Author: main-admin

ಪವರ್‌ ಟಿವಿ ಮುಖ್ಯಸ್ಥ ರಾಕೇಶ್‌ ಶೆಟ್ಟಿ ಅವರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಿವಿಲ್‌ ನ್ಯಾಯಾಲಯ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ಹಿರಿಯ ಐಪಿಎಸ್‌ ಅಧಿಕಾರಿ ಬಿ.ಆರ್. ರವಿಕಾಂತೇಗೌಡ ದಾಖಲಿಸಿರುವ ಸಿವಿಲ್‌ ವ್ಯಾಜ್ಯದಲ್ಲಿ ನ್ಯಾಯಾಲಯದ ಮಧ್ಯಂತರ ಆದೇಶವನ್ನು ಉಲ್ಲಂಘಿಸಿದ ಆರೋಪದಡಿ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ರವಿಕಾಂತೇಗೌಡ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಿವಿಲ್‌ ನ್ಯಾಯಾಲಯದ ನ್ಯಾಯಾಧೀಶ ಅಬ್ದುಲ್‌ ಸಲೀಂ ಈ ಕುರಿತಂತೆ ಆದೇಶಿಸಿದ್ದಾರೆ. 2023ರ ಸೆಪ್ಟೆಂಬರ್ 8ರಂದು ನ್ಯಾಯಾಲಯ ನೀಡಿದ್ದ ಮಧ್ಯಂತರ ಆದೇಶವನ್ನು ಪ್ರತಿವಾದಿಯಾದ ಪವರ್ ಸ್ಮಾರ್ಟ್‌ ಮೀಡಿಯಾ ಪ್ರೈವೇಟ್‌ ಲಿಮಿಟೆಡ್‌ ಕಂಪನಿ ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಸಂಜೀವ ಶೆಟ್ಟಿ ಅವರು ಉಲ್ಲಂಘಿಸುವ ಮೂಲಕ ನ್ಯಾಯಾಲಯದ ಆದೇಶಕ್ಕೆ ಅವಿಧೇಯರಾಗಿ ನಡೆದುಕೊಂಡಿರುವುದು ಸಾಬೀತಾಗಿದೆ’ ಎಂದು ಆದೇಶದಲ್ಲಿ ವಿವರಿಸಲಾಗಿದೆ. ರಾಕೇಶ್‌ ಶೆಟ್ಟಿ ಮೂರು ತಿಂಗಳ ಕಾಲ ಜೈಲಿನಲ್ಲಿ ಇರಬೇಕು. ಜೈಲಿನಲ್ಲಿ ರಾಕೇಶ್ ಶೆಟ್ಟಿ ಅವರಿಗೆ ತಗಲುವ ಖರ್ಚು ವೆಚ್ಚಗಳನ್ನು ರವಿಕಾಂತೇಗೌಡ ಅವರೇ ಭರಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

Read More

ಮಂಗಳೂರು: ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನೊಬ್ಬನನ್ನು ಬಾಂಗ್ಲಾದೇಶದ ಪ್ರಜೆ ಎಂದು ಆರೋಪಿಸಿ ನಿಂದಿಸಿ, ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾವೂರು ಪೊಲೀಸರು ಮೂವರು ವ್ಯಕ್ತಿಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳನ್ನು ಮಂಗಳೂರು ತಾಲೂಕಿನ ಕೂಳೂರು ಗ್ರಾಮದ ನಿವಾಸಿಗಳಾದ ರತೀಶ್ ದಾಸ್ ಅಲಿಯಾಸ್ ಲಾಲು (32), ಧನುಷ್ (24) ಮತ್ತು ಸಾಗರ್ (24) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಪ್ರಕರಣದ ವಿವರ:ಜನವರಿ 11 ರಂದು ಸಂಜೆ ಸುಮಾರು 6.05 ಕ್ಕೆ ನಾಲ್ವರು ಆರೋಪಿಗಳು ಜಾರ್ಖಂಡ್‌ನ ವಲಸೆ ಕಾರ್ಮಿಕ ದಿಲ್ಜಾನ್ ಅನ್ಸಾರಿ ಎಂಬುವವರನ್ನು ತಡೆದಿದ್ದಾರೆ. ಈ ವೇಳೆ ಅವರು ಹಿಂದೂವೋ ಅಥವಾ ಮುಸ್ಲಿಮನೋ ಎಂದು ಪ್ರಶ್ನಿಸಿ ಕೋಮು ನಿಂದನೆ ಮಾಡಿದ್ದಾರೆ ಎನ್ನಲಾಗಿದೆ. ಅಲ್ಲದೆ, ಆತ ಬಾಂಗ್ಲಾದೇಶಿ ಎಂದು ಆರೋಪಿಸಿ, ಅಶ್ಲೀಲವಾಗಿ ಬೈದು, ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.ಘಟನೆಗೆ ಸಂಬಂಧಿಸಿದಂತೆ, ಜನವರಿ 12 ರಂದು ಕಾವೂರು ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) 2023 ರ ವಿವಿಧ…

