ಬಂಟ್ವಾಳ : ಬಡಗಕಜೆಕ್ಕಾರು ಗ್ರಾಮದ ಪಾಂಡವರಕಲ್ಲು ಬಳಿಯ ಕೂಮಿನಡ್ಕ ಎಂಬಲ್ಲಿ ಅಕ್ರಮವಾಗಿ ಖೋಟಾ ನೋಟುಗಳನ್ನು ಚಲಾವಣೆ ಮಾಡಲು ಸಂಗ್ರಹಿಸಿಟ್ಟಿದ್ದ ಇಬ್ಬರು ಆರೋಪಿಗಳನ್ನು ಪುಂಜಾಲಕಟ್ಟೆ ಪೊಲೀಸರು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಬಂಧಿತರನ್ನು ಮುಹಮ್ಮದ್ ಸಮೀರ್ (28) ಮತ್ತು ಮಹಮ್ಮದ್ ಇರ್ಫಾನ್ (26) ಎಂದು ಗುರುತಿಸಲಾಗಿದ್ದು, ಮತ್ತೊಬ್ಬ ಆರೋಪಿ ರಶೀದ್ ಕುಂಡಡ್ಕ ಎಂಬಾತ ಪರಾರಿಯಾಗಿದ್ದಾನೆ. ಮೇ 1ರಂದು ಸ್ವಿಫ್ಟ್ ಕಾರಿನಲ್ಲಿ ಖೋಟಾ ನೋಟುಗಳನ್ನು ಇಟ್ಟುಕೊಂಡಿರುವ ಬಗ್ಗೆ ಸಿಕ್ಕ ಖಚಿತ ಮಾಹಿತಿ ಹಿನ್ನಲೆ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತರಿಂದ 2,38,000 ಮೌಲ್ಯದ 500 ರೂ. ಮುಖಬೆಲೆಯ ಖೋಟಾ ನೋಟುಗಳನ್ನು ವಶಕ್ಕೆ ಪಡೆದಿದ್ದಾರೆ. ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ (BNS) ಕಾಯ್ದೆ 2023ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
Author: main-admin
ಮಂಗಳೂರು: ಶನಿವಾರ ಸಂಜೆ ಮಂಗಳೂರಿನ ಮುಲ್ಕಿಯ ಹಳೆಯಂಗಡಿ ಜಂಕ್ಷನ್ನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಿಂದಾಗಿ ಹೆದ್ದಾರಿಯಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ಭಾರಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಮಂಗಳೂರಿನಿಂದ ಬಳ್ಳಾರಿಯತ್ತ ಕೆಮಿಕಲ್ ಸಾಗಿಸುತ್ತಿದ್ದ ಟ್ಯಾಂಕರ್, ಜಂಕ್ಷನ್ನಲ್ಲಿ ಇರಿಸಲಾಗಿದ್ದ ಬ್ಯಾರಿಕೇಡ್ಗಳ ಕಾರಣದಿಂದಾಗಿ ಇದ್ದಕ್ಕಿದ್ದಂತೆ ಬ್ರೇಕ್ ಹಾಕಿದೆ. ಈ ವೇಳೆ ಕಾಸರಗೋಡಿನಿಂದ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತೆರಳುತ್ತಿದ್ದ ಕುಟುಂಬವೊಂದು ಪ್ರಯಾಣಿಸುತ್ತಿದ್ದ ಕಾರು, ಟ್ಯಾಂಕರ್ನ ಹಿಂಭಾಗಕ್ಕೆ ಢಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಕಾರಿನ ಮುಂಭಾಗ ಜಖಂಗೊಂಡಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಮೊದಲ ಅಪಘಾತದ ಬೆನ್ನಲ್ಲೇ, ಮಂಗಳೂರಿನಿಂದ ಉಡುಪಿಯ ಕಡೆಗೆ ಹೋಗುತ್ತಿದ್ದ ಕಾರೊಂದು ಡಿವೈಡರ್ ಬಳಿ ತಿರುವು ಪಡೆಯಲು ಯತ್ನಿಸುತ್ತಿದ್ದಾಗ, ಹಿಂಬದಿಯಿಂದ ಬಂದ ಟ್ಯಾಂಕರ್ ಢಿಕ್ಕಿ ಹೊಡೆದಿದೆ. ಇದರಿಂದ ಕಾರಿನ ಬಲಬದಿಗೆ ಹಾನಿಯಾಗಿದೆ.