ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ದಕ್ಷಿಣ ಠಾಣಾ ಸಹಾಯಕ ಪೊಲೀಸ್ ಉಪ ನಿರೀಕ್ಷಕ ಹರಿಶ್ಚಂದ್ರ ಅವರು ನಿಧನರಾಗಿದ್ದಾರೆ. ಶ್ರೀ ಮುನೀಶ್ವರ ಮಹಾ ಗಣಪತಿ ದೇವಸ್ಥಾನದ ಸೇವಾ ಟ್ರಸ್ಟ್ ನ ಉಪಾಧ್ಯಕ್ಷರಾಗಿದ್ದ ಹರಿಶ್ಚಂದ್ರ ಬಿ ಅವರ ನಿಧನಕ್ಕೆ ದೇವಸ್ಥಾನದ ಆಡಳಿತ ಮಂಡಳಿ ಸಂತಾಪ ಸೂಚಿಸಿದೆ.
Author: main-admin
ಬಂಟ್ವಾಳ: ಟ್ರೇಡಿಂಗ್ ಮಾರ್ಕೆಟ್ ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ರಾಯಿ ಗ್ರಾಮದ ಕೊಯಿಲ ನಿವಾಸಿ ಶ್ವಾನ್ ಫ್ರಾನ್ಸಿಸ್ ಸಿಲ್ವೇರಾ (29) ಕಾಣೆಯಾದ ವ್ಯಕ್ತಿ. ಶ್ವಾನ್ ಫ್ರಾನ್ಸಿಸ್ ಸಿಕ್ಕೇರಾ 5 ವರ್ಷಗಳಿಂದ ಟ್ರೇಡಿಂಗ್ ಮಾರ್ಕೆಟಿಂಗ್ ನಲ್ಲಿ ಕೆಲಸ ಮಾಡುತ್ತಿದ್ದು, ಆಗಾಗ ನಷ್ಟ ಆಗುತ್ತಿದ್ದ ಬಗ್ಗೆ ಮನೆಯವರಲ್ಲಿ ತಿಳಿಸುತ್ತಿದ್ದ. ಈ ನಡುವೆ ಜ.7 ರಂದು ಬಿ.ಸಿ ರೋಡಿಗೆ ಹೋಗಿ ಬರುವುದಾಗಿ ಹೋದ ವ್ಯಕ್ತಿ ಮನೆಗೆ ಬರದೆ ನಾಪತ್ತೆಯಾಗಿದ್ದಾನೆ. ಮೊಬೈಲ್ ಕೂಡಾ ಸ್ವಿಚ್ ಆಫ್ ಆಗಿದೆ. ಮಾರ್ಕೆಟಿಂಗ್ ವ್ಯವಹಾರದಲ್ಲಿ ನಷ್ಟದ ಕಾರಣವೋ ಅಥವಾ ಬೇರೆ ಕಾರಣಗಳಿಗಾಗಿ ಈತ ನಾಪತ್ತೆಯಾಗಿರಬಹುದಾ ಎಂಬ ಶಂಕೆ ವ್ಯಕ್ತವಾಗಿದೆ. ಕಾಣೆಯಾಗಿರುವ ಮಗನನ್ನು ಪತ್ತೆ ಮಾಡುವಂತೆ ಈತನ ತಾಯಿ ಪ್ರೇವಿಯ ಸಿರಾ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಗೆ ದೂರನ್ನು ನೀಡಿದ್ದು, ಪ್ರಕರಣ ದಾಖಲಾಗಿದೆ.
