ಬೆಳ್ತಂಗಡಿ: ಸಾಮಾಜಿಕ ಮಾಧ್ಯಮದಲ್ಲಿ ದ್ವೇಷ ಭಾಷಣ ಪ್ರಸಾರ ಮತ್ತು ಪ್ರಸಾರಕ್ಕೆ ಸಂಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸರು ಬೆಂಗಳೂರಿನಲ್ಲಿ ಬಲಪಂಥೀಯ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಅವರನ್ನು ಬಂಧಿಸಿದ್ದಾರೆ. ಪ್ರಸ್ತುತ ಅವರನ್ನು ಹೆಚ್ಚಿನ ತನಿಖೆಗಾಗಿ ಬೆಳ್ತಂಗಡಿಗೆ ಕರೆತರಲಾಗುತ್ತಿದೆ. ಕೆರೆಹಳ್ಳಿ ಪದೇ ಪದೇ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಈ ಬಂಧನವಾಗಿದೆ. ಬೆಳ್ತಂಗಡಿಯ ಕಸ್ಬಾ ಗ್ರಾಮದ ಹುಣಸೆಕಟ್ಟೆ ನಿವಾಸಿ ಜೋರಾಮ್ ಬಾರ್ಬೋಜ ಅವರು ಆಗಸ್ಟ್ 7, 2025 ರಂದು ಸಲ್ಲಿಸಿದ ದೂರಿನ ಆಧಾರದ ಮೇಲೆ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.ಕೆರೆಹಳ್ಳಿ ಕೋಮು ಸಾಮರಸ್ಯವನ್ನು ಕೆರಳಿಸುವ ಗುರಿಯನ್ನು ಹೊಂದಿರುವ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಮತ್ತು ವೀಡಿಯೊವನ್ನು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಪ್ರಸಾರ ಮಾಡಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ.ಪ್ರಕರಣ ದಾಖಲಾದ ನಂತರ, ಬೆಳ್ತಂಗಡಿ ಪೊಲೀಸರು ಕೆರೆಹಳ್ಳಿಗೆ ಹಲವಾರು ನೋಟಿಸ್ಗಳನ್ನು ನೀಡಿದ್ದರು. ಅವರು ನಿರಂತರವಾಗಿ ನಿಯಮ ಪಾಲಿಸದ ಕಾರಣ, ಪೊಲೀಸರು ಬೆಳ್ತಂಗಡಿ ನ್ಯಾಯಾಲಯದಿಂದ ಬಂಧನ ವಾರಂಟ್ ಪಡೆದರು. ನಂತರ ವಿಶೇಷ ತಂಡವು ಬೆಂಗಳೂರಿಗೆ ಹೋಗಿ ಪುನೀತ್ ಕೆರೆಹಳ್ಳಿಯನ್ನು ವಶಕ್ಕೆ ತೆಗೆದುಕೊಂಡಿದರು.ಪ್ರಾಥಮಿಕ ವಿಚಾರಣೆಯ…
Author: main-admin
ಬಂಟ್ವಾಳ: ಗೂಡ್ಸ್ ರಿಕ್ಷಾ ಹಾಗೂ ದ್ವಿಚಕ್ರವಾಹನ ನಡುವೆ ನಡೆದ ಅಪಘಾತಕ್ಕೆ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃ*ತಪಟ್ಟ ಘಟನೆ ಕುಕ್ಕಾಜೆ ಎಂಬಲ್ಲಿ ನಡೆದಿದೆ. ಕುಕ್ಕಾಜೆಯ ಪಂಜಾಜೆ ನಿವಾಸಿ ಮನೀಶ್ (23) ಎಂಬಾತ ಮೃ*ತಪಟ್ಟ ಯುವಕನಾಗಿದ್ದಾನೆ. ಮೆಲ್ಕಾರ್ ಕಡೆಯಿಂದ ಸ್ನೇಹಿತ ಉದಯ ಎಂಬವರ ಜೊತೆ ಕುಕ್ಕಾಜೆ ಮನೆಯ ಕಡೆ ಸಂಚಾರ ಮಾಡುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಸಹಸವಾರನಾಗಿದ್ದ ಮನೀಶ್ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಇದನ್ನೂ ಓದಿ: ಬುಲೆರೋ ವಾಹನಕ್ಕೆ ಸಿಮೆಂಟ್ ಟ್ಯಾಂಕರ್ ಡಿಕ್ಕಿ ; ಚಿಕ್ಕಮಗಳೂರು ಮೂಲದ 8 ಮಂದಿ ಭೀಕರ ಸಾ*ವು ಸವಾರ ಉದಯ ಅವರು ಅಲ್ಪಸ್ವಲ್ಪ ಗಾಯಗಳಿಂದ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಬಂಟ್ವಾಳ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಉಡುಪಿ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ 2003ರ ಗಂಭೀರ ಅಪರಾಧ ಪ್ರಕರಣಕ್ಕೆ ಸಂಬಂಧಿಸಿ 23 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಯನ್ನು ಮಲ್ಪೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಮಾನ್ಯ ನ್ಯಾಯಾಲಯ ಉಡುಪಿ ಹಾಗೂ ಮಲ್ಪೆ ಠಾಣಾ ಅಪರಾಧ ಪ್ರಕರಣದಲ್ಲಿ ಆರೋಪಿಯಾಗಿದ್ದ ಎಂ. ಬಾಬು (52), ತಂದೆ ಮಹಮ್ಮದ್, ಶಿವನಗರ, ಬೆಂಗಳೂರು ನಿವಾಸಿಯಾಗಿದ್ದು, ಕಳೆದ 23 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ಪರಾರಿಯಾಗಿದ್ದ. ಆರೋಪಿಯ ಪತ್ತೆಗಾಗಿ ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರು ಹಾಗೂ ಮಲ್ಪೆ ಪೊಲೀಸ್ ವೃತ್ತ ನಿರೀಕ್ಷಕರ ಮಾರ್ಗದರ್ಶನದಲ್ಲಿ, ಮಲ್ಪೆ ಪೊಲೀಸ್ ಠಾಣಾ ಉಪನಿರೀಕ್ಷಕ ಅನೀಲ್ ಕುಮಾರ್ ಡಿ ಅವರ ನೇತೃತ್ವದಲ್ಲಿ ಕಳೆದ ಐದು ತಿಂಗಳಿನಿಂದ ಮಾಹಿತಿ ಸಂಗ್ರಹಿಸಿ ಶೋಧ ಕಾರ್ಯ ನಡೆಸಲಾಗಿತ್ತು. ಖಚಿತ ಮಾಹಿತಿ ಮೇರೆಗೆ ಠಾಣಾ ಸಿಬ್ಬಂದಿಗಳಾದ ಹೆಡ್ ಕಾನ್ಸ್ಟೇಬಲ್ ಸುರೇಶ್ ಕುಮಾರ್ ಮತ್ತು ಹೆಡ್ ಕಾನ್ಸ್ಟೇಬಲ್ ವಿಶ್ವನಾಥ್ ಎಚ್. ಅವರು ಏಪ್ರಿಲ್ 12ರಂದು ಬೆಂಗಳೂರಿಗೆ ತೆರಳಿ, ಏಪ್ರಿಲ್ 14ರಂದು ರಾಮಮೂರ್ತಿ ನಗರದಲ್ಲಿ ಆರೋಪಿಯನ್ನು ಪತ್ತೆಹಚ್ಚಿ…
ಮಂಗಳೂರು : ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಸರ್ಕಾರದ ಸೌಲಭ್ಯಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುವ ಘಟನೆಗಳನ್ನು ಖಂಡಿಸಿ ‘ನವಸಹಜ ಸಮುದಾಯ ಸಂಘಟನೆ’ ಮಂಗಳೂರಿನ ಪ್ರೆಸ್ಕ್ಲಬ್ನಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿತು.