ಮಂಗಳೂರು: ಪಾರ್ಟ್ ಟೈಮ್ ಜಾಬ್ ಆಮಿಷವೊಡ್ಡಿ 1.15 ಲಕ್ಷ ರೂ. ಲಪಟಾಯಿಸಿರುವ ಪ್ರಕರಣದಲ್ಲಿ ಮಂಗಳೂರು ಪೊಲೀಸರು ರಾಜಸ್ಥಾನ ಮೂಲದ ವ್ಯಕ್ತಿಯನ್ನು ಬಂಧಿಸಿದ್ದಾರೆ. ರಾಜಸ್ಥಾನ ಜೋಧಪುರ ಜಿಲ್ಲೆಯ ಮುಸಲ್ಮಾನ್ ಕಾ ಬಾವುರಿ, ರಾಮ್ ದೇವ್ ಮಂದಿರ ಹತ್ತಿರದ ನಿವಾಸಿ ಸದ್ದಾಂ ಗೌರಿ ಅಲಿಯಾಸ್ ಬಾವುರಿ (30) ಬಂಧಿತ ಆರೋಪಿ. ಈತ ಪಾರ್ಟ್ ಟೈಂ ಜಾಬ್ ಹೆಸರಿನಲ್ಲಿ ವಾಟ್ಸ್ಆಪ್ ಗೆ ಲಿಂಕ್ ಕಳುಹಿಸುತ್ತಾನೆ. ಈ ಲಿಂಕ್ ಮೂಲಕ ಹಣ ತೊಡಗಿಸಿ, ಟಾಸ್ಕ್ ಕಂಪ್ಲಿಟ್ ಮಾಡುವ ಮುಖಾಂತರ ಹಣ ಮಾಡಬಹುದು ಎಂಬುದಾಗಿ ಪಿರ್ಯಾದಿದಾರರನ್ನು ನಂಬಿಸಿ ಒಟ್ಟು 1,15,000 ಹಣ ಪಡೆದು ವಂಚನೆ ಮಾಡಿದ್ದಾನೆ. ಈ ಬಗ್ಗೆ ದೂರು ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಸೆನ್ ಠಾಣಾ ಪೊಲೀಸರು, ಆರೋಪಿಯನ್ನು ಜೋಧಪುರ್ ಜಿಲ್ಲೆಯ ಬಾವುರಿಯಿಂದ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿ ವಶಕ್ಕೆ ಪಡೆದಿದ್ದಾರೆ. ಆರೋಪಿತನಿಂದ ಕೃತ್ಯಕ್ಕೆ ಬಳಸಿದ ಎರಡು ಮೊಬೈಲ್ ಫೋನ್ ಗಳು, ಎಂಟು ಡೆಬಿಟ್ ಕಾರ್ಡ್, ನಾಲ್ಕು ಬ್ಯಾಂಕ್ ಚೆಕ್ ಬುಕ್, ಆಧಾರ್ ಕಾರ್ಡ್, ಪಾನ್ ಕಾರ್ಡ್…
Author: main-admin
ಉಪ್ಪಿನಂಗಡಿ ಸಮೀಪ ನದಿ ನೀರಿನಲ್ಲಿ ಮುಳುಗಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಉಪ್ಪಿನಂಗಡಿ ಬಳಿಯ ಹಳೆಗೇಟು ಎಂಬಲ್ಲಿ ನಡೆದಿದೆ. ಸಾವನ್ನಪ್ಪಿದ ವ್ಯಕ್ತಿ ಸವಣೂರು ಸಮೀಪದ ಅಂಕತ್ತಡ್ಕದ ಮಂಜುನಾಥ್ (35) ಎಂದು ತಿಳಿಯಲಾಗಿದೆ. ಬಿಳಿಯೂರು ಅಣೆಕಟ್ಟಿನಿಂದಾಗಿ ಹಳೆಗೇಟು ಬಳಿ ನೇತ್ರಾವತಿ ನದಿಯಲ್ಲಿ ಹಿನ್ನೀರು ತುಂಬಿಕೊಂಡಿದ್ದು, ನದಿಯ ಆಳ ತಿಳಿಯದೇ ನದಿಗೆ ಇಳಿದಿದ್ದ ಅವರು ಮುಳುಗಿದರು. ಆಗ ಅವರೊಂದಿಗಿದ್ದವರು ಬೊಬ್ಬೆ ಹಾಕಿದ್ದು, ಆಸುಪಾಸಿನ ಮಂದಿ ಧಾವಿಸಿ ಬಂದು ಹಗ್ಗದ ಸಹಾಯದಿಂದ ನದಿ ನೀರಿಗಿಳಿದು ಅವರನ್ನು ಮೇಲೆತ್ತಿ ತಂದು ಪ್ರಥಮ ಚಿಕಿತ್ಸೆಯ ಬಳಿಕ ಆ್ಯಂಬುಲೆನ್ಸ್ ಮೂಲಕ ಪುತ್ತೂರು ಆಸ್ಪತ್ರೆಗೆ ಸಾಗಿಸಿದರು. ಆದರೆ ಅಷ್ಟರಲ್ಲಿ ಅವರು ಮೃತಪಟ್ಟಿದ್ದರು. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಪುತ್ತೂರು: ಪುತ್ತೂರಿನಲ್ಲಿ ಅಕ್ರಮ ಗೋ ಸಾಗಾಟದ ಜಾಲವನ್ನು ಬಜರಂಗದಳ ಬಯಲಿಗೆಳೆದಿದ್ದು, ಸಂಘಟನೆಯ ಕಾರ್ಯಕರ್ತರನ್ನು ನೋಡಿ ಆರೋಪಿಗಳು ಕಾರು , ದನಗಳನ್ನು ಬಿಟ್ಟು ಪರಾರಿಯಾಗಿದ್ದಾರೆ.ಪುತ್ತೂರಿನ ಕಬಕ ಅಡ್ಯಲಾಯ ದೈವಸ್ಥಾನದ ಸಮೀಪವೇ ಈ ಕೃತ್ಯ ನಡೆದಿದೆ. ಕಾರಿನಲ್ಲಿ ನಾಲ್ಕು ಗೋವುಗಳು ಪತ್ತೆಯಾಗಿದ್ದು, ಕಾರು ಚಾಲಕ ಹಾಗೂ ಕಾರಿನಲ್ಲಿದ್ದವರು ಕಾರು ಹಾಗೂ ಗೋವುಗಳನ್ನು ಬಿಟ್ಟು ಪರಾರಿಯಾಗಿದ್ದಾರೆ.ಬಜರಂಗದಳ ಕಬಕದ ಕಾರ್ಯಕರ್ತರು ಕಾರನ್ನು ತಡೆಯಲು ಪ್ರಯತ್ನಿಸಿದಾಗ ಕಾರಿನ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದು ಜಖಂಗೊಂಡಿದೆ.ಕಾರಿನಲ್ಲಿ ಎರಡು ದನ ಹಾಗೂ ಎರಡು ಕರು ಪತ್ತೆಯಾಗಿದೆ. ಅದರ ಕಾಲುಗಳನ್ನು ಹಿಂಸಾತ್ಮಕ ರಿತಿಯಲ್ಲಿ ಕಟ್ಟಲಾಗಿತ್ತು. ಹಿಂಸಾತ್ಮಕವಾಗಿ ಗೋವುಗಳನ್ನು ಸಾಗಿಸುತ್ತಿರುವ ಖಚಿತ ಮಾಹಿತಿ ಪಡೆದ ಬಜರಂಗದಳ ಕಾರ್ಯಕರ್ತರು ಕಾರನ್ನು ನಿಲ್ಲಿಸಲು ಸೂಚಿಸಿದ್ದಾರೆ .ಈ ವೇಳೆ ಕಾರು ಸಮೇತ ಚಾಲಕ ಪರಾರಿಯಾಗಲು ಯತ್ನಿಸಿದಾಗ ಕಾರು ಚರಂಡಿಗೆ ಬಿದ್ದಿದೆ. ಸ್ಥಳಕ್ಕೆ ಆಗಮಿಸಿದ ಪುತ್ತೂರು ನಗರ ಠಾಣಾ ಪೊಲೀಸ್ ಅಧಿಕಾರಿಗಳು ನಾಲ್ಕು ಗೋವುಗಳನ್ನು ಮತ್ತು ಜಖಂಗೊಂಡ ವಾಹನವನ್ನು ಪುತ್ತೂರು ನಗರ ಠಾಣೆಗೆ ಸಾಗಿಸಿದ್ದಾರೆ. ಗೋವುಗಳಿಗೆ…
ಉಳ್ಳಾಲ: ನಾಟೆಕಲ್ ಸಮೀಪ ಇಂದು ಮದ್ಯಾಹ್ನ ವೇಳೆ ಸಂಭವಿಸಿದ ಬೈಕ್ ಅಪಘಾತದಲ್ಲಿ ಸಹಸವಾರೆ ವಿವಾಹಿತ ಮಹಿಳೆ ದಾರುಣವಾಗಿ ಸಾವನ್ನಪ್ಪಿದ್ದು, ಸವಾರ ಸಂಬಂಧಿ ಗಂಭೀರ ಸ್ಥಿತಿಯಲ್ಲಿ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೋಂದೇಲ್ ದೀಕ್ಷಿತ್ ಎಂಬವರ ಪತ್ನಿ ನಿಧಿ (29) ಸಾವನ್ನಪ್ಪಿದವರು. ಸಹಸವಾರ ಯತೀಶ್ ದೇವಾಡಿಗ ಗಂಭೀರ ಸ್ಥಿತಿಯಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಇಬ್ಬರು