ಕಾರ್ಕಳ ಉಮ್ಮಿಕಲ್ ಬೆಟ್ಟದಲ್ಲಿರುವ ಪರಶುರಾಮ ಥೀಮ್ ಪಾರ್ಕ್ ಕಟ್ಟಡದಲ್ಲಿ ತಾಮ್ರದ ಹೊದಿಕೆ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಕಾರ್ಕಳ ನಗರ ಪೊಲೀಸರು ಬಂಧಿಸಿದ್ದಾರೆ. ಕಳವಾರು ನಿವಾಸಿ ಆರೀಫ್ @ ಮುನ್ನ (37) ಹಾಗೂ ಕಾವೂರು ನಿವಾಸಿ ಅಬ್ದುಲ್ ಹಮೀದ್ (32) ಎಂದು ಗುರುತಿಸಲಾಗಿದೆ. ಬಂಧಿತರಿಂದ ಸುಮಾರು 2.18 ಲಕ್ಷ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಜ. 3ರಂದು ಪರಶುರಾಮ ಥೀಮ್ ಪಾರ್ಕ್ ಕಟ್ಟಡದ ಮುಖ್ಯ ಬಾಗಿಲನ್ನು ಸಾಧನದ ಸಹಾಯದಿಂದ ಬಲವಂತವಾಗಿ ತೆರೆದು ಒಳಪ್ರವೇಶಿಸಿದ ದುಷ್ಕರ್ಮಿಗಳು, ಕಟ್ಟಡದ ಮೇಲ್ಛಾವಣಿಗೆ ಅಳವಡಿಸಲಾಗಿದ್ದ ತಾಮ್ರದ ಹೊದಿಕೆಯನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಈ ಕುರಿತು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ 2023ರ ಕಲಂ 331(3), 331(4) ಹಾಗೂ 305ರಡಿ ಪ್ರಕರಣ ದಾಖಲಾಗಿತ್ತು. ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರೀರಾಂ ಶಂಕರ ಅವರ ನಿರ್ದೇಶನದಂತೆ ಮೂರು ವಿಶೇಷ ತಂಡಗಳನ್ನು ರಚಿಸಲಾಗಿತ್ತು. ಈ ತಂಡಗಳು ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಮಂಗಳೂರು ನಗರ ವ್ಯಾಪ್ತಿಯಲ್ಲಿ ತನಿಖೆ…
ಕಡಬ: ಸಕಲೇಶಪುರದಿಂದ ಅಕ್ರಮವಾಗಿ ಮರದ ದಿಮ್ಮಿಗಳನ್ನು ಮಂಗಳೂರಿಗೆ ಸಾಗಾಟ ಮಾಡುತ್ತಿದ್ದ ವೇಳೆ ಅರಣ್ಯ ಅಧಿಕಾರಿಗಳು ದಾಳಿ ನಡೆಸಿ 7-8 ಲಕ್ಷ ಮೌಲ್ಯದ ಸೊತ್ತು ಸೇರಿದಂತೆ ವಾಹವನ್ನು ವಶಪಡಿಸಿಕೊಂಡ ಘಟನೆ ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ. ಕಾರ್ಯಾಚರಣೆಯಲ್ಲಿ ಉಪ ವಲಯ ಅರಣ್ಯ ಅಧಿಕಾರಿ ವಿನಯ್ ಕುಮಾರ್, ಪ್ರವೀಣ್ ಪಿ, ಗಸ್ತು ಅರಣ್ಯ ಪಾಲಕರಾದ ವಿನಯ ಚಂದ್ರ, ಶಿವಾನಂದ ಕುದುರಿ ಇತರೆ ಸಿಬ್ಬಂದಿ ಪಾಲ್ಗೊಂಡಿದ್ದರು. ಈ ಬಗ್ಗೆ ಪ್ರಕರಣ ದಾಖಲಾಗಿದೆ.
