Author: main-admin

ಮಂಗಳೂರು: 2024-25ನೇ ಹಣಕಾಸು ವರ್ಷ ಏಪ್ರಿಲ್‌ 1 ರಿಂದ ಆರಂಭವಾಗಿದ್ದು, ಹಲವು ಬದಲಾವಣೆಗಳು ಆಗಲಿವೆ. ಈ ಪೈಕಿ ಟೋಲ್ ದರ ಪರಿಷ್ಕ್ರರಣೆಗಳಲ್ಲಿಯೂ ಒಂದು. ರಾಷ್ಟ್ರಿಯ ಹೆದ್ದಾರಿಗಳಲ್ಲಿನ ಟೋಲ್ ದರಗಳು ಏ. 1 ರಿಂದ ಮತ್ತೆ ಹೆಚ್ಚಳವಾಗಲಿದ್ದು, ಈ ಮೂಲಕ ಮತ್ತೆ ವಾಹನ ಸವಾರರ ಜೇಬಿಗೆ ಕತ್ತರಿ ಬೀಳಲಿದೆ. ಕರಾವಳಿಯಲ್ಲಿರುವ ಬಂಟ್ವಾಳ ಸಮೀಪದ ಬ್ರಹ್ಮರಕೂಟ್ಲು ಕೇರಳ- ಕರ್ನಾಟಕ ಗಡಿಯ ತಲಪಾಡಿ, ಉಡುಪಿ ಜಿಲ್ಲೆಯ ಹೆಜಮಾಡಿ ಮತ್ತು ಸಾಸ್ತಾನದ ಗುಂಡ್ಮಿ ಟೋಲ್ ಗೇಟ್ ಗಳಲ್ಲಿ ಪರಿಷ್ಕ್ರತ ಶುಲ್ಕ ಜಾರಿಗೆ ಬರಲಿದೆ. ಆದರೆ ಈ ಬಾರಿ ಏಕಮುಖ ಸಂಚಾರದ ಶುಲ್ಕದಲ್ಲಿ ಹೆಚ್ಚಿನ ಬದಲಾವಣೆ ಮಾಡಿಲ್ಲ. ದ್ವಿಮುಖ ಸಂಚಾರ ಮತ್ತು ಮಾಸಿಕ ಪಾಸ್ ನ ಶುಲ್ಕದಲ್ಲಿ ಏರಿಕೆ ಮಾಡಲಾಗಿದೆ.ಪ್ರತೀ ವರ್ಷ ಎಪ್ರಿಲ್ ಒಂದರಿಂದ ದೇಶಾದ್ಯಂತ ಟೋಲ್ ಶುಲ್ಕ ಪರಿಷ್ಕರಣೆಯಾಗುತ್ತದೆ. ಈ ಪ್ರಕಾರ ಬ್ರಹ್ಮರಕೂಟ್ಲು ಟೋಲ್ ನಲ್ಲಿ ಕಾರು, ಜೀಪು, ವ್ಯಾನ್ ದ್ವಿಮುಖ ಸಂಚಾರದ ಶುಲ್ಕದಲ್ಲಿ 5 ರೂ. ಏರಿಕೆ ಕಂಡಿದ್ದು ಪರಿಷ್ಕ್ರತ ದರ 50 ರೂ. ಆಗಿರಲಿದೆ. ತಲಪಾಡಿಯಲ್ಲಿ…