Read More

ಮಂಗಳೂರು : ನಗರದ ಬೋಂದೆಲ್‌ ಬಳಿ ಖಾಸಗಿ ಬಸ್‌ ಪಾದಾಚಾರಿ ಮಹಿಳೆಗೆ ಢಿಕ್ಕಿ ಹೊಡೆದ ಘಟನೆ ನಡೆದಿದೆ. ಅಪಘಾತಕ್ಕೆ ಅತಿವೇಗದ ಚಾಲನೆಯೇ ಕಾರಣ ಎಂದು ಸಾರ್ವಜನಿಕರು ಅಭಿಪ್ರಾಯ ಪಟ್ಟಿದ್ಧಾರೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಹಿಳೆಯೊಬ್ಬರು ರಸ್ತೆದಾಟುತ್ತಿದ್ದ ವೇಳೆ ಅತಿವೇಗದಲ್ಲಿ ಬಂದಂತಹ ಬಸ್‌, ನಿಯಂತ್ರಣಕ್ಕೆ ಬಾರದೆ ಢಿಕ್ಕಿಹೊಡೆದಿದೆ. ಢಿಕ್ಕಿ ಪರಿಣಾಮ ಬಸ್‌ನ ಗಾಜುಗಳು ಪುಡಿಪುಡಿಯಾಗಿದೆ. ಮಹಿಳೆಯೂ ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ದಿನಂಪ್ರತಿ ಖಾಸಗಿ ಬಸ್‌ಗಳ ಅತಿವೇಗದ ಚಾಲನೆಯು ಸಾರ್ವಜನಿಕರಿಗೆ ನಿರಂತರ ಚಿಂತೆಗೆ ಒಳಗಾಗಿದೆ. ಬೋಂದೆಲ್‌ ಏರ್‌ಪೋರ್ಟ್‌ ರೋಡ್‌ನಲ್ಲಿ ಘಟನೆ ನಡೆದಿದ್ದು, ಈ ಪ್ರದೇಶದಲ್ಲಿ ಶಾಲೆ, ಚರ್ಚ್ ಖಾಸಗಿ ಸಂಸ್ಥೆಗಳು ಇದ್ದು ದಿನನಿತ್ಯ ಅನೇಕರು ಇಲ್ಲಿ ಓಡಾಡುತ್ತಿರುತ್ತಾರೆ. ಶಾಲಾವಾತಾವರಣ ಆದ ಕಾರಣ ಖಾಸಾಗಿ ಬಸ್‌ಗಳ ಹಾರಾಟದ ಚಾಲನೆ ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಈ ಸಮಸ್ಯೆಗೆ ಪರಿಹಾರವನ್ನು ಕಂಡುಕೊಳ್ಳಬೇಕು ಎಂಬ ಕೂಗು ಕೂಡ ಸಾರ್ವಜನಿಕ ವಲಯದಿಂದ ಕೇಳಿ ಬಂದಿದೆ.

