Author: main-admin

ಮಡಿಕೇರಿ : 6 ವರ್ಷದ ಬಳಿಕ ಮತ್ತೆ ಕೊಡಗಿನಲ್ಲಿ ಪ್ರತ್ಯಕ್ಷಗೊಂಡ ನಕ್ಸಲರು ಸುಳ್ಯ ಸಮಪಾಜೆ ಗಡಿಯ ಮಡಿಕೇರಿ ಭಾಗದ ಕಡಮಕಲ್ಲು ಬಳಿಯ ಕೂಜಿಮಲೆ ರಬ್ಬರ್ ಎಸ್ಟೇಟ್ ಬಳಿ ಕಾಣಿಸಿಕೊಂಡಿದ್ದಾರೆ . 8 ಜನರ ನಕ್ಸಲ್ ತಂಡ ಶನಿವಾರ ಸಂಜೆ ಪ್ರತ್ಯಕ್ಷ ವಾಗಿದ್ದರೆಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಮಡಿಕೇರಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು,ಗುತ್ತಿಗಾರು, ಕೊಲ್ಲಮೊಗರು, ಕಲ್ಮಕರ್, ಬಳಿಯ ಕೂಜಿಮಲೆ ರಬ್ಬರ್ ಎಸ್ಟೇಟ್ ಪ್ರದೇಶದಲ್ಲಿ ನಕ್ಸಲರು ಬೀಡು ಬಿಟ್ಟಿದ್ದಾರೆ ಎಂದು ಹೇಳಲಾಗಿದೆ. ಕೂಜಿಮಲೆ ಅಂಗಡಿಯೊಂದರಿಂದ 4 ಸಾವಿರ ರೂಪಾಯಿ ನಗದು ನೀಡಿ ದಿನಸಿ ಸಾಮಗ್ರಿ ಖರೀದಿಸಿ ತೆರಳಿದ್ದಾರೆ ಎಂದು ಹೇಳಲಾಗಿದೆ. 2012 ರಲ್ಲಿ ಕಾಲೂರು ಗ್ರಾಮದಲ್ಲಿ ಪ್ರತ್ಯಕ್ಷಗೊಂಡಿದ್ದರು.2018 ರಲ್ಲೂ ಫೆಬ್ರವರಿ ತಿಂಗಳಿನಲ್ಲಿ ಇದೆ ವ್ಯಾಪ್ತಿ ಸಂಪಾಜೆ ಗುಡ್ಡೆಗದ್ದೆಯಲ್ಲಿ ಪ್ರತ್ಯಕ್ಷಗೊಂಡಿದ್ದ ತಂಡ. ಲೋಕಸಭಾ ಚುನಾವಣೆ ಹಿನ್ನಲೆ ನಕ್ಸಲರು ಆಕ್ಟಿವ್ ಆಗಿದ್ದು ಕೇರಳದಿಂದ ಬಂದಿರಬಹುದೆಂದು ಶಂಕಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕೊಡಗು ಜಿಲ್ಲೆಯ ಗಡಿ ಭಾಗದಲ್ಲಿ ಪೊಲೀಸರಿಂದ ಕಟ್ಟೆಚ್ಚರ ವಹಿಸಿದ್ದು ತಪಾಸಣೆ ನಡೆಸುತ್ತಿದ್ದಾರೆ.

