Author: main-admin

ಬೆಳ್ತಂಗಡಿ : ಬೆಳ್ತಂಗಡಿಯಿಂದ ಬಾಡಿಗೆ ಮಾಡಿಕೊಂಡು ಹೋಗಿದ್ದ ಮೂವರು ಇದ್ದ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ತುಮಕೂರು ತಾಲೂಕಿನ ಕುಚ್ಚಂಗಿ ಕೆರೆಯ ಬಳಿ ಬೆಳ್ತಂಗಡಿ ತಾಲೂಕಿನ ಮದಡ್ಕ ನಿವಾಸಿ ರಫೀಕ್‌ ಎಂಬುವವರಿಗೆ ಸೇರಿದ ಕೆಎ 43 ರಿಜಿಸ್ಟ್ರೇಷನ್‌ ನಂಬರಿನ ಎಸ್‌ಪ್ರೆಸ್‌ ಕಾರಿನಲ್ಲಿ ಸುಟ್ಟು ಹೋದ ಸ್ಥಿತಿಯಲ್ಲಿ ಇಂದು (ಮಾ.22) ಮೂವರ ಶವ ಪತ್ತೆಯಾಗಿದೆ. ಕಾರಿನಲ್ಲಿದ್ದವರನ್ನು ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್(45), ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್ (56), ಶಿರ್ಲಾಲ್ ಗ್ರಾಮದ ನಿವಾಸಿ ಇಮ್ಮಿಯಾಜ್ (34) ಎಂದು ಗುರುತಿಸಲಾಗಿದೆ.ಮೂವರು ಯಾವ ಕಾರಣಕ್ಕೆ ಸಂಬಂಧಪಟ್ಟಂತೆ ತುಮಕೂರು ಕಡೆಗೆ ಹೋಗಿದ್ದರು ಎಂದು ಇನ್ನೂ ತಿಳಿದು ಬಂದಿಲ್ಲ. ಐದು ಜನರು ಕಾರಿನಲ್ಲಿದ್ದು, ಇಬ್ಬರು ನಾಪತ್ತೆ ಎನ್ನಲಾಗಿದೆ. ಇದೀಗ ಪೊಲೀಸರು ಅವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಈ ಬಗ್ಗೆ ಕೋರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಸ್ಥಳಕ್ಕೆ ಎಸ್ಪಿ ಅಶೋಕ್ ಕೆವಿ…

Read More

ಮಂಗಳೂರು: ಬೆಂಗಳೂರಿನಿಂದ ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ನಿಷೇದಿತ ಮಾದಕ ವಸ್ತು ಎಂಡಿಎಂಎಯನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿರುವ ಸಿಸಿಬಿ ಪೊಲೀಸರು, ಆರೋಪಿಯಿಂದ 46 ಗ್ರಾಂ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ. ಬಂಟ್ವಾಳ ತಾಲೂಕಿನ ಲೊರೊಟ್ಟೊ ಬರೆಕಾಡು ನಿವಾಸಿ ಅಬ್ದುಲ್ ಸಮದ್ ಯಾನೆ ಚಮ್ಮು (36)ಬಂಧಿತ ಆರೋಪಿ. ಈತನಿಂದ 2,30,000 ರೂ. ಮೌಲ್ಯದ 46 ಗ್ರಾಂ ನಿಷೇಧಿತ ಮಾದಕ ವಸ್ತು ಎಂಡಿಎಂಎ, ಮೊಬೈಲ್ ಫೋನ್, ಡಿಜಿಟಲ್ ತೂಕ ಮಾಪಕವನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳ ಒಟ್ಟು ಮೌಲ್ಯ 2,40,500 ಆಗಬಹುದು ಎಂದು ಅಂದಾಜಿಸಲಾಗಿದೆ. ಆರೋಪಿಯ ವಿರುದ್ಧ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಆರೋಪಿಯ ವಿರುದ್ಧ ಈ ಹಿಂದೆ ಉಳ್ಳಾಲ ಠಾಣೆಯಲ್ಲಿ ಪೋಕ್ಸೊ ಹಾಗೂ ಮಾದಕ ವಸ್ತು ಮಾರಾಟದ ಪ್ರಕರಣ ದಾಖಲಾಗಿರುತ್ತದೆ. ಮಂಗಳೂರು ಸಿಸಿಬಿ ಘಟಕದ ಎಸಿಪಿ ಗೀತಾ ಕುಲಕರ್ಣಿ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕ ಶ್ಯಾಮ್‌ಸುಂದರ್, ಎಸ್ಸೈಗಳಾದ ಶರಣಪ್ಪ ಭಂಡಾರಿ ಮತ್ತಿತರರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Read More

ಮಗುವನ್ನು ಅಕ್ರಮವಾಗಿ ದತ್ತು ಪಡೆದ ಆರೋಪದ ಅಡಿಯಲ್ಲಿ ರೀಲ್ ಸ್ಟಾರ್, ಬಿಗ್ ಬಾಸ್ ಖ್ಯಾತಿಯ ಸೋನು ಗೌಡ ಅವರನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿರೋದಾಗಿ ತಿಳಿದು ಬಂದಿದೆ. ಸಾಮಾಜಿಕ ಜಾಲತಾಣಗಳ ಮೂಲಕ ತಾನು 6 ರಿಂದ 8 ವರ್ಷದ ಮಗುವನ್ನು ದತ್ತು ಪಡೆದಿರೋದಾಗಿ ರೀಲ್ ಸ್ಟಾರ್ ಸೋನು ಗೌಡ ಹೇಳಿಕೊಂಡಿದ್ದರು. ಅವರ ಹೇಳಿಕೆ ವೈರಲ್ ಕೂಡ ಆಗಿತ್ತು. ಈ ಹಿನ್ನಲೆಯಲ್ಲಿ ರಾಜ್ಯ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಗೀತಾ ಎಂಬುವರು ಬ್ಯಾಡರಹಳ್ಳಿ ಠಾಣೆಗೆ ರೀಲ್ ಸ್ಟಾರ್ ಸೋನು ಗೌಡ ವಿರುದ್ಧ ದೂರು ನೀಡಿದ್ದರು. ಈ ದೂರನ್ನು ಆಧರಿಸಿ, ಸೋನು ಗೌಡ ವಿರುದ್ಧ ಜೆ.ಜೆ ಆಯಕ್ಟ್ ಅಡಿಯಲ್ಲಿ ಬ್ಯಾಡರಹಳ್ಳಿ ಠಾಣೆಯ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದರು. ಆ ಬಳಿಕ ಇಂದು ಸೋನು ಗೌಡ ಅವರನ್ನು ಬಂಧಿಸಿರೋದಾಗಿ ತಿಳಿದು ಬಂದಿದೆ.

