ಮಂಗಳೂರು : ನಾಳೆ ರಿಲೀಸ್ ಆಗಲಿರುವ ಮೆಹಬೂಬ ಕನ್ನಡ ಸಿನಿಮಾದಲ್ಲಿ ಹಿಂದುತ್ವ ಜಿಹಾದ್ ಪ್ರೇರೇಪಣೆ ಆರೋಪ ಕೇಳಿ ಬಂದಿದೆ. ಇದೀಗ ಮೆಹಬೂಬ ಸಿನಿಮಾ ಬಿಡುಗಡೆಗೆ ಮುಸ್ಲಿಂ ಸಮುದಾಯದ ವಿರೋಧ ವ್ಯಕ್ತವಾಗಿದೆ. ಬಿಗ್ ಬಾಸ್ ವಿನ್ನರ್ ಶಶಿಕುಮಾರ್ ಅಭಿನಯದ ಈ ಸಿನಿಮಾ ಕರಾವಳಿಯ ನೈಜ ಘಟನೆಯೊಂದನ್ನು ಆಧರಿಸಿ ನಿರ್ಮಾಣಗೊಂಡಿದೆ ಎನ್ನಲಾಗಿದೆ. ಈ ಸಿನಿಮಾ ಬಿಡುಗಡೆಗೆ ಮುಸ್ಲಿಂ ಸಮುದಾಯ ಹಾಗೂ ವಿದ್ಯಾರ್ಥಿ ಸಂಘದಿಂದ ವಿರೋಧ ವ್ಯಕ್ತವಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸಿನಿಮಾದ ವಿರುದ್ಧ ಆಕ್ರೋಶ ಕೇಳಿ ಬರುತ್ತಿದೆ. ಈ ಸಿನಿಮಾವನ್ನು ನಾಳೆ ಬಿಡುಗಡೆ ಮಾಡಬಾರದೆಂದು ಸಿಎಂಗೆ All college students association ಟ್ವೀಟ್ ಮಾಡಿದೆ. ನಾಳೆ ಈ ಸಿನಿಮಾ ರಿಲೀಸ್ ಆದಲ್ಲಿ ಸಿನಿಮಾ ತಂಡಕ್ಕೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಲಾಗಿದೆ. ರಾಜ್ಯಾದ್ಯಂತ ಚಿತ್ರಮಂದಿರಗಳಿಗೆ ಹೋಗಿ ಮುತ್ತಿಗೆ ಹಾಕುವ ಎಚ್ಚರಿಕೆ ನೀಡಿದೆ.
Author: main-admin
ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯ ಸರ್ಕಾರ ಪ್ರತಿ ಭಾನುವಾರವೂ ಸಬ್ ರಿಜಿಸ್ಟ್ರಾರ್ ಕಚೇರಿ ಓಪನ್ ಮಾಡುವಂತೆ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಉತ್ತಮ ಸೇವೆಯನ್ನು ನೀಡುವ ಹಾಗೂ ಆಡಳಿತ ಸುಧಾರಣೆ ಮತ್ತು ಜನಸ್ನೇಹಿ ಆಡಳಿತಕ್ಕಾಗಿ ಪ್ರಾಯೋಗಿಕವಾಗಿ ಮೊದಲನೇ ಹಂತದಲ್ಲಿ ಮಾರ್ಚ್ 2024 ರಿಂದ ಪ್ರಾರಂಭಿಸುತ್ತಾ ಬೆಂಗಳೂರು ನಗರ ಜಿಲ್ಲೆಯ 5 ನೋಂದಣಿ ಜಿಲ್ಲೆಗಳಲ್ಲಿ ಪ್ರತಿ ಒಂದು ನೋಂದಣಿ ಜಿಲ್ಲೆಯಲ್ಲಿ ಒಂದು ಉಪ ನೋಂದಣಿ ಕಛೇರಿಯು ಪಾರದರ್ಶಕ ವಾರದ ಸರದಿಯ ಆಧಾರದ ಮೇಲೆ ಮತ್ತು ಬೆಂಗಳೂರು ಗ್ರಾಮಾಂತರ ನೋಂದಣಿ ಜಿಲ್ಲೆಯ ವ್ಯಾಪ್ತಿಯಲ್ಲಿನ ಉಪ ನೋಂದಣಿ ಕಛೇರಿಗಳ ಪೈಕಿ ಯಾವುದಾದರೂ ಒಂದು ಉಪ ನೋಂದಣಿ ಕಛೇರಿ ಪಾರದರ್ಶಕವಾದ ವಾರದ ಸರದಿಯ ಆಧಾರದ ಮೇಲೆ ಪ್ರತಿ ಭಾನುವಾರ ಕಾರ್ಯನಿರ್ವಹಿಸುವಂತೆ ಹಾಗೂ ಇದಕ್ಕೆ ಬದಲಾಗಿ ಆ ವಾರದ ಮಂಗಳವಾರದ ದಿನದಂದು ಸದರಿ ಕಛೇರಿಯು ಪರಿಹಾರವಾಗಿ ರಜೆಯನ್ನು ನೀಡಲು ಆದೇಶಿಸಿದೆ. ಇದೇ ರೀತಿ ಪ್ರಾಯೋಗಿಕವಾಗಿ ಏಪ್ರಿಲ್ ಮಾಹೆಯಿಂದ ರಾಜ್ಯದ ಬೆಂಗಳೂರು ನಗರ ನೋಂದಣಿ ಜಿಲ್ಲೆಗಳು ಮತ್ತು ಬೆಂಗಳೂರು ಗ್ರಾಮಾಂತರ…
