ಬೆಳ್ತಂಗಡಿ: ಸಮೀಪದ ಶಿಬಾಜೆ ಗ್ರಾಮದ ತಂಬ್ಲಾಜೆಯಲ್ಲಿ ಪಿಕಪ್ ವಾಹನವೊಂದು ಹಿಮ್ಮುಖವಾಗಿ ಚಲಿಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ರುಕ್ಮ ಮುಗೇರ ಹಾಗೂ ನಾಗೇಶ್ ಅವರು ಪಿಕಪ್ ವಾಹನದಲ್ಲಿ ಗೊಬ್ಬರ ಲೋಡ್ ಮಾಡಿಕೊಂಡು ಬರಲು ತೆರಳಿದ್ದರು. ಈ ವೇಳೆ ಶಿಬಾಜೆ ಬಳಿ ನಿಲ್ಲಿಸಿದಾಗ ರುಕ್ಮ ಮುಗೇರ ರಸ್ತೆಯ ಬದಿಯಲ್ಲಿ ನಿಂತುಕೊಂಡಿದ್ದರು. ಅದರ ಚಾಲಕ ಜಯೇಶ್ ಅವರು ದುಡುಕುತನದಿಂದ ಹಿಮ್ಮುಖವಾಗಿ ಚಲಾಯಿಸಿ, ರಸ್ತೆಯ ಬದಿಯಲ್ಲಿ ನಿಂತುಕೊಂಡಿದ್ದ ರುಕ್ಮ ಮುಗೇರ ಅವರಿಗೆ ಢಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ, ರುಕ್ಮ ಮುಗೇರ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡರು ತತ್ಕ್ಷಣ ಅವರಿಗೆ ಉಜಿರೆಯ ಎಸ್ಡಿಎಂ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಬೇರೆ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಈ ವಿಚಾರವಾಗಿ ಉಪೇಂದ್ರ ಅವರು ನೀಡಿದ ದೂರಿನಂತೆ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Author: main-admin
ಪುತ್ತೂರು: ಜೀಪೊಂದು ಬೈಕ್ ಗೆ ಢಿಕ್ಕಿ ಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟು ಅವರ ಇಬ್ಬರು ಮಕ್ಕಳು ಗಂಭೀರ ಗಾಯಗೊಂಡ ಘಟನೆ ಬುಧವಾರ ರಾತ್ರಿ ಪುತ್ತೂರು ಸುಬ್ರಹ್ಮಣ್ಯ ರಸ್ತೆಯ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಸರ್ವೆ ಗ್ರಾಮದ ಬಡಕ್ಕೋಡಿ ಕಡ್ಯ ನಿವಾಸಿ ಲೋಕೇಶ್(48) ಮೃತಪಟ್ಟವರು. ಅವರ ಇಬ್ಬರು ಮಕ್ಕಳು ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದಿಬಂದಿದೆ. ಪ್ರಸ್ತುತ ಮಂಗಳೂರಿನಲ್ಲಿ ಲಾರಿ ಚಾಲಕರಾಗಿರುವ ಲೋಕೇಶ್ ಅವರು ಮಕ್ಕಳೊಂದಿಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ನಡೆಯುತ್ತಿರುವ ಜಾತ್ರೆಗೆ ಆಗಮಿಸಿ ಹಿಂದಿರುಗುತ್ತಿದ್ದ ವೇಳೆ ಅವರು ಚಲಾಯಿಸುತ್ತಿದ್ದ ಬೈಕ್ ಗೆ ಜೀಪು