Read More

ಸುರತ್ಕಲ್: ತಂದೆಯೊಂದಿಗೆ ಮೀನುಗಾರಿಕೆಗೆ ತೆರಳಿದ್ದ ವೇಳೆ ಬಾಲಕನೋರ್ವ ಆಕಸ್ಮಿಕವಾಗಿ ಸಮುದ್ರಕ್ಕೆ ಬಿದ್ದು ಗುರುವಾರ ಸಂಜೆ ಮೃತಪಟ್ಟಿದ್ದಾನೆ. ಮೃತ ಬಾಲಕನನ್ನು ತೋಟಬೆಂಗ್ರೆ ಮಿಥುನ್ ರವರ ಪುತ್ರ ಪ್ರಜೀತ್ (15) ಎಂದು ಗುರುತಿಸಲಾಗಿದೆ. ದೋಣಿಯಲ್ಲಿ ತೆರಳುತ್ತಿದ್ದಾಗ ಬಾಲಕ ನೀರಿಗೆ ಬಿದ್ದಿದ್ದಾನೆ. ಮೀನುಗಾರರು ರಕ್ಷಣೆಗಾಗಿ ತತ್ ಕ್ಷಣ ಕಾರ್ಯಾಚರಣೆ ನಡೆಸಿದರೂ ತೆರೆಗಳ ನಡುವೆ ಸಿಲುಕಿದ್ದು ಪತ್ತೆ ಮಾಡುವಾಗ ಒಂದು ತಾಸು ವಿಳಂಬವಾಗಿದೆ. ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟರಲ್ಲಿ ಮೃತಪಟ್ಟಿದ್ದಾನೆ. ಈ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಉಡುಪಿ: ಉಡುಪಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿ ಸಿಐಡಿ ಪೊಲೀಸರು ಉಡುಪಿ ನ್ಯಾಯಾಲಯಕ್ಕೆ ಅಂತಿಮ ಚಾರ್ಜ್‌ಶೀಟ್ ಸಲ್ಲಿಸಿದ್ದು ವಿಡಿಯೋ ಮಾಡಿದ್ದು ಸಾಬೀತಾಗಿದೆ. ಪ್ರಕರಣದ ತನಿಖಾಧಿಕಾರಿ ಸಿಐಡಿ ಡಿವೈಎಸ್ಪಿ ಅಂಜುಮಾಲಾ ನಾಯಕ್ ಚಾರ್ಜ್‌ಶೀಟ್‌ ಸಲ್ಲಿದ್ದಾರೆ. ಮೂವರು ಆರೋಪಿಗಳು ಶೌಚಾಲಯದಲ್ಲಿ ವಿಡಿಯೋ ಮಾಡಿರುವುದು ತಪ್ಪಾಗಿದೆ ಎಂದು ಕ್ಷಮಾಪನ ಪತ್ರ ಬರೆದಿದ್ದು, ವಿಧಿ ವಿಜ್ಞಾನ ಪ್ರಯೋಗಾಲಯ ನೀಡಿರುವ ವರದಿಯಲ್ಲಿ ಆರೋಪಿಗಳು ಬರೆದುಕೊಟ್ಟಿರುವ ಪತ್ರವು ಅವರ ಹಸ್ತಾಕ್ಷರ ದೊಂದಿಗೆ ಹೋಲಿಕೆಯಾಗುವುದಾಗಿ ತಿಳಿಸಿದೆ. ಈ ಮೂಲಕ ಆರೋಪಿಗಳ ಮೇಲಿನ ಆರೋಪ ಸಾಬೀತಾಗಿದೆ ಎಂದು ಚಾರ್ಜ್‌ಶೀಟ್‌ನಲ್ಲಿ ತಿಳಿಸಲಾಗಿದೆ.ಒಟ್ಟಾರೆಯಾಗಿ ಆರೋಪಿಗಳ ತಪ್ಪೊಪ್ಪಿಗೆಯ ಕ್ಷಮಾಪನ ಪತ್ರ ಹಾಗೂ ಸಂತ್ರಸ್ತ ವಿದ್ಯಾರ್ಥಿನಿಯ ಹೇಳಿಕೆಗಳ ಆಧಾರದಲ್ಲಿ ಆರೋಪಿಗಳ ವಿರುದ್ಧ ಕಲಂ 204, 509, 120(ಬಿ) ಸಹಿತ 34, 37 ಐಪಿಸಿ ಹಾಗೂ 66(ಇ) ಐಟಿ ಆ್ಯಕ್ಟ್‌ನಂತೆ ಪೊಲೀಸರು ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ಎರಡು ಸಂಪುಟಗಳಲ್ಲಿ 925 ಪುಟಗಳ ಈ ಚಾರ್ಜ್‌ಶೀಟ್‌ನಲ್ಲಿ 91 ಸಾಕ್ಷಿಗಳನ್ನು ಪರಿಗಣಿಸಲಾಗಿದೆ.ಸಂತ್ರಸ್ತೆಯ ಹೇಳಿಕೆ :‘ವಿಡಿಯೋ ಚಿತ್ರೀಕರಣ ವಿಚಾರದ…

Read More

ಪುತ್ತೂರು: ವ್ಯಕ್ತಿಗಳಿಬ್ಬರು ಗಾಂಜಾ ಸೇವಿಸಿ ಅನುಚಿತವಾಗಿ ವರ್ತನೆ ತೋರಿದ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಬೆಳಿಗ್ಗೆ ದಾಳಿ ನಡೆಸಿ ಪುತ್ತೂರು ನಗರ ಪೊಲೀಸರು ಮೂವರನ್ನು ದಸ್ತಗಿರಿ ಮಾಡಿದ ಘಟನೆ ಪುತ್ತೂರು ಕಸಬಾ ಗ್ರಾಮದ ಕಿಲ್ಲೆ ಮೈದಾನದಲ್ಲಿರುವ, ಟೌನ್‌ಹಾಲ್‌ ಬಳಿ ಸಾರ್ವಜನಿಕ ಪ್ರದೇಶದಲ್ಲಿ ನಡೆದಿದೆ. ಆರೋಪಿಗಳನ್ನು ಬಪ್ಪಳಿಗೆ ಮನೆ, ಪುತ್ತೂರು ಕಸಬಾ ಗ್ರಾಮದ ನಿವಾಸಿ ಬಿ . ಉಮ್ಮರ್‌ ಫಾರೂಕ್‌ (36) ಹಾಗೂ ಮುಕ್ಕಚೇರಿ, ಉಳ್ಳಾಲ, ಮಂಗಳೂರು ತಾಲೂಕು ನಿವಾಸಿ ಕೆ. ಮೊಹಿದ್ದಿನ್‌ (43) ಎಂದು ಗುರುತಿಸಲಾಗಿದೆ. ಪುತ್ತೂರು ಕಸಬಾ ಗ್ರಾಮದ ಕಿಲ್ಲೆ ಮೈದಾನದಲ್ಲಿರುವ, ಟೌನ್‌ಹಾಲ್‌ ಬಳಿ ಸಾರ್ವಜನಿಕ ಪ್ರದೇಶದಲ್ಲಿ, ಇಬ್ಬರು ವ್ಯಕ್ತಿ ಅನುಚಿತವಾಗಿ ವರ್ತಿಸುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಪುತ್ತೂರು ನಗರ ಪೊಲೀಸ್‌ ಠಾಣಾ ಪೊಲೀಸ್‌ ನಿರೀಕ್ಷಕರಾದ ಸತೀಶ್‌ ಜಿ.ಜೆ ರವರು ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿದರು. ಈ ವೇಳೆ ಪರಾರಿಯಾಗಲು ಯತ್ನಿಸಿದ ಇಬ್ಬರನ್ನೂ ತಡೆದು ವಿಚಾರಿಸಲಾಗಿ, ಬಪ್ಪಳಿಗೆ ಮನೆ, ಪುತ್ತೂರು ಕಸಬಾ ಗ್ರಾಮದ ನಿವಾಸಿ ಬಿ . ಉಮ್ಮರ್‌…