Read More

ಮಂಗಳೂರು : ಶಬರಿಮಲೆ ಯಾತ್ರೆ ಕೈಗೊಂಡಿದ್ದ ಉಳ್ಳಾಲ ತಾಲೂಕಿನ ಅಯ್ಯಪ್ಪ ಮಾಲಾ ವೃತಧಾರಿಯೊಬ್ಬರು ಕೇರಳದ ಎರಿಮಲೆಯಲ್ಲಿ ಹೃದಯಾಘಾತಕ್ಕೆ ಬಲಿಯಾದ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ. ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ದೇಲಂತಬೆಟ್ಟು ನಿವಾಸಿ ಉದ್ಯಮಿ ಚಂದ್ರಹಾಸ್ ಶೆಟ್ಟಿ (55) ಮೃತಪಟ್ಟವರು. ಚಂದ್ರಹಾಸ್ ಅವರು ಇತರ ಅಯ್ಯಪ್ಪ ಮಾಲಾ ವೃತಧಾರಿಗಳ ಜೊತೆ ಶನಿವಾರದಂದು ನಗರದ ಅರ್ಕುಳ, ತುಪ್ಪೇಕಲ್ಲಿನಿಂದ ಶಬರಿಮಲೆ ಯಾತ್ರೆ ಕೈಗೊಂಡಿದ್ದರು. ಸೋಮವಾರ ಬೆಳಿಗ್ಗೆ ಚಂದ್ರಹಾಸ್ ಅವರು ಎರಿಮಲೆಯಿಂದ ಕಾಡಿನ ದಾರಿಯಾಗಿ ಪಂಪೆಗೆ ಪ್ರಯಾಣ ಬೆಳೆಸಿದ್ದ ವೇಳೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮರಣೋತ್ತರ ಪರೀಕ್ಷೆಯನ್ನು ತ್ವರಿತವಾಗಿ ನಡೆಸಿ ಉಳ್ಳಾಲಕ್ಕೆ ತರಲು ಸ್ಪೀಕರ್ ಯು.ಟಿ.ಖಾದರ್ ಅವರು ಕೇರಳದ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದು, ಮಂಗಳವಾರ ಬೆಳಿಗ್ಗೆ ಪಾರ್ಥಿವ ಶರೀರವು ಉಳ್ಳಾಲ ತಲುಪಲಿದೆ. ಮೃತ ಚಂದ್ರಹಾಸ್ ಅವರು ಮೂಲತ: ಬಾಕ್ರಬೈಲ್ ನಿವಾಸಿಯಾಗಿದ್ದು, ಮಿನರಲ್ ವಾಟರ್ ಪೂರೈಕೆಯ ಉದ್ಯಮ ನಡೆಸುತ್ತಿದ್ದರು. ಕಳೆದ ಹತ್ತು ವರುಷದ ಹಿಂದೆ ಪಿಲಾರಿನಲ್ಲೇ ಮನೆ ನಿರ್ಮಿಸಿ ವಾಸವಾಗಿದ್ದರು. ಮೃತರು…

