ಬೆಳ್ತಂಗಡಿ: ಗುರುವಾಯನಕೆರೆ ಸಮೀಪ ಅಸಹಜ ಸ್ಥಿತಿಯಲ್ಲಿ ಬಂಟ್ವಾಳ ತಾಲೂಕಿನ ಪೆರ್ನ ನಿವಾಸಿ ಯತೀಶ್ ಗೌಡ (32) ಎಂಬವರ ಮೃತದೇಹ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.ಕೊಲೆ ಪ್ರಕರಣದ ಆರೋಪಿಗಳನ್ನು ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ನಿವಾಸಿ ಯಶೋಧರ (35), ಕಡಬ ಚಾರ್ವಾಕ ನಿವಾಸಿ ಮೋಹನ್ (30) ಹಾಗೂ ಪಡಂಗಡಿ ನಿವಾಸಿ ಇಬ್ರಾಹಿಂ (54) ಎಂದು ಗುರುತಿಸಲಾಗಿದೆ.ಇಂದು ಬೆಳಿಗ್ಗೆ ಪೆರ್ನೆ ನಿವಾಸಿ ಯತೀಶ್ ಎಂಬವರ ಮೃತದೇಹ ಗುರುವಾಯನಕೆರೆ ಸಮೀಪದ ಅಲಾದಿಕೊಟ್ಟಿಗೆ ಬಳಿ ಇರುವ ಶ್ರೀದೇವಿ ಕಾಂಪ್ಲೆಕ್ಸ್ ಆವರಣದಲ್ಲಿ ಪತ್ತೆಯಾಗಿತ್ತು.ಈ ಬಗ್ಗೆ ಮೃತರ ಸಹೋದರ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ ಬೆಳ್ತಂಗಡಿ ಪೊಲೀಸರು ಸ್ಥಳದಲ್ಲಿರುವ ಸಿಸಿಟಿವಿಗಳನ್ನು ಪರಿಶೀಲಿಸಿದಾಗ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ.ಆರೋಪಿಗಳ ಹಲ್ಲೆಯಿಂದಾಗಿ ಯತೀಶ್ ಮೃತಪಟ್ಟಿರುವುದಾಗಿ ಅವರ ಸಹೋದರ ಅನುಮಾನ ವ್ಯಕ್ತಪಡಿಸಿ ಈ ಬಗ್ಗೆ ದೂರು ನೀಡಿದ್ದರು. ಅದರಂತೆ ಪೊಲೀಸರು ಸಿಸಿ ಕ್ಯಾಮರಾಗಳನ್ನು ಪರಿಶೀಲಿಸಿ, ಕಾರ್ಯ ಪ್ರವೃತ್ತರಾದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಪ್ರಕರಣದ ಬಗ್ಗೆ ಮಾಹಿತಿ…
Author: main-admin
ಉಡುಪಿ: ಉಡುಪಿ ಜಿಲ್ಲೆಯ ಶಿರ್ವ ಪೊಲೀಸ್ ಠಾಣೆ ವ್ಯಾಪ್ತಿಯ ಕಲ್ಲಟ್ಟು ಗ್ರಾಮದ ನದಿಯ ದಡದಲ್ಲಿ ಹಸುವಿನ ಮೃತದೇಹ ಪತ್ತೆಯಾಗಿದ್ದು, ಸ್ಥಳೀಯ ಬಲಪಂಥೀಯ ಕಾರ್ಯಕರ್ತರಲ್ಲಿ ಆಕ್ರೋಶ ವ್ಯಕ್ತವಾಗಿದೆ.