Read More

ಮಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಕ್ರಿಮಿನಲ್‌ ಕೇಸ್‌ ಹೊಂದಿದ್ದವರ ಗಡೀಪಾರು ಪ್ರಕ್ರಿಯೆ ಮುಂದುವರಿದಿದೆ. ಬುಧವಾರ ಮತ್ತೆ 10 ಮಂದಿಯನ್ನು ಗಡೀಪಾರು ಮಾಡಿ ಮಂಗಳೂರು ಪೊಲೀಸ್‌ ಕಮಿಷನರ್‌ ಆದೇಶಿಸಿದ್ದಾರೆ. ಅಶಾಂತಿ ಸೃಷ್ಟಿ, ಹಲ್ಲೆ, ದೊಂಬಿ, ಕ್ರಿಮಿನಲ್‌ ಸಂಚು ಹೂಡುವಿಕೆ, ಕೊಲೆ ಯತ್ನ ಇತ್ಯಾದಿ ಪ್ರಕರಣಗಳನ್ನು ಹೊಂದಿರುವವರನ್ನು ಗಡೀಪಾರು ಮಾಡಲಾಗಿದೆ.ಕಸಬಬೆಂಗ್ರೆಯ ಮೊಹಮ್ಮದ್‌ ಸುಹೈಲ್‌ (21), ಕಣ್ಣೂರು ಕೊಡಕ್ಕಲ್‌ನ ನಿಕ್ಷಿತ್‌ ಪೂಜಾರಿ (21), ಉಳ್ಳಾಲ ಸೋಮೇಶ್ವರದ ಸುನಿಲ್‌ (24), ಉಳ್ಳಾಲ ಬಸ್ತಿಪಡುವಿನ ಯತೀಶ್‌ (46), ಮೂಲ್ಕಿ ಕಾರ್ನಾಡು ಬಿಜಾಪುರ ಕಾಲನಿಯ ಧರ್ಮಲಿಂಗ (34), ಕಣ್ಣೂರಿನ ಮೊಹಮ್ಮದ್‌ ಹನೀಜ್‌ (32), ಮೂಲ್ಕಿ ಚಿತ್ರಾಪುರದ ತೇಜಪಾಲ್‌ ಆರ್‌. ಕುಕ್ಯಾನ್‌ (40), ವಾಮಂಜೂರು ಉಳಾçಬೆಟ್ಟು ಮೊಹಮ್ಮದ್‌ ಅನ್ಸಾರ್‌ (31), ಪಾಂಡೇಶ್ವರ ಶಿವನಗರದ ಅಭಿಶೇಕ್‌ (29) ಗಡೀಪಾರಿಗೊಳಗಾದವರು.ಇದುವರೆಗೆ 26 ಮಂದಿಯನ್ನು ಗಡಿಪಾರು ಮಾಡಲಾಗಿದೆ. ಶಾಂತಿಯುತ ಚುನಾವಣೆ ನಡೆಯುವುದಕ್ಕಾಗಿ ಇವರೆಲ್ಲರನ್ನೂ ವಿವಿಧ ಜಿಲ್ಲೆಗಳಿಗೆ ಗಡೀಪಾರು ಮಾಡಲಾಗಿದೆ. ಅಲ್ಲದೆ ಶಾಂತಿಕಾಪಾಡುವುದು, ಉತ್ತಮ ವರ್ತನೆಗಾಗಿ 381 ಮಂದಿಯಿಂದ ಮುಚ್ಚಳಿಕೆ ಬರೆಯಿಸಿಕೊಳ್ಳಲಾಗಿದೆ…

