Author: main-admin

ಮಂಗಳೂರು: ಷೇರು ಟ್ರೇಡಿಂಗ್ ಬಗ್ಗೆ ಫೇಸ್‌ಬುಕ್‌ನಲ್ಲಿ ಬಂದ ಜಾಹೀರಾತನ್ನು ನಂಬಿದ ವ್ಯಕ್ತಿ 38,53,961 ರೂ. ಕಳೆದುಕೊಂಡಿರುವ ಬಗ್ಗೆ ವರದಿಯಾಗಿದ್ದು, ಈ ಬಗ್ಗೆ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾನು ಫೇಸ್‌ಬುಕ್‌ನಲ್ಲಿ ಬಂದ ಲಿಂಕನ್ನು ತೆರೆದು ತನ್ನ ವೈಯಕ್ತಿಕ ವಿವರಗಳನ್ನು ನಮೂದಿಸಿದ್ದೆ. ಬಳಿಕ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ ಷೇರು ಟ್ರೇಡಿಂಗ್‌ನಲ್ಲಿ ನೋಂದಣಿ ಮಾಡಲು 21 ಸಾವಿರ ರೂ. ಹಣ ವರ್ಗಾವಣೆ ಮಾಡುವಂತೆ ತಿಳಿಸಿದ್ದ. ಆತ ಕಳುಹಿಸಿದ ಯುಪಿಐ ಐಡಿಗಳಿಗೆ ಹಣವನ್ನು ಪಾವತಿಸಿದ್ದೆ. ಬಳಿಕ ಟ್ರೇಡಿಂಗ್ ಕಂಪೆನಿಯವರು ಕರೆ ಮಾಡಿ ಮಾಹಿತಿ ಹಾಗೂ ತರಬೇತಿ ನೀಡಿದ್ದಾರೆ. ಹೆಚ್ಚು ಹಣ ತೊಡಗಿಸಿದಲ್ಲಿ ಹೆಚ್ಚಿನ ಲಾಭ ಪಡೆಯಬಹುದು ಎನ್ನುವ ಆಮಿಷದಂತೆ ಹಂತ ಹಂತದವಾಗಿ ವಿವಿಧ ಖಾತೆಗಳಿಂದ 38,53,961 ರೂ. ಪಾವತಿಸಿದ್ದೆ. ಹಣವನ್ನು ಹಿಂಪಡೆಯಲು ಯತ್ನಿಸಿದಾಗ ಅದು ಸಾಧ್ಯವಾಗಿಲ್ಲ. ಈ ಬಗ್ಗೆ ಸ್ನೇಹಿತರಲ್ಲಿ ವಿಚಾರಿಸಿದಾಗ ಮೋಸ ಹೋಗಿರುವುದು ಅರಿವಿಗೆ ಬಂದಿದೆ ಎಂದು ಹಣ ಕಳೆದುಕೊಂಡ ವ್ಯಕ್ತಿ ಕಾವೂರು ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