Read More

ಬಂಟ್ವಾಳ: ಲೋಕಸಭಾ ಚುನಾವಣಾ ಕರ್ತವ್ಯದಲ್ಲಿರುವ ಸರಕಾರಿ ನೌಕರರೊಬ್ಬರು ಮಾ. 27ರ ಮಧ್ಯಾಹ್ನದಿಂದ ನಾಪತ್ತೆಯಾಗಿದ್ದಾರೆ. ಕರ್ತವ್ಯಕ್ಕೂ ಹಾಜರಾಗದೆ, ಮನೆಗೂ ತೆರಳದೆ ನಾಪತ್ತೆಯಾಗಿರುವ ಕುರಿತು ಪುಂಜಾಲಕಟ್ಟೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಅಮ್ಟಾಡಿ ಗ್ರಾ.ಪಂ. ಕಾರ್ಯದರ್ಶಿ, ಬೆಳ್ತಂಗಡಿಯ ಕೊಲ್ಪೆದಬೈಲು ನಿವಾಸಿ ಲಕ್ಷ್ಮೀನಾರಾಯಣ ಕಾಣೆಯಾದ ವ್ಯಕ್ತಿ. ಅವರ ಮೊಬೈಲ್‌ ಫೋನ್‌ ಸ್ವಿಚ್ಡ್ ಆಫ್‌ ಬರುತ್ತಿದ್ದು, ಬಳಿಕ ಮೊಬೈಲ್ ಮತ್ತು ಬೈಕ್ ದೊರಕಿದೆ ಎನ್ನಲಾಗಿದೆ. ಎಸ್‌ಎಸ್‌ಟಿ ತಂಡದಲ್ಲಿ ಅವರು ಕರ್ತವ್ಯ ನಿರ್ವಹಿಸುತ್ತಿದ್ದ ಅವರು ಮಾ. 27ರಂದು ಮಧ್ಯಾಹ್ನದ ಬಳಿಕ ಕಚೇರಿಯಿಂದ ತೆರಳಿದ್ದಾರೆ. ಆದರೆ ಮನೆಗೆ ಹೋಗಿಲ್ಲ. ಅವರ ಪತ್ನಿ ಪುಂಜಾಲಕಟ್ಟೆ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಬಂಟ್ವಾಳ ಸಹಾಯಕ ಚುನಾವಣಾಧಿಕಾರಿಗಳಿಗೂ ದೂರು ನೀಡಲಾಗಿದೆ. ಪ್ರಸ್ತುತ ಅವರ ಬೈಕ್‌ ಹಾಗೂ ಮೊಬೈಲ್‌ ಬೆಳ್ತಂಗಡಿಯಲ್ಲಿ ಪತ್ತೆಯಾಗಿದ್ದು, ಆದರೆ ವ್ಯಕ್ತಿ ಪತ್ತೆಯಾಗಿಲ್ಲ. ಈ ಹಿಂದೆಯೂ ಅವರು ಇದೇ ರೀತಿ ನಾಪತ್ತೆಯಾಗಿ ಬಳಿಕ ಪೊಲೀಸರ ಶೋಧದ ಬಳಿಕ ಪತ್ತೆಯಾಗಿದ್ದರು. ಪ್ರಸ್ತುತ ಪುಂಜಾಲಕಟ್ಟೆ ಪೊಲೀಸರು ಅವರ ಹುಡುಕಾಟದಲ್ಲಿ ತೊಡಗಿದ್ದಾರೆ.

Read More

ಮಂಗಳೂರು: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾಧಿಕಾರಿ ಕಚೇರಿ ಆವರಣದ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ಮಾ.28ರಿಂದ ಏ.8ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ. ದ.ಕ. ಲೋಕಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದ ಪ್ರಕ್ರಿಯೆಗಳು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆಯುವುದರಿಂದ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆಯ ಕ್ರಮವಾಗಿ ಈ ಆದೇಶ ಹೊರಡಿಸಿದ್ದಾರೆ. ಮಾ.28ರಿಂದ ಏ.8ರವರೆಗೆ, ಬೆಳಗ್ಗೆ 6ರಿಂದ ಸಂಜೆ 6ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.ಏ. 4ರಂದು ಅಭ್ಯರ್ಥಿಗಳು ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಏ. 5ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಇನ್ನು ಏ. 6ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.ಇನ್ನು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ಸಂದರ್ಭ ನಿಷೇಧಿತ 100 ಮೀ.ಪರಿಧಿಯಲ್ಲಿ ಅಭ್ಯರ್ಥಿಯ ವಾಹನ ಸೇರಿ, ಗರಿಷ್ಟ ಮೂರು ವಾಹನಗಳಿಗೆ ಮಾತ್ರ ಕಚೇರಿ ಆವರಣದಲ್ಲಿ ನಿಲುಗಡೆಗೆ ಅವಕಾಶ ನೀಡಲಾಗಿದೆ. ಅಭ್ಯರ್ಥಿಯನ್ನು ಒಳಗೊಂಡಂತೆ ಗರಿಷ್ಠ 5 ಮಂದಿಗೆ ಮಾತ್ರ ಕಚೇರಿ ಆವರಣ ಪ್ರವೇಶಿಸಲು ಅನುಮತಿ ನೀಡಲಾಗಿದ್ದು, 5ಕ್ಕಿಂತ ಹೆಚ್ಚು ಮಂದಿ…

