ಉಡುಪಿ: ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಪ್ರವೀಣ್ ಚೌಗುಲೆಯ ಚಾರ್ಜ್ (ಆಪಾದನೆ ವಾಚಿಸುವ) ಪ್ರಕ್ರಿಯೆ ಜಿಲ್ಲಾ ಎರಡನೇ ಹೆಚ್ಚುವರಿ ಸತ್ರ ನ್ಯಾಯಾಲಯದಲ್ಲಿ ಇಂದು ನಡೆಯಿತು. ಇದಕ್ಕೂ ಮುನ್ನ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಆರೋಪಿಯನ್ನು ಮಲ್ಪೆ ಪೊಲೀಸರು ಬಿಗಿ ಭದ್ರತೆಯಲ್ಲಿ ನ್ಯಾಯಾಲಯಕ್ಕೆ ಕರೆತಂದರು. ಮಾರ್ಚ್ 7ರಂದು ನ್ಯಾಯಾಧೀಶ ದಿನೇಶ್ ಹೆಗ್ಡೆ, ಈ ಪ್ರಕರಣದಲ್ಲಿ ಆರೋಪಿ ವಿರುದ್ಧ ಆಪಾದನೆ ವಾಚಿಸಲು ಬೇಕಾದ ಸಾಕ್ಷ್ಯಾಧಾರಗಳಿವೆ ಎಂದು ತೀರ್ಮಾನಿಸಿ ಬೆಂಗಳೂರಿನ ಪರಪ್ಪನ ಅಗ್ರಹಾರದ ಜೈಲಿನಲ್ಲಿರುವ ಆರೋಪಿ ಪ್ರವೀಣ್ ಚೌಗುಲೆಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ಆದೇಶಿಸಿದ್ದರು.ಅದರಂತೆ ಆರೋಪಿಯನ್ನು ಕೋರ್ಟ್ಗೆ ಇಂದು ಬೆಂಗಳೂರು ಮತ್ತು ಮಲ್ಪೆ ಪೊಲೀಸರು ಬಿಗಿ ಭದ್ರತೆಯಲ್ಲಿ ಕರೆತಂದರು. ಆರೋಪಿ ಪ್ರವೀಣ್ ಚೌಗುಲೆ ಎರಡನೇ ಬಾರಿಗೆ ಜಾಮೀನು ಕೋರಿ ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು ,ಇಂದು ಇದಕ್ಕೆ ಆಕ್ಷೇಪಣೆ ಸಲ್ಲಿಸಲು ವಿಶೇಷ ಸರಕಾರಿ ಅಭಿಯೋಜಕರಿಗೆ ಅವಕಾಶ ಕಲ್ಪಿಸಿ ನ್ಯಾಯಾಲಯವು ಆದೇಶಿಸಿದೆ.
Author: main-admin
ಮಣಿಪಾಲ: ಖಾಸಗಿ ಜಾಗದಲ್ಲಿ ಕರ್ಕಶ ಧ್ವನಿ ಅಳವಡಿಸಿ ಹೋಳಿ ಸಂಭ್ರಮಾಚರಣೆ ಮಾಡುತ್ತಿದ್ದವರ ಮೇಲೆ ಪ್ರಕರಣ ದಾಖಲಿಸಲಾಗಿದೆ. ವಿದ್ಯಾರತ್ನ ನಗರದ ಬಳಿ ಇರುವ ಖಾಸಗಿ ಜಾಗದಲ್ಲಿ ಸಾರ್ವಜನಿಕರನ್ನು ಸೇರಿಸಿ ಸೌಂಡ್ ಬಾಕ್ಸ್ ಮತ್ತು ಸ್ಪೀಕರನ್ನು ಅಳವಡಿಸಿ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡುತ್ತಿರುವ ಬಗ್ಗೆ ಮಣಿಪಾಲ ಪೊಲೀಸರಿಗೆ ಮಾಹಿತಿ ಲಭಿಸಿತ್ತು.