ನಕಲಿ ಗುರುತಿನ ಚೀಟಿ ಪಡೆದವರ ವಿರುದ್ಧ ಹಾಗೂ ಅದಕ್ಕೆ ಸಹಕರಿಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಂಘಟನೆ ಆಗ್ರಹಿಸಿದೆ. ದ.ಕ ಜಿಲ್ಲಾ ನವಸಹಜ ಸಂಘಟನೆಯ ಅಧ್ಯಕ್ಷೆ ನಿಖಿಲಾ ಮಾತನಾಡಿ, “ರಾಯಚೂರು ಮೂಲದ ಹನಿ ಮಂಗಳೂರು ಕಳೆದ 4-5 ವರ್ಷಗಳಿಂದ ಮಂಗಳೂರಿನಲ್ಲಿ ವಾಸವಾಗಿದ್ದು, ಸಾಮಾಜಿಕ ಜಾಲತಾಣಗಳ ಮೂಲಕ ಪರಿಚಯವಾದ ಮೈಸೂರಿನ ವ್ಯಕ್ತಿಯನ್ನು ನಗರಕ್ಕೆ ಕರೆಸಿಕೊಂಡಿದ್ದಾಳೆ. ಸಂಘಟನೆಗೆ ಮಾಹಿತಿ ನೀಡದೆ ಆ ವ್ಯಕ್ತಿಗೆ ಮಂಗಳೂರಿನ ವಿಳಾಸದಲ್ಲಿ ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ, ಮಹಿಳಾ ಅಭಿವೃದ್ಧಿ ನಿಗಮಕ್ಕೆ ತಪ್ಪು ಮಾಹಿತಿ ನೀಡಿ ರಾಷ್ಟ್ರೀಯ ಟ್ರಾನ್ಸ್ಜೆಂಡರ್ ಗುರುತಿನ ಚೀಟಿ ಮಾಡಿಸಲಾಗಿದೆ. ಬಳಿಕ ಆ ವ್ಯಕ್ತಿ ಮೈಸೂರಿಗೆ ತೆರಳಿ, ಮಂಗಳೂರಿನ ಸಮುದಾಯದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಈ ಪ್ರಕರಣಕ್ಕೂ ಸಂಘಟನೆಗೂ…
ಮಂಗಳೂರು: ಕಾವೂರಿನಿಂದ ಮಂಗಳೂರಿಗೆ ಬರುವ ರಸ್ತೆಯಲ್ಲಿ ಅಂದರೆ ನಗರದ ಕುಂಟಿಕಾನ ಫ್ಲೈಓವರ್ ಬಳಿ ವಾಹನವನ್ನು ಅಡ್ಡಗಟ್ಟಿ ಇತರ ವಾಹನಗಳ ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪದ ಮೇರೆಗೆ ಇಬ್ಬರು ದ್ವಿಚಕ್ರ ವಾಹನ ಸವಾರರ ವಿರುದ್ಧ ಉರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಗರದ ಕುಂಜತ್ತಬೈಲ್ ನಿವಾಸಿ ತನ್ಸೀರ್ (25) ಮತ್ತು ಗದಗ ಜಿಲ್ಲೆ ನರಗುಂದ ತಂಡಾಪುರ ಓಣಿಲೆ ಚಂದ್ರಶೇಖರ್ (55) ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಾಹನವನ್ನು ಅಡ್ಡಾದಿಡ್ಡಿಯಾಗಿ ಚಲಾಯಿಸಿದ ವಿಚಾರದಲ್ಲಿ ಈ ಇಬ್ಬರ ನಡುವೆ ಗಲಾಟೆಯಾಗಿತ್ತು.ಪರಿಣಾಮ ಇಬ್ಬರೂ ರಸ್ತೆಗೆ ತಮ್ಮ ವಾಹನಗಳನ್ನು ಅಡ್ಡವಾಗಿರಿಸಿ, ಪರಸ್ಪರ ಬೈದಾಡುತ್ತಾ ಸಾರ್ವಜನಿಕ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಪಡಿಸಿದ್ದಾರೆ. ಸ್ಥಳಕ್ಕೆ ಹೊಯ್ಸಳ ಪೊಲೀಸರು ಆಗಮಿಸಿ ಇಬ್ಬರನ್ನು ಚದುರಿಸಿದ್ದಾರೆ ಎಂದು ತಿಳಿದು ಬಂದಿದೆ.
ಕಾರ್ಕಳ: ಸೈಕಲ್ ಸರ್ಕಸ್ನಲ್ಲಿ ಡ್ಯಾನ್ಸ್ ಮಾಡಿದ ವಿಚಾರಕ್ಕೆ ಮೂವರು ಸೇರಿಕೊಂಡು ಯುವಕನ ಮೇಲೆ ಹಲ್ಲೆ ನಡೆಸಿದ ಘಟನೆ ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದಲ್ಲಿ ನಡೆದಿದೆ. ವಿಜಯ ಕುಮಾರ್ (40) ಅವರು ಏಪ್ರಿಲ್ 12ರಂದು ದುರ್ಗಾನಗರದಲ್ಲಿ ನಡೆಯುತ್ತಿದ್ದ ಸೈಕಲ್ ಸರ್ಕಸ್ಗೆ ತೆರಳಿ ಡ್ಯಾನ್ಸ್ ಮಾಡಿ ಮನೆಗೆ ಹಿಂದಿರುಗುವಾಗ, ದುರ್ಗಾನಗರದ ಆಶ್ಲೇಶ್ ಹೋಟೆಲ್ ಬಳಿ ಅವರ ಸ್ನೇಹಿತರು ಗುರುಪ್ರಸಾದ್, ಶಿವ ಮತ್ತು ದಯಾನಂದ ಅಡ್ಡಗಟ್ಟಿದ್ದಾರೆ. ಈ ವೇಳೆ “ನೀನು ಸೈಕಲ್ ಸರ್ಕಸ್ನಲ್ಲಿ ಡ್ಯಾನ್ಸ್ ಮಾಡಿ ನಮ್ಮ ಊರಿನ ಮರ್ಯಾದೆ ತೆಗೆದುಕೊಳ್ಳುತ್ತಿದ್ದೀಯ” ಎಂದು ಪ್ರಶ್ನಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಬಳಿಕ ಗುರುಪ್ರಸಾದ್ ಮುಖ ಮತ್ತು ಕೆನ್ನೆಗೆ ಹೊಡೆದು ತಳ್ಳಿ ನೆಲಕ್ಕೆ ಬಿದ್ದು, ಮೂವರು ಸೇರಿಕೊಂಡು ಕಾಲಿನಿಂದ ಹಲ್ಲೆ ನಡೆಸಿದ್ದಾರೆ. ಹಲ್ಲೆ ವೇಳೆ ತಲೆಯ ಹಿಂಭಾಗ ಕಾಂಕ್ರೀಟ್ಗೆ ತಾಗಿ ರಕ್ತಗಾಯವಾಗಿದ್ದು, ವಿಜಯ ಕುಮಾರ್ ಬೊಬ್ಬೆ ಹಾಕುತ್ತಿದ್ದಂತೆ ಆರೋಪಿತರು ಸ್ಥಳದಿಂದ ಪರಾರಿಯಾಗಿದ್ದಾರೆ. ನಂತರ ವಿಜಯ ಎಂಬವರು ಗಾಯಾಳುವಿಗೆ ಸಹಾಯ ಮಾಡಿ ಕಾರ್ಕಳ ಸರಕಾರಿ ಆಸ್ಪತ್ರೆಗೆ ದಾಖಲಿಸಿ, ಬಳಿಕ ಹೆಚ್ಚಿನ…