ಭಕ್ತರು ಪವಿತ್ರವೆಂದು ಪರಿಗಣಿಸುವ ಮತ್ತು ಪಾಪನಾಶಿನಿ ನದಿ ಎಂದು ಜನಪ್ರಿಯವಾಗಿ ಕರೆಯಲ್ಪಡುವ ನದಿ ದಂಡೆಯ ಪ್ರದೇಶದಲ್ಲಿ ಈ ಅವಶೇಷಗಳು ಪತ್ತೆಯಾಗಿವೆ. ಶಿರ್ವ ವಿಷ್ಣುಮೂರ್ತಿ ದೇವಸ್ಥಾನ ಸೇರಿದಂತೆ ಈ ಪ್ರದೇಶದ ಹಲವಾರು ದೇವಾಲಯಗಳಿಗೆ ಸಂಬಂಧಿಸಿದ ಪವಿತ್ರ ಸ್ನಾನದ ಆಚರಣೆಗಳಿಗೆ ಈ ನದಿಯನ್ನು ಬಳಸಲಾಗುತ್ತದೆ.ಅಪರಿಚಿತ ದುಷ್ಕರ್ಮಿಗಳು ಈ ಪ್ರದೇಶದ ಪ್ರತ್ಯೇಕತೆಯ ಲಾಭ ಪಡೆದು ಮೃತದೇಹವನ್ನು ಎಸೆಯುತ್ತಿದ್ದಾರೆ ಎಂದು ಸ್ಥಳೀಯ ನಿವಾಸಿಗಳು ಮತ್ತು ಹಿಂದೂ ಕಾರ್ಯಕರ್ತರು, ಆರೋಪಿಸಿದ್ದಾರೆ.ಶಿರ್ವ ಪೊಲೀಸ್ ಠಾಣೆಯ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪಶುಸಂಗೋಪನಾ ಇಲಾಖೆಯ ಅಧಿಕಾರಿಗಳ ಸಮ್ಮುಖದಲ್ಲಿ ಮಹಜರ್ (ಸ್ಥಳ ಪರಿಶೀಲನೆ) ನಡೆಸಿದರು.ಹಿಂದೂ ಜಾಗರಣ ವೇದಿಕೆ ಮತ್ತು ವಿಶ್ವ ಹಿಂದೂ ಪರಿಷತ್ (ವಿಎಚ್ಪಿ) ಸೇರಿದಂತೆ ಹಿಂದೂ ಸಂಘಟನೆಗಳ ಮುಖಂಡರು ಮತ್ತು ಕಾರ್ಯಕರ್ತರು ಸ್ಥಳದಲ್ಲಿ ಜಮಾಯಿಸಿ, ಅಧಿಕಾರಿಗಳನ್ನು ಸಮಗ್ರ ತನಿಖೆ ನಡೆಸಿ ಕೃತ್ಯಕ್ಕೆ ಕಾರಣರಾದವರನ್ನು ಗುರುತಿಸುವಂತೆ…
ತಿರುವನಂತಪುರಂ/ನೆಡುಮಂಗಾಡ್ : ಕೇರಳದಲ್ಲಿ ಮಾನವೀಯತೆಯೇ ತಲೆತಗ್ಗಿಸುವಂತಹ ಅತ್ಯಂತ ಭೀಕರ ಮತ್ತು ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಕೇವಲ ಒಂದೂವರೆ ವರ್ಷದ ಅರ್ಷಿದ್ ಎಂಬ ಪುಟ್ಟ ಮಗುವಿನ ದುರಂತ ಸಾವು, ದೀರ್ಘಕಾಲದ ಚಿತ್ರಹಿಂಸೆ ಹಾಗೂ ತಪ್ಪಿದ ಕೌಟುಂಬಿಕ ಎಚ್ಚರಿಕೆಗಳ ಕರಾಳ ಕಥೆಯನ್ನು ಬಿಚ್ಚಿಟ್ಟಿದೆ. ಮಗುವನ್ನು ಕೊಲೆ ಮಾಡಿದ ಆರೋಪದ ಮೇಲೆ ತಾಯಿ ಅಖಿಲಾ (24 ವರ್ಷ) ಮತ್ತು ಆಕೆಯ ಲಿವ್-ಇನ್ ಸಂಗಾತಿ ಅಶ್ಕರ್ (31 ವರ್ಷ) ಎಂಬುವವರನ್ನು ನೆಡುಮಂಗಾಡ್ ಪೊಲೀಸರು ಬಂಧಿಸಿದ್ದಾರೆ.