Author: main-admin

ಶಿವಮೊಗ್ಗ : ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಸಮೀಪದ ತೋಗರ್ಸಿ ಬಳಿ, ಶಿವಮೊಗ್ಗದ ಯುವಕನೋರ್ವನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ತಡರಾತ್ರಿ ನಡೆದಿದ್ದು, ಇಂದು ಈ ವಿಚಾರ ಬೆಳಕಿಗೆ ಬಂದಿದೆ. ಇಲ್ಲಿನ ತೋಗರ್ಸಿ ಹೊರವಲಯದ ಸ್ಮಶಾನದ ಬಳಿ ಈ ಘಟನೆ ನಡೆದಿದ್ದು, ಶಿವಮೊಗ್ಗದ ಗಾಡಿಕೊಪ್ಪದ ಮೈಸೂರು ಬೀದಿ ನಿವಾಸಿ ವೀರೇಶ್ (27) ಎಂಬ ಯುವಕನೇ ಭೀಕರವಾಗಿ ಹತ್ಯೆಗೀಡಾದವ ಎಂದು ತಿಳಿದು ಬಂದಿದೆ. ಯುವಕ ವೀರೇಶ್ ನನ್ನು ಆತನ ಕಾರಿನಲ್ಲೇ ಕೂಡಿ ಹಾಕಿ ಬೆಂಕಿ ಹಚ್ಚಿ ಕೊಲೆ ಮಾಡಲಾಗಿದೆ. ಆತ ಕೊಂಡೊಯ್ದಿದ್ದ ಇನ್ನೋವಾ ಕಾರಿನ ಡಿಕ್ಕಿಯಲ್ಲಿ, ಸಂಪೂರ್ಣ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಹಂತಕರು ಕಾರಿಗೆ ಬೆಂಕಿ ಹಚ್ಚಿ ಸುಟ್ಟಿರುವುದರಿಂದ ದೇಹವು ಸಂಪೂರ್ಣ ಸುಟ್ಟು ಕರಕಲಾಗಿದೆ. ಶುಕ್ರವಾರ ರಾತ್ರಿ ಗಾಡಿಕೊಪ್ಪದ ಮನೆಯಲ್ಲಿದ್ದ ಯುವಕನಿಗೆ, ಕೆಲ ಪರಿಚಿತರು ಆತನಿ ಕರೆ ಮಾಡಿದ್ದರು ಎನ್ನಲಾಗಿದ್ದು, ಸ್ನೇಹಿತರೋರ್ವರ ಇನ್ನೋವಾ ಕಾರಿನಲ್ಲಿ ವೀರೇಶ್ ತೆರಳಿದ್ದರು. ಬಳಿಕ ಮನೆಗೆ ಹಿಂದಿರುಗಿರಲಿಲ್ಲ ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ಶಿಕಾರಿಪುರ ಡಿವೈಎಸ್‌ಪಿ ಕೇಶವ್,…

Read More

ಪಿಎಂಜೆಡಿವೈ ಯೋಜನೆಯಡಿ ಸಾಲ ಮಂಜೂರು ಮಾಡಿಕೊಡುವುದಾಗಿ ನಂಬಿಸಿ ಸಾವಿರಾರು ರೂ. ವಂಚಿಸಿರುವ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ಲೇಟ್ ಮಾಡುವ ವ್ಯವಹಾರಕ್ಕೆ ಪಿಎಂಜೆಡಿವೈ ಯೋಜನೆಯಡಿ ಜನ್‌ಧನ್ ಸಬ್ಸಿಡಿ ಲೋನ್ ಮಂಜೂರು ಮಾಡಿ ಕೊಡುವುದಾಗಿಯೂ ಬಿದ್ಕಲ್‌ಕಟ್ಟೆಯ ಹರ್ಷವರ್ಧನ (40) ಎಂಬವರಿಗೆ ಡಿ.29ರಂದು ಫೇಸ್‌ಬುಕ್ ಸಂದೇಶ ಬಂದಿದ್ದು ಅದರಂತೆ ಅವರು ಅದರಲ್ಲಿ ನಮೂದಿಸಿದ ನಂಬರಿಗೆ ಕರೆ ಮಾಡಿದ್ದರು. ಸಾಲಕ್ಕಾಗಿ ಇವರು ವೈಯಕ್ತಿಕ ಗುರುತಿನ ದಾಖಲೆಗಳನ್ನು ಕಳುಹಿಸಿದ್ದರು. ಸಾಲ ಮಂಜೂರಾತಿಗೆ ವಿವಿಧ ಶುಲ್ಕ ಪಾವತಿಸಲು ಸೂಚಿಸಿದಂತೆ ಹರ್ಷ ವರ್ಧನ ಹಂತ ಹಂತವಾಗಿ ಒಟ್ಟು 98,551ರೂ. ಹಣವನ್ನು ಪಾವತಿಸಿದರು. ಆದರೆ ಹರ್ಷವರ್ಧನಗೆ ಸಾಲ ಮಂಜೂರು ಮಾಡಿಕೊಡದೆ ನಂಬಿಸಿ ವಂಚಿಸಿರುವುದಾಗಿ ದೂರಲಾಗಿದೆ.

Read More

ಮಂಗಳೂರು: ಲೋಕಸಭಾ ಚುನಾವಣಾ ಪ್ರಣಾಳಿಕೆಗೆ ಬಿಜೆಪಿ ವಿವಿಧ ಸಲಹೆಗಳನ್ನು ಜನರಿಂದ ಪಡೆಯಲು ಉದ್ದೇಶಿಸಿದ್ದು, ಅದಕ್ಕಾಗಿ ‘ನಿಮ್ಮ ಸಲಹೆ ನಮ್ಮ ಗುರಿ’ ಎಂಬ ವಿನೂತನ ಪ್ರಯೋಗ ಆರಂಭಿಸಿದೆ. ದ.ಕ.ಜಿಲ್ಲೆಯಿಂದ 50ಸಾವಿರ ಸಲಹೆಗಳ ಗುರಿಯಿದೆ ಎಂದು ದ.ಕ.ಜಿಲ್ಲಾ ಲೋಕಸಭಾ ಚುನಾವಣಾ ಪ್ರಣಾಳಿಕಾ ಉಸ್ತುವಾರಿ ಸಿಎ ಶಾಂತರಾಂ ಶೆಟ್ಟಿ ತಿಳಿಸಿದರು. ನಗರದ ಖಾಸಗಿ ಹೊಟೇಲ್ ನಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು ಈ ಹಿಂದಿನ ಪ್ರಣಾಳಿಕೆ ಹೇಳಿರುವ 95% ಯೋಜನೆಗಳನ್ನು ಅನುಷ್ಠಾನ ಮಾಡಲಾಗಿದೆ. ಆದ್ದರಿಂದ ಈ ಬಾರಿಯ ಪ್ರಣಾಳಿಕೆಗೆ ಸಲಹೆಗಳನ್ನು ಪಡೆಯಲು ಶಾಲೆ, ಕಾಲೇಜು, ದೇವಸ್ಥಾನ, ಮಾಲ್ ಗಳಲ್ಲಿ ಸಲಹಾ ಪೆಟ್ಟಿಗೆಗಳನ್ನು ಇಡಲಾಗುತ್ತದೆ‌. ಅದಕ್ಕೆ ಜನರು ತಮ್ಮ ಸಲಹೆಗಳನ್ನು ಬರೆದು ಹಾಕಬಹುದು ಎಂದರು. ಅಲ್ಲದೆ ನಮೋ ಆ್ಯಪ್, ಮಿಸ್ ಕಾಲ್ ನೀಡಿ ಸಲಹೆ ನೀಡಲು ಅವಕಾಶವಿದೆ. 9090902024 ಸಂಖ್ಯೆಗೆ ಕರೆ ಮಾಡಬಹುದು. ಕೃಷಿ, ಹೈನುಗಾರಿಕೆ, ಮೀನುಗಾರಿಕೆ, ವೈವಿಧ್ಯಮಯ ವಿಷಯಗಳಲ್ಲಿ ಸಲಹೆಗಳನ್ನು ನೀಡಬಹುದು. ಜೊತೆಗೆ ಪ್ರತೀ ಜಿಲ್ಲೆಗೆ ಎರಡು ಎಲ್ ಇಡಿ ವಾಹನಗಳು ಸಂಚರಿಸಲಿದ್ದು, ವಿಕಸಿತ ಭಾರತದ…