Read More

ಉಡುಪಿ: ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿ ಗುಂಡೇಟಿಗೆ ಒಳಗಾಗಿದ್ದ ಗರುಡ ಗ್ಯಾಂಗಿನ ಸದಸ್ಯ ಇಸಾಕ್‌ನನ್ನು ಮಣಿಪಾಲ ಪೊಲೀಸರು ಸೋಮವಾರ ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆತನನ್ನು ನ್ಯಾಯಾಲಯ 9 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶ ನೀಡಿದೆ. ಬೆಂಗಳೂರಿನ ನೆಲಮಂಗಲದ ಪೊಲೀಸರಿಂದ ಮಣಿಪಾಲದಲ್ಲಿ ತಪ್ಪಿಸಿ ಕೊಳ್ಳುವ ವೇಳೆ ಸಾರ್ವಜನಿಕರ ಕಾರು, ಬೈಕಿಗೆ ಗುದ್ದಿ ಪರಾರಿಯಾಗಿದ್ದ ಇಸಾಕ್‌ನನ್ನು ಮಣಿಪಾಲ ಪೊಲೀಸರು ಮಾ.12ರಂದು ಹಾಸನದಲ್ಲಿ ಬಂಧಿಸಿದ್ದರು. ಅಲ್ಲಿಂದ ಆತನನ್ನು ಕರೆ ತರುವಾಗ ದಾರಿ ಮಧ್ಯೆ ಹಿರಿಯಡ್ಕ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರಿಗೆ ಹಲ್ಲೆ ನಡೆಸಿ, ಪರಾರಿಯಾಗಲು ಯತ್ನಿಸಿದ್ದನು. ಈ ವೇಳೆ ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿದ್ದರು. ಬಳಿಕ ಆತನನ್ನು ಚಿಕಿತ್ಸೆಗಾಗಿ ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಂದ ಆತನನ್ನು ಶಸ್ತ್ರಚಿಕಿತ್ಸೆಗಾಗಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ವರ್ಗಾಯಿಸಲಾಗಿತ್ತು. ಇದೀಗ ಚೇತರಿಕೆ ಕಂಡಿರುವ ಇಸಾಕ್‌ನನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿ ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ಒಪ್ಪಿಸುವಂತೆ ಮನವಿ ಮಾಡಿದರು. ಅದರಂತೆ ನ್ಯಾಯಾಲಯವು ಆರೋಪಿಯನ್ನು ಎ.1ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶ ನೀಡಿದರು.…

Read More

ಉಡುಪಿ: ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ನಡೆದ ಘಟನೆಯ ಮೇಲೆ ದಾಖಲಿಸಿದ ಪ್ರಕರಣಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಸಂತ್ರಸ್ತೆ ಲಕ್ಕವ್ವ ಬಾಯಿ ನೇತೃತ್ವದಲ್ಲಿ ಸಮುದಾಯದವರು ಜಿಲ್ಲಾಧಿಕಾರಿ ಡಾ ಕೆ.ವಿದ್ಯಾಕುಮಾರಿ ಅವರಿಗೆ ಸೋಮವಾರ (ಮಾ.24) ಮನವಿ ಸಲ್ಲಿಸಿದರು. ಹಲವು ವರ್ಷಗಳಿಂದ ವಿವಿಧ ಜಿಲ್ಲೆಗಳಿಂದ ಉದ್ಯೋಗ ಅರಸಿಕೊಂಡು ಉಡುಪಿಗೆ ಬಂದು ಮಲ್ಪೆ ಮೀನುಗಾರರ ಸಂಘದ ಸಹಕಾರದಿಂದ ಮಲ್ಪೆ ಬಂದರಿನಲ್ಲಿ ಕೆಲಸ ಮಾಡಿಕೊಂಡಿದ್ದೇವೆ. ಇತ್ತೀಚೆಗೆ ಆಕಸ್ಮಿಕವಾಗಿ ನಡೆದ ಘಟನೆಯ ಅನಂತರ ನಮ್ಮ ಸಮುದಾಯದ ಪ್ರಮುಖರು ಹಾಗೂ ಮಲ್ಪೆ ಮೀನುಗಾರರ ಸಂಘದ ಪದಾಧಿಕಾರಿಗಳ ನೇತೃತ್ವದಲ್ಲಿ ಈ ಸಮಸ್ಯೆಯನ್ನು ಮಲ್ಪೆ ಪೊಲೀಸ್ ಠಾಣೆಯಲ್ಲಿ ಸೌಹಾರ್ದಯುತವಾಗಿ ಇತ್ಯರ್ಥ ಮಾಡಿಕೊಳ್ಳಲಾಗಿದೆ. ಆದರೂ ಮುಗ್ದ ಮೀನುಗಾರರ ಮೇಲೆ ಕೇಸುಗಳನ್ನು ಹಾಕಿ ಬಂಧಿಸಿರುವುದು ಸರಿಯಲ್ಲ. ಮೀನುಗಾರರ ಮೇಲಿನ ಪ್ರಕರಣಗಳನ್ನು ಹಿಂಪಡೆದು ಸಾವಿರಾರು ಮಂದಿ ಉದ್ಯೋಗ ಅರಸಿ ಬಂದ ನಮ್ಮಂತಹ ಬಡ ಕಾರ್ಮಿಕರಿಗೆ ಸೌಹಾರ್ದಯುತ ರೀತಿಯಲ್ಲಿ ಕೆಲಸ ಮಾಡಿ ಉತ್ತಮ ಜೀವನ ನಡೆಸಲು ಅವಕಾಶ ನೀಡುವಂತೆ ಮನವಿಯಲ್ಲಿ ತಿಳಿಸಿದ್ದಾರೆ. ಮನವಿಯ ಪ್ರತಿಯನ್ನು ಶಾಸಕ ಯಶ್‌ಪಾಲ್ ಸುವರ್ಣ ಅವರಿಗೆ ಈ…