ಆಸ್ತಿ ವಿಚಾರವಾಗಿ ಸಹೋದರನನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ರಾಜು ಯಾನೆ ಕಪಿಲ (38) ಎಂಬಾತನಿಗೆ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಕಾರ್ಕಳ ತಾಲೂಕು ನಿಟ್ಟೆ ಬಜಕಳ ನಿವಾಸಿ ರಾಜು ಯಾನೆ ಕಪಿಲ ಮತ್ತು ಶೇಖರ ಸಹೋದರರಾಗಿದ್ದು, ಇವರ ನಡುವೆ ಆಸ್ತಿ ವಿಚಾರದಲ್ಲಿ ಗಲಾಟೆ ನಡೆದಿತ್ತು. 2022ರ ಮಾ. 6ರಂದು ಶೇಖರ ಅವರು ಮನೆಯ ಬಳಿ ಕೆಲಸ ಮಾಡುತ್ತಿದ್ದಾಗ ರಾಜು ಬಂದು ಗಲಾಟೆ ನಡೆಸಿ ಚೂರಿಯಿಂದ ಶೇಖರನ ಹೊಟ್ಟೆಗೆ ತಿವಿದು ಗಂಟಲು ಕೊಯ್ದು ಕೊಲೆ ಮಾಡಿದ್ದ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖಾಧಿಕಾರಿಯಾಗಿದ್ದ ಕಾರ್ಕಳ ವೃತ್ತ ನಿರೀಕ್ಷಕ ಸಂಪತ್ ಕುಮಾರ್ ರಾಜು ವಿರುದ್ಧ ನ್ಯಾಯಾಲಯದಲ್ಲಿ ದೋಷಾರೋಪ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಉಡುಪಿ (ಪೀಠಾಸೀನ ಕಾರ್ಕಳ) ಇಲ್ಲಿನ ನ್ಯಾಯಾಧೀಶ ದಿನೇಶ್ ಹೆಗ್ಡೆ ಆರೋಪ ಸಾಬೀತು ಆಗಿದೆ ಎಂದು ಮಾ. 12ರಂದು ಘೋಷಿಸಿ ಜೀವಾವಧಿ…
ಬೆಂಗಳೂರು: ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಿಗಧಿಯಾಗಿದ್ದು, ರಾಜ್ಯದಲ್ಲಿ ಸಿಎಎ ಜಾರಿ ಕುರಿತು ಚರ್ಚೆಯಾಗುವ ಸಾಧ್ಯತೆ ಇದೆ. ಇಂದು ಸಂಜೆ 5 ಗಂಟೆಗೆ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಭೆಯಲ್ಲಿ ಸಿಎಎ ಜಾರಿ ಸೇರಿದಂತೆ ಜಾತಿ ಗಣತಿ ವರದಿ ಕುರಿತು ಮಹತ್ವದ ಚರ್ಚೆ ನಡೆಯಲಿದೆ.ಇನ್ನು ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ, ಬರಗಾಲ, ವಿವಿಧ ಕಾಮಗಾರಿ ಯೋಜನೆಗಳಿಗೆ ಅನುಮೋದನೆ ಸೇರಿದಂತೆ ಹಲವು ಮಹತ್ವದ ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ. ಸಚಿವ ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಮತೆ ಹಲವು ಸಚಿವರು ಶಾಸಕರು ಭಾಗಿಯಾಗಲಿದ್ದಾರೆ.