Read More

ಮಂಗಳೂರು: ಮುಡಾ’ ಕಚೇರಿಯಲ್ಲಿ ಮಾ. 13ರಂದು ನಡೆದ ಲೋಕಾಯುಕ್ತ ದಾಳಿ ಸಂದರ್ಭದಲ್ಲಿ ಹಣದ ಬ್ಯಾಗ್‌ ಪತ್ತೆಯಾಗಿದ್ದು, ತನಿಖೆ ಮುಂದುವರಿದಿದೆ ಎಂದು ಲೋಕಾಯುಕ್ತ ಮಂಗಳೂರು ವಿಭಾಗದ ಪೊಲೀಸ್‌ ಅಧೀಕ್ಷಕ ಸಿ.ಎ. ಸೈಮನ್‌ ತಿಳಿಸಿದ್ದಾರೆ.ಮಂಗಳೂರು ಮೂಡ ಕಚೇರಿಯಲ್ಲಿ ಸಾರ್ವಜನಿಕರ ಕಡತಗಳು ವಿಲೇವಾರಿಯಾಗುತ್ತಿಲ್ಲ ಹಾಗೂ ಕಛೇರಿಯಲ್ಲಿ ಮಧ್ಯವರ್ತಿಗಳದ್ದೇ ದರ್ಬಾರು ಎಂಬ ದೂರುಗಳು ಬಂದ ಹಿನ್ನಲೆಯಲ್ಲಿ ಈ ದಾಳಿ ನಡೆಸಲಾಗಿತ್ತು. ದೂರುಗಳು ಬಂದ ಹಿನ್ನೆಲೆಯಲ್ಲಿ ಮಾ. 13ರಂದು ಸಂಜೆ ದಾಳಿ ನಡೆಸಿ ರಾತ್ರಿ ಸುಮಾರು 18 ಗಂಟೆಗಳ ದೀರ್ಘಕಾಲ ಪರಿಶೀಲನೆ ನಡೆಸಲಾಗಿದೆ. ಈ ವೇಳೆ ಕಚೇರಿಯ ಅಧಿಕಾರಿಗಳಲ್ಲಿ ಮತ್ತು ಹಲವಾರು ವ್ಯಕ್ತಿ ಗಳಲ್ಲಿ ದೊಡ್ಡ ಮೊತ್ತದ ಹಣವಿತ್ತು.ಪರಿಶೀಲನೆ ನಡೆಸುತ್ತಿರುವ ವೇಳೆ ಹಲವು ಸಾರ್ವಜನಿಕರು ಕಚೇರಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಕುರಿತು ಹಾಗೂ ಕಚೇರಿಯಲ್ಲಿ ಅಧಿಕಾರಿಗಳು ನೀಡುತ್ತಿರುವ ಕಿರುಕುಳ ಕುರಿತು ಹೇಳಿಕೊಂಡಿರುತ್ತಾರೆ. ಪರಿಶೀಲನೆ ಸಂದರ್ಭ ದೀರ್ಘಕಾಲದಿಂದ ವಿಲೇವಾರಿಯಾಗದ ಹಲವಾರು ಅರ್ಜಿದಾರರ ಕಡತಗಳು ಸಿಕ್ಕಿರುತ್ತದೆ. ಅಧಿಕಾರಿಗಳು ಬ್ರೋಕರ್ ಗಳೊಡನೆ ಫೋನ್ ಮುಖಾಂತರ ಹೊಂದಾಣಿಕೆ ಮಾಡಿಕೊಂಡು ಕಡತ ವಿಲೇವಾರಿ ಮಾಡುತ್ತಿರುವುದಾಗಿ ಸಾಕ್ಷಿ ದೊರೆತಿರುತ್ತದೆ.…