Read More

ಉಳ್ಳಾಲ: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಸಮೀಪದ ಸೋಮೇಶ್ವರ ಉಚ್ಚಿಲದ ನಾಗತೋಟದಲ್ಲಿನ ಖಾಸಗಿ ಜಾಗದ ಮರಳು ಅಡ್ಡೆಗೆ ಸಿಸಿಬಿ ಪೊಲೀಸರು, ಭೂ ಮತ್ತು ಗಣಿ ವಿಜ್ಞಾನ ಅಧಿಕಾರಿಗಳು ಜಂಟಿಯಾಗಿ ದಾಳಿ ನಡೆಸಿದ್ದು ಅಪಾರ ಪ್ರಮಾಣದಲ್ಲಿ ದಾಸ್ತಾನಿರಿಸಿದ್ದ ಮರಳು ಮತ್ತು ಹೊಳೆಯಲ್ಲಿ ಮರಳು ಸಾಗಾಟ ನಡೆಸುತ್ತಿದ್ದ ನಾಲ್ಕು ನಾಡದೋಣಿಗಳನ್ನ ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಸೋಮೇಶ್ವರ ಉಚ್ಚಿಲದ ಬಟ್ಟಪ್ಪಾಡಿ ಸಮುದ್ರ ತೀರದಿಂದ ನಿತ್ಯವೂ ಅಕ್ರಮವಾಗಿ ಮರಳು ತೆಗೆದು ನಾಡ ದೋಣಿಗಳ ಮೂಲಕ ಹೊಳೆಯಲ್ಲಿ ಸಾಗಾಟ ನಡೆಸಿ ನಾಗತೋಟ ನಿವಾಸಿ ಮಹಮ್ಮದ್‌ ಆಲಿ ಅವರ ಖಾಸಗಿ ಜಮೀನಿನಲ್ಲಿ ದಾಸ್ತಾನು ಇರಿಸಲಾಗುತ್ತಿತ್ತು.ಈ ಮರಳನ್ನು ಮಧ್ಯ ರಾತ್ರಿ ಕೇರಳಕ್ಕೆ ಸಾಗಾಟ ನಡೆಸಲಾಗುತ್ತಿತ್ತು. ಈ ಮರಳು ಮಾಫಿಯಾ ಬಗ್ಗೆ ಸ್ಥಳೀಯ ಸಾಮಾಜಿಕ ಕಾರ್ಯಕರ್ತರು ಉಳ್ಳಾಲ ಠಾಣೆಗೆ ದೂರು ನೀಡಿದ್ದರೂ ಅಕ್ರಮ ಮರಳುಗಾರಿಕೆಗೆ ಕಡಿವಾಣ ಬಿದ್ದಿರಲಿಲ್ಲ. ಈ ಸಂಬಂಧ ಜಿಲ್ಲಾಧಿಕಾರಿಗಳಿಗೆ ದೂರವಾಣಿ ಮೂಲಕ ದೂರು ನೀಡಿದ್ದು, ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಮರಳು ಅಡ್ಡೆಗೆ ದಾಳಿ ನಡೆಸಲಾಗಿದೆ ಎನ್ನಲಾಗಿದೆ. ಸಿಸಿಬಿ…

Read More

ಮಂಗಳೂರು: ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾದ ದಿನದಿಂದ ಮಾರ್ಚ್ 20 ರವರೆಗೆ 12,300 ರೂಪಾಯಿ ಮೌಲ್ಯದ 21.34 ಲೀಟರ್ ಮದ್ಯವನ್ನು ಜಪ್ತಿ ಮಾಡಲಾಗಿದೆ. 3,13,500 ರೂ.ಗಳ ಮೌಲ್ಯದ 1.65 ಕೆಜಿ ಡ್ರಗ್ಸ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ತಿಳಿಸಿದೆ. 2024ರ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಅಕ್ರಮಗಳನ್ನು ತಡೆಹಿಡಿಯಲು ಜಿಲ್ಲೆಯಲ್ಲಿ ಒಟ್ಟು 8 ಖರ್ಚು ವೆಚ್ಚ ಪರೀವೀಕ್ಷಕರರನ್ನು, 72 ಪ್ಲೈಯಿಂಗ್ ಸ್ವ್ಯಾಡ್ (ಎಫ್.ಎಸ್.ಟಿ), 69 ಎಸ್.ಎಸ್.ಟಿ ತಂಡಗಳು ಮತ್ತು 8 ಅಬಕಾರಿ ತಂಡಗಳನ್ನು ಜಿಲ್ಲೆಯಾದ್ಯಂತ ನಿಯೋಜಿಸಲಾಗಿದೆ.ನೀತಿ ಸಂಹಿತೆ ಜಾರಿಯಾದ ದಿನದಿಂದ ಮಾರ್ಚ್ 20 ವರೆಗೆ ದೂರವಾಣಿ ಮೂಲಕ (1950) 75 ಸಾರ್ವಜನಿಕರಿಂದ ಮಾಹಿತಿ ಕೋರಿಕೆಗಳನ್ನು ಸ್ವೀಕರಿಸಿ ವಿಲೇವಾರಿ ಮಾಡಲಾಗಿದೆ. ಸಿ-ವಿಸಿಲ್ ಆಪ್ ಮೂಲಕ ಇಲ್ಲಿಯವರೆಗೆ 11 ದೂರುಗಳು ಸ್ವೀಕೃತಗೊಂಡಿದ್ದು ಎಲ್ಲಾ ದೂರುಗಳನ್ನು ವಿಲೇವಾರಿ ಮಾಡಲಾಗಿರುತ್ತದೆ.ಎನ್.ಜಿ.ಆರ್.ಎಸ್ ಪೋರ್ಟಲ್ (ರಾಷ್ಟ್ರೀಯ ಕುಂದುಕೊರತೆಗಳ ಪರಿಹಾರ ವ್ಯವಸ್ಥೆ )ಮೂಲಕ ಜಿಲ್ಲೆಯಲ್ಲಿ ಒಟ್ಟು 27 ದೂರುಗಳು ಸ್ವೀಕೃತಗೊಂಡಿದ್ದು, 22 ದೂರುಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು/…