ಮಂಗಳೂರು: ನಗರದ ಜೆಪ್ಪು ಮಹಾಕಾಳಿಪಡ್ಪುಬಳಿ ಗೆಳೆಯರೊಂದಿಗೆ ಕ್ರಿಕೆಟ್ ಆಟವಾಡುತ್ತಿದ್ದ ಬಾಲಕ ವಿದ್ಯುತ್ ತಂತಿ ತಗುಲಿದ ಪರಿಣಾಮ ಮೃತಪಟ್ಟ ಘಟನೆ ಶನಿವಾರ ನಡೆದಿದೆ. ಮೂಲತಃ ಹಾವೇರಿಯ ಜಿಲ್ಲೆಯ ಬ್ಯಾಡಗಿ ತಾಲೂಕಿನ ಬನ್ನಿಹಟ್ಟಿ ಗ್ರಾಮದ ಪ್ರಸಕ್ತ ಜೆಪ್ಪು ಮಹಾಕಾಳಿಪಡ್ಪುನಿರ್ಮಲ ನಗರದಲ್ಲಿ ವಾಸವಾಗಿದ್ದ ಕಣ್ಣನ ಗೌಡ ಎಂಬವರ ಪುತ್ರ ವರುಣ್ (15) ಮೃತಪಟ್ಟ ಬಾಲಕ. ಎ.11ರಂದು ಮಹಾಕಾಳಿಪಡ್ಪಿಅಂಡರ್ಪಾಸ್ ಬಳಿಯ ಭಜನಾಮಂದಿರದ ಸಮೀಪ ಕ್ರಿಕೆಟ್ ಆಟವಾಡುತ್ತಿದ್ದ ವೇಳೆ ಮಂದಿರದ ಛಾವಣಿ ಬಿದ್ದ ಬಾಲ್ ಹೆಕ್ಕಲು ಹೋದಾಗ ವಿದ್ಯುತ್ ತಂತಿ ತಗುಲಿದ್ದು ಸ್ಥಳದಲ್ಲೇ ಮೃತಪಟ್ಟಿದ್ದ. ವಾರದ ಹಿಂದೆಷ್ಟೇ ಎಸೆಸೆಲ್ಸಿ ಪರೀಕ್ಷೆ ಬರೆದಿದ್ದ ವರುಣ್ ಫಲಿತಾಂಶದ ನಿರೀಕ್ಷೆಯಲ್ಲಿದ್ದ. ತಂದೆ ಕಣ್ಣನ ಗೌಡ ಮಹಾಕಾಳಿಪಡ್ಪುವಿನಲ್ಲಿ ಸಣ್ಣ ಕ್ಯಾಂಟೀನ್ ನಡೆಸುತ್ತಿದ್ದಾರೆ. ತಂದೆ-ತಾಯಿ, ಅಣ್ಣ ಮತ್ತು ಮೂರುವರೆ ವರ್ಷದ ತಂಗಿಯನ್ನು ವರುಣ್ ಅಗಲಿದ್ದಾರೆ. ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಬಾಲಕನ ಮನೆಗೆ ಭೇಟಿ ನೀಡಿದ್ದು, ಹೆತ್ತವರಿಗೆ ಸಾಂತ್ವನ ಹೇಳಿ ಪರಿಹಾರ ದೊರಕಿಸಿಕೊಡುವುದಾಗಿ ಭರವಸೆ ನೀಡಿದ್ದಾರೆ.