ಈ ಘಟನೆಯು ಮೇ 29ರ ಶುಕ್ರವಾರದಂದು ಮೊದಲು ಬೆಳಕಿಗೆ ಬಂದಿತು. ಮಗು ಪ್ರಜ್ಞಾಹೀನ ಸ್ಥಿತಿಗೆ ತಲುಪಿದಾಗ ಆಂಬ್ಯುಲೆನ್ಸ್ ಮೂಲಕ ಪಣವೂರಿನ ಖಾಸಗಿ ಆಸ್ಪತ್ರೆಗೆ ಮತ್ತು ನಂತರ ಎಸ್ಎಟಿ (SAT) ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ವೈದ್ಯರು ಮಗು ಈಗಾಗಲೇ ಮೃತಪಟ್ಟಿದೆ ಎಂದು ಘೋಷಿಸಿದರು. ಈ ವೇಳೆ ಆರೋಪಿ ಅಶ್ಕರ್, “ಮಗು ಹಾಲು, ನೀರು ಕುಡಿದು ಮಲಗಿದ ನಂತರ ಇದ್ದಕ್ಕಿದ್ದಂತೆ ಕೆಮ್ಮಲು ಮತ್ತು ವಾಂತಿ ಮಾಡಲು ಆರಂಭಿಸಿ ಉಸಿರುಗಟ್ಟಿದಂತಾಗಿ ಪ್ರಜ್ಞೆ ಕಳೆದುಕೊಂಡಿತು” ಎಂದು ಪೊಲೀಸರಿಗೆ ಸುಳ್ಳು…
ಬಂಟ್ವಾಳ : ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದ ಕಾಡಬೆಟ್ಟು ಎಂಬಲ್ಲಿ ರವಿವಾರ ರಾತ್ರಿ ಅತ್ಯಂತ ಆಘಾತಕಾರಿ ಘಟನೆಯೊಂದು ಸಂಭವಿಸಿದೆ. ಮನೆಯಲ್ಲಿ ದೈವಿಕ ಕಾರ್ಯಕ್ರಮ ನಡೆಯುತ್ತಿದ್ದಾಗಲೇ, ಮದ್ಯದ ಅಮಲಿನಲ್ಲಿ ಗಲಾಟೆ ಮಾಡಬೇಡಿ ಎಂದಿದ್ದಕ್ಕೆ ಯುವಕನೋರ್ವ ತನ್ನ ಸ್ವಂತ ಚಿಕ್ಕಪ್ಪನ ಕುತ್ತಿಗೆಗೇ ಬಿಯರ್ ಬಾಟಲಿಯಿಂದ ಇರಿದು ಕೊಲೆಗೈದಿದ್ದಾನೆ.ಇಲ್ಲಿನ ನಿವಾಸಿ ಮಧುಸೂಧನ ( 38) ಅವರು ಮೃತಪಟ್ಟವರಾಗಿದ್ದು, ಅವರ ಅಣ್ಣ ಕೇಶವ ಪೂಜಾರಿ ಅವರ ಪುತ್ರ ರಾಹುಲ್ (23) ಕೊಲೆಗೈದವನಾಗಿದ್ದಾನೆ.ಕಾಡಬೆಟ್ಟು ನಿವಾಸಿ ಕೇಶವ ಪೂಜಾರಿ ಅವರ ಮನೆಯಲ್ಲಿ ರವಿವಾರ ರಾತ್ರಿ ದೈವಕ್ಕೆ ‘ತಂಬಿಲ’ ಸೇವೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಕೇಶವ ಪೂಜಾರಿ ಅವರ ಪುತ್ರ ರಾಹುಲ್ (23 ವರ್ಷ) ಮತ್ತು ಆತನ ಸ್ನೇಹಿತರು ಮನೆಯಿಂದ ಹೊರಗಡೆ ಮದ್ಯಸೇವನೆ ಮಾಡಿ ಜೋರಾಗಿ ಗದ್ದಲ ಎಬ್ಬಿಸುತ್ತಿದ್ದರು. ಮನೆಯಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿರುವುದರಿಂದ ಹೊರಗೆ ಗಲಾಟೆ ಮಾಡದಂತೆ ರಾಹುಲ್ನ ಚಿಕ್ಕಪ್ಪ, ಇಲೆಕ್ಟ್ರಿಷಿಯನ್ ಆಗಿದ್ದ ಮಧುಸೂಧನ (38 ವರ್ಷ) ಅವರು ಆಕ್ಷೇಪ ವ್ಯಕ್ತಪಡಿಸಿ ಬುದ್ಧಿವಾದ ಹೇಳಿದ್ದಾರೆ.