Read More

ನವದೆಹಲಿ: ಮನೆಯಲ್ಲಿ ಸುಟ್ಟ ಸ್ಥಿತಿಯಲ್ಲಿ 15 ಕೋಟಿ ರೂ.ಗಳ ನೋಟಿನ ಕಂತೆಗಳು ಸಿಕ್ಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಮುಂದಿನ ಆದೇಶದವರೆಗೆ ಯಶವಂತ್‌ ವರ್ಮಾ ಅವರನ್ನು ತಕ್ಷಣದಿಂದಲೇ ಕರ್ತವ್ಯದಿಂದ ವಜಾಗೊಳಿಸಿ ದೆಹಲಿ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ.ಕೆ. ಉಪಾಧ್ಯಾಯ ಆದೇಶ ಹೊರಡಿಸಿದ್ದಾರೆ. ಇದಕ್ಕೂ ಮುನ್ನ ಸುಪ್ರೀಂ ಕೋರ್ಟ್‌ ಈ ಪ್ರಕರಣದ ವಿಚಾರಣೆಗಾಗಿ ಪಂಜಾಬ್‌, ಹರಿಯಾಣ ಮತ್ತು ಕರ್ನಾಟಕ ಹೈಕೋರ್ಟ್‌ಗಳ ನ್ಯಾಯಮೂರ್ತಿಗಳ ಸಮಿತಿಯನ್ನು ರಚಿಸಿದೆ.ದೆಹಲಿ ಹೈಕೋರ್ಟ್‌ ನ್ಯಾಯಮೂರ್ತಿ ಯಶವಂತ್‌ ವರ್ಮಾ ಅವರ ಮನೆಯಲ್ಲಿ ಬೆಂಕಿ ನಂದಿಸುವಾಗ ಹಣದ ರಾಶಿ ಪತ್ತೆಯಾಗಿತ್ತು. ಇದು ಇಡೀ ದೇಶವನ್ನೇ ನಲುಗಿಸಿತ್ತು. ಇದೀಗ ಭಾರೀ ಸಂಚಲನ ಮೂಡಿಸಿರುವ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಶವಂತ್‌ ವರ್ಮಾ ಅವರನ್ನು ಕರ್ತವ್ಯದಿಂದ ವಜಾಗೊಳಿಸಲಾಗಿದೆ.