Read More

ಉಳ್ಳಾಲ: ಬೈಕ್ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೋರ್ವರು ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದ ಘಟನೆ ತಲಪಾಡಿಯಲ್ಲಿ ನಡೆದಿದೆ. ತಲಪಾಡಿ ಹಳೆಯ ಬಸ್ಸು ತಂಗುದಾಣ ಬಳಿಯ ನಿವಾಸಿ ರಾಜೇಶ್ ಶೆಟ್ಟಿ(49) ಮೃತ ವ್ಯಕ್ತಿ. ರಾಜೇಶ್ ಅವರಿಗೆ ತಲಪಾಡಿ ಹಳೆ ಬಸ್ ತಂಗುದಾಣದ ಬಳಿ ಬೇಕರಿ ಇದ್ದು, ಎದುರು ಭಾಗದ ಹೆದ್ದಾರಿ ಬದಿಯಲ್ಲೇ ಮನೆ ಹೊಂದಿದ್ದಾರೆ. ಭಾನುವಾರ ತಲಪಾಡಿ ದೇವಿಪುರದಲ್ಲಿ ರಥೋತ್ಸವ ಇದ್ದ ಹಿನ್ನೆಲೆ ರಾಜೇಶ್ ಅವರು ಮನೆಗೆ ಬಂದಿದ್ದ ನೆಂಟರನ್ನ ಉಪಚರಿಸಿ ಮಧ್ಯಾಹ್ನ ವೇಳೆ ಬೇಕರಿಗೆ ತೆರಳುತ್ತಿದ್ದರು. ಹೆದ್ದಾರಿ ದಾಟಲು ನಿಂತಿದ್ದ ವೇಳೆ ರಸ್ತೆಯ ವಿರುದ್ಧ ದಿಕ್ಕಿನಲ್ಲಿ ಧಾವಿಸಿ ಬಂದಿದ್ದ ಬೈಕ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಸ್ತೆಗೆಸೆಯಲ್ಪಟ್ಟ ರಾಜೇಶ್ ತಲೆಗೆ ಗಂಭೀರ ಗಾಯವಾಗಿತ್ತು. ತಕ್ಷಣ ಅವರನ್ನ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ. ಮೃತ ರಾಜೇಶ್ ಅವರಿಗೆ ಪತ್ನಿ ಮತ್ತು ಇಬ್ಬರು ಪುತ್ರಿಯರಿದ್ದಾರೆ. ಹಿರಿಯ ಮಗಳು ಪದವಿ ಶಿಕ್ಷಣ ಪಡೆಯುತ್ತಿದ್ದು, ಕಿರಿಯ…