Read More

ದೇಶ ವಿರೋಧಿ ಜೈ ಬಾಂಗ್ಲಾ ಘೋಷಣೆ ಕೂಗಿದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಹೆಬ್ಬಗೋಡಿ ಠಾಣೆಯ ಪೊಲೀಸರು ದೇಶವಿರೋಧಿ ಘೋಷಣೆ ಕೂಗಿದ ಮಹಿಳೆಯನ್ನು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳದ ಮೂಲದ ಸರ್ಬಾನು ಖಾತುನ್ ಎಂಬ ಮಹಿಳೆ ಜೈ ಬಾಂಗ್ಲಾ ಘೋಷಣೆ ಕೂಗಿದ್ದಾಳೆ. ಘಟನೆ ಹಿನ್ನೆಲೆ ಅಕ್ರಮ ವಲಸಿಗರ ತೆರವು ಕಾರ್ಯಾಚರಣೆ ಮಾಡುವಾಗ ಇಂಥದ್ದೊಂದು ಘಟನೆ ನಡೆದಿದೆ. ಜೆಸಿಬಿ ಬಳಕಿ ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆ ನಡೆಸುತ್ತಿದ್ದರು. ಈ ವೇಳೆ ಸ್ಥಳೀಯ ವ್ಯಕ್ತಿಯೊಬ್ಬ ಅದನ್ನು ವಿಡಿಯೋ ಮಾಡಿಕೊಳ್ಳುತ್ತಿದ್ದ. ಈ ವೇಳೆ ಮುಸ್ಲಿಂ ಮಹಿಳೆಯೊಬ್ಬಳು ಕೂಲಿಂಗ್ ಗ್ಲಾಸ್ ಹಾಕಿಕೊಂಡು ಅಲ್ಲಿಂದ ಪಾಸ್ ಆಗುತ್ತಾಳೆ. ಈ ವೇಳೆ ವಿಡಿಯೋ ಮಾಡುತ್ತಿದ್ದ ಸ್ಥಳೀಯ ವ್ಯಕ್ತಿ, ಆಕೆಯನ್ನು ಮಾತನಾಡಿಸಿ, ಭಾರತ್ ಮಾತಾ ಕೀ ಜೈ ಎನ್ನುತ್ತಾನೆ. ಜೊತೆಗೆ ಭಾರತ್ ಮಾತಾ ಕೀ ಜೈ ಅಂತ ಹೇಳು ಅಂತ ಹೇಳುತ್ತಾನೆ. ಆಗ ಸಿಟ್ಟಿಗೆದ್ದ ಮಹಿಳೆ ಬಾಂಗ್ಲಾಗೆ ಜೈ ಎನ್ನುತ್ತಾ ಅಲ್ಲಿಂದ ಹೊರಡುತ್ತಾಳೆ. ಈ ವೇಳೆ ಸ್ಥಳೀಯರು ಆಕೆಯ ಮಾತಿಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.…

Read More

ಮುಲ್ಕಿಯ ಅರಸು ಕಂಬಳದಲ್ಲಿ ಬಹುಮಾನ ಗೆದ್ದ ಕೋಣದ ಮಾಲಕರಿಗೆ ಹಣ ಹಾಗೂ ಬಂಗಾರದ ಸರ ನೀಡುವಂತೆ ಬೆದರಿಕೆ ಹಾಕಿ ಹಲ್ಲೆ ನಡೆಸಿರುವ ಮೂವರು ಆರೋಪಿಗಳ ವಿರುದ್ಧ ಕೋಕಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಅಂಗಾರಗುಡ್ಡೆ ಕೆಂಚನಕೆರೆ ನಿವಾಸಿ ಶಂಸುದ್ದೀನ್ ಅವರ ಮನೆಗೆ ನುಗ್ಗಿದ ಶ್ಯಾಮಸುಂದರ್ ಶೆಟ್ಟಿ, ಅಕ್ಷಯ್ ಪೂಜಾರಿ ಹಾಗೂ ಸುವೀನ್ ಕಾಂಚನ್ ಎಂಬ ಮೂವರು ಆರೋಪಿಗಳು ಬೆದರಿಸಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು.  ಪ್ರಕರಣ ದಾಖಲಿಸಿಕೊಂಡ ಮುಲ್ಕಿ ಪೊಲೀಸರು ತನಿಖೆ ನಡೆಸಿ ಶ್ಯಾಮಸುಂದರ್ ಶೆಟ್ಟಿ, ಅಕ್ಷಯ್ ಪೂಜಾರಿ ಹಾಗೂ ಸುವೀನ್ ಕಾಂಚನ್ ಅವರನ್ನು ಬಂಧಿಸಿದ್ದಾರೆ. ಬಂಧಿತರ ವಿರುದ್ಧ ಈಗಾಗಲೇ ಅನೇಕ ಪ್ರಕರಣಗಳು ದಾಖಲಾಗಿರುವ ಹಿನ್ನೆಲೆಯಲ್ಲಿ ಪೊಲೀಸರು KOC Act ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ಎಂದುಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು ಮಾಹಿತಿ ನೀಡಿದ್ದಾರೆ.