Read More

ಕಾರ್ಕಳ : ಮೆಣಸಿನ ಹುಡಿ ಎರಚಿ ಹಣ ಸುಲಿಗೆ ಮಾಡಿರುವುದಾಗಿ ನಾಟಕವಾಡಿ ಪೊಲೀಸರಿಗೆ ಸುಳ್ಳು ಮಾಹಿತಿ ನೀಡಿದ ವ್ಯಕ್ತಿಯ ವಿರುದ್ಧ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂಡಬಿದ್ರೆ ತಾಲೂಕಿನ ಕಡಂದಲೆ ನಿವಾಸಿ ವಿಶ್ವನಾಥ ಎಂಬಾತ ತಾನು ಮಾಡಿದ್ದ ಸಾಲವನ್ನು ಮರು ಪಾವತಿಸಲು ಸಾಧ್ಯವಾಗದೆ ತನ್ನ ಬಗ್ಗೆ ಅನುಕಂಪ ಉಂಟು ಮಾಡಿಕೊಳ್ಳಲು ಈ ನಾಟಕ ಆಡಿರುವುದಾಗಿ ದೂರಲಾಗಿದೆ. ಈತ ರಾತ್ರಿ ಬೈಕಿನಲ್ಲಿ ಮಂಜರಪಲ್ಕೆಯಿಂದ ತನ್ನ ಮನೆಗೆ ಹೋಗುತ್ತಿರುವಾಗ ಬೋಳ ಗ್ರಾಮದ ಅಂಬರಾಡಿ ಎಂಬಲ್ಲಿ ತನ್ನ ಬೈಕ್‌ನ್ನು ಅಡ್ಡ ಬೀಳಿಸಿಕೊಂಡು ತನ್ನ ಮುಖಕ್ಕೆ ಮೆಣಸಿನ ಪುಡಿ ಎರಚಿಕೊಂಡಿದ್ದನು. ಆ ವೇಳೆ ಸ್ಥಳಕ್ಕೆ ಬಂದ ಸಾರ್ವಜನಿಕರಲ್ಲಿ, ಬೈಕಿನಲ್ಲಿ ಬಂದ ಯಾರೋ ವ್ಯಕ್ತಿಗಳು ನನ್ನ ಕಣ್ಣಿಗೆ ಮೆಣಸಿನ ಪುಡಿ ಎರಚಿ ಪ್ಯಾಂಟ್ ಕಿಸೆಯಲ್ಲಿದ್ದ 70,000 ರೂ. ಹಣವನ್ನು ಸುಲಿಗೆ ಮಾಡಿರುವುದಾಗಿ ಸುಳ್ಳು ಹೇಳಿದ್ದನು. ಈ ಕುರಿತು ಮಾಹಿತಿ ತಿಳಿದು ಸ್ಥಳಕ್ಕೆ ಹೋದ ಪೊಲೀಸ್ ಅಧಿಕಾರಿಯವರಲ್ಲಿ ಕೂಡ ಆತ ಸುಳ್ಳು ಮಾಹಿತಿ ನೀಡಿರುವುದು ತನಿಖೆಯಿಂದ ತಿಳಿದುಬಂದಿದೆ.

Read More

ಮಂಗಳೂರು : ಪ್ರವಾಸಿಯೊಬ್ಬರು ನಗರದ ರೆಸಾರ್ಟ್‌ನ ಈಜುಕೊಳದಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಮಡಿಕೇರಿಯ ಕುಶಾಲನಗರದ ಪ್ರವಾಸಿ ನಿಶಾಂತ್ ಈಜಲೆಂದು ಈಜುಕೊಳಕ್ಕೆ ಹಾರಿದ ಸಂದರ್ಭ ತಲೆ ಟ್ವಿಸ್ಟ್ ಆಗಿ ಈಜುಕೊಳದಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ. ನಿಶಾಂತ್ ಕುಶಾಲನಗರದಲ್ಲಿ ಮೊಬೈಲ್ ಗ್ಯಾಲರಿ ಶಾಪ್ ಮಾಲೀಕರಾಗಿದ್ದರು. ಪ್ರವಾಸಕ್ಕೆಂದು ಮಂಗಳೂರಿಗೆ ಸ್ನೇಹಿತನ ಜೊತೆ ಬಂದ ಸಂದರ್ಭ ದುರ್ಘಟನೆ ಸಂಭವಿಸಿದೆ. ನೀರಿಗೆ ಹಾರಿದ ನಂತರ ನಿಶಾಂತ್ ಕೈ ಕಾಲು ಆಡಿಸದ ಕಾರಣ ಸ್ನೇಹಿತ ಹಾಗೂ ಇತರರು ಮೇಲಕ್ಕೆತ್ತಿದ್ದರು. ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ. ಮಂಗಳೂರು ಹೊರವಲಯದ ಉಚ್ಚಿಲ ಬೀಚ್ ಬಳಿಯ ಖಾಸಗಿ ಬೀಚ್ ರೆಸಾರ್ಟ್​ನಲ್ಲಿ ಮೂವರು ಯುವತಿಯರು ಈಜುಕೊಳದಲ್ಲಿ ಮೃತಪಟ್ಟ ಘಟನೆ ಕಳೆದ ನವೆಂಬರ್​​ನಲ್ಲಿ ಸಂಭವಿಸಿತ್ತು.

