನಿಸ್ತಂತು ಕೊಠಡಿ ದೂ.ಸಂಖ್ಯೆ:0820-2526444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕಾಪು ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್, ಕಾಂಗ್ರೆಸ್ ನಾಯಕಿ ಕವಿತಾ ಸನಿಲ್ (Kavita Sanil) ಶನಿವಾರ ಬಂಟ್ವಾಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದರು.ಬಳಿಕ ಮಾತನಾಡಿದ ಕವಿತಾ ಸನಿಲ್, ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿ ನಾನು ಪಕ್ಷ ಸೇರ್ಪಡೆಯಾಗಿದ್ದೇನೆ ಎಂದರು. ದೇಶಕ್ಕೆ ಮೋದಿ ನಾಯಕತ್ವ ಅಗತ್ಯವಿದೆ. ಅವರ ಕೈಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದು, ಇದಕ್ಕೂ ಮೊದಲು ನನ್ನ ರಾಜಕೀಯ ಗುರು ಬಿ. ಜನಾರ್ದನ ಪೂಜಾರಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದೇನೆ ಎಂದರು.

Read More

ಮೂಡುಬಿದಿರೆ: ಪ್ರತೀ ತಿಂಗಳು ಕಂತು ಕಟ್ಟಿ ಇಷ್ಟದ ವಸ್ತುವನ್ನು ಮನೆಗೆ ಕೊಂಡುಹೋಗುವ ಅದೃಷ್ಟದ “ಡ್ರೀಮ್ ಡೀಲ್” ಇದರ 2ನೇ ಆವೃತ್ತಿಯು ಎ.21 ರಿಂದ ಶುಭಾರಂಭಗೊಳ್ಳಲಿದೆ. ಇದರ ಉದ್ಘಾಟನೆಯನ್ನು ತುಳು ಚಿತ್ರರಂಗದ ನವರಸ ನಾಯಕ ಬೊಜರಾಜ್ ವಾಮಂಜೂರು, ಕಂಬಳ ಓಟಗಾರ ಶ್ರೀನಿವಾಸ ಗೌಡ, ಆಳ್ವಸ್ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಾದ ಡಾ. ಮೋಹನ್ ಆಳ್ವ, ಯುವ ವಕೀಲರಾದ ಶ್ವೇತ ಜೈನ್ ಮೂಡಬಿದಿರೆ , ಅಬ್ದುಲ್ ಪುತ್ತಿಗೆ ನೆರವೇರಿಸಲಿದ್ದಾರೆ. ಈ ವಿಶೇಷ ಡ್ರೀಮ್ ಡೀಲ್‌ನಲ್ಲಿ 20 ತಿಂಗಳವರೆಗೆ ಪ್ರತಿ ತಿಂಗಳು 1000 ರೂ. ಪಾವತಿಸಿದ ನಂತರ ಉಳಿದ ಜನರು, ತಮ್ಮ ಉಳಿತಾಯದ ಮೌಲ್ಯಕ್ಕೆ ಸಮಾನವಾದ ಅಥವಾ ಉಳಿಸಿದ ಮೊತ್ತಕ್ಕಿಂತ ಹೆಚ್ಚಿನ ಮೌಲ್ಯದ ಬ್ರಾಂಡ್ ಮತ್ತು ಉತ್ತಮ ಗುಣಮಟ್ಟದ ವಸ್ತುಗಳನ್ನು ಆಯ್ಕೆ ಮಾಡಲು ಅವಕಾಶವನ್ನು ಹೊಂದಿರುತ್ತಾರೆ. ಈ ಡ್ರೀಮ್ ಡೀಲ್‌‌ನ ಮೊದಲ ಕಂತು ಮೇ.22 ರಂದು ಆರಂಭವಾಗಲಿದ್ದು, ಪ್ರತೀ ತಿಂಗಳು 10 ನೇ ತಾರೀಕಿಗೆ ಮುಂಚಿತವಾಗಿ ಕಂತನ್ನು ಪಾವತಿಸಿದರೆ ವಿಶೇಷ ಬಹುಮಾನ 25 ಗೋಲ್ಡ್ ರಿಂಗ್ ಪಡೆಯುವ…