ಕಾರ್ಯಕ್ರಮವನ್ನು ರತನ್ ಎಂಬವರು ಆಯೋಜಿಸಿದ್ದರು. ಈ ಸಂಬಂಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬುಧವಾರ ಬೆಳಿಗ್ಗೆ ಕರ್ನಾಟಕದ 13 ಜಿಲ್ಲೆಗಳ ವಿವಿಧ ಸ್ಥಳಗಳಲ್ಲಿ ಸರ್ಕಾರಿ ಅಧಿಕಾರಿಗಳ ಮೇಲೆ ವ್ಯಾಪಕ ದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಂಗಳೂರು, ಬೀದರ್, ರಾಮನಗರ, ಉತ್ತರ ಕನ್ನಡ ಜಿಲ್ಲೆಗಳ 60 ಸ್ಥಳಗಳಲ್ಲಿ 100ಕ್ಕೂ ಹೆಚ್ಚು ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಐದು ಸ್ಥಳಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ. 13 ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು 12 ಉಪ ಪೊಲೀಸ್ ವರಿಷ್ಠಾಧಿಕಾರಿಗಳು ಶೋಧ ಕಾರ್ಯಾಚರಣೆಯ ನೇತೃತ್ವ ವಹಿಸಿದ್ದಾರೆ. ಜನವರಿಯಲ್ಲಿ ಲೋಕಾಯುಕ್ತರು 10 ಭ್ರಷ್ಟಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ 40 ಸ್ಥಳಗಳಲ್ಲಿ ಸರ್ಕಾರಿ ಅಧಿಕಾರಿಗಳ ನಿವಾಸಗಳ ಮೇಲೆ ದಾಳಿ ನಡೆಸಿದ್ದರು. ತುಮಕೂರು, ಮಂಡ್ಯ, ಚಿಕ್ಕಮಗಳೂರು, ಮೈಸೂರು, ಕೊಪ್ಪಳ, ವಿಜಯನಗರ, ಬಳ್ಳಾರಿ, ಹಾಸನ, ಚಾಮರಾಜನಗರ ಮತ್ತು ಮಂಗಳೂರಿನಲ್ಲಿ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ.
ಮಂಗಳೂರು: ಲೋಕಸಭೆ ಚುನಾವಣೆ ಶಾಂತಿಯುತವಾಗಿ ನಡೆಯುವ ಹಿನ್ನಲೆಯಲ್ಲಿ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಮತ್ತೆ ನಾಲ್ವರು ರೌಡಿಗಳ ವಿರುದ್ಧ ಗೂಂಡಾ ಕಾಯ್ದೆ ಜಾರಿಗೊಳಿಸಲಾಗಿದೆ. ಅಲ್ಲದೆ, ಮತ್ತೆ 13 ಮಂದಿಯನ್ನು ದ.ಕ.ಜಿಲ್ಲೆಯಿಂದ ಗಡೀಪಾರು ಮಾಡಲಾಗಿದೆ. ಉಳ್ಳಾಲ ಅಂಬ್ಲಮೊಗರು ನಿವಾಸಿ ಹೇಮಚಂದ್ರ ಅಲಿಯಾಸ್ ಪ್ರಜ್ವಲ್ ಪೂಜಾರಿ(29), ಉಳ್ಳಾಲ ಕೈರಂಗಳ ನಿವಾಸಿ ನವಾಜ್ (36), ಕುದ್ರೋಳಿ ನಿವಾಸಿ ಅನೀಸ್ ಅಶ್ರಫ್ (26), ಬೋಳೂರು ನಿವಾಸಿ ಚರಣ್ ಶೇಟ್ (39) ವಿರುದ್ಧ ಗೂಂಡಾ ಕಾಯ್ದೆ ಜಾರಿಗೊಳಿಸಲಾಗಿದೆ. ಹೇಮಚಂದ್ರನ ವಿರುದ್ಧ ಕೊಲೆ ಯತ್ನ, ಕೊಲೆ, ಗಲಭೆ, ಕಿಡ್ನಾಪ್ ಸೇರಿದಂತೆ ಒಟ್ಟು 17 