Read More

 ದಕ್ಷಿಣ ಕನ್ನಡ: ಸ್ವ ಉದ್ಯೋಗ ಆಕಾಂಕ್ಷಿಗಳಿಗೆ ಉಚಿತ ಮೊಬೈಲ್ ಪೋನ್ ರಿಪೇರಿ ತರಬೇತಿಗೆ ಅರ್ಜಿಯನ್ನು ರುಡ್ ಸೆಟ್ ಸಂಸ್ಥೆಯಿಂದ ಕರೆಯಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಉಜಿರೆಯ ರುಡ್ ಸೆಟ್ ಸಂಸ್ಥೆಯ ನಿರ್ದೇಶಕರಾದಂತ ಸುರೇಶ್.ಎಂ ಅವರು, ಧರ್ಮಸ್ಥಳದ ಸಮೀಪದ ಉಜಿರೆಯ ರುಡ್ ಸೆಟ್ ಸಂಸ್ಥೆಯಲ್ಲಿ ಸ್ವ ಉದ್ಯೋಗ ಆಕಾಂಕ್ಷಿಗಳಿಗಾಗಿ ವಿವಿಧ ಉಚಿತ ತರಬೇತಿ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ದಿನಾಂಕ 04-04-2024 ರಿಂದ 03-05-2024ರವರೆಗೆ ಒಂದು ತಿಂಗಳವರೆಗೆ ರುಡ್ ಸೆಟ್ ಸಂಸ್ಥೆಯಿಂದ ಸ್ವ ಉದ್ಯೋಗ ಆಕಾಂಕ್ಷಿಗಳಿಗೆ ಉಚಿತವಾಗಿ ಮೊಬೈರ್ ಪೋನ್ ರಿಪೇರಿ ತರಬೇತಿಯನ್ನು ನೀಡಲಾಗುತ್ತದೆ. ಆಸಕ್ತ ಸ್ವ ಉದ್ಯೋಗಾಕಾಂಕ್ಷಿಗಳು ತರಬೇತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ ಎಂದು ಹೇಳಿದ್ದಾರೆ. ಆಸಕ್ತ ಸ್ವ ಉದ್ಯೋಗಾಕಾಂಕ್ಷಿಗಳು 18-45 ವರ್ಷದ ಒಳಗೆ ಇರುವವರು ಈ ತರಬೇತಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ತರಬೇತಿಯ ಅವಧಿಯಲ್ಲಿ ಉಟ ಮತ್ತು ವಸತಿ ಸಂಪೂರ್ಣವಾಗಿ ಉಚಿತವಾಗಿರುತ್ತದೆ. ಜೊತೆಗೆ ಸಂಸ್ಥೆಯಿಂದ ಸಮವಸ್ತ್ರವನ್ನು ಉಚಿತವಾಗಿ ನೀಡಲಾಗುತ್ತದೆ. ಬ್ಯಾಂಕಿನಿಂದ ಸಿಗುವ ಸಾಲದ ಬಗ್ಗೆ ಮಾಹಿತಿ ಕೂಡ ನೀಡಲಾಗುತ್ತದೆ ಎಂದಿದ್ದಾರೆ.…

