ಇನ್ಮುಂದೆ ಕಾರಿನ ಹಿಂಬದಿ ಪ್ರಯಾಣಿಕರಿಗೂ ಸೀಟ್ ಬೆಲ್ಟ್ ಕಡ್ಡಾಯವಾಗಿದೆ. ಒಂದು ವೇಳೆ ಸೀಟ್ ಬೆಲ್ಟ್ ಧರಿಸದಿದ್ರೆ 1000 ದಂಡ ವಿಧಿಸಲಾಗುತ್ತದೆ. ಸಾರಿಗೆ ಸಚಿವಾಲಯ ಹೊರಡಿಸಿದ ಕರಡು ಅಧಿಸೂಚನೆಯ ಪ್ರಕಾರ, ಏಪ್ರಿಲ್ 1, 2025 ರಿಂದ ತಯಾರಾದ ಎಲ್ಲಾ ಕಾರುಗಳು ‘ರಿಯರ್ ಸೀಟ್ ಬೆಲ್ಟ್ ಅಲಾರಂ’ ಅನ್ನು ಒದಗಿಸಬೇಕಾಗುತ್ತದೆ. ಅಲ್ಲದೇ ಕಾರಿನ ಮುಂಬದಿ ಮಾತ್ರವಲ್ಲ ಹಿಂಬದಿ ಕುಳಿತವರು ಕೂಡ ಕಡ್ಡಾಯವಾಗಿ ಸೀಟ್ ಬೆಲ್ಟ್ ಧರಿಸಬೇಕಾಗುತ್ತದೆ. ನಿಯಮ ಉಲ್ಲಂಘನೆಗೆ ಈ ಹಿಂದೆ ಇದ್ದ ದಂಡದ ಮೊತ್ತವನ್ನು 500 ರೂ. ನಿಂದ 1 ಸಾವಿರ ರೂ.ಗೆ ಹೆಚ್ಚಿಸಿದೆ. ಬಾಡಿಗೆ ಅಥವಾ ಖಾಸಗಿ ಕಾರುಗಳಲ್ಲಿ ಚಾಲಕನ ಜತೆಗೆ ಸಹ ಪ್ರಯಾಣಿಕರೂ ಕಡ್ಡಾಯವಾಗಿ ಸೀಟ್ ಬೆಲ್ಟ್ ಧರಿಸಬೇಕಿದೆ. ಈಗಾಗಲೇ ಕಾರಿನ ಹಿಂಬದಿ ಪ್ರಯಾಣಿಕರೂ ಸೀಟ್ ಬೆಲ್ಟ್ ಧರಿಸಬೇಕೆಂಬ ನಿಯಮ ಜಾರಿಯಲ್ಲಿದೆ. ಇದನ್ನು ಇನ್ನಷ್ಟು ಕಟ್ಟುನಿಟ್ಟಾಗಿ ಜಾರಿಗೊಳಿಸಲು ನಿರ್ಧರಿಸಿರುವ ಸರ್ಕಾರ 2025 ಏಪ್ರಿಲ್ 1ರಿಂದ ಮಾರಾಟವಾಗುವ ಕಾರುಗಳಲ್ಲಿ ಕಡ್ಡಾಯವಾಗಿ ರಿಯರ್ ಸೀಟ್ ಬೆಲ್ಟ್ ಅಲಾರಂ ಸೀಟ್ ಅಳವಡಿಸಬೇಕೆಂದು ಸೂಚನೆ ನೀಡಿದೆ.
