ಕಾಸರಗೋಡು : ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿ ತಾಯಿ ಆತ್ಮಹತ್ಯೆಗೆ ಶರಣಾದ ಘಟನೆ ಕಾಸರಗೋಡಿನ ಚಿಮೇನಿ ಚೆಂಬ್ರಕಾನದಲ್ಲಿ ನಡೆದಿದೆ. ರಂಜಿತ್ ಅವರ ಪತ್ನಿ ಸಜೀನಾ (34), ಮಕ್ಕಳಾದ ಗೌತಮ್( 9), ಮತ್ತು ತೇಜಸ್ (6) ಮೃತ ದುರ್ದೈವಿಗಳಾಗಿದ್ದಾರೆ. ಇವರು ಚೆಂಬ್ರಕಾನ್ ನಿವಾಸಿಗಳೆಂದು ತಿಳಿದುಬಂದಿದೆ. ಪ್ರಿಲ್ 9ರ ಮಂಗಳವಾರ ಮಧ್ಯಾಹ್ನ ಈ ಘಟನೆ ಬೆಳಕಿಗೆ ಬಂದಿದ್ದು ಮಕ್ಕಳು ವಿಷ ಸೇವಿಸಿ ಮೃತಪಟ್ಟಿದ್ದು, ತಾಯಿ ಸಜೀನಾ ನೇಣು ಬಿಗಿದುಕೊಂಡು ಕೈಯ ನರವನ್ನು ಕತ್ತರಿಸಿಕೊಂಡು ಸಾವನ್ನಪ್ಪಿದ್ದಾರೆ. ಸಜೀನಾ ಪೆರಿಂಗೋ ವಯಕ್ಕರ ಪಂಚಾಯತ್ ಕಚೇರಿಯಲ್ಲಿ ಗುಮಾಸ್ತರಾಗಿ ಕೆಲಸ ಮಾಡುತ್ತಿದ್ದರು ಎಂದು ಮೂಲಗಳು ತಿಳಿಸಿವೆ.ಮಾಹಿತಿ ಪಡೆದ ಚಿಮೇನಿ ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಆರಂಭಿಸಿದ್ದಾರೆ. ಈ ಕೃತ್ಯಕ್ಕೆ ಕಾರಣ ತಿಳಿದು ಬಂದಿಲ್ಲ.
Author: main-admin
ಬಂಟ್ವಾಳ : ಮನೆಯೊಳಗೆ ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಇರಿದು ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೋಲೀಸ್ ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಿದ್ದು,ನ್ಯಾಯಾಲಯ ಈತನಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಅಬ್ದುಲ್ ರಹಿಮಾನ್ ಎಂಬಾತ ಬಂಧಿತ ಆರೋಪಿಯಾಗಿದ್ದಾನೆ.ಈತನನ್ನು ಪರಂಗಿಪೇಟೆಯಲ್ಲಿ ಬಂಧಿಸಲಾಗಿದೆ.
ರಂಜಾನ್ (ಈದ್-ಉಲ್-ಫಿತರ್) ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಇಂದು ರಾಜ್ಯಾದ್ಯಂತ ಸಾರ್ವತ್ರಿಕ ರಜೆ ಘೋಷಿಸಿದೆ. ನಾಳೆ ಶಾಲಾ-ಕಾಲೇಜುಗಳು, ಸರ್ಕಾರಿ ಕಚೇರಿಗಳು, ಬ್ಯಾಂಕ್ಗಳಿಗೆ ರಜೆ ಇರಲಿದೆ. ಆದರೆ, ಕೇರಳದಲ್ಲಿ ಏಪ್ರಿಲ್ 9 ರಂದೇ ಚಂದ್ರ ದರ್ಶನವಾಗಿದ್ದರಿಂದ ಕರಾವಳಿ ಪ್ರದೇಶದಲ್ಲಿ ಮುಸ್ಲಿಮರು ಇಂದೇ ರಂಜಾನ್ ಸೆಲೆಬ್ರೇಟ್ ಮಾಡುತ್ತಿದ್ದಾರೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲಾದ್ಯಂತ ದಿನಾಂಕ: 11.04.2024 ರ ಗುರುವಾರದಂದು ರಜೆ ರದ್ದುಗೊಳಿಸಿ ಇಂದು ಸಾರ್ವತ್ರಿಕ ರಜೆಯನ್ನು ಘೋಷಿಸಿ ಆದೇಶಿಸಲಾಗಿದೆ.
ಮಂಗಳೂರು: ನಾಲ್ಕು ವರ್ಷದ ಹಿಂದೆ ಕಾವೂರಿನ ಬಾಡಿಗೆ ಮನೆಯಲ್ಲಿ ಪತ್ನಿಯನ್ನು ಹತ್ಯೆಗೈದ ಆರೋಪಿ ಪತಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಮೂಲತಃ ಹಾಸನ ಅರಕಲಗೂಡಿನ, ಕಾವೂರಿನ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಗಣೇಶ್ ಕುಮಾರ್ (46) ಶಿಕ್ಷೆಗೊಳಗಾದ ಆರೋಪಿ. ಈತ ತನ್ನ ಪತ್ನಿಗೆ ದಿನನಿತ್ಯ ದೈಹಿಕ ಮತ್ತು ಮಾನಸಿಕ ಹಿಂಸೆ ನೀಡುತ್ತಿದ್ದ ಎಂಬ ಆರೋಪವಿತ್ತು. 2020ರ ಜು.1ರಂದು ಸಂಜೆ ಸಾಮಾನು ತರಲಿಕ್ಕಿದೆ ಎಂದು ಹೇಳಿ ಪತ್ನಿಯನ್ನು ಬೈಕ್ನಲ್ಲಿ ಕರೆದುಕೊಂಡು ಹೋಗಿದ್ದ. ರಾತ್ರಿ 7ರಿಂದ 7:20ರ ಮಧ್ಯೆ ಅಂತೋನಿಕಟ್ಟೆ ಎಂಬಲ್ಲಿ ಪತ್ನಿಯ ಕುತ್ತಿಗೆ ಹಿಸುಕಿ ಕಪ್ಪು ಕಲ್ಲಿನ ಕೋರೆಯ ಮೇಲಿನಿಂದ ದೂಡಿ ಹಾಕಿ ಹತ್ಯೆ ಮಾಡಿದ್ದಮತ್ತು ಪತ್ನಿಯ ತಾಯಿಗೆ ಜೀವಬೆದರಿಕೆ ಹಾಕಿದ್ದ ಎಂದು ದೂರು ದಾಖಲಾಗಿತ್ತು. ಪ್ರಕರಣದ ಬಗ್ಗೆ ಕಾವೂರು ಠಾಣೆಯ ಇನ್ಸ್ಪೆಕ್ಟರ್ ರಾಘವ ಎಸ್. ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಕಾಂತ ರಾಜು ಎಸ್.ವಿ. ವಿಚಾರಣೆ ನಡೆಸಿ ಆರೋಪಿಯ ಮೇಲಿನ…
ದಕ್ಷಿಣಕನ್ನಡದಲ್ಲಿ ಬಿಸಿಲಿನ ಧಗೆ ಹೆಚ್ಚಾಗಿದ್ದು, ಪ್ರಾಣಿ ಪಕ್ಷಿಗಳಿಗೆ ನೀರಿನ ತೊಂದರೆಯಾಗುತ್ತಿದೆ. ಈ ಹಿನ್ನಲೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಯ ಕಟ್ಟಡಗಳ ಮೇಲೆ ನೆರಳಿನ ಆಶ್ರಯ ಇರುವಲ್ಲಿ ಮಡಕೆ, ಪಾತ್ರೆ, ಅಥವಾ ಟಬ್ಗಳಲ್ಲಿ ಸಾಕಷ್ಟು ನೀರು ತುಂಬಿಸಿಡುವ ಮೂಲಕ ಹಕ್ಕಿಗಳಿಗೆ ನೀರುಣಿಸಬೇಕು ಎಂದು ಸುತ್ತೋಲೆ ಹೊರಡಿಸಿದ್ದಾರೆ. ಬೇಸಿಗೆಯಲ್ಲಿ ಮಳೆ ಕೊರತೆಯಿಂದಾಗಿ ಬರ ಪರಿಸ್ಥಿತಿ ಉಂಟಾಗಿದೆ. ಒಂದು ವಾರದಿಂದ ಈಚೆಗೆ ಜಿಲ್ಲೆಯಲ್ಲೂ ಅಧಿಕ ಉಷ್ಣಾಂಶ ದಾಖಲಾಗುತ್ತಿದೆ. ಬಿಸಿಲಿನ ತೀವ್ರತೆಗೆ ಜನ ಸಾಮಾನ್ಯರಿಗೆ ಮಾತ್ರವಲ್ಲದೆ ಹಕ್ಕಿಗಳಿಗೆ ಕೂಡಾ ಕುಡಿಯುವ ನೀರಿನ ಅಭಾವ ಉಂಟಾಗಿ, ತೊಂದರೆಗಳಾಗುವ ಸಾಧ್ಯತೆ ಇದೆ. ಬೇಸಿಗೆಯಲ್ಲಿ ಉಷ್ಣಾಂಶ ಹೆಚ್ಚಾದಾಗ ಪಕ್ಷಿಗಳಿಗೆ ಹೆಚ್ಚು ನೀರಿನ ಅಗತ್ಯವಿದೆ. ಬಿಸಿಲಿನ ಶಾಖದ ಹೊಡೆತದಿಂದ ಹಕ್ಕಿಗಳನ್ನು ರಕ್ಷಿಸಲು, ಅವುಗಳಿಗೆ ಕುಡಿಯುವ ನೀರು ಒದಗಿಸುವುದು ಅತ್ಯವಶ್ಯಕ ಎಂದು ಅವರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ. ಹಕ್ಕಿಗಳಿಗೆ ಮಡಕೆ, ಪಾತ್ರೆ, ಟಬ್ಗಳಲ್ಲಿ ಇಡುವ ನೀರನ್ನು ಆಗಾಗ ಬದಲಾಯಿಸುವ ಮೂಲಕ ಸೊಳ್ಳೆಗಳು ನಿಲ್ಲದಂತೆ ಮುಂಜಾಗ್ರತೆ ವಹಿಸಬೇಕು. ಈ…
ಉಡುಪಿ: ಮುಂಬಯಿಯಿಂದ ತಿರುವನಂತಪುರಕ್ಕೆ ಹೋಗುತ್ತಿದ್ದ ನೇತ್ರಾವತಿ ಎಕ್ಪ್ರಸ್ ರೈಲಿನಲ್ಲಿ ಪ್ರಯಾಣಿಕನೊಬ್ಬ ಸಾಗಿಸುತ್ತಿದ್ದ 24,99,500 ರೂ. ಹಣ ವನ್ನು ಉಡುಪಿ ರೈಲ್ವೇ ರಕ್ಷಣಾ ದಳ ಪೊಲೀಸರು ಪತ್ತೆಹಚ್ಚಿದ್ದಾರೆ. ಪ್ರಕರಣವನ್ನು ಆದಾಯ ತೆರಿಗೆ ಇಲಾಖೆಗೆ ಹಸ್ತಾಂತರಿಸಲಾಗಿದೆ.ಭಟ್ಕಳ ನಿವಾಸಿ ಫಹಾದ್ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. ಮುಂಜಾನೆ ಕರ್ತವ್ಯದಲ್ಲಿದ್ದ ಆರ್ಎಎಫ್ಒ ಎಎಸ್ಐ ಯು.ಡಿ. ಸುಧೀರ್ ಶೆಟ್ಟಿ ಜನರಲ್ ಕೋಚ್ ತಪಾಸಣೆ ಮಾಡುತ್ತಿದ್ದಾಗ ಹಣ ಪತ್ತೆಯಾಯಿತು ಎನ್ನಲಾಗಿದೆ ಇಂದ್ರಾಳಿ ನಿಲ್ದಾಣಕ್ಕೆ ರೈಲು ತಲುಪಿದ ಬಳಿಕ ಚುನಾವಣ ನೀತಿಸಂಹಿತೆ ಹಿನ್ನೆಲೆಯಲ್ಲಿ ಚುನಾವಣ ಕೋಶಕ್ಕೆ ಮಾಹಿತಿ ನೀಡಲಾಯಿತು. ಫ್ಲೈಯಿಂಗ್ ಸ್ಕ್ವಾಡ್ ಎಫ್ಎಸ್ಟಿ ಮತ್ತು ಐಟಿ ಇಲಾಖೆ ಸಹಾಯಕ ನಿರ್ದೇಶಕರು ತಂಡದೊಂದಿಗೆ ಸ್ಥಳಕ್ಕೆ ಆಗಮಿಸಿ ವೀಡಿಯೋ ಚಿತ್ರೀಕರಣದೊಂದಿಗೆ ಹಣ ಎಣಿಕೆ ಮಾಡಲಾಯಿತು.
ಪುತ್ತೂರು : ಫೇಸ್ಬುಕ್ನಲ್ಲಿ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಬಗ್ಗೆ ಬಂದ ಜಾಹೀರಾತನ್ನು ನಂಬಿ ವ್ಯಕ್ತಿಯೋರ್ವರು 46.1 ಲಕ್ಷ ರೂ. ಹಣ ಕಳೆದುಕೊಂಡಿದ್ದಾರೆ. ಹಣ ಕಳೆದುಕೊಂಡ ಪುತ್ತೂರು ಸಾಲ್ಮರ ಆಶಿಯಾನ ಅಬ್ದುಲ್ಲಾ ಹಾಜಿ ಅವರ ಪುತ್ರ ಮುಹಮ್ಮದ್ – ಅನ್ಸಾಫ್ ಎಂ. (40) ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 20-02-2024ರಂದು ಫೇಸ್ ಬುಕ್ ನಲ್ಲಿ ಷೇರು ಮಾರುಕಟ್ಟೆ ಹೂಡಿಕೆ ಬಗ್ಗೆ ಬಂದ ಜಾಹೀರಾತು ನೋಡಿದಾಗ ಅದರಲ್ಲಿ ‘ಗುಡ್ ಇನ್ ಕಂ ರಿಸಲ್ಟ್ ಎಂಬುದಾಗಿ ಇದ್ದು, ಅದರಲ್ಲಿದ್ದ ಲಿಂಕನ್ನು ತೆರೆದಾಗವಾಟ್ಸ್ ಆ್ಯಪ್ ಪೇಜ್ ಕಾಣಿಸಿದೆ. ಪೇಜ್ನಲ್ಲಿ ಅಪರಿಚಿತ ವ್ಯಕ್ತಿಯು ಕಂಪೆನಿಯಲ್ಲಿರುವ ಸ್ಟಾಕ್ನ ಬಗ್ಗೆ ಡೀಟೈಲ್ಸ್ ನೀಡಿ ಬೇರೊಂದು ವಾಟ್ಸ್ ಆ್ಯಪ್ ಗ್ರೂಪ್ ಗೆ ಜಾಯಿನ್ ಮಾಡಿಸಿದ್ದು, ಅದರಲ್ಲಿ ಗ್ರೂಪ್ ಅಡ್ಡಿನ್ ದೀಪ್ತಿ ಶರ್ಮ ಅವರ ಹೆಸರಿನಲ್ಲಿತ್ತು. ವಾಟ್ಸ್ ಆ್ಯಪ್ ಗ್ರೂಪ್ನವರು ಹಣ ಹೂಡಿಕೆ ಮಾಡಲು ಬೇರೊಂದು ವಾಟ್ಸ್ ಆ್ಯಪ್ ಗ್ರೂಪ್ಗೆ ಜಾಯಿನ್ ಆಗುವಂತೆ ತಿಳಿಸಿ, ನೀಡಿದ ಲಿಂಕ್ ಒತ್ತಿದಾಗ ವಿಕಿಂಗ್ ‘ಗ್ಲೋಬಲ್ ಇನ್ವೆಸ್ಟರ್ಸ್’…
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಏ.26ರಂದು ನಡೆಯುವ ಚುನಾವಣೆಯಲ್ಲಿ 9 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಚುನಾವಣೆಯಲ್ಲಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದ 11 ಮಂದಿಯ ಪೈಕಿ 10 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿತ್ತು. ಇಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿತ್ತು. ಅದರಂತೆ ಪಕ್ಷೇತರ ಅಭ್ಯರ್ಥಿ ಸತೀಶ್ ಬೂಡುಮಕ್ಕಿ ನಾಮಪತ್ರ ವಾಪಸ್ ಪಡೆದಿದ್ದಾರೆ ಎಂದು ಚುನಾವಣಾಧಿಕಾರಿಯೂ ಆಗಿರುವ ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.ಇದೀಗ ಕಣದಲ್ಲಿ ಕಾಂಗ್ರೆಸ್ನ ಪದ್ಮರಾಜ್ ಆರ್., ಬಿಜೆಪಿಯ ಬ್ರಿಜೇಶ್ ಚೌಟ, ಬಹುಜನ ಸಮಾಜ ಪಾರ್ಟಿಯ ಕಾಂತಪ್ಪ ಅಲಂಗಾರ್, ಕರುನಾಡ ಸೇವಕ ಪಕ್ಷದ ದುರ್ಗಾಪ್ರಸಾದ್, ಉತ್ತಮ ಪ್ರಜಾಕೀಯ ಪಾರ್ಟಿಯ ಪ್ರಜಾಕೀಯ ಮನೋಹರ, ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್ಎಸ್)ಯ ರಂಜಿನಿ ಎಂ. ಪಕ್ಷೇತರರಾದ ದೀಪಕ್ ರಾಜೇಶ್ ಕುವೆಲ್ಲೋ, ಮ್ಯಾಕ್ಸಿಂ ಪಿಂಟೋ, ಸುಪ್ರಿತ್ ಕುಮಾರ ಪೂಜಾರಿ ಕಣದಲ್ಲಿದ್ದಾರೆ.
ಮಂಗಳೂರು: ಲೋಕಸಭಾ ಚುನಾವಣೆಯ ಪ್ರಚಾರ ಸಿದ್ದತೆ ಎಲ್ಲೆಡೆ ಭರದಿಂದ ಸಾಗುತ್ತಿದೆ. ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿ ಕೂಟ ಮೂರನೇ ಬಾರಿ ದೇಶದ ಆಡಳಿತ ಚುಕ್ಕಾಣಿ ಹಿಡಿಯಲು ಉತ್ಸುಕವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಬಿಡುವಿಲ್ಲದೆ ಚುನಾವಣಾ ರ್ಯಾಲಿಗಳಲ್ಲಿ ಭಾಗವಹಿಸುತ್ತಿದ್ದಾರೆ. ಏಪ್ರಿಲ್ 14 ರಂದು ಮಂಗಳೂರಿಗೆ ಭೇಟಿ ನೀಡಲಿರುವ ಮೋದಿ, ಚುನಾವಣಾ ಪ್ರಚಾರ ಸಮಾವೇಶದಲ್ಲಿ ಭಾಗವಹಿಸಿಸಲಿದ್ದಾರೆ. ಮಂಗಳೂರಿನಲ್ಲಿ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಭಾಗವಹಿಸಿದ ನಂತರ ಪ್ರಧಾನಿ ಮೋದಿ ಸಂಜೆ ಬೆಂಗಳೂರಿನಲ್ಲಿ ರೋಡ್ ಶೋದಲ್ಲಿ ಭಾಗಿಯಾಗಲಿದ್ದಾರೆ.
ಕೊಣಾಜೆ : ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ಉರುಮಣೆ ಸಮೀಪ ಭಾನುವಾರ ನಡೆದಿದೆ. ಸಫ್ವಾನ್ (24) ಆತ್ಮಹತ್ಯೆ ಮಾಡಿಕೊಂಡ ಯುವಕ.ಯುವಕ ಸಫ್ವಾನ್ ನ ಮನೆಯವರೆಲ್ಲಾ ಇಫ್ತಾರ್ ಕೂಟಕ್ಕೆ ತೆರಳಿದ್ದರು. ಈ ವೇಳೆ ಮನೆಯಲ್ಲಿ ಒಬ್ಬನೇ ಇದ್ದ ಸಫ್ವಾನ್ ಕೊಠಡಿಯೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುತ್ತಾನೆ ಎನ್ನಲಾಗಿದೆ.ಇನ್ನು ಈ ಬಗ್ಗೆ ಮನೆಯವರು ನೀಡಿದ ದೂರಿನ ಮೇರೆಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.