ಢಿಕ್ಕಿ ಹೊಡೆದು, ಢಿಕ್ಕಿಯ ರಭಸಕ್ಕೆ ಬೈಕ್ ಎರಡು ತುಂಡಾಗಿದೆ. ಸುಮಾರು 50 ಮೀಟರ್ ದೂರದ ತನಕ ಬೈಕನ್ನು ಜೀಪ್ ಎಳೆದುಕೊಂಡು ಹೋಗಿದ್ದು,ಈ ಸಂದರ್ಭದಲ್ಲಿ ರಸ್ತೆಗೆ ಎಸೆಯಲ್ಪಟ್ಟ ಲೋಕೇಶ್ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.ಪುತ್ತೂರು ಸಂಚಾರಿ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ತನಿಖೆ…
ಬಂಟ್ವಾಳ: ಬಡ್ಡಕಟ್ಟೆಯಲ್ಲಿ ವ್ಯಕ್ತಿಯೋರ್ವರಿಗೆ ಚೂರಿ ಇರಿದು ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಬಂಟ್ವಾಳ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಬಂಧಿತ ಆರೋಪಿ ರವಿ ನಾವೂರು ಎಂದು ಗುರುತಿಸಲಾಗಿದೆ. ಆತ ಎ. 14ರ ರಾತ್ರಿ ಜಕ್ರಿಬೆಟ್ಟು ನಿವಾಸಿ ಪುಷ್ಪರಾಜ್ ಅವರ ಕುತ್ತಿಗೆಯ ಭಾಗಕ್ಕೆ ಚೂರಿಯಿಂದ ಇರಿದು ಪರಾರಿಯಾಗಿದ್ದ. ಗಂಭೀರ ಗಾಯಗೊಂಡಿದ್ದ ಪುಷ್ಪರಾಜ್ ಅವರು ಪ್ರಸ್ತುತ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿಯು ಕೃತ್ಯ ನಡೆಸಿದ ಬಳಿಕ ಮೊಬೈಲ್ ಸ್ವಿಚ್ ಆಫ್ ಮಾಡಿ ಪರಾರಿಯಾಗಿದ್ದ. ಇವರಿಬ್ಬರ ಮಧ್ಯೆ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿ ಗಲಭೆ ನಡೆದಿತ್ತು ಎಂದು ಗುರುರಾಜ್ ಅವರು ಪೊಲೀಸರಿಗೆ ನೀಡಿದ್ದ ದೂರಿನಲ್ಲಿ ಆರೋಪಿಸಿದ್ದರು. ಬಂಟ್ವಾಳ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.
ಮಣಿಪಾಲ : ಹಣ ದ್ವಿಗುಣ ಗೊಳಿಸುವ ಆಸೆಗೆ ಬಿದ್ದು ವ್ಯಕ್ತಿಯೊಬ್ಬರು 1.65 ಲಕ್ಷ ರೂ. ಕಳೆದುಕೊಂಡಿರುವ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಶಿವಳ್ಳಿ ಗ್ರಾಮದ ನರಸಿಂಹ ಅವರು ಟೆಲಿಗ್ರಾಂ ನಲ್ಲಿದ್ದ OPTIONTIPS ಎಂಬ ಶೇರು ಮಾರುಕಟ್ಟೆ ಬಗ್ಗೆ ಸಲಹೆ ನೀಡುವಂತಹ ಗ್ರೂಪ್ನ್ನು ಸುಮಾರು 15 ದಿನದಿಂದ ಉಪಯೋಗಿಸುತ್ತಿದ್ದರು, ಎ.1 ರಂದು ಟೆಲಿಗ್ರಾಂ ಹುಡುಕುತ್ತಿದ್ದಾಗ ಮೊದಲು ಉಪಯೋಗಿಸುತ್ತಿದ್ದ ಟೆಲಿಗ್ರಾಂ ನಂತೆಯೇ ಹೋಲುವ ಇನ್ನೊಂದು OPTIONTIPS ಟೆಲಿಗ್ರಾಂ ಇದ್ದು ಅದನ್ನು ಮೊದಲು ಉಪಯೋಗಿಸಿದ ಟೆಲಿಗ್ರಾಂ ಎಂದು ತಿಳಿದು ಉಪಯೋಗಿಸಿದಾಗ ಅದರಲ್ಲಿ ಹಣ ದ್ವಿಗುಣಗೊಳಿಲಾಗುತ್ತದೆ ಎಂಬ ಮಾಹಿತಿ ನೀಡಲಾಗಿತ್ತು. ಇದನ್ನು ನಂಬಿದ ನರಸಿಂಹ ಅವರು ಆ್ಯಪ್ನಲ್ಲಿ ಅಪರಿಚಿತ ವ್ಯಕ್ತಿ ಸೂಚಿಸಿದಂತೆ ಹಂತ ಹಂತವಾಗಿ ಒಟ್ಟು ರೂ 1,65,584/- ಹಣ ವರ್ಗಾವಣೆ ಮಾಡಿರುತ್ತಾರೆ. ಆದರೆ ಅಪರಿಚಿತ ವ್ಯಕ್ತಿಯು ಹಣ ದ್ವಿಗುಣಗೊಳಿಸಲಾಗುತ್ತದೆ ಎಂದು ನಂಬಿಸಿ ಹಣ ಪಡೆದು ವಾಪಾಸು ನೀಡದೇ ಮೋಸ ಮಾಡಿರುವುದಾಗಿ ನೀಡಿದ ದೂರಿನಂತೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಕಳೆದ ಒಂದು ವರ್ಷದಿಂದ ರಾಜ್ಯ ಬರದಿಂದ ಕಂಗೆಟ್ಟಿದ್ದು ರೈತರು ಸೇರಿದಂತೆ ಇಡೀ ರಾಜ್ಯದ ಜನತೆ ಹಲವು ಸಂಕಷ್ಟಗಳನ್ನು ಎದುರಿಸಿದ್ದಾರೆ.ಹೀಗಾಗಿ ರಾಜ್ಯದ ಎಲ್ಲಾ ಕೋರ್ಟ್ಗಳಲ್ಲಿ ಕಾರ್ಯನಿರ್ವಹಿಸುವ ವಕೀಲರಿಗೆ ಕರ್ನಾಟಕ ಹೈಕೋರ್ಟ್ ತುಸು ನಿರಾಳವಾಗುವಂತಹ ಸುದ್ದಿ ನೀಡಿದೆ. ಕಪ್ಪು ಕೋಟ್ ಧರಿಸುವುದರಿಂದ ತಾತ್ಕಾಲಿಕ ವಿನಾಯಿತಿ ನೀಡಿದೆ. ಹೌದು ಕೋರ್ಟ್ನಲ್ಲಿ ವಾದ ಮಂಡಿಸುವ ವಕೀಲರಿಗೆ ಇದೀಗ ತಾತ್ಕಾಲಿಕವಾಗಿ ಮುಕ್ತಿ ಸಿಕ್ಕಿದ್ದು, ಬೇಸಿಗೆಯ ದಿನಗಳಲ್ಲಿ ವಕೀಲರು ಕೋರ್ಟ್ ಧರಿಸದಿದ್ದರೂ ಕೂಡ ನಡೆಯುತ್ತದೆ. ಆದರೆ ಕಪ್ಪು ಕೋರ್ಟ್ ಹೊರದಾಗಿ ಯಾವ ಜರಿಸನ್ನು ಧರಿಸಬೇಕು ಎಂಬುದರ ಕುರಿತು ಇದೀಗ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ವಕೀಲರು ಕಪ್ಪು ಕೋಟಿನ ಬದಲಿಗೆ ಸಾದಾ ಬಿಳಿ ಶರ್ಟ್ ಸಲ್ವಾರ್-ಕಮೀಜ್ ಅಥವಾ ಯಾವುದೇ ಶಾಂತ ಬಣ್ಣದ ದಿರಿಸುಗಳನ್ನು ಧರಿಸಬಹುದು ಎಂದು ನ್ಯಾಯಾಲಯದ ರಿಜಿಸ್ಟ್ರಾರ್ ಕೆಎಸ್ ಭರತ್ ಕುಮಾರ್ ಮಂಗಳವಾರ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.