Author: main-admin
ಮಂಗಳೂರು ಹಳೇ ಬಂದರಿನಿಂದ ಲಕ್ಷದ್ವೀಪಕ್ಕೆ ಸರಕು ಸಾಗಿಸುತ್ತಿದ್ದ ನೌಕೆಯೊಂದು ಲಕ್ಷದ್ವೀಪ ಕರಾವಳಿಯಲ್ಲಿ ಮುಳುಗಿದ ಘಟನೆ ನಡೆದಿದೆ. ಅದರಲ್ಲಿದ್ದ 8 ಜನ ಸಿಬಂದಿ ಸಮುದ್ರದಲ್ಲೇ ಮೂರು ದಿನ ಅನ್ನ ಆಹಾರ, ನೀರಿಲ್ಲದೇ ಪವಾಡ ಸದೃಶ್ಯರಾಗಿ ಬದುಕಿ ಮರು ಜನ್ಮ ಪಡೆದಿದ್ದಾರೆ. ಮಾರ್ಚ್ 12 ತಮಿಳುನಾಡು ಮೂಲದ MSV ವರದರಾಜು ಎಂಬ ಸರಕು ಸಾಗಣೆಯ ನೌಕೆ ಮಂಗಳೂರು ಹಳೇ ಬಂದರಿಂದ ಸರಕು ತುಂಬಿಸಿ ಲಕ್ಷದ್ವೀಪದತ್ತ ಅಗತಿ ದ್ವೀಪದತ್ತ ಪ್ರಯಾಣ ಬೆಳೆಸಿತ್ತು. ಹಡಗಿನಲ್ಲಿ ಕ್ಯಾಪ್ಟನ್ ಭಾಸ್ಕರನ್, ಸಿಬಂದಿಗಳಾದ ನಾಗಲಿಂಗಂ, ನಲ್ಲಮುತ್ತು, ಮಣಿದೇವನ್ ವೇಲು, ಅಜಿತ್, ವಿಘ್ನೇಶ್ ಕುಮಾರ್, ಕುಪ್ಪುರಾಮನ್, ಮುರುಗನ್ ಸೇರಿ 8 ಜನ ಸಿಬಂದಿಗಳಿದ್ದರು. 13 ರಂದು ಅಂದರೋತ್ ದ್ವೀಪದಲ್ಲಿ ಅರ್ಧದಷ್ಟು ಸರಕು ಖಾಲಿ ಮಾಡಿ ರಾತ್ರೀಯೇ ಅಗತ್ತಿ ದ್ವೀಪದತ್ತ ಪ್ರಯಾಣ ಬೆಳೆಸಿತ್ತು. ಮುಂಜಾನೆ ಸುಮಾರಿಗೆ ದೋಣಿಯ ಇಂಜಿನ್ನಲ್ಲಿ ತಾಂತ್ರಿಕ ದೋಷ ಕಂಡು ಬಂದು ಮುಳುಗಲಾರಂಭಿದೆ. ಸಿಬಂದಿ ದುರಸ್ತಿ ಮಾಡಲು ಸಾಕಷ್ಟು ಪ್ರಯತ್ನಿದರೂ ವಿಫಲವಾಗಿ ದೋಣಿ ಮುಳುಗಡೆಯಾಗಿದೆ. ಕೊನೆಗೆ ಅದರಲ್ಲಿದ್ದ ಜೀವರಕ್ಷಕ ಸಾಧನಗಳೊಂದಿಗೆ ಪುಟ್ಟ…
ಮಂಗಳೂರು: ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕ್ರಿಮಿನಲ್ ಚಟುವಟಿಕೆಗಳಲ್ಲಿ ಭಾಗಿಯಾಗಿರುವ 19 ರೌಡಿಶೀಟರ್ಗಳಿಗೆ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಗಡಿಪಾರು ಆದೇಶ ಹೊರಡಿಸಿದ್ದಾರೆ. ಮೂಡುಬಿದಿರೆಯ ಅತ್ತೂರು ನಸೀಬ್, ಕಾಟಿಪಳ್ಳದ ಶ್ರೀನಿವಾಸ್ ಎಚ್., ಬಜ್ಪೆ ಶಾಂತಿಗುಡ್ಡದ ಸಫ್ವಾನ್, ಬೋಂದೆಲ್ನ ಜಯೇಶ್ ಯಾನೆ ಸಾಚು, ನೀರುಮಾರ್ಗದ ಭಟ್ರಕೋಡಿಯ ವರುಣ್ ಪೂಜಾರಿ, ಅಶೋಕ ನಗರದ ಅಝೀಝ್, ಕಾವೂರಿನ ಇಶಾಮ್, ಸುರತ್ಕಲ್ ಇಡ್ಯಾದ ಕಾರ್ತಿಕ್ ಶೆಟ್ಟಿ, ಕೈಕಂಬ-ಗಣೇಶ್ಪುರದ ದೀಕ್ಷಿತ್ ಪೂಜಾರಿ, ಕೃಷ್ಣಾಪುರದ ಲಕ್ಷ್ಮೀಶ ಉಳ್ಳಾಲ, ಬೊಂಡಂತಿಲದ ಕಿಶೋರ್ ಸನಿಲ್, ಉಳ್ಳಾಲ ಕೋಡಿಯ ಹಸೈನಾರ್ ಅಲಿ, ಕುದ್ರೋಳಿ ಕರ್ಬಲಾ ರಸ್ತೆಯ ಅಬ್ದುಲ್ ಜಲೀಲ್, ಬೋಳೂರಿನ ರೋಶನ್ ಕಿಣಿ, ಕಸಬಾ ಬೆಂಗರೆಯ ಅಹ್ಮದ್ ಸಿನಾನ್, ಜಪ್ಪಿನಮೊಗರಿನ ದಿತೇಶ್ ಕುಮಾರ್, ಬಜಾಲ್ ಕುತ್ತಡ್ಕದ ಗುರುಪ್ರಸಾದ್, ಭರತ್ ಪೂಜಾರಿ, ಜಪ್ಪು ಕುಡ್ಪಾಡಿಯ ಸಂದೀಪ್ ಶೆಟ್ಟಿ ವಿರುದ್ಧ ಗಡಿಪಾರು ಆದೇಶ ಹೊರಡಿಸಲಾಗಿದೆ. ಈ ರೌಡಿಶೀಟರ್ಗಳ ವಿರುದ್ಧ ವಿವಿಧ ಠಾಣೆಗಳಲ್ಲಿ ಹಲವು ಪ್ರಕರಣಗಳು ದಾಖಲಾಗಿದ್ದು,…
ಉಡುಪಿ: ಉಡುಪಿಯ ಖಾಸಗಿ ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾ ಕೋರ್ಟ್ ಗೆ ಸಿಐಡಿ ಚಾರ್ಜ್ಶೀಟ್ ಸಲ್ಲಿಸಲಾಗಿದೆ. ವಿಧಿವಿಜ್ಞಾನ ಪ್ರಯೋಗಾಲಯದ ವರದಿಗಾಗಿ ಕಾಯುತ್ತಿದ್ದ ಸಿಐಡಿ, ಇದೀಗ ಎಫ್ಎಸ್ಎಲ್ ವರದಿ ಬಂದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಲಾಗಿದೆ. 2023ರ ಜುಲೈ 18ರಂದು ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಮಾಡಿದ್ದ ಘಟನೆ ನಡೆದಿತ್ತು. ಬಳಿಕ ಇದು ದೊಡ್ಡ ವಿವಾದವಾಗಿತ್ತು. ನಂತರ ಸರ್ಕಾರ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಿತ್ತು.
ಸುಳ್ಯ: ದಕ್ಷಿಣಕನ್ನಡ ಹಾಗೂ ಕೊಡಗಿನ ಗಡಿಭಾಗ ಕಲ್ಮಕಾರಿನ ಗಡಿಯೊಂದರಲ್ಲಿ ದಿನಸಿ ಅಂಗಡಿಯಲ್ಲಿ ಸಾಮಾಗ್ರಿ ಖರೀದಿಸಿದ್ದ ನಕ್ಸಲರ ತಂಡದ ಪತ್ತೆಗಾಗಿ ಕೂಂಬಿಂಗ್ ಕಾರ್ಯಾಚರಣೆ ಮುಂದುವರೆಸಲಾಗಿದೆ. ದಕ್ಷಿಣ ಕನ್ನಡ ಗಡಿ ಮತ್ತು ಮಡಿಕೇರಿ ತಾಲ್ಲೂಕಿನ ಕಡಮಕಲ್ಲು, ಕೂಜಿಮಲೆ ಅರಣ್ಯ ವ್ಯಾಪ್ತಿಯ ಕಲ್ಮಕಾಡು ಗ್ರಾಮದಲ್ಲಿ ಎರಡು ದಿನಗಳ ಹಿಂದೆ ನಾಲ್ವರು ಬಂದೂಕುದಾರಿಗಳು ಆಗಮಿಸಿದ್ದರು. ಗ್ರಾಮದ ಅಂಗಡಿಯೊಂದಕ್ಕೆ ಆಗಮಿಸಿದ ಅವರು, 25 ಕೆಜಿ ಅಕ್ಕಿ ಸೇರಿ ಸುಮಾರು 3,500 ರೂಪಾಯಿಯ ದಿನಸಿ ಪದಾರ್ಥವನ್ನ ಖರೀದಿಸಿ ಅಲ್ಲಿಂದ ತೆರಳಿದ್ದಾರೆ. ತಂಡದಲ್ಲಿ ಇಬ್ಬರು ಪುರುಷರು ಹಾಗೂ ಇಬ್ಬರು ಮಹಿಳೆಯರಿದ್ದರು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.ಇದೀಗ ಪತ್ತೆಯಾದ ನಕ್ಸಲರ ಪತ್ತೆಗೆ ಕೂಂಬಿಂಗ್ ಕಾರ್ಯಾಚರಣೆ ಮುಂದುವರೆಸಲಾಗಿದ್ದು, ನಕ್ಸಲ್ ನಿಗ್ರಹ ದಳದ 3 ತುಕಡಿಯಿಂದ ಕೂಂಬಿಂಗ್ ಕಾರ್ಯಾಚರಣೆ ನಡೆಯುತ್ತಿದೆ. ಅಲ್ಲದೆ ನಕ್ಸಲ್ ರ ಪತ್ತೆಗೆ ಡ್ರೋನ್ ಕ್ಯಾಮರಾ ನೆರವನ್ನು ಬಳಸಲಾಗಿದೆ.
ಪುತ್ತೂರು: ಅಂಗನವಾಡಿ ಕೇಂದ್ರದ ಬೀಗ ಮುರಿದು ಒಳನುಗ್ಗಿದ ಕಿಡಿಗೇಡಿಗಳು ಪುಟಾಣಿಗಳಿಗೆಂದು ಇಡಲಾಗಿದ್ದ ಕೋಳಿ ಮೊಟ್ಟೆಗಳನ್ನು ಆಮ್ಲೆಟ್ ಮಾಡಿ ತಿಂದು ತೆರಳಿರುವ ಘಟನೆ ಮಾ. 18ರಂದು ಬೆಳಕಿಗೆ ಬಂದಿದೆ. ನೆಲ್ಲಿಕಟ್ಟೆಯ ಶ್ರೀ ರಾಮಕೃಷ್ಣ ಸಮಾಜ ಸೇವಾ ಸಂಸ್ಥೆಯ ಬಳಿಯ ಅಂಗನವಾಡಿ ಕೇಂದ್ರಕ್ಕೆ ಬೆಳಿಗ್ಗೆ ಅಂಗನವಾಡಿ ಕಾರ್ಯಕರ್ತೆ ಬಂದಾಗ ಕೇಂದ್ರದ ಬಾಗಿಲ ಬೀಗ ಒಡೆದಿತ್ತು. ಒಳಗೆ ನೋಡಿದಾಗ ಅಡುಗೆ ಕೋಣೆಯಲ್ಲಿ ಪುಟಾಣಿಗಳಿಗೆಂದು ದಾಸ್ತಾನಿರಿಸಲಾಗಿದ್ದ ಮೊಟ್ಟೆಗಳು ಒಡೆದಿದ್ದು, ಪಕ್ಕದಲ್ಲಿರುವ ಗ್ಯಾಸ್ ಸ್ಟವ್ ನ ಬಾನಲೆಯಲ್ಲಿ ಆಮ್ಲೆಟ್ ತುಂಡು ಇರುವುದು ಕಂಡುಬಂದಿದೆ. ಯಾರೋ ಕಿಡಿಗೇಡಿಗಳು ರಾತ್ರಿ ವೇಳೆ ಅಂಗನವಾಡಿಗೆ ನುಗ್ಗಿ ಆಮ್ಲೆಟ್ ಮಾಡಿ ತಿಂದು ಹೋಗಿದ್ದಾರೆ. ಘಟನೆ ಕುರಿತು ಪೊಲೀಸರಿಗೆ ದೂರು ನೀಡಲಾಗಿದೆ.