ಬೆಂಗಳೂರು : ದ್ವೇಷಭಾಷಣ ಮತ್ತು ದ್ವೇಷ ಅಪರಾಧಗಳು (ತಡೆಗಟ್ಟುವಿಕೆ) ಮಸೂದೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ತಡೆ ನೀಡಿದ್ದಾರೆ. ಪ್ರತಿಪಕ್ಷಗಳ ವಿರೋಧದ ನಡುವೆಯೇ ಸರ್ಕಾರ ಕರ್ನಾಟಕ ದ್ವೇಷಭಾಷಣ ಮತ್ತು ದ್ವೇಷ ಅಪರಾಧಗಳು (ತಡೆಗಟ್ಟುವಿಕೆ) ಮಸೂದೆಯನ್ನು ಚಳಿಗಾಲದ ಅಧಿವೇಶನದಲ್ಲಿ ಅಂಗೀಕರಿಸಿ ಲೋಕಭವನಕ್ಕೆ ಕಳುಹಿಸಿತ್ತು. ಬಳಿಕ ಬಿಜೆಪಿ, ಜೆಡಿಎಸ್ ಮುಖಂಡರು, ಸಹಿ ಮಾಡದಂತೆ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದ್ದರು. ಆದ್ದರಿಂದ ರಾಜ್ಯಪಾಲರು ಕೆಲ ಆಕ್ಷೇಪಗಳ ಬಗ್ಗೆ ಸ್ಪಷ್ಟನೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದ್ದಾರೆ. ಬೆಳಗಾವಿಯ ವಿಧಾನ ಮಂಡಲದ ಚಳಿಗಾಲದ ಅಧಿವೇಶನದಲ್ಲಿ ದ್ವೇಷ ಭಾಷಣ ತಡೆ ಮಸೂದೆ ಸೇರಿದಂತೆ ಹಲವು ಮಹತ್ವದ ಮಸೂದೆಗಳಿಗೆ ವಿಪಕ್ಷಗಳ ತೀವ್ರ ವಿರೋಧದ ನಡುವೆಯೂ ಅಂಕಿತ ಹಾಕಲಾಗಿತ್ತು. ಈ ಮಸೂದೆಗಳನ್ನು ರಾಜ್ಯಪಾಲರ ಒಪ್ಪಿಗೆಗೆ ಕಳುಹಿಸಲಾಗಿತ್ತು. ಆದರೇ ಇನ್ನೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕಿಲ್ಲ. ರಾಜ್ಯಪಾಲರ ಪರಿಶೀಲನೆಯಲ್ಲೇ ದ್ವೇಷ ಭಾಷಣ ತಡೆ ಮಸೂದೆ ಇದೆ. ಇದಲ್ಲದೇ ಎಸ್ಸಿ ಒಳಮೀಸಲಾತಿ ಮಸೂದೆಯನ್ನು ರಾಜ್ಯಪಾಲರು ವಾಪಾಸ್ ಕಳುಹಿಸಿದ್ದಾರೆ. ಮಸೂದೆ ಕುರಿತು ಹೆಚ್ಚಿನ…
ಮಂಗಳೂರು: ತಪಸ್ಯ ಫೌಂಡೇಶನ್ ವತಿಯಿಂದ ಕಳೆದ 4 ವರ್ಷಗಳಿಂದ ಬೀಚ್ ಫೆಸ್ಟಿವಲ್ ಉತ್ಸವ ನಡೆಯುತ್ತಿದ್ದು, ಕ್ಯಾನ್ಸರ್ ರೋಗಿಗಳ ಚಿಕಿತ್ಸೆಗಾಗಿ ನೆರವು ನೀಡುತ್ತಿರುವ ತಪಸ್ಯ ಫೌಂಡೇಶನ್ ಪ್ರತಿ ವರ್ಷವೂ ಬೀಚ್ ಫೆಸ್ಟಿವಲ್ ಕಾರ್ಯಕ್ರಮ ಆಯೋಜಿಸುತ್ತಿದೆ. ಕಳೆದ 3 ವರ್ಷಗಳಿಂದ ಅಖಿಲ ಭಾರತೀಯ ಬೀಚ್ ರೆಸ್ಲಿಂಗ್ ಕಮಿಟಿಯ ಅಧ್ಯಕ್ಷರು ಹಾಗೂ ಕರ್ನಾಟಕ ರೆಸ್ಲಿಂಗ್ ಅಸೋಸಿಯೇಷನ್ ಅಧ್ಯಕ್ಷರಾದ ಬಿ. ಗುಣರಂಜನ್ ಶೆಟ್ಟಿಯವರ ನೇತೃತ್ವದಲ್ಲಿ ಬೀಚ್ ಕುಸ್ತಿ ಪಂದ್ಯಾಟವನ್ನು ನಡೆಸುತ್ತಾ ಬಂದಿರುತ್ತಾರೆ. ಈ ವರ್ಷದ ಕರ್ನಾಟಕ ಸ್ಟೇಟ್ ಲೆವೆಲ್ ಬೀಚ್ ರೆಸ್ಲಿಂಗ್ ಚಾಂಪಿಯನ್ ಶಿಪ್ -2026 ಮಂಗಳೂರಿನ ತಣ್ಣೀರು