ಈ ಸರಣಿ ಅಪಘಾತಗಳಿಂದಾಗಿ ಹೆದ್ದಾರಿಯಲ್ಲಿ ವಾಹನಗಳು ಪಾವಂಜೆ ದೇವಸ್ಥಾನದವರೆಗೆ ಸಾಲುಗಟ್ಟಿ ನಿಂತಿದ್ದವು. ಇದರ ಪರಿಣಾಮವಾಗಿ ಹಳೆಯಂಗಡಿಯ ಒಳರಸ್ತೆಗಳಲ್ಲೂ ಭಾರಿ ಸಂಚಾರ ದಟ್ಟಣೆ ಉಂಟಾಗಿತ್ತು.ವಿಷಯ ತಿಳಿಯುತ್ತಿದ್ದಂತೆ ಮಂಗಳೂರು ಸಂಚಾರ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ…
ಬಜಪೆ : ಕಟೀಲು ದೇವಸ್ಥಾನದ ಪರಿಸರದಲ್ಲಿ ಸಂಚಾರ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕರ್ತವ್ಯದಲ್ಲಿದ್ದ ಪೊಲೀಸ್ ನಿರೀಕ್ಷಕರು ಹಾಗೂ ಸಿಬ್ಬಂದಿಯನ್ನು ಸಾರ್ವಜನಿಕವಾಗಿ ನಿಂದಿಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಬೆಂಗಳೂರು ಮೂಲದ ಸಂಧ್ಯಾ ಎಂಬ ಮಹಿಳೆಯ ವಿರುದ್ಧ ಬಜಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮೇ 1ರಂದು ಬುದ್ಧ ಪೂರ್ಣಿಮಾ ಮತ್ತು ರಜಾ ದಿನವಾದ್ದರಿಂದ ಕಟೀಲು ದೇವಸ್ಥಾನದಲ್ಲಿ ಅತೀ ಹೆಚ್ಚು ಭಕ್ತರ ದಟ್ಟಣೆ ಇತ್ತು. ಮಲ್ಲಿಗೆಯಂಗಡಿ ಜಂಕ್ಷನ್ ಬಳಿ ಬಜಪೆ ಪೊಲೀಸ್ ನಿರೀಕ್ಷಕ ಬಾಲಕೃಷ್ಣ ಹೆಚ್.ಎನ್. ಹಾಗೂ ಸಿಬ್ಬಂದಿ ವಾಹನ ದಟ್ಟಣೆ ನಿಯಂತ್ರಿಸುತ್ತಿದ್ದರು. ಮಧ್ಯಾಹ್ನ 1:45ರ ಸುಮಾರಿಗೆ ಬಿಳಿ ಬಣ್ಣದ ಟೆಂಪೋ ಟ್ರಾವೆಲರ್ಸ್ನಲ್ಲಿ ಬಂದ ಸಂಧ್ಯಾ ಎಂಬವರು, ಪೊಲೀಸರು ಸೂಚಿಸಿದ ಪಾರ್ಕಿಂಗ್ ಜಾಗಕ್ಕೆ ಹೋಗಲು ನಿರಾಕರಿಸಿ ವಿವಾದ ಸೃಷ್ಟಿಸಿದ್ದಾರೆ. ಪೊಲೀಸರು ಘನ ವಾಹನಗಳನ್ನು ಪಾರ್ಕಿಂಗ್ ಕಡೆಗೆ ಹೋಗುವಂತೆ ಸೂಚಿಸಿದಾಗ ಕೆರಳಿದ ಮಹಿಳೆ, “ಬೇರೆ ವಾಹನಗಳನ್ನು ಬಿಡುತ್ತಿದ್ದೀರಿ, ಅವರು ನಿಮ್ಮ ಅಪ್ಪನಾ.. ಅಮ್ಮನಾ..” ಎಂದು ಏರುಧ್ವನಿಯಲ್ಲಿ ಕೂಗಾಡಿದ್ದಾರೆ. ಸಾರ್ವಜನಿಕವಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ,…