ಚಿಕ್ಕಪ್ಪ ತನಗೆ ಬುದ್ಧಿವಾದ ಹೇಳಿದ್ದರಿಂದ…
ನವದೆಹಲಿ : ಪಶ್ಚಿಮ ಏಷ್ಯಾ ಭಾಗದಲ್ಲಿ ಉಂಟಾಗಿರುವ ತೀವ್ರ ಜಾಗತಿಕ ಸಂಘರ್ಷದಿಂದಾಗಿ ತೈಲ ಸರಬರಾಜಿಗೆ ತಡೆಯುಂಟಾಗಿದ್ದು, ಇದರ ನೇರ ಪರಿಣಾಮವಾಗಿ ದೇಶದಲ್ಲಿ ವಾಣಿಜ್ಯ ಬಳಕೆಯ ಅಡುಗೆ ಅನಿಲ (LPG) ಸಿಲಿಂಡರ್ ಬೆಲೆ ಮತ್ತೆ ಏರಿಕೆ ಕಂಡಿದೆ. ದೇಶದಾದ್ಯಂತ 19 ಕೆಜಿಯ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ ₹42 ರಿಂದ ₹53 ರವರೆಗೆ ಹೆಚ್ಚಳವಾಗಿದ್ದು, ಪರಿಷ್ಕೃತ ದರಗಳು ಇಂದಿನಿಂದಲೇ ಜಾರಿಗೆ ಬಂದಿವೆ. ಆದಾಗ್ಯೂ, ಸಾರ್ವಜನಿಕರಿಗೆ ನಿರಾಳ ಸುದ್ದಿ ಎಂಬಂತೆ ಗೃಹ ಬಳಕೆಯ (Domestic) ಅಡುಗೆ ಅನಿಲ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ.ಬೆಲೆ ಏರಿಕೆಯ ಬಳಿಕ ದೇಶದ ಪ್ರಮುಖ ನಗರಗಳಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ದರಗಳು ಈ ಕೆಳಗಿನಂತಿವೆ:ನವದೆಹಲಿ: ₹42 ಹೆಚ್ಚಳದೊಂದಿಗೆ ಸಿಲಿಂಡರ್ ಬೆಲೆ ₹3,113.50 ಕ್ಕೆ ತಲುಪಿದೆ.ಕೋಲ್ಕತ್ತ: ಗರಿಷ್ಠ ₹53.49 ಏರಿಕೆಯಾಗಿದ್ದು, ಹೊಸ ದರ ₹3,225 ಆಗಿದೆ.ಮುಂಬೈ: ವಾಣಿಜ್ಯ ನಗರಿ ಮುಂಬೈನಲ್ಲಿ ಸಿಲಿಂಡರ್ ಬೆಲೆ ₹3,024.50 ಕ್ಕೆ ಏರಿದೆ.ಚೆನ್ನೈ: ತಮಿಳುನಾಡು ರಾಜಧಾನಿಯಲ್ಲಿ ಇಂದಿನ ದರ ₹3,232 ಆಗಿದೆ.ಹೈದರಾಬಾದ್ ಮತ್ತು ಪಾಟ್ನಾ: ಇಲ್ಲಿ ಕ್ರಮವಾಗಿ…