Read More

ಅಪ್ರಾಪ್ತ ಬಾಲಕನೋರ್ವ ಚಲಾಯಿಸುತ್ತಿದ್ದ ಕಾರು ನಿಯಂತ್ರಣ ಕಳೆದುಕೊಂಡ ಪರಿಣಾಮ ರೆಸಾರ್ಟ್ ವೊಂದರ ಕಾಂಪೌಂಡ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಇಬ್ಬರು ಮಹಿಳೆಯರು ಗಂಭೀರ ಗಾಯಗೊಂಡಿರುವ ಘಟನೆ ಸುಂಟಿಕೊಪ್ಪ ಸಮೀಪದ ಹೇರೂರು ಜಂಗಲ್ ರೆಸಾರ್ಟ್ ನ ಸಮೀಪದಲ್ಲಿ ನಡೆದಿದೆ. 7ನೇ ಹೊಸಕೋಟೆ ಕಲ್ಲೂರು ಗ್ರಾಮದ ಅಬ್ಬಾಸ್ ಎಂಬುವವರ ಅಪ್ರಾಪ್ತ ಪುತ್ರ ಆಲ್ಟೊ ಕಾರನ್ನು ಬಾಡಿಗೆಗೆ ಪಡೆದುಕೊಂಡಿದ್ದಾನೆ. ಈತ ಕಾರನ್ನು ಚಲಾಯಿಸಿಕೊಂಡು ಬಸವನಹಳ್ಳಿ ಮಾರ್ಗವಾಗಿ ಅತೀ ವೇಗದಿಂದ ಬಂದಿದ್ದಾನೆ. ಆದರೆ ಅದಾಗಲೇ ನಿಯಂತ್ರಣ ಕಳೆದುಕೊಂಡಿದ್ದ ಕಾರು ರಸ್ತೆಯ ಇನ್ನೊಂದು ಬದಿಯಲ್ಲಿರುವ ರೆಸಾರ್ಟ್ ನ ವಾಹನ ಪಾರ್ಕಿಂಗ್ ಮಾಡುವ ಸ್ಥಳದಲ್ಲಿನ ಕಾಂಪೌಂಡ್ ಗೆ ಅಪ್ಪಳಿಸಿ ರಸ್ತೆಯಲ್ಲಿ ಮೂರು ಸಲ ಪಲ್ಟಿ ಹೊಡೆದಿದೆ. ಈ ಸಂದರ್ಭ ರೆಸಾರ್ಟ್ ನ ವಾಹನ ಪಾರ್ಕಿಂಗ್ ಮಾಡುವ ಸ್ಥಳದಲ್ಲಿ ಕಾಂಪೌಂಡ್ ಸಮೀಪ ಕರ್ತವ್ಯ ನಿರತರಾಗಿದ್ದ ಇಬ್ಬರು ಮಹಿಳಾ ಸಿಬ್ಬಂದಿಗಳಿಗೆ ಕೂಡ ಕಾರು ಡಿಕ್ಕಿಯಾಗಿದ್ದು, ಗಂಭೀರವಾಗಿ ಗಾಯಗೊಂಡು ಚಿಂತಾಜನಕರಾಗಿರುವ ಇವರನ್ನು ಮೈಸೂರು ಆಸ್ಪತ್ರೆಗೆ ರವಾನಿಸಲಾಗಿದೆ. ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಶನಿವಾರ ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಎಎಸ್ಐ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಳಗಾವಿಯ ಯರಗಟ್ಟಿ ಪಟ್ಟಣದಲ್ಲಿ ನಡೆದಿದೆ. ಯರಗಟ್ಟಿ ಪಟ್ಟಣದ ವಿಜಯಕಾಂತ ಮಿಕಲಿ (51) ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಎಎಸ್ಐ ಆಗಿದ್ದಾರೆ. ಘಟನೆ ಬೆನ್ನಲ್ಲೇ ದೊಡವಾಡ ಠಾಣೆ ಪಿಎಸ್ಐ‌‌ ನಂದೀಶರನ್ನು ಅಮಾನತು ಮಾಡಿ ಬೆಳಗಾವಿ ಎಸ್ಪಿ ಡಾ. ಭೀಮಾಶಂಕರ ಗುಳೇದ ಆದೇಶ ಹೊರಡಿಸಿದ್ದಾರೆ. ಹೆಲ್ಮೆಟ್ ಧರಿಸದೇ ಬೈಕ್ ಚಲಾಯಿಸಿದ್ದೇ ಎಎಸ್ಐ ಸಾವಿಗೆ ಕಾರಣ ಎಂಬುದು ಸಾಬೀತಾಗಿದೆ. ವಿಜಯಕಾಂತ ಮಿಕಲಿ ಬೈಲಹೊಂಗಲ ತಾಲೂಕಿನ ದೊಡವಾಡ ಠಾಣೆಯಲ್ಲಿ ಎಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕರ್ತವ್ಯ ಮುಗಿಸಿ ಯರಗಟ್ಟಿಯಲ್ಲಿರುವ ಮನೆಗೆ ಬರುವಾಗ ರಸ್ತೆ ಅಪಘಾತ ಸಂಭವಿಸಿದೆ. ಅತಿವೇಗದಿಂದ ಬೈಕ್ ಚಲಾಯಿಸುವಾಗ ಹಂಪ್ ಜಿಗಿಸಿ ರಸ್ತೆ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ. ಕೆಲ ತಿಂಗಳ ಹಿಂದೆಯೇ ಎಲ್ಲ ಪೊಲೀಸರು ಹೆಲ್ಮೆಟ್ ಧರಿಸುವುದನ್ನು ಬೆಳಗಾವಿ ಎಸ್ಪಿ ಕಡ್ಡಾಯಗೊಳಿಸಿದ್ದಾರೆ. ಮೇಲಾಧಿಕಾರಿಗಳ ನಿರ್ದೇಶನ ಸಮರ್ಪಕವಾಗಿ ಅನುಷ್ಠಾನಗೊಳಿಸದೇ ನಿರ್ಲಕ್ಷ್ಯ ವಹಿಸಿದ್ದಾರೆ. ಈ ಕಾರಣಕ್ಕೆ ‌ದೊಡವಾಡ ಠಾಣೆ ‌ಪಿಎಸ್ಐ ನಂದೀಶ ಅಮಾನತು ಮಾಡಿ…