ಬಾವಿ ಬೀಚ್ ದಡದಲ್ಲಿ ಉದ್ಘಾಟನೆಗೊಂಡಿತು. ಉದ್ಘಾಟನಾ ಸಮಾರಂಭದಲ್ಲಿ ಶರವು ಶ್ರೀ ಮಹಾಗಣಪತಿ ದೇವಸ್ಥಾನದ ಟ್ರಸ್ಟಿ ರಾಘವೇಂದ್ರ ಶಾಸ್ತ್ರಿ, ತಪಸ್ಯ ಫೌಂಡೇಷನ್ ಮೆನೇಜಿಂಗ್ ಟ್ರಸ್ಟಿ ಸಬೀತಾ ಆರ್ ಶೆಟ್ಟಿ, ಕರ್ನಾಟಕ ಕುಸ್ತಿ ಸಂಘದ ಉಪಾಧ್ಯಕ್ಷರಾದ ಪ್ರಸಾದ್. ಕೆ. ಶೆಟ್ಟಿ, ಖಜಾಂಚಿ ಶ್ರೀನಿವಾಸ್ ಅಂಗರಕೋಡಿ, ಕರ್ನಾಟಕ ಬೀಚ್ ರೆಸ್ಲಿಂಗ್ ಕಮಿಟಿ ವೈಸ್ ಛೇರ್ಮನ್ ನಿತ್ಯಾನಂದ ಶೆಟ್ಟಿ, ಕನ್ವೆಂನರ್ ಪ್ರಸಾದ್ ಶೆಟ್ಟಿ,…
ಕರ್ನಾಟಕದಲ್ಲಿ ಅಪ್ರಾಪ್ತ ಹೆಣ್ಣು ಮಕ್ಕಳು, ಮಹಿಳೆಯರ ಮೇಲಿನ ದೌರ್ಜನ್ಯದಂಥ ಪ್ರಕರಣಗಳನ್ನು ತಡೆಯಲು ರಾಜ್ಯದ ಎಲ್ಲ 31 ಜಿಲ್ಲೆಗಳು, ಐದು ಪೊಲೀಸ್ ಆಯುಕ್ತಾಲಯಗಳಲ್ಲಿ ‘ಅಕ್ಕ ಪಡೆ’ ಯೋಜನೆಯನ್ನು ಒಳಾಡಳಿತ ಇಲಾಖೆ ಸಹಯೋಗದೊಂದಿಗೆ ಅನುಷ್ಠಾನಗೊಳಿಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕಾನೂನು ಮತ್ತು ಸಂಸದೀಯ ಸಚಿವ ಎಚ್.ಕೆ.ಪಾಟೀಲ್, ಬಾಲ್ಯವಿವಾಹ ಪ್ರಕರಣಗಳ ತಡೆ, ಅಪ್ರಾಪ್ತ ಹೆಣ್ಣು ಮಕ್ಕಳು, ಮಹಿಳೆಯರ ಮೇಲಿನ ದೌರ್ಜನ್ಯದಂತಹ ಪ್ರಕರಣಗಳನ್ನು ತಡೆದು ರಕ್ಷಣೆ ನೀಡುವ ದೃಷ್ಟಿಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ‘ಅಕ್ಕ ಪಡೆ’ ರಚಿಸಿ ಕಾರ್ಯನಿರ್ವಹಿಸಲಾಗಿತ್ತು. ಇದು ಉದ್ದೇಶಿತ ಕಾರ್ಯಗಳಲ್ಲಿ ಯಶಸ್ವಿಯಾಗಿರುವುದರಿಂದ ರಾಜ್ಯಾದ್ಯಂತ ಅಕ್ಕ ಪಡೆಯನ್ನು ವಿಸ್ತರಿಸಲಾಗುತ್ತಿದೆ ಎಂದು ತಿಳಿಸಿದರು.
ವಿಟ್ಲ ಠಾಣಾ ವ್ಯಾಪ್ತಿಯ ಪೆರುವಾಯಿ ಸೊಸೈಟಿ ಆವರಣದಿಂದ ದನ ಕಳವುಗೈದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲ ಕೋಡಿ ನಿವಾಸಿ ಝಲ್ಫಾನ್ ಮಾಲಿಕ್ ಬಂಧಿತ ಆರೋಪಿ. 2025ರ ನ. 18ರಂದು ಗಣೇಶ್ ರೈ ಹಾಗೂ ನಾರಾಯಣ ನಾಯ್ಕ ಎಂಬವರ ಒಟ್ಟು ನಾಲ್ಕು ದನಗಳನ್ನು ಕಳ್ಳತನ ಮಾಡಲಾಗಿತ್ತು. ಈ ಬಗ್ಗೆ ಗಣೇಶ್ ರೈ ಅವರು ನೀಡಿದ ದೂರಿನಂತೆ ವಿಟ್ಲ ಪೊಲೀಸರು ಆರೋಪಿ ಝಲ್ಫಾನ್ ಮಾಲಿಕ್ ನನ್ನು ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯದ ಆದೇಶದಂತೆ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ.