Read More

ಉಡುಪಿ: ಕರ್ತವ್ಯದಲ್ಲಿದ್ದ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿ, ಬಳಿಕ ಕರೆಮಾಡಿ ಜೀವಬೆದರಿಕೆ ಹಾಕಿದ ಆರೋಪಿಯ ವಿರುದ್ಧ ಉಡುಪಿ ನಗರ ಠಾಣೆ ಹಾಗೂ ಕೋಟ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ. ಉಡುಪಿ ನಗರ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್‌ ಮರಿಗೌಡ ರಾತ್ರಿ ಕರ್ತವ್ಯದಲ್ಲಿರುವಾಗ ಉಡುಪಿ ಸಿಟಿ ಬಸ್ ನಿಲ್ದಾಣದ ಕಡೆಯಿಂದ ಕಲ್ಸಂಕ ಕಡೆಗೆ ಹೋಗುವ ಓಮ್ಮಿ ಕಾರೊಂದರಲ್ಲಿ ಸುಮಾರು 4 ಜನರು ಸಿಟಿ ಬಸ್‌ ನಿಲ್ದಾಣದ ಬಳಿಯ ಮೆಡಿಕಲ್‌ ಶಾಪ್‌ವೊಂದರ ಎದುರು ರಸ್ತೆ ಬದಿಯಲ್ಲಿ ಮಲಗಿದ್ದ ಕೂಲಿ ಕಾರ್ಮಿಕರ ಮೇಲೆ ಬಿಯರ್ ಬಾಟಲಿ ಹಾಗೂ ರಾಡ್‌ಗಳನ್ನು ಎಸೆದು ಹೋಗಿದ್ದಾರೆ. ಅಲ್ಲದೆ, ಇದೇ ವಠಾರದಲ್ಲಿ 2-3 ಬಾರೀ ಸುತ್ತಾಡುತ್ತಿದ್ದ ಬಗ್ಗೆ ಲಭಿಸಿದ ಮಾಹಿತಿ ಮೇರೆಗೆ ಆ ವಾಹನ ಮಾಲೀಕನಲ್ಲಿ ವಿಚಾರಿಸಲಾಗಿತ್ತು. ಬಳಿಕ ಆರೋಪಿ ಆದಮ್ ಎಂಬಾತ ಮರಿಗೌಡ ಅವರಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದಾನೆ. ಅದೇ ಫೋನ್‌ನಲ್ಲಿ ಮತ್ತೂರ್ವ ಆರೋಪಿ ಕೂಡ ಬೆದರಿಕೆ ಹಾಕಿದ್ದಾನೆ. ಈ ಕುರಿತು ಮರಿಗೌಡ ಅವರು ಉಡುಪಿನಗರ ಠಾಣೆಗೆ ನೀಡಿರುವ…