Read More

ಬಿಕರ್ನಕಟ್ಟೆ : ಬಿಕರ್ನಕಟ್ಟೆಯ ಬಾಲ ಯೇಸುವಿನ ಪುಣ್ಯಕ್ಷೇತ್ರವು ಭಾನುವಾರ ತನ್ನ ಪ್ರತಿಷ್ಠಾಪನೆಯ 30ನೇ ವಾರ್ಷಿಕೋತ್ಸವವನ್ನು ಆಚರಿಸುವ ಮೂಲಕ ಒಂದು ಪ್ರಮುಖ ಆಧ್ಯಾತ್ಮಿಕ ಮೈಲಿಗಲ್ಲನ್ನು ಗುರುತಿಸಿತು. ಬಾಲ ಯೇಸುವಿನ ವಾರ್ಷಿಕ ಮಹೋತ್ಸವದ ಸಿದ್ಧತೆಯ ನೊವೇನಾದ ಏಳನೇ ದಿನದಂದು ಈ ಸಂಭ್ರಮವು ನಡೆದಿದ್ದು ವಿಶೇಷವಾಗಿತ್ತು. ಈ ದಿನವನ್ನು ‘ಧಾರ್ಮಿಕರ ಮತ್ತು ವೃತ್ತಿ ಪ್ರೋತ್ಸಾಹದ ದಿನ’ವನ್ನಾಗಿ ಆಚರಿಸಲಾಗಿದ್ದು, ಆಚರಣೆಯು ಐತಿಹಾಸಿಕವಾಗಿ ಮಹತ್ವಪೂರ್ಣವಾಗಿ ಮತ್ತು ಆಧ್ಯಾತ್ಮಿಕವಾಗಿ ಸಮೃದ್ಧವಾಗಿತ್ತು. ಈ ದಿನದ ಆಚರಣೆಗಳು ಸಂತ ಶಿಲುಬೆಯ ಯೋಹಾನರ ಆಧ್ಯಾತ್ಮಿಕತೆಯಿಂದ ಪ್ರೇರಿತವಾದ “ನಾನು ಮರುಭೂಮಿಯಲ್ಲಿ ತೊರೆಗಳನ್ನು ಹರಿಸುವೆನು” ಎಂಬ ಶೀರ್ಷಿಕೆಯ ಮೇಲೆ ಕೇಂದ್ರೀಕೃತವಾಗಿದ್ದವು. ಇದು ಕಷ್ಟಕಾಲ ಮತ್ತು ಆಧ್ಯಾತ್ಮಿಕ ಶುಷ್ಕತೆಯ ಸಂದರ್ಭದಲ್ಲೂ ಜೀವನ, ಭರವಸೆ ಮತ್ತು ನವಚೈತನ್ಯವನ್ನು ತರುವ ದೇವರ ರೂಪಾಂತರದ ಕೃಪೆಯನ್ನು ಎತ್ತಿ ತೋರಿಸಿತು. ದಿನವಿಡೀ ವಿವಿಧ ಭಾಷೆಗಳಲ್ಲಿ ಒಟ್ಟು ಒಂಬತ್ತು ಪವಿತ್ರ ಬಲಿಪೂಜೆಗಳನ್ನು ನೆರವೇರಿಸಲಾಯಿತು, ಇದರಿಂದಾಗಿ ವಿವಿಧ ಭಾಷಾ ಹಿನ್ನೆಲೆಯ ಭಕ್ತರು ಸಕ್ರಿಯವಾಗಿ ಪಾಲ್ಗೊಳ್ಳಲು ಸಾಧ್ಯವಾಯಿತು. ಪ್ರಾರ್ಥನೆಯಲ್ಲಿ ಧಾರ್ಮಿಕ ಗುರುಗಳನ್ನು ಮತ್ತು ಭಗಿನಿಯರನ್ನು ವಿಶೇಷವಾಗಿ ಸ್ಮರಿಸಲಾಯಿತು. ವಿಶ್ವಾಸಿಗಳು…