ಕೇಸುಗಳಿವೆ. ಅನೀಸ್ ಅಶ್ರಫ್ ವಿರುದ್ಧ ಕೊಲೆ ಯತ್ನ, ಡ್ರಗ್ಸ್, ಗಲಭೆ, ಕಳವು, ಹಲ್ಲೆ ಸೇರಿದಂತೆ 18 ಕೇಸುಗಳಿದೆ. ನವಾಜ್ ವಿರುದ್ಧ ಹಲ್ಲೆ, ಕೊಲೆಯತ್ನ, ಕಿಡ್ನಾಪ್ ಪ್ರಕರಣ ಸೇರಿ 13 ಕೇಸುಗಳಿವೆ. ಚರಣ್ ವಿರುದ್ಧ ಹಲ್ಲೆ, ಗಲಭೆ, ಕೊಲೆ ಯತ್ನ ಎರಡು ಕೊಲೆ, ಕಿಡ್ನಾಪ್, ರಾಬರಿ ಸೇರಿದಂತೆ 11 ಕೇಸುಗಳಿದೆ. ಅಲ್ಲದೆ ಅಪರಾಧ ಹಿನ್ನೆಲೆಯಿರುವ ಮತ್ತೆ…
ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹೊಸಾಳ ಗ್ರಾಮದ ಸೀತಾ ನದಿಯಲ್ಲಿ ಮೀನು ಹಿಡಿಯಲು ಹೋದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಈ ಘಟನೆ ಇಂದು ಸಂಭವಿಸಿದೆ. ಮೃತ ಯುವಕರು ಹೊಸಾಳ ಗ್ರಾಮದ ಶ್ರೀಶ (21) ಹಾಗೂ ಪ್ರಶಾಂತ್ ಪೂಜಾರಿ (30) ಎಂದು ತಿಳಿಯಲಾಗಿದೆ. ಇವರು ಇಂದು (ಮಂಗಳವಾರ) ಬೆಳಿಗ್ಗೆ ಮೀನು ಹಿಡಿಯಲೆಂದು ನಾಗರಮಠದ ಸೀತಾ ನದಿಗೆ ಹೋಗಿದ್ದು ಮೀನಿಗೆ ಬಲೆ ಹಾಕುವಾಗ ನೀರಿನ ಸೆಳೆತಕ್ಕೆ ಸಿಲುಕಿ ಇಬ್ಬರು ಯುವಕರು ನೀರು ಪಾಲಾಗಿರುತ್ತಾರೆ. ಯುವಕರು ನೀರಿನಲ್ಲಿ ಮುಳುಗುತ್ತಿರುವುದನ್ನು ಸ್ಥಳೀಯರೊಬ್ಬರು ನೋಡಿ ಅವರ ರಕ್ಷಣೆಗೆ ಧಾವಿಸಿದ್ದರೂ ನೀರಿನ ಸೆಳೆತ ಜೋರಾಗಿದ್ದರಿಂದ ಯುವಕರು ನೀರು ಪಾಲಾದರು ಎಂದು ಹೇಳಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಈಜು ತಜ್ಞ ಈಶ್ವರ್ ಮಲ್ಪೆ ಹಾಗೂ ಸ್ಥಳೀಯರು ಬಂದು ಕಾರ್ಯಾಚರಣೆ ನಡೆಸಿದ್ದಾರೆ. ಶ್ರೀಶ ಹಾಗೂ ಪ್ರಶಾಂತ್ ಪೂಜಾರಿಯ ಶವ ಹೊಳೆಯಲ್ಲಿ ದೊರೆತಿದ್ದು ಜೀವನ್ ಮಿತ್ರ ನಾಗರಾಜ್ ಪುತ್ರನ್ ಅವರು ಮೃತದೇಹವನ್ನು ಬ್ರಹ್ಮಾವರ ಶವಾಗಾರಕ್ಕೆ ಸಾಗಿಸಿರುತ್ತಾರೆ. ಸ್ಥಳಕ್ಕೆ ಬ್ರಹ್ಮಾವರ ತಹಶೀಲ್ದಾರ್ ಶ್ರೀಕಾಂತ್…