Read More

ಸುರತ್ಕಲ್: ಎನ್‌ಐಟಿಕೆಯಲ್ಲಿ ಬಣ್ಣದ ಹಬ್ಬ ಹೋಳಿಯನ್ನು ಭಾನುವಾರ ಅದ್ದೂರಿಯಾಗಿ ಆಚರಿಸಲಾಗಿದೆ. ಹೋಳಿ ಹಬ್ಬ ಆಚರಣೆಗೆ ಯಾವುದೇ ಅಪಸ್ವರ ಇಲ್ಲ. ಆದರೆ ದುಡ್ಡುಕೊಟ್ಟು ಹೊರಗಡೆಯಿಂದ ನೀರು ಖರೀದಿಸಿ ನೀರನ್ನು ಪೋಲು ಮಾಡಿ ಹೋಳಿ ಅಚರಿಸಿರುವ ಕುರಿತು ವ್ಯಾಪಕ ಟೀಕೆಗಳು ವ್ಯಕ್ತವಾಗಿದೆ. ಎನ್‌ಐಟಿಕೆ ಕೇಂದ್ರ ಸರಕಾರದ ಅಧೀನದಲ್ಲಿರುವ ರಾಷ್ಟ್ರದ ಪ್ರತಿಷ್ಠಿತ ಇಂಜನಿಯರಿಂಗ್ ಕಾಲೇಜುಗಳಲ್ಲೊಂದು. ಎನ್‌ಐಟಿಕೆ ನಡೆಯುತ್ತಿರುವುದು ಸರಕಾರದ ದುಡ್ಡಿನಿಂದ. ಇಂತಹ ಒಂದು ಪ್ರತಿಷ್ಠಿತ ಸಂಸ್ಥೆ ನೈಸರ್ಗಿಕ ಸಂಪತ್ತು ನೀರನ್ನು ಹೋಳಿ ಆಚರಣೆಗಾಗಿ ಬಳಸಿ ಪೋಲು ಮಾಡಿರುವುದು ಟೀಕೆಗೆ ಗ್ರಾಸವಾಗಿದೆ. ಒಂದೆಡೆ ನೀರಿಲ್ಲ, ಇನ್ನೊಂದೆಡೆ ದುಡ್ಡು ನೀಡಿ ಹೊರಗಡೆಯಿಂದ ತಲಾ 12 ಸಾವಿರ ಲೀಟರ್‌ನ ಮೂರು ಟ್ಯಾಂಕರ್ ನೀರನ್ನು ಹೋಳಿಗೆ ಬಳಸಲಾಗಿದೆ. ಎನ್‌ಐಟಿಕೆ ಹಾಸ್ಟೆಲ್ ವಿದ್ಯಾರ್ಥಿಗಳು ಹೋಳಿಯಲ್ಲಿ ಮಿಂದೆದ್ದು ಸಂಭ್ರಮಿಸಿದ್ದಾರೆ. ಹಾಸ್ಟೆಲ್ ಫಂಡ್‌ನ್ನು ನೀರು ಹಾಗೂ ಹೋಳಿ ಬಣ್ಣ ಖರೀದಿಸಲು ಬಳಸಲಾಗಿದೆ ಎನ್ನಲಾಗುತ್ತಿದೆ. ನೈಸರ್ಗಿಕ ಬಣ್ಣವನ್ನು ಬಳಸದೆ ರಾಸಾಯನಿಕ ಬಣ್ಣವನ್ನು ಬಳಸಲಾಗಿದೆ ಎಂಬ ಆರೋಪವೂ ಇದೆ. ಕಳೆದ ವರ್ಷ ಎನ್‌ಐಟಿಕೆಯಲ್ಲಿ ನೀರಿನ ತೀವ್ರ ಸಮಸ್ಯೆ ಎದುರಾಗಿತ್ತು.…