Read More

ಮಂಗಳೂರು: ಯುವಕರಿಗೆ ಡ್ರಗ್ಸ್ ಸಾಗಾಟ ಮಾಡುತ್ತಿದ್ದ 6ಜನ ವ್ಯಾಪಾರಿಗಳಿಗೆ ವ್ಯವಸ್ಥಿತವಾಗಿ ಬೆಂಗಳೂರು ಸರಹದ್ದಿನಿಂದ ಡ್ರಗ್ಸ್ ನೀಡುತ್ತಿದ್ದ ಉಗಾಂಢ ಮೂಲದ ಮಹಿಳೆಯನ್ನು4ಕೆಜಿ ಎಂಡಿಎಂನೊಂದಿಗೆ ಜಿಗ್ನಿ ಸರಹದ್ದಿನಲ್ಲಿ ಸಿಸಿಬಿ ಪೋಲಿಸರು ಬಂಧಿಸಿದ್ದಾರೆ. ಇದರೊಂದಿಗೆ ಮಂಗಳೂರು ಸರಹದ್ದಿನಲ್ಲಿ ಡ್ರಗ್ಸ್ ಸಾಗಾಟ ಮಾಡುತ್ತಿದ್ದ ಸಪ್ಲೆಯರ್‍,ಗೆ ಇದ್ದ ಒಂದು ಮೂಲವನ್ನು ಬಂಧಿಸಿದ ಹಾಗೆ ಆಗಿದೆ. ಈಗಾಗಲೇ ಡ್ರಗ್ಸ್ ಸಾಗಾಟ ಮಾಡುತ್ತಿದ್ದ 6ಜನ ವ್ಯಾಪಾರಿಗಳನ್ನು ಬಂಧಿಸಿ ಅವರು JC(ನ್ಯಾಯಾಂಗ ಬಂಧನ) ಯಲ್ಲಿದ್ದಾರೆ. NCB ಲೆಕ್ಕಾಚಾರದ ಪ್ರಕಾರ ಸುಮಾರು 4ಕೋಟಿ ಬೆಲೆಬಾಳುವಷ್ಟು 4ಕೆಜಿ ಎಂಡಿಎಂನೊಂದಿಗೆ ಇವರನ್ನು ಬಂಧಿಸಿ ನ್ಯಾಯಾಂಗ ಬಂದನಕ್ಕೆ ಒಳಪಡಿಸಲಾಗಿದೆ. ಮುಂದಿನ ವಿಚಾರಣೆಗಾಗಿ ಪೋಲಿಸರು ತನಿಖೆ ನಡೆಸಲಿದ್ದಾರೆ.

Read More

ಮಂಗಳೂರು: ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನನ್ನು ಬಾಂಗ್ಲಾದೇಶಿ ಪ್ರಜೆ ಎಂದು ಆರೋಪಿಸಿ, ನಾಲ್ವರು ವ್ಯಕ್ತಿಗಳು ದೈಹಿಕ ಹಾಗೂ ಮಾನಸಿಕ ಹಿಂಸೆ ನೀಡಿ ಹಲ್ಲೆ ನಡೆಸಿದ ಘಟನೆ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಆರೋಪಿಗಳನ್ನು ಕೂಳೂರು ನಿವಾಸಿಗಳಾದ ಸಾಗರ್, ಧನುಷ್, ಲಾಲು ಯಾನೆ ರತೀಶ್, ಮೋಹನ್ ಎಂದು ಗುರುತಿಸಲಾಗಿದೆ. ಜಾರ್ಖಂಡ್ ಮೂಲದ ದಿಲ್‌ಜಾನ್ ಅನ್ಸಾರಿ ಕಳೆದ 10–15 ವರ್ಷಗಳಿಂದ ವಲಸೆ ಕಾರ್ಮಿಕನಾಗಿ ಜೀವನ ನಡೆಸುತ್ತಿದ್ದು, ಸ್ಥಳೀಯರಾದ ಈ ನಾಲ್ವರು ಆರೋಪಿಗಳು ಸತತವಾಗಿ “ನೀನು ಬಾಂಗ್ಲಾದೇಶದ ಪ್ರಜೆ” ಎಂದು ಆರೋಪಿಸಿ ಹಲ್ಲೆ ನಡೆಸುತ್ತಿದ್ದರು. ತಾನು ಜಾರ್ಖಂಡ್ ಮೂಲದವನೆಂದು ತಿಳಿಸಿದರೂ ಆರೋಪಿಗಳು ಕೇಳದೆ, ದಾಖಲೆಗಳನ್ನು ಒದಗಿಸುವಂತೆ ಒತ್ತಡ ಹೇರುತ್ತಾ ದೌರ್ಜನ್ಯ ಎಸಗಿದ್ದಾರೆ ಎಂದು ದೂರಲಾಗಿದೆ. ಹಲ್ಲೆ ಮತ್ತು ಮಾನಸಿಕ ಹಿಂಸೆಗೆ ಒಳಗಾದ ದಿಲ್‌ಜಾನ್ ಅನ್ಸಾರಿ ದುಷ್ಕರ್ಮಿಗಳ ಭಯದಿಂದ ಪೊಲೀಸರಿಗೆ ದೂರು ನೀಡಲು ಹಿಂಜರಿದಿದ್ದರು. ಈ ಕುರಿತು ಮಾಹಿತಿ ಪಡೆದ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ವಲಸೆ ಕಾರ್ಮಿಕನನ್ನು ರಕ್ಷಿಸಿದ್ದಾರೆ ಎಂದು ಪೊಲೀಸ್…