ವಿಟ್ಲ: ಮನೆಯ ಆವರಣದಲ್ಲಿ ಯಾವುದೇ ಮುನ್ನೆಚ್ಚರಿಕೆ ವಹಿಸದೆ ಅಕ್ರಮವಾಗಿ ಸ್ಫೋಟಕ ಸಾಮಗ್ರಿಗಳನ್ನು ಸಂಗ್ರಹಿಸಿ ಸುಡುಮದ್ದು ತಯಾರಿಸುತ್ತಿದ್ದ ವ್ಯಕ್ತಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕಂಬಳಬೆಟ್ಟು ಬಳಿಯ ಅಮೈ ನಿವಾಸಿ ಜಗದೀಶ ಪೂಜಾರಿ ಎಂದು ಗುರುತಿಸಲಾಗಿದೆ. ಏಪ್ರಿಲ್ 13ರಂದು ರಾತ್ರಿ ಜಗದೀಶ ಅವರು ತಮ್ಮ ಮನೆಯ ಆವರಣದಲ್ಲಿ ಸ್ಫೋಟಕ ವಸ್ತುಗಳನ್ನು ದಾಸ್ತಾನು ಮಾಡಿರುವ ಕುರಿತು ಖಚಿತ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಈ ಹಿನ್ನೆಲೆ ವಿಟ್ಲ ಪೊಲೀಸ್ ಠಾಣೆಯ ಉಪನಿರೀಕ್ಷಕರಾದ ಬಿ.ಎಸ್. ನಾಯಕ್ ನೇತೃತ್ವದ ತಂಡ ಸ್ಥಳಕ್ಕೆ ದಾಳಿ ನಡೆಸಿದ ವೇಳೆ ಸುಮಾರು 1.9 ಕೆ.ಜಿ ತೂಕದ ಸಂಶಯಾಸ್ಪದ ಸ್ಫೋಟಕ ವಸ್ತುಗಳನ್ನು ಪತ್ತೆಹಚ್ಚಲಾಗಿದೆ. ಜನವಸತಿ ಪ್ರದೇಶದಲ್ಲಿ ಯಾವುದೇ ಸುರಕ್ಷತಾ ಕ್ರಮಗಳಿಲ್ಲದೆ ಅಪಾಯಕಾರಿ ಸ್ಫೋಟಕ ವಸ್ತುಗಳನ್ನು ಸಂಗ್ರಹಿಸಿದ್ದ ಹಿನ್ನೆಲೆಯಲ್ಲಿ ಆರೋಪಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 93/2026ರಂತೆ ಸ್ಫೋಟಕ ಕಾಯ್ದೆ ಹಾಗೂ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಕಲಂಗಳಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಮಂಗಳೂರು: ನಂತೂರು ತಾರಾಯಿತೋಟ ಎಂಬಲ್ಲಿ ಕಳೆದ ಶನಿವಾರ ನಡೆದಿದ್ದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಹಿರಿಯ ಛಾಯಾಗ್ರಾಹಕ ಕೆ. ಮೋಹನ್ ಚಂದರ್ (64) ಅವರು ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಬೆಳಿಗ್ಗೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಶನಿವಾರ ರಾತ್ರಿ ಸುಮಾರು 8:30ರ ಸುಮಾರಿಗೆ ಧರ್ಮಸ್ಥಳ ಮೂಲದ ಬೈಕ್ ಸವಾರ ಗೋಪಾಲಕೃಷ್ಣ (27) ಎಂಬಾತ ಅತಿವೇಗವಾಗಿ ಬೈಕ್ ಚಲಾಯಿಸಿ, ಓವರ್ಟೇಕ್ ಮಾಡುವ ಭರದಲ್ಲಿ ಮೋಹನ್ ಚಂದರ್ ಅವರ ಸ್ಕೂಟರ್ಗೆ ಡಿಕ್ಕಿ ಹೊಡೆದಿದ್ದ. ಡಿಕ್ಕಿಯ ರಭಸಕ್ಕೆ ಗೋಪಾಲಕೃಷ್ಣ ಟಿಪ್ಪರ್ಗೆ ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದರೆ, ರಸ್ತೆಗೆ ಎಸೆಯಲ್ಪಟ್ಟ ಮೋಹನ್ ಚಂದರ್ ಅವರ ತಲೆಗೆ ಗಂಭೀರ ಗಾಯವಾಗಿತ್ತು.ಅಪಘಾತದ ದೃಶ್ಯವು ಟೆಂಪೋ ಒಂದರ ಡ್ಯಾಶ್ ಕ್ಯಾಮ್ನಲ್ಲಿ ಸೆರೆಯಾಗಿದ್ದು, ಟೆಂಪೋ ಚಾಲಕ ಗಂಗಾಧರ್ ಅವರು ತಕ್ಷಣ ಮೋಹನ್ ಅವರನ್ನು ಕಂಕನಾಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಕಳೆದ ಎರಡು ದಿನಗಳಿಂದ ಐಸಿಯುನಲ್ಲಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಮೋಹನ್ ಚಂದರ್ ಅವರು ಇಂದು ಕೊನೆಯುಸಿರೆಳೆದಿದ್ದಾರೆ. ಮೃತರು ಪದವಿನಂಗಡಿಯಲ್ಲಿ ಸ್ಟುಡಿಯೋ ಹೊಂದಿದ್ದರು.