ಬೆಂಗಳೂರು : ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ಸಂಪರ್ಕ ಬೆಳೆಸಿ, ಖಾಸಗಿ ವಿಡಿಯೋಗಳನ್ನು ಮುಂದಿಟ್ಟು ಮಹಿಳೆಯರಿಗೆ ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಕಿರುತೆರೆ ನಟ ಹನಿಯೂರು ಚಂದ್ರೇಗೌಡನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ಸರ್ಕಾರಿ ಅಧಿಕಾರಿ ಎಂದು ಹೇಳಿಕೊಂಡು 43 ವರ್ಷದ ಮೇಕಪ್ ಆರ್ಟಿಸ್ಟ್ ಸೇರಿದಂತೆ ಹಲವು ಮಹಿಳೆಯರಿಗೆ ವಂಚಿಸಿರುವ ಆರೋಪ ಕೇಳಿಬಂದಿದೆ. ಫೇಸ್ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣಗಳ ಮೂಲಕ ಒಂಟಿ ಮಹಿಳೆಯರನ್ನು ಪರಿಚಯಿಸಿಕೊಳ್ಳುತ್ತಿದ್ದ ಚಂದ್ರೇಗೌಡ, ತಾನು ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ), ವಕೀಲ ಅಥವಾ ಕಾಲೇಜು ಉಪನ್ಯಾಸಕ ಎಂದು ಸುಳ್ಳು ಹೇಳುತ್ತಿದ್ದ. ಸಂತ್ರಸ್ತರಿಗೆ ತಿಳಿಯದಂತೆ ಅವರ ಖಾಸಗಿ ಕ್ಷಣಗಳನ್ನು ವಿಡಿಯೋ ಮತ್ತು ಫೋಟೋ ಸೆರೆಹಿಡಿಯುತ್ತಿದ್ದ ಈತ, ಅವುಗಳನ್ನು ವೈರಲ್ ಮಾಡುವ ಬೆದರಿಕೆಯೊಡ್ಡಿ ಹಣ ಹಾಗೂ ಆಭರಣಗಳನ್ನು ವಸೂಲಿ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯ ಮೊಬೈಲ್ನಲ್ಲಿ 20ಕ್ಕೂ ಹೆಚ್ಚು ಮಹಿಳೆಯರ ಜೊತೆಗಿನ ಖಾಸಗಿ ಫೋಟೋಗಳು ಪತ್ತೆಯಾಗಿದ್ದು, ಇದನ್ನು ಕಂಡು ಪೊಲೀಸರೇ ದಂಗಾಗಿದ್ದಾರೆ. ತಾನು ಎಸ್ಪಿ ಎಂದು ನಕಲಿ ಗುರುತಿನ ಚೀಟಿ ಸೃಷ್ಟಿಸಿಕೊಂಡಿದ್ದ ಈತ, ಟೋಲ್ಗಳಲ್ಲಿ ಅದನ್ನು ಬಳಸುತ್ತಿದ್ದ…
ಬೆಂಗಳೂರು: ದೇಶದ ಕೋಟ್ಯಂತರ ಮೊಬೈಲ್ ಬಳಕೆದಾರರಿಗೆ ಏಕಾಏಕಿ ‘ಎಮರ್ಜೆನ್ಸಿ ಅಲರ್ಟ್’ ಸಂದೇಶಗಳು ಬಂದಿವೆ. ಆದರೆ, ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಇದು ಕೇಂದ್ರ ಸರ್ಕಾರವು ಹೊಸದಾಗಿ ಜಾರಿಗೆ ತಂದಿರುವ ‘ಸೆಲ್ ಬ್ರಾಡ್ಕಾಸ್ಟ್’ ವ್ಯವಸ್ಥೆಯ ಅಧಿಕೃತ ಪರೀಕ್ಷೆಯಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ಇಂದು ದೆಹಲಿಯಲ್ಲಿ ಈ ಸ್ವದೇಶಿ ವಿಪತ್ತು ಸಂವಹನ ವ್ಯವಸ್ಥೆಗೆ ಅಧಿಕೃತವಾಗಿ ಚಾಲನೆ ನೀಡಿದ್ದಾರೆ. ಭಾರತದ 36 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ರಾಜಧಾನಿಗಳಲ್ಲಿ ಇಂದು ಈ ಪರೀಕ್ಷಾರ್ಥ ಸಂದೇಶಗಳನ್ನು ರವಾನಿಸಲಾಗಿದೆ.ಈ ತಂತ್ರಜ್ಞಾನವನ್ನು ದೂರಸಂಪರ್ಕ ಇಲಾಖೆ ಮತ್ತು ಸಿ-ಡಾಟ್ ಸಂಸ್ಥೆಯು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಿದೆ. ಇದು ಇಂಟರ್ನೆಟ್ ಅಥವಾ ನೆಟ್ವರ್ಕ್ ದಟ್ಟಣೆಯ ಮೇಲೆ ಅವಲಂಬಿತವಾಗಿಲ್ಲ. ಬದಲಾಗಿ, ನಿರ್ದಿಷ್ಟ ಪ್ರದೇಶದ ಎಲ್ಲಾ ಮೊಬೈಲ್ ಟವರ್ ಮೂಲಕ ಏಕಕಾಲದಲ್ಲಿ ಸಂದೇಶಗಳನ್ನು ರವಾನಿಸುತ್ತದೆ. ಭೂಕಂಪ, ಸುನಾಮಿ, ಚಂಡಮಾರುತ, ಮಿಂಚು ಅಥವಾ ಅನಿಲ ಸೋರಿಕೆಯಂತಹ ತುರ್ತು ಸಂದರ್ಭಗಳಲ್ಲಿ ಜನರನ್ನು ಕೇವಲ ಸೆಕೆಂಡುಗಳಲ್ಲಿ ಎಚ್ಚರಿಸಿ ಸುರಕ್ಷಿತ…
ದಾಂಡೇಲಿ/ಬೆಂಗಳೂರು: ರಾಜ್ಯದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಕೌಟುಂಬಿಕ ಕಲಹ ಹಾಗೂ ಕಿರುಕುಳಕ್ಕೆ ಇಬ್ಬರು ಬಲಿಯಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ಪತ್ನಿಯ ಅನೈತಿಕ ಸಂಬಂಧ ಹಾಗೂ ಮಾನಸಿಕ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡಿದ್ದರೆ, ಇತ್ತ ರಾಜಧಾನಿ ಬೆಂಗಳೂರಿನಲ್ಲಿ ವರದಕ್ಷಿಣೆ ಕಿರುಕುಳ ತಾಳಲಾರದೆ ಗೃಹಿಣಿಯೊಬ್ಬರು ನೇಣಿಗೆ ಶರಣಾಗಿದ್ದಾರೆ. ರಾಜ್ಯದಲ್ಲಿ ನಡೆದ ಎರಡು ಬೇರೆ ಬೇರೆ ಕೌಟುಂಬಿಕ ಕಲಹದ ಘಟನೆಗಳಲ್ಲಿ ಇಬ್ಬರು ಬಲಿಯಾಗಿದ್ದಾರೆ. ದಾಂಡೇಲಿಯಲ್ಲಿ ಪತ್ನಿಯ ಅನೈತಿಕ ಸಂಬಂಧ ಹಾಗೂ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡರೆ, ಬೆಂಗಳೂರಿನಲ್ಲಿ ವರದಕ್ಷಿಣೆಗಾಗಿ ಕಿರುಕುಳ ನೀಡಿದ ಪರಿಣಾಮ ಗೃಹಿಣಿ ನೇಣಿಗೆ ಶರಣಾಗಿದ್ದಾರೆ. ಈ ಘಟನೆಗಳ ಕುರಿತು ಪೋಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಮಂಗಳೂರು: ನಗರದ ನಂತೂರು ಜಂಕ್ಷನ್ ಬಳಿಯ ಅಪಾರ್ಟ್ಮೆಂಟ್ನಲ್ಲಿ ಶುಕ್ರವಾರ ಸಂಜೆ ಬೆಂಕಿ ಅವಘಡ ಸಂಭವಿಸಿದೆ. ಕದ್ರಿ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಬೆಂಕಿ ಕಾಣಿಸಿಕೊಂಡ ಕೋಣೆಯಲ್ಲಿ ಸಂಗ್ರಹಿಸಲಾಗಿದ್ದ ವಿವಿಧ ವಸ್ತುಗಳು ಹಾನಿಗೊಳಗಾಗಿವೆ. ನಷ್ಟದ ಒಟ್ಟು ಪ್ರಮಾಣದ ಬಗ್ಗೆ ಇನ್ನೂ ಮಾಹಿತಿ ತಿಳಿದುಬಂದಿಲ್ಲ ಅಗ್ನಿಶಾಮಕ ದಳ ಮತ್ತು ತುರ್ತು ಸಿಬ್ಬಂದಿಯ ಸಮಯೋಚಿತ ಕಾರ್ಯ ದೊಡ್ಡ ಅನಾಹುತವನ್ನು ತಪ್ಪಿಸಲು ಸಹಾಯ ಮಾಡಿತು. ಘಟನೆಯು ಅಪಾರ್ಟ್ಮೆಂಟ್ ಕಟ್ಟಡದಲ್ಲಿ ಸಂಭವಿಸಿದ್ದರಿಂದ, ನಿವಾಸಿಗಳಲ್ಲಿ ಸ್ವಲ್ಪ ಸಮಯದವರೆಗೆ ಭಯಭೀತಗೊಂಡಿದ್ದರು
ಮಧ್ಯಪ್ರದೇಶ: ಇಲ್ಲಿನ ಉಮ್ರೆತ್ ಪೊಲೀಸ್ ಠಾಣೆ ವ್ಯಾಪ್ತಿಯ ಮುಜಾವರ್ ಗ್ರಾಮದಲ್ಲಿ ನಡೆದ ಮದುವೆ ಸಮಾರಂಭವೊಂದು ನಾಟಕೀಯ ಅಂತ್ಯ ಕಂಡಿದೆ. ಹಸೆಮಣೆಯ ಮೇಲೆ ವರನಿಗೆ ಹಾರ ಹಾಕಬೇಕಿದ್ದ ವಧು, ಎಲ್ಲರ ಸಮ್ಮುಖದಲ್ಲೇ ವೇದಿಕೆಯಿಂದ ಕೆಳಗಿಳಿದು ಬಂದು ತನ್ನ ಪ್ರಿಯಕರನ ಕುತ್ತಿಗೆಗೆ ಹಾರ ಹಾಕಿದ ಘಟನೆ ನಡೆದಿದೆ. ಪರಸಿಯಾದಿಂದ ಬಂದಿದ್ದ ವರನ ಮೆರವಣಿಗೆಯನ್ನು ಅದ್ಧೂರಿಯಾಗಿ ಸ್ವಾಗತಿಸಲಾಗಿತ್ತು. ವೇದಿಕೆಯ ಮೇಲೆ ಹಾರ ವಿನಿಮಯದ (ವರಮಾಲಾ) ಶುಭ ಮುಹೂರ್ತ ಬಂದಾಗ, ವಧು ವರನತ್ತ ಹೆಜ್ಜೆ ಹಾಕುವ ಬದಲು ನೇರವಾಗಿ ಜನಸಂದಣಿಯಲ್ಲಿದ್ದ ತನ್ನ ಪ್ರಿಯಕರನತ್ತ ಓಡಿ ಹೋಗಿ ಆತನಿಗೆ ಹಾರ ಹಾಕಿದ್ದಾಳೆ. ಈ ಅನಿರೀಕ್ಷಿತ ಬೆಳವಣಿಗೆಯಿಂದ ವಿವಾಹ ಮಂಟಪದಲ್ಲಿದ್ದ ಅತಿಥಿಗಳು ಮತ್ತು ವರ ದಿಗ್ಭ್ರಮೆಗೊಂಡಿದ್ದಾರೆ. ವಧುವಿನ ಈ ಕೃತ್ಯದಿಂದ ಆಕ್ರೋಶಗೊಂಡ ಕುಟುಂಬಸ್ಥರು ಆಕೆಯನ್ನು ಥಳಿಸಿದ್ದಾರೆ. ಇದರಿಂದ ಉಭಯ ಕುಟುಂಬಗಳ ನಡುವೆ ಮಾರಾಮಾರಿ ನಡೆದಿದ್ದು, ಮದುವೆ ಮಂಟಪ ಯುದ್ಧಭೂಮಿಯಾಗಿ ಮಾರ್ಪಟ್ಟಿದೆ. ಕೊನೆಗೆ ವರನು ಮದುವೆಯನ್ನು ನಿರಾಕರಿಸಿ, ಮೆರವಣಿಗೆಯೊಂದಿಗೆ ವಧು ಇಲ್ಲದೆಯೇ ವಾಪಸ್ ತೆರಳಿದ್ದಾನೆ. ವಧು ಮತ್ತು ಆ ಯುವಕನ ನಡುವೆ…
ಮಂಗಳೂರು : ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾ ಬಂಧಿಯೊಬ್ಬ ಕಾರಾಗೃಹಕ್ಕೆ ಮರಳುವಾಗ ಗುದದ್ವಾರದಲ್ಲಿ ಮೊಬೈಲ್ ಫೋನ್ ಅಡಗಿಸಿಟ್ಟು ತಂದಿದ್ದ ಘಟನೆ ಇಲ್ಲಿನ ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ. ಈ ಸಂಬಂಧ ಕಾರಾಗೃಹದ ಅಧೀಕ್ಷಕ ಶರಣಬಸಪ್ಪ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಮೊಹಮ್ಮದ್ ತೋಹಿದ್ ಎಂಬ ವಿಚಾರಣಾ ಬಂಧಿಯನ್ನು ಏಪ್ರಿಲ್ 24ರಂದು ಚಿಕಿತ್ಸೆಗಾಗಿ ವೆನ್ಲಾಕ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಏಪ್ರಿಲ್ 29ರಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿ ಸಂಜೆ 5:15ಕ್ಕೆ ಬೆಂಗಾವಲು ಸಿಬ್ಬಂದಿಯೊಂದಿಗೆ ಕಾರಾಗೃಹದ ಮುಖ್ಯದ್ವಾರಕ್ಕೆ ಆತನನ್ನು ಕರೆತರಲಾಯಿತು. ಮುಖ್ಯದ್ವಾರದಲ್ಲಿ ಕರ್ತವ್ಯದಲ್ಲಿದ್ದ ಕೆಎಸ್ಐಎಸ್ಎಫ್ (KSISF) ಸಿಬ್ಬಂದಿಗಳು ಎಚ್ಎಚ್ಎಂಡಿ (HHMD) ಯಂತ್ರದ ಮೂಲಕ ತಪಾಸಣೆ ನಡೆಸಿದಾಗ ಬಂಧಿಯ ಗುದದ್ವಾರದ ಬಳಿ ಅನುಮಾನಾಸ್ಪದ ಶಬ್ದ ಕೇಳಿಬಂದಿದೆ. ಅಧೀಕ್ಷಕರು ಸ್ಥಳಕ್ಕೆ ಬಂದು ವಿಚಾರಿಸಿದಾಗ, ತಾನು ಗುದದ್ವಾರದಲ್ಲಿ ಮೊಬೈಲ್ ಇಟ್ಟುಕೊಂಡಿರುವುದಾಗಿ ತೋಹಿದ್ ಒಪ್ಪಿಕೊಂಡಿದ್ದಾನೆ. ಕೂಡಲೇ ಆತನನ್ನು ಮತ್ತೆ ವೆನ್ಲಾಕ್ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆ ನಡೆಸಿದಾಗ, ಆತನ ಗುದದ್ವಾರದಿಂದ ಒಂದು ಸಣ್ಣ ಗಾತ್ರದ ಮೊಬೈಲ್ ಫೋನ್ (SIA VANTAGE Pro Mini27)…
ಬೆಳ್ತಂಗಡಿ : ಮನೆಯಲ್ಲಿ ಇಲಿ ಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಬೆಳಾಲು ಗ್ರಾಮದ ಮಾಯದ ಬಾಳೆಮಂಡಿಕಲ್ಲು ನಿವಾಸಿ ರಮ (19) ಎಂಬ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಮಂಗಳೂರಿನ ಆಸ್ಪತ್ರೆಯಲ್ಲಿ ಬುಧವಾರ ಮೃತಪಟ್ಟಿದ್ದಾರೆ. ದಿನೇಶ್ ನಾಯ್ಕ್ ಮತ್ತು ರೇವತಿ ದಂಪತಿಯ ಪುತ್ರಿಯಾಗಿರುವ ರಮ, ವಾಮದಪದವು ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದರು. ಏಪ್ರಿಲ್ 19ರಂದು ರಾತ್ರಿ ಮನೆಯಲ್ಲಿ ವಿಷ ಸೇವಿಸಿದ್ದ ಇವರನ್ನು ತಕ್ಷಣ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ 10 ದಿನಗಳ ಕಾಲ ಸಾವು-ಬದುಕಿನ ನಡುವೆ ಹೋರಾಡಿದ ರಮ, ಏಪ್ರಿಲ್ 29ರಂದು ಕೊನೆಯುಸಿರೆಳೆದಿದ್ದಾರೆ. ಈ ಕುರಿತು ಏಪ್ರಿಲ್ 30ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.