ಮುಡಿಪುವಿನಲ್ಲಿ ಇಂದು ಜರಗಿದ್ದ ಸಂಬಂಧಿಕರ ಗೃಹಪ್ರವೇಶದಲ್ಲಿ ಭಾಗವಹಿಸಿ ವಾಪಸ್ಸಾಗುವ ಸಂದರ್ಭ ಬೈಕ್, ಸವಾರನ ನಿಯಂತ್ರಣ ತಪ್ಪಿ ನಾಟೆಕಲ್ ಗ್ರೀನ್ ಗ್ರೌಂಡ್ ಸಮೀಪ ಡಿವೈಡರ್ ಗೆ ಬಡಿದು ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ನಿಧಿ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಯತೀಶ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸುಳ್ಯ : ವಾರದ ಹಿಂದೆ ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗಳ ಗಡಿಭಾಗದ ಕೂಜಿಮಲೆಯ ಎಸ್ಟೇಟ್ ಬಳಿಯ ಅಂಗಡಿಯೊಂದಕ್ಕೆ ಬಂದಿದ್ದ ಶಂಕಿತ ನಕ್ಸಲರು ದಿನಸಿ ಸಾಮಾಗ್ರಿ ಪಡೆದು ತೆರಳಿದ್ದರು ಎಂಬ ಸುದ್ದಿ ಭಾರೀ ಸದ್ದು ಮಾಡಿತ್ತು. ಈ ಭಾಗದಲ್ಲಿ ನಕ್ಸಲ್ ನಿಗ್ರಹದಳ ನಿರಂತರ ಶೋಧ ಕಾರ್ಯ ನಡೆಸಿತ್ತು. ಆದರೆ ಎಎನ್ಎಫ್ ತಂಡಕ್ಕೆ ನಕ್ಸಲರು ಕಾಣಿಸಿರಲಿಲ್ಲ. ಇದೀಗ ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಐನೆಕಿದು ಗ್ರಾಮದ ಅರಣ್ಯದಂಚಿನ ಮನೆಯೊಂದಕ್ಕೆ ಶಂಕಿತ ನಕ್ಸಲರು ಭೇಟಿ ನೀಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಶನಿವಾರ ಸಂಜೆ 6 ಗಂಟೆ ಸುಮಾರಿಗೆ ಮೂವರು ಅಪರಿಚಿತರಿದ್ದ ತಂಡ ಐನೆಕಿದು ಗ್ರಾಮದ ಅಶೋಕ್ ಎಂಬುವರ ಮನೆಗೆ ಭೇಟಿ ನೀಡಿದ್ದಾರೆ. ಮನೆಯವರೊಂದಿಗೆ ಸುಮಾರು ಒಂದು ಗಂಟೆಗ ಅಧಿಕ ಕಾಲ ತಂಡ ಮಾತುಕತೆ ನಡೆಸಿದೆ. ಬಳಿಕ ಎರಡು ಕೆಜಿಯಷ್ಟು ಅಕ್ಕಿ ಪಡೆದು, ಮೊಬೈಲ್ ಚಾರ್ಜ್ ಮಾಡಿ ಅಲ್ಲಿಂದ ತೆರಳಿದ್ದಾರೆ. ಮೂವರ ಬಳಿಯೂ ಶಸ್ತ್ರಾಸ್ತ್ರಗಳಿತ್ತು ಎಂದು ಹೇಳಲಾಗಿದೆ. ಕಳೆದ ಬಾರಿ ನಕ್ಸಲರು ಕಾಣಿಸಿಕೊಂಡಿದ್ದಾರೆ ಎನ್ನಲಾದ ಕೂಜಿಮಲೆ ಮತ್ತು…