Read More

ಕಾರ್ಕಳ: ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿಯೋರ್ವರು ಸಾವನ್ನಪ್ಪಿದ ಘಟನೆ ಕಾರ್ಕಳ ಕುಕ್ಕುಂದೂರು ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಕುಕ್ಕುಂದೂರು ಗ್ರಾಮದ ಸದಾನಂದ ಪೂಜಾರಿ (40) ಎಂದು ಗುರುತಿಸಲಾಗಿದೆ. ಶುಕ್ರವಾರ ರಾತ್ರಿ ಮನೆಯಲ್ಲಿ ಮಲಗಿದ್ದ ಸದಾನಂದ ಅವರ ಮೃತದೇಹ ಶನಿವಾರ ಬೆಳಿಗ್ಗೆ ಮನೆ ಎದುರಿನ ತೆರೆದ ಬಾವಿಯಲ್ಲಿ ಪತ್ತೆಯಾಗಿತ್ತು. ರಾತ್ರಿ ನಿದ್ದೆಯಿಂದ ಎದ್ದು ಮನೆ ಹೊರಗಡೆ ಬಂದ ಸದಾನಂದರು ಆಕಸ್ಮಿಕವಾಗಿ ಬಾವಿಗೆ ಬಿದ್ದಿರಬೇಕೆಂದು ಶಂಕಿಸಲಾಗಿದೆ. ಬೆಂಗಳೂರಿನಲ್ಲಿ ಭಾರತ್ ಕೋ-ಆಪರೇಟಿವ್ ಬ್ಯಾಂಕ್ ಸಿಬ್ಬಂದಿಯಾಗಿದ್ದ ಸದಾನಂದ ಅವರು ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿದ್ದುಕೊಂಡು ಹತ್ತಾರು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ಅವಿವಾಹಿತರಾಗಿದ್ದ ಸದಾನಂದ ಅವರು ತಂದೆ, ತಾಯಿ, ಸಹೋದರನನ್ನು ಅಗಲಿದ್ದಾರೆ.

Read More

ಪಡುಬಿದ್ರಿ: ಹೆಜಮಾಡಿ ಗ್ರಾಮದ ಕ್ರಿಸ್ಟನ್ ಡಿ’ಸೋಜಾ ಅವರಿಗೆ 2023ರ ಅಕ್ಟೋಬರ್‌ನಿಂದ 2024ರ ಫೆಬ್ರವರಿವರೆಗೆ ಬೇರೆ ಬೇರೆ ದಿನಗಳಲ್ಲಿ ಗ್ಲೋಬಲ್ ಕೆರಿಯರ್ ಸೊಲ್ಯೂಶನ್ ಎಂಬ ಕಂಪೆನಿಯ ಹೆಸರಿನಲ್ಲಿ ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಈರ್ವರು 4,42,645 ಲಕ್ಷ ರೂ. ವಂಚಿಸಿರುವುದಾಗಿ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಮಿತ್ ಮತ್ತು ಸುಭಾಸ್ ಎಂಬವರು ಒಟ್ಟು 3 ಮೊಬೈಲ್‌ ನಂಬರ್‌ಗಳಿಂದ ಪರಿಚಯಿಸಿಕೊಂಡು, ಕರೆ ಮಾಡಿ ಕ್ರಿಸ್ಟನ್‌ರಿಂದ ಹಣವನ್ನು ಗೂಗಲ್ ಪೇ ಮೂಲಕ ಪಡೆದು, ಉದ್ಯೋಗವನ್ನೂ ನೀಡಲೇ, ಹಣವನ್ನೂ ಹಿಂತಿರುಗಿಸದೇ ಮೋಸ ಮಾಡಿರುವುದಾಗಿ ದೂರಲ್ಲಿ ವಿವರಿಸಲಾಗಿದೆ.

Read More

ಉಡುಪಿ: ಭಕ್ತನ ರೂಪದಲ್ಲಿ ದೈವಸ್ಥಾನಕ್ಕೆ ಬಂದ ಅನಾಮಿಕ, ಕ್ಷೇತ್ರದ ಕಾಣಿಕೆ ಡಬ್ಬಿ ಎಗರಿಸಿ ಪರಾರಿಯಾದ ಘಟನೆ ಉಡುಪಿ ಉದ್ಯಾವರ ಬಳಿಯ ಕಂಪನಬೆಟ್ಟು ಬಬ್ಬುಸ್ವಾಮಿ ದೈವಸ್ಥಾನದಲ್ಲಿ ತಡರಾತ್ರಿ ಕಳ್ಳತನವಾಗಿದೆ ಸಿಸಿಟಿವಿ ಅಳವಡಿಕೆ ಆಗಿರುವುದು ಗಮನಕ್ಕೆ ಬಂದರೂ ಹುಂಡಿಯಿಂದ ಕಳ್ಳತನ ಮಾಡಿದ್ದಾನೆ. ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿಸಿಟಿವಿ ವಿಡಿಯೋ ಲಭ್ಯವಾಗಿದ್ದು, ಪೊಲೀಸರು ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದಾರೆ.