Read More

ನವದೆಹಲಿ : ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿದ್ದ ಫ್ಯಾಶನ್ ಇನ್‌ ಫ್ಲುಯೆನ್ಸರ್‌ ಸುರಭಿ ಜೈನ್ ಅಂಡಾಶಯ ಕ್ಯಾನ್ಸರ್ ನಿಂದಾಗಿ ತನ್ನ 30ನೇ ವರ್ಷಕ್ಕೆ ಸಾವನಪ್ಪಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿರುವ ಶ್ರೀಮತಿ ಜೈನ್ ಅಂಡಾಶಯದ ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆಯುತ್ತಿದ್ದರು. ಕ್ಯಾನ್ಸರ್‌ ಗೆ ಸಂಬಂಧಿಸಿದಂತೆ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಫೋಟೋವನ್ನು ಹಂಚಿಕೊಂಡು ಆರೋಗ್ಯದ ಬಗ್ಗೆ ಇತ್ತೀಚೆಗೆ ಅಪ್ಡೇಟ್‌ ನ್ನು ಹಂಚಿಕೊಂಡಿದ್ದರು. ಸುರಭಿ ಜೈನ್ ಎಂಟು ವಾರಗಳ ಹಿಂದೆ ಆಸ್ಪತ್ರೆಯಲ್ಲಿ ತನ್ನ ಚಿತ್ರವನ್ನು ಹಂಚಿಕೊಂಡಿದ್ದಳು. ಗುರುವಾರ ಅವರು ನಿಧನರಾಗಿದ್ದು ಶುಕ್ರವಾರ(ಏ.19 ರಂದು) ಗಾಜಿಯಾಬಾದ್‌ನಲ್ಲಿ ಅಂತ್ಯಸಂಸ್ಕಾರ ಮಾಡಲಾಯಿತು ಎಂದು ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. “ನನ್ನ ಆರೋಗ್ಯದ ಬಗ್ಗೆ ನಾನು ನಿಮಗೆ ಎಲ್ಲವನ್ನೂ ಅಪ್‌ಡೇಟ್ ಮಾಡಿಲ್ಲ ಎಂದು ನನಗೆ ತಿಳಿದಿದೆ, ಅದು ನನಗೆ ಪ್ರತಿದಿನ ಬರುತ್ತಿರುವ ಸಂದೇಶಗಳ ಸಂಖ್ಯೆಯನ್ನು ತಪ್ಪಾಗಿ ಭಾವಿಸುತ್ತದೆ. ಆದರೆ ವಿಷಯಗಳು ಸರಿಯಾಗಿ ನಡೆಯುತ್ತಿಲ್ಲ. ಆದ್ದರಿಂದ ಹಂಚಿಕೊಳ್ಳಲು ಹೆಚ್ಚು ಇಲ್ಲ. ಕಳೆದ 2 ತಿಂಗಳುಗಳು ನಾನು ಹೆಚ್ಚಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ, ಇದು…

Read More

ಸುಳ್ಯ : ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದುಕೊಂಡ ಪರಿಣಾಮ ಪ್ರಯಾಣಿಕರು ಸಣ್ಣಪುಟ್ಟ ಗಾಯಗೊಂಡ ಘಟನೆ ಸುಳ್ಯ ಶ್ರೀರಾಮ್ ಪೇಟೆ ಬಳಿ ಇಂದು ನಡೆದಿದೆ. ಓಮ್ನಿ ಕಾರು ಹಾಗೂ ಸೆಲಾರಿಯೋ ಕಾರಿನ ನಡುವೆ ಶ್ರೀರಾಮ್ ಪೇಟೆ ಪೋಸ್ಟ್ ಆಫೀಸ್ ಕಚೇರಿಯ ಬಳಿ ಡಿಕ್ಕಿ ಸಂಭವಿಸಿದೆ. ಘಟನೆಯಿಂದಾಗಿ ಎರಡು ಕಾರಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯವಾಗಿದೆ. ಕಾರುಗಳ ಡಿಕ್ಕಿಯಿಂದ ಸುಳ್ಯ ಮುಖ್ಯ ಬೀದಿಯಲ್ಲಿ ಸ್ವಲ್ಪ ಹೊತ್ತು ಸಂಚಾರಕ್ಕೆ ತಡೆ ಉಂಟಾಯಿತು. ಈ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಾಗಿದೆ.

Read More