Read More

ಮಂಗಳೂರು: ದ.ಕ.ಜಿಲ್ಲೆಯಲ್ಲಸದ್ಯ ಕುಡಿಯುವ ನೀರು ಲಭ್ಯತೆಯಿದ್ದು, ಸದ್ಯ ರೇಷನಿಂಗ್ ಮಾಡುವ ಪರಿಸ್ಥಿತಿ ಎದುರಾಗಿಲ್ಲ. ಆದರೆ ಸಾರ್ವಜನಿಕರು ನೀರು ಪೋಲಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ. ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾತನಾಡಿದ ಅವರು, ನೇತ್ರಾವತಿ ನದಿಯ ಮೂರು ಡ್ಯಾಂಗಳಲ್ಲಿ ಇರುವ ನೀರಿನ ಮಟ್ಟವನ್ನು ಪ್ರತಿದಿನ ಅವಲೋಕನ ಮಾಡಲಾಗುತ್ತಿದೆ. ಅದರಂತೆ ನೀರಿನ ರೇಷನಿಂಗ್ ಮಾಡುವ ಅಗತ್ಯ ಕಂಡು ಬಂದಿಲ್ಲ. ತುಂಬೆ ಡ್ಯಾಂನಲ್ಲಿ 5.48 ಮೀಟರ್, ಎಎಂಆರ್ ಡ್ಯಾಂನಲ್ಲಿ 17.6 ಮೀ, ಬಿಳಿಯೂರು ಡ್ಯಾಂನಲ್ಲಿ 1.95 ಮೀಟರ್ ನೀರು ಲಭ್ಯವಿದೆ. ತುಂಬೆ ಡ್ಯಾಂನ ಮಟ್ಟ 5 ಮೀಟರ್ ಗೆ ಇಳಿದಾಗ ಎಎಂಆರ್‌ನಿಂದ ನೀರು ಬಿಡಲಾಗುವುದು, ಎಎಂಆರ್ ಡ್ಯಾಂನಲ್ಲಿ 16 ಮೀಟರ್‌ಗೆ ಇಳಿದಾಗ ಬಿಳಿಯೂರು ಡ್ಯಾಂನಿಂದ ನೀರು ಬಿಡಲಾಗುತ್ತದೆ ಎಂದು ಹೇಳಿದರು. ಈಗಾಗಲೇ ಕೈಗಾರಿಕೆಗಳಿಗೆ ಕೊಡುವ ನೀರಿನ ಪ್ರಮಾಣವನ್ನು ಶೇ.50ರಷ್ಟು ಕಡಿಮೆ ಮಾಡಲಾಗಿದೆ. ಮಂಗಳೂರು ಮನಪಾ ವ್ಯಾಪ್ತಿಗೆ ಪೂರೈಕೆಯಾಗುವ ತುಂಬೆ ಅಣೆಕಟ್ಟಿನಲ್ಲಿ 6 ಮೀ‌. ನೀರು ಸುಮಾರು 50 ದಿನಗಳಿಗೆ ಪೂರೈಕೆ…

Read More

ಮಂಗಳೂರು ಹೊರವಲಯದ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಇಂದು(ಗುರುವಾರ) ಬೆಳಿಗ್ಗೆ ಭಾರಿ ಅಗ್ನಿ ಅನಾಹುತ ಸಂಭವಿಸಿದೆ. ಕೋಳಿ ಆಹಾರಕ್ಕೆ ಬೇಕಾಗಿರುವ ಮೀನು ಪದಾರ್ಥಗಳನ್ನು ಉತ್ಪಾದಿಸುವ ಶಿಹಾರ ಎಂಟರ್ಪ್ರೈಸ್ ನಲ್ಲಿ‌ ಈ ಅಗ್ನಿ ದುರಂತ ಸಂಭವಿಸಿದೆ. ತಡ ರಾತ್ರಿ ಗೋದಾಮಿನಲ್ಲಿ ಕಾಣಿಸಿಕೊಂಡ ಬೆಂಕಿ ಬಳಿಕ ಕಾರ್ಖಾನೆ ಇಡೀಯ ವ್ಯಾಪಿಸಿದ್ದು ಮಾಹಿತಿ ಪಡೆದ ಅಗ್ನಿ ಶಾಮಕ ದಳ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಹತೋಟಿಗೆ ತಂದು ನಂದಿಸಿದ್ದಾರೆ. ಘಟನೆಯಲ್ಲಿ ಯಾವುದೇ ಸಾವು ನೋವುಗಳು ಸಂಭವಿಸಿಲ್ಲ. ಶಾರ್ಟ್ ಸರ್ಕಿಟ್ ದುರಂತಕ್ಕೆ ಕಾರಣವೆಂದು ಶಂಕಿಸಲಾಗಿದ್ದು ಕೋಟ್ಯಾಂತರ ರೂಪಾಯಿಗಳ ನಷ್ಟ ಸಂಭವಸಿದೆ ಎಂದು ಮಾಲಿಕ ಮೊಹಮ್ಮದ್ ತಿಳಿಸಿದ್ದಾರೆ.

Read More

ಸುಳ್ಯ: ದಕ್ಷಿಣ ಕನ್ನಡ ಹಾಗೂ ಕೊಡಗು ಗಡಿಭಾಗದ ಕೂಜಿಮಲೆ ಎಸ್ಟೇಟ್ ಪ್ರದೇಶದಲ್ಲಿ ಬುಧವಾರ ಅಪರಿಚಿತ ಮಹಿಳೆ ಓಡಾಡಿದ್ದು ಆಕೆ ನಕ್ಸಲ್ ಎಂಬ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಶೋಧಕಾರ್ಯ ನಡೆಸಲಾಗಿದೆ. ಸುಳ್ಯ ತಾಲೂಕಿನ ಗಡಿಗ್ರಾಮ ಕಲ್ಮಕಾರು ಸಮೀಪದ ಕೂಜಿಮಲೆ ಎಸ್ಟೇಟ್ ಕೊಡಗು ಜಿಲ್ಲೆಯ ವ್ಯಾಪ್ತಿಯಲ್ಲಿ ಬುಧವಾರ ಮಧ್ಯಾಹ್ನ 12ರ ಬಳಿಕ ಅಪರಿಚಿತ ಮಹಿಳೆ ಎಸ್ಟೇಟ್ ನ ರಬ್ಬರ್ ತೋಟದಲ್ಲಿ ಸಂಚರಿಸುತ್ತಿರುವುದನ್ನು ಸಿಬ್ಬಂದಿ ನೋಡಿದ್ದು, ಬಳಿಕ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಈ ಹಿನ್ನಲೆ ನಕ್ಸಲ್ ನಿಗ್ರಹ ಪಡೆ ಆಗಮಿಸಿ ಶೋಧ ನಡೆಸಿದರು ಯಾವುದೇ ಸುಳಿವು ಸಿಕ್ಕಿಲ್ಲ ಎಂದು ಹೇಳಲಾಗಿದೆ. ಶಂಕಿತ ಮಹಿಳೆ ರಬ್ಬರ್ ತೋಟದಿಂದ ಅರಣ್ಯ ಭಾಗದತ್ತ ತೆರಳಿದ್ದಾಳೆ ಎನ್ನಲಾಗಿದೆ. ನಕ್ಸಲ್ ನಿಗ್ರಹ ಪಡೆ, ಐನಕಿದು ಕೂಜಿಮಲೆ ಆಸು ಪಾಸಿನಲ್ಲೇ ಶೋಧ ಕಾರ್ಯ ನಡೆಸುತ್ತಿದೆ ಎನ್ನಲಾಗಿದ್ದು, ಶಂಕಿತ ಮಹಿಳೆ ಕಾಣಿಸಿಕೊಂಡ ಮಾಹಿತಿ ಲಭ್ಯವಾದ ಕೂಡಲೇ ಎ ಎನ್ ಎಫ್ ತಂಡ ಎಸ್ಟೇಟ್ ಪ್ರದೇಶಕ್ಕೆ ತೆರಳಿ ಶೋಧ ಕಾರ್ಯ ತೊಡಗಿದೆ.