ಬೆಂಗಳೂರು: ರಾಜ್ಯದ ಎಸ್ಎಸ್ಎಲ್ಸಿ (SSLC) ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯು ಮಹತ್ವದ ಸುದ್ದಿಯೊಂದನ್ನು ನೀಡಿದೆ. ಇನ್ನು ಮುಂದೆ ಎಸ್ಎಸ್ಎಲ್ಸಿ ಪರೀಕ್ಷೆಯ ಒಟ್ಟು ಅಂಕಗಳಲ್ಲಿ ಬದಲಾವಣೆಯಾಗಲಿದ್ದು, ಈ ಕುರಿತು ಶಿಕ್ಷಣ ಇಲಾಖೆಯು ಅಧಿಕೃತ ಕರಡು ಅಧಿಸೂಚನೆಯನ್ನು ಹೊರಡಿಸಿದೆ. 525 ಅಂಕಗಳ ಹೊಸ ಸೂತ್ರ: ಈ ಮೊದಲು ಎಸ್ಎಸ್ಎಲ್ಸಿ ಪರೀಕ್ಷೆಯು ಒಟ್ಟು 625 ಅಂಕಗಳಿಗೆ ನಡೆಯುತ್ತಿತ್ತು. ಆದರೆ, ಹೊಸ ನಿಯಮದ ಪ್ರಕಾರ ತೃತೀಯ ಭಾಷೆ (Third Language) ವಿಷಯಕ್ಕೆ ನೀಡಲಾಗುತ್ತಿದ್ದ 100 ಅಂಕಗಳನ್ನು ತೆಗೆದುಹಾಕಲಾಗಿದೆ. ಇದರ ಬದಲಾಗಿ ತೃತೀಯ ಭಾಷೆಯಲ್ಲಿ ಕೇವಲ ‘ಗ್ರೇಡ್’ (Grade System) ನೀಡಲು ತೀರ್ಮಾನಿಸಲಾಗಿದೆ. ಹೀಗಾಗಿ, ಇನ್ಮುಂದೆ ಫಲಿತಾಂಶವನ್ನು ಒಟ್ಟು 525 ಅಂಕಗಳಿಗೆ ಪರಿಗಣಿಸಲಾಗುತ್ತದೆ. ಉತ್ತೀರ್ಣರಾಗಲು ಮಾನದಂಡಗಳೇನು? ಹೊಸ ಅಧಿಸೂಚನೆಯಲ್ಲಿ ಉತ್ತೀರ್ಣರಾಗಲು ಅಗತ್ಯವಿರುವ ಕನಿಷ್ಠ ಅಂಕಗಳ ಬಗ್ಗೆ ಸ್ಪಷ್ಟಪಡಿಸಲಾಗಿದೆ: ಒಟ್ಟು ಅಂಕಗಳು: 525 ಅಂಕಗಳಲ್ಲಿ ಕನಿಷ್ಠ 173 ಅಂಕಗಳನ್ನು (ಶೇ. 33) ಗಳಿಸುವುದು ಕಡ್ಡಾಯ. ವಿಷಯವಾರು ಅಂಕ: ಪ್ರತಿ ವಿಷಯದಲ್ಲಿ ಕನಿಷ್ಠ ಶೇ. 30ರಷ್ಟು ಅಂಕಗಳನ್ನು ಪಡೆಯಲೇಬೇಕು. ತೃತೀಯ ಭಾಷೆಗೆ ಗ್ರೇಡ್ ಸಿಸ್ಟಮ್: ತೃತೀಯ ಭಾಷೆಯ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಪಡೆಯುವ ಅಂಕಗಳ ಆಧಾರದ ಮೇಲೆ ಕೆಳಗಿನಂತೆ ಗ್ರೇಡ್ ನೀಡಲಾಗುತ್ತದೆ:…