Read More

ರಿಕವರಿ ಮಾಡಿದಂತ ಚಿನ್ನವನ್ನು ವಂಚನೆ ಮತ್ತು ದುರ್ಬಳಕೆ ಆರೋಪದಡಿ ಕಾಟನ್ ಪೇಟೆ ಠಾಣೆಯ ಪಿಎಸ್ಐ ಸಂತೋಷ್ ಅನ್ನು ಅಮಾನುತುಗೊಳಿಸಲಾಗಿದೆ. ಈ ಸಂಬಂಧ ಬೆಂಗಳೂರು ನಗರ ಪೊಲೀಸ್ ಕಮೀಷನರ್ ದಯಾನಂದ್ ಅವರು ಆದೇಶಿಸಿದ್ದಾರೆ. 2020ರಲ್ಲಿ ಪಿಎಸ್ಐ ಸಂತೋಷ್ ಅವರು ಹಲಸೂರು ಗೇಟ್ ಠಾಣೆಯ ಪಿಎಸ್ಐ ಆಗಿದ್ದರು. ಈ ವೇಳೆ ಪ್ರಕರಣವೊಂದರ ರಿಕವರಿ ಚಿನ್ನವನ್ನು ದುರ್ಬಳಕೆ ಮಾಡಿಕೊಂಡ ಆರೋಪ ಕೇಳಿ ಬಂದಿತ್ತು. ಚಿನ್ನದ ಅಂಗಡಿ ಮಾಲೀಕನ ಬಳಿ ಹೋಗಿ ರಿಕವರಿ ಚಿನ್ನ ತೋರಿಸಬೇಕಿದೆ. ಹೀಗಾಗಿ 950 ಗ್ರಾಂ ಚಿನ್ನದ ಗಟ್ಟಿ ಕೊಡು, ಪೋಟೋ ತೆಗೆಸಿ ವಾಪಾಸ್ ಕೊಡುತ್ತೇನೆ ಎಂಬುದಾಗಿ ಹೇಳಿದ್ದರು. ಚಿನ್ನದ ಅಂಗಡಿ ಮಾಲೀಕ ಪಿಎಸ್ಐ ಸಂತೋಷ್ ಮಾತು ನಂಬಿ 950 ಗ್ರಾಂ ಚಿನ್ನದ ಗಟ್ಟಿ ನೀಡಿದ್ದರು. ಬಳಿಕ ಚಿನ್ನದ ಅಂಗಡಿ ಮಾಲೀಕ ಚಿನ್ನವನ್ನು ಪಿಎಸ್ಐ ಸಂತೋಷ್ ಕೇಳಿದಾಗ ಹಣ ನೀಡುವುದಾಗಿ ಭದ್ರತೆಗೆ ಸೈಟ್ ಕರಾರು ಮಾಡಿಕೊಟ್ಟಿದ್ದರು. ಆದರೇ ಆ ಸೈಟ್ ಅನ್ನು ಬೇರೆಯವರಿಗೆ ಮಾರಾಟ ಮಾಡಿದ್ದರು. ಮಾಲೀಕ ಮತ್ತೆ ಪ್ರಶ್ನಿಸಿದಾಗ ಖಾಲಿ ಚೆಕ್…