ಪುತ್ತೂರು : ಫೆಬ್ರವರಿ ತಿಂಗಳಲ್ಲಿ ಪುತ್ತೂರು ನಗರದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ರೇಷ್ಮಾ ಎಂಬ ಮಹಿಳೆಯೊಬ್ಬರ ಬ್ಯಾಗ್ ನಲ್ಲಿದ್ದ ಚಿನ್ನಾಭರಣ ಕದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿ ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ ಈಶ್ವರಿ (45) ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಯಿಂದ ಆಕೆ ಕಳವು ನಡೆಸಿದ ಸುಮಾರು ರೂ. 6 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಸ್ವಾಧಿನಪಡಿಸಿಕೊಳ್ಳಲಾಗಿದೆ. ಈ ಪ್ರಕರಣವನ್ನು ಬೇದಿಸುವಲ್ಲಿ ದ ಕ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಸಿ ಬಿ ರಿಷ್ಯತ್ ಮತ್ತು ದ ಕ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಧರ್ಮಪ್ಪ ಎಮ್ ಎನ್ ರವರ ನಿರ್ದೇಶನದಲ್ಲಿ ಪುತ್ತೂರು ಉಪವಿಭಾಗದ ಉಪಾಧೀಕ್ಷಕರಾದ ಅರುಣ್ ನಾಗೇಗೌಡ ರವರ ಮಾರ್ಗದರ್ಶನದಲ್ಲಿ, ಪುತ್ತೂರು ನಗರ ಠಾಣಾ ಪೊಲೀಸ್ ನಿರೀಕ್ಷಕರಾದ ಸತೀಶ್ ಜಿ ಜೆ, ರವರ ಸಾರಥ್ಯದಲ್ಲಿ ಪುತ್ತೂರು ನಗರ ಠಾಣಾ ಪೊಲೀಸ್ ಉಪ ನಿರೀಕ್ಷಕರುಗಳಾದ ನಂದಕುಮಾರ್ ಎಮ್ ಎಮ್ ಹಾಗೂ ಸುಬ್ರಹ್ಮಣ್ಯ ಹೆಚ್ ರವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಹೆಚ್ ಸಿ ಸ್ಕರಿಯ ಎಮ್…
ಮಂಗಳೂರು: ಉದ್ಯಮಿಯೊಬ್ಬರಿಂದ ಬರೋಬ್ಬರಿ 25 ಲಕ್ಷ ರೂ. ಲಂಚ ಸ್ವೀಕರಿಸುತ್ತಿರುವಾಗಲೇ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ಆಯುಕ್ತ ಮನ್ಸೂರ್ ಅಲಿ ಹಾಗೂ ಓರ್ವ ದಲ್ಲಾಳಿಯನ್ನು ಲೋಕಾಯುಕ್ತ ಪೊಲೀಸರು ಬಲೆಗೆ ಕೆಡವಿದ್ದಾರೆ. ಸಾಗರ್ ರಿಯಾಲಿಟಿ ಪ್ರಮೋಟರ್ಸ್ನ ಮಾಲಕ ಗಿರಿಧರ್ ಶೆಟ್ಟಿ ಎಂಬವರು ಕುಡುಪು ಗ್ರಾಮದ ಸರ್ವೇ ನಂ 57/ಪಿ ರಲ್ಲಿನ ಒಟ್ಟು 10.8 ಎಕರೆ ಜಮೀನು ಖರೀದಿಸಿದ್ದರು. ಮನಪಾ ವ್ಯಾಪ್ತಿಯ ಪಚ್ಚನಾಡಿ ಮತ್ತು ಕುಡುಪು ಗ್ರಾಮಗಳ ಸುತ್ತಮುತ್ತ ಕಾರ್ಯನಿರ್ವಹಿಸುತ್ತಿರುವ ಘನತ್ಯಾಜ್ಯ ನಿರ್ವಹಣೆಯ ಘಟಕವನ್ನು ಭವಿಷ್ಯದಲ್ಲಿ ವಿಸ್ತರಿಸಲು ಯೋಜನೆ ಹಾಕಿದ್ದರು. ಮನಪಾ ಆಯುಕ್ತರು ಈ ಜಮೀನಿಗೆ ಟಿಡಿಆರ್ ನೀಡಲು ಮುಡಾ ಆಯುಕ್ತರಿಗೆ ಫೆಬ್ರವರಿ ತಿಂಗಳಲ್ಲಿ ಕಳುಹಿಸಿದ್ದರು. ಆದರೆ ಮುಡಾ ಆಯುಕ್ತ ಮನ್ಸೂರ್ ಆಲಿ ಫೈಲ್ ಅನ್ನು ಪೆಂಡಿಂಗ್ ಇಟ್ಟಿರುತ್ತಾರೆ. ಈ ಬಗ್ಗೆ ಗಿರಿಧರ್ ಶೆಟ್ಟಿಯವರು ಕೇಳಲು ಹೋದಾಗ ಮುಡಾ ಆಯುಕ್ತ ಮನ್ಸೂರ್ ಆಲಿಯವರು 25 ಲಕ್ಷ ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ. ಅದರಂತೆ ನಗರದ ಮಂಗಳಾ ಕ್ರೀಡಾಂಗಣದ ಬಳಿ ಉದ್ಯಮಿಯಿಂದ ದಲ್ಲಾಳಿ ಸಲೀಂ ಎಂಬಾತನ…
ಮಂಗಳೂರು: ಕಾರೊಂದು ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ, ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಂತೂರಿನಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಮೃತರನ್ನು ಬಿಜೆಪಿ ಹಿರಿಯ ನಾಯಕಿ ಲಲಿತಾ ಸುಂದರ್ ಮೊಮ್ಮಗ ಶಮಿತ್ ಶೆಟ್ಟಿ(29) ಯಾನೆ ಬಂಟಿ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಶಮಿತ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶಮಿತ್ ಶೆಟ್ಟಿಯವರ ಸ್ನೇಹಿತನ ಮನೆಯಲ್ಲಿ ದೈವದ ಕೋಲದಲ್ಲಿ ಭಾಗವಹಿಸಿದ ಬಳಿಕ ತೊಕ್ಕೊಟ್ಟಿನಲ್ಲಿದ್ದ ತಮ್ಮ ಮನೆಗೆ ಹಿಂದಿರುಗುತ್ತಿದ್ದ ವೇಳೆ ಘಟನೆ ಸಂಭವಿಸಿದೆಕಾರು ಡಿಕ್ಕಿಯಾದ ರಭಸಕ್ಕೆ ಡಿವೈಡರ್ ಮೇಲೆ ಹಾಕಿದ್ದ ಕಬ್ಬಿಣದ ತಡೆಬೇಲಿ ಮುರಿದು ಹೋಗಿದೆ. ಕಾರಿನ ಮುಂಭಾಗ ಯಾವುದೆಂದು ತಿಳಿಯಲಾಗದಷ್ಟು ನಜ್ಜುಗುಜ್ಜಾಗಿದ್ದು ತಡೆಬೇಲಿಯ ಮೇಲೆ ಸಿಕ್ಕಿಕೊಂಡಿತ್ತು. ಬೆಳಗ್ಗೆ ಜೆಸಿಬಿ ಮೂಲಕ ಕಾರನ್ನು ತೆರವುಗೊಳಿಸಲಾಗಿತ್ತು. ಕದ್ರಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಜೆಪಿಯ ಹಿರಿಯ ನಾಯಕಿ ಲಲಿತಾ ಸುಂದರ್ ಅವರ ಪುತ್ರ ಸಂತೋಷ್ ಕೆಲವು ವರ್ಷಗಳ ಹಿಂದೆ ಮೃತಪಟ್ಟಿದ್ದರು. ಹೀಗಾಗಿ ಮೊಮ್ಮಗ ಶಮಿತ್ ಬಾಲ್ಯದಿಂದಲೇ ತಾಯಿ, ಅಜ್ಜಿಯ ಆರೈಕೆಯಲ್ಲಿ ಬೆಳೆದಿದ್ದರು. ಮೃತರು ತಾಯಿ,…