Read More

ಬಂಟ್ವಾಳ: ಇಲ್ಲಿನ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ಸಮೀಪ ನೇತ್ರಾವತಿ ನದಿಗೆ ಬಿದ್ದು ಯುವಕನೋರ್ವ ಮೃತಪಟ್ಟಿರುವ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಮಂಜೊಟ್ಟಿ ನಿವಾಸಿ ಲೋಹಿತಾಕ್ಷ (28) ಮೃತಪಟ್ಟ ಯುವಕ. ಲೋಹಿತಾಶ್ವ ಅವರು ಸ್ನೇಹಿತರಾದ ವಿನ್ಸೆಂಟ್, ಮ್ಯಾಕ್ಸಿಂ, ಪ್ರಮೋದ್, ದಯಾನಂದ ಅವರಿಂದಿಗೆ ಕಾರ್‌ನಲ್ಲಿ ಶಂಭೂರಿಗೆ ಹೋಗಿದ್ದರು. ಈ ವೇಳೆ ಸ್ನೇಹಿತರು ಸ್ನಾನಕ್ಕೆಂದು ನದಿಗೆ ಇಳಿದಿದ್ದರೂ ಲೋಹಿತಾಕ್ಷ ಅವರು ದಡದಲ್ಲಿ ಕುಳಿತಿದ್ದರು. ಅದರೆ ಸ್ನೇಹಿತರು ಸ್ನಾನ ಮಾಡಿ ಹಿಂದಿರುಗಿದ ವೇಳೆ ಅವರು ನೀರಿನಲ್ಲಿ ಬಿದ್ದಿದ್ದಾರೆ ಎನ್ನಲಾಗುತ್ತಿದೆ. ನದಿ ದಡದಲ್ಲಿ ಕುಳಿತಿದ್ದ ಅವರ ಆರೋಗ್ಯದಲ್ಲಿ ತೊಂದರೆ ಉಂಟಾಗಿ ತಲೆ ತಿರುಗಿ ಬಿದ್ದಿರುವ ಶಂಕೆಯಿದೆ. ಒಂದು ವೇಳೆ ಅವರು ಸ್ನಾನಕ್ಕಿಳಿದಿದ್ದರೆ ಅವರ ಕೈಯಲ್ಲಿ ವಾಚ್ ಇರುತ್ತಿರಲಿಲ್ಲ. ಮೈಮೇಲೆ ಬಟ್ಟೆ ಇರುತ್ತಿರಲಿಲ್ಲ. ಅವರು ಬಿದ್ದ ರಭಸಕ್ಕೆ ಲೋಹಿತಾಕ್ಷರ ತಲೆಗೆ ಗಾಯವಾಗಿದ್ದು, ಇದರಿಂದ ಮೃತಪಟ್ಟಿರುವ ಸಾಧ್ಯತೆಯೂ ಇದೆ. ಆದ್ದರಿಂದ ಇವರ ಸಾವಿಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಲೋಹಿತಾಕ್ಷ ಅವರು ಇಲೆಕ್ಟ್ರಿಕಲ್ ಗುತ್ತಿಗೆ ಕೆಲಸಕ್ಕೆ…

Read More