Read More

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷಕರು, ವಿದ್ಯಾರ್ಥಿಗಳನ್ನು ಉತ್ತರ ವಿಭಾಗದ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಜನವರಿ 9ರಂದು ಹಿಂದಿ ಪರೀಕ್ಷೆ ಇತ್ತು. ಆದರೆ ಜನವರಿ 8ರಂದು ನಿರಂಜನ್ ಶೆಟ್ಟಿ ಹೆಸರಿನ ಯೂಟ್ಯೂಬ್‌ ಚಾನೆಲ್‌ನಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು. ಈ ಸಂಬಂಧ ಪದವಿ ಪೂರ್ವ ಇಲಾಖೆಯ ಜಂಟಿ ನಿರ್ದೇಶಕ ರಾಜು ನೀಡಿದ ದೂರಿನ ಹಿನ್ನೆಲೆಯಲ್ಲಿ ಉತ್ತರ ವಿಭಾಗದ ಸೈಬರ್ ಸೆನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು. ತನಿಖೆಗೆ ಇಳಿದ ಪೊಲೀಸರು ಹೆಡ್‌ಮಾಸ್ಟರ್‌ಗಳು, ಶಿಕ್ಷಕರು, ಇಬ್ಬರು ವಿದ್ಯಾರ್ಥಿಗಳು ಸೇರಿ 8 ಮಂದಿಯನ್ನು ಬಂಧಿಸಿದ್ದಾರೆ. ತುಮಕೂರು, ರಾಮನಗರ, ಕಲಬುರಗಿ ಜಿಲ್ಲೆಯ ಹೆಡ್ ಮಾಸ್ಟರ್ ಹಾಗೂ ಶಿಕ್ಷಕರ ಬಂಧನವಾಗಿದೆ. ಈಗ ಪೊಲೀಸರು ಪ್ರಶ್ನೆ ಪತ್ರಿಕೆ ವೈರಲ್ ಮಾಡಿದವರ ವಾಟ್ಸಪ್‌, ಇನ್‌ಸ್ಟಾಗ್ರಾಂ, ಟೆಲಿಗ್ರಾಂ ಖಾತೆಯ ಜೊತೆ ಮೊಬೈಲ್ ಪರಿಶೀಲನೆ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಈ ಪ್ರಕರಣದಲ್ಲಿ ಮತ್ತಷ್ಟು ಮಂದಿ ಬಂಧನವಾಗುವ ಸಾಧ್ಯತೆಯಿದೆ. ತುಮಕೂರಿನ ಮುಖ್ಯೋಪಾಧ್ಯಾಯ ಗಿರೀಶ್ ವಿ.ಡಿ, ರಾಮನಗರದ ಸಹ ಶಿಕ್ಷಕ…

Read More