Read More

ಮೂಡುಬಿದ್ರೆ: ಕಲ್ಲಮುಂಡ್ಕೂರು ಸರ್ಕಾರಿ ಅನುದಾನಿತ ಶಾಲೆಯ ಅಧ್ಯಾಪಕರೊಬ್ಬರ ವಿರುದ್ಧ ಲೈಂಗಿಕ ಕಿರುಕುಳ ಆರೋಪದಲ್ಲಿ ಪ್ರಕರಣ ದಾಖಲಾಗಿರುವ ಘಟನೆ ತಡವಾಗಿ ಬೆಳಕಿಗೆ‌ ಬಂದಿದೆ. ಆರೋಪಿಯನ್ನು ಶಾಲೆಯ ಸಹ ಅಧ್ಯಾಪಕ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ನಿವಾಸಿ ಗುರುವ ಮೊಗೇರಾ ಎಂದು ಗುರುತಿಸಲಾಗಿದೆ. ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿನಿಯರಿಗೆ ಅಧ್ಯಾಪಕ ಗುರುವ ಮೊಗೇರಾ ಅವರು ಲೈಂಗಿಕ ಕಿರುಕುಳ ನೀಡಿರುವ ಕುರಿತು ಶಾಲೆಯ ಮುಖ್ಯೋಪಾಧ್ಯಾಯ ಸದಾನಂದ ಅವರು ಮೂಡುಬಿದ್ರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಫೆ.28ರಂದು ಹತ್ತನೇ ತರಗತಿಯ ಕೆಲವು ವಿದ್ಯಾರ್ಥಿನಿಯರು ಬಂದು ಸಹ ಶಿಕ್ಷಕ ಗುರುವ ಮೊಗೇರಾ ಅವರಿಂದ ತೊಂದರೆಗಳಾಗುತ್ತಿರುವ ಕುರಿತು ಹೇಳಿಕೊಂಡಿದ್ದರು. ಪಠ್ಯ ಸಂಬಂಧಿತ ವಿಷಯಕ್ಕೆ ಅಥವಾ ರಜಾ ಅರ್ಜಿ ಹಿಡಿದುಕೊಂಡು ಅವರ ಬಳಿಗೆ ಹೋದಾಗ, ಇಬ್ಬರು ವಿದ್ಯಾರ್ಥಿನಿಯರಿದ್ದರೆ ಒಬ್ಬರನ್ನು ಬೈದು ಹೊರಗೆ ಕಳುಹಿಸಿ ಒಬ್ಬಳನ್ನೇ ಕೊಠಡಿಯಲ್ಲಿ ಇರುವಂತೆ ಮಾಡಿ, ಅಸಭ್ಯವಾಗಿ ವರ್ತಿಸುವುದು, ಬ್ಯಾಡ್‌ ಟಚ್‌ ಮಾಡುವುದು ಮಾಡುತ್ತಾರೆ ಎಂದು ಮಾಹಿತಿ ನೀಡಿದ್ದಾರೆ.ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಅಧ್ಯಾಪಕ ಗುರುವ ಮೊಗೇರಾ ಅವರ ವಿರುದ್ಧ ಸೂಕ್ತ…

Read More

ನವದೆಹಲಿ: 2024 ರ ಲೋಕಸಭಾ ಚುನಾವಣೆಯ ದಿನಾಂಕಗಳನ್ನು ಶನಿವಾರ ಮಧ್ಯಾಹ್ನ 3 ಗಂಟೆಗೆ ಪ್ರಕಟಿಸಲಾಗುವುದು ಎಂದು ಭಾರತೀಯ ಚುನಾವಣಾ ಆಯೋಗ ಇಂದು ಮಧ್ಯಾಹ್ನ ತಿಳಿಸಿದೆ. ದೆಹಲಿ, ಮಾ.15: ಲೋಕಸಭೆ ಚುನಾವಣಾ) ದಿನಾಂಕವನ್ನು ಮಾ.16ರಂದು ಘೋಷಣೆ ಮಾಡಲಾಗುವುದು ಎಂದು ಕೇಂದ್ರ ಚುನಾವಣಾ ಆಯೋಗ ಹೇಳಿದೆ. ಚುನಾವಣಾ ಆಯೋಗದ ನೂತನ ಆಯುಕ್ತರು, ನಾಳೆ ಸಂಜೆ 3.00 ಗಂಟೆ ಪತ್ರಿಕಾಗೋಷ್ಠಿಯನ್ನು ನಡೆಸಲಿದ್ದಾರೆ. ಇಂದು (ಮಾ.15) ನೂತನ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಂಧು ಅವರು ಅಧಿಕಾರ ಸ್ವೀಕಾರಿಸಿದ್ದಾರೆ. ಈಗಾಗಲೇ ಚುನಾವಣಾ ಆಯೋಗವು ವಿವಿಧ ರಾಜ್ಯಗಳಲ್ಲಿ ಸಾರ್ವತ್ರಿಕ ಚುನಾವಣೆ ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಿದೆ. ವರದಿಗಳ ಪ್ರಕಾರ, ಆಯೋಗವು ಲೋಕಸಭೆ ಚುನಾವಣೆ ವೇಳಾಪಟ್ಟಿಯನ್ನು ಅಂತಿಮಗೊಳಿಸುವಲ್ಲಿ ಕಾರ್ಯನಿರತವಾಗಿದೆ. ಈ ಸಮಯಲ್ಲಿ ಇದೀಗ ನೂತನ ಆಯುಕ್ತರ ನೇಮಕದ ಮಾಡಿ. ಚುನಾವಣಾ ಆಯುಕ್ತ ಅರುಣ್ ಗೋಯೆಲ್ ರಾಜೀನಾಮೆ ನೀಡದಿದ್ದಾರೆ. ಇದರ ಜತೆಗೆ 18ನೇ ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯ ಬಗ್ಗೆ ತಿಳಿಸಿದೆ.