ಮಂಗಳೂರು: ಲೋಕಸಭೆ ಚುನಾವಣೆಗಾಗಿ ಇತ್ತೀಚೆಗಷ್ಟೇ ಅಭ್ಯರ್ಥಿಗಳ ಮೊದಲನೇ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ ಇಂದು (ಮಾರ್ಚ್ 13) 2ನೇ ಪಟ್ಟಿಯನ್ನು ಪ್ರಕಟ ಮಾಡಲಾಗಿದ್ದು, ಈ ಪಟ್ಟಿಯಲ್ಲಿ ರಾಜ್ಯದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಕ್ಯಾಪ್ಟನ್ ಬ್ರಿಜೇಶ್ ಚೌಟಾಗೆ ಟಿಕೆಟ್ ನೀಡಲಾಗಿದೆ. ಹಾಗಾದರೆ ಈ ಹೊಸ ಅಭ್ಯರ್ಥಿ ಯಾರು, ಹಿನ್ನೆಲೆ ಏನು ಹಾಗೂ ಇವರಿಗೇ ಟಿಕೆಟ್ ನೀಡಲು ಕಾರಣ ಏನು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ. ರಾಜ್ಯದ 20 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಪ್ರಕಟಿಸಿದ್ದು, ಇದರಲ್ಲಿ ಕೆಲವು ಕ್ಷೇತ್ರಗಳಲ್ಲಿ ಹೊಸ ಮುಖಗಳಿಗೆ ಮಣೆ ಹಾಕಿದೆ. ಈ ಪೈಕಿ ರಾಜ್ಯದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಕ್ಯಾಪ್ಟನ್ ಬ್ರಿಜೇಶ್ ಚೌಟಾಗೆ ಟಿಕೆಟ್ ಘೋಷಣೆ ಮಾಡಿದ್ದು, ಇವರು ಕೂಡ ಹೊಸಬರಾಗಿದ್ದಾರೆ. ಕ್ಯಾಪ್ಟನ್ ಬ್ರಿಜೇಶ್ ಚೌಟಾ ಹಿನ್ನೆಲೆ: ಈ ಕ್ಷೇತ್ರದಿಂದ ನಳಿನ್ ಕುಮಾರ್ ಕಟೀಲ್ ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್ ಮಿಸ್ ಆಗಿದ್ದು, ಕ್ಯಾಪ್ಟನ್ ಬ್ರಿಜೇಶ್ ಚೌಟಾಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಭಾರತೀಯ ಸೇನೆಯ ನಿವೃತ್ತ…
ಕೇಂದ್ರ ಸರ್ಕಾರ ಪೇಟಿಎಂ ಗೆ ಮತ್ತೊಂದು ಶಾಕ್ ನೀಡಿದ್ದು, ಮಾ. 15 ರೊಳಗೆ ಬೇರೆ ಬ್ಯಾಂಕ್ ಗೆ ಬದಲಾಗುವಂತೆ ‘ಪೇಟಿಎಂ ಫಾಸ್ಟ್ ಟ್ಯಾಗ್’ ಬಳಕೆದಾರರಿಗೆ ‘NHAI’ ಸೂಚನೆ ನೀಡಿದೆ. ಮಾರ್ಚ್ 13, 2024 ರಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ಎಚ್ಎಐ) ಪೇಟಿಎಂ ಫಾಸ್ಟ್ಟ್ಯಾಗ್ ಬಳಕೆದಾರರಿಗೆ ಇತರ ಬ್ಯಾಂಕುಗಳ ಫಾಸ್ಟ್ ಟ್ಯಾಗ್ ಗೆ ಬದಲಾಯಿಸಲು ಸಲಹೆ ನೀಡಿದೆ.ಈ ಮೂಲಕ ಟೋಲ್ ಪ್ಲಾಜಾಗಳಲ್ಲಿ ಅನಾನುಕೂಲತೆಯನ್ನು ತಪ್ಪಿಸುವ ಗುರಿಯನ್ನು ಹೊಂದಿದೆ. ಮಾರ್ಚ್ 15, 2024 ರ ಶುಕ್ರವಾರಕ್ಕೂ ಮುನ್ನ ಹಾಗೆ ಮಾಡಲು ಎನ್ಎಚ್ಎಐ ಬಳಕೆದಾರರನ್ನು ಕೇಳಿದೆ. ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಮೇಲಿನ ನಿರ್ಬಂಧಗಳಿಗೆ ಸಂಬಂಧಿಸಿದಂತೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹೊರಡಿಸಿದ ಮಾರ್ಗಸೂಚಿಗಳಿಗೆ ಅನುಗುಣವಾಗಿ, ಪೇಟಿಎಂ ಫಾಸ್ಟ್ಟ್ಯಾಗ್ ಬಳಕೆದಾರರು ಮಾರ್ಚ್ 15, 2024 ರ ನಂತರ ಬ್ಯಾಲೆನ್ಸ್ ಅನ್ನು ರೀಚಾರ್ಜ್ ಮಾಡಲು ಅಥವಾ ಟಾಪ್-ಅಪ್ ಮಾಡಲು ಸಾಧ್ಯವಾಗುವುದಿಲ್ಲ. ಆದರೆ, ಅವರು ತಮ್ಮ ಅಸ್ತಿತ್ವದಲ್ಲಿರುವ ಬ್ಯಾಲೆನ್ಸ್ ಅನ್ನು ನಿಗದಿತ ದಿನಾಂಕದ ನಂತರ ಟೋಲ್ ಪಾವತಿಸಲು ಬಳಸಬಹುದು. ಪೇಟಿಎಂ ಫಾಸ್ಟ ಟ್ಯಾಗ್…
ಚಾಲಕನ ನಿಯಂಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ವೊಂದು ಪಲ್ಟಿಯಾದ ಘಟನೆ ಬೆಂಗಳೂರು -ಮಂಗಳೂರು ರಾಷ್ಟ್ರೀಯ ಹೆದ್ದಾರಿ -75ರ ಶಿರಾಡಿಘಾಟ್ನಲ್ಲಿ ನಡೆದಿದೆ. ಶಿರಾಡಿಘಾಟ್ ರಸ್ತೆಯ ಡಬಲ್ ಕ್ರಾಸ್ ಸನಿಹದ ಹೆದ್ದಾರಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ಸಿಗದೆ ಗ್ಯಾಸ್ ಟ್ಯಾಂಕರ್ ವೊಂದು ಪಲ್ಟಿಯಾಗಿ ಗ್ಯಾಸ್ ಸೋರಿಕೆಯಾಗುತ್ತಿದೆ. ಮುನ್ನಚ್ಚರಿಕಾ ಕ್ರಮವಾಗಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದ್ದು, ಮಂಗಳೂರು-ಹಾಸನ-ಬೆಂಗಳೂರು ಮಾರ್ಗದಲ್ಲಿ ಸಂಚರಿಸುವ ವಾಹನಗಳನ್ನು ಬದಲಿ ಮಾರ್ಗದಲ್ಲಿ ಪೊಲೀಸರು ಕಳುಹಿಸುತ್ತಿದ್ದು, ಘಟನಾ ಸ್ಥಳಕ್ಕೆ ಅಗ್ನಿಶಾಮಕದಳ ಹಾಗೂ ಪೊಲೀಸರು ತಲುಪಿದೆ. ಮಂಗಳೂರು ಧರ್ಮಸ್ಥಳಕ್ಕೆ ತೆರಳುವವರು ಸಕಲೇಶಪುರದಿಂದ ಹಾನುಬಾಳು ಮಾರ್ಗವಾಗಿ ಮೂಡಿಗೆರೆ ಮೂಲಕ ತೆರಳಲು ಸೂಚನೆ ನೀಡಲಾಗಿದೆ. ಮಂಗಳೂರಿನಿಂದ ಹಾಸನ ಬೆಂಗಳೂರಿಗೆ ತೆರಳುವವರು ಗುಂಡ್ಯ ಬಿಸ್ಲೆ ಹಾಗೂ ಚಾರ್ಮಾಡಿ ಮಾರ್ಗವಾಗಿ ತೆರಳಲು ಸೂಚನೆ ನೀಡಲಾಗಿದೆ. ಪಲ್ಟಿಯಾದ ಗ್ಯಾಸ್ ಟ್ಯಾಂಕರ್ನಿಂದ ಭಾರಿ ಪ್ರಮಾಣದಲ್ಲಿ ಗ್ಯಾಸ್ ಸೋರಿಕೆಯಾಗಿದೆ. ಹೀಗಾಗಿ ಗ್ಯಾಸ್ ಟ್ಯಾಂಕರ್ ತೆರವು ಕಾರ್ಯಾಚರಣೆ ಮುಗಿಯುವವರೆಗೂ ಎಲ್ಲಾ ವಾಹನಗಳ ಸಂಚಾರ ಬಂದ್ ಆಗಲಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ಇತರೆ ಮಹಾನಗರ ಪಾಲಿಕೆ ವ್ಯಾಪ್ತಿಯ ಯಾವುದಾದರೂ ಒಂದು ನೋಂದಣಾಧಿಕಾರಿಗಳ ಕಚೇರಿ ಇನ್ನು ಮುಂದೆ ಭಾನುವಾರವೂ ಕಾರ್ಯನಿರ್ವಹಿಸುವಂತೆ ಕ್ರಮ ಕೈಗೊಂಡಿರುವುದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೆಲಸದ ಒತ್ತಡದಿಂದಾಗಿ ರಜೆ ಮಾಡುವುದಕ್ಕೆ ಕಷ್ಟವಾಗುವವರ ಅನುಕೂಲಕ್ಕೆ ಈ ವ್ಯವಸ್ಥೆ ಮಾಡಲಾಗಿದೆ. ಪಾಲಿಕೆ ವ್ಯಾಪ್ತಿಯಲ್ಲಿ6 ರಿಂದ 7 ನೋಂದಣಾಧಿಕಾರಿಗಳ ಕಚೇರಿಗಳಿದ್ದು, ರೋಸ್ಟರ್ ಆಧಾರದಲ್ಲಿ ಒಂದೊಂದು ವಾರ ಒಂದೊಂದು ನೋಂದಣಾಧಿಕಾರಿಗಳ ಕಚೇರಿ ಕಾರ್ಯ ನಿರ್ವಹಿಸುವಂತೆ ಸೂಚಿಸಲಾಗಿದೆ. ಭಾನುವಾರ ಕೆಲಸ ಮಾಡುವ ಅಧಿಕಾರಿ, ಸಿಬ್ಬಂದಿಗೆ ಮಂಗಳವಾರ ಪರ್ಯಾಯ ರಜೆ ನೀಡಲಾಗುವುದು ಎಂದಿದ್ದಾರೆ. ಪಹಣಿಗಳಿಗೆ ಆಧಾರ್ ಜೋಡಣೆ ಕಾರ್ಯಕ್ಕೆ ಈಗಾಗಲೇ ಪ್ರಾಯೋಗಿಕವಾಗಿ ಚಾಲನೆ ನೀಡಲಾಗಿದೆ. ಅದರಂತೆ 19 ಲಕ್ಷ ಪಹಣಿದಾರರನ್ನು ಸಂಪರ್ಕಿಸಿ ಆಧಾರ್ ಜೋಡಣೆ ಮಾಡುವಂತೆ ಕೋರಲಾಗಿದೆ. ಏ.1ರಿಂದ ಅಧಿಕೃತವಾಗಿ ನನ್ನ ಆಸ್ತಿ ಹೆಸರಿನಲ್ಲಿ ನನ್ನ ಭೂಮಿ-ನನ್ನ ಗುರುತು ಧ್ಯೇಯದೊಂದಿಗೆ ಆಧಾರ್ ಜೋಡಣೆ ಕಾರ್ಯ ಆರಂಭಿಸಲಾಗುತ್ತದೆ. 19ಲಕ್ಷ ಪಹಣಿದಾರರ ಪೈಕಿ 6ಲಕ್ಷ ಪಹಣಿದಾರರು ಮೃತಪಟ್ಟಿರುವುದು ತಿಳಿದು ಬಂದಿದೆ. ಆಸ್ತಿ ಮೇಲೆ ಸಾಲ…
ಬೆಳ್ತಂಗಡಿ : ಪಶುವೈದ್ಯಕೀಯ ಚಿಕಿತ್ಸೆಯ ಅಂಬ್ಯುಲೆನ್ಸ್ ಚಾಲಕನ ಮೇಲೆ ಬೆಂಗಳೂರು ಮೂಲದ ವ್ಯಕ್ತಿಯೊಬ್ಬ ಹಲ್ಲೆ ನಡೆಸಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿಯ ಲಾಯಿಲಾ ಎಂಬಲ್ಲಿ ಈ ಘಟನೆ ನಡೆದಿದ್ದು, ಗಾಯಾಳು ಅಂಬ್ಯುಲೆನ್ಸ್ ಚಾಲಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಏನಿದು ಘಟನೆ ?