ಮಂಗಳೂರು: ರಸ್ತೆ ಅಪಘಾತಗಳನ್ನು ತಡೆಗಟ್ಟುವ ಮತ್ತು ರಸ್ತೆ ಸುರಕ್ಷತಾ ನಿಯಮಗಳ ಪಾಲನೆಯನ್ನು ಕಡ್ಡಾಯಗೊಳಿಸುವ ನಿಟ್ಟಿನಲ್ಲಿ ನಗರ ಪೊಲೀಸರು ಶನಿವಾರ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಹೆಲ್ಮೆಟ್ ಧರಿಸದೆ ಚಾಲನೆ ಮತ್ತು ಒನ್-ವೇ ನಿಯಮ ಉಲ್ಲಂಘಿಸಿದ ಒಟ್ಟು 1,372 ದ್ವಿಚಕ್ರ ವಾಹನ ಸವಾರರ ವಿರುದ್ಧ ಪ್ರಕರಣ ದಾಖಲಿಸಿ, ದಂಡ ವಿಧಿಸಲಾಗಿದೆ.ಈ ವಿಶೇಷ ಕಾರ್ಯಾಚರಣೆಯ ಭಾಗವಾಗಿ, ಹೆಲ್ಮೆಟ್ ಧರಿಸದ 1,050 ಸವಾರರಿಗೆ ಒಟ್ಟು 4,63,500 ರೂ. ದಂಡ ವಿಧಿಸಲಾಗಿದೆ. ಇದರೊಂದಿಗೆ ಒನ್-ವೇ ನಿಯಮಗಳನ್ನು ಉಲ್ಲಂಘಿಸಿ ವಿರುದ್ಧ ದಿಕ್ಕಿನಲ್ಲಿ ವಾಹನ ಚಲಾಯಿಸಿದ 322 ಸವಾರರ ವಿರುದ್ಧ ಪ್ರಕರಣ ದಾಖಲಿಸಿ, 1,61,000 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.”ದ್ವಿಚಕ್ರ ವಾಹನಗಳು ಒಳಗೊಂಡಿರುವ ರಸ್ತೆ ಅಪಘಾತಗಳ ಸಂಖ್ಯೆ ಹೆಚ್ಚುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ಈ ಕಾರ್ಯಾಚರಣೆಯನ್ನು ಕೈಗೊಳ್ಳಲಾಗಿದೆ. ಇಂತಹ ಅನೇಕ ಅಪಘಾತಗಳು ತೀವ್ರ ತಲೆಯ ಗಾಯಗಳು, ಸಾವು ಅಥವಾ ಜೀವನವನ್ನೇ ಅಸ್ತವ್ಯಸ್ತಗೊಳಿಸುವ ಆಘಾತಗಳಿಗೆ ಕಾರಣವಾಗುತ್ತಿವೆ” ಎಂದು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರು ಕಳವಳ ವ್ಯಕ್ತಪಡಿಸಿದ್ದಾರೆ.ಹೆಲ್ಮೆಟ್…
ಕಡಬ : ಸವಣೂರು ಗ್ರಾಮದ ಮಾಂತೂರು ಮುಂಡತಡ್ಕ ಎಂಬಲ್ಲಿ ತೋಟವೊಂದರಲ್ಲಿ ಅಕ್ರಮವಾಗಿ ಜಾನುವಾರು ಹತ್ಯೆ ಮಾಡುತ್ತಿದ್ದ ಅಡ್ಡೆಗೆ ಬೆಳ್ಳಾರೆ ಪೊಲೀಸರು ದಿಢೀರ್ ದಾಳಿ ನಡೆಸಿ, ಮೂವರು ಆರೋಪಿಗಳನ್ನು ಬಂಧಿಸಿರುವ ಘಟನೆ ಮೇ 29ರ ಶುಕ್ರವಾರ ಸಂಜೆ ನಡೆದಿದೆ. ಬೆಳ್ಳಾರೆ ಪೊಲೀಸ್ ಠಾಣೆಯ ಉಪ ನಿರೀಕ್ಷಕರಾದ (SI) ಸಂತೋಷ್ ಬಿ.