Read More

ಕಾಸರಗೋಡು: ನರ್ಸಿಂಗ್ ಕಾಲೇಜಿನಲ್ಲಿ ಕಿರುಕುಳದಿಂದಾಗಿ ಆತ್ಮಹತ್ಯೆಗೆ ಯತ್ನಿಸಿ ಮೂರು ತಿಂಗಳು ಕೋಮಾದಲ್ಲಿದ್ದ ವಿಧ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾಳೆ. ಮೃತ ವಿಧ್ಯಾರ್ಥಿನಿಯನ್ನು ಕಾಞಿಂಗಾಡ್ ಖಾಸಗಿ ಆಸ್ಪತ್ರೆಯ ಮೂರನೇ ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಪಾಣತ್ತೂರಿನ ಚೈತನ್ಯ ಕುಮಾರಿ (21). ಡಿಸೆಂಬರ್ 7 ರಂದು ವಿಷ ಸೇವಿಸಿ ಗಂಭೀರ ಸ್ಥಿತಿಯಲ್ಲಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು ಬಳಿಕ ಕಣ್ಣೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಕೆಲ ದಿನಗಳ ಹಿಂದೆ ಕೋಜಿ ಕ್ಕೋ ಡ್ ನ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆಸ್ಪತ್ರೆ ವಾರ್ಡನ್ ನ ಮಾನಸಿಕ ಕಿರುಕುಳ ದಿಂದ ಆತ್ಮಹತ್ಯೆಗೆ ಯತ್ನಿಸಿದ್ದಾಗಿ ಆರೋಪಿ ಸಹಪಾಠಿ ಗಳು ದಿನಗಳ ಕಾಲ ಪ್ರತಿಭಟನೆ ನಡೆಸಿದ್ದರು. ಹಲವು ಸಂಘಟನೆಗಳು, ರಾಜಕೀಯ ಪಕ್ಷಗಳು ಪ್ರತಿಭಟನೆ ನಡೆಸಿದ್ದವು.

Read More

ಮಂಗಳೂರು : ಕರಾವಳಿ ಕರ್ನಾಟಕದ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಡೆವಲಪರ್ ರೋಹನ್ ಕಾರ್ಪೊರೇಷನ್, ತನ್ನ ಹೊಸ ರೆಸಿಡೆನ್ಶಿಯಲ್ ಪ್ರಾಜೆಕ್ಟ್ ‘ರೋಹನ್ ನೆಸ್ಟ್’ ಇದರ ಭೂಮಿಪೂಜೆಯು ಮಾರ್ಚ್ 24, 2025, ಸಂಜೆ 4:00 ಗಂಟೆಗೆ ಮಂಗಳೂರಿನ ಅತ್ತಾವರ-ಬಾಬುಗುಡ್ಡ ಪ್ರದೇಶದಲ್ಲಿ ನಡೆಯಲಿದೆ. ರೋಹನ್ ನೆಸ್ಟ್:ರೋಹನ್ ನೆಸ್ಟ್ ಮಂಗಳೂರಿನ ನಗರ ಜೀವನವನ್ನು ಪುನರ್ವ್ಯಾಖ್ಯಾನಿಸುವ ಉದ್ದೇಶದಿಂದ ಯೋಜನಾಬದ್ಧವಾಗಿ ರೂಪಿಸಲಾದ ಒಂದು ವಾಸಯೋಗ್ಯ ನಿವೇಶನವಾಗಿದೆ. ಈ ಪ್ರಾಜೆಕ್ಟ್ 58 ಉತ್ತಮವಾಗಿ ವಿನ್ಯಾಸಗೊಳಿಸಲಾದ 2 ಬಿ.ಎಚ್.ಕೆ. ಅಪಾರ್ಟ್’ಮೆಂಟ್’ಗಳನ್ನು ಒಳಗೊಂಡಿದೆ, ಇದು ಮೂರು ಮಹಡಿಗಳಲ್ಲಿ ಹರಡಿಕೊಂಡಿದ್ದು, ಪ್ರತಿ ಘಟಕವು ಸ್ಥಳಾವಕಾಶ ಮತ್ತು ಸೊಗಸನ್ನು ಹೊಂದಿದೆ. 695 ರಿಂದ 715 ಚದರ ಅಡಿ ವಿಸ್ತೀರ್ಣದ ಈ ಅಪಾರ್ಟ್’ಮೆಂಟ್’ಗಳು ಆಧುನಿಕ ನಗರ ಕುಟುಂಬಗಳ ಅವಶ್ಯಕತೆಗಳನ್ನು ಪೂರೈಸಲು ವಿನ್ಯಾಸಗೊಳಿಸಲಾಗಿದೆ, ಇದು ಸೌಕರ್ಯ, ಶೈಲಿ ಮತ್ತು ಕಾರ್ಯಕ್ಷಮತೆಯ ಮಿಶ್ರಣವನ್ನು ಹೊಂದಿದೆ. ಸ್ವಯಂಚಾಲಿತ ಲಿಫ್ಟ್’ಗಳು, ಪವರ್ ಬ್ಯಾಕಪ್, ವಿಟ್ರಿಫೈಡ್ ಟೈಲ್ ಫ್ಲೋರಿಂಗ್, ಮತ್ತು ಸುರಕ್ಷತೆಗಾಗಿ ಸರ್ವಿಲೆನ್ಸ್ ಕ್ಯಾಮೆರಾಗಳು ಸೇರಿದಂತೆ ಹಲವು ಸೌಲಭ್ಯಗಳನ್ನು ಹೊಂದಿದೆ. ಹೆಚ್ಚುವರಿಯಾಗಿ, ಮಳೆನೀರಿನ ಸಂಗ್ರಹಣಾ ವ್ಯವಸ್ಥೆ…