ಬೆಳ್ತಂಗಡಿಯ ಪಶುವೈದ್ಯಕೀಯ ಅಂಬ್ಯುಲೆನ್ಸ್ ಸೇವೆ ಲಭ್ಯವಿಲ್ಲದ ಕಾರಣ ಕಡಬ ತಾಲೂಕಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಅಂಬ್ಯುಲೆನ್ಸ್ ಬೆಳ್ತಂಗಡಿಗೆ ಆಗಮಿಸಿತ್ತು. ನೆರಿಯದಲ್ಲಿ ತುರ್ತು ಚಿಕಿತ್ಸೆ ನೀಡಲು ಸೈರನ್ ಮೊಳಗಿಸಿಕೊಂಡೇ ಬರುತ್ತಿದ್ದ ಅಂಬ್ಯುಲೆನ್ಸ್ ಗೆ ಲಾಯಿಲಾ ಬಳಿ ಬೆಂಗಳೂರಿನ ವಾಹನವೊಂದು ಅಡ್ಡ ಹಾಕಿದೆ. ಬಳಿಕ ಚಾಲಕನ ಬಳಿಯ ಡೋರ್ ಓಪನ್ ಮಾಡಿ ಚಾಲಕನಿಗೆ ಹಿಗ್ಗಾಮುಗ್ಗ ಥಳಿಸಿದ್ದಾರೆ. ಸೈರನ್ ಮೊಳಗಿಸಿದ್ರೂ ವಾಹನ ಸವಾರರು ಸೈಡ್ ನೀಡದ ಹಿನ್ನೆಲೆಯಲ್ಲಿ ಅಂಬ್ಯುಲೆನ್ಸ್ ಚಾಲಕ ಸನ್ನೆಯ ಮೂಲಕ ಸೈರನ್ ಮೊಳಗುವುದು ಕೇಳಿಸುವುದಿಲ್ಲವೇ ಎಂದು ಪ್ರಶ್ನೆ ಮಾಡಿದ್ದ. ಇದೇ ಕಾರಣಕ್ಕೆ ಹಲ್ಲೆ ನಡೆದಿದೆ ಎಂದು ತಿಳಿದು ಬಂದಿದ್ದು, ಆರೋಪಿಗಳ ಕಾರ್ ನಂಬರ್ ಆಧಾರದಲ್ಲಿ ಪೊಲೀಸರಿಗೆ ದೂರು ನೀಡಲಾಗಿದೆ.
ಕಡಬ: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಸರ್ಕಾರಿ ಕಾಲೇಜಿನ ಆವರಣದಲ್ಲಿ ಮೂವರು ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಆಸಿಡ್ ದಾಳಿ ಪ್ರಕರಣ ಸಂಬಂಧ ಪ್ರಮುಖ ಆರೋಪಿ ಕೇರಳ ಮೂಲದ ಎಂಬಿಎ ವಿದ್ಯಾರ್ಥಿ ಅಭಿನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ಇದೀಗ ಕೇರಳ ಮೂಲದ ಮತ್ತಿಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿ ಅಭಿನ್ ಗೆ ಆಸಿಡ್ ತಂದುಕೊಟ್ಟ ವ್ಯಕ್ತಿಯನ್ನು ಹಾಗೂ ಆಸಿಡ್ ದಾಳಿ ನಡೆಸಿದ ದಿನ ಕಾಲೇಜಿನ ಸಮವಸ್ತ್ರ ಹೋಲುವ ಡ್ರೆಸ್ ನ್ನು ಹೊಲಿದು ಕೊಟ್ಟ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಮಾರ್ಚ್ 5ರಂದು ಕಡಬ ಸರ್ಕಾರಿ ಕಾಲೇಜಿನ ಆವರಣದಲ್ಲಿ ದುಷ್ಕರ್ಮಿ, ಮೂವರು ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ನಡೆಸಿದ್ದ. ಓರ್ವ ಯುವತಿಯ ಮುಖಕ್ಕೆ ಆಸಿಡ್ ಎರಚಲು ಹೋಗಿ ಆಕೆಯ ಪಕ್ಕದಲ್ಲಿ ನಿಂತಿದ್ದ ಇನ್ನಿಬ್ಬರು ವಿದ್ಯಾರ್ಥಿಗಳಿಗೂ ಆಸಿಡ್ ತಾಗಿ ಗಾಯಗಳಾಗಿತ್ತು. ಓರ್ವ ಯುವತಿಯ ಮುಖಕ್ಕೆ ಗಂಭೀರವಾದ ಸುಟ್ಟಗಾಯಗಳಾದ್ದು, ಮೂವರನ್ನು ಮಂಗಳೂರು…