Read More

ಸುರತ್ಕಲ್: ಸುರತ್ಕಲ್ ನ ಮಂಗಳಪೇಟೆ ನಿವಾಸಿ ಮುಹಮ್ಮದ್ ಫಾಝೀಲ್ ಅವರ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಪ್ರಮುಖ ಮೂವರು ಆರೋಪಿಗಳಿಗೆ ರಾಜ್ಯ ಉಚ್ಛ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ. ಪ್ರಕರಣದ ಪ್ರಮುಖ ಆರೋಪಿಗಳಾದ ಕವ್ವಳಮಡೂರು ಗ್ರಾಮ, ಬಂಟ್ವಾಳ ತಾಲೂಕು ನಿವಾಸಿ ಸುಹಾಸ್ ಶೆಟ್ಟಿ ಯಾನೆ ಸುಭಾಶ್, ಕಾಟಿಪಳ್ಳ 3ನೇ ಬ್ಲಾಕ್ ನಿವಾಸಿ ಅಭಿಷೆಕ್ ಯಾನೆ ಅಭಿ, ಕುಳಾಯಿ ನಿವಾಸಿ ಮೋಹನ್ ಸಿಂಗ್ ಯಾನೆ ನೇಪಾಲಿ ಮೋಹನ್ ಗೆ ಹೈಕೋರ್ಟ್ ಜಾಮೀನು ನೀಡಿ ಆದೇಶಿಸಿದೆ ಎಂದು ತಿಳಿದು ಬಂದಿದೆ. ಫಾಝಿಲ್ ಕೊಲೆ ಕುರಿತು ಸುರತ್ಕಲ್ ಪೊಲೀಸರು ಈ ಮೂವರನ್ನು ಎ1, ಎ2, ಮತ್ತು ಎ3 ಆರೋಪಿಗಳೆಂದು ಗುರುತಿಸಿ ಮಂಗಳೂರು ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು ಎಂದು ತಿಳಿದು ಬಂದಿದೆ. ಪ್ರಕರಣದಲ್ಲಿ ಜಾಮಿನುಕೋರಿ ಆರೋಪಿಗಳ ಪರ ವಕೀಲರು ರಾಜ್ಯ ಉಚ್ಛ ನ್ಯಾಯಾಲಯದಲ್ಲಿ ಮನವಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಈ ಮೂವರಿಗೆ ನ್ಯಾಯಾಲಯವು ಆರೋಪಿಗಳು ತಲಾ ಒಂದು ಲಕ್ಷ ರೂ. ಬಾಂಡ್ ನ್ಯಾಯಾಲಯಕ್ಕೆ ಕಟ್ಟಬೇಕು. ಪ್ರಕರಣ…