ಕಾರ್ಕಳ : ಮನೆಮಂದಿ ಮಲಗಿದ್ದ ವೇಳೆ ಕಳ್ಳರು ಕಿಟಕಿಯ ಬಾಗಿಲ ಚಿಲಕ ಮುರಿದು ಮನೆಯ ಒಳನುಗ್ಗಿ ಕೋಣೆಯಲ್ಲಿ ಕಪಾಟಿನಲ್ಲಿ ಇಟ್ಟಿದ್ದ 2.25 ಲಕ್ಷ ನಗದು ದೋಚಿದ ಘಟನೆ ಕುಕ್ಕುಂದೂರು ನಲ್ಲಿ ನಡೆದಿದೆ. ಇಲ್ಲಿನ ಜೋಡುರಸ್ತೆ ನಿವಾಸಿ ಜಗದೀಶ್ ಬಿ.ಎ. ಅವರ ಮನೆಯಲ್ಲಿ ಕಳ್ಳತನವಾಗಿದ್ದು, ರಾತ್ರಿ ಮನೆಯ ಬಾಗಿಲು ಹಾಕಿ ಭದ್ರಪಡಿಸಿ ಮಲಗಿದ್ದರು. ಆದರೆ ಬೆಳಗ್ಗಿನ ಜಾವ 3: 40 ಗಂಟೆಗೆ ಜಗದೀಶ್ ರವರು ಮಲಗಿದ್ದ ಕೋಣೆಯು ತೆರೆದ ಶಬ್ದ ಕೇಳಿ ಎದ್ದು ನೋಡಿದಾಗ ಮನೆಯ ಮುಂದಿನ ಬಾಗಿಲು ಅರ್ಧ ತೆರೆದಿದ್ದು, ಪಕ್ಕದಲ್ಲಿದ್ದ ಕಿಟಕಿಯ ಚಿಲಕವನ್ನು ತುಂಡರಿಸಿರುವುದು ಕಂಡುಬಂದಿದೆ. ಮನೆಯೊಳಗೆ ಪರಿಶೀಲಿಸಿ ನೋಡಿದಾಗ ಯಾರೋ ಕಳ್ಳರು ಮನೆಯ ಮುಖ್ಯದ್ವಾರದ ಪಕ್ಕದಲ್ಲಿದ್ದ ಕಿಟಕಿಯ ಚಿಲಕವನ್ನು ತುಂಡರಿಸಿ ಬಾಗಿಲಿನ ಚಿಲಕವನ್ನು ಕಿಟಿಕಿಯ ಮೂಲಕ ತೆರೆದು ಮನೆಯೊಳಗೆ ಪ್ರವೇಶಿಸಿ ಮನೆಯ ಇನ್ನೊಂದು ಕೋಣೆಯೊಳಗೆ ಬಟ್ಟೆಗಳನ್ನು ಚೆಲ್ಲಾಪಿಲ್ಲಿ ಮಾಡಿ ಹುಡುಕಾಡಿ ಕೋಣೆಯಲ್ಲಿ ಕಪಾಟಿನಲ್ಲಿ ಇಟ್ಟಿದ್ದ 2,25,000 ರೂ. ನಗದು ಎಗರಿಸಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ…
ಕಡಬ : ಕೃಷಿಗಾಗಿ ಮಾಡಿಕೊಂಡ ಸಾಲ ಮರುಪಾವತಿಸಲು ಸಾಧ್ಯವಾಗದೆ ಹತಾಶೆಗೊಂಡ ಕೃಷಿಕ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ದಕ್ಷಿಣ ಕನ್ನಡದ ಕಡಬದಲ್ಲಿ ನಡೆದಿದೆ. ಕಡಬ ಠಾಣಾ ವ್ಯಾಪ್ತಿಯ ಕೊಯಿಲ ಗ್ರಾಮದ ಬುಡಲೂರು ಎಂಬಲ್ಲಿ ಈ ಘಟನೆ ನಡೆದಿದ್ದು ಬೂಡಲೂರು ನಿವಾಸಿ ಶಿವಣ್ಣ ಗೌಡ(61ವ.)ಆತ್ಮಹತ್ಯೆ ಮಾಡಿಕೊಂಡ ಕೃಷಿಕರಾಗಿದ್ದಾರೆ. ತಮ್ಮ ಮನೆಯಿಂದ ಅನತಿ ದೂರದ ಗುಡ್ಡೆಯೊಂದರಲ್ಲಿ ಶಿವಣ್ಣ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವಣ್ಣ ಗೌಡ ಅವರು ಸ್ಥಳೀಯ ಸಹಕಾರಿ ಕೃಷಿ ಪತ್ತಿನ ಸಹಕಾರಿ ಸಂಘ, ಪುತ್ತೂರು ಭೂ ಅಭಿವೃದ್ಧಿ ಬ್ಯಾಂಕಿನಲ್ಲಿ ಕೃಷಿ ಚಟುವಟಿಕೆಗಾಗಿ ರೂ.10 ಲಕ್ಷಕ್ಕೂ ಹೆಚ್ಚು ಸಾಲ ಮಾಡಿದ್ದರು ಎನ್ನಲಾಗಿದೆ. ಸಾಲ ಮರುಪಾವತಿಸಲು ಸಾಧ್ಯವಾಗುವುದಿಲ್ಲ ಎನ್ನುವ ಕೊರಗಿನಿಂದ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮೃತರ ಪುತ್ರ ಹೇಮಂತ್ ಅವರು ಕಡಬ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಕಡಬ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಪುತ್ರಿಯನ್ನು ಅಗಲಿದ್ದಾರೆ.