Read More

ಬೆಳ್ತಂಗಡಿ: ಯೂಟ್ಯೂಬ್ ಚಾನೆಲ್ ಕಚೇರಿಗೆ ಬಂದ ವ್ಯಕ್ತಿಯೊಬ್ಬ ಲಕ್ಷಾಂತರ ರೂಪಾಯಿ ಮೌಲ್ಯದ ವೀಡಿಯೋ ಕ್ಯಾಮೆರಾ, ಸೀಸಿ ಟಿವಿ ಹಾಗೂ ಸಾವಿರಾರು ರೂಪಾಯಿ ನಗದು ದೋಚಿದ ಘಟನೆ ಬೆಳ್ತಂಗಡಿ ತಾಲೂಕಿನ ಸಂತೆಕಟ್ಟೆಯಲ್ಲಿ ನಡೆದಿದೆ. ಸವಣಾಲು ಗ್ರಾಮದ ನಿವಾಸಿ ಸುದೀಪ್ (24) ಎಂಬವರ ಯೂಟ್ಯೂಬ್ ಚಾನೆಲ್ ಕಚೇರಿಯಲ್ಲಿ ಈ ಕೃತ್ಯ ನಡೆದಿದ್ದು, ಆರೋಪಿಯನ್ನು ಪ್ರತೀಕ್ ಕೋಟ್ಯಾನ್ ಎಂದು ಗುರುತಿಸಲಾಗಿದೆ. ಸುದೀಪ್ ಅವರು ಸಂತೆಕಟ್ಟೆ ಸುವರ್ಣ ಆಕೇರ್ಡ್ ಸಂಕೀರ್ಣದಲ್ಲಿ ಯೂಟ್ಯೂಬ್ ಚಾನಲ್ ನಡೆಸುತ್ತಿದ್ದು, ಗುರುವಾರ ಸಂಜೆ ಆರೋಪಿ ಪ್ರತೀಕ್ ಕೋಟ್ಯಾನ್ ಕಛೇರಿಗೆ ಬಂದು, ಅಲ್ಲಿ ಕೆಲಸ ಮಾಡುತ್ತಿದ್ದ ಕೃಪೇಶ್ ಎಂಬಾತನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕಛೇರಿಯಲ್ಲಿದ್ದ 4.80 ಲಕ್ಷ ರೂಪಾಯಿ ಮೌಲ್ಯದ ವೀಡಿಯೋ ಕ್ಯಾಮರಾಗಳು, ಸುಮಾರು 7 ಸಾವಿರ ರೂಪಾಯಿ ಮೌಲ್ಯದ ಸಿಸಿ ಕ್ಯಾಮರಾ ಹಾಗೂ ಕ್ಯಾಶ್ ಡ್ರಾಯರಿನಲ್ಲಿದ್ದ ಸುಮಾರು 62 ಸಾವಿರ ರೂಪಾಯಿ ನಗದು ಹಣ ಸಹಿತ ಒಟ್ಟು 5.49 ಲಕ್ಷ ರೂಪಾಯಿ ಮೌಲ್ಯದ ಸೊತ್ತುಗಳನ್ನು ದೋಚಿದ್ದಾನೆ. ಈ ಬಗ್ಗೆ ಸುದೀಪ್ ಅವರು ಆರೋಪಿ…