ಮಂಗಳೂರು: ಕರ್ನಾಟಕದ 22ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಾರ್ಚ್ 23ರಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ. ಬೀದರ್ನಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ. ಕೊಪ್ಪಳದಲ್ಲಿ ಮಾರ್ಚ್ 21ರಿಂದ 2 ದಿನಗಳ ಕಾಲ ಮಳೆಯಾಗಲಿದೆ, ಇನ್ನು ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗದಲ್ಲಿ ಮಾರ್ಚ್ 22ರಿಂದ ನಾಲ್ಕು ದಿನಗಳ ಕಾಲ ಮಳೆಯಾಗಲಿದೆ. ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮುಂದಿನ 1 ವಾರಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಂಗಳೂರು: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಮಾ. 14ರಂದು ವಶಕ್ಕೆ ಪಡೆದ ಘಟನೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತಿರುವೈಲ್ ಗ್ರಾಮದ ವಾಮಾಂಜೂರು ಗ್ರಾಮದಲ್ಲಿ ನಡೆದಿದೆ.ಆರೋಪಿಗಳನ್ನು ದೇರಳಕಟ್ಟೆ ಬೆಳ್ಮ ಗ್ರಾಮದ ಕನಕೂರು ಪದವು ಮನೆ ನಿವಾಸಿ ಅಶ್ರಫ್ ಯಾನೆ ಪೊಂಗ ಅಶ್ರಫ್ (30), ಅದೇ ಗ್ರಾಮದ ತಿಲಕನಗರ ನಿವಾಸಿ ಮೊಹಮ್ಮದ್ ಅಲ್ಫಾಜ್ (26) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ 115 ಗ್ರಾಂ ಮೌಲ್ಯದ ಗಾಂಜಾ, ಮೊಬೈಲ್ ಫೋನ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನು ಪೊಲೀಸರು ವಶಕ್ಕೆ ಪಡೆದ ಸೊತ್ತುಗಳ ಒಟ್ಟು ಮೌಲ್ಯ 10,300 ರೂ. ಆಗಿದೆ. ಈ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ.ಎಸ್ ಕಾಯ್ದೆ ಪ್ರಕರಣ ದಾಖಲಾಗಿರುತ್ತದೆ. ಆರೋಪಿ ಅಶ್ರಫ್ ಯಾನೆ ಪೊಂಗ ಆಶ್ರಫ್ ಮೇಲೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ವಾರೆಂಟ್ ಜಾರಿಯಲ್ಲಿದೆ. ಈತ ಸುಮಾರು 6 ತಿಂಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.