ಸುರತ್ಕಲ್: ಹೊಟೇಲ್ ಸೂರಜ್ ಬಳಿ ರಸ್ತೆ ದಾಟುತ್ತಿದ್ದ ದ್ವಿಚಕ್ರ ವಾಹನಕ್ಕೆ ಜೀಪೊಂದು ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರರಿಬ್ಬರೂ ಮೃತಪಟ್ಟ ಘಟನೆ ಸಂಭವಿಸಿದೆ ಮೃತಪಟ್ಟವರು ಬೀಡಿ ಗುತ್ತಿಗೆದಾರ ನೋಣಯ್ಯ (64), ಸಹಸವಾರ ನಿಯಾಜ್ (34) ಎಂದು ತಿಳಿಯಲಾಗಿದೆ ಕುಳಾಯಿ ಪ್ರಗತಿ ನಗರ ನಿವಾಸಿ ನೋಣಯ್ಯ ಅವರು ಸುಮಾರು ಮೂವತ್ತು ವರ್ಷಗಳಿಂದ ಬೀಡಿ ಗುತ್ತಿಗೆದಾರರಾಗಿ ಕೆಲಸ ಮಾಡುತ್ತಿದ್ದರು. ಎಂದಿನಂತೆ ಕೆಲಸದ ನಿಮಿತ್ತ ತನ್ನ ಜತೆ ಕೆಲಸ ಮಾಡುವ ಕಾನ ನಿವಾಸಿ ನಿಯಾಜ್ ಜತೆ ಸ್ಕೂಟರ್ನಲ್ಲಿ ಮುಕ್ಕದಿಂದ ಬಂದವರು ಹೊಟೇಲ್ ಬಳಿ ಯೂ ಟರ್ನ್ ಮಾಡುತ್ತಿದ್ದ ವೇಳೆ ಜೀಪ್ ಢಿಕ್ಕಿ ಹೊಡೆಯಿತು. ಢಿಕ್ಕಿ ಹೊಡೆದ ರಭಸಕ್ಕೆ ಇಬ್ಬರ ಮೇಲೆ ಜೀಪ್ ಚಕ್ರ ಹರಿದು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು. ಸುರತ್ಕಲ್ ಉತ್ತರ ಸಂಚಾರ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮಂಗಳೂರು: ಉದ್ಯಮಿಯಿಂದ 25 ಲ.ರೂ. ಲಂಚ ಸ್ವೀಕರಿಸಿದ ಪ್ರಕರಣದಲ್ಲಿ ಮಂಗಳೂರು ಲೋಕಾಯುಕ್ತ ಪೊಲೀಸರಿಂದ ಬಂಧಿಸಲ್ಪಟ್ಟಿರುವ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಆಯುಕ್ತ ಮನ್ಸೂರ್ ಆಲಿಗೆ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಟಿಡಿಆರ್ಗೆ ಸಂಬಂಧಿಸಿದಂತೆ ಮಾ.23ರಂದು ನಗರದ ಮಂಗಳಾ ಕ್ರೀಡಾಂಗಣದ ಬಳಿ ದಲ್ಲಾಳಿಯ ಮೂಲಕ ಹಣ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ದಲ್ಲಾಳಿ ಮುಹಮ್ಮದ್ ಸಲೀಂಗೂ ನ್ಯಾಯಾಂಗ 14 ದಿನಗಳ ಬಂಧನ ವಿಧಿಸಲಾಗಿದೆ.