Read More

ಮಲ್ಪೆ ಬಂದರಿನಲ್ಲಿ ಇಂದು ನಡೆದ ಪ್ರತಿಭಟನಾ ಸಭೆಯಲ್ಲಿ ಸಾರ್ವಜನಿಕರಿಗೆ ಅಪರಾಧ ಮಾಡಿಸಲು ಪ್ರೇರಣೆ ಮಾಡುತ್ತಾ, ದ್ವೇಷ ಭಾವನೆಯಿಂದ ಭಾಷಣ ಮಾಡಿ ಅಲ್ಲಿದ್ದವರನ್ನು ಪ್ರಚೋದಿಸುತ್ತಾ ಉದ್ರೇಕ ಭಾಷಣ ಮಾಡಿದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮೇಲೆ ಪೊಲೀಸರು ಸುಮೊಟೋ ಕೇಸ್ ದಾಖಲಿಸಿಕೊಂಡಿದ್ದಾರೆ. ಪ್ರತಿಭಟನಾ ಸಭೆಯಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, “ನಮ್ಮ ಮನೆಗೆ ಕಳ್ಳರು ಬಂದರೆ ನಾವು ಏನು ಮಾಡುತ್ತೇವೆ? ಪೊಲೀಸರು ಬರುವುದಕ್ಕೆ 5-6 ಗಂಟೆ ತಡವಾದರೆ ನಾವು ಏನು ಮಾಡುತ್ತೇವೆ? ಕಟ್ಟಿ ಹಾಕಲೇಬೇಕು. ಕಳ್ಳರನ್ನು ಕಟ್ಟಿ ಹಾಕಲೇ ಬೇಕು, ಮತ್ತೇನು ಮಾಡಲಿಕ್ಕೆ ಆಗುತ್ತೆ? ಏನು ಅವರಿಗೆ ಏಟು ಎಂದರೆ ಮಚ್ಚಿನಲ್ಲಿ ಖಡ್ಗದಲ್ಲಿ ತಲವಾರಿನಲ್ಲಿ ಹೊಡೆದದ್ದಾ? 2 ಕೆನ್ನೆಗೆ ಬಾರಿಸಿದ್ದು, ಯಾರಿಗೆ? ಕಳ್ಳ ಅಂತ ಆರೋಪಿತ ಒಂದು ವ್ಯಕ್ತಿಗೆ, ಆ ಮಹಿಳೆಯದ್ದು ಏನಾದರೂ ಆಕ್ಷೇಪ ಉಂಟಾ?” ಎಂದು ಮಹಿಳೆಗೆ ಸಾರ್ವಜನಿಕವಾಗಿ ಕಟ್ಟಿ ಹಾಕಿ ಹೊಡೆದುದ್ದನ್ನು ಸಮರ್ಥನೆ ಮಾಡಿಕೊಂಡಿದ್ದರು. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 34/2025 0 0 57,…

Read More