Read More

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ ಎಸಗಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಕಳೆದ ಫೆಬ್ರವರಿಯಲ್ಲಿ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಿ ಸಂತ್ರಸ್ತೆಯು ಯಡಿಯೂರಪ್ಪ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ. ಸಂತ್ರಸ್ತೆಯ ತಾಯಿ ನೀಡಿದ ದೂರಿನ ಅನ್ವಯ ಸದಾಶಿವನಗರ ಠಾಣಾ ಪೊಲೀಸರು ಯಡಿಯೂರಪ್ಪ ವಿರುದ್ಧ ಪೋಕ್ಸೋ ಹಾಗೂ 354 (A) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಫೆಬ್ರವರಿ 2 ರಂದು ಸಹಾಯ ಕೇಳಲು ಹೋಗಿದ್ದಾಗ ತನಗೆ ಲೈಂಗಿಕ ಕಿರುಕುಳ ನೀಡಿದ್ದಾಗಿ ಸಂತ್ರಸ್ತೆಯು ಎಫ್​ಐಆರ್​ನಲ್ಲಿ ಉಲ್ಲೇಖಿಸಿದ್ದಾಳೆ ಎಂದು ತಿಳಿದುಬಂದಿದೆ. ಪ್ರಕರಣ ಸಂಬಂಧ ಹಿರಿಯ ಪೊಲೀಸ್ ಅಧಿಕಾರಿಗಳು, ರಾಜಕಾರಣಿಗಳು , ಬಿಸಿನೆಸ್ ಮ್ಯಾನ್‌ಗಳು ಸೇರಿದಂತೆ ಒಟ್ಟು 53 ಮಂದಿ ವಿರುದ್ದವೇ ಸಂತ್ರಸ್ತ ಬಾಲಕಿಯ ತಾಯಿ ಸದಾಶಿವನಗರ ಠಾಣೆಗೆ ದೂರು ನೀಡಿದ್ದಾರೆ. ಪೋಕ್ಸೋ ಪ್ರಕರಣ ದಾಖಲಾಗಿರುವುದು ಯಡಿಯೂರಪ್ಪ ಅವರು ಸಂಕಷ್ಟಕ್ಕೆ ಸಿಲುಕಿಸಿದಂತಾಗಿದೆ. ಬಂಧನದ ಭೀತಿಯೂ ಎದುರಾಗಿದೆ.

Read More

ಕಾಸರಗೋಡು: ತಂದೆಯ ವಿರುದ್ದ ಏಳು ವರ್ಷದ ಬಾಲಕ ಪೊಲೀಸರಿಗೆ ದೂರು ನೀಡಿದ್ದಾನೆ. ತನ್ನ ಮೇಲೆ ತಂದೆ ಹಲ್ಲೆ ಮಾಡಿರುವುದಾಗಿ ಕಾಸರಗೋಡು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ತನ್ನ ತಂದೆ ಕೈಕಾಲುಗಳಿಗೆ ಹಲವುಬಾರಿ ಹೊಡೆದಿದ್ದಾನೆ ಎಂದು ಆರೋಪಿಸಿ ಬಾಲಕ ತನ್ನ ತಾಯಿ ಜತೆ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದಾನೆ. ದ ಜುವೈನಲ್ ಜಸ್ಟೀಸ್ ಕಾಯ್ದೆ ಪ್ರಕಾರ ತಂದೆ ವಿರುದ್ದ ಪೊಲೀಸರು ಕೇಸು ದಾಖಲಿಸಿದ್ದಾರೆ.

Read More