ವಿಟ್ಲ: ಹಲ್ಲೆ ಗಲಾಟೆ ದೊಂಬಿ ಹಾಗೂ ಡ್ರಗ್ಸ್ ಪ್ರಕರಣಗಳಲ್ಲಿ ಆರೋಪಿಯಾಗಿರುವ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಅಬ್ದುಲ್ ಖಾದರ್@ ಶೌಕತ್ ವಿಟ್ಲ ಎಂಬಾತನನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ. ಅಬ್ದುಲ್ ಖಾದರ್ ಮೇಲೆ ಹಲ್ಲೆ ದೊಂಬಿ, ನಿಷೇಧಿತ ಮಾದಕ ದ್ರವ್ಯ ಸೇವನೆ, ಏನ್ ಡಿ ಪಿ ಎಸ್ ಕಾಯ್ದೆಯಂತೆ 3 ಪ್ರಕರಣಗಳು ದಾಖಲಾಗಿದ್ದು ಈತನನ್ನು ವಿಟ್ಲ ಪೊಲೀಸ್ ಠಾಣೆಯ ಠಾಣಾಧಿಕಾರಿಗಳ ವರದಿಯಂತೆ ಸಹಾಯಕ ಆಯುಕ್ತರು ಹಾಗೂ ಉಪವಿಭಾಗಿಯ ದಂಡಾಧಿಕಾರಿ ಮಂಗಳೂರು ರವರು ದಕ್ಷಿಣ ಕನ್ನಡ ಜಿಲ್ಲೆಯಿಂದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಿರುತ್ತಾರೆ. ಸದರಿ ಆದೇಶದಂತೆ ದಿನಾಂಕ 08-01-2026 ರಂದು ದಕ್ಷಿಣ ಕನ್ನಡ ಜಿಲ್ಲೆಯಿಂದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪೊಲೀಸ್ ಠಾಣೆ ಗೆ ಸುರಕ್ಷಿತವಾಗಿ ಕಳುಹಿಸಲಾಗಿದೆ.
ಉಪ್ಪಿನಂಗಡಿ: ನಾಲ್ಕು ದಿನಗಳ ಹಿಂದೆ ನೆಲ್ಯಾಡಿ ಗ್ರಾಮದ ಕಟ್ಟೆಮಜಲು ಎಂಬಲ್ಲಿ ಅಪ್ರಾಪ್ತ ಬಾಲಕಿಯ ಮಾನಭಂಗ ಮಾಡಲು ಯತ್ನಿಸಿದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಾಲಕಿ ಕುಟುಂಬದವರೊಂದಿಗೆ ಜ.3ರಂದು ರಾತ್ರಿ ನೆಲ್ಯಾಡಿ ಗ್ರಾಮದ ಕಟ್ಟೆಮಜಲು ಎಂಬಲ್ಲಿ ನಡೆದ ನೇಮೋತ್ಸವಕ್ಕೆ ತೆರಳಿದ್ದು, ಅಲ್ಲಿ ನೇಮೋತ್ಸವವನ್ನು ವೀಕ್ಷಿಸುತ್ತಿದ್ದರು. ಜ.4ರಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ಬಹಿರ್ದೇಶೆಗೆ ತೆರಳುತ್ತಿದ್ದ ವೇಳೆ, ಸ್ಥಳೀಯ ನಿವಾಸಿ ಚಂದ್ರಶೇಖರ ಕಟ್ಟೆಮಜಲು ಎಂಬಾತ ಬಾಲಕಿಯ ಕೈ ಹಿಡಿದು ಎಳೆದಾಡಿ ಮಾನಭಂಗ ಮಾಡಲು ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ.ಈ ಬಗ್ಗೆ ಬಾಲಕಿಯ ತಂದೆ ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದರು. ಇದೀಗ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.