ಏಪ್ರಿಲ್ 5 ರಂದು ಬೆಂಗಳೂರಿನ ವಕೀಲರ ಸಂಘದ ಅಧ್ಯಕ್ಷರಿಂದ ಪಡೆದ ಮನವಿಯನ್ನು ಆಧರಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಬಂಟ್ವಾಳ : ಕಾರು ಡಿಕ್ಕಿಯಾದ ವಿಚಾರಕ್ಕೆ ದಂಪತಿಗೆ ನಾಲ್ವರ ತಂಡವೊಂದು ಹಲ್ಲೆ ನಡೆಸಿರುವ ಘಟನೆ ಕಲ್ಲಡ್ಕದ ಕರಿಂಗಾನ ಕ್ರಾಸ್ ಎಂಬಲ್ಲಿ ನಡೆದಿದೆ. ಈ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪುತ್ತೂರು ಏರ್ಮುಂಜ ಪಲ್ಲ ನಿವಾಸಿಗಳಾದ ಮಂಜುನಾಥ್ ಮತ್ತು ಅವರ ಪತ್ನಿ ಪೂರ್ಣಿಮಾ ಹಲ್ಲೆಗೊಳಗಾದವರು. ಮಂಜುನಾಥ್ ಮಂಗಳೂರಿನಿಂದ ಪುತ್ತೂರು ಕಡೆಗೆ ಕಾರಿನಲ್ಲಿ ಪತ್ನಿಯೊಂದಿಗೆ ತೆರಳುತ್ತಿದ್ದರು. ಈ ವೇಳೆ ಕಲ್ಲಡ್ಕ ಸಮೀಪದ ನರಹರಿ ಎಂಬಲ್ಲಿ ಇವರ ಕಾರಿಗೆ ಹರಿಯಾಣ ಮೂಲದ ಕಾರೊಂದು ಓವರ್ ಟೇಕ್ ಮಾಡುವ ಭರದಲ್ಲಿ ಡಿಕ್ಕಿಯಾಗಿದೆ. ಈ ಸಂದರ್ಭ ಇವರು ಕೈ ಸನ್ನೆಯಲ್ಲಿ ಪ್ರಶ್ನಿಸಿದ್ದಾರೆ. ಅಪಘಾತ ಎಸಗಿದ ಕಾರು ಮುಂದೆ ಹೋಗಿ ಕಲ್ಲಡ್ಕ ಸಮೀಪದ ಕರಿಂಗಾಣ ಕ್ರಾಸ್ ಬಳಿ ಕಾರನ್ನು ಅಡ್ಡವಾಗಿ ಇರಿಸಿ ಮಂಜುನಾಥ್ ಹಾಗೂ ಅವರ ಪತ್ನಿ ಪೂರ್ಣಿಮಾ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆಯಿಂದ ಮಂಜುನಾಥ್ ಅವರ ಕಣ್ಣಿನ ಮೇಲೆ ಪೆಟ್ಟು ಬಿದ್ದಿದ್ದು, ಇದೇ ಸಂದರ್ಭ ಪೂರ್ಣಿಮಾ ಅವರ ಕುತ್ತಿಗೆಯಲ್ಲಿದ್ದ ಬಂಗಾರದ ಚೈನ್ ನಾಪತ್ತೆಯಾಗಿದೆ ಎಂದು…
ಸುರತ್ಕಲ್ : ಕಡಲಿನಲ್ಲಿ ಎಂಜಿನ್ ವೈಫಲ್ಯಕ್ಕೀಡಾಗಿ ಅಪಾಯಕ್ಕೆ ಸಿಲುಕಿದ್ದ ಕಾರವಾರ ಮೂಲದ ವ್ಯಕ್ತಿಗೆ ಸೇರಿದ್ದ ಮೀನುಗಾರಿಕೆ ದೋಣಿಯನ್ನು ಪಣಂಬೂರು ಕೇಂದ್ರೀಯ ಕೋಸ್ಟ್ ಗಾರ್ಡ್ ಕಣ್ಗಾವಲಿನಲ್ಲಿರುವ ಸಾವಿತ್ರಿಬಾಯಿ ಪುಲೆ ನೌಕೆ ಮಂಗಳವಾರ ಪತ್ತೆ ಹಚ್ಚಿ ಮೀನುಗಾರರ ಸಹಿತ ದೋಣಿಯನ್ನು ರಕ್ಷಿಸಿದೆ. ಏಪ್ರಿಲ್ 14ರಂದು ತೆರಳಿದ್ದ ಆಳ ಸಮುದ್ರ ಮೀನುಗಾರಿಕೆಗೆ ದೋಣಿ ಎಂಜಿನ್ ವೈಫಲ್ಯದಿಂದ ಸಮುದ್ರದಲ್ಲಿ ಸಿಲುಕಿಕೊಂಡಿತ್ತು. ದೋಣಿಯ ಸಿಬ್ಬಂದಿ ಕರೆ ಮಾಡಿ ನೆರವನ್ನು ಕೋರಿದ ಹಿನ್ನೆಲೆಯಲ್ಲಿ ಕಾರವಾರ ಜಿಲ್ಲಾ ಮೀನುಗಾರಿಕೆ ಇಲಾಖೆಯು ನೆರವಿಗೆ ಧಾವಿಸುವಂತೆ ಕೋಸ್ಟ್ ಗಾರ್ಡ್ ಗೆ ಸೂಚಿಸಿತ್ತು. ಕಾರ್ಯಾಚರಣೆಗಿಳಿದ ಕೋಸ್ಟ್ ಗಾರ್ಡ್ ಸಿಬ್ಬಂದಿ ದೋಣಿಯನ್ನು ತಾಂತ್ರಿಕ ಸಹಾಯವನ್ನು ಒದಗಿಸಿ ಹಡಗನ್ನು ಸುರಕ್ಷಿತವಾಗಿ ಕಾರವಾರ ಬಂದರಿಗೆ ಎಳೆದು ತಂದು ಮಾಲಕರಿಗೆ ಹಸ್ತಾಂತರಿಸಿದ್ದಾರೆ.