Read More

ಬೆಳ್ತಂಗಡಿ: ಆಟೋ ರಿಕ್ಷಾ ಡಿಕ್ಕಿಯಾಗಿ ಮೂರು ವರ್ಷದ ಕಂದಮ್ಮ ಸಾವನ್ನಪ್ಪಿರುವ ಘಟನೆ ಸೋಣಂದೂರು ಪಣಕಜೆಯಲ್ಲಿ ನಡೆದಿದೆ. ಪಣಕಜೆ ಮುಂಡಾಡಿ ನಿವಾಸಿ ಚಂದ್ರಶೇಖರ್ ಮತ್ತು ಉಷಾ ದಂಪತಿಯ ಪುತ್ರ ಕೌಶಿಕ್ ಮೃತಪಟ್ಟ ಮಗು.ಮುಂಡಾಡಿಯಲ್ಲಿ ಚಂದ್ರಶೇಖ‌ರ್ ಅವರ ಮನೆ ರಸ್ತೆಯ ಹತ್ತಿರವಿದ್ದು, ಮನೆಯಲ್ಲಿದ್ದ ಮಗು ಓಡಿ ರಸ್ತೆಗೆ ಬಂದಿದೆ ಎನ್ನಲಾಗಿದೆ. ಈ ವೇಳೆ ಅದೇ ಸಮಯಕ್ಕೆ ಬಂದ ಮಗುವಿಗೆ ರಿಕ್ಷಾ ತಾಗಿ ಗಂಭೀರ ಗಾಯಗೊಂಡಿದ್ದು, ಮಗುವನ್ನು ಕೂಡಲೇ ಉಜಿರೆ ಖಾಸಗಿ ಆಸ್ಪತ್ರೆಗೆ ಕರೆತಂದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದೊಯ್ದರೂ, ಮಗು ಆಸ್ಪತ್ರೆಯಲ್ಲಿ ಮೃತಪಟ್ಟಿದೆ . ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸರಿಗೆ ದೂರು ನೀಡಲಾಗಿದ್ದು, ಪ್ರಕರಣ ದಾಖಲಾಗಿದೆ.

Read More

ಭಾರತದಲ್ಲಿ 18ನೇ ಲೋಕಸಭಾ ಚುನಾವಣೆಗೆ ಮುಖ್ಯ ಚುನಾವಣಾ ಆಯೋಗ ದಿನಾಂಕವನ್ನ ಘೋಷಿಸಿದ್ದು, ದೇಶದಲ್ಲಿ 7 ಹಂತದಲ್ಲಿ ಚುನಾವಣೆ ನಡೆಯಲಿದೆ. ಅದ್ರಂತೆ, ಏಪ್ರಿಲ್ 19ರಿಂದ ಲೋಕಸಭೆ ಚುನಾವಣೆ ಆರಂಭವಾಗಿದೆ. ಇನ್ನು ಜೂನ್ 4ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ದೆಹಲಿ ವಿಜ್ಞಾನ ಭವನದಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಚುನಾವಣಾ ದಿನಾಂಕವನ್ನ ಪ್ರಕಟಿಸಿದ್ದಾರೆ. ಅಂದ್ಹಾಗೆ, ದೇಶದ 543 ಕ್ಷೇತ್ರಗಳಲ್ಲಿ ಈ ಚುನಾವಣೆ ನಡೆಯಿದೆ. ಇನ್ನೀದು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) ಸರ್ಕಾರದ ನೇತೃತ್ವದ ಪ್ರಸ್ತುತ ಲೋಕಸಭಾ ಅಧಿವೇಶನದ ಅಂತ್ಯವನ್ನು ಸೂಚಿಸುತ್ತದೆ. 17ನೇ ಲೋಕಸಭೆಯ ಅಧಿವೇಶನವು ಜೂನ್ 16, 2024 ರಂದು ಕೊನೆಗೊಳ್ಳಲಿದೆ. ರಾಜಕೀಯ ಪಕ್ಷಗಳು ತಮ್ಮ ಚುನಾವಣಾ ಪ್ರಚಾರವನ್ನ ಮುಂದುವರಿಸುತ್ತಿರುವುದರಿಂದ, NDA ಮತ್ತು ಇತ್ತೀಚೆಗೆ ರೂಪುಗೊಂಡ I.N.D.I.A. ಬಣವು ಮುಖಾಮುಖಿ ಯುದ್ಧಕ್ಕೆ ಸಜ್ಜಾಗಿದೆ. 2019ರ 17ನೇ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ NDA 543 ಸ್ಥಾನಗಳಲ್ಲಿ 353 ಸ್ಥಾನಗಳನ್ನು ಗಳಿಸಿತು. ಬಿಜೆಪಿ ಏಕಾಂಗಿಯಾಗಿ 303 ಸ್ಥಾನಗಳನ್ನ ಪಡೆದುಕೊಂಡಿದ್ದು, ಅಗತ್ಯ ಬಹುಮತದ 272 ಸ್ಥಾನಗಳನ್ನ ಮೀರಿದೆ.

Read More