ಉಡುಪಿ: ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಲೊಟ್ಟು ಬಳಿ ಚಿರತೆಯೊಂದು ಮನೆಯ ಜಗಲಿಯಲ್ಲಿ ಮಲಗಿದ್ದ ವ್ಯಕ್ತಿಯೋರ್ವರ ಮೇಲೆ ದಾಳಿ ನಡೆಸಿ ಗಂಭೀರ ಗಾಯಗೊಳಿಸಿದ ಘಟನೆ ರವಿವಾರ ರಾತ್ರಿ ನಡೆದಿದೆ. ಬಿಹಾರ ಮೂಲದ ನದಿಯಲ್ಲಿ ಮರಳುಗಾರಿಕೆ ನಡೆಸುವ ಕಾರ್ಮಿಕ ಸುರೇಂದ್ರ (55 ವ) ಗಾಯಗೊಂಡ ವ್ಯಕ್ತಿ.ಆತ ಶಿರ್ವ ಗ್ರಾಮ ಪಂಚಾಯತ್ ಅಧ್ಯಕ್ಷೆ ಸವಿತಾ ರಾಜೇಶ್ ಅವರ ಮನೆ ಬಳಿಯ ಕಲ್ಲೊಟ್ಟು ಸಂತೋಷ್ ಪೂಜಾರಿ ಅವರ ಮನೆಯ ವರಾಂಡದಲ್ಲಿ ಮಲಗಿದ್ದು, ರಾತ್ರಿ ಚಿರತೆ ದಾಳಿ ನಡೆಸಿ ಗಂಭೀರ ಗಾಯಗೊಳಿಸಿದೆ. ಕೆನ್ನೆ, ಗಲ್ಲ ಮತ್ತು ಮುಖಕ್ಕೆ ಗಾಯಗೊಳಿಸಿದ್ದು ರಕ್ತದ ಕೋಡಿ ಹರಿದಿದೆ. ಚಿಕಿತ್ಸೆಗಾಗಿ ಅವರನ್ನು ಉಡುಪಿಯ ಅಜ್ಜರಕಾಡು ಜಿಲ್ಲಾ ಸರಕಾರಿ ಆಸ್ಪತ್ರೆಗೆ ದಾಖಲಿಸಿಲಾಗಿದೆ. ದಾಳಿ ನಡೆಸಿದ ಚಿರತೆಯೊಂದಿಗೆ ಮರಿ ಚಿರತೆಯೂ ಇತ್ತು ಎನ್ನಲಾಗಿದೆ. ಕಲ್ಲೊಟ್ಟು, ಸೊರ್ಪು, ಆಗೋಳಿಬೈಲು, ಪದವು ಪರಿಸರದಲ್ಲಿ ಕಳೆದ ಕೆಲವು ಸಮಯಗಳಿಂದ ಚಿರತೆ ಓಡಾಡುತ್ತಿದ್ದು ಗ್ರಾಮಸ್ಥರು ಭಯಭೀತರಾಗಿದ್ದಾರೆ. ಕಳೆದೆರಡು ದಿನಗಳಲ್ಲಿ ಕಲ್ಲೊಟ್ಟು ಸಂಗೀತಾ ನಾಯ್ಕ ಅವರ ಮನೆಯ ಎರಡು ಸಾಕು ನಾಯಿಗಳನ್ನು ಚಿರತೆ ಬೇಟೆಯಾಡಿ…