ಮಂಗಳೂರು: ದಂತವೈದ್ಯಕೀಯ ಪದವಿ ಪೂರೈಸಿ, ಮಂಗಳವಾರದಂದೇ ಕೆಲಸಕ್ಕೆ ಹಾಜರಾಗಬೇಕಿದ್ದ ಬಿಡಿಎಸ್ ಪದವೀಧರೆ ಮಂಗಳೂರಿನ ಪಾಂಡೇಶ್ವರದಲ್ಲಿರುವ ಪಿಜಿಯಲ್ಲಿ ಅಸಹಜ ರೀತಿಯಲ್ಲಿ ಮೃತಪಟ್ಟಿದ್ದಾರೆ. ಉಳ್ಳಾಲ ತಾಲೂಕಿನ ನರಿಂಗಾನ ನಿವಾಸಿ, ದಂತ ಬಿಡಿಎಸ್ ಪದವಿಧರೆ ಸ್ವಾತಿ ಶೆಟ್ಟಿ (24) ಮೃತಪಟ್ಟ ದುರ್ದೈವಿ. ಎ.ಜೆ. ಆಸ್ಪತ್ರೆಯಲ್ಲಿ ಬಿಡಿಎಸ್ ಪದವಿ ಪೂರೈಸಿದ್ದ ಸ್ವಾತಿ ಪಾಂಡೇಶ್ವರದ ಕ್ಲಿನಿಕ್ ಒಂದರಲ್ಲಿ ಎ.16ರಂದು ಕೆಲಸಕ್ಕೆ ಹಾಜರಾಗಬೇಕಿತ್ತು. ನಿನ್ನೆಯಷ್ಟೇ ತಾಯಿಯೊಂದಿಗೆ ಬಂದು ಪಾಂಡೇಶ್ವರ ಕ್ಲಿನಿಕ್ ನಲ್ಲಿ ಕೆಲಸದ ಬಗ್ಗೆ ಮಾತನಾಡಿ, ಅಲ್ಲಿಯೇ ಪಿಜಿಯಲ್ಲಿ ಉಳಿದುಕೊಂಡಿದ್ದರು. ರಾತ್ರಿ ತಾಯಿಯೊಂದಿಗೆ ಮೊಬೈಲ್ ನಲ್ಲಿ ಮಾತನಾಡಿದ್ದ ಸ್ವಾತಿ ಶೆಟ್ಟಿ, ವಿಪರೀತ ತಲೆನೋವು ಎಂದು ಹೇಳಿದ್ದರು. ಬಳಿಕ ನಾಳೆ ಮಾತನಾಡುತ್ತೇನೆ ಎಂದು ಹೇಳಿ ಕರೆ ಕಟ್ ಮಾಡಿದ್ದರು. ಮಲಗಿದ್ದ ಸ್ವಾತಿಯ ದೇಹ ಬೆಳಗ್ಗೆ ತಣ್ಣಗಾಗಿದ್ದನ್ನು ನೋಡಿ ಪಿಜಿಯಲ್ಲಿದ್ದ ಇತರರು ಪಿಜಿಯ ಸೂಪರ್ ವೈಸರ್ ಗಮನಕ್ಕೆ ತಂದಿದ್ದಾರೆ. ತಕ್ಷಣ ಆಕೆಯನ್ನು ವೆನ್ ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಆಕೆ ಮೃತಪಟ್ಟಿದ್ದಾಳದು ವೈದ್ಯರು ತಿಳಿಸಿದ್ದರು. ಸ್ವಾತಿ ಶೆಟ್ಟಿ ಬಾಯಲ್ಲಿ ನೊರೆ ಬಂದಿತ್ತು ಎಂದು…
ಸುಳ್ಯ: ರಸ್ತೆಯ ಬದಿಯಲ್ಲಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಕಾರು ಜಖಂಗೊಂಡಡಿರುವ ಘಟನೆ ಸುಳ್ಯ ಗಾಂಧಿನಗರ ಮಸೀದಿಯ ಮುಂಭಾಗದಲ್ಲಿ ನಡೆದಿದೆ. ಗಾಂಧಿನಗರ ಪೆಟ್ರೋಲ್ ಬಂಕ್ ಮಾಲಕ ಮುಜೀಬ್ ರವರು ಬೆಳಗ್ಗೆ 5ರ ಸುಮಾರಿಗೆ ಮಸೀದಿಗೆ ಕಾರಿನಲ್ಲಿ ಬಂದಿದ್ದರು. ಕಾರನ್ನು ಮಸೀದಿಯ ಎದುರಿನ ರಸ್ತೆಯ ಇನ್ನೊಂದು ಬದಿಯಲ್ಲಿ ಗಾಂಧಿನಗರ ಕಡೆಗೆ ಮುಖ ಮಾಡಿ ನಿಲ್ಲಿಸಿದ್ದರು. ಸುಮಾರು 5.30ರ ವೇಳೆಗೆ ಪುತ್ತೂರು ಕಡೆಯಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಕಂಟೈನರ್ ರಸ್ತೆ ಬದಿ ನಿಲ್ಲಿಸಿದ್ದ ಕಾರಿನ ಹಿಂಬದಿಗೆ ಢಿಕ್ಕಿ ಹೊಡೆಯಿತು. ಢಿಕ್ಕಿಯಾದ ರಭಸಕ್ಕೆ ಕಾರು ಒಂದು ಸುತ್ತು ತಿರುಗಿ ಮತ್ತೆ ಸುಳ್ಯದ ಕಡೆ ಮುಖ ಮಾಡಿ ನಿಂತಿತು. ಈ ವೇಳೆ ಅಲ್ಲೆ ಇದ್ದ ಬೈಕ್ ಗೆ ಕಾರು ತಾಗಿತೆನ್ನಲಾಗಿದೆ. ಕಾರಿನ ಹಿಂಬದಿ ಸಂಪೂರ್ಣ ಜಖಂ ಗೊಂಡಿದೆ. ವಿಷಯ ತಿಳಿದು ಪೋಲೀಸರು ಸ್ಥಳಕ್ಕೆ ಆಗಮಿಸಿದರು.
ಮಂಗಳೂರು: ವಿದ್ಯಾರ್ಥಿನಿಗೆ ಅಶ್ಲೀಲ ವಿಡಿಯೋ ತೋರಿಸಿ ಲೈಂಗಿಕ ಕಿರುಕುಳ ನೀಡುತಿದ್ದ ಶಿಕ್ಷಕನನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯಲ್ಲಿ ನಡೆದಿದೆ. ಶಿಕ್ಷಕ ವಿರಾಜ್ ಜೈನ್ ವಿರುದ್ಧ ಲೈಂಗಿಕ ಕಿರುಕುಳ ನಿಡಿರುವ ಗಂಭೀರ ಆರೋಪ ಕೇಳಿಬಂದಿದ್ದು, ವಿದ್ಯಾರ್ಥಿನಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 6ನೇ ತರಗತಿ ಓದುತ್ತಿದ್ದಾಳೆ. ಶಿಕ್ಷಕನ ಕಾಟಕ್ಕೆ ಭಯಗೊಂಡ ವಿದ್ಯಾರ್ಥಿನಿ ಶಾಲೆಗೆ ಹೋಗುವುದಿಲ್ಲ ಎಂದು ಹಠ ಹಿಡಿದಿದ್ದಾಳೆ ಈ ವೇಳೆ ಪೋಷಕರು ವಿಚಾರಿಸಿದ್ದಾರೆ. ಈ ವೇಳೆ ವಿದ್ಯಾರ್ಥಿನಿ ಶಿಕ್ಷಕ ವಿರಾಜ್ ಜೈನ್ ಕಳೆದ ಒಂದು ವರ್ಷದಿಂದ ಅಶ್ಲೀಲ ವಿಡಿಯೋ ತೋರಿಸಿ ಲೈಂಗಿಕ ಕಿರುಕುಳ ನೀಡುತ್ತಿರುವುದಾಗಿ ತಿಳಿಸಿದ್ದಾಳೆ. ಶಿಕ್ಷಕನ ವಿರುದ್ಧ ಪೋಷಕರು ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಶಿಕ್ಷಕ ವಿರಾಜ್ ಜೈನ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.