ಕಾಸರಗೋಡು : ಬೈಕ್ ಗ್ಯಾರೇಜ್ ನಲ್ಲಿ ಕೆಲಸ ಮಾಡುತ್ತಿದ್ದ ಯುವಕನೋರ್ವ ಕರೆಂಟ್ ಶಾಕ್ ಗೆ ಬಲಿಯಾದ ಘಟನೆ ಕಾಸರಗೋಡಿನ ಮಂಜೇಶ್ವರದಲ್ಲಿ ನಡೆದಿದೆ.ಮಂಜೇಶ್ವರ ಹೊಸಂಗಡಿ ಸಮೀಪದ ಅಂಗಡಿಪದವು ಎಂಬಲ್ಲಿ ಈ ದುರ್ಘಟನೆ ಸಂಭವಿಸಿದ್ದು ಸ್ಥಳೀಯ ಯುವಕ ಪ್ರಜ್ವಲ್ (19) ಮೃತಪಟ್ಟ ದುರ್ದೈವಿ. ಬೈಕ್ ಗ್ಯಾರೇಜ್ನಲ್ಲಿ ದುಡಿಯುತ್ತಿದ್ದ ಪ್ರಜ್ವಲ್ ಗೆ ಕೆಲಸದ ವೇಳೆ ಏಕಾಏಕಿ ಶಾಕ್ ತಗಲಿದ್ದು , ಬೊಬ್ಬೆ ಕೇಳಿ ಧಾವಿಸಿ ಬಂದ ಸ್ಥಳೀಯರು ವಿದ್ಯುತ್ ತಪ್ಪಿಸಿ ಗಂಭಿರ ಗಾಯಗೊಂಡ ಯುವಕನನ್ನು ಉಪ್ಪಳದ ಆಸ್ಪತ್ರೆಗೆ ಕೊಂಡೊಯ್ದರೂ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಮಂಜೆಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಗರ ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯಲ್ಲಿ ಕ್ರಿಮಿನಲ್ ಚಟುವಟಿಕೆಗಳಲ್ಲಿ ನಿರತರಾಗಿರುವ 12 ಮಂದಿ ಆರೋಪಿಗಳಿಗೆ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಗಡಿಪಾರು ಆದೇಶ ಹೊರಡಿಸಿದ್ದಾರೆ. ಅಡ್ಯಾರ್ಪದವಿನ ಮುಹಮ್ಮದ್ ಅಶ್ರಫ್ (42) ಮತ್ತು ರಿಯಾಝ್ ಅಹ್ಮದ್ (35), ಸುರತ್ಕಲ್ ಕಾಟಿಪಳ್ಳ ಮದ್ಯದ ವಿಜ್ವಲ್ ಪೂಜಾರಿ (29),ಸುರತ್ಕಲ್ ಕಾನಕಟ್ಲದ ಗಿರಿಧರ್ (24) , ಕಾಟಿಪಳ್ಳ ಚೊಕ್ಕಬೆಟ್ಟುವಿನ ಹರ್ಷದ್ ಯಾನೆ ಹಫೀಝ್ (28), ಉರ್ವಸ್ಟೋರ್ನ ವೃಕ್ಷಿತ್ ಯಾನೆ ರಕ್ಷಿತ್ (23) ಮತ್ತು ದುರ್ಗೇಶ್ (25), ಕದ್ರಿ ಶಿವಭಾಗ್ನ ಸಂದೇಶ್ ಕೋಟ್ಯಾನ್ (31), ಕರಂಗಲ್ಪಾಡಿಯ ಶಿವಕುಮಾರ್(19), ಮಂಕಿಸ್ಟ್ಯಾಂಡ್ನ ಧನರಾಜ್ (32) ಮತ್ತು ವಿಗ್ನೇಶ್ ಶೆಟ್ಟಿ (29), ಪಂಜಿಮೊಗರು ಉರುಂದಾಡಿಗುಡ್ಡೆಯ ಚರಣ್ರಾಜ್ (27), ಗಡಿಪಾರು ಆದೇಶಕ್ಕೆ ಒಳಗಾದ ಆರೋಪಿಗಳಾಗಿದ್ದಾರೆ. ಇವರ ವಿರುದ್ಧ ಬೇರೆ ಬೇರೆ ಠಾಣೆಗಳಲ್ಲಿ ಹಲವು ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದು, ಶಾಂತಿಯುತ ಚುನಾವಣೆ ನಡೆಸುವ ಸಲುವಾಗಿ ಈ ಕ್ರಮ ಜರಗಿಸಲಾಗಿದೆ. ಇದರೊಂದಿಗೆ ಈವರೆಗೆ 36 ಮಂದಿಯ ವಿರುದ್ಧ ಗಡಿಪಾರು ಆದೇಶ ಮಾಡಲಾಗಿದೆ.…