ಪಿ. ಅವರಿಗೆ ಕಡಬ ಸವಣೂರು ಗ್ರಾಮದ ಮಾಂತೂರು ಮುಂಡತಡ್ಕ ಪರಿಸರದಲ್ಲಿ ಅಕ್ರಮವಾಗಿ ಗೋವಧೆ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಲಭಿಸಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಎಸ್ಐ ಅವರು ತಮ್ಮ ಸಿಬ್ಬಂದಿಗಳೊಂದಿಗೆ ನಿಗದಿಪಡಿಸಿದ ಸ್ಥಳಕ್ಕೆ ತೆರಳಿ ಜಂಟಿ ಕಾರ್ಯಾಚರಣೆ ನಡೆಸಿದರು. ಈ ವೇಳೆ ತೋಟವೊಂದರಲ್ಲಿ ಜಾನುವಾರನ್ನು ವಧೆ ಮಾಡಿ ಮಾಂಸ ಮಾಡುತ್ತಿರುವುದು ಪತ್ತೆಯಾಗಿದೆ. ಪೊಲೀಸರು ಸ್ಥಳಕ್ಕೆ ದಾಳಿ ಮಾಡಿದ ಸಂದರ್ಭದಲ್ಲಿ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಬಂಧಿತರನ್ನು ಕೆ. ಅಬ್ದುಲ್ ರಫೀಕ್ (37 ವರ್ಷ), ಅದ್ರಾಮ ಮಂತೂರು (41 ವರ್ಷ) ಹಾಗೂ ಅಬ್ದುಲ್ ಖಾದರ್ ಪಣೆಮಜಲು (57 ವರ್ಷ) ಎಂದು ಗುರುತಿಸಲಾಗಿದೆ. ಆರೋಪಿಗಳು ಯಾವುದೇ…
ಫಿರೋಜಾಬಾದ್: ಉತ್ತರ ಪ್ರದೇಶದ ಫಿರೋಜಾಬಾದ್ ಜಿಲ್ಲೆಯ ಶಿಕೋಹಾಬಾದ್ನಲ್ಲಿ ಇಡೀ ದೇಶವೇ ತಲೆತಗ್ಗಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಪ್ರೇಮ ಸಂಬಂಧಕ್ಕೆ ಅಡ್ಡಿಯಾಗಿದ್ದಾನೆ ಎಂಬ ಕಾರಣಕ್ಕೆ ಒಂದೂವರೆ ವರ್ಷದ ಅಮಾಯಕ ಮಗುವನ್ನು ಬೀದಿಯಲ್ಲಿ ಕ್ರೂರವಾಗಿ ಥಳಿಸಿ ಕೊಂದ ದೃಶ್ಯ ಸಿಸಿಟಿವಿಯಲ್ಲಿ ವೈರಲ್ ಆಗಿ ತೀವ್ರ ಆಕ್ರೋಶ ಮೂಡಿಸಿತ್ತು. ಇದೀಗ ಕೊಲೆಯ ಪ್ರಮುಖ ಆರೋಪಿಯನ್ನು ಪೊಲೀಸರು ಭೀಕರ ಎನ್ಕೌಂಟರ್ ನಡೆಸಿ ಬಂಧಿಸಿದ್ದಾರೆ. ಮುಖಾಮುಖಿ ಗುಂಡಿನ ಚಕಮಕಿಯಲ್ಲಿ ಆರೋಪಿಯ ಎರಡೂ ಕಾಲುಗಳಿಗೆ ಗುಂಡು ತಗುಲಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಂಧಿತ ಆರೋಪಿಯನ್ನು ಶಿಕೋಹಾಬಾದ್ ಪ್ರದೇಶದಲ್ಲಿ ದಿನಸಿ ಅಂಗಡಿ ನಡೆಸುತ್ತಿದ್ದ ವಿರಾಜ್ ಅಲಿಯಾಸ್ ಜಿತೇಂದ್ರ ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಶುಕ್ರವಾರ ಮಗುವಿನ ತಾಯಿ ತನ್ನ ಸಂಬಂಧಿಕರೊಬ್ಬರನ್ನು ಭೇಟಿ ಮಾಡಲು ಹೋಗಿದ್ದ ಸಂದರ್ಭವನ್ನು ಬಳಸಿಕೊಂಡ ಆರೋಪಿ, ಮಗುವಿಗೆ ಚಾಕಲೇಟ್ ಕೊಡುವ ನೆಪದಲ್ಲಿ ತನ್ನೊಂದಿಗೆ ಕರೆದುಕೊಂಡು ಹೋಗಿದ್ದಾನೆ. ನಂತರ ಅತ್ಯಂತ ಕ್ರೂರವಾಗಿ ಮಗುವನ್ನು ರಸ್ತೆಯ ಮೇಲೆ ಎಸೆದು, ಥಳಿಸಿದ್ದಾನೆ. ತೀವ್ರವಾಗಿ ಗಾಯಗೊಂಡಿದ್ದ ಮಗುವನ್ನು ಕುಟುಂಬಸ್ಥರು ತಕ್ಷಣ ಆಸ್ಪತ್ರೆಗೆ ಸಾಗಿಸಿದರಾದರೂ, ವೈದ್ಯರು…
ಬೆಂಗಳೂರು: ಮಟನ್ ಎಂದು ಹೇಳಿ ಗ್ರಾಹಕರಿಗೆ ಗೋಮಾಂಸ (ಬೀಫ್) ನೀಡುತ್ತಿದ್ದ ಆರೋಪದ ಮೇಲೆ ಪೊಲೀಸರು ಇಬ್ಬರು ಹೋಟೆಲ್ ಮಾಲೀಕರನ್ನು ಬಂಧಿಸಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ಬಂಧಿತರನ್ನು ಬ್ಯಾರತಿ ಗ್ರಾಮದ ಜಿಜೂ ಅಲೆಕ್ಸಾಂಡರ್ ಹಾಗೂ ಟಿಪ್ಪಣ್ಣ ಲೇಔಟ್ನ ಶಿಬು ಕೆ.ಬಿ. ಎಂದು ಗುರುತಿಸಲಾಗಿದೆ. ಕೇರಳ ಮೂಲದವರಾದ ಇವರು ಭೈರತಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಆರೋಪಿಗಳು ಬೊಮ್ಮನಹಳ್ಳಿಯಲ್ಲಿರುವ ಐಸಿರಿ ಹಬ್ ಕಾಯಲೋರಂ ರೆಸ್ಟೋರೆಂಟ್ನ ಮಾಲೀಕರು ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸ್ ಅಧಿಕಾರಿಯೊಬ್ಬರ ಪ್ರಕಾರ, ಕಾಯಲೋರಂ ರೆಸ್ಟೋರೆಂಟ್ನಲ್ಲಿ ಮಟನ್ ಎಂದು ಹೇಳಿ ಬೀಫ್ ನೀಡಲಾಗುತ್ತಿದೆ ಎಂಬ ಆರೋಪದ ಕುರಿತು ಗ್ರಾಹಕರಿಂದ ಹಲವು ದೂರುಗಳು ಬಂದಿದ್ದವು. ರೆಸ್ಟೋರೆಂಟ್ನ ಮೆನು ಕಾರ್ಡ್ನಲ್ಲಿ ಎಲ್ಲಿಯೂ ಬೀಫ್ ಉಲ್ಲೇಖಿಸಿರಲಿಲ್ಲ. ಆದರೆ ಮಟನ್ ಖಾದ್ಯಗಳನ್ನು ಆರ್ಡರ್ ಮಾಡಿದಾಗ ಗೋಮಾಂಸವನ್ನು