Read More

ಬೆಳ್ತಂಗಡಿ: ದೇವಸ್ಥಾನಕ್ಕೆ ಹೋಗುವ ಸಾರ್ವಜನಿಕ ರಸ್ತೆಯ ಬಳಿ ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡುತ್ತಿದ್ದಾಗ ವೇಣೂರು ಪೊಲೀಸರು ದಾಳಿ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕು ಮೂಡಕೋಡಿ ಗ್ರಾಮದಲ್ಲಿ ನಡೆದಿದೆ. ದಿನಾಂಕ: 27.03.2024 ರಂದು ಸಂಜೆ, ಬೆಳ್ತಂಗಡಿ ತಾಲೂಕು ಮೂಡಕೋಡಿ ಗ್ರಾಮದ ಉಮಾಮಹೇಶ್ವರಿ ದೇವಸ್ಥಾನಕ್ಕೆ ಹೋಗುವ ಸಾರ್ವಜನಿಕ ರಸ್ತೆಯ ಬಳಿ, ಆರೋಪಿಯಾದ ಮೂಡುಕೋಡಿ ಗ್ರಾಮ, ಬೆಳ್ತಂಗಡಿ ನಿವಾಸಿ ಶೇಖರ ಶೆಟ್ಟಿ ಎಂಬಾತನು ಮದ್ಯದ ಬಾಟಲಿಗಳನ್ನು ಇಟ್ಟುಕೊಂಡು ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡುತ್ತಿದ್ದಾಗ, ವೇಣೂರು ಪೊಲೀಸ್‌ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಆನಂದ ಎಂ ರವರು ಹಾಗೂ ಸಿಬ್ಬಂದಿಗಳು ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ 1469/- ರೂ ಮೌಲ್ಯದ, ತಲಾ 180 ಎಂ.ಎಲ್. ಮದ್ಯ ತುಂಬಿದ 17 ಸ್ಯಾಚೆಟ್‌ ಗಳು ಹಾಗೂ ತಲಾ 90 ಎಂ, ಎಲ್.‌ ಮದ್ಯ ತುಂಬಿದ 07 ಸ್ಯಾಚೆಟ್‌ ಗಳನ್ನು (3.690 ಲೀಟರ್‌ ಮದ್ಯ) ವಶಪಡಿಸಿ, ಮುಂದಿನ ಕಾನೂನು ಕ್ರಮಕ್ಕಾಗಿ ವೇಣೂರು ಪೊಲೀಸ್ ಠಾಣೆಯಲ್ಲಿ 30/2024 ಕಲಂ: 32, 34 ಅಬಕಾರಿ ಕಾಯ್ದೆ-1965…

Read More

ಮಂಗಳೂರು: ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ದ.ಕ. ಜಿಲ್ಲೆಯಲ್ಲಿ ಮಾ. 25 ಬೆಳಗ್ಗೆ 9 ರಿಂದ ಮಾ. 26 ರವರೆಗೆ ನಡೆದ ತಪಾಸಣೆಯಲ್ಲಿ ಅಕ್ರಮ ಹಣ ಹಾಗೂ ಮದ್ಯ ವಶಪಡಿಸಿಕೊಳ್ಳಲಾಗಿದೆ. ಒಟ್ಟು 1,39,300 ರೂ. ಹಣ ಹಾಗೂ 46 ಲೀ. ಮದ್ಯ ವಶಕ್ಕೆ ಪಡೆಯಲಾಗಿದೆ. ಇದರೊಂದಿಗೆ ಮಾ. 17 ರಿಂದ 26 ರ ವರೆಗೆ ಒಟ್ಟು 8,71,500 ರೂ. ನಗದನ್ನು ವಶಪಡಿಸಿಕೊಂಡಿದಾಗಿದೆ. ಇದರ ಜೊತೆಗೆ 5,72,342 ರೂ, ಮೌಲ್ಯದ ಒಟ್ಟು 1078,98 ಲೀ. ಮದ್ಯವನ್ನು ಪೊಲೀಸರು ವಶಪಡಿಸಿಕೊಳ್ಳಲಾಗಿದೆ.ಈ ಪೈಕಿ ತಪಾಸಣೆ ನಡೆದ ನಂತರ ಇದರ ಬಗ್ಗೆ ಸಂಪೂರ್ಣವಾಗಿ ದಾಖಲೆಯನ್ನು ಪರಿಶೀಲಿಸಿ 1.32 ಲಕ್ಷ ರೂ. ಗಳನ್ನು ಸಂಬಂಧಪಟ್ಟ ವ್ಯಕ್ತಿಗಳಿಗೆ ವಾಪಾಸ್ ನೀಡಲಾಗಿದೆ. 

Read More