ಬಂಟ್ವಾಳ: ಸ್ನೇಹಿತರ ಜೊತೆಯಲ್ಲಿ ಈಜಲು ಬಂದ ಐವರ ಪೈಕಿ ವ್ಯಕ್ತಿಯೋರ್ವನು ನೇತ್ರಾವತಿ ನದಿಯಲ್ಲಿ ಬಿದ್ದು ಸಾವನ್ನಪ್ಪಿದ ಘಟನೆ ಶಂಭೂರು ಗ್ರಾಮದ ದೇವಸ್ಥಾನವೊಂದರ ಸಮೀಪ ನದಿಯಲ್ಲಿ ಸೋಮವಾರ ಸಂಜೆ ವೇಳೆ ನಡೆದಿದೆ. ಬೆಳ್ತಂಗಡಿ ನಿವಾಸಿ ಲೋಹಿತಾಕ್ಷ ಮೃತಪಟ್ಟ ವ್ಯಕ್ತಿ. ಬೆಳ್ತಂಗಡಿ ನಿವಾಸಿಗಳಾದ ವಿನ್ಸಿ,ಮ್ಯಾಕ್ಸಿ,ಪ್ರಮೋದ್, ದಯಾನಂದ ಎಂಬವರ ಜೊತೆಗೆ ನೇತ್ರಾವತಿ ನದಿಗೆ ಈಜಾಡಲು ಬಂದಿದ್ಧ ವೇಳೆ ಘಟನೆ ನಡೆದಿದೆ. ವಿನ್ಸಿ ಎಂಬವರ ಪತ್ನಿಯ ಮನೆ ಶಂಭೂರಿನಲ್ಲಿದ್ದು, ಇಲ್ಲಿಗೆ ಆಗ್ಗಾಗ್ಗೆ ಬಂದು ನೇತ್ರಾವತಿ ನದಿಯಲ್ಲಿ ಸ್ನಾನ ಮಾಡಿ ಹೋಗುತ್ತಿದ್ದರು ಎಂದು ಹೇಳಲಾಗಿದೆ.ಇಂದು ಕೂಡ ಅದೇ ರೀತಿ ಸ್ನೇಹಿತರು ಬೆಳ್ತಂಗಡಿಯಿಂದ ಕಾರಿನಲ್ಲಿ ಬಂದಿದ್ದು, ನದಿಗೆ ಸ್ನಾನ ಮಾಡಲು ಬಂದಿದ್ದರು. ಸಂಜೆ ಸುಮಾರು 4 ಗಂಟೆ ವೇಳೆಗೆ ನದಿಯಿಂದ ಲೋಹಿತಾಕ್ಷ ಅವರು ಕಾರಿನ ಬಳಿಗೆ ಹೋಗುವುದಾಗಿ ಬಂದಿದ್ದರು. ಆದರೆ ಸ್ನೇಹಿತರು ಸ್ನಾನ ಮುಗಿಸಿ ಕಾರಿನತ್ತ ಬಂದಾಗ ಈತ ಕಾರಿನ ಬಳಿ ಇಲ್ಲದಿರುವುದನ್ನು ಕಂಡು ಗಾಬರಿಯಾಗಿ ಮತ್ತೆ ನದಿಯತ್ತ ತೆರಳಿದಾಗ ನದಿಯ ಬದಿ ನೀರಿನಲ್ಲಿ ಬಿದ್ದಿದ್ದರು. ಬಿದ್ದ ವೇಳೆ ತಲೆಯ ಭಾಗಕ್ಕೆ…
ಮಂಗಳೂರು: ಗೋವಾ ರಾಜ್ಯದಿಂದ ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ನಿಷೇದಿತ ಮಾದಕ ವಸ್ತುವಾದ ಕೋಕೇನ್ ನ್ನು ಸಾಗಾಟ/ಮಾರಾಟ ಮಾಡುತ್ತಿದ್ದವರನ್ನು ಪತ್ತೆ ಹಚ್ಚಿ 35 ಗ್ರಾಂ ಕೋಕೆನ್ ನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ. ಬಂಧಿತರನ್ನು ಮಂಗಳೂರಿನ ಸದಕತ್.ಯು ಆಲಿಯಾಸ್ ಶಾನ್ ನವಾಜ್(31), ಮಹಮ್ಮದ್ ಅಶ್ಫಕ್ ಆಲಿಯಾಸ್ ಅಶ್ಫಾ(25) ಎಂದು ಗುರುತಿಸಲಾಗಿದೆ. ಆರೋಪಿಗಳು ಮಂಗಳೂರು ನಗರಕ್ಕೆ ಗೋವಾ ರಾಜ್ಯದಿಂದ ನಿಷೇದಿತ ಮಾದಕ ವಸ್ತುವಾದ ಕೋಕೆನ್ ನ್ನು ಖರೀದಿಸಿಕೊಂಡು ಸಾಗಾಟ/ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ ಹೆಚ್ ಎಂ ನೇತೃತ್ವದ ಸಿಸಿಬಿ ಪೊಲೀಸರು ಉಳ್ಳಾಲ ತಾಲೂಕು ಆಂಬ್ಲಮೊಗರು ಗ್ರಾಮದ ಎಲಿಯಾರ್ ಪದವು ಮೈದಾನದ ಬಳಿ ದಾಳಿ ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ.ಬಂಧಿತರಪಿಂದ ರೂ. 2,72,000/- ರೂ ಮೌಲ್ಯದ 35 ಗ್ರಾಂ ನಿಷೇಧಿತ ಮಾದಕ ವಸ್ತು ಕೋಕೆನ್, 3 ಮೊಬೈಲ್ ಫೋನ್ ಗಳನ್ನು, ಡಿಜಿಟಲ್ ತೂಕ ಮಾಪಕ, ನಗದು ರೂ. 5560/-ನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ…