ನೀಡಲಾಗುತ್ತಿದೆ ಎಂದು ಅನೇಕರು ದೂರಿದ್ದರು. ಈ ದೂರುಗಳ ಆಧಾರದ ಮೇಲೆ ಸಿವಿಲ್ ಉಡುಪಿನಲ್ಲಿದ್ದ ಪೊಲೀಸ್ ಅಧಿಕಾರಿಯನ್ನು ಗ್ರಾಹಕರ ಸೋಗಿನಲ್ಲಿ ಕಳುಹಿಸಲಾಗಿತ್ತು. ಅವರು ಖರೀದಿಸಿ ತಂದಿದ್ದ ಮಟನ್ ಖಾದ್ಯಗಳನ್ನು ಪರಿಶೀಲಿಸಿದಾಗ ಅದು ಮಟನ್ ಅಲ್ಲ, ಗೋಮಾಂಸ…
ರಾಯಚೂರು : ರಾಜ್ಯದಲ್ಲಿ ಜಲ ದುರಂತಗಳ ಸರಣಿ ಮುಂದುವರಿದಿದ್ದು, ಮಂತ್ರಾಲಯ ಸಮೀಪದ ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಐವರು ನೀರುಪಾಲಾದ ಹೃದಯವಿದ್ರಾವಕ ಘಟನೆ ನಡೆದಿದೆ. ಘಟನೆಯಲ್ಲಿ ಐವರು ಮೃತಪಟ್ಟಿದ್ದು, ಮತ್ತೋರ್ವ ಯುವತಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೃತರನ್ನು ಹೈದರಾಬಾದ್ ಮೂಲದ ಯುವನ ಚಂದ್ರ (5), ಸತೀಶ್ (35), ಮಂತ್ರಾಲಯ ಗ್ರಾಮದ ರಾಘವೇಂದ್ರ (25), ಧನುಷ್ (23) ಹಾಗೂ ಉರವಕೊಂಡದ ಸಂಧ್ಯಾ (22) ಎಂದು ಗುರುತಿಸಲಾಗಿದೆ. ಅಪರ್ಣಾ ಎಂಬ ಯುವತಿ ಕೊನೆಯ ಕ್ಷಣದಲ್ಲಿ ರಕ್ಷಿಸಲ್ಪಟ್ಟಿದ್ದಾರೆ. ಮಾಹಿತಿಯ ಪ್ರಕಾರ, ಸಂಬಂಧಿಕರ ಮನೆಯಲ್ಲಿ ನಡೆದ ಸತ್ಯನಾರಾಯಣ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಿದ್ದವರು ಪೂಜೆ ಮುಗಿದ ಬಳಿಕ ತುಂಗಭದ್ರಾ ನದಿಗೆ ಈಜಲು ತೆರಳಿದ್ದರು. ನದಿಯ ಆಳ ಹಾಗೂ ನೀರಿನ ಹರಿವಿನ ತೀವ್ರತೆಯ ಬಗ್ಗೆ ಅರಿವಿಲ್ಲದೆ ನೀರಿಗೆ ಇಳಿದ ಪರಿಣಾಮ ದುರಂತ ಸಂಭವಿಸಿದೆ ಎನ್ನಲಾಗಿದೆ. ಘಟನಾ ಸ್ಥಳದಲ್ಲಿ ರಾಘವೇಂದ್ರ ಮತ್ತು ಸಂಧ್ಯಾ ಅವರ ಮೃತದೇಹಗಳು ಪತ್ತೆಯಾಗಿದ್ದು, ಉಳಿದವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಮೀನುಗಾರರು ಹಾಗೂ ರಕ್ಷಣಾ ತಂಡಗಳು ನದಿಯಲ್